Author: admin

ದಿನದಿಂದ ದಿನಕ್ಕೆ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಈ ಸೈಬರ್ ವಂಚಕರ ಹಾವಳಿಯಿಂದ ಜನರು ಪಾರಾಗುವುದು ಹೇಗೆಂದು ಜಾಗೃತಿ ಮೂಡಿಸಲು ನಗರ ಪೊಲೀಸ್ ಇಲಾಖೆ ವಿನೂತನ ಪ್ರಯತ್ನ ಆರಂಭಿಸಿದೆ. ‘ಸೈಬರ್ ವಂಚಕರಿಂದ ದೂರವಿರಲು, ದಿನಕ್ಕೊಂದು ಸೈಬರ್ ಸಲಹೆ’ ಅಭಿಯಾನ ಆರಂಭಿಸಲಾಗಿದೆ. ಪ್ರತಿನಿತ್ಯ ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರೇ ಸಲಹೆ ನೀಡಲಿದ್ದಾರೆ. ಧ್ವನಿ ರೂಪದಲ್ಲಿ ಅದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಲಿದೆ.

Read More

ರಸ್ತೆ ಅಪಘಾತ ಸಂಭವಿಸಿದಾಗ ತುರ್ತಾಗಿ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡುವ ‘ರಕ್ಷಾ ಕ್ಯೂಆರ್ ಕೋಡ್’ ಅನ್ನು ಹೈವೇ ಡಿಲೈಟ್ ಸಂಸ್ಥೆ ಮಂಗಳವಾರ ಬಿಡುಗಡೆಗೊಳಿಸಿದೆ. ನಂತರ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ರಾಜೇಶ್ ಘಟನಟ್ಟಿ, ‘ದೇಶದಲ್ಲಿ ಪ್ರತಿನಿತ್ಯ ನೂರಾರು ಅಪಘಾತಗಳು ಸಂಭವಿಸುತ್ತವೆ. ಅಪಘಾತಕ್ಕೆ ಒಳಗಾದವರ ನೆರವಿಗಾಗಿ ರಕ್ಷಾ ಕ್ಯೂಆರ್ ಕೋಡ್ ಅಭಿವೃದ್ಧಿ ಪಡಿಸಲಾಗಿದೆ ಎಂದರು.

Read More

ಶಿಕ್ಷಕ ವೃತ್ತಿ ಬಹಳ ಶ್ರೇಷ್ಠ. ಜಾತಿ, ಭಾಷೆ ಹಾಗೂ ಧರ್ಮದ ತಾರತಮ್ಯಗಳನ್ನು ಮೀರಿ ಮಕ್ಕಳಿಗೆ ಸಂಸ್ಕಾರಯುತ ಮತ್ತು ಜ್ಞಾನಾಧಾರಿತ ಶಿಕ್ಷಣವನ್ನು ಧಾರೆಯೆರೆಯುವವರೇ ನಿಜವಾದ ಶಿಕ್ಷಕರು ಎಂದು ತುಮಕೂರು ವಿಶ್ವವಿದ್ಯಾಲಯದ ಮಾಜಿ ಕುಲ ಸಚಿವ ಪ್ರೊ. ಕೆ. ಶಿವಚಿತ್ತಪ್ಪ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಹಾಗೂ ರೇವಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ರೇವಾ ಕಾಲೇಜಿನಲ್ಲಿ ಆಯೋಜಿಸಿದ್ದ ಗುರುನಮನ  ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

Read More

ಬೆಂಗಳೂರು: ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನ ಕಳವು ಹಾಗೂ ಸಾರ್ವಜನಿಕರ ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ವಿಲ್ಸನ್‌ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ನಾಯಂಡಹಳ್ಳಿ ನಿವಾಸಿ ವಾಹೀದ್ ಖಾನ್(25) ಬಂಧಿತ ಆರೋಪಿ. ಆರೋಪಿಯಿಂದ 14.64 ಲಕ್ಷ ಮೌಲ್ಯದ ವಿವಿಧ ಕಂಪನಿಗಳ ಆರು ದ್ವಿಚಕ್ರ ವಾಹನಗಳು ಹಾಗೂ 10 ಮೊಬೈಲ್ ಜಪ್ತಿ ಮಾಡಲಾಗಿದೆ. ನಗರದ ವಿವಿಧೆಡೆ ಸುತ್ತಾಡಿ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ರಾತ್ರಿ ವೇಳೆ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡಿ ಪರಾರಿಯಾಗುತ್ತಿದ್ದ.

Read More

ಬೆಂಗಳೂರು ನಗರದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ, ಪರಿಚಯಸ್ಥ ಗ್ರಾಹಕರಿಗೆ ಡ್ರಗ್ಸ್ ಪೂರೈಸುತ್ತಿದ್ದ ಒಬ್ಬ ವಿದೇಶಿಪ್ರಜೆ ಸೇರಿದಂತೆ, 34 ಅಂತರರಾಜ್ಯ ಡ್ರಗ್ಸ್‌ ಪೆಡ್ಲರ್ ‌ಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. ಕೇರಳದ 15, ಕರ್ನಾಟಕದ 10, ಬಿಹಾರದ ನಾಲ್ವರು, ಒಡಿಶಾದ ಇಬ್ಬರು, ಅಸ್ಸಾಂ ಹಾಗೂ ಹರಿಯಾಣದ ತಲಾ ಒಬ್ಬ, ನೈಜೀರಿಯಾದ ಒಬ್ಬ ಪೆಡ್ಲರ್ ಅನ್ನು ಬಂಧಿಸಲಾಗಿದೆ. ಬಂಧಿತರಿಂದ 72.42 ಕೋಟಿ ಮೊತ್ತದ ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

Read More

ಯಾವುದೇ ಇಲಾಖೆಯ ಅಧಿಕಾರಿಗಳು ಮತ್ತು ನೌಕರರನ್ನು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವಿರುದ್ಧವಾಗಿ, ಅನ್ಯ ಇಲಾಖೆಗಳಿಗೆ ನಿಯೋಜನೆ ಮಾಡದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಒಬ್ಬ ನೌಕರನನ್ನು ಯಾವುದೇ ಹುದ್ದೆಗೆ ಗರಿಷ್ಠ ಐದು ವರ್ಷಗಳವರೆಗೆ ನಿಯೋಜನೆ ಮಾಡಬಹುದು. ಬಳಿಕ ಆ ನೌಕರ ಎರಡು ವರ್ಷಗಳವರೆಗೆ ಮಾತೃ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಕಡ್ಡಾಯ. ಅನ್ಯ ಇಲಾಖೆಗಳಿಂದ ನಿಯೋಜನೆಗೆ ಅವಕಾಶ ಕಲ್ಪಿಸದ ಹುದ್ದೆಗಳಿಗೆ ನಿಯೋಜನೆ ಮಾಡುವುದನ್ನು ನಿರ್ಬಂಧಿಸಲಾಗಿದೆ.

Read More

ಯೋಜನೆ & ಸಾಂಖ್ಯಿಕ ಸಚಿವ ಡಿ.ಸುಧಾಕರ್ ವಂಚನೆ ಆರೋಪಕ್ಕೆ ಸಂಬಂಧಿಸಿ ಟ್ವೀಟ್ ಮೂಲಕ ಸಚಿವ ಡಿ.ಸುಧಾಕರ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಯಾವ ಪುಡಿ ರೌಡಿಗಿಂತ ಕಡಿಮೆ‌ ಇಲ್ಲ ಡಿ.ಸುಧಾಕರ್ ಗೂಂಡಾವರ್ತನೆ. ಸಿದ್ದರಾಮಯ್ಯ ಸಂಪುಟದಲ್ಲಿ ಜಾತಿ ನಿಂದಕರು, ಗೂಂಡಾಗಳೇ ಇದ್ದಾರೆ. ಸಿದ್ದರಾಮಯ್ಯಗೆ ದಲಿತರನ್ನು ಮೂಲೆಗುಂಪು ಮಾಡುವುದು ಕರಗತವಾದರೆ, ಡಿ.ಸುಧಾಕರ್ ಗೆ ದಲಿತರನ್ನು ಅವಮಾನಿಸಿ ಗೂಂಡಾಗಿರಿ ಮಾಡುವ ಅಹಂ. ಸರ್ಕಾರ ಕೂಡಲೇ ಗೂಂಡಾ ಸಚಿವರ ಬಂಧಿಸಿ, ರಾಜೀನಾಮೆ ಪಡೆಯಲಿ ಎಂದು ಟ್ವಿಟರ್ ಮೂಲಕ ರಾಜ್ಯ ಸರ್ಕಾರಕ್ಕೆ, ರಾಜ್ಯ ಬಿಜೆಪಿ ಆಗ್ರಹಿಸಿದೆ.

Read More

ಇಷ್ಟು ಬೇಗ ಸಿದ್ದರಾಮಯ್ಯ ಸರ್ಕಾರ ಜನಪ್ರಿಯತೆ ಕಳೆದುಕೊಳ್ಳುತ್ತದೆ ಅಂತಾ ನಿರೀಕ್ಷೆ ಮಾಡಿರಲಿಲ್ಲ. ಇವತ್ತು ಮುಂದಿನ ಹೋರಾಟದ ಕುರಿತು ನಾವು ಚರ್ಚೆ ಮಾಡುತ್ತೇವೆ ಎಂದು, ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಸಿದ್ದರಾಮಯ್ಯ BJP ಸೇರಲು ಅಡ್ವಾಣಿ ಭೇಟಿಯಾಗಿದ್ದರೆಂಬ ಆರೋಪ ಸಂಬಂಧ ಮಾತನಾಡಿದ ಬಿ ಎಸ್ ವೈ ಅದೆಲ್ಲ ಏನೂ ಇಲ್ಲ ಎಂದರು.

Read More

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸಾದಲಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಶ್ರೀಗಂಧದ ತುಂಡು ಸಾಗಿಸುತ್ತಿದ್ದ ಕಾರು ಪಲ್ಟಿಯಾಗಿದ್ದು ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿಗಳು, ಅಕ್ರಮವಾಗಿ ಆಂಧ್ರದಿಂದ ಬೆಂಗಳೂರಿಗೆ ರಕ್ತಚಂದನ ಸಾಗಿಸುತ್ತಿದ್ದರು.

Read More

ಆಂಧ್ರಪ್ರದೇಶದ ಚಿತ್ತೂರು ಮೂಲದ ಬಿ ಟೆಕ್ ಪದವೀಧರ ಸೈಬರ್ ಹ್ಯಾಕರ್ ನನ್ನು ಬಂಧಿಸಿ, ಸುಮಾರು ಐದು ಕೋಟಿ ರೂಪಾಯಿ ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಆಂಧ್ರಪ್ರದೇಶ ಮೂಲದ ಲಕ್ಷ್ಮೀಪತಿ ಎಂಬಾತನನ್ನು ಬೆಂಗಳೂರು ಆಗ್ನೇಯ ಸೈಬರ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತನಿಂದ 4.16 ಕೋಟಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ, 11 ಲಕ್ಷ ನಗದು, 7 ಬೈಕ್ ಜಪ್ತಿ ಮಾಡಲಾಗಿದೆ.

Read More