Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ತಮಿಳುನಾಡು ಸರ್ಕಾರ ಯುವತಿಯರನ್ನು ದೇವಸ್ಥಾನದ ಅರ್ಚಕರ ಸ್ಥಾನಕ್ಕೆ ಬಡ್ತಿ ನೀಡಿದ್ದು, ಈಗಲೂ ಕೆಲ ದೇವಸ್ಥಾನಕ್ಕೆ ಮಹಿಳೆಯರಿಗೆ ನಿಷೇಧವಿದೆ. ತಮಿಳುನಾಡು ಶ್ರೀ ವೈಷ್ಣವ ದೇವಾಲಯಗಳಲ್ಲಿ ಮೂವರು ಯುವತಿಯರನ್ನು ಸಹ ಅರ್ಚಕರನ್ನಾಗಿ ನೇಮಿಸುವ ಮೂಲಕ ಸಮಾನತೆಯ ಹೊಸ ಇತಿಹಾಸ ಬರೆಯುತ್ತಿದೆ. ಎಸ್ ಕೃಷ್ಣವೇಣಿ, ಎಸ್ ರಮ್ಯಾ ಮತ್ತು ರಂಜಿತಾ ಅವರು ಅರ್ಚಕರ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಮೂವರೂ ತಮ್ಮ ತರಬೇತಿಯನ್ನು ಶ್ರೀರಂಗಂನ ಶ್ರೀ ರಂಗನಾಥರ ದೇವಸ್ಥಾನದಿಂದ ನಡೆಸಲ್ಪಡುವ ಅರ್ಚಕರ್ (ಪುರೋಹಿತರು) ತರಬೇತಿ ಶಾಲೆಯಿಂದ ಪೂರ್ಣಗೊಳಿಸಿದರು. ಒಂದು ವರ್ಷದೊಳಗೆ ಶ್ರೀ ವೈಷ್ಣವ ದೇವಾಲಯಗಳಲ್ಲಿ ಸಹ ಅರ್ಚಕರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಯುವತಿಯರ ಸಾಧನೆಯನ್ನು ಕೊಂಡಾಡಿದರು. ಒಳಗೊಳ್ಳುವಿಕೆ ಮತ್ತು ಸಮಾನತೆಯ ಹೊಸ ಯುಗವು ಉದಯಿಸುತ್ತಿದೆ ಎಂದು ಸ್ಟಾಲಿನ್ ಎಕ್ಸ್-ಹ್ಯಾಂಡಲ್ ನಲ್ಲಿ ಹೇಳಿದರು. ಸೆ.12ರಂದು ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ಧಾರ್ಮಿಕ ಮತ್ತು ದತ್ತಿ ಸಚಿವ ಪಿ.ಕೆ.ಶೇಖರ್ ಬಾಬು ಅವರಿಂದ ತರಬೇತಿ ಪೂರ್ಣಗೊಳಿಸಿದ ಪ್ರಮಾಣಪತ್ರವನ್ನು ಅರ್ಚಕರ್ ಸ್ವೀಕರಿಸಿದರು. ಅವರೊಂದಿಗೆ 91 ಪುರುಷರು 2022-2023 ರಲ್ಲಿ ತಮ್ಮ ತರಬೇತಿಯನ್ನು…
5 ಕೋಟಿ ವಂಚನೆಯ ಸೂತ್ರಧಾರಿ ಅಭಿನವ ಹಾಲಶ್ರೀಗಾಗಿ ಸಿಸಿಬಿ ಶೋಧ ಕಾರ್ಯ ನಡೆಯುತ್ತಿದೆ. ಸಿಸಿಬಿ ಅಧಿಕಾರಿಗಳು ಮೂರು ತಂಡ ರಚಿಸಿ ಶೋಧ ಮಾಡುತ್ತಿದ್ದಾರೆ. ಬಂಧಿತ ಆರೋಪಿಗಳು ಕೊಟ್ಟ ಸುಳಿವಿನ ಆಧಾರದ ಮೇಲೆ ತಪಾಸಣೆ ನಡೆಸಲಾಗುತ್ತದೆ. ಬೆಂಗಳೂರು, ಉತ್ತರ ಕರ್ನಾಟಕ ಸೇರಿ ಹಲವು ಕಡೆ ಶೋಧಿಸುತ್ತಿದ್ದು, ಹೊರ ರಾಜ್ಯಕ್ಕೆ ತೆರಳಿರುವ ಬಗ್ಗೆ ಮಾಹಿತಿ ಸಂಗ್ರಹವಾಗಿದೆ. ವಂಚನೆ ಕೇಸ್ ನಲ್ಲಿ ಅಭಿನವ ಹಾಲಶ್ರೀ 3ನೇ ಆರೋಪಿಯಾಗಿದ್ದಾರೆ. ಚೈತ್ರಾ ಕುಂದಾಪುರ ಜತೆ ಸೇರಿ ವಂಚಿಸಿದ್ದ ಆರೋಪ ಕೇಳಿ ಬಂದಿದೆ.
ತುಮಕೂರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಎರಡು ಬಸ್ ಗಳ ನಡುವೆ ಸಿಲುಕಿ ಮಹಿಳೆಯರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದ 60 ವರ್ಷದ ಪುಟ್ಟತಾಯಮ್ಮ ಹಾಗೂ 55 ವರ್ಷದ ಪಂಕಜ ಮೃತ ದುರ್ದೈವಿಗಳು. ಮೃತ ಮಹಿಳೆಯರು ತಮ್ಮ ನೆರೆಹೊರೆಯವರೊಂದಿಗೆ ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿ ಲಕ್ಷ್ಮಿ ದೇವಾಲಯಕ್ಕೆ ಹೊರಟ್ಟಿದ್ದರು. ಶುಕ್ರವಾರ ಬೆಳಗ್ಗೆ ನಗರದ ಬಸ್ ನಿಲ್ದಾಣದಲ್ಲಿ ಕೊರಟಗೆರೆಯ ಬಸ್ ಹತ್ತಲು ಮುಂದಾದಾಗ ಗೌರಿ ಬಿದನೂರು ಮತ್ತು ಕೊರಟಗೆರೆಯ ಬಸ್ ಗಳ ನಡುವೆ ಸಿಲುಕಿಕೊಂಡು ಉಸಿರುಗಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಚಿತ ಬಸ್ ಪ್ರಯಾಣ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಲವು ಮಹಿಳೆಯರು ಧಾರ್ಮಿಕ ಕ್ಷೇತ್ರಗಳ ದರ್ಶನಕ್ಕೆಂದು ಬಂದಿದ್ದರು. ಅದರಂತೆ ಇಂದು ಗೊರವನಹಳ್ಳಿಗೆ ಹೊರಟಿದ್ದರು. ಆದರೆ ದುರಾದೃಷ್ಟವಶಾತ್ ಬಸ್ ಹತ್ತುವ ಪೈಪೋಟಿಯಲ್ಲಿ ಎರಡು ಬಸ್ ಗಳ ನಡುವೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.
ಹೆಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಡಾ.ಅಂಬೇಡ್ಕರ್ ಮತ್ತು ಸಂವಿಧಾನ ಪೀಠಿಕೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಎಲ್ಲಾಗಣ್ಯರು ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರಾಗಿ ಆಗಮಿಸಿದ ಕೃಷ್ಣಮೂರ್ತಿ ಚಾಮರಂ ಮಾತನಾಡಿ, ಪ್ರತಿಯೊಬ್ಬರು ಸಂವಿಧಾನದ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಸಮಾನತೆಯನ್ನ ಕಾಣಲು ಸಾಧ್ಯ. ಹಗಲು ರಾತ್ರಿ ಎನ್ನದೇ ಪರಿಶ್ರಮಪಟ್ಟು ಬಹಳ ಉತ್ತಮವಾದ ಸಂವಿಧಾನವನ್ನು ಅಂಬೇಡ್ಕರ್ ನಮಗೆ ನೀಡಿದ್ದಾರೆ. ಇದರ ಪೀಠಿಕೆಯನ್ನ ಬರೆಯಬೇಕಾದರೆ ಬಹಳ ಜ್ಞಾನರ್ಜನೆಯಿಂದ ರಚಿಸಿದ್ದಾರೆ ಎಂದರು. ನಾವು ಭಾರತವನ್ನ ಅಖಂಡ ರಾಷ್ಟವಾಗಿ ಕಟ್ಟಲು ನಾವು ಧರ್ಮನಿರಾಪೇಕ್ಷೆಯಿಂದ ಜೀವಿಸಬೇಕು. ಯುವ ಜನರನ್ನ ಜಾತಿ ಧರ್ಮವನ್ನು ಪ್ರೀತಿಸಲು ತಿಳಿಹೇಳದ ರಕ್ತ ರಹಿತ ದೇಶವನ್ನು ಕಟ್ಟಲು ತಿಳಿಹೇಳಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಿದ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ನಾನು ಸಹ ಈ ತಾಲ್ಲೂಕಿನಲ್ಲಿ ಒಬ್ಬ ಶಾಸಕನಾಗಲೂ ಕಾರಣ ಅಂಬೇಡ್ಕರ್ ನೀಡಿದ ಸಂವಿಧಾನ. ನಾವೆಲ್ಲಾ ಏಕತೆಯಿಂದ…
ಹೆಚ್.ಡಿ.ಕೋಟೆ: ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಹಬ್ಬ ಪ್ರಾರಂಭವಾಗಲಿದೆ ಎಲ್ಲಾರು ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಮುಂದಾಗಬೇಕು ಎಂದು ವೃತ್ತ ನಿರೀಕ್ಷಕ ಶಬ್ಬೀರ್ ಹುಸೇನ್ ಹೇಳಿದರು. ಹೆಚ್.ಡಿ.ಕೋಟೆ ಪಟ್ಟಣದ ಪೋಲಿಸ್ ಠಾಣೆಯಲ್ಲಿ ಎಲ್ಲಾ ಸಮಾಜದ ಮುಖಂಡರನ್ನು ಹಾಗೂ ನಾಗರಿಕರನ್ನು ಕರೆಯಿಸಿ ಶಾಂತಿ ಸೌಹಾರ್ದತೆಯಿಂದ ಗೌರಿಗಣೇಶ ಹಬ್ಬವನ್ನು ಆಚರಿಸುವಂತೆ ಅವರು ಮನವಿ ಮಾಡಿಕೊಂಡರು. ಹೆಚ್ ಡಿ ಕೋಟೆಯಲ್ಲಿ ಸರ್ವಜನಾಂಗವು ಜೀವನ ನಡೆಸುತ್ತಿದ್ದಾರೆ ಯಾವುದೇ ಧರ್ಮದ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗದಂತೆ ಹಬ್ಬವನ್ನು ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶನನ್ನು ಕೂರಿಸುವವರು ನಿಮ್ಮ ನಿಮ್ಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಪೂರ್ವನುಮತಿಯನ್ನು ಪಡೆದು ಕೊಳ್ಳಬೇಕು ಹಾಗೂ ಯಾವುದೇ ಕಾರಣಕ್ಕೂ ಡಿ.ಜೆ. ಸೌಂಡ್ಸ್ ಅಳವಡಿಸಬಾರದೆಂದು ಕಿವಿಮಾತು ಹೇಳಿದರು. ಗಣಪತಿಯನ್ನು ವಿಸರ್ಜನೆಯನ್ನು ಸಂಜೆ ಆರು ಘಂಟೆಯೊಳಗೆ ನೆರವೇರಿಸಿದರೆ ಉತ್ತಮ ಎಂದು ತಿಳಿಸಿದರಲ್ಲದೇ, ಅಹಿತಕರ ಘಟನೆಗಳು ಸಂಭವಿಸಿದರೆ, ಅಂತವರ ವಿರುದ್ದ ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಎಚ್ಚರಿಕೆ ನೀಡಿದರು. ವರದಿ: ಮಲಾರ ಮಹದೇವಸ್ವಾಮಿ
ಶುಕ್ರವಾರದಿಂದ ಎರಡು ದಿನಗಳ ಕಾಲ ಕಾಲೇಜಿನಲ್ಲಿ ನಡೆಯಲಿರುವ ಕಲ್ಪ ಜ್ಞಾನ ದರ್ಪಣ ಕೆ.ಸಿ. ಎಸ್ ಎಜುಕೇಶನ್ ಫೇರ್ ಕಾರ್ಯಕ್ರಮದಲ್ಲಿ ಮೈಸೂರು ಆನೆ, ಅಂಬಾರಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಖ್ಯಾತ ವೈದ್ಯರಾದ ಡಾ. ಜಿ ಎಸ್ ಶ್ರೀಧರ್ ಅವರು, ಈ ವಸ್ತು ಪ್ರದರ್ಶನದ ಅಂಗವಾಗಿ ವಿಶ್ವ ವಿಖ್ಯಾತ ಮೈಸೂರು ದಸರಾ ಅಂಬಾರಿಯ ಪ್ರತಿಕೃತಿ ಮಾಡಿಸಿ ಇಲ್ಲಿ ಪ್ರದರ್ಶಿಸುತ್ತಿದ್ದಾರೆ. ಮೈಸೂರಿನ ಕುಕ್ಕರಹಳ್ಳಿಯ ಕಲಾವಿದ ಮಂಜು ಈ ಆನೆ, ಅಂಬಾರಿ ಪ್ರತಿಕೃತಿ ರಚಿಸಿದ್ದು, ಸುಮಾರು ಎಂಟು ಅಡಿ ಉದ್ದ, ಆರು ಅಡಿ ಅಗಲ ಮತ್ತು ಹತ್ತು ಅಡಿ ಎತ್ತರದ ಈ ಪ್ರತಿಕೃತಿ ಅತ್ಯಂತ ಆಕೃರ್ಷಕವಾಗಿದ್ದು ನೋಡುಗರ ಗಮನ ಸೆಳೆಯುತ್ತದೆ. ಸುಮಾರು ಹತ್ತು ಜನ ಕಲಾವಿದರು 11 ದಿನಗಳ ಕಾಲ ನಿರ್ಮಿಸಿರುವ ಆನೆ, ಅಂಬಾರಿಯ ಪ್ರತಿಕೃತಿ ಸಾರ್ವಜನಿಕ ಪ್ರದರ್ಶನಕ್ಕೂ ಇರಲಿದೆ. ವರದಿ: ಆನಂದ್ ತಿಪಟೂರು
ತುಮಕೂರು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಪೀಠಿಕೆ ಓದುವ ಬೃಹತ್ ಸಾಮೂಹಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಕೆ.ಶ್ರೀನಿವಾಸ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾವಿರಾರು ಶಾಲಾ ಮಕ್ಕಳು ಇದರಲ್ಲಿ ಭಾಗವಹಿಸಿದ್ದರು. ಈ ವೇಳೆ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಮೂಲಕ ಕಾರ್ಯಕ್ರಮವನ್ನು ಮುಂದುವರಿಸಿದರು.
ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಹಿಂದೂ ಸಂಘಟನೆಗೂ ಇದಕ್ಕೂ ತಳಕು ಹಾಕುವುದು ಸರಿಯಲ್ಲ. ಹಿಂದೂ ಪರ ಭಾಷಣ ಮಾಡಿರುವುದನ್ನು ನಾನೂ ನೋಡಿದ್ದೇನೆ. ಆದರೆ ಈ ವಿಚಾರವನ್ನು ಸಂಘಟನೆಗೆ ಸೇರಿಸುವುದು ಸರಿಯಲ್ಲ. ಇದೊಂದು ಪ್ರತ್ಯೇಕ ಪ್ರಕರಣ ಅಂತಲೇ ಪರಿಗಣಿಸಬೇಕಾಗುತ್ತದೆ ಎಂದರು.
ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ಒಟ್ಟು 13,000 ಸಿಬ್ಬಂದಿ ನೇಮಕ ಮಾಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬಿಜೆಪಿ ಶಾಸಕ S.T.ಸೋಮಶೇಖರ್ ನೇತೃತ್ವದಲ್ಲಿ ಯಶವಂತಪುರ ಕ್ಷೇತ್ರದ ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಜನರ ಸಮಸ್ಯೆ ಆಲಿಸಿದ್ದಾರೆ. ನಗರದಲ್ಲಿ ಬಸ್ ಸಮಸ್ಯೆ, ಟಿಟಿಎಂಸಿಯಲ್ಲಿ ಇರಬೇಕಾದ ಸೌಲಭ್ಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಖಾಸಗಿ ಬಸ್ ಗಳಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿರುವ ವಿಚಾರವಾಗಿ ಮಾತನಾಡಿ, ಹೆಚ್ಚಿನ ದರ ತೆಗೆದುಕೊಳ್ಳುತ್ತಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದೇವೆ. ಗೌರಿ ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್ಗಳನ್ನು ಬಿಡಲು ನಿರ್ಧರಿಸಿದ್ದೇವೆ. ಶಾಸಕ ಎಸ್.ಟಿ.ಸೋಮಶೇಖರ್ ಜತೆ ರಾಜಕೀಯ ಚರ್ಚೆ ಮಾಡಿಲ್ಲ. ಸೋಮಶೇಖರ್ ಮರುಸೇರ್ಪಡೆ ಆಗುತ್ತೇನೆ ಅಂದರೆ ಯೋಚಿಸೋಣ ಎಂದು ಹೇಳಿದ್ದಾರೆ.
ಅಕ್ಟೋಬರ್ 1 ರಿಂದ ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾನೂನು ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ಗೃಹ ಇಲಾಖೆಯಿಂದ ಹೊರಡಿಸಿದ ಪ್ರಕಟಣೆಯಲ್ಲಿ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತ ಮೃತ್ಯುಂಜಯ್ ಕುಮಾರ್ ನಾರಾಯಣ್ ಈ ಮಾಹಿತಿ ನೀಡಿದ್ದಾರೆ. ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾನೂನು ಶಿಕ್ಷಣ ಸಂಸ್ಥೆಗೆ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ನೀಡಿಕೆ, ಮತದಾರರ ಪಟ್ಟಿ ಉದ್ದೇಶಕ್ಕೆ ಜನನ ಪ್ರಮಾಣಪತ್ರ ಒಂದೇ ದಾಖಲೆಯಾಗಿ ಬಳಸಲು ಈ ಕಾನೂನು ಅನುಮತಿಸುತ್ತದೆ.