Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ನವದೆಹಲಿ: ಇಂದಿನಿಂದ 5 ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯಲಿದೆ. ಚಂದ್ರಯಾನ-3 ಯಶಸ್ವಿ ಬಳಿಕ ಭಾರತ ವಿಶ್ವದ ಗಮನ ಸೆಳೆದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಸಂಸತ್ ಭವನದ ಬಳಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚಂದ್ರನ ಅಂಗಳದಲ್ಲಿ ಭಾರತದ ರಾಷ್ಟ್ರಧ್ವಜ ಹಾರುತ್ತಿದೆ. ಚಂದ್ರಯಾನ-3 ನಮ್ಮ ತಿರಂಗವನ್ನು ಎತ್ತಿ ಹಿಡಿದಿದೆ. ಶಿವಶಕ್ತಿ ಪಾಯಿಂಟ್ ಹೊಸ ಸ್ಫೂರ್ತಿಯ ಕೇಂದ್ರವಾಗಿದೆ ಎಂದರು. ಜಗತ್ತು, ಅಂತಹ ಸಾಧನೆಯನ್ನು ಮಾಡಿದಾಗ, ಅದನ್ನು ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಜೋಡಿಸುವ ಮೂಲಕ ನೋಡಲಾಗುತ್ತದೆ. ಈ ಸಾಧನೆಯಿಂದ ಹಲವು ಅವಕಾಶಗಳು ಭಾರತದ ಬಾಗಿಲುಗಳನ್ನ ತಟ್ಟುತ್ತವೆ. ಇಸ್ರೋ ವಿಜ್ಞಾನಿಗಳ ಸಾಧನೆ ಎಲ್ಲರಿಗೂ ಸ್ಫೂರ್ತಿ ಎಂದರು.
ಬೆಂಗಳೂರು: ಬೆಂಗಳೂರು ಮಾದಕ ವಸ್ತುಗಳ ರಾಜಧಾನಿ ಆಗ್ತಿದೆ. ರಾಜಧಾನಿ ಸಿಸಿಬಿ ಪೊಲೀಸರು ಅಂಥಾ ಬೃಹತ್ ಮಾದಕ ಜಾಲವೊಂದನ್ನ ಬೇಧಿಸಿ ಬರೋಬ್ಬರಿ 7 ಕೋಟಿ 83 ಲಕ್ಷ ಮೌಲ್ಯದ ಡ್ರಗ್ಸ್ ಅನ್ನು ಸೀಝ್ ಮಾಡಿದ್ದಾರೆ. ಸರಿ ಸುಮಾರು 190kg ತೂಕದ 7 ಕೋಟಿ 83 ಲಕ್ಷ ರೂಪಾಯಿ ಮೌಲ್ಯದ ವಿವಿಧ ಬಗೆಯ ಮಾದಕ ವಸ್ತುಗಳನ್ನು ಕೇವಲ ಒಂದೇ ವಾರದಲ್ಲಿ ಸೀಜ್ ಮಾಡಿದ್ದಾರೆ. ಈ ಪ್ರಕರಣದಲ್ಲಿ, ಬೆಂಗಳೂರಿನ 3 ಮಂದಿ, ಕೇರಳದ ನಾಲ್ವರು, ಒರಿಸ್ಸಾದ ನಾಲ್ವರು ಸೇರಿದಂತೆ ಮೂವರು ವಿದೇಶಿ ಪ್ರಜೆಗಳ ಹೆಡೆಮುರಿ ಕಟ್ಟಿದ್ದಾರೆ.
ರಾಜ್ಯದಲ್ಲಿ ಹಿಂದೂಪರ ಹೋರಾಟಗಾರ ಹಾಗೂ ಗೋರಕ್ಷಕ ಎಂದು ವಿವಿಧ ಹೋರಾಟಗಳ ಮೂಲಕ ಹಲ್ಲೆ ಹಾಗೂ ವಿವಿಧ ಪ್ರಕರಣಗಳಡಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ ಜೈಲಿಗಟ್ಟಿದ್ದರು. ಆದರೆ, ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿಗೆ ಗುಡ್ ನ್ಯೂಸ್ ನೀಡಿರುವ ಸರ್ಕಾರ, ಅವರ ವಿರುದ್ಧ ದಾಖಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಗೊಳಿಸಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಉತ್ತರ ಪ್ರದೇಶದ ಶಿವ ದೇವಸ್ಥಾನದಲ್ಲಿ ನಮಾಜ್ ಮಾಡಿದ ಮುಸ್ಲಿಂ ಮಹಿಳೆ ಮತ್ತು ಆಕೆಯ ಮಗಳನ್ನು ಪೊಲೀಸರು ಬಂಧಿಸಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಯತ್ನಿಸಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಸೂಚಿಸಿದ ಮೌಲ್ವಿಯನ್ನೂ ಬಂಧಿಸಲಾಗಿದೆ. ಬರೇಲಿ ಜಿಲ್ಲೆಯ ಕೇಸರಪುರ ಗ್ರಾಮದ ಶಿವ ದೇವಾಲಯದಲ್ಲಿ ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ನಜೀರಾ (38), ಮಗಳು ಸಬೀನಾ (19) ಮತ್ತು ಮೌಲ್ವಿ ಚಮನ್ ಶಾ ಮಿಯಾನ್ ಅವರನ್ನು ಭೂತ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕೇಸರಪುರ ಗ್ರಾಮದ ಮುಖ್ಯಸ್ಥನ ಪತಿ ಪ್ರೇಮ್ ಸಿಂಗ್ ನೀಡಿದ ದೂರಿನ ಮೇರೆಗೆ ಪೊಲೀಸ್ ಕ್ರಮ ಕೈಗೊಳ್ಳಲಾಗಿದೆ. ನಜೀರಾ ಮತ್ತು ಅವರ ಮಗಳು ಮಧ್ಯಾಹ್ನ ಶಿವ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಆವರಣದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದರು ಎಂದು ದೂರುದಾರರು ಹೇಳಿದ್ದಾರೆ. ಗ್ರಾಮಸ್ಥರು ಅವರನ್ನು ತಡೆಯಲು ಪ್ರಯತ್ನಿಸಿದರು, ಆದರೆ ಅವರು ಪ್ರಾರ್ಥನೆಯನ್ನು ಮುಂದುವರೆಸಿದರು ಎಂದು ‘ಎನ್ಡಿಟಿವಿ’ ವರದಿ ಮಾಡಿದೆ. ಚಮನ್ ಷಾ ಅವರ ಸೂಚನೆ ಮೇರೆಗೆ…
ಬೆಂಗಳೂರು: ವಿದೇಶಿ ಮೂಲದ ಕಂಪನಿಯಲ್ಲಿ ಮಹಿಳಾ ಟೆಕ್ಕಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನಲೆ ಕಂಪನಿಯ ಹಿರಿಯ ಸಹದ್ಯೋಗಿ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಎಂ. ಜಿ ರಸ್ತೆ ಸಮೀಪದ ಮೇಗ್ರಾಥ್ ರಸ್ತೆಯಲ್ಲಿರುವ ವಿದೇಶಿ ಮೂಲದ ಲಿಬ್ರೆ ವೈರ್ ಲೆಸ್ ಟೆಕ್ನಾಲಜೀಸ್ ಪ್ರೇವೈಟ್ ಲಿಮಿಟೆಡ್ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಆರೋಪಿ ಪ್ರೇಮ್ ಚಂದರ್, ಕೆಲಸದ ವೇಳೆ ಮಹಿಳಾ ಟೆಕ್ಕಿ ಜೊತೆಗೆ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದನಂತೆ ಎಂದು ಆರೋಪಿಸಲಾಗಿದೆ.
ಬೆಂಗಳೂರು: ಗಣೇಶ ಚತುರ್ಥಿ ಅಂಗವಾಗಿ ಜೆ.ಪಿ. ನಗರದ ಸತ್ಯಗಣಪತಿ ಶಿರಡಿ ಸಾಯಿ ಮಂದಿರದಲ್ಲಿ 50 ಲಕ್ಷ ಮೌಲ್ಯದ ನಾಣ್ಯಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ. ಒಟ್ಟು 50 ಲಕ್ಷ ಮೌಲ್ಯದ ನಾಣ್ಯಗಳಲ್ಲಿ 12 ವಿವಿಧ ರೀತಿಯ ಗಣೇಶನ ಚಿತ್ರಗಳನ್ನು ಬಿಡಿಸಲಾಗಿದೆ. ವಿಕ್ರಮ ಲ್ಯಾಂಡರ್, ಚಂದ್ರಯಾನ್-3, ಜೈ ಕರ್ನಾಟಕ, ಜೈ ಜವಾನ್ ಜೈ ಕಿಸಾನ್, ಮೇರಾ ಭಾರತ್ ಮಹಾನ್ ವಿಷಯಾಧಾರಿತ ಥೀಮ್ ಗಳನ್ನು ಅಳವಡಿಸಲಾಗಿದೆ.
ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಸೋಮವಾರ ಸಂಸತ್ತಿನ 75 ವರ್ಷಗಳ ಇತಿಹಾಸದ ಕುರಿತು ಚರ್ಚೆ ನಡೆಯಲಿದೆ. ಗಣೇಶ ಚತುರ್ಥಿಯ ಮಂಗಳವಾರದಿಂದ ನೂತನ ಸಂಸತ್ ಭವನದಲ್ಲಿ ಅಧಿವೇಶನ ನಡೆಯಲಿದೆ. ವಿಶೇಷ ಪೂಜೆಯ ನಂತರ ನೂತನ ಸಂಸತ್ತಿನ ಅಧಿವೇಶನ ಆರಂಭವಾಗಲಿದೆ. ಹೊಸ ಸಂಸತ್ತಿಗೆ ತೆರಳುವ ಮೊದಲು ಸಂಸದರ ಗುಂಪು ಫೋಟೋ ಸೆಷನ್ ಕೂಡ ಇರುತ್ತದೆ. ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಸರ್ಕಾರ ವಿಶೇಷ ಅಧಿವೇಶನಕ್ಕೆ ಬೇರೆ ಯಾವುದೇ ಕಾರ್ಯಸೂಚಿ ಪ್ರಕಟಿಸಲಿಲ್ಲ. ಸರ್ವಪಕ್ಷ ಸಭೆಯಲ್ಲಿ ಹಂಚಿಕೆಯಾದ ಮಸೂದೆಗಳಲ್ಲಿ ಚುನಾವಣಾ ಆಯೋಗದ ಸದಸ್ಯರ ನೇಮಕಕ್ಕೆ ಸಂಬಂಧಿಸಿದ ವಿಧೇಯಕ ಸೇರ್ಪಡೆಯಾಗಿಲ್ಲ. ಈ ಬಗ್ಗೆ ಪ್ರತಿಪಕ್ಷದ ಸದಸ್ಯರು ಪ್ರಶ್ನಿಸಿದಾಗ ಈ ಮಸೂದೆಯನ್ನೂ ಪರಿಗಣಿಸಲಾಗುವುದು ಎಂದು ಉತ್ತರಿಸಿದರು. ನೂತನ ಸಂಸತ್ ಭವನದ ಮೊದಲ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಪರಿಗಣಿಸಬೇಕು ಎಂದು ಸರ್ವಪಕ್ಷ ಸಭೆಯಲ್ಲಿ ಒತ್ತಾಯಿಸಲಾಯಿತು. ಮಹಿಳಾ ಮೀಸಲಾತಿ ವಿಧೇಯಕಕ್ಕೆ ಬಿಜೆಪಿ ಕಾರ್ಯಕರ್ತರು ಬೆಂಬಲ ಸೂಚಿಸಿದರು. 20ರಂದು ಮಸೂದೆಯನ್ನು ಪರಿಗಣಿಸುವ ಸಾಧ್ಯತೆ ಇದೆ. ಇಂದಿನಿಂದ ಇದೇ ತಿಂಗಳ…
ಮಣಿಪುರದಲ್ಲಿ ಯೋಧನನ್ನು ಅಪಹರಿಸಿ ಹತ್ಯೆ ಮಾಡಲಾಗಿದೆ. ಕಾಂಗ್ಪೋಪಿ ಆರ್ಮಿ ಡಿಫೆನ್ಸ್ ಸೆಕ್ಯುರಿಟಿ ಕಾರ್ಪ್ಸ್ ಆಗಮ್ ಸೆರ್ಟೊ ಟಾಂಗ್ಟಾಂಗ್ ಕೋಮ್ ಕೊಲ್ಲಲ್ಪಟ್ಟರು. ಇಂಫಾಲ್ ಪೂರ್ವ ಜಿಲ್ಲೆಯ ಖುನಿಂಗ್ ನಥೆಕ್ ಗ್ರಾಮದಲ್ಲಿ ಈ ಕೊಲೆ ನಡೆದಿದೆ. ಸೆರ್ಟೊ ಟಾಂಗ್ಟಾಂಗ್ ಕೋಮ್ ವಿಹಾರಕ್ಕೆಂದು ಮನೆಗೆ ಬಂದಾಗ ಈ ದುರಂತ ಘಟನೆ ನಡೆದಿದೆ. ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಯೋಧ ಮನೆಯಿಂದ ನಾಪತ್ತೆಯಾಗಿದ್ದರು. ಇಂದು ಬೆಳಗ್ಗೆ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ವರದಿಗಳ ಪ್ರಕಾರ, ಅಪರಿಚಿತ ಬಂದೂಕುಧಾರಿಯೊಬ್ಬ ಯೋಧನನ್ನು ಆತನ ಮನೆಯಿಂದ ಅಪಹರಿಸಿದ್ದಾನೆ. ಘಟನೆಯ ವೇಳೆ ಯೋಧ ಮತ್ತು ಆತನ ಹತ್ತು ವರ್ಷದ ಮಗ ಮಾತ್ರ ಮನೆಯಲ್ಲಿದ್ದರು. ಮಗು ನೀಡಿದ ಮಾಹಿತಿ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಮನೆಯಲ್ಲಿ ನಿಂತಿದ್ದ ಯೋಧನಿಗೆ ಬಿಳಿ ಕಾರಿನಲ್ಲಿ ಬಂದೂಕು ತೋರಿಸಿ ಬೆದರಿಸಿದ್ದಾರೆ. ನಂತರ ಶೋಧ ನಡೆಸಿದಾಗ ಇಂದು ಮೃತದೇಹ ಪತ್ತೆಯಾಗಿದೆ. ದೇಹದ ತಲೆಗೆ ಗುಂಡು ತಗುಲಿದೆ. ಮೃತದೇಹವನ್ನು ಸಹೋದರ ಗುರುತಿಸಿದ್ದಾರೆ.
ಕೋಲಾರ: ಭ್ರಷ್ಟಾಚಾರದ ಸರ್ಕಾರದ ವಿರುದ್ದ ಹೋರಾಟಕ್ಕೆ ಪ್ರಾರಂಭ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಕಟೀಲ್, ರೈತರ ಪರ ಯೋಜನೆಗಳನ್ನ ವಾಪಸ್ ತೆಗೆದುಕೊಳ್ಳುವಂತಹ ಕೆಲಸ ಕಾಂಗ್ರೇಸ್ ಸರ್ಕಾರ ಮಾಡಿದೆ. ಉಚಿತ ವಿದ್ಯುತ್ ಕೊಡುತ್ತೇವೆ ಎಂದು ನಿರಂತರ ವಿದ್ಯುತ್ ಕಡಿತ ಮಾಡುತ್ತಿದೆ. ರೈತರ ಹೊಟ್ಟೆಗೆ ಹೊಡೆಯುವಂತಹ ಕೆಲಸ ಮಾಡುತ್ತಿದೆ. ಕಾವೇರಿ ನೀರು ತಮಿಳುನಾಡಿಗೆ ಕಳಿಸುವ ಮೂಲಕ, ನೀವು ಕರ್ನಾಟಕದ ಮುಖ್ಯಮಂತ್ರಿಯಾ? ಅಥವಾ ತಮಿಳುನಾಡಿನ ಮುಖ್ಯಮಂತ್ರಿನಾ? ಕದ್ದು ಮುಚ್ಚಿ ನೀರನ್ನ ಬಿಡುವ ಮೂಲಕ ಕಾಂಗ್ರೇಸ್ ನ ಬುದ್ದಿ ತೋರಿಸಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಇಬ್ಬರು ಮಂತ್ರಿಗಳ ಮೇಲೆ ಕೇಸ್ ದಾಖಲಾಗಿದ್ದರೂ ಅವರ ರಾಜೀನಾಮೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿಲ್ಲ. ದೂರು ನೀಡಿದವರ ಮೇಲೆ ಪ್ರಕರಣ ದಾಖಲು ಮಾಡುತ್ತಿದ್ದಾರೆ ಎಂದರು. ಮುಂದಿನ ಲೋಕಸಭೆ ಚುನಾವಣೆಯಲ್ಲಿ 28 ಕ್ಕೆ 28 ಗೆಲ್ಲುವಂತಹ ಕೆಲಸ ಮಾಡುತ್ತೇವೆ. ಮತ್ತೆ ಯಡಿಯೂರಪ್ಪ ನೇತೃತ್ವದಲ್ಲಿ ಪ್ರವಾಸ ಮಾಡಿ ಯಶಸ್ವಿಯಾಗುತ್ತೇವೆ ಎಂದರು.
ಯಾದಗಿರಿ: ಎಲ್ಲಾ ಸಮುದಾಯದವರು ಡಿಸಿಎಂ ಕೇಳುವುದರಲ್ಲಿ ತಪ್ಪೇನಿದೆ? ಇನ್ನೂ ಮೂರು ಯಾಕೆ ಐವತ್ತು ಉಪಮುಖ್ಯಮಂತ್ರಿ ಮಾಡಲಿ. ಅಂತಿಮವಾಗಿ ನಮ್ಮ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದ್ದಾರೆ. ಮೂರು ಡಿಸಿಎಂ ಸ್ಥಾನಕ್ಕೆ ಸಚಿವ ಕೆ.ಎನ್.ರಾಜಣ್ಣ ಬೇಡಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಲ್ಯಾಣ ಕರ್ನಾಟಕ ಭಾಗಕ್ಕೆ ಡಿಸಿಎಂ ಸ್ಥಾನ ಕೊಡಬೇಕೆಂಬ ವಿಚಾರವಾಗಿ ಮಾತನಾಡಿದ ಅವರು, ಯಾಕೆ ಉಪಮುಖ್ಯಮಂತ್ರಿ, ಸಿಎಂ ಸ್ಥಾನವನ್ನು ಕೊಡಬಾರದಾ? ಹಿಂದೆ ನಮ್ಮ ಭಾಗದವರೆ ಕಾಂಗ್ರೆಸ್ನಿಂದ ಇಬ್ಬರು ಸಿಎಂ ಆಗಿದ್ದಾರೆ ಎಂದರು.