Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ಲಕ್ನೋ: ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರಿಗಾಗಿ ಯಮರಾಜ ಕಾಯುತ್ತಿದ್ದಾನೆ ಎಂದು ಕಿಡಿಗೇಡಿಗಳಿಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳ ವಿಚಾರವಾಗಿ ಅವರು ಗುಡುಗಿದ್ದಾರೆ. ಇತ್ತೀಚೆಗೆ ಅಲ್ಲಿನ ಅಂಬೇಡ್ಕರ್ ನಗರದಲ್ಲಿ ಮೂವರು ಕಿಡಿಗೇಡಿಗಳು ಸೈಕಲ್ ನಲ್ಲಿ ತೆರಳುತ್ತಿದ್ದ ಬಾಲಕಿಯರ ದುಪ್ಪಟ್ಟಾ ಎಳೆದು ಕೆಡವಿ ಇಬ್ಬರ ಸಾವಿಗೆ ಕಾರಣರಾಗಿದ್ದರು. ಇದನ್ನು ಉಲ್ಲೇಖಿಸಿ ಅವರು ಮಾತನಾಡಿದ್ದಾರೆ. ಈ ವೇಳೆ ಮಹಿಳೆಯರಿಗೆ ತೊಂದರೆ ಕೊಡುವವರಿಗೆ ಯಮ ಅಂತವರಿಗೆ ಕಾದು ಕುಳಿತಿದ್ದಾನೆ ಎಂದು ಎಚ್ಚರಿಸಿದ್ದಾರೆ.
ಲಾಲ್ ಬಾಗ್ ನಲ್ಲಿ ಗುಂಪಾಗಿ ಕುಳಿತು ಪಸ್ತಕ ಓದುವುದಕ್ಕೆ ತೋಟಗಾರಿಕೆ ಇಲಾಖೆ ನಿಷೇಧ ಏರಿದೆ. ಹುಲ್ಲು ಹಾಸಿನ ಮೇಲೆ ಕೂತು ಪುಸ್ತಕ ಓದುವವರಿಂದ ಉದ್ಯಾನವನದ ಹೂವು ಮತ್ತು ಹುಲ್ಲು ಹಾಸಿನ ಸೂಕ್ಷ್ಮ ಸಮತೋಲನಕ್ಕೆ ಭಾರಿ ಅಪಾಯ ಎದುರಾಗಿದೆ ಎಂದು ವರದಿಯಾಗಿದೆ. ಲಾಲ್ ಬಾಗ್ ಸತ್ಯೋದ್ಯಾನದ ಆಡಳಿತ ಮಂಡಳಿ ನಿಗದಿಗೊಳಿಸಿರುವ ನಿಯಮಾವಳಿಗೆ ಬದ್ಧವಾಗಿದೆ. ಲಾಲ್ ಬಾಗ್ ಗೆ ಭೇಟಿ ನೀಡಿದ್ದ ಸಂದರ್ಶಕರೊಬ್ಬರು ಗುಂಪು ಅಧ್ಯಯನವನ್ನು ಗಮನಿಸಿ ದೂರು ನೀಡಿದ್ದರು. ಆ ಬಳಿಕ ಈ ಸೂಚನೆ ನೀಡಲಾಗಿದೆ ಎನ್ನಲಾಗಿದೆ.
ಬೆಂಗಳೂರು: ಅಕ್ರಮವಾಗಿ ಇ-ಸಿಗರೇಟ್ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರು ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 15.9 ಲಕ್ಷ ರೂ. ಮೌಲ್ಯದ ಇ-ಸಿಗರೇಟ್ ವಶಕ್ಕೆ ಪಡೆಯಲಾಗಿದೆ. ಮಲೇಷ್ಯಾದಿಂದ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಲಗ್ಗೇಜ್ ಗಳನ್ನು ಪರಿಶೀಲನೆ ಮಾಡುವಾಗ ಪತ್ತೆಯಾಗಿದೆ. 1,590 ಇ-ಸಿಗರೇಟ್ ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಪ್ರಶ್ನಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿದ್ದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಪ್ರತಿನಿತ್ಯ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ಹೊರಡಿಸಿತ್ತು. ಸಿಡಬ್ಲ್ಯೂಎಂಎ ಆದೇಶಕ್ಕೆ ಮಣಿದಿರುವ ರಾಜ್ಯ ಸರ್ಕಾರ ರಾತ್ರೋರಾತ್ರಿ ಕೆಆರ್ ಎಸ್ ಡ್ಯಾಂ ನಿಂದ ತಮಿಳುನಾಡಿಗೆ ನೀರು ಹರಿಬಿಟ್ಟಿದೆ. ಪ್ರಾಧಿಕಾರದ ಆದೇಶದಂತೆ ರಾಜ್ಯ ಸರ್ಕಾರ ನೀರು ಹರಿಸಲು ಆರಂಭಿಸಿದೆ.
ಹೆಚ್.ಡಿ.ಕುಮಾರಸ್ವಾಮಿ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ. ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಭೇಟಿ ನೀಡಿದ್ದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಹೈಕಮಾಂಡ್ ನಿರ್ಧಾರ ಸ್ವಾಗತ ಮಾಡುತ್ತೇನೆ. ಹೆಚ್.ಡಿ.ಕುಮಾರಸ್ವಾಮಿಯವರು ಸತತವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಮೈತ್ರಿಯಿಂದ ಇನ್ನಷ್ಟು ಶಕ್ತಿ ಬರಲಿದೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.
ತುರುವೇಕೆರೆ : ಇತಿಹಾಸ ಪ್ರಸಿದ್ಧ ತುರುವೇಕೆರೆ ಪಟ್ಟಣದಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಶ್ರೀ ಸತ್ಯ ಗಣಪತಿ ಸೇವಾ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಹಾಗೂ ಸಮಿತಿಯ ಪದಾಧಿಕಾರಿಗಳೊಂದಿಗೆ ಮತ್ತು ಮತ್ತು ಭಕ್ತಾದಿಗಳೊಂದಿಗೆ ಪೂಜಾ ವಿಧಿ ವಿಧಾನಗಳನ್ನು ಕೈಗೊಂಡರು ಶಿಲ್ಪಿಗಳಾದ ದೇವರಾಜ್ ರವರ ಗೃಹದಿಂದ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಪಟ್ಟಣದ ತಿಪಟೂರು ರಸ್ತೆಯಲ್ಲಿರುವ ಗಣಪತಿ ಆಸ್ಥಾನ ಮಂಟಪಕ್ಕೆ ಗಣಪತಿ ಮೂರ್ತಿ ಆಗಮನ ಗಣಪತಿ ಮೂರ್ತಿಗೆ ಸೇವಾ ಸಮಿತಿ ಹಾಗೂ ಭಕ್ತಾದಿಗಳು ಮಾಡಿಸಿರುವ ನಾಲ್ಕು ಕೆಜಿ ರಜತ ಕಿರೀಟ ಧಾರಣೆ ಮಾಡಿ ಪೂಜೆ ಸಲ್ಲಿಸಲಾಯಿತು. ರಜತ ಕಿರೀಟವನ್ನು ಶಿಲ್ಪಿ ದೇವರಾಜ್ ಹಾಗು ಶ್ರೀ ಸತ್ಯ ಗಣಪತಿ ಸೇವಾ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ್ ರವರು ಗಣಪತಿ ಮೂರ್ತಿಗೆ ಧಾರಣೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀಕಾಂತ್ ರಾಜ್ ಅರಸ್ ಹಾಗೂ ಇತರೆ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರು ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಎ.ಮಂಜು, ದೇವರಾಜೇಗೌಡ ಅವರು ಹೈಕೋರ್ಟ್ ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು.
ಬೆಂಗಳೂರು: ರಾಜ್ಯದ ಸಂಕಷ್ಟ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಬರ ಪರಿಹಾರ ಘೋಷಣೆ ಮಾಡಲಿ ಎಕರೆಗೆ ತಲಾ 25 ಸಾವಿರ ರೂ. ಬೆಳೆ ಪರಿಹಾರ ಕೊಡಲಿ ಎಂದು ಬಿಜೆಪಿ ಎಂಎಲ್ ಸಿ ರವಿಕುಮಾರ್ ಆಗ್ರಹಿಸಿದ್ದಾರೆ. ಕೆಆರ್ ಎಸ್ ಡ್ಯಾಮ್ ನಿಂದ ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ಮಾತನಾಡಿದ ಅವರು, ಕಾವೇರಿ, ಬರ ವಿಚಾರ ಡೈವರ್ಟ್ ಮಾಡಲು ಮೂವರು ಡಿಸಿಎಂ ನೇಮಕದ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಕೆ.ಎನ್. ರಾಜಣ್ಣ, ಚಲುವರಾಯಸ್ವಾಮಿ ಇವರೆಲ್ಲಾ ಬುದ್ಧಿವಂತರು. ರಾಜ್ಯದಲ್ಲಿ ಬರ, ಕಾವೇರಿ ಸಮಸ್ಯೆ ಬಗ್ಗೆ ಚರ್ಚೆ ಆಗಬಾರದು ಅಂತ ಮೂರು ಡಿಸಿಎಂ ಚರ್ಚೆಗೆ ಬಿಟ್ಟಿದ್ದಾರೆ ಎಂದು ಅವರು ಆರೋಪಿಸಿದರು. ಇವರು ದಲಿತರನ್ನು ಸಿಎಂ ಮಾಡದೇ ಮೋಸ ಮಾಡಿದವರು. ನಾನೇ ಸಿಎಂ ಆಗಬೇಕು, ಐದೂ ವರ್ಷ ನಾನೇ ಸಿಎಂ ಅಂತ ಸಿದ್ದರಾಮಯ್ಯ ಅವರ ಆಪ್ತರಿಂದ ಹೇಳಿಸುತ್ತಿದ್ದಾರೆ. ಇವರಿಗೆ ತಾಕತ್ ಇದ್ದರೆ ಮೂರು ಡಿಸಿಎಂಗಳನ್ನು ಮಾಡಲಿ ಎಂದು ಸವಾಲು…
ಸೂರ್ಯನ ಮೇಲ್ಮೈ ಅಧ್ಯಯನಕ್ಕಾಗಿ ಭಾರತ ಕೈಗೊಂಡಿರುವ ಆದಿತ್ಯ ಎಲ್ 1 ಮಿಷನ್ ವೈಜ್ಞಾನಿಕ ಮಾಹಿತಿ ಸಂಗ್ರಹಿಸಲು ಆರಂಭಿಸಿದೆ ಎಂದು ಇಸ್ರೋ ತಿಳಿಸಿದೆ. STEPS ಉಪಕರಣದ ಸಂವೇದಕಗಳು ಭೂಮಿಯಿಂದ 50,000km ಗಿಂತ ಹೆಚ್ಚಿನ ದೂರದಲ್ಲಿ ಸೂಪರ್-ಥರ್ಮಲ್ ಮತ್ತು ಶಕ್ತಿಯುತ ಅಯಾನುಗಳು ಮತ್ತು ಎಲೆಕ್ಟ್ರಾನ್ ಗಳನ್ನು ಅಳೆಯಲು ಪ್ರಾರಂಭಿಸಿವೆ. ಈ ಡೇಟಾವು ವಿಜ್ಞಾನಿಗಳಿಗೆ ಭೂಮಿಯ ಸುತ್ತಲಿನ ಕಣಗಳ ನಡವಳಿಕೆಯನ್ನು ವಿಶ್ಲೇಷಿಸಲು ಸಹಾಯ ಮಾಡುತ್ತದೆ ”ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ. ಸೋಮವಾರ ಮಧ್ಯ ರಾತ್ರಿ ಆದಿತ್ಯ ಎಲ್1, ಟ್ರಾನ್ಸ್-ಲ್ಯಾಗ್ರೇಂಜ್ ಪಾಯಿಂಟ್ 1 ಇನ್ ಸರ್ಷನ್ ಕ್ರಿಯೆಯನ್ನು ಪೂರ್ಣಗೊಳಿಸಲಿದೆ.
ಬೆಂಗಳೂರು: ಕಳೆದ ಮೂರು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರಳನ್ನು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಎಲ್ಲಾ ವರದಿಗಳು ನಾರ್ಮಲ್ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದು, ಅಲ್ಲಿಂದ ನೇರವಾಗಿ ಪೊಲೀಸರು ಸಿಸಿಬಿ ಕಚೇರಿಗೆ ಮುಖಕ್ಕೆ ತಲೆಗೆ ಮಾಸ್ಕ್ ಹಾಕಿ ಆಸ್ಪತ್ರೆಯ ಹಿಂಬಾಗಿಲಿನಿಂದ ಕರೆತಂದಿದ್ದಾರೆ. ಐದಾರು ದಿನಗಳ ಕಾಲ ಕಸ್ಟಡಿಯಲ್ಲಿ ವಿಚಾರಣೆ ನಡೆಸಿ, ನಂತರ ಸ್ಥಳ ಮಹಜರು ನಡೆಸಬೇಕು. ಬಳಿಕ ಉಳಿದ ಆರೋಪಿಗಳನ್ನೂ ಚೈತ್ರಾಳ ಮುಖಾಮುಖಿಯಾಗಿ ಕೂರಿಸಿ ವಿಚಾರಣೆ ನಡೆಸಲು ಎಂದು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.