Subscribe to Updates
Get the latest creative news from FooBar about art, design and business.
- ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
- ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
- ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
- ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
- ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
- ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
- ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
Author: admin
ಬೆಂಗಳೂರು: ವಿದೇಶದಲ್ಲಿ ನೆಲೆಸಿರುವ ಕನ್ನಡಿಗರಿಗೆ ಸುರಕ್ಷತೆಯ ಆತಂಕ ಎದುರಾಗಿದ್ದು, ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕನೊಬ್ಬ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಘಟನೆಯ ವಿವರ: ಮೃತರನ್ನು ಬೆಂಗಳೂರಿನ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್ (37) ಎಂದು ಗುರುತಿಸಲಾಗಿದೆ. ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ ವಾಸವಾಗಿದ್ದ ಇವರು ಅಲ್ಲಿನ ಖಾಸಗಿ ಕಂಪನಿಯೊಂದರಲ್ಲಿ ವೃತ್ತಿ ನಿರ್ವಹಿಸುತ್ತಿದ್ದರು. ಭಾನುವಾರ ರಾತ್ರಿ ಸುಮಾರು 9 ಗಂಟೆಯ ಸಮಯದಲ್ಲಿ ಚಂದನ್ ಕುಮಾರ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಕಾರಿನ ಮುಂಭಾಗದ ಗಾಜಿನ ಮೂಲಕ ಗುಂಡುಗಳು ಚಂದನ್ ಅವರ ದೇಹಕ್ಕೆ ತಗುಲಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದು ಅತ್ಯಂತ ಸಮೀಪದಿಂದ ನಡೆಸಲಾದ ದಾಳಿ ಎಂದು ಶಂಕಿಸಲಾಗಿದೆ. ಸಮುದಾಯದಲ್ಲಿ ಸಕ್ರಿಯರಾಗಿದ್ದ ಚಂದನ್: ಚಂದನ್ ಕುಮಾರ್ ಅವರು ಕೆನಡಾದ ಬ್ರಾಂಪ್ಟನ್ನಲ್ಲಿರುವ ಶಿರಡಿ ಸಾಯಿಬಾಬಾ ದೇವಾಲಯದ ಸಕ್ರಿಯ ಸದಸ್ಯರಾಗಿದ್ದರು ಮತ್ತು ಅಲ್ಲಿನ ಕನ್ನಡ ಸಮುದಾಯದ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದರು. ಇವರ ನಿಧನಕ್ಕೆ ಅಲ್ಲಿನ ಅನಿವಾಸಿ…
ತುಮಕೂರು: ಜಿಲ್ಲೆಯ ತುಮಕೂರು ತಾಲ್ಲೂಕಿನ ಬಾಣಾವರ ಗೇಟ್ ಬಳಿ ಭಾನುವಾರ ಸಂಜೆ ನಡೆದ ಮೂರು ಕಾರುಗಳ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ವಿವರ: ನಗರದ ಯಾದವ ನಗರ ನಿವಾಸಿಗಳಾದ ಸುರೇಶ್ (55) ಮತ್ತು ಮುರಳಿ (60) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಸುರೇಶ್ ಅವರು ಗುಬ್ಬಿ ತಾಲ್ಲೂಕು ಪಂಚಾಯಿತಿಯ ಮಾಜಿ ಸದಸ್ಯರಾಗಿದ್ದರು. ಗಾಯಾಳುಗಳು: ಸೈಬರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಮಕೃಷ್ಣಪ್ಪ, ಜೆಡಿಎಸ್ ವಕ್ತಾರ ಜಯಣ್ಣ ಹಾಗೂ ಮಂಜುನಾಥ್ ಸೇರಿದಂತೆ ಒಟ್ಟು ಐದು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದಿದ್ದು ಹೇಗೆ? ಇನ್ಸ್ಪೆಕ್ಟರ್ ರಾಮಕೃಷ್ಣಪ್ಪ ಅವರು ತಮ್ಮ ಸ್ನೇಹಿತರೊಂದಿಗೆ ಆದಿಚುಂಚನಗಿರಿಗೆ ಭೇಟಿ ನೀಡಿ, ಕುಣಿಗಲ್ ಮಾರ್ಗವಾಗಿ ವಾಪಸ್ ಬರುತ್ತಿದ್ದರು. ಈ ಸಂದರ್ಭದಲ್ಲಿ ತುಮಕೂರು ಕಡೆಯಿಂದ ವೇಗವಾಗಿ ಬಂದ ಕಾರೊಂದು ತನ್ನ ಮುಂದೆ ಚಲಿಸುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ನಂತರ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ರಾಮಕೃಷ್ಣಪ್ಪ ಅವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ…
ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯಿಂದ ಮಧುಗಿರಿ ಕಡೆಗೆ ಬರುತ್ತಿದ್ದ ಲಾರಿಯನ್ನು ಮಿಡಿಗೇಶಿ ಹೋಬಳಿಯ ಆಂಧ್ರ ಗಡಿ ಭಾಗದ ಚಂದ್ರಬಾವಿ ಚೆಕ್ಪೋಸ್ಟ್ ಬಳಿ ಪೊಲೀಸರು ತಡೆದು ತಪಾಸಣೆ ನಡೆಸಿದರು. ಈ ವೇಳೆ ಯಾವುದೇ ಅಧಿಕೃತ ದಾಖಲೆ ಅಥವಾ ಅನುಮತಿಯಿಲ್ಲದೆ ಅಕ್ರಮವಾಗಿ 27 ಜಾನುವಾರುಗಳನ್ನು (ಎಮ್ಮೆ, ಕೋಣ, ಹೋರಿ ಮತ್ತು ಹಸುಗಳು) ಸಾಗಿಸುತ್ತಿರುವುದು ಪತ್ತೆಯಾಗಿದೆ. ಕಾರ್ಯಾಚರಣೆ ನಡೆಸಿದ ಮಿಡಿಗೇಶಿ ಪೊಲೀಸರು ಲಾರಿ ಚಾಲಕ ಚೇತನ್, ಕ್ಲೀನರ್ ರಘು ಮತ್ತು ತಬರೀಸ್ ಎಂಬುವವರನ್ನು ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆಯ ವೇಳೆ ಬಂಧಿತರು ದಾವಣಗೆರೆ, ಬಳ್ಳಾರಿ ಹಾಗೂ ಚಿತ್ರದುರ್ಗ ಭಾಗಗಳಿಂದ ಜಾನುವಾರುಗಳನ್ನು ತರುತ್ತಿರುವುದಾಗಿ ತಿಳಿಸಿದ್ದಾರೆ. ವಶಪಡಿಸಿಕೊಂಡ ಜಾನುವಾರುಗಳನ್ನು ಸುರಕ್ಷಿತವಾಗಿ ಕ್ಯಾತ್ಸಂದ್ರದ ಗೋಶಾಲೆಗೆ ರವಾನಿಸಲಾಗಿದೆ ಎಂದು ಪಿಎಸ್ಐ ರವೀಂದ್ರ ಅವರು ಮಾಹಿತಿ ನೀಡಿದ್ದಾರೆ. ಆರೋಪಿಗಳ ವಿರುದ್ಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ ದೂರಿದರು. ಗುಬ್ಬಿ ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ವಿಶೇಷ ಪೂಜೆಯನ್ನು ಸಲ್ಲಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನೀಡುತ್ತಿರುವಂತ ಅಭಿವೃದ್ಧಿ ಕೆಲಸಗಳು ನನಗೆ ಶ್ರೀ ರಕ್ಷೆ ಆಗಿತ್ತು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಮುಂದಿನ ದಿನದಲ್ಲೂ ನಾವು ನೀಡುವಂತಹ ಆಶ್ವಾಸನೆಗಳನ್ನು ಇಡೇರಿಸುವ ಮೂಲಕ ಪದವಿ ಹೊಂದಿರುವ ಯುವಕರಿಗೆ ಉದ್ಯೋಗ ಸೇರಿದಂತೆ ಹಲವು ರೀತಿಯ ಉದ್ಯೋಗಕ್ಕೂ ಕೂಡ ಹೆಚ್ಚಿನ ಮುನ್ನಡೆಯನ್ನು ನೀಡಿ ಕೆಲಸ ಮಾಡಲು ಬದ್ಧವಾಗಿದ್ದೇನೆ ಎಂದರು. ನಾವು ಹೋದ ಕಡೆಯಲ್ಲ ಉತ್ತಮ ಬೆಂಬಲ ಸಿಕ್ಕಿದ್ದು ಗುಬ್ಬಿ ತಾಲೂಕಿನಲ್ಲೂ ಕೂಡ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಈಗಾಗಲೇ ನೋಂದಾವಣೆಯನ್ನು ಮಾಡಿ ಕೊಂಡಿದ್ದಾರೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಕೊಪ್ಪ ದೇವರಾಜು, ಪಟ್ಟಣ ಪಂಚಾಯಿತಿ ಮಾಜಿ…
ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಫೆಬ್ರವರಿ 9 ರಂದು ಬೃಹತ್ ‘ಹಿಂದೂ ಸಮಾಜೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಮುಖಂಡ ಲೋಕೇಶ್ ಅವರು ತಿಳಿಸಿದ್ದಾರೆ. ಭವ್ಯ ಶೋಭಾಯಾತ್ರೆ ಮತ್ತು ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಅದ್ಧೂರಿ ಶೋಭಾಯಾತ್ರೆ ಜರುಗಲಿದೆ. ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಸ್ಥಾನದಿಂದ ಮೆರವಣಿಗೆಗೆ ಚಾಲನೆ ಸಿಗಲಿದೆ. ಕಲಾತಂಡಗಳು: ಬಸವ ವೀರಭದ್ರ ಡೊಳ್ಳು ಕುಣಿತ ಹಾಗೂ ವೀರಗಾಸೆ ತಂಡಗಳಿಂದ ಸಾಂಸ್ಕೃತಿಕ ಪ್ರದರ್ಶನ. ಉತ್ಸವ ಮೂರ್ತಿಗಳು: ಕೆಂಪಮ್ಮ ದೇವಿ, ಕಲ್ಲೇಶ್ವರ ಸ್ವಾಮಿ ಮತ್ತು ಚಿಕ್ಕಮ್ಮ ದೇವಿ ದೇವರುಗಳ ಉತ್ಸವ. ದೇಶಭಕ್ತಿಯ ಪ್ರತೀಕ: ಭಾರತಾಂಬೆಯ ಭವ್ಯ ಚಿತ್ರಪಟಗಳ ಮೆರವಣಿಗೆ. ಈ ಧಾರ್ಮಿಕ ಸಭೆಯಲ್ಲಿ ಕೆರೆಗೋಡಿ ರಂಗಾಪುರ ಸುಕ್ಷೇತ್ರದ ಶ್ರೀ ಗುರು ಪರದೇಶಿ ಕೇಂದ್ರೀಯ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಭಾಷಣಕಾರರಾಗಿ ವಿದ್ಯಾರ್ಥಿ ಪರಿಷತ್ ಮುಖಂಡರಾದ ಮಾಚೇನಹಳ್ಳಿ ಪೃಥ್ವಿ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ವಿಚಾರವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದು ಮಹತ್ವದ ಹೇಳಿಕೆ ನೀಡಿದ್ದಾರೆ. “ಹೈಕಮಾಂಡ್ ಸುಮ್ಮನಿದ್ದರೆ ನಾವೇನು ಅರ್ಥ ಮಾಡಿಕೊಳ್ಳಬೇಕು?” ಎಂದು ಪ್ರಶ್ನಿಸುವ ಮೂಲಕ ಅವರು ಕುತೂಹಲ ಮೂಡಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಏನು ನಡೆದಿದೆ ಎಂಬುದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಹೈಕಮಾಂಡ್ ಗೆ ಮಾತ್ರ ತಿಳಿದಿದೆ. ಹೈಕಮಾಂಡ್ ನವರು ಏನೂ ಹೇಳದೆ, ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಿದ್ದರೆ ಅದರ ಬಗ್ಗೆ ನಾವು ಏನೂ ಹೇಳಲು ಸಾಧ್ಯವಿಲ್ಲ. ಹೈಕಮಾಂಡ್ ಕರೆ ಬಂದರೆ ಮಾತ್ರ ಎಲ್ಲವೂ ಇತ್ಯರ್ಥವಾಗಲಿದೆ,” ಎಂದು ತಿಳಿಸಿದರು. ವೈಯಕ್ತಿಕ ಹೇಳಿಕೆಗಳಿಗೆ ಕಿವಿಗೊಡಬೇಡಿ: ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಅದು ಅವರ ವೈಯಕ್ತಿಕ ಅಭಿಪ್ರಾಯ. ನಾವು ಸಂಪೂರ್ಣವಾಗಿ ಹೈಕಮಾಂಡ್ ಮೇಲೆ ಅವಲಂಬಿತರಾಗಿದ್ದೇವೆ. ಅಧಿಕಾರ ಹಂಚಿಕೆ ಒಪ್ಪಂದ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಬೇಕು,”…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಆರ್ಥಿಕವಾಗಿ ದಿವಾಳಿ ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ. ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಹಲವಾರು ಗಂಭೀರ ಆರೋಪಗಳನ್ನು ಮಾಡಿದರು. ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು ಇಲ್ಲಿವೆ: ಮೆಟ್ರೋ ದರ ಏರಿಕೆ ಮತ್ತು ಆರ್ಥಿಕ ನಿರ್ವಹಣೆ: ಮೆಟ್ರೋ ಯೋಜನೆಗೆ ಹಣ ಹೊಂದಿಸಲು ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ. ಬೆಲೆ ಏರಿಕೆ ಮಾಡಬಾರದೆಂದು ಕೇಂದ್ರ ಸರ್ಕಾರ ಈ ಹಿಂದೆಯೇ ಪತ್ರ ಬರೆದಿದ್ದರೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಅವರು ದೂರಿದರು. ಎತ್ತಿನಹೊಳೆ ಯೋಜನೆ ವಿಳಂಬ: 8,000 ಕೋಟಿ ರೂಪಾಯಿಯಿಂದ ಆರಂಭವಾದ ಎತ್ತಿನಹೊಳೆ ಯೋಜನೆ ಈಗ 33,000 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಕಳಪೆ ಗುತ್ತಿಗೆದಾರರಿಗೆ ಕಾಮಗಾರಿ ನೀಡಲಾಗಿದ್ದು, ಸಿಎಜಿ ವರದಿಯಲ್ಲೂ ಈ ಬಗ್ಗೆ ಉಲ್ಲೇಖವಿದೆ ಎಂದು ಹೇಳಿದರು. ಕೇಂದ್ರ ಬಜೆಟ್ನ ಲಾಭ: ಈ ಬಾರಿಯ…
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ತೀವ್ರ ವಾಗ್ದಾಳಿ ನಡೆಸಿದ್ದು, “ಸಿದ್ದರಾಮಯ್ಯನವರು ಸುಳ್ಳಿನ ರಾಜ” ಎಂದು ಟೀಕಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಕೇಂದ್ರದ ಯೋಜನೆಗಳ ಜಾರಿಯಲ್ಲಿನ ವಿಳಂಬದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ವಿರುದ್ಧ ಟೀಕೆ: ಸಿದ್ದರಾಮಯ್ಯನವರು ಎರಡನೇ ಬಾರಿ ಅಧಿಕಾರಕ್ಕೆ ಬಂದಾಗಿನಿಂದ ಕೇವಲ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ತಮ್ಮ ಆಡಳಿತದಲ್ಲಿ ಆಗುತ್ತಿರುವ ತಪ್ಪುಗಳ ಬಗ್ಗೆ ಅವರು ಮಾತನಾಡುತ್ತಿಲ್ಲ ಎಂದು ಸೋಮಣ್ಣ ಆರೋಪಿಸಿದರು. ಮೆಟ್ರೋ ಯೋಜನೆ: ಬೆಂಗಳೂರು ಮೆಟ್ರೋ ಯೋಜನೆಗೆ ಜೆ.ಎಚ್. ಪಟೇಲ್ ಅವರ ಕಾಲದಲ್ಲೇ ಅಡಿಪಾಯ ಹಾಕಲಾಗಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಕೇಂದ್ರದ ಯೋಜನೆಗಳ ಕ್ರೆಡಿಟ್ ಪಡೆಯಲು ಹವಣಿಸುತ್ತಿದೆ ಎಂದು ಕಿಡಿಕಾರಿದರು. ರೈಲ್ವೆ ಭೂಸ್ವಾಧೀನ ವಿಳಂಬ: ರಾಜ್ಯದಲ್ಲಿ ರೈಲ್ವೆ ಯೋಜನೆಗಳಿಗೆ ಅಗತ್ಯವಿರುವ ಭೂಮಿಯನ್ನು ನೀಡುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಬೆಳಗಾವಿ-ಧಾರವಾಡ ನಡುವಿನ ರೈಲ್ವೆ ಹಳಿ ಅಭಿವೃದ್ಧಿಗೆ ಬೇಕಾದ ಭೂಮಿಯನ್ನು ಇನ್ನೂ…
ಪಾವಗಡ: ತಾಲೂಕಿನ ಕನಿಕಲಬಂಡೆ ಗ್ರಾಮದಲ್ಲಿ ರಾಜಕೀಯ ವೈಷಮ್ಯ ಹಾಗೂ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಜಾತಿ ನಿಂದನೆ ಮತ್ತು ಜೀವ ಬೆದರಿಕೆ ಪ್ರಕರಣಗಳು ದಾಖಲಾಗಿವೆ. ಗ್ರಾಮದ ವೆಂಕಟೇಶ್ ಹಾಗೂ ನರಸಿಂಹಮೂರ್ತಿ ಎಂಬುವವರ ವಿರುದ್ಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಪ್ರಕರಣ 1: ಚುನಾವಣಾ ರಾಜಕೀಯ ಹಾಗೂ ಬೆದರಿಕೆ ಗ್ರಾಮದ ನರಸಿಂಹ ಎಂಬುವವರು ದೂರು ನೀಡಿದ್ದು, ತಾವು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಅಡ್ಡಗಟ್ಟಿದ ವೆಂಕಟೇಶ್ ಮತ್ತು ನರಸಿಂಹಮೂರ್ತಿ ಆಯುಧ ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. “ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅನಿಲ್ಗೆ ಬೆಂಬಲ ನೀಡಬಾರದು. ಈ ಹಿಂದಿನಂತೆ ನಮ್ಮ ಪತ್ನಿಗೆ ಅವಿರೋಧ ಆಯ್ಕೆಯಾಗಲು ಬೆಂಬಲ ನೀಡಬೇಕು” ಎಂದು ಒತ್ತಾಯಿಸಿ, ಜಾತಿ ನಿಂದನೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ 2: ಜಮೀನು ವಿವಾದ ಮತ್ತು ಹಲ್ಲೆ ಯತ್ನ ಅದೇ ಗ್ರಾಮದ ಗಿರಿಯಪ್ಪ ಎಂಬುವವರು ಮತ್ತೊಂದು ದೂರು ದಾಖಲಿಸಿದ್ದಾರೆ. ತಮ್ಮ ತಾಯಿ ಕೆಲಸ ಮಾಡುತ್ತಿದ್ದಾಗ ಸ್ಥಳಕ್ಕೆ ಬಂದ ಆರೋಪಿಗಳು, ಜಮೀನು ಬರೆದುಕೊಡುವಂತೆ…
ತುಮಕೂರು ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರ ಅಸಮಾಧಾನ ಸ್ಫೋಟಗೊಂಡಿದೆ. ಅಧಿಕಾರ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬ ಹಾಗೂ ಕಡೆಗಣನೆಯಿಂದ ಆಕ್ರೋಶಗೊಂಡ ಕಾರ್ಯಕರ್ತರು ಪಕ್ಷದ ಹಿರಿಯ ನಾಯಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕಾರ್ಯಕರ್ತರ ಆಕ್ರೋಶ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದರೂ ನಿಗಮ–ಮಂಡಳಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ನಾಮನಿರ್ದೇಶನ ಮಾಡದಿರುವುದಕ್ಕೆ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಮಗೆ ಅಧಿಕಾರ ನೀಡದಿದ್ದರೆ ಮುಂಬರುವ ಚುನಾವಣೆಗಳನ್ನು ಶಾಸಕರಿಂದಲೇ ಗೆಲ್ಲಿಸಿಕೊಳ್ಳಿ, ನಾವು ಕೆಲಸ ಮಾಡುವುದಿಲ್ಲ” ಎಂದು ನಾಯಕರಿಗೆ ನೇರ ಸವಾಲು ಹಾಕಿದ್ದಾರೆ. ಮುಖಂಡರ ಎದುರೇ ಗದ್ದಲ: ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮತ್ತು ಕೆಪಿಸಿಸಿ ವೀಕ್ಷಕರಾದ ವೆಂಕಟರಮಣಯ್ಯ, ಹುಸೇನ್ ಸಾಬ್ ಅವರ ಸಮ್ಮುಖದಲ್ಲೇ ಸಭೆಯಲ್ಲಿ ಗದ್ದಲ ಉಂಟಾಯಿತು. ಶಾಸಕರಿಗೆ ಮಾತ್ರ ಅಧಿಕಾರ ಮತ್ತು ಸಚಿವ ಸ್ಥಾನಮಾನ ನೀಡಲಾಗುತ್ತಿದೆ, ಆದರೆ ಪಕ್ಷಕ್ಕಾಗಿ ದುಡಿದ ಸಾಮಾನ್ಯ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬುದು ಅವರ ಪ್ರಮುಖ ಆರೋಪವಾಗಿತ್ತು. ಟಿ.ಬಿ. ಜಯಚಂದ್ರ ಸಮಾಧಾನ:…