Author: admin

ಬಾರ್ ಮಾಲೀಕರು ಮತ್ತು ಗ್ರಾಹಕರ ನಡುವೆ ನಡೆದಿದ್ದ ಗಲಾಟೆ ಸಂಬಂಧ ಪ್ರಕರಣ ಮುಕ್ತಾಯಗೊಳಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ತಮ್ಮ ವಿರುದ್ಧದ ಪ್ರಕರಣ ಮತ್ತು ಈ ಸಂಬಂಧ ವಿಚಾರಣಾ ಪ್ರಕ್ರಿಯೆಯನ್ನು ರದ್ದು ಮಾಡುವಂತೆ ಕೋರಿ ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

Read More

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಉರಿಯ ಪರನ್‌ ಪೀಲನ್ ಸೇತುವೆಯಲ್ಲಿ ಸ್ಥಾಪಿಸಲಾದ ಜಂಟಿ ಚೆಕ್ ಪೋಸ್ಟ್‌ ನಲ್ಲಿ ಬಾರಾಮುಲ್ಲಾ ಪೊಲೀಸರು ಮತ್ತು ಸೇನೆಯ ಎಂಟು ಆರ್ ‌ಆರ್ ‌ಗಳು ಇಬ್ಬರನ್ನು ಹಿಡಿದಿದ್ದಾರೆ. ಆದರೆ ಚೆಕ್ ಪೋಸ್ಟ್ ನೋಡಿ ತಪ್ಪಿಸಿಕೊಳ್ಳಲು ಯತ್ನಿಸಿ ಸೇನೆಯ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಾರಾಮುಲ್ಲಾ ಮೂಲದ ಹಸನ್ ಮಲ್ಲ ಮತ್ತು ಮೊಹಮ್ಮದ್ ಆರಿಫ್ ಚನ್ನಾ ಬಂಧಿತ ಆರೋಪಿಗಳು. ಅವರಿಂದ ಎರಡು ಗ್ಲೋಕ್ ಪಿಸ್ತೂಲ್‌ ಗಳು, ಎರಡು ಪಿಸ್ತೂಲ್ ಮ್ಯಾಗಜೀನ್ ‌ಗಳು, ಎರಡು ಪಿಸ್ತೂಲ್ ಸೈಲೆನ್ಸರ್ ‌ಗಳು, ಐದು ಚೈನೀಸ್ ಗ್ರೆನೇಡ್ ‌ಗಳು, 28 ಲೈವ್ ಪಿಸ್ತೂಲ್ ರೌಂಡ್ ‌ಗಳು ಮತ್ತು ಇತರ ಯುದ್ಧೋಚಿತ ಮಳಿಗೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕರ ಸೂಚನೆ ಮೇರೆಗೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಕಳ್ಳಸಾಗಣೆ ಮಾಡಿ ಲಷ್ಕರ್-ಇ-ಟಿ ಭಯೋತ್ಪಾದಕರಿಗೆ ಹಂಚುತ್ತಿದ್ದವರನ್ನು ಇದೀಗ ಬಂಧಿಸಲಾಗಿದೆ. ಭಾರತೀಯ ಶಸ್ತ್ರಾಸ್ತ್ರ ಕಾಯಿದೆ ಮತ್ತು ಯುಎ (ಪಿ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

Read More

ಬೆಂಗಳೂರು: ಭೂಮಿ ತಂತ್ರಾಂಶದಲ್ಲಿ ಅನುಮೋದನೆ ನೀಡಿದ ಆರೋಪದ ಹಿನ್ನಲೆಯಲ್ಲಿ ಯಲಹಂಕ ಉಪವಿಭಾಗಾಧಿಕಾರಿ ಎಂ. ಜಿ. ಶಿವಣ್ಣ ವಿರುದ್ಧ ಎಫ್ ‌ಐಆರ್ ದಾಖಲಿಸಲಾಗಿದೆ. ಯಲಹಂಕ ಉಪವಿಭಾಗಾಧಿಕಾರಿಯಾಗಿದ್ದ ಎಂ. ಜಿ. ಶಿವಣ್ಣ ಅವರನ್ನು ಕಳೆದ ಫೆ. 2ರಂದು ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆಗೊಂಡ ನಂತರವು ಭೂಮಿ ತಂತ್ರಾಂಶದಲ್ಲಿ ಅನುಮೋದನೆ ನೀಡಿರುವುದು ತನಖೆಯಿಂದ ಸಾಬೀತಾಗಿತ್ತು. ಇದು ಕ್ರಿಮಿನಲ್ ಸ್ವರೂಪದ ಅಪರಾಧವಾಗಿರುವುದರಿಂದ ಶಿವಣ್ಣ ವಿರುದ್ಧ ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 192(ಎ)ರಡಿ ಎಫ್ ‌ಐಆರ್ ದಾಖಲಾಗಿದೆ.

Read More

ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ -HSRP ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ವಾಹನಗಳ ಮಾಲೀಕರು ಸಾರಿಗೆ ಇಲಾಖೆಯ ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಕೊಂಡು ಹೆಚ್‌ಎಸ್‌ ಆರ್‌ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನವೆಂಬರ್ 17 ಈ ಪ್ರಕ್ರಿಯೆಗೆ ಕೊನೆಯ ದಿನವಾಗಿದೆ.

Read More

ಟ್ರಾಫಿಕ್ ಸಮಸ್ಯೆಗೆ ಪೆರಿಫೆರಲ್ ರಿಂಗ್ ರಸ್ತೆ ಪರಿಹಾರವಾಗಲಿದೆ. ಫ್ಲೈಓವರ್, ಸುರಂಗ ರಸ್ತೆ ಮಾಡಿದರೆ ಟ್ರಾಫಿಕ್ ಸಮಸ್ಯೆ ಬಗೆಹರಿಯುತ್ತೆ. ಬೆಂಗಳೂರಿನ ಪ್ರತಿ ವಾರ್ಡ್ ಗೆ ಯುವ ಐಎಎಸ್ ಅಧಿಕಾರಿಗಳ ನೇಮಕ ಮಾಡುತ್ತೇವೆ. ಬೆಂಗಳೂರಿಗರ ಆಸ್ತಿ ಮೌಲ್ಯದ ಬಗ್ಗೆ ಇ-ಸ್ವತ್ತು ಮಾಡಿಸುತ್ತೇವೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ಇ-ಸ್ವತ್ತು ದಾಖಲೆ ತಲುಪಿಸುತ್ತೇವೆ. ಸರ್ಕಾರಕ್ಕೆ ತೆರಿಗೆ ಕಟ್ಟುವವರಿಗೆ ನಾವು ಸೌಲಭ್ಯ ಕಲ್ಪಿಸಬೇಕಾಗಿದೆ. ಆಸ್ತಿ ಮೌಲ್ಯಮಾಪನ ಮಾಡಿಸಿದರೆ ತೆರಿಗೆ ವಂಚಕರು ಗೊತ್ತಾಗುತ್ತೆ. ಎತ್ತಿನಹೊಳೆ ಯೋಜನೆ ಮೂಲಕ ತಿಪ್ಪಗೊಂಡನಹಳ್ಳಿಗೆ ನೀರು ತರುತ್ತೇವೆ. ತಿಪ್ಪಗೊಂಡನಹಳ್ಳಿ ತಲುಪಿದ ನಂತರ ಮುಂದಿನ ಯೋಜನೆಗೆ ನಿರ್ಧಾರ ಎಂದರು.

Read More

ಉಡುಪಿ: ನಾವು ಯಾರೂ ಕೂಡ ಚೈತ್ರಾ ಕುಂದಾಪುರಳ ಬೆಂಬಲಕ್ಕೆ ನಿಂತಿಲ್ಲ. ನಾವು ಯಾರೂ ಅವಳನ್ನು ರಕ್ಷಣೆ ಮಾಡುತ್ತಿಲ್ಲ. ಯಾರು ತಪ್ಪು ಮೋಸ ಮಾಡಿದ್ರು ಕೂಡ ಶಿಕ್ಷೆ ಆಗಲೇಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬಿಜೆಪಿ ಟಿಕೆಟ್ ಡೀಲ್ ಸಂಬಂಧ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಟೀಂ ಸಿಸಿಬಿ ವಶದಲ್ಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸಮಗ್ರ ತನಿಖೆ ಮಾಡಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ನನಗೂ ಚೈತ್ರಾ ಕುಂದಾಪುರಳಿಗೂ ಯಾವುದೇ ಸಂಬಂಧ ಇಲ್ಲ. ಕಾರ್ಯಕ್ರಮದಲ್ಲಿ ಸಿಕ್ಕಾಗ ಫೋಟೋ ತೆಗೆದುಕೊಂಡಿರಬಹುದು. ಕಾಸು ಕೊಟ್ಟು ಟಿಕೆಟ್ ಪಡೆಯುವ ಸಂಪ್ರದಾಯ ಬಿಜೆಪಿಯಲ್ಲಿ ಇಲ್ಲ ಎಂದರು. ಚೈತ್ರಾ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಚೈತ್ರಾ ಕುಂದಾಪುರದ ವೈಯಕ್ತಿಕ ಸಂಪರ್ಕ ನನಗೆ ಇರಲಿಲ್ಲ. ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಫೋಟೋ ತೆಗೆದಿರಬಹುದು ಗೊತ್ತಿಲ್ಲ. ರಾಜಕೀಯ ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ತನಿಖೆ…

Read More

ಬೆಂಗಳೂರು: ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 165 ಭರವಸೆಗಳಲ್ಲಿ 158 ಭರವಸೆ ಈಡೇರಿಸಿದ್ದೇನೆ. ಈ ಬಾರಿಯೂ 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿ ಜಾರಿ ಮಾಡಿದ್ದೇವೆ. ಮುಂದಿನ ವರ್ಷ ಜನವರಿಯಲ್ಲಿ 5ನೇ ಗ್ಯಾರಂಟಿ ಜಾರಿ ಮಾಡುತ್ತೇವೆ. ಸಾಮಾಜಿಕ, ಆರ್ಥಿಕವಾಗಿ ದುರ್ಬಲ ಇದ್ದವರಿಗೆ ಶಕ್ತಿ ತುಂಬಬೇಕಿದೆ. ಗ್ಯಾರಂಟಿ ಜಾರಿ ಮಾಡಲು ಆಗಲ್ಲ ಎಂದು ಅಪಹಾಸ್ಯ ಮಾಡಿದ್ದರು. ರಾಜ್ಯ ದಿವಾಳಿ ಆಗುತ್ತೆ ಎಂದು ಅಪಹಾಸ್ಯ ಮಾಡಿದ್ದರು ಎಂದರು.

Read More

ತುಮಕೂರು: ನಾವೆಲ್ಲರೂ ಸಂವಿಧಾನಕ್ಕೆ ಬದ್ಧರಾಗಿ ಉತ್ತಮ ಪ್ರಜೆಗಳಾಗಿ ಬದುಕುವುದರ ಮೂಲಕ ರಾಷ್ಟ್ರ ಹಾಗೂ ರಾಜ್ಯದ ಅಭಿವೃದ್ಧಿಯ ಏಳಿಗೆಗಾಗಿ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ಅಭಿಪ್ರಾಯಪಟ್ಟರು. ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ  ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಓದಿದ ನಂತರ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಜನರು ಇಲ್ಲಿ ಸೇರುವುದಕ್ಕೆ ಕಾರಣ ಡಾ:ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ಕೊಟ್ಟಿರುವ ಸಂವಿಧಾನದಿಂದ ಮಾತ್ರ ಸಾಧ್ಯವಾಗಿದೆ. ಎಲ್ಲ ವರ್ಗದ ಜನರಿಗೂ ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ನೀಡಿದ್ದಾರೆ. ಎಲ್ಲರೂ ಸ್ವಾಭಿಮಾನದ ಬದುಕನ್ನು ನಡೆಸುವುದಕ್ಕೆ ಅವರು ದಿಟ್ಟ ಹೆಜ್ಜೆಯನ್ನು ಹಾಕಿ ಕೊಟ್ಟಿದ್ದಾರೆ ಎಂದು ಸ್ಮರಿಸಿದರು. ಭಾರತ ಸಂವಿಧಾನವು ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಸಂವಿಧಾನದಲ್ಲಿ ಎಲ್ಲರಿಗೂ ಒಂದೇ ರೀತಿಯ ಹಕ್ಕು ಮತ್ತು ಕರ್ತವ್ಯಗಳು ಹಾಗೂ ರಾಜ್ಯ ನಿರ್ದೇಶಕ ತತ್ವಗಳನ್ನು ಸಹ ನೀಡಲಾಗಿದೆ. ಭಾರತ ದೇಶದಲ್ಲಿ ಜನವರಿ 26, 1950ರಿಂದ ಸಂವಿಧಾನವನ್ನು ಅಧಿಕೃತವಾಗಿ ಅಳವಡಿಸಿಕೊಳ್ಳಲಾಗಿದೆ. ಆ ದಿನವನ್ನು ಗಣರಾಜ್ಯ ದಿನವೆಂದು ಪ್ರತಿ ವರ್ಷ…

Read More

ಈ ವರ್ಷದ ನೌಕಾಪಡೆಯ ದಿನಾಚರಣೆಯು ಡಿಸೆಂಬರ್ 4 ರಂದು ನಡೆಯಲಿದೆ. ಛತ್ರಪತಿ ಶಿವಾಜಿ ನಿರ್ಮಿಸಿದ ಸಿಂಧುದುರ್ಗ ಕೋಟೆಯಲ್ಲಿ ಭಾರತವು ನೌಕಾಪಡೆಯ ದಿನವನ್ನು ಆಚರಿಸುತ್ತದೆ. ಇದು 1971 ರಲ್ಲಿ ಪಾಕಿಸ್ತಾನದ ವಿರುದ್ಧ ಕರಾಚಿ ಬಂದರಿನ ಮೇಲೆ ಭಾರತೀಯ ನೌಕಾಪಡೆ ನಡೆಸಿದ ದಾಳಿಯನ್ನು ಸ್ಮರಿಸುತ್ತದೆ. ಸಿಂಧುದುರ್ಗ ಕೋಟೆಯ ಇತಿಹಾಸವು ಭಾರತೀಯ ನೌಕಾಪಡೆಗೆ ನಿಕಟ ಸಂಬಂಧ ಹೊಂದಿದೆ. ಕಳೆದ ವರ್ಷ, ನೌಕಾಪಡೆಯು ಸೇಂಟ್ ಜಾರ್ಜ್ ಕ್ರಾಸ್ ಲಾಂಛನವನ್ನು ಛತ್ರಪತಿ ಶಿವಾಜಿ ಲಾಂಛನದೊಂದಿಗೆ ಬದಲಾಯಿಸಿತ್ತು. ಐಎನ್‌ಎಸ್ ವಿಕ್ರಾಂತ್ ಆಯೋಗದ ಅವಧಿಯಲ್ಲಿ ಇದನ್ನು ಬದಲಾಯಿಸಲಾಯಿತು. ವಸಾಹತುಶಾಹಿ ಸಂಸ್ಕೃತಿಯ ಹೊರೆಯನ್ನು ತೆಗೆದುಹಾಕಲಾಗಿದೆ ಎಂದು ಪ್ರಧಾನಿ ಈ ಬದಲಾವಣೆಯ ಬಗ್ಗೆ ಪ್ರತಿಕ್ರಿಯಿಸಿದರು. ಕಳೆದ ವರ್ಷ ವಿಶಾಖಪಟ್ಟಣದಲ್ಲಿ ನೌಕಾಪಡೆಯ ದಿನವನ್ನು ಆಚರಿಸಲಾಯಿತು. ಕಳೆದ ವರ್ಷ ನೌಕಾಪಡೆಯ ದಿನವನ್ನು ಭಾರತದ ಪೂರ್ವ ಕರಾವಳಿಯಲ್ಲಿ ಆಚರಿಸಲಾಯಿತು. ಈ ವರ್ಷ ಪಶ್ಚಿಮ ಕರಾವಳಿಯಲ್ಲಿ ಉತ್ಸವಗಳನ್ನು ಆಯೋಜಿಸಲಾಗಿದೆ. ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ಕಳೆದ ವರ್ಷ ಬೆಂಗಳೂರು ಮತ್ತು ಚಂಡೀಗಢದಲ್ಲಿ ಪರೇಡ್‌ ಗಳನ್ನು ಆಯೋಜಿಸಿತ್ತು. ಈ ವರ್ಷದ…

Read More

ರಾಷ್ಟ್ರ ರಾಜಧಾನಿಯಲ್ಲಿ ಸೇನಾ ಕರ್ನಲ್ ಒಬ್ಬರನ್ನು ಥಳಿಸಿ ಹಣ ಮತ್ತು ಮೊಬೈಲ್ ದೋಚಿದ್ದಾರೆ. ದಕ್ಷಿಣ ದೆಹಲಿಯ ಮಾಳವೀಯ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸೆಮಿನಾರ್‌ ನಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ಯೋಧನ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಾಣಕ್ಯಪುರಿ ಮೂಲದ ಸೇನಾ ಕರ್ನಲ್ ವಿನಿತ್ ಮೆಹ್ತಾ (49) ಹಲ್ಲೆಗೊಳಗಾದವರು. ಕರ್ನಲ್ ಮತ್ತು ಅವರ ಸ್ನೇಹಿತ ತಾಜ್ ಹೋಟೆಲ್‌ನಲ್ಲಿ ಸೆಮಿನಾರ್‌ನಿಂದ ಹಿಂತಿರುಗುತ್ತಿದ್ದರು. ರಾತ್ರಿ 11.30ರ ಸುಮಾರಿಗೆ ಮಾಳವೀಯ ನಗರದ ತ್ರಿವೇಣಿ ಕಾಂಪ್ಲೆಕ್ಸ್‌ ನಲ್ಲಿ ತನ್ನ ಸ್ನೇಹಿತನನ್ನು ಡ್ರಾಪ್ ಮಾಡಿದ ನಂತರ ಮೆಹ್ತಾ ಸಮೀಪದ ಪೆಟ್ರೋಲ್ ಪಂಪ್‌ ಗೆ ಹೋಗಿದ್ದಾನೆ. ಅಷ್ಟರಲ್ಲಿ ಒಬ್ಬ ವ್ಯಕ್ತಿ ಲೈಟರ್ ಬೇಕೆಂದು ಕರ್ನಲ್ ಬಳಿ ಬಂದ. ಲೈಟರ್ ಇಲ್ಲ ಎಂದು ಹೇಳಿದ ಬಳಿಕ ಹಲ್ಲೆಗೆ ಮುಂದಾದರು. ಕಣ್ಣಿಗೆ ಪೌಡರ್ ಎರಚಿದ ಬಳಿಕ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ. ನಂತರ ಇನ್ನಿಬ್ಬರು ಧಾವಿಸಿ ಬಂದು ಕರ್ನಲ್ ನನ್ನು ಕಾರಿನಿಂದ ಹೊರಗೆಳೆದು ಅಮಾನುಷವಾಗಿ ಥಳಿಸಿ ಕಾರಿನಲ್ಲಿದ್ದ…

Read More