Author: admin

ಗೋವಾ: ಅಕ್ರಮ ಮದ್ಯ ಸಾಗಣೆಗೆ ತಡೆಗೆ ಕ್ರಮ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗೋವಾದ ವಿಪಕ್ಷ ನಾಯಕ ಯೂರಿ ಅಲೆಮಾವೊ ಧನ್ಯವಾದ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರ ನಿರ್ಧಾರದಿಂದ ಗೋವಾಗೆ ಉಂಟಾಗುತ್ತಿದ್ದ ಆರ್ಥಿಕ ನಷ್ಟ ತಪ್ಪಲಿದೆ. ನಾನು ಸಿದ್ದರಾಮಯ್ಯ ಅವರಿಗೆ ಸ್ಪಂದಿಸುವಂತೆ ಸಿಎಂ ಪ್ರಮೋದ್ ಸಾವಂತ್ ಅವರಿಗೆ ಮನವಿ ಮಾಡುತ್ತೇನೆ ಎಂದು ಯೂರಿ ಅಲೆಮಾವೊ ಹೇಳಿದ್ದಾರೆ. ಗೋವಾದಿಂದ ಒಳಬರುತ್ತಿರುವ ಅಕ್ರಮ ಮದ್ಯ ಸಾಗಣೆಯನ್ನು ತಡೆಯುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದರ ಬಗ್ಗೆ ಗೋವಾ ವಿಪಕ್ಷ ನಾಯಕ ಪ್ರತಿಕ್ರಿಯೆ ನೀಡಿದ್ದು ಸಿಎಂಗೆ ಧನ್ಯವಾದ ತಿಳಿಸಿದ್ದಾರೆ. ಪ್ರಮೋದ್ ಸಾವಂತ್ ಗೋವಾವನ್ನು ಮಾನವ ಕಳ್ಳಸಾಗಣೆ, ಮಾದಕ ವಸ್ತುಗಳ ಸಾಗಣೆ, ಮಾಲಿನ್ಯಕಾರಕ ಮತ್ತು ಅಪಾಯಕಾರಿ ವಸ್ತುಗಳ ಸಾಗಣೆ ಮತ್ತು ಮದ್ಯದ ಕಳ್ಳಸಾಗಣೆ ಕೇಂದ್ರವಾಗಿ ಪರಿವರ್ತಿಸಿದ್ದಾರೆ ಎಂದು ಅಲೆಮಾವೊ ಆರೋಪಿಸಿದ್ದಾರೆ.

Read More

ಮಧುಗಿರಿ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆ ಬೀಗ ಮುರಿದು ಒಳ ನುಗ್ಗಿ ಕಳ್ಳತನ ಮಾಡಿರುವ ಘಟನೆ ಶುಕ್ರವಾರ ಬೆಳಗ್ಗೆ 11:30 ಸಮಯದಲ್ಲಿ ನಡೆದಿದೆ. ಪಟ್ಟಣದ ಡಿಡಿಪಿಐ ಕಚೇರಿ ಹಿಂಭಾಗದ ಮನೆಯಲ್ಲಿ ವಾಸ ಇರುವ ಆಶಾ (30) ಎಂಬುವರು ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು. ಮನೆಗೆ ಬೀಗ ಹಾಕಿರುವುದನ್ನು ಕಂಡ ಕಳ್ಳರು, ಬೀಗ ಒಡೆದು ಒಳ ನುಗ್ಗಿ ಬೀರುವಿನಲ್ಲಿದ್ದ ಸುಮಾರು ನಾಲ್ಕು ಲಕ್ಷ ಹಣ ಹಾಗೂ 60 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ, ಘಟನೆಗೆ ಸಂಬಂಧಿಸಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಅಬಿದ್ ಮಧುಗಿರಿ

Read More

ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ, ಸಮಾನತೆ ಹಾಗೂ ಏಕತೆ ಸಾರಿದ ಮಹಾನ್ ಗ್ರಂಥ ಭಾರತ ಸಂವಿಧಾನ ಎಂದು ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಅವರು ತಿಳಿಸಿದರು. ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶುಕ್ರವಾರ (ಜು.15) ರಾಜ್ಯಾದ್ಯಂತ ಏಕಕಾಲದಲ್ಲಿ ನಡೆದ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ಹೇಳಿದರು. ವಿವಿಧ ಇಲಾಖೆಯ ವಸತಿ ನಿಲಯಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಸಂತಸದ ವಿಷಯ. ಸಂವಿಧಾನ ಸರ್ವರಿಗೂ ಶಿಕ್ಷಣ, ಸಮಾನತೆಯ ಹಕ್ಕು ಕಲ್ಪಿಸಿದೆ. ಯಾವುದೇ ದೇಶದಲ್ಲಿಯೂ ಕೂಡಾ ಭಾರತ ದೇಶದ ನಾಗರಿಕರಿಗೆ ಇರುವಷ್ಟು ಸ್ವಾತಂತ್ರ್ಯವಿಲ್ಲ. ಭಾರತ ದೇಶ ವಿಶ್ವದಲ್ಲೇ ಮಾದರಿ ರಾಷ್ಟ್ರ ಎಂದು…

Read More

ದಾವಣಗೆರೆ: ಲೋಕಸಭಾ ಚುನಾವಣೆ ಸಮೀಪಿಸಲಿ. ಮೋದಿ ಅವರು ಮತ್ತೆ ಪ್ರಧಾನಿ ಆಗುತ್ತಾರಾ ಅಥವಾ ಇಲ್ಲವಾ ಎಂಬ ಬಗ್ಗೆ ಅವತ್ತೇ ಹೇಳುವೆ ಎಂದು ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ. ದಾವಣಗೆರೆಯ ಹೊನ್ನಾಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಬಳಿಕ ಒಂದು ಪಕ್ಷ ಆಡಳಿತ ನಡೆಸುತ್ತದೆ ಎಂದು ಹೇಳಿದ್ದೆ. ನಾನು ಹೇಳಿದಂತೆಯೇ ಆಗಿದೆ. ಅದರಂತೆ ಅವಘಡಗಳಿವೆ. ಅ ಅವಘಡಗಳು ಕಳೆಯಬೇಕು. ಅ ಬಳಿಕ ಮುಂದಿನ ಭವಿಷ್ಯ ಹೇಳುವೆ ಎಂದು ತಿಳಿಸಿದ್ದಾರೆ. ಕಾರ್ತಿಕ ಮಾಸ, ಸಂಕ್ರಾಂತಿ ಸಂದರ್ಭದಲ್ಲಿ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಕೆಲ ಅವಘಡಗಳು ಎದುರಾಗಲಿವೆ. ರಾಜ್ಯ-ರಾಷ್ಟ್ರದಲ್ಲಿ ನಡೆಯುವ ಅವಘಡಗಳಿಂದ ಪಾರು ಮಾಡಿದರೆ ಮುಂದಿನ ಭವಿಷ್ಯ ಹೇಳುವೆ ಎಂದು ಮಾತನಾಡಿದ್ದಾರೆ.

Read More

ಬೆಂಗಳೂರು: ಬಿಜೆಪಿ ಮನಿಸಲು ಸಜ್ಜಾದ INDIA  14 ಸುದ್ದಿ ನಿರೂಪಕರನ್ನು ಬಹಿಷ್ಕರಿಸಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅರ್ನಬ್ ಗೋಸ್ವಾಮಿ ಸೇರಿದಂತೆ ಹಿಂದಿ ಹಾಗೂ ಇಂಗ್ಲಿಷ್ ಸುದ್ದಿ ವಾಹಿನಿಗಳನ್ನು ಪ್ರತಿನಿಧಿಸುವ ಒಟ್ಟು 14 ಸುದ್ದಿ ನಿರೂಪಕರ ಬಹಿಷ್ಕರಿಸಿ ಗುರುವಾರ ಹೆಸರುಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ಪರ ಎಂದು ಗುರುತಿಸಿಕೊಂಡಿರುವ ಅಥವಾ ಪ್ರಚೋದನಾತ್ಮಕ ಮತ್ತು ಕೋಮು ಭಾವನೆ ಕೆರಳಿಸುವಂತೆ ಚರ್ಚಾ ಕಾರ್ಯಕ್ರಮ ನಡೆಸುವ ಆರೋಪದಡಿ ಈ ನಿರೂಪಕರನ್ನು ಬಹಿಷ್ಕರಿಸಲು INDIA ಬಣ ನಿರ್ಧರಿಸಿದೆ. ಅದಿತಿ ತ್ಯಾಗಿ, ಅಮನ್ ಚೋಪ್ರಾ, ಅಮೀಶ್ ದೇವಗನ್, ಆನಂದ್ ನರಸಿಂಹನ್, ಅರ್ನಬ್ ಗೋಸ್ವಾಮಿ, ಅಶೋಕ್ ಶ್ರೀವಾಸ್ತವ ಚಿತ್ರ ತ್ರಿಪಾಠಿ, ಗೌರವ್ ಸಾವಂತ್, ನವಿಕಾ ಕುಮಾರ್, ಪ್ರಾಚಿ ಪರಾಶರ್, ರುಬಿಕಾ ಲಿಯಾಖತ್ ಶಿವ್ ಅರೂರ್, ಸುಧೀರ್ ಚೌಧುರಿ, ಸುಶಾಂತ್ ಸಿನ್ಹಾ ಪಟ್ಟಿಯಲ್ಲಿ ಇರುವವರಾಗಿದ್ದು, ಇವರುಗಳು ನೈಜ ಸಮಸ್ಯೆಗಳ ಕುರಿತಾದ ಗಮನವನ್ನು ಬೇರೆಡೆ ತಿರುಗಿಸುವ ಕೆಲಸವನ್ನು ಈ ನಿರೂಪಕರು ಮಾಡುತ್ತಿದ್ದಾರೆ ಎಂದು ದೂರಲಾಗಿದೆ.

Read More

ಬೆಂಗಳೂರು: ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್ ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಹೇಳಿದರು. ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈ ತೊಳೆದು ಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ. ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್‌ ಐಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು ಎಂದರು.

Read More

ಬೆಂಗಳೂರು ಬಿಸಿನೆಸ್ ಪ್ರೊಸೆಸಿಂಗ್ ಔಟ್‌ ಸೋರ್ಸಿಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಯೊಬ್ಬ, ಮಹಿಳಾ ಸಹೋದ್ಯೋಗಿಯೊಬ್ಬರ ವೈಯಕ್ತಿಕ ಡೇಟಾವನ್ನು ಕದ್ದು, ಅವರ ಹೆಸರಿನಲ್ಲಿ ಬ್ಯಾಂಕ್‌ ನಿಂದ 2 ಲಕ್ಷ ರೂ. ವೈಯಕ್ತಿಕ ಸಾಲ ಪಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಆರೋಪಿ ಲೋಕೇಶ್ವರ್ ಸುಗುಮಾರನ್‌ ಗಾಗಿ ಬಲೆ ಬೀಸಿದ್ದಾರೆ. ಮಹಿಳಾ ಉದ್ಯೋಗಿ ಈತನ ಕೈಯಲ್ಲಿ ಮೊಬೈಲ್​​ ಕೊಟ್ಟು ಕಂಪನಿ ಒಳಗಡೆ ಹೋಗಿದ್ದಾರೆ. ಈ ವೇಳೆ ಲೋಕೇಶ್ವರ್ ಸುಗುಮಾರನ್‌ ಇವರ ಮೊಬೈಲ್​ ಅನ್ ​ಲಾಕ್​​ ಮಾಡಿ ಅವರ ಆಧಾರ್ ಮತ್ತು ಪ್ಯಾನ್ ಮಾಹಿತಿಯನ್ನು ತಿಳಿದುಕೊಂಡಿದ್ದಾನೆ.

Read More

ಮೊಬೈಲ್ ಆ್ಯಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ಆರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರಿಂದ 29.49 ಲಕ್ಷ ನಗದು ಜಪ್ತಿ ಮಾಡಿದ್ದಾರೆ. ಸತೀಶ್, ಗಿರೀಶ್, ಎಂ. ಆರ್. ಮಂಜುನಾಥ್, ನವೀನ್‌ಕುಮಾರ್ ಸೇರಿ ಆರು ಮಂದಿ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದರು. ‘ಜಾಲತಾಣ ಹಾಗೂ ಮೊಬೈಲ್ ಆ್ಯಪ್‌ ಗಳಲ್ಲಿ ಖಾತೆ ತೆರೆದಿದ್ದ ಆರೋಪಿಗಳು, ಪಂದ್ಯಗಳ ಸೋಲು-ಗೆಲುವು ಲೆಕ್ಕಾಚಾರದಲ್ಲಿ ಜನರಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದರು. ಬೆಟ್ಟಿಂಗ್ ನಲ್ಲಿ ಗೆದ್ದವರಿಗೆ ಹಣ ತಲುಪಿಸುತ್ತಿದ್ದರು. ಆರು ಮಂದಿಯೂ ಹಲವು ತಿಂಗಳಿನಿಂದ ಬೆಟ್ಟಿಂಗ್ ನಡೆಸುತ್ತಿದ್ದ ಮಾಹಿತಿ ಇದೆ ಎಂದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ

Read More

ಬೆಂಗಳೂರು ಹೊರ ವಲಯದಲ್ಲಿರುವ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ಶೂ, ಚಪ್ಪಲಿ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಘಟನೆಯಲ್ಲಿ ಐದು ಕೋಟಿಗೂ ಅಧಿಕ ಮೌಲ್ಯದ ಶೂಗಳು ಹಾಗೂ ಚಪ್ಪಲಿಗಳು ಸುಟ್ಟು ಭಸ್ಮವಾಗಿವೆ. ಗೋಡೌನ್ ಬಳಿಯ ವಿದ್ಯುತ್ ಕಂಬಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಈ ವೇಳೆ ಉತ್ತರಹಳ್ಳಿ ನಿವಾಸಿ ಶ್ರೀನಿವಾಸ್ ಎಂಬುವವರಿಗೆ ಸೇರಿದ ಎಎಸ್‌ಆರ್ ಮಾರ್ಕೆಟಿಂಗ್, ಯುನಿಕಾರ್ನ್ ಮಾರ್ಕೆಟಿಂಗ್ ಎಂಬ ಹೆಸರಿನ ಗೋಡೌನ್ ನಲ್ಲಿ ಅವಘಡ ಸಂಭವಿಸಿದೆ.

Read More

ಬೆಂಗಳೂರು: ಪ್ರೇಮಿಗಳ ಖಾಸಗಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡುವುದಾಗಿ ಬ್ಲಾಕ್‌ಮೇಲ್ ಮಾಡಿ 1 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದ ಇಬ್ಬರು ಆರೋಪಿಗಳನ್ನು ಚಂದ್ರಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ನಿವಾಸಿಗಳಾದ ನಯನಾ ಮತ್ತು ಕಿರಣ್ ಬಂಧಿತರು. ಆರೋಪಿ ನಯನಾ ಸಂತ್ರಸ್ತ ಯುವತಿಯ ಸಂಬಂಧಿಯಾಗಿದ್ದಳು. ಆರೋಪಿಗಳು ಕೆಂಗೇರಿ ಮುಖ್ಯರಸ್ತೆಯ ಕೆಂಚನಾಪುರದಲ್ಲಿ ಹೋಟೆಲ್ ನಡೆಸುತ್ತಿದ್ದರು.

Read More