Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ಬೆಂಗಳೂರು: ಬಾಣಸವಾಡಿಯಲ್ಲಿ ಇತ್ತೀಚೆಗೆ ತಮಿಳುನಾಡಿನ ನಟೋರಿಯಸ್ ರೌಡಿ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿಸಂತೆ ಪ್ರಕರಣ ಭೇದಿಸಿರುವ ಬಾಣಸವಾಡಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಟೋರಿಯಸ್ ರೌಡಿಯಾಗಿರುವ ಗುರುಸ್ವಾಮಿ ಮೇಲೆ ವಿರೋಧಿ ಬಣ ಹತ್ಯೆಗೆ ಸ್ಕೆಚ್ ಹಾಕಿ ದಾಳಿ ಮಾಡಿತ್ತು. ಸದ್ಯ ಈ ಪ್ರಕರಣದಲ್ಲಿ ಒಟ್ಟು ಐವರು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದೆ. ವಿನೋದ ಕುಮಾರ್, ಪ್ರಸನ್ನ, ಕಾರ್ತಿಕ್ ಬಂಧಿತ ಆರೋಪಿಗಳಾಗಿದ್ದು, ನವೀನ್ ಹಾಗೂ ತುಪಾಕಿ ವಿಜಯ್ ಬಂಧನಕ್ಕೆ ಬಲೆ ಬೀಸಲಾಗಿದೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಬೆಂಗಳೂರು ಪ್ಲೇಟ್ ಲೆಟ್ ಕೊರತೆಯನ್ನು ಎದುರಿಸುತ್ತಿದೆ. ಕಳೆದ ಹಲವು ದಿನಗಳಿಂದ ನಿತ್ಯ ಡೆಂಗ್ಯೂ ಪ್ರಕರಣಗಳು ಅನಿರೀಕ್ಷಿತವಾಗಿ ಹೆಚ್ಚಾಗುತ್ತಿದ್ದು ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಡೆಂಗ್ಯೂ ಹೆಚ್ಚಾದಂತೆ ನಗರದಲ್ಲಿ ಪ್ಲೇಟ್ ಲೆಟ್ ಗೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಲವು ರಕ್ತನಿಧಿಗಳು ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿವೆ.
ಆಟೋರಿಕ್ಷಾದಿಂದ ಜಿಗಿದು ಕೇರಳದ ಮಹಿಳೆಯೊಬ್ಬರು ಕೈ ಮುರಿದುಕೊಂಡಿರುವ ಘಟನೆ ಮಹದೇವಪುರ ಪೊಲೀಸ್ ವ್ಯಾಪ್ತಿಯ ಪೈ ಲೇಔಟ್ ನಲ್ಲಿ ನಡೆದಿದೆ. ಸಂತ್ರಸ್ತೆ ರೋಶಿನಿ ಜೋಸೆಫ್, ಬಿ ನಾರಾಯಣಪುರದ ಜಿಮ್ ಬಳಿಯಿಂದ ವಿಜಿನಾಪುರದ ಬೃಂದಾವನ ಲೇಔಟ್ ಗೆ ಆಟೋದಲ್ಲಿ ಹೋಗುತ್ತಿದ್ದರು. ಆಟೋ ಚಾಲಕ ಜನರಲ್ ಮಾರ್ಗ ಬಿಟ್ಟು ಬೇರೆ ಮಾರ್ಗ ಹಿಡಿಯುವುದನ್ನು ಗಮನಿಸಿದ ಮಹಿಳೆ, ಆಟೋರಿಕ್ಷಾ ನಿಲ್ಲಿಸಲು ಕೇಳಿದಳು. ಆದರೆ ಚಾಲಕ ವೇಗವಾಗಿ ಓಡಿಸುತ್ತಿದ್ದ. ತೊಂದರೆ ಗ್ರಹಿಸಿದ ಆಕೆ ಆಟೋದಿಂದ ಜಿಗಿದಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾಳೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ 2 ಫಲಿತಾಂಶ 2023 ಪ್ರಕಟಿಸಿದೆ. ಆಗಸ್ಟ್ 21 ಮತ್ತು ಸೆಪ್ಟೆಂಬರ್ 2 ರ ನಡುವೆ 2023 ರ ದ್ವಿತೀಯ ಪೂರಕ ಪಿಯು ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ನಿಂದ ಡೌನ್ ಲೋಡ್ ಮಾಡಬಹುದು. ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 1,21,179 ವಿದ್ಯಾರ್ಥಿಗಳ ಪೈಕಿ 1,19,183 ಜನ ಪರೀಕ್ಷೆಗೆ ಹಾಜರಾಗಿದ್ದು, 41,961 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಬೆಂಗಳೂರು: ಕೇವಲ ಬದಲಾವಣೆಗಾಗಿ ನಾಡಿನ ಜನತೆ ಸರ್ಕಾರವನ್ನು ಬದಲಾಯಿಸಿಲ್ಲ. ಬಹಳ ನಿರೀಕ್ಷೆಗಳನ್ನು ಇಟ್ಟುಕೊಂಡು ಹಿಂದಿನ ಸರ್ಕಾರವನ್ನು ಬದಲಾಯಿಸಿ ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿಯ ಆಶೋತ್ತರಗಳನ್ನು ಇಟ್ಟುಕೊಂಡು ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು. ಶಾಸಕರು, ಮಂತ್ರಿಗಳು, ಅಧಿಕಾರಿಗಳು ಜನ ಸೇವಕರು. ಈ ಸಾಮಾನ್ಯ ತಿಳಿವಳಿಕೆ ಪ್ರತಿಯೊಬ್ಬರಲ್ಲೂ ಇರಬೇಕು. ನಾವ್ಯಾರು ರಾಜರುಗಳಲ್ಲ ಎಂದು ಅವರು ಹೇಳಿದರು. ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಬೇಕು. ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ? ಮುಖ್ಯಮಂತ್ರಿಯಾದ ಬಳಿಕ ನಾನು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿದ್ದೆ. ಆ ವೇಳೆ ಜನ ಸಾಮಾನ್ಯರು ನೂರಾರು ರೀತಿಯ ಮನವಿಗಳನ್ನು ನನಗೆ ನೀಡುತ್ತಿದ್ದಾರೆ. ಜಿಲ್ಲಾ,…
ಚಾಮರಾಜನಗರ: ಹೊಗೆನಕಲ್ ಜಲಪಾತದ ಬಂಡೆಗಳ ಮೇಲೆ ಯುವಕ ಹಾಗೂ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಯುವಕ ಸಾವನ್ನಪ್ಪಿದರೆ, ಯುವತಿ ಗಂಭೀರ ಸ್ಥಿತಿಯಲ್ಲಿದ್ದಾಳೆ. ಉಮೇಶ್(24) ಮೃತಪಟ್ಟಿರುವ ಯುವಕನಾಗಿದ್ದು 16 ವರ್ಷದ ರಕ್ಷಿತಾ ಗಂಭೀರ ಸ್ಥಿತಿಯಲ್ಲಿರುವ ಬಾಲಕಿಯಾಗಿದ್ದಾಳೆ. ತಮಿಳುನಾಡಿನ ಧರ್ಮಪುರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸಿದ್ಧ ಪ್ರವಾಸಿ ಕೇಂದ್ರವಾದ ತಮಿಳುನಾಡು ಹಾಗೂ ಕರ್ನಾಟಕ ಗಡಿಯಲ್ಲಿರುವ ಹನೂರು ತಾಲೂಕಿನ ಹೊಗೆನಕಲ್ ಜಲಪಾತದಲ್ಲಿ ಈ ಜೋಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೊಗೆನಕಲ್ ಜಲಪಾತದ ಬಂಡೆಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಇವರಿಬ್ಬರು ಬಿದ್ದಿದ್ದನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ವಿಷ ಕುಡಿದು ಬಹಳಷ್ಟು ಸಮಯವಾಗಿದ್ದರಿಂದ ಆಸ್ಪತ್ರೆಗೆ ತಲುಪುವ ಮೊದಲೇ ಉಮೇಶ್ ಮೃತಪಟ್ಟಿದ್ದಾನೆ. ರಕ್ಷಿತಾ ಸ್ಥಿತಿ ಚಿಂತಾಜನಕವಾಗಿದೆ.
ಬೆಂಗಳೂರು: ವಿದೇಶಿ ಪ್ರಜೆ ಸೇರಿದಂತೆ 34 ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಂಧಿತರಿಂದ 2 ಕೋಟಿ 42 ಲಕ್ಷಕ್ಕೂ ಹೆಚ್ಚು ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. 24 ಪ್ರಕರಣಗಳ ಸಂಬಂಧ 34 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ 15, ರಾಜ್ಯದ 10, ಬಿಹಾರದ ನಾಲ್ವರು ಆರೋಪಿಗಳು, ಒಡಿಶಾದ ಇಬ್ಬರು, ಅಸ್ಸಾಂ ಮತ್ತು ಹರ್ಯಾಣ ಮೂಲದ ತಲಾ ಒಬ್ಬರು, ನೈಜೀರಿಯಾ ಪ್ರಜೆಯನ್ನು ಬಂಧಿಸಿ ಡ್ರಗ್ಸ್ ಜಪ್ತಿ ಮಾಡಲಾಗಿದೆ.
ಮರ್ಯಾದೆಯಿಂದ ಕೆಲಸ ಮಾಡಲಿ ಅಂತಾ 135 ಸ್ಥಾನ ಗೆಲ್ಲಿಸಿದ್ದಾರೆ. ಮಚ್ಚು ಹಿಡಿದುಕೊಂಡು ಹೋಗುವ ವ್ಯಕ್ತಿಗೆ ಸಚಿವ ಸ್ಥಾನ ಕೊಟ್ಟಿದ್ದೀರಿ ಎಂದು ಡಿ.ಸುಧಾಕರ್ ವಿಚಾರವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ವಂಚನೆ ಆರೋಪ ಸಂಬಂಧ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತಾ ಕೇಳುತ್ತೀರಾ? ನಿಮಗೇನಾದ್ರೂ ಮಾನಮರ್ಯಾದೆ ಇದೆಯಾ ಸಿದ್ದರಾಮಯ್ಯನವರೇ? ಅಧಿಕಾರಿಗಳಿಗೆ ಎಷ್ಟು ಗಂಟೆಯಲ್ಲಿ ನೀವು ದೂರವಾಣಿ ಕರೆ ಮಾಡಿದ್ದೀರಿ? ಆ ಅಧಿಕಾರಿಯನ್ನು ಮೊದಲು ಅಮಾನತು ಅಂತಾ ಮಾತನಾಡಿದ್ದೀರಿ. ಇದೇನಾ ನೀವು ದಲಿತರ ಪರ ಅಂತಾ ಹೇಳುವುದು? ದಲಿತರ ರಕ್ಷಣೆ ಅಂತಾ ಹೇಳುತ್ತೀರಿ, ಇದೇ ನೀವು ಮಾಡುವ ಕೆಲಸ ಎಂದು ಕುಮಾರಸ್ವಾಮಿ ತರಾಟೆಗೆತ್ತಿಕೊಂಡಿದ್ದಾರೆ. ವ್ಯವಹಾರ ಮಾಡುವಾಗ ಆ ಮಂತ್ರಿ ಯಾವ ಪಕ್ಷದಲ್ಲಿದ್ದರೋ ಗೊತ್ತಿಲ್ಲ. ಆ ಮಂತ್ರಿ ಬಿಜೆಪಿಯಲ್ಲಿದ್ದರೋ, ಕಾಂಗ್ರೆಸ್ನಲ್ಲಿ ಇದ್ದರೋ ಗೊತ್ತಿಲ್ಲ. ಇಬ್ಬರು ದಲಿತ ಮಹಿಳೆಯರ ಮೇಲೆ ಮಚ್ಚು ಹಿಡಿದು ಹೋಗಿದ್ದೀರಿ.…
ಬೆಂಗಳೂರು: ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ, ದೇವೇಗೌಡರು, ಕುಮಾರಸ್ವಾಮಿ, ಇಬ್ರಾಹಿಂ ತೀರ್ಮಾನಕ್ಕೆ ತಾನು ಬದ್ಧನಾಗಿರೋದಾಗಿ ತಿಳಿಸಿದ್ದಾರೆ. ಕೋಮುವಾದಿಗಳನ್ನು ದೂರ ಇಡಬೇಕು ಅಂತಾ ಹೇಳುತ್ತಾರೆ. ತುಮಕೂರಿನಲ್ಲಿ ಅವರ ಜೊತೆ ಸೇರಿ ದೇವೇಗೌಡರನ್ನು ಸೋಲಿಸಿದರು. ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರವನ್ನು ಕೇಳಿರಲಿಲ್ಲ. ದೇವೇಗೌಡರು ಮೈಸೂರು, ಮಂಡ್ಯ ಕ್ಷೇತ್ರಗಳನ್ನು ಕೇಳಿದ್ದರು. ದೇವೇಗೌಡರನ್ನು ತುಮಕೂರಿನಲ್ಲಿ ನಿಲ್ಲಿಸಿ ಸೋಲಿಸಿದರು ಎಂದು ರೇವಣ್ಣ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದರು. ದೇವೇಗೌಡರಿಗೆ ಶಕ್ತಿ ಇಲ್ಲ ಅಂತಾ ಇಂಡಿಯಾ ಮೈತ್ರಿಕೂಟ ಸಭೆಗೆ ಕರೆದಿಲ್ಲ ಎಂದು ಇದೇ ವೇಳೆ ಇಂಡಿಯಾ ಮೈತ್ರಿಕೂಟದ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಪಕ್ಷವನ್ನು ನಿರಂತರವಾಗಿ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಶ್ರಮಿಸಬೇಕು. 100 ದಿನಗಳಲ್ಲಿ ಸಿದ್ದರಾಮಯ್ಯನವರ ಸರಕಾರವು ಜನಪ್ರಿಯತೆ ಕಳೆದುಕೊಂಡಿದೆ. ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಸಿದ್ದರಾಮಯ್ಯನವರ ಸರಕಾರದ ಜನವಿರೋಧಿ ನೀತಿಯನ್ನು ಜನರಿಗೆ ತಿಳಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರಿಗೆ ಕರೆ ನೀಡಿದರು. ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಈ ವೇಳೆ ಮಾತನಾಡಿದ ಅವರು, ಇದೇ 18ರಿಂದ ಕುರುಡುಮಲೆಯಿಂದ ಬಿಜೆಪಿಯ ರಾಜ್ಯಾದ್ಯಂತ ರಾಜಕೀಯ ಪ್ರವಾಸ ಆರಂಭವಾಗಲಿದೆ. ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ಅವರು ತಿಳಿಸಿದರು. ಎಸ್ ಸಿ, ಎಸ್ಟಿ ಸಮುದಾಯದ ಅನುದಾನವನ್ನು ದುರುಪಯೋಗ ಮಾಡಿಕೊಂಡು ಈ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಭೀಕರ ಬರಗಾಲ ಇದ್ದರೂ ಅದರ ಕಡೆಗೆ ಗಮನ ನೀಡುತ್ತಿಲ್ಲ ಎಂದು ಆಕ್ಷೇಪಿಸಿದರು. ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿದರೆಂದು ತಿಳಿಸಿದ್ದಾರೆ. ರಾಹುಲ್ ಗಾಂಧಿಯವರು ವಿದೇಶಿ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿ ಮಾತನಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿಯವರು ಕ್ಷಮೆ…