Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ತುರುವೇಕೆರೆ: ತಾಲೂಕಿನ ಎಲ್ಲಾ ಜನಾಂಗಗಳ ಮುಖಂಡರುಗಳು ಪ್ರವಾಸಿ ಮಂದಿರದಲ್ಲಿ ಸಭೆ ಸೇರಿ ತಾಲೂಕು ಕೇಂದ್ರದಲ್ಲಿ ಸಂವಿಧಾನ ಶಿಲ್ಪಿಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಒಮ್ಮತದ ತೀರ್ಮಾನ ಕೈಗೊಂಡರು. ರಾಜ್ಯದ ವಿವಿಧ ತಾಲೂಕು ಕೇಂದ್ರಗಳಲ್ಲಿ ಇರುವಂತೆ ತುರುವೇಕೆರೆ ತಾಲೂಕು ಕೇಂದ್ರ ಭಾಗದಲ್ಲೂ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರತಿಮೆಯನ್ನು ಸ್ಥಾಪನೆಗೆ ಹಾಗೂ ಅದಕ್ಕೆ ಸೂಕ್ತ ಸ್ಥಳ ಗುರುತಿಸಲು ಸಭೆ ಕರೆಯಲಾಗಿತ್ತು. ಭೀಮೋತ್ಸವ ಆಚರಣಾ ಸಮಿತಿಯ ನೆಮ್ಮದಿ ಗ್ರಾಮದ ಸಿ.ಎಸ್.ಮೂರ್ತಿರವರ ಸಮ್ಮಖದಲ್ಲಿ ನಡೆದ ಸಭೆಯಲ್ಲಿ ಹಲವಾರು ಸಮಾಜದ ಮುಖಂಡರು, ಹೋರಾಟಗಾರರು, ಕನ್ನಡಪರ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರುಗಳು ಭಾಗವಹಿಸಿ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪುತ್ಥಳಿ ಸ್ಥಾಪನೆಗೆ ಸಮಿತಿ ರಚನೆ: ಬಾಬಾ ಸಾಹೇಬರು ಕೇವಲ ಒಂದು ಜಾತಿಗೆ ಸೀಮಿತವಾಗಿದ್ದವರಲ್ಲ. ಅವರು ರಚಿಸಿದ ಸಂವಿಧಾನದ ಅಡಿಯಲ್ಲಿ ನಾವು ಜೀವಿಸುವ ಹಕ್ಕನ್ನು ಪಡೆದಿದ್ದೇವೆ. ಅವರ ಪುತ್ಥಳಿ ಸ್ಥಾಪನೆಯಂತಹ ಮಹತ್ಕಾರ್ಯಕ್ಕೆ ಎಲ್ಲರೂ ಸಹಕಾರ ನೀಡಲು ಮತ್ತು ಇಂತಹ ಕಾರ್ಯಕ್ಕೆ ರಾಜಕೀಯ ಮುಖಂಡರುಗಳ ಸಹಕಾರ ಪಡೆದುಕೊಳ್ಳಲು ಪಕ್ಷ ಭೇದ ಮರೆತು…
ತುಮಕೂರು: ಅತಿ ವೇಗವಾಗಿ ಬಂದಿರುವ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಬೈಪಾಸ್ ರಸ್ತೆಯ ಸರ್ವೀಸ್ ರಸ್ತೆಗೆ ನುಗ್ಗಿ ರಸ್ತೆ ಬದಿಯಲ್ಲಿದ್ದ3 ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ನಗರದ ಗಂಗಸಂದ್ರ ಸಿಗ್ನಲ್ ನಲ್ಲಿ ನಡೆದಿದೆ. ಗುಬ್ಬಿ ಗೇಟ್ ಕಡೆಯಿಂದ ಬೈಪಾಸ್ ರಸ್ತೆಯಲ್ಲಿ ಅತಿ ವೇಗವಾಗಿ ಬಂದಿರುವ ಪೋರ್ಸ್ ಒನ್ ಕಾರು ನಿಂತಿದ್ದ ಮತ್ತೊಂದು ಕಾರಿಗೆ ಅಪ್ಪಳಿಸಿದೆ. ನಂತರ ವೇಗವಾಗಿಯೇ ಸರ್ವೀಸ್ ರಸ್ತೆಗೆ ನುಗ್ಗಿ ರಸ್ತೆಬದಿಯಲ್ಲಿದ್ದ ಮೂರು ವಿದ್ಯುತ್ ಕಂಬಗಳಿಗೂ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಮುದ್ದಿವೆ. ಅದೃಷ್ಟವಶಾತ್ ಆ ಸಂದರ್ಭದಲ್ಲಿ ರಸ್ತೆಯಲ್ಲಿ ಯಾರೂ ಓಡಾಡದಿದ್ದರಿಂದ ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ. ವಿದ್ಯುತ್ ಕಂಬಗಳಿಗೆ ಗುದ್ದಿದ ಕಾರಿನಲ್ಲಿ4 ಮಂದಿ ಪ್ರಯಾಣಿಸುತ್ತಿದ್ದು, ಈ ಪೈಕಿ ಚಾಲಕ ಮತ್ತಿಬ್ಬರಿಗೆ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ. ಹಾಗೆಯೇ ಈ ಕಾರು ಅಪ್ಪಳಿಸಿದ ಮತ್ತೊಂದು ಕಾರಿನಲ್ಲಿದ್ದವರು ಸಹ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆ ಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ವೇಳೆ ಗುಬ್ಬಿಗೇಟ್ ಕಡೆಯಿಂದ ಕಾರು ವೇಗವಾಗಿ…
ಸರಗೂರು: ಸರಕಾರಿ ಭೂಮಿಗೆ ವಾರಸುದಾರರಾಗಿರುವ ಬಡ ರೈತರಿಗೆ ಸರಕಾರ ಹಕ್ಕು ನೀಡುವ ಮೂಲಕ ಅವರನ್ನು ಬದುಕಲು ಬಿಡಬೇಕು ಎಂದು ಕರ್ನಾಟಕ ಭೂ ಹಕ್ಕುದಾರರ ವೇದಿಕೆ ಕ್ಷೇತ್ರ ಮಟ್ಟದ ಉಪಾಧ್ಯಕ್ಷ ಬಸವರಾಜಪ್ಪ ಹೇಳಿದರು. ತಾಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ಮನುಗನಹಳ್ಳಿ ಗ್ರಾಮದ ಬಸವರಾಜಪ್ಪ ಎಂಬುವರ ಜಮೀನಿನಲ್ಲಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ವತಿಯಿಂದ ಶನಿವಾರ ದಂದು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು. ಸುಮಾರು ಏಳು ವರ್ಷಗಳ ಹಿಂದೆಯೇ ಬಗರ್ ಹುಕುಂ ಸಮಿತಿ ರಚಿಸಲಾಗಿತ್ತು. ಇದರಲ್ಲಿ ಮನುಗನಹಳ್ಳಿ ಲಂಕೆ ಹುನಗಹಳ್ಳಿ ಭಾಗದ 103 ಫಲಾನುಭವಿಗಳ ಪೈಕಿ 50 ಫಲಾನುಭವಿಗಳಿಗೆ ಸಾಗುವಳಿ ಚೀಟಿ ಮಂಜೂರು ಮಾಡಲಾಗಿದೆ. ಆದರೂ ಏಳು ವರ್ಷಗಳಿಂದ ಇನ್ನೊಂದು ಕಮಿಟಿ ರಚಿಸಿ, ಪಹಣಿ ಕೊಡಿಸುವ ಕೆಲಸ ಮಾಡದೆ ಮೀನಮೇಷ ಎಣಿಸಲಾಗುತ್ತಿದೆ ಎಂದು ದೂರಿದರು. ಅರ್ಹರಿಗೆ ಅನ್ಯಾಯವಾಗದಿರಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇಂತಹ ರೈತರ ಬಗ್ಗೆ ಗಮನಹರಿಸದೆ ತಮ್ಮ ಪಾಡಿಗೆ ಇದ್ದಾರೆ. ಈಗ ಉಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಡಿ–ಫಾರೆಸ್ಟ್ ಎಂಬ ಪಟ್ಟ ಕಟ್ಟಿ ರೈತರಿಗೆ…
ಸರಗೂರು: ಬಡ ಕುಟುಂಬಗಳ ಶಿಕ್ಷಣ, ಆರ್ಥಿಕಾಭಿವೃದ್ಧಿಗೆ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಹಿಸುತ್ತಿದೆ ಎಂದು ತಾಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿಗಳಾದ ಭಾಸ್ಕರ್ ವಿ. ತಿಳಿಸಿದರು. ತಾಲೂಕಿನ ಸಾಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಗರೆ ಹೊಸ ಕಾಲೋನಿಯಲ್ಲಿರುವ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಹಂಚಿಪುರ ಶಾಲೆಯ ವತಿಯಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾತನಾಡಿದರು. ಜ್ಞಾನ ಸಾಕ್ಷ ರತಾ, ಜ್ಞಾನ ದೀಪ ಇಂತಹ ಯೋಜನೆಗಳ ಮೂಲಕ ಶಿಕ್ಷ ಣಕ್ಕೆ ಒತ್ತು ನೀಡಲಾಗಿದೆ. ಸ್ವಸಹಾಯ ಸಂಘದ ಸದಸ್ಯರಿದ್ದು ಅವರಲ್ಲಿ ಬಹಳಷ್ಟು ಮಂದಿಯ ಮಕ್ಕಳು ವೃತ್ತಿ ಶಿಕ್ಷ ಣ ಪಡೆಯುವುದಕ್ಕೆ ನೆರವು ಪಡೆಯುತ್ತಿದ್ದಾರೆ. ಇದರಿಂದ ಬಡ ಮಕ್ಕಳು ಸಹ ಉನ್ನತ ಶಿಕ್ಷ ಣ ಪಡೆದು ಒಳ್ಳೆಯ ಉದ್ಯೋಗ, ಸ್ಥಾನಮಾನ ಪಡೆಯುವುದಕ್ಕೆ ಸಾಧ್ಯವಾಗಲಿ ಎಂಬುದು ಯೋಜನೆಯ ಆಶಯವಾಗಿದೆ ಎಂದರು. ಗ್ರಾಮಾಭಿವೃದ್ಧಿ ಯೋಜನೆ 12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಕೃಷಿ, ಮೂಲಸೌಲಭ್ಯ ಅಭಿವೃದ್ಧಿ ದೃಷ್ಟಿಯಲ್ಲಿ ಇಟ್ಟುಕೊಂಡು ಸ್ವ ಸಹಾಯ ಸಂಘಗಳು…
ಸರಗೂರು: ತಾಲೂಕಿನ ಲಿಂಗನೇಹಳ್ಳಿ ಗ್ರಾಮದ ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು ಜೋಳ, ರಾಗಿ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಬೆಳೆಯನ್ನು ನಾಶ ಮಾಡಿವೆ. ರೈತ ಕಾರಯ್ಯ ಎಂಬುವರಿಗೆ ಸೇರಿದ ಮೂರು ಎಕರೆ ರಾಗಿ ಜೋಳ ತೋಟಕ್ಕೆ ಬುಧವಾರದಂದು ರಾತ್ರಿ ನುಗ್ಗಿದ ಗಜಪಡೆ, ರಾಗಿ ಮತ್ತು ಜೋಳ ಬೆಳೆಯನ್ನು ಹಾಳು ಮಾಡಿವೆ. ವರ್ಷ ಪೂರ್ತಿ ಹಗಲು ರಾತ್ರಿ ದುಡಿದು ಬೆಳೆದ ಬೆಳೆ ರೈತನ ಕೈಗೆ ಬಂದ ತುತ್ತು ಕೈಗೆ ಬಾರದಂತಾಗಿದೆ. ಅರಣ್ಯದಂಚಿನ ಗ್ರಾಮದ ರೈತರ ಕೃಷಿ ಭೂಮಿಯಲ್ಲಿ ಬೆಳೆದ ಬೆಳೆಗಳ ಮೇಲೆ ದಾಳಿಯಿಟ್ಟು ಬೆಳೆಗಳನ್ನು ನಾಶ ಮಾಡುತ್ತಲೆ ಇವೆ . ಇದರಿಂದ ಈ ಪ್ರದೇಶದಲ್ಲಿನ ರೈತರು ಆರ್ಥಿಕ ನಷ್ಟದ ಜತೆಗೆ ನಿತ್ಯ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಜೀವಿಸಬೇಕಾಸ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರ ಬೆಳೆಗಳ ಮೇಲೆ ಆನೆಗಳು ದಾಳಿ ನಡೆಸುತ್ತಲೇ ಇವೆ. ತಡರಾತ್ರಿ ಗಜಪಡೆಗಳು ಗ್ರಾಮದ ಕಾರಯ್ಯ ಎಂಬುವರ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ರಾಗಿ ಜೋಳ ಬೆಳೆಯನ್ನು ನಾಶಪಡಿಸಿದ್ದು, ಅಲ್ಲದೇ ಉಳಿದ ರೈತರ…
ಕೊರಟಗೆರೆ : ಭಾರತರತ್ನ, ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಬಿಜೆಪಿ ವತಿಯಿಂದ ಭಾವಪೂರ್ಣವಾಗಿ ಆಚರಿಸಲಾಯಿತು. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ಪಟ್ಟಣದ ಬಿಜೆಪಿ ಪಂಚಜನ್ಯ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಕೇಂದ್ರ ಸಚಿವ ಸೋಮಣ್ಣ, “ಅಟಲ್ ಬಿಹಾರಿ ವಾಜಪೇಯಿ ಅವರು ದೇಶ ಕಂಡ ಅಪರೂಪದ ನಾಯಕ. ರಾಜಕೀಯದಲ್ಲಿ ಶುದ್ಧತೆ, ಮಾತಿನಲ್ಲಿ ಸಂಯಮ ಹಾಗೂ ಆಡಳಿತದಲ್ಲಿ ದೃಢತೆ ಅವರ ವ್ಯಕ್ತಿತ್ವದ ಪ್ರಮುಖ ಲಕ್ಷಣಗಳಾಗಿದ್ದವು. ವಿರೋಧಿಗಳಿಂದಲೂ ಗೌರವ ಪಡೆದ ಮಹಾನ್ ರಾಜಕಾರಣಿ ಎಂದು ಸ್ಮರಿಸಿದರು. ಸ್ವರ್ಣ ಚತುಷ್ಪಥ ಯೋಜನೆ, ಗ್ರಾಮೀಣ ರಸ್ತೆ ಅಭಿವೃದ್ಧಿ, ಅಣುಶಕ್ತಿ ಪರೀಕ್ಷೆ ಮೂಲಕ ಭಾರತದ ಶಕ್ತಿ ಪ್ರದರ್ಶನ ಸೇರಿದಂತೆ ಅನೇಕ ಐತಿಹಾಸಿಕ ನಿರ್ಣಯಗಳನ್ನು ವಾಜಪೇಯಿ ಅವರು ಕೈಗೊಂಡರು,ಇಂದಿನ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳಿಗೆ ಅಟಲ್ಜಿ ಅವರ ದೂರದೃಷ್ಟಿಯೇ ಮೂಲ ಪ್ರೇರಣೆ ಎಂದು ಹೇಳಿದರು. ರಾಜಕೀಯದಲ್ಲಿ ಸೌಜನ್ಯ ಮತ್ತು…
ತುಮಕೂರು: ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ತುಮಕೂರು ತಾಲೂಕಿನ ಡಿ ಕೊರಟಗೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಚ್ಚುತ್ತಿರುವುದನ್ನು ವಿರೋಧಿಸಿ, ಶಾಲೆ ಉಳಿಸಲು ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ ಓ ಜಿಲ್ಲಾ ಜಿಲ್ಲಾ ಕಾರ್ಯದರ್ಶಿಗಳಾದ ಲಕ್ಕಪ್ಪ ಮಾತನಾಡಿ, ಬರಿ ಗ್ರಾಮ ಪಂಚಾಯಿತಿಗೊಂದು ಕೆಪಿಎಸ್ ಮ್ಯಾಗ್ನೆಟ್ ಶಾಲೆ ಮಾಡಿ ಶಾಲೆಯನ್ನು ಮುಚ್ಚುತ್ತಿರುವ ಸರ್ಕಾರವು ಗ್ರಾಮದ ಬಡ ರೈತ–ಕಾರ್ಮಿಕರ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಮುಂದುವರೆದು ಮಾತನಾಡುತ್ತಾ, ಬಸವೇಗೌಡನಪಾಳ್ಯ, ಬಿದರಕಟ್ಟೆ, ಕಳ್ಳಿಪಾಳ್ಯ, ಬೊಮ್ಮನಹಳ್ಳಿ,, ಚಿಕ್ಕ ಕೊರಟಗೆರೆ ಮತ್ತು ಡಿ ಕೊರಟಗೆರೆ ಗ್ರಾಮಗಳ ಸರ್ಕಾರಿ ಶಾಲೆಗಳನ್ನು ಮುಚ್ಚಿ ಮಸ್ಕಲ್ ಗ್ರಾಮ ಪಂಚಾಯತಿಯ ಮ್ಯಾಗ್ನೆಟ್ ಶಾಲೆಗೆ ಸೇರಿಸಿ ಮಕ್ಕಳನ್ನು ದೂರದ ಶಾಲೆಗೆ ಕಳುಹಿಸಲಾಗುತ್ತದೆ. ಉಚಿತ ಬಸ್ ಸೌಲಭ್ಯ ಹೊರೆಯನ್ನು ಎಸ್ ಡಿಎಂಸಿ ಗೆ ವಹಿಸಿ, ಮ್ಯಾಗ್ನೆಟ್ ಶಾಲೆಯ ನಿರ್ವಹಣೆ ಹೊರಗುತ್ತಿಗೆ ನೀಡಲಾಗುತ್ತಿದೆ. ಇದು ಕ್ರಮೇಣವಾಗಿ ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸಿ, ಬಡ ಮಕ್ಕಳನ್ನು ಶಾಶ್ವತವಾಗಿ ದೂರ ತಳ್ಳುವ…
ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ವಿಭಿನ್ನ ಪ್ರಯತ್ನದ “ಕರಿಕಾಡ” ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಈ ಚಿತ್ರವು ಕನ್ನಡದಲ್ಲಿ ತಯಾರಾಗಿಯಾಗಿರುವ ಪಂಚಭಾಷೆ ಯಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಇದೊಂದು ಮ್ಯೂಸಿಕಲ್ ಜರ್ನಿ & ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ. ಮೂರು ತಿಂಗಳ ಹಿಂದೆ ಟೈಟಲ್ ಟೀಸರ್ ರಿಲೀಸ್ ಮಾಡಿ ಸದ್ದು ಮಾಡಿದ್ದ ಕರಿಕಾಡ ಚಿತ್ರತಂಡ ಇದೀಗ ಅಧಿಕೃತ ಟೀಸರ್ ರಿಲೀಸ್ ಮಾಡಿ. ಗಮನ ಸೆಳೆದಿದೆ. ಟೀಸರ್ ಭರವಸೆ ಹುಟ್ಟಿಸ್ತಿದೆ. ಸಾಹಸಮಯ ದೃಶ್ಯಕಾವ್ಯವಾಗಿ, ಪ್ರೇಮಕಥೆಯ ರೂಪಕವಾಗಿ, ನಮ್ಮ ಮಣ್ಣಿನ ಸೊಗಡನ್ನ ಸೂಸುವಂತಹ ಕಥಾಹಂದರ ಹೊಂದಿರುವಂತೆ ಕಾಣ್ತಿದೆ. ರಿವೇಂಜ್ ಸ್ಟೋರಿಯಂತೆ ಭಾಸವಾಗ್ತಿರೋ ಈ ಸಿಮಾದ ತಾರಾಗಣ ಮತ್ತು ತಾಂತ್ರಿಕತೆ ಗಮನ ಸೆಳೆಯುತ್ತಿದೆ. ಕಾಡನಟರಾಜ್ ನಾಯಕ ನಟನಾಗಿ ಅಭಿನಯಿಸಿರೋ ಈ ಸಿನಿಮಾದಲ್ಲಿ ಬಲರಾಜವಾಡಿ , ಯಶ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ತುಳು ಚಿತ್ರರಂಗದ ಚೆಲುವೆ ನಿರೀಕ್ಷಾ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಈ ಚಿತ್ರದಲ್ಲಿ ಮಂಜು ಸ್ವಾಮಿ , ಗೋವಿಂದ ಗೌಡ , ದೀವಾಕರ್ , ಕಾಮಿಡಿ…
ತುಮಕೂರು: ನಗರದ ಅನನ್ಯ ಪಿಯು ಕಾಲೇಜಿನಲ್ಲಿ ಸ್ವರ ಸಿಂಚನ ಸುಗಮ ಸಂಗೀತ ಮತ್ತು ಜಾನಪದ ಅಕಾಡೆಮಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕುವೆಂಪು ದಿನಾಚರಣೆ ಅಂಗವಾಗಿ ‘ವಿದ್ಯಾರ್ಥಿಗಳೆಡೆ ಕುವೆಂಪು ಭಾವಗೀತೆಗಳ ನಡೆ’ ಎಂಬ 3 ದಿನಗಳ ಭಾವಗೀತೆಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಹಾಗೂ ಸ್ವರ ಸಿಂಚನ ಸುಗಮ ಸಂಗೀತ ಮತ್ತು ಜಾನಪದ ಅಕಾಡೆಮಿ ಅಧ್ಯಕ್ಷ ಮಲ್ಲಿಕಾರ್ಜುನ ಕೆಂಕೆರೆ, ರಾಷ್ಟ್ರಕವಿ ಕುವೆಂಪುರವರ ಭಾವಗೀತೆಗಳಲ್ಲಿ ಪ್ರಕೃತಿ ಪ್ರೀತಿ, ಮಾನವತಾವಾದ, ಭಾವಗೀತೆಗಳಲ್ಲಿ ಕಾಣುವ ಭಾಷಾ ಸೌಂದರ್ಯ, ರಸವತ್ತಾದ ಪ್ರಕೃತಿ ವರ್ಣನೆ ಮಾನವನ ಜೀವನ ತತ್ವಗಳ ದರ್ಶನವನ್ನು ಕಾಣಬಹುದಾಗಿದೆ ಎಂದರು. ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಕುವೆಂಪು ಅವರ ಮಾತುಗಳು ಅವರ ಪ್ರತಿ ಗೀತೆಗಳಲ್ಲಿ ಕಾಣಬಹುದಾಗಿದೆ. ‘ಓ ನನ್ನ ಚೇತನ’, ‘ನೂರು ದೇವರನೆಲ್ಲ ನೂಕಾಚೆ ದೂರ’, ‘ಆನಂದಮಯ ಈ ಜಗ ಹೃದಯ’, ‘ಬಾರಿಸು ಕನ್ನಡ ಡಿಂಡಿಮವ’, ‘ಕನ್ನಡ ಎನೆ ಕುಣಿದಾಡುವುದೆನ್ನೆದೆ’, ‘ಭಾಗ್ಯ…
ಕುಣಿಗಲ್: ಇಂದಿನ ರಾಜಕಾರಣವು ತಮ್ಮ ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಧರ್ಮ, ಧರ್ಮಗಳ ನಡುವೆ, ಜಾತಿ, ಜಾತಿಗಳ ನಡುವೆ ಎತ್ತಿಕಟ್ಟುವಂತಹ ನೀಚ ಕೆಲಸ ಮಾಡಲಾಗುತ್ತಿದೆ, ಇದಕ್ಕೆ ಕುಮ್ಮಕ್ಕು ನೀಡಿದರೆ ಡಾ. ಬಿ.ಆರ್. ಅಂಬೇಡ್ಕರ್ ಕೊಟ್ಟ ಸಂವಿಧಾನ ಇನ್ನು ಹತ್ತು ವರ್ಷದಲ್ಲಿ ಇರುವುದಿಲ್ಲ ಎಂದು ಸಾಹಿತಿ ಚಾಣಗೆರೆ ವೆಂಕಟರಾಮಯ್ಯ ಕಳವಳ ವ್ಯಕ್ತಪಡಿಸಿದರು. ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಗ್ರಂಥಾಲಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ.ಬಿ.ಆರ್. ಅಂಬೇಡ್ಕರ್, ಪ್ರಥಮ ಪ್ರಧಾನಿ ನೆಹರು ಅವರು ದೇಶವು ಜಾತ್ಯತೀತ, ಧರ್ಮತೀತ ದೇಶವಾಗಬೇಕೆಂದು ಸಂವಿಧಾನ ಕೊಟ್ಟರು, ಡಾ. ಅಂಬೇಡ್ಕರ್ ಅವರು ಸಂವಿಧಾನ ನೀಡದಿದ್ದರೆ ಈ ದೇಶ ಉಳಿಯುತ್ತಿರಲಿಲ್ಲ, ಶೂದ್ರರು, ದಲಿತರು, ಶ್ರಮಿಕರು ಬದುಕಲು ಸಾಧ್ಯವಿರುತ್ತಿರಲಿಲ್ಲ. ಇಂದು ಮನುವಾದ, ಮನುಸ್ಮೃತಿಯನ್ನು ತಂದು ಆ ಜಾಗಕ್ಕೆ ಕೂರಿಸಲು ಪ್ರಯತ್ನಿಸಲಾಗುತ್ತಿದೆ, ಹಾಗೇನಾದರೂ ಆ ಪವಿತ್ರ ಸ್ಥಳಕ್ಕೆ ಮನುವಾದಿಗಳನ್ನು ಕೂರಿಸಿದ್ದೇ ಆದಲ್ಲಿ ಎರಡು ವರೆ ಸಾವಿರಗಳ ವರ್ಷದ ಹಿಂದಕ್ಕೆ ಹೋಗಲಿದ್ದೇವೆ ಎಂದು ಎಚ್ಚರಿಸಿದರು. ಕನ್ನಡ ಉಳಿದಿರುವುದು ಹಳ್ಳಿಗಳಿಂದ: ಒಂದು ಕಾಲದಲ್ಲಿ ಕುಣಿಗಲ್…