Author: admin

ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ಕೊರಟಗೆರೆ : ತಾಲೂಕಿನ ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪ್ರಸ್ತುತ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಂತೋಷ್ ಸಿಂಗ್ ನ ಕರ್ತವ್ಯ ಲೋಪವನ್ನು ಕಂಡ ತುಮಕೂರು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ ರವರು ಅಮಾನತು ಮಾಡಿ ಅನುಮತಿ ಇಲ್ಳದೆ ಕೇಂದ್ರ ಸ್ಥಾನ ಬಿಡದಂತೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸರ್ಕಾರದಿಂದ ಅನುಷ್ಠಾನಗೊಳಿಸಿರುವ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ 2023-24ನೇ ಸಾಲಿನ ವಾರ್ಷಿಕ ಮಾನವ ದಿನಗಳ ಗುರಿ 10802 ಇದ್ದು ಸೆಪ್ಟೆಂಬರ್ 2023ರ ಮಾಹೆಯಲ್ಲಿ ಅತ್ಯಂತ 5450 ದಿನಗಳ ಗುರಿ ನಿಗದಿಪಡಿಸಿದ್ದು ಪ್ರಸ್ತುತ ದಿನಾಂಕದ ವರದಿಯನ್ನು ಪರಿಶೀಲಿಸಿ ಇದುವರೆಗೂ ಕೇವಲ 3187 ಮಾನವ ದಿನಗಳನ್ನು ಮಾತ್ರ ಸೃಜನ ಮಾಡಿ ಯೋಜನೆಯ ಅನುಷ್ಠಾನದಲ್ಲಿ ನಿರ್ಲಕ್ಷತೆಯನ್ನು ತೋರಿ ಕರ್ತವ್ಯ ಲೋಪವೆಸಗಿದ್ದ ಪಿಡಿಓ ಸಂತೋಷ್ ಸಿಂಗ್. ನರೇಗಾ ಯೋಜನೆಯಡಿ 80 ಕಾಮಗಾರಿಗಳನ್ನು ಜಿಯೋ ಟ್ಯಾಗ್ ಮಾಡದೆ ಬಾಕಿ ಉಳಿಕೆ ಮತ್ತು ನರೇಗಾ ಯೋಜನೆಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪೈಕಿ 2021…

Read More

ತುಮಕೂರು: ಜಮೀನು ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರ ಕೆ ಐ ಎ ಡಿ ಬಿ ವಿಶೇಷ ಭೂಸ್ವಾದಿನಾಧಿಕಾರಿ ತಬಸು ಜಾಹಿರಾ ಹಾಗೂ ಬೆಳ್ಳಾವಿ ಉಪತಸೀಲ್ದಾರ್ ಶಬ್ಬೀರ್ ಗೆ ತಲಾ ನಾಲ್ಕು ವರ್ಷ ಜೈಲು ಶಿಕ್ಷೆ 20000 ದಂಡ ವಿಧಿಸಿ ಇಲ್ಲಿನ 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ರಾಮಲಿಂಗೇಗೌಡ ತೀರ್ಪು ನೀಡಿದ್ದಾರೆ. ಜಿಲ್ಲೆಯ ಕುಣಿಗಲ್ ತಾಲೂಕಿನ ಜಯರಾಮ ಎಂಬುವರು 2017ರಲ್ಲಿ ತಮ್ಮ ತಂದೆ ಹೆಸರಿಗೆ ಪೌತಿ ಖಾತೆ ಮಾಡಿಸುವ ಸಲುವಾಗಿ ಅಂದಿನ ಉಪ ವಿಭಾಗಾಧಿಕಾರಿಯಾಗಿದ್ದ ತಬಸುಮ್ ಜಹೇರಾ ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ಜಹರ ಅವರು ತಮ್ಮ ಕಚೇರಿಯ ಕೇಸ್ ವರ್ಕರ್ ಶಬ್ಬೀರ್ ಮೂಲಕ 35,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 35,000 ಹಣವನ್ನು ಕೂಡ ಪಡೆದಿದ್ದರು ಅದಾದ ನಾಲ್ಕು ತಿಂಗಳ ಬಳಿಕ ಮತ್ತೊಮ್ಮೆ 25,000 ಲಂಚವನ್ನು ಕೇಳಿದ್ದರು ಈ ಹಿನ್ನೆಲೆ ಬೇಸತ್ತ ಜೈರಾಮ್ ಎಸಿಬಿಗೆ ದೂರು ನೀಡಿದ್ದರು. ದೂರಿನ ಅನ್ವಯ…

Read More

ತುಮಕೂರು: ರಾಜ್ಯದ ಬರಪೀಡಿತ ತಾಲ್ಲೂಕುಗಳ ಪಟ್ಟಿ ಘೋಷಣೆಯಾಗಿದ್ದು, ಕಲ್ಪತರು ನಾಡಿನ ಹತ್ತು ತಾಲೂಕುಗಳೂ ಪಟ್ಟಿಗೆ ಸೇರ್ಪಡೆಯಾಗಿದೆ. 9 ತಾಲೂಕುಗಳು ತೀವ್ರ ಬರಪೀಡಿತ ಪಟ್ಟಿಯಲ್ಲಿದ್ರೆ, ತುಮಕೂರು ತಾಲೂಕು ಸಾಧಾರಣ ಬರ ಪೀಡಿತ ಪಟ್ಟಿಗೆ ಸೇರ್ಪಡೆಯಾಗಿದೆ. ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಕುಣಿಗಲ್, ಶಿರಾ, ಪಾವಗಡ, ಮಧುಗಿರಿ, ಕೊರಟಗರೆ ತಿಪಟೂರು ತೀವ್ರ ಬರಗಾಲ ಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ.

Read More

ತುಮಕೂರು ಗ್ರಾಮದ ಗೋ ಕಟ್ಟೆಗೆ ಬಿದ್ದು ರೈತ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಬ್ಯಾಡರ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಮುನಿಯಪ್ಪ (55) ಮೃತ ರೈತ ರಾಗಿದ್ದಾರೆ. ದನಗಳ ಮೈ ತೊಳೆಯಲು ಕಟ್ಟೆಗೆ ಹೋದ ಸಂದರ್ಭದಲ್ಲಿ  ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಈ ಸಂಬಂಧ ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಗೃಹ ಸಚಿವರ ಸ್ವಕ್ಷೇತ್ರದಲ್ಲಿ ಮಧ್ಯವರ್ತಿಗಳಿಗೆ ಬ್ರೇಕ್ ಹಾಕಲು ಕೊರಟಗೆರೆ ತಹಶೀಲ್ದಾರ್ ಹೊಸ ಪ್ಲಾನ್ ಮಾಡಿದ್ದು, ತಮ್ಮ ಕಚೇರಿಯ ಬಾಗಿಲಲ್ಲೇ ಕುಳಿತು ಸಾರ್ವಜನಿಕರ ಕುಂದುಕೊರತೆ ಪರಿಶೀಲನೆ ನಡೆಸಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳು ಆಗಬೇಕು ಅಂದ್ರೆ, ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿತ್ತು ಇದರಿಂದ ಎಚ್ಚೆತ್ತ ತಹಶೀಲ್ದಾರ್ ಮುನಿಶಾಮಿರೆಡ್ಡಿ ಇದೀಗ ತಮ್ಮ ಕಚೇರಿಯ ಬಾಗಿಲಲ್ಲೇ ಚೇರ್ ಹಾಕಿ ಕುಳಿತು ಸಾರ್ವಜನಿಕರ ಕುಂದುಕೊರತೆ ಪರಿಶೀಲನೆ ನಡೆಸುವ ಮೂಲಕ ಮಧ್ಯವರ್ತಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕ್ಷೇತ್ರವಾಗಿರುವ ಕೊರಟಗೆರೆ ತಾಲೂಕಿನ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಅವರ ಈ ವಿನೂತನ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ತಮಿಳುನಾಡಿನ ತೂತುಕುಡಿಯಲ್ಲಿ ದಲಿತ ಮಹಿಳೆ ಅಡುಗೆ ಮಾಡುತ್ತಿದ್ದಾಳೆ ಎಂಬ ಕಾರಣಕ್ಕೆ , ಶಾಲೆಯ ಊಟ ಮಾಡುವುದಿಲ್ಲ ಎಂದ ವಿದ್ಯಾರ್ಥಿಗಳೊಂದಿಗೆ, ಬೆಳಗಿನ ಉಪಾಹಾರ ಸೇವಿಸಿದ ಕನಿಮೋಳಿ ಸಂಸದೆ ಪೋಷಕರ ಒತ್ತಡಕ್ಕೆ ಮಣಿದ 11 ಮಕ್ಕಳು ಶಾಲೆಯ ಊಟವನ್ನೇ ಸೇವಿಸಲಿಲ್ಲ. ವಿದ್ಯಾರ್ಥಿಗಳು ಊಟ ಮಾಡದೇ ಇದ್ದಾಗ ಕನಿಮೊಳಿ ಸಂಸದೆ ಮತ್ತಿತರರು ವಿದ್ಯಾರ್ಥಿಗಳೊಂದಿಗೆ ಊಟ ಮಾಡಲು ಶಾಲೆಗೆ ಬಂದಿದ್ದರು. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪರಿಚಯಿಸಿದ ಉಚಿತ ಉಪಹಾರ ಕಾರ್ಯಕ್ರಮಕ್ಕೆ ದಲಿತ ಮಹಿಳೆ ಮುನಿಯಸೆಲ್ವಿ ಅವರನ್ನು ಶಾಲೆಯ ಅಡುಗೆಯವರನ್ನಾಗಿ ನೇಮಿಸಲಾಗಿತ್ತು. ಅಕ್ಕಿ ಮತ್ತು ಇತರ ಆಹಾರ ಪದಾರ್ಥಗಳ ಬೆಲೆ ಬಾಳುತ್ತಿರುವ ಬಗ್ಗೆ ಪ್ರಶ್ನಿಸಿದಾಗ ವಿದ್ಯಾರ್ಥಿಗಳು ತಾವು ತಯಾರಿಸಿದ ಆಹಾರವನ್ನು ತಿನ್ನಲು ನಿರಾಕರಿಸಿದರು ಎಂದು ಮುನಿಯಸೆಲ್ವಿ ತಪಾಸಣಾ ಅಧಿಕಾರಿಗಳಿಗೆ ತಿಳಿಸಿದರು. ಮುನಿಯಸೆಲ್ವಿ ಅವರು ದಲಿತ ಸಮುದಾಯಕ್ಕೆ ಸೇರಿದವರಾದ ಕಾರಣ ಅವರ ಪೋಷಕರು ಮಕ್ಕಳಿಗೆ ಊಟ ಮಾಡದಂತೆ ಸೂಚನೆ ನೀಡಿದ್ದರು. ಮಾಹಿತಿ ಹೊರಬಿದ್ದ ಬಳಿಕ ಸಂಸದೆ ಕನಿಮೊಳಿ, ಸಮಾಜ ಕಲ್ಯಾಣ ಮತ್ತು ಮಹಿಳಾ ಹಕ್ಕುಗಳ ಖಾತೆ ಸಚಿವ ಪಿ. ಗೀತಾ ಜೀವನ್,…

Read More

ಭಾರತೀಯ ರಿಸರ್ವ್ ಬ್ಯಾಂಕ್ ಗ್ರಾಹಕರಿಗೆ ದಾಖಲೆಗಳನ್ನು ಹಿಂದಿರುಗಿಸುವ ವಿಳಂಬದ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ದಾಖಲೆಗಳನ್ನು ಹಿಂದಿರುಗಿಸಲು ವಿಳಂಬವಾದಲ್ಲಿ, ಗ್ರಾಹಕರಿಗೆ ದಿನಕ್ಕೆ ಐದು ಸಾವಿರ ರೂಪಾಯಿ ಪರಿಹಾರವನ್ನು ನೀಡಲು ಆರ್‌ ಬಿಐ ಮುಂದಾಗಿದೆ. ಸಾಲ ಮರುಪಾವತಿ ಮುಗಿದ ನಂತರ ದಾಖಲೆಗಳನ್ನು ಸಲ್ಲಿಸದಿರುವ ಬಗ್ಗೆ ಆರ್‌ ಬಿಐ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಬ್ಯಾಂಕ್ ‌ಗಳ ಹೊರತಾಗಿ, ಬ್ಯಾಂಕಿಂಗ್ ಅಲ್ಲದ ಹಣಕಾಸು ಸಂಸ್ಥೆಗಳಿಗೂ ಈ ನಿರ್ದೇಶನ ಅನ್ವಯಿಸುತ್ತದೆ. ಸ್ಥಿರಾಸ್ತಿ ಸಾಲಗಳ ಮರುಪಾವತಿಯನ್ನು ಪೂರ್ಣಗೊಳಿಸಿದ ನಂತರ ಬ್ಯಾಂಕ್‌ಗಳು ಸಾಧ್ಯವಾದಷ್ಟು ಬೇಗ ದಾಖಲೆಗಳನ್ನು ಹಿಂದಿರುಗಿಸಬೇಕು. ಬ್ಯಾಂಕ್‌ಗಳು ಸಾಲ ಮಂಜೂರಾತಿ ಪತ್ರದಲ್ಲಿ ದಾಖಲೆಗಳನ್ನು ಹಿಂದಿರುಗಿಸಲು ಸಮಯ ಮಿತಿಯನ್ನು ನಮೂದಿಸಬೇಕು. ದಾಖಲೆಗಳನ್ನು ಹಿಂದಿರುಗಿಸಲು ಗರಿಷ್ಠ ಸಮಯ 30 ದಿನಗಳು. ಹೊಸ ಮಾರ್ಗಸೂಚಿಗಳು ಡಿಸೆಂಬರ್ 1 ರಿಂದ ಜಾರಿಗೆ ಬರಲಿವೆ.

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಗಳು ಮತ್ತು ಮಾಧ್ಯಮ ಸಲಹೆಗಾರರ ನೇಮಕವನ್ನು ಪ್ರಶ್ನಿಸಿ ಬೆಂಗಳೂರು ಮೂಲದ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಸಿಎಂ ಸಲಹೆಗಾರರ ನೇಮಕಕ್ಕೆ ನಿಷೇಧ ಎಲ್ಲಿದೆ ಎಂಬುದನ್ನು ತೋರಿಸಿ ಎಂದು ಪ್ರಶ್ನಿಸಿತು. ಅರ್ಜಿದಾರರ ಉತ್ತರಕ್ಕೆ ಸಂತುಷ್ಟಗೊಳ್ಳದ ನ್ಯಾಯಾಲಯ ಅರ್ಜಿ ವಜಾಗೊಳಿಸಿತು.

Read More

ನಾಗಾಲ್ಯಾಂಡ್ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆಯಿಂದ ವಿನಾಯಿತಿ ಕೋರಿ ನಿರ್ಣಯವನ್ನು ಅಂಗೀಕರಿಸಿತು. ಈ ತಿಂಗಳ ಆರಂಭದಲ್ಲಿ, ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫ್ಯೂ ರಿಯೊ ಅವರು ಯುಸಿಸಿ ವಿಷಯದ ಕುರಿತು ಬುಡಕಟ್ಟು ಸಂಘಟನೆಗಳು ಮತ್ತು ಇತರ ಪಕ್ಷಗಳಿಂದ ಇನ್ಪುಟ್ ಕೇಳಿದ್ದಾರೆ ಎಂದು ಹೇಳಿದರು. ವಿಧಾನಸಭೆಯಲ್ಲಿ ಸೋದರಳಿಯ ರಿಯೊ ಮಾತನಾಡಿ, ಏಕರೂಪ ನಾಗರಿಕ ಸಂಹಿತೆಗೆ ಪ್ರತಿನಿಧಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಿರ್ಣಯವನ್ನು ಬಿಜೆಪಿ ಸೇರಿದಂತೆ ರಾಜಕೀಯ ಪಕ್ಷಗಳು ಬೆಂಬಲಿಸಿವೆ. ರಾಜ್ಯ ಸಚಿವ ಸಂಪುಟವು ಈಗಾಗಲೇ 22ನೇ ಕಾನೂನು ಆಯೋಗಕ್ಕೆ ಮನವಿ ಸಲ್ಲಿಸಿದೆ UCC. ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡ ಇದನ್ನು ಪರಿಶೀಲಿಸುವುದಾಗಿ ಸರ್ಕಾರಿ ಸದನದಲ್ಲಿ ಹೇಳಿಕೆ ನೀಡಿದ್ದರು. ಎನ್‌ ಡಿಎ ಮೈತ್ರಿಕೂಟದ ಆಡಳಿತದಲ್ಲಿರುವ ರಾಜ್ಯದಲ್ಲಿ ಏಕ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ.

Read More

ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಕೂಡಲೇ ಲಸಿಕೆ ಹಾಕುವ ಕೆಲಸ ಪ್ರಾರಂಭ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಲುಬಾಯಿ ಜ್ವರ ರೋಗಕ್ಕೂ ಲಸಿಕೆ ಹಾಕಬೇಕು ಎಂದು ಹೇಳಿದರು. ಗೊಬ್ಬರವನ್ನು ಎಂ. ಆರ್. ಪಿ ದರಕ್ಕಿಂತ ಹೆಚ್ಚು ದರಕ್ಕೆ ಮಾರಾಟ ಮಾಡಲು ಕಡಿವಾಣ ಹಾಕಬೇಕು. ಒಟ್ಟಾರೆ ಅಧಿಕಾರಿಗಳ ವೈಫಲ್ಯದಿಂದ ಜನರ ನಿರೀಕ್ಷೆ ಹುಸಿಯಾಗಬಾರದು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವಿರಿ ಎಂಬ ವಿಶ್ವಾಸ ನನಗಿದೆ ಎಂದರು.

Read More