Author: admin

ಬೆಂಗಳೂರು: ಜನನಿಬಿಡ ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಶನಿವಾರ ರಾತ್ರಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನನ್ನು 28 ವರ್ಷದ ರಫೀಕ್ ಅಹ್ಮದ್ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ರಫೀಕ್ ಅಹ್ಮದ್ ನನ್ನು ಚಾಕುವಿನಿಂದ ಇರಿದು ಕೊಂದಿರುವಂತೆ ತೋರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನಿಗೆ ಗೊತ್ತಿದ್ದ ಆರೋಪಿಗಳಿಗೆ ಈ ಕೃತ್ಯವೆಸಗಿರುವ ಸಾಧ್ಯತೆ ಇದೆ ಎಂದು ವೈಟ್‌ ಫೀಲ್ಡ್, ಡಿಸಿಪಿ ಡಾ ಸಂಜೀವ್ ಎಂ ಪಾಟೀಲ್ ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.

Read More

ಬೆಳ್ಳಂ ಬೆಳಗ್ಗೆಯೇ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು. ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ ‘ಕರ್ನಾಟಕ ಮಾದರಿ’? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ..!! ಇದು ನೈಜಸ್ಥಿತಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಆಗಸ್ಟ್, ಸೆಪ್ಟೆಂಬರ್ ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಆಗ್ಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ? ಎಂದು…

Read More

ಬೆಂಗಳೂರು: ಆರ್ ಎಸ್ ಎಸ್ ತತ್ವವನ್ನು ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. RSS ತತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ ವಿರೋಧಿಯಾಗಿದೆ. ಆರ್ಥಿಕ ಸಮಾನತೆ ಇಲ್ಲ, ದೇಶಭಕ್ತಿಯೂ ಇಲ್ಲ ಎಂದು ಆರ್ ಎಸ್ ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ನಾನೇನು ಆರ್ ಎಸ್ ಎಸ್ ಬಗ್ಗೆ ಮಾತನಾಡಲು ಭಯ ಪಡುವುದಿಲ್ಲ. ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ಕೇಸರಿಕರಣ ನಡೆಯಬಾರದು. ಆರ್ ಎಸ್ ಎಸ್ ನವರಿಗೆ ಆಸಕ್ತಿ ಇದ್ದರೆ ಖಾಸಗಿಯಾಗಿ ನಡೆಸಲಿ ಎಂದರು.

Read More

ಚೈತ್ರಾ ಕುಂದಾಪುರ ಗ್ಯಾಂಗ್ ನಿಂದ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀ ಸ್ವಾಮೀಜಿ ಕೂಡ ಭಾಗಿಯಾಗಿರುವುದು ಬಹಿರಂಗಗೊಂಡಿದ್ದು, ಸದ್ಯ ತಲೆ ಮರೆಸಿಕೊಂಡಿರುವ ಶ್ರೀಗಳು ತನ್ನ ವಿರುದ್ಧ ದೂರು ನೀಡಿದ ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಪ್ರತಿ ದೂರು ನೀಡಿದ್ದಾರೆ. ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ವಂಚಿಸಿದ್ದಾರೆಂದು ತನ್ನ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ತನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅಭಿನವ ಹಾಲಶ್ರೀ ದೂರು ನೀಡಿದ್ದಾರೆ. 5 ಕೋಟಿ ವಂಚನೆ ಪ್ರಕರಣ ದಿನಕ್ಕೊಂದು ಬಣ್ಣ ಪಡೆದುಕೊಳ್ಳುತ್ತಿದ್ದು, ಈ ದಿನದ ಬೆಳವಣಿಗೆಯಲ್ಲಿ ಉದ್ಯಮಿ ಗೋವಿಂದಬಾಬು & ಆಪ್ತರ ವಿರುದ್ಧ ಅಭಿನವ ಹಾಲಶ್ರೀ ದೂರು ಸಲ್ಲಿಸಿದ್ದಾರೆ.

Read More

ಬಿಜೆಪಿಯ ಶಂಖನಾದ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಟ ಪ್ರಕಾಶ್ ರಾಜ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಸನಾತನ ಧರ್ಮ ಕಾಗೆ ಇದ್ದ ಹಾಗೆ ಎಂದು ಪ್ರಕಾಶ ರಾಜ್ ಹೇಳಿದ್ದ. ಅದಕ್ಕೆ ನಾನು ಪ್ರಕಾಶ ರಾಜ್ ಹಂದಿ ಎಂದು ಉತ್ತರ ಕೊಟ್ಟಿದ್ದೆ. ಸುಖಾಸುಮ್ಮನೆ ಮಾತನಾಡದೇ ಬರೋಬ್ಬರಿಯಾಗಿ ಉತ್ತರಿಸಬೇಕು ಎಂದು ಯತ್ನಾಳ್ ಕಾರ್ಯಕರ್ತರಿಗೆ ಸಲಹೆ ನೀಡಿದರು. ಮರ್ಯಾದೆ ಕೊಟ್ಟರೆ ಮರ್ಯಾದೆ ಕೊಡೋಣಾ, ಯಾಕಲೋ ಎಂದರೆ ಯಾಕೋ ಮಗನೇ ಎನ್ನಬೇಕೆಂದು ಅವರು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.

Read More

ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪರಿಂದ ನನಗೆ ಜೀವ ಬೆದರಿಕೆ ಇದೆ ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಮಧು ಬಂಗಾರಪ್ಪ ಬೆಂಬಲಿಗರು ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ. ಇವತ್ತು ಪೊಲೀಸ್ ಕಮಿಷನರ್ ಭೇಟಿ ಮಾಡುತ್ತಿದ್ದು, ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಹರಿಪ್ರಸಾದ್ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ. ಬೇರೆ ಸಮುದಾಯದವರು ಹೋರಾಟ ಮಾಡಿದ್ದರಲ್ಲಾ. ಸಮುದಾಯಕ್ಕೆ ಮಧು ಬಂಗಾರಪ್ಪ ಕೊಡುಗೆ ಏನು ಎಂದು ಇದೇ ವೇಳೆ ಸ್ವಾಮೀಜಿ ಪ್ರಶ್ನಿಸಿದರು.

Read More

ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಮಾದರಿಯ ಇನ್ನೊಂದು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೊಪ್ಪಳದ ಕನಕಗಿರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ತಿಮ್ಮಾರೆಡ್ಡಿ ಹಣ ಕಳೆದುಕೊಂಡವರಾಗಿದ್ದಾರೆ. ಪತ್ನಿ ಗಾಯತ್ರಿ ತಿಮ್ಮಾರೆಡ್ಡಿಗೆ ಬಿಜೆಪಿ ಟಿಕೆಟ್ ಕೊಡಿಸಲು ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು ಹಾಗೂ ಗೌರವ್ ಎಂಬುವವರು ಆರೋಪಿಗಳಾಗಿದ್ದಾರೆ. ಆರೋಪಿಗಳು ತಮಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಗೊತ್ತು, ಆರ್ ಎಸ್ ಎಸ್ ನಾಯಕರು ಗೊತ್ತು ಎಂದು ತಿಮ್ಮಾರೆಡ್ಡಿಯವರನ್ನು ಪರಿಚಯಿಸಿಕೊಂಡಿದ್ದರು. ಬಳಿಕ ರಾಜ್ಯದಲ್ಲಿ ಸಮೀಕ್ಷೆ ನಡೆಸಿದ್ದೇವೆ. ಅದರಲ್ಲಿ ನಿಮ್ಮ ಹೆಸರು ಮುಂಚೂಣಿಯಲ್ಲಿದೆ ಎಂದು ಅವರನ್ನು ನಂಬಿಸಿದ್ದರು. ಬಳಿಕ ಆರೋಪಿಗಳ ಮಾತು ನಂಬಿ ತಿಮ್ಮಾರೆಡ್ಡಿ 21ಲಕ್ಷ ಹಣ ನೀಡಿ ಕೈ ಸುಟ್ಟುಕೊಂಡಿದ್ದರು. ಈ ಸಂಬಂಧ ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ವಂಚನೆ ಎಸಗಿದ ಪ್ರಕರಣ ಸಂಬಂಧ ಕುಂದಾಪುರ ಗೆಳೆಯ ಶ್ರೀಕಾಂತ್ ವಿರುದ್ಧ ಮತ್ತೊಂದು ಸೆಕ್ಷನ್‌ ದಾಖಲು ಮಾಡಲಾಗಿದೆ. ಬಂಡೆಪಾಳ್ಯ ಠಾಣೆಯಲ್ಲಿ ಸಿಸಿಬಿ ಪೊಲೀಸರು ಐಪಿಸಿ ಸೆಕ್ಷನ್ 201 ಹೊಸದಾಗಿ ಸೇರ್ಪಡೆ ಮಾಡಿದ್ದಾರೆ. ಸಿಸಿಬಿ ತನಿಖೆ ವೇಳೆಆರೋಪಿಗಳ ಇಬ್ಬರ ಮೊಬೈಲ್ ಪೋನ್ ತಡಕಾಡಿದ ಸಿಸಿಬಿಗೆ ಮೊಬೈಲ್‌ ನಲ್ಲಿರುವ ದತ್ತಾಂಶ ನಾಶವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಹಾಗಾಗಿ ಆರೋಪಿಗಳ ವಿರುದ್ಧ ಸಾಕ್ಷಿ ನಾಶ ಆರೋಪದ ಮೇಲೆ ಮತ್ತೊಂದು ಸೆಕ್ಷನ್ ಸೇರಿಸಲಾಗಿದೆ. ವಂಚನೆ ಪ್ರಕರಣ ಸಂಬಂಧ ಎಫ್‌ಐಆರ್ ಆಗುತ್ತಿದ್ದಂತೆ ಶ್ರೀಕಾಂತ್ ಹಾಗೂ ಚೈತ್ರಾ ನಡುವೆ ನಡೆದಿರುವ ಸಂಭಾಷಣೆಗಳನ್ನು ನಾಶ ಮಾಡಲಾಗಿದೆ. ಶ್ರೀಕಾಂತ್ ಮೊಬೈಲ್ ಸಂಪೂರ್ಣ ನಾಶ ಮಾಡಲಾಗಿದೆ.

Read More

ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ 2020 ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ. ಈ ಮಾನದಂಡಗಳನ್ನು ಬದಲಾವಣೆ ಮಾಡದಿದ್ದರೆ ಬರಪೀಡಿತ ಪ್ರದೇಶದದಲ್ಲಿ ಪರಿಹಾರ ಕಾರ್ಯಗಳನ್ನು ನಡೆಸಿ ನೊಂದ ಜನರಿಗೆ ನೆರವಾಗಲು ಸಾಧ್ಯವಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಪತ್ರಿಕಾ ಪ್ರಕಟಣೆ ಮೂಲಕ ಕಾರಣ ನೀಡಿರುವ ಅವರು, ಬರ ಘೋಷಣೆಗೆ ಅಗತ್ಯವಾಗಿರುವ ಮಾನದಂಡಗಳನ್ನು ಮರುಪರಿಶೀಲಿಸಬೇಕಾದ ಅನಿವಾರ್ಯತೆಯನ್ನು ವಿವರಿಸಿ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರಿಗೆ ಹಿಂದೆಯೇ ಪತ್ರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಇಲ್ಲಿಯ ವರೆಗೆ ಉತ್ತರ ಬಂದಿಲ್ಲ. ಮಾನದಂಡಗಳಲ್ಲಿನ ಬದಲಾವಣೆ ಕೇವಲ ಕರ್ನಾಟಕ ರಾಜ್ಯದ ದೃಷ್ಟಿಯಿಂದ ಮಾತ್ರವೇ ಅಲ್ಲ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಕ್ಕೂಟವಾದ ಭಾರತ ಗಣರಾಜ್ಯದ ಹಿತದೃಷ್ಟಿಯಿಂದಲೂ ಅತ್ಯಗತ್ಯವಾಗಿರುತ್ತದೆ. ಬರ ಘೋಷಣೆಯ ಮಾನದಂಡಗಳ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿರುವ ರಾಜ್ಯದ ಬಿಜೆಪಿ ನಾಯಕರು ಆ ಕೆಲಸವನ್ನು ಮಾಡದೆ ರಾಜ್ಯದ ಬರ ಪರಿಸ್ಥಿತಿಯ ರಾಜಕೀಯ ಲಾಭ ಪಡೆಯುವ…

Read More

ನಮ್ಮ ಸರ್ಕಾರ ಯಶಸ್ವಿಯಾಗಿ 100 ದಿನ ಪೂರೈಸಿದೆ. ಐದು ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿಗಳನ್ನು ಪೂರೈಸಿದ್ದೇವೆ. ನಿರುದ್ಯೋಗಿಗಳಿಗೆ 3 ಸಾವಿರ ಭತ್ಯೆ ನೀಡ ಗ್ಯಾರಂಟಿ ಮಾತ್ರ ಬಾಕಿಯಿದೆ. ಅದು ಮುಂದಿನ ದಿನಗಳಲ್ಲಿ ಜಾರಿಯಾಗಲಿದೆ ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ನಾವು ನುಡಿದ್ದಂತೆ ನಡೆದಿದ್ದೇವೆ, ಜನರು ಕೂಡ ಸಂತೃಪ್ತಿಯಿಂದ ಇದ್ದಾರೆ. ಲೋಕಸಭೆ ಚುನಾವಣೆ ನಮ್ಮ ಮನೆ ಹೊತ್ತಿನಲ್ಲಿ ಬಂದು ನಿಂತಿದೆ. ಎಲ್ಲಾ ಪಕ್ಷಗಳು ಚುನಾವಣೆಗೆ ಸಜ್ಜಾಗುತ್ತಿವೆ. ಕಾಂಗ್ರೆಸ್ ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕು. ನಾವು ಗೆಲ್ಲುತ್ತೇವೆ ಅನ್ನೋ ವಿಶ್ವಾಸವಿದೆ ಎಂದು ತಿಳಿಸಿದರು. ಮೂರು ಡಿಸಿಎಂ ಸ್ಥಾನಗಳನ್ನು ಸೃಷ್ಟಿ ಮಾಡಿದ್ರೆ, ಎಲ್ಲಾ ಸಮುದಾಯಗಳು ನಮ್ಮಗೆ ಬೆಂಬಲ ನೀಡಲು ಅನುಕೂಲ ಆಗುತ್ತೆ. ಪರಿಶಿಷ್ಟ ಜಾತಿ–ಪಂಗಡ, ಅಲ್ಪಸಂಖ್ಯಾತರಿಗೆ, ವೀರಶೈವ ಸಮುದಾಯಗಳಿಗೆ ಉಪಮುಖ್ಯಮಂತ್ರಿ ಸೃಷ್ಟಿ ಮಾಡಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯ, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಪತ್ರ ಬರೆಯಲು ಇಚ್ಚಿಸಿದ್ದೇನೆ. ಇವತ್ತು ಪತ್ರ ಬರೆಯುತ್ತೇನೆ ಎಂದು ಅವರು ತಿಳಿಸಿದರು. ಮುಂದಿನ ತಿಂಗಳ ಮೊದಲ…

Read More