Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ತುಮಕೂರು: ಗೆಲುವು ಹವ್ಯಾಸವಾಗಬೇಕು, ಗೆಲ್ಲುವುದನ್ನೇ ಅಭ್ಯಾಸ ಮಾಡಿಕೊಳ್ಳಬೇಕು. ಆತ್ಮವಿಶ್ವಾಸ, ಛಲ, ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬಿದರು. ಶನಿವಾರ ತುಮಕೂರು ಗ್ರಾಮಾಂತರ ಕ್ಷೇತ್ರದ ನಾಗವಲ್ಲಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ನ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿಗಳು, ಒಂದು ಕೆಲಸವನ್ನು ಹೇಗೆ ಬೇಕಾದರೂ ಮಾಡಿ ಮುಗಿಸಬಹುದು. ಆದರೆ ಅದನ್ನು ಹೀಗೆ ಮಾಡಿ ಮುಗಿಸಬೇಕು ಎಂದು ತಿಳಿದು ಮುಗಿಸುವುದು ಮುಖ್ಯ. ಅಂತಹ ಚಾಣಾಕ್ಷತನ, ಬುದ್ಧಿವಂತಿಕೆಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಹೇಳಿದರು. ಅವಕಾಶಗಳಿಗಾಗಿ ಕಾಯಬಾರದು ಸಿಗುವ ಸಣ್ಣ ಅವಕಾಶವನ್ನೂ ಬಿಡದೆ ಬಳಸಿಕೊಂಡು ಯಶಸ್ವಿಯಾದರೆ ದೊಡ್ಡ ಅವಕಾಶಗಳಿಗೆ ನಾಂದಿಯಾಗುತ್ತದೆ. ಈಗ ನಿಮ್ಮ ಮುಂದಿನ ಗುರಿ ಚೆನ್ನಾಗಿ ಓದಿ ಉತ್ತಮ ಅಂಕ ಪಡೆಯುವುದು. ಈ ಬಾರಿ ಎಸ್ಎಸ್ಎಲ್ಸಿಯಲ್ಲಿ ನೂರಕ್ಕೆ ನೂರು ಅಂಕ ಪಡೆಯಬೇಕು. ಅಂತಹ ಫಲಿತಾಂಶ ಪಡೆದರೆ ಶಾಲೆಯಲ್ಲಿ ಮತ್ತೊಂದು ಕಾರ್ಯಕ್ರಮ ಮಾಡೋಣ ಎಂದರು. ಈ ವೇಳೆ ಮಾತನಾಡಿದ ಶಾಸಕ ಬಿ.ಸುರೇಶ್ ಗೌಡ, ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳು…
ತುಮಕೂರು: ವಿಘ್ನೇಶ್ವರ ಕಂಫರ್ಟ್ಸ್ನಲ್ಲಿ 26ನೇ ವಾರ್ಡಿನ ಕಾರ್ಯಕರ್ತರ ಪರಿಚಯ ಸಭೆ ಮತ್ತು ಸುಶಾಸನ ದಿನ ರಾಷ್ಟ್ರ ರಾಜಕೀಯ ಕ್ಷೇತ್ರದ ಶ್ರೇಷ್ಠ ನಾಯಕ ಅಜಾತಶತ್ರು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜಯಂತಿಯನ್ನು ಆಚರಿಸಲಾಯಿತು. ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಪ್ರದೀಪ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಮಾಜಿ ಪ್ರಧಾನಮಂತ್ರಿಗಳಾದ ವಾಜಪೇಯಿ ಅವರ ಆದರ್ಶ ಗುಣಗಳು ಅವರ ಸೈದ್ಧಾಂತಿಕ ನೆಲೆ, ಅವರು ನಡೆದು ಬಂದದಾರಿ ನಮಗೆಲ್ಲರಿಗೂ ಸದಾ ಪ್ರೇರಣೆಯಾಗಿದೆ. ಅವರ ಆದರ್ಶಗಳು ನಮಗೆಲ್ಲರಿಗೂ ದಾರಿದೀಪವಾಗುತ್ತದೆ. ಕವಿಯಾಗಿ ಆದರ್ಶ ವ್ಯಕ್ತಿಯಾಗಿ ಬೇರೆ ಬೇರೆ ಪಕ್ಷದ ರಾಜಕಾರಣಿಗಳಿಗೂ ಇಷ್ಟವಾದ ವ್ಯಕ್ತಿಯಾಗಿ ಎಂದಿಗೂ ಪ್ರಾತ ಸ್ಮರಣೀಯರು, ಕವಿಯಾಗಿ ಉತ್ತಮ ವಾಗ್ಮಿಯಾಗಿ ಸದಾ ರಾಷ್ಟ್ರೀಯತೆಯನ್ನೇ ಉಸಿರಾಗಿಸಿಕೊಂಡಿದ್ದರು ಸದಾಕಾಲವೂ ಕೆಲಸದಲ್ಲಿ ನಿರತವಾಗಿದ್ದು ವಿಚಾರವಂತಿಕೆ ಸಿದ್ಧಾಂತ ಎಲ್ಲವನ್ನು ಮೈಗೂಡಿಸಿಕೊಂಡು ಅದನ್ನೇ ಎಲ್ಲರಿಗೂ ಹಂಚುತ್ತಿದ್ದ ಮೇರು ವ್ಯಕ್ತಿತ್ವದವರು. ಅವರು ಈ ದೇಶದ ಪ್ರಧಾನಮಂತ್ರಿಯಾಗಿದ್ದಾಗ ರಸ್ತೆ ನಿರ್ಮಾಣದಲ್ಲಿ ಮಹತ್ತರ ಕಾರ್ಯವನ್ನು ಮಾಡಿದವರು. ಇಂತಹ ಮಹಾನ್ ವ್ಯಕ್ತಿಯ 101ನೇ ವರ್ಷದ…
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಿಗರೇಟ್ ಬೆಲೆ ಏರಿಕೆಯ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಕೇಂದ್ರ ಸರ್ಕಾರ ಸಿಗರೇಟ್ ಮೇಲೆ ಹೊಸ ತೆರಿಗೆ ವಿಧಿಸಲು ಮುಂದಾಗಿದ್ದು, ಇದರಿಂದ ಒಂದು ಸಿಗರೇಟ್ ಬೆಲೆ ಬರೋಬ್ಬರಿ 72 ರೂಪಾಯಿಗೆ ಏರಿಕೆಯಾಗಲಿದೆ ಎಂಬ ಸುದ್ದಿಗಳು ವೈರಲ್ ಆಗಿದ್ದವು. ಆದರೆ, ಈ ಸುದ್ದಿಗಳು ಕೇವಲ ವದಂತಿಯಾಗಿದ್ದು, ವಾಸ್ತವದಲ್ಲಿ ಬೆಲೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಏರಿಕೆಯಾಗುವುದಿಲ್ಲ ಎಂದು ವರದಿಗಳು ಸ್ಪಷ್ಟಪಡಿಸಿವೆ. ತೆರಿಗೆ ಲೆಕ್ಕಾಚಾರ ಹೇಗಿದೆ? ಭಾರತದಲ್ಲಿ ಸಿಗರೇಟ್ ಮೇಲೆ ಅಬಕಾರಿ ಸುಂಕವನ್ನು ಪ್ರತಿ 1,000 ಸಿಗರೇಟ್ಗಳ ಆಧಾರದ ಮೇಲೆ ಲೆಕ್ಕ ಹಾಕಲಾಗುತ್ತದೆ. ಹಳೆಯ ಸುಂಕದ ಪ್ರಕಾರ ಪ್ರತಿ ಸಾವಿರ ಸಿಗರೇಟ್ಗೆ 200 ರಿಂದ 735 ರೂಪಾಯಿ ಇತ್ತು (ಅಂದರೆ ಪ್ರತಿ ಸಿಗರೇಟ್ಗೆ ಅಂದಾಜು 0.20 ರಿಂದ 0.73 ಪೈಸೆ). ಈಗ ಪ್ರಸ್ತಾವಿತ ಹೊಸ ಸುಂಕವು ಪ್ರತಿ ಸಾವಿರ ಸಿಗರೇಟ್ಗೆ 2,700 ರಿಂದ 11,000 ರೂಪಾಯಿ ಆಗಬಹುದು ಎಂದು ಅಂದಾಜಿಸಲಾಗಿದೆ. ವಾಸ್ತವ ಬೆಲೆ ಏರಿಕೆ ಎಷ್ಟು? ಈ ಹೊಸ…
ಕೊರಟಗೆರೆ: ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು, ಗ್ರಾಮಗಳು ಸುಂದರವಾಗಿಬೇಕು ಎನ್ನವ ಉದ್ದೇಶದಿಂದ ಪತ್ರಿದಿನ ಕೆಲಸ ಮಾಡುವ ಪೌರಕಾರ್ಮಿಕರಿಗೆ ಸಣ್ಣ ಉಡುಗರೆ ಎಂದು ಮಾಜಿ ಜಿ.ಪಂ. ಸದಸ್ಯ ಪಿ.ಎನ್.ಕೃಷ್ಣ ಮೂರ್ತಿ ತಿಳಿಸಿದರು. ಕೊರಟಗೆರೆ ಪಟ್ಟಣದಲ್ಲಿ ಮಾಜಿ ಜಿಪಂ ಸದಸ್ಯ ಪಿ.ಎನ್.ಕೃಷ್ಣಮೂರ್ತಿ ಅಭಿಮಾನಿ ಬಳಗ ಏರ್ಪಡಿಸಲಾಗಿದ್ದ ಕೊರಟಗೆರೆ ಪ.ಪಂ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಬೆಡ್ ಶೀಟ್, ಜರ್ಕಿನ್ ವಿತರಣೆ ಮಾಡಿ ಮಾತನಾಡಿದರು. ಪೌರಕಾರ್ಮಿಕರು ಚಳಿ, ಗಾಳಿ, ಮಳೆ ಎನ್ನದೆ ಬೆಳಿಗ್ಗೆ 5 ಗಂಟೆಗೆ ಎದ್ದು ಪಟ್ಟಣವನ್ನ ಸ್ವಚ್ಛಗೊಳಿಸಿ ನಮಗೆ ಉತ್ತಮ ಪರಿಸರ ಸೃಷ್ಠಿ ಮಾಡಿಕೊಡುತ್ತಾರೆ. ಅವರು ಚಳಿಯಲ್ಲಿ ನಡುಗಬಾರದು ಎನ್ನವ ಉದ್ದೇಶದಿಂದ ಪಟ್ಟಣದ ಎಲ್ಲಾ ಪೌರಕಾರ್ಮಿಕರಿಗೆ ಬೆಡ್ ಶೀಟ್, ಜರ್ಕಿನ್ ವಿತರಣೆ ಮಾಡಲಾಗಿದೆ. ಕೊರಟಗೆರೆ ಹಾಗೂ ತುಮಕೂರಿನ ನನ್ನ ಅಭಿಮಾನಿ ಬಳಗ ಸರಳವಾಗಿ ಆಚರಣೆ ಮಾಡಲು ತಿಳಿಸಿದ್ದೇನೆ ಎಂದರು. ಕೊರಟಗೆರೆ ಕ್ಷೇತ್ರದ ಜನತೆಯ ಅಭಿಮಾನಕ್ಕೆ ನಾನು ಚಿರಋಣಿ ಯಾಗಿದ್ದೇನೆ. ನಾನು 30 ವರ್ಷದಿಂದ ಕೊರಟಗೆರೆ ಜನತೆಯ…
ಪಾವಗಡ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯವನ್ನು ಖಂಡಿಸಿ, ತಾಲ್ಲೂಕಿನ ವೈ.ಎನ್ ಹೊಸಕೋಟೆ ಹೋಬಳಿ ಕೇಂದ್ರದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಪಾವಗಡ ತಾಲ್ಲೂಕು ಬಿಜೆಪಿ ಅಧ್ಯಕ್ಷ ದೊಡ್ಡಹಳ್ಳಿ ಅಶೋಕ್, ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆಗಳು ಅತ್ಯಂತ ಖಂಡನೀಯ. ಅಲ್ಲಿನ ಹಿಂದೂಗಳ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಎಂದು ಎಚ್ಚರಿಸಿದರು. ಈಶಾನ್ಯ ರಾಜ್ಯಗಳನ್ನು ವಶಪಡಿಸಿಕೊಳ್ಳುವ ಬಾಂಗ್ಲಾದ ಬೆದರಿಕೆಗೆ ಉತ್ತರಿಸಿದ ಅವರು, “ಇದೇ ರೀತಿ ದೌರ್ಜನ್ಯ ಮುಂದುವರೆದರೆ ಇಡೀ ಬಾಂಗ್ಲಾದೇಶವನ್ನೇ ವಶಪಡಿಸಿಕೊಳ್ಳುವ ತಾಕತ್ತು ಮೋದಿ ಸರ್ಕಾರಕ್ಕಿದೆ” ಎಂದು ಕಿಡಿಕಾರಿದರು. ವರದಿ: ನಂದೀಶ್ ನಾಯ್ಕ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಔರಾದ್: ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘ ಔರಾದ ತಾಲೂಕು ಘಟಕ ಪದಾಧಿಕಾರಿಗಳನ್ನು ನಗರದ ಕನ್ನಡ ಭವನದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಿ, ಡಾ.ಚನ್ನಬಸವ ಪಟ್ಟದೇವರ ಜಯಂತಿ ಉತ್ಸವ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರು ಪಂಡರಿ ಆಡೆ, ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘವು 371(ಜೆ) ವಿಶೇಷ ಸ್ಥಾನಮಾನದ ಸಮಸ್ಯೆಗಳು ಎದುರಾದಾಗ ಈ ಭಾಗದ ಎಲ್ಲಾ ಸರ್ಕಾರಿ ನೌಕರರ ಸಮಸ್ಯೆಯನ್ನು ಸಂಘಟನಾತ್ಮಕವಾಗಿ ಪರಿಹಾರ ಕಂಡುಕೊಳ್ಳುವ ಸಂಘವಾಗಿದೆ, ಈ ಭಾಗದ ಶೈಕ್ಷಣಿಕ ಅಭಿವೃದ್ಧಿ ಸೇರಿದಂತೆ ಸಂವಿಧಾನದ ವಿಶೇಷ ಸ್ಥಾನಮಾನದ ಆಶಯ ಈಡೇರಿಸಲು ದುಡಿಯುವ ಸಂಘವಾಗಿದೆ ಎಂದರು. ಅದೇ ರೀತಿ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ನೌಕರರ ಬಡ್ತಿ, ವರ್ಗಾವಣೆ ಎಲ್ಲಾ ಆದೇಶಗಳು 371(ಜೆ) ವಿಶೇಷ ಸ್ಥಾನಮಾನ 2013 ರಿಂದಲೂ ಪ್ರತ್ಯೇಕ ಆದೇಶಗಳು ಹೊರ ಬೀಳುತ್ತಿದ್ದು ಸಮಸ್ಯೆಗಳು ಎದುರಾದಾಗ ಅವುಗಳು ಪರಿಹಾರ ಆಗದೆ ಉಳಿಯುತ್ತಿವೆ, ಇಂತಹ ಸಂದರ್ಭ ಎದುರಾದಾಗ ಈ ಭಾಗದ ಸಂಘಟನೆಯ ಅವಶ್ಯಕತೆ ಇದೆ…
ತುಮಕೂರು: ಮಾರುತಿ ನಗರದ ನಾಗರಿಕ ಹಿತರಕ್ಷಣಾ ಸಮಿತಿ ಹಾಗೂ ಬಾಂಧವ್ಯ ಮಹಿಳಾ ಇವರ ಸಹಯೋಗದೊಂದಿಗೆ ಅದ್ದೂರಿ ಕನ್ನಡ ರಾಜ್ಯೋತ್ಸವ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಭಾನುವಾರ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾರುತಿ ನಗರ ನಾಗರಿಕ ಹಿತರಕ್ಷಣಾ ಸಮಿತಿಯ ಕಾರ್ಯದರ್ಶಿ ನಾರಾಯಣ ನಾಯ್ಕ ಡಿ. ಅವರು, ಪ್ರತಿವರ್ಷದಂತೆ ಈ ವರ್ಷವೂ ಕೂಡ ನಮ್ಮ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಇಂದು ಮಾಡಲಾಗುತ್ತಿದೆ, ದಯವಿಟ್ಟು ಮಾರುತಿ ನಗರದ ಎಲ್ಲಾ ಸಾರ್ವಜನಿಕರು ಬಂದು ಈ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಹಾಗೂ ಆರೋಗ್ಯ ತಪಾಸಣಾ ಮಾಡಿಕೊಳ್ಳಬೇಕು ಎಂದು ಸಂಘದ ಪರವಾಗಿ ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದರು. ಶ್ರೀ ವೆಂಕಟೇಶ್ವರ ಆಸ್ಪತ್ರೆ ವತಿಯಿಂದ ಮೂಳೆ ತಪಾಸಣೆ,ಡಾಕ್ಟರ್ ಅಗರ್ ವಾಲ್ಸ್ ಕಣ್ಣಿನ ಆಸ್ಪತ್ರೆ ವತಿಯಿಂದ ಕಣ್ಣನ ತಪಾಸಣೆ, ಮಧು ಸೂಪರ್ ಸ್ಪೆಷಾಲಿಟಿ ದಂತ ಚಿಕಿತ್ಸಾ ಕೇಂದ್ರ ವತಿಯಿಂದ ದಂತ ತಪಾಸಣೆ, ಜೆ.ಪಿ. ಸ್ಪೆಷಾಲಿಟಿ ಕ್ಲಿನಿಕ್ ವತಿಯಿಂದ ಮಧುಮೇಹ…
ತುಮಕೂರು: ತುಮಕೂರು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿ.29 ಮತ್ತು 30 ರಂದು ಇಲ್ಲಿನ ಗಾಜಿನ ಮನೆಯಲ್ಲಿ ಎರಡು ದಿನಗಳ ಕಾಲ ನಡೆಯಲಿದೆ. ಡಾ. ಕರೀಗೌಡ ಬೀಚನಹಳ್ಳಿ ಇವರು ಸಮ್ಮೇಳನದ ಅಧ್ಯಕ್ಷರಾಗಿದ್ದು, ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆಯಲಿವೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಸಮ್ಮೇಳನದಲ್ಲಿ ಮಕ್ಕಳ ಗೋಷ್ಠಿಗೂ ಅವಕಾಶ ನೀಡಲಾಗಿದೆ. ಕವಿ, ಸಾಹಿತಿಗಳು ಮತ್ತು ಓದುಗರನ್ನು ಒಗ್ಗೂಡಿಸುವ ಕಾರ್ಯಕ್ರಮವಾಗಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದರು. ಸಮ್ಮೇಳನಕ್ಕೆ ಅಂದಾಜು 3 ರಿಂದ 4 ಸಾವಿರ ಜನ ಸಾಹಿತ್ಯಾಸಕ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಎಲ್ಲರಿಗೂ ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಶಾಲಾ ಮಕ್ಕಳು, ಶಿಕ್ಷಕರೂ ಸಹ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ತಿಳಿಸಲಾಗಿದೆ ಎಂದರು. ಸಮ್ಮೇಳನದ ಅಂಗವಾಗಿ ಡಿಸೆಂಬರ್ 29ರ ಬೆಳಗ್ಗೆ 7.30 ಗಂಟೆಗೆ ಗಾಜಿನ ಮನೆ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಾಗೂ 8…
ತುರುವೇಕೆರೆ: ಇತಿಹಾಸ ಪ್ರಸಿದ್ಧ ತಾಲೂಕಿನ ಸಂಪಿಗೆ ಗ್ರಾಮದ ಶ್ರೀ ಶ್ರೀನಿವಾಸ ಸ್ವಾಮಿ ದೇವಾಲಯದಲ್ಲಿ ಡಿ.30 ಮಂಗಳವಾರ ವೈಕುಂಠ ಏಕಾದಶಿ ಮಹೋತ್ಸವ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಸಂಚಾಲಕ ಹರೀಶ್ ತಿಳಿಸಿದ್ದಾರೆ. ಪಟ್ಟಣದ ಬೇಟರಾಯಸ್ವಾಮಿ ದೇವಾಲಯದ ಆವರಣದಲ್ಲಿ ಪತ್ರಿಕಾ ಪ್ರಕಟಣೆ ನೀಡಿ ಮಾತನಾಡಿದ ಅವರು, ಶ್ರೀನಿವಾಸ ಸ್ವಾಮಿಯವರ ವೈಕುಂಠ ಏಕಾದಶಿ ಮಹೋತ್ಸವದಲ್ಲಿ ಈ ಬಾರಿ ವಿಶೇಷವಾಗಿ ಅಮ್ಮನವರಿಗೆ ಹಾಗೂ ಸ್ವಾಮಿಗೆ ವಜ್ರಾಂಗಿ ಅಲಂಕಾರ ನಡೆಸಲಾಗುತ್ತದೆ. ಸ್ವಾಮಿಯ ಭಕ್ತರು ತುಮಕೂರು ಜಿಲ್ಲೆ ಅಲ್ಲದೆ ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಲಿದ್ದಾರೆ ಎಂದರು. ಅಂದು ಬೆಳಿಗ್ಗೆ 5 ಗಂಟೆಯಿಂದ ಸ್ವಾಮಿಯವರಿಗೆ ಮತ್ತು ಅಮ್ಮನವರಿಗೆ ವಿವಿಧ ಧಾರ್ಮಿಕ ಪೂಜಾದಿಗಳೂ ಆರಂಭವಾಗುತ್ತವೆ. ಸಂಜೆ 5-30 ಘಂಟೆಗೆ ತುಮಕೂರಿನ ಸಾಯಿರಾಮನ್ ನೃತ್ಯ ಕೇಂದ್ರದ ವತಿಯಿಂದ ವೆಂಕಟೇಶ್ವರ ಕಲ್ಯಾಣ ನೃತ್ಯ ರೂಪಕ ಪ್ರದರ್ಶನಗೊಳ್ಳಲಿದೆ. ಇದರ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಸಂದರ್ಭದಲ್ಲಿ ಬ್ಯಾಂಕ್ ಶ್ರೀನಿವಾಸ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ನಾಗರಾಜು, ರಾಜೇಶ್, ಭಾಸ್ಕರ್, ಬಾಲಾಜಿ, ಯಶವಂತ್,…
ಕುಣಿಗಲ್: ಪಟ್ಟಣದ ಕೋಟೆ ತುಡಿಕೆ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಡಿ.30 ರಂದು 20 ನೇ ವರ್ಷದ ವೈಕುಂಠ ಏಕಾದಶಿ ಮಹೋತ್ಸವ ಅಂಗವಾಗಿ ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಸೇವಾ ಟ್ರಸ್ಟ್ ಪದಾಧಿಕಾರಿಗಳು ತಿಳಿಸಿದ್ದಾರೆ. ಪಟ್ಟಣದ ದೇವಾಲಯದ ಬಳಿ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಎಂ.ನಾರಾಯಣ್, ಪ್ರಧಾನ ಕಾರ್ಯದರ್ಶಿ ಕೆ.ಜಿ.ಶ್ರೀನಿವಾಸ್ (ವಾಸು), ಖಜಾಂಚಿ ಕೆ.ಎನ್.ನಾಗರಾಜು (ನಾಗಣ್ಣ) ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವೈಕುಂಠ ಏಕಾದಶಿ ಮಹೋತ್ಸವ ಅಂಗವಾಗಿ ಡಿ.29 ರಂದು ಸಂಜೆ 4 ಗಂಟೆಗೆ ವಿವಿಧ ಧಾರ್ಮಿಕ ವಿಧಿವಿಧಾನ ಹಮ್ಮಿಕೊಳ್ಳಲಾಗಿದೆ. ನಂತರ ಡಿ. 30 ರಂದು ಬೆಳಗ್ಗೆ 5 ಗಂಟೆಗೆ ಗೋ ಪೂಜೆಯಿಂದ ಪೂಜಾ ಕೈಂಕರ್ಯಗಳು ಆರಂಭವಾಗುತ್ತವೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸಪ್ತದ್ವಾರದ ಮೂಲಕ ಸ್ವಾಮಿಯ ದರ್ಶನ ಹಾಗೂ ನಿರಂತರ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ತಿರುಪ್ಪಾವಡೆ ಸೇವೆ: ಡಿ.31 ರಂದು…