Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್ ಗೆ ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್ ಬಿಸಿ ಶುರುವಾಗಿದೆ. ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ರಸ್ತೆಗೆ ಇಳಿಯುತ್ತಿಲ್ಲ. ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಒಕ್ಕೂಟ ಆಯೋಜಿಸಿದೆ. ಬಂದ್ ಯಶಸ್ಸಿಗಾಗಿ ಖಾಸಗಿ ಸಾರಿಗೆ ಒಕ್ಕೂಟ ಪಣ ತೊಟ್ಟಿದೆ. ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಒಂದರಲ್ಲೇ 250ಕ್ಕೂ ಹೆಚ್ಚು ಬಸ್ ಸ್ತಬ್ದವಾಗಲಿದೆ. ಕೇವಲ ಬೆಂಗಳೂರು ಮಾತ್ರವಲ್ಲದೇ ನೆರೆಯ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರು ಬಂದ್ ಗೆ ಬೆಂಬಲ ಸೂಚಿಸಿದ್ದಾರೆ. ಬಂದ್ ಗೆ ಒಲಾ ಚಾಲಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಲಾ ಜೋನ್ ಗೆ ಟ್ಯಾಕ್ಸಿಗಳು ಬಂದಿಲ್ಲ. ಇನ್ನು ಟ್ಯಾಕ್ಸಿಗಳಿಗಾಗಿ ಜನರು ಕಾದು ಕುಳಿತಿದ್ದಾರೆ. ಬೆರಳಿಕೆಯಷ್ಟು ಟ್ಯಾಕ್ಸಿ ಚಾಲಕರು ಮಾತ್ರ ಆಗಮಿಸಿದ್ದಾರೆ. ಕೆಎಸ್ಟಿಡಿಸಿ ಟ್ಯಾಕ್ಸಿ ಓಡಾಟ ಹಿನ್ನಲೆಯಲ್ಲಿ ಕಾರ್ ಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಏರ್ಪೋರ್ಟ್ ರಸ್ತೆಯ…
ನಿಪ್ಪಾಣಿ: ಸಮಾಜದ ಯಾವುದೇ ಕೆಲಸದಲ್ಲಿ ನಾನು ಸಮಾಜದ ಮಗಳಾಗಿ ನಿರಂತರ ಇರುತ್ತೇನೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ವಿಚಾರದಲ್ಲಿ ಸ್ವಾಮಿಗಳ ಅಪೇಕ್ಷೆಯಂತೆ ಸಮಾಜ ಮತ್ತು ಸರಕಾರದ ಕೊಂಡಿಯಾಗಿ ಕೆಲಸ ಮಾಡುತ್ತೇನೆ. ಮಂಗಳವಾರ ಈ ಕುರಿತು ಮುಖ್ಯಮಂತ್ರಿಗಳ ಜೊತೆ ಸಮಗ್ರವಾಗಿ ಚರ್ಚಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ನಿಪ್ಪಾಣಿಯಲ್ಲಿ ಭಾನುವಾರ 2 ಎ ಮೀಸಲಾತಿ ಸಂಬಂಧ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪಂಚಮಸಾಲಿ ಮೀಸಲಾತಿ ಸಂಬಂಧ ಮೊದಲ ಹೋರಾಟದಿಂದ ಈಗ 6ನೇ ಹಂತದ ಹೋರಾಟದವರೆಗೂ ನಾನು ಪಾಲ್ಗೊಂಡಿದ್ದೇನೆ. ಹಾಗಾಗಿ ಈ ವಿಷಯದ ಕುರಿತು ನನಗೆ ಸಂಪೂರ್ಣಅರಿವಿದೆ. ನಮ್ಮ ಸಮಾಜಕ್ಕೆ ಮೀಸಲಾತಿ ಏಕೆ ಅಗತ್ಯ ಎನ್ನುವ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಗೆ ಮಾಡಿಕೊಡುತ್ತೇನೆ ಎಂದು ಅರು ಭರವಸೆ ನೀಡಿದರು. ಸ್ವಾಮಿಗಳು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನನ್ನು ಚನ್ನಮ್ಮ ಎಂದು ಕರೆಯುತ್ತಾರೆ. ಆದರೆ ನಾನು ಚನ್ನಮ್ಮನ…
ನವದೆಹಲಿ: ಸೂರ್ಯನ ಅಧ್ಯಯನಕ್ಕೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಉಡಾವಣೆ ಮಾಡಿರುವ ಆದಿತ್ಯ ಎಲ್1 ನೌಕೆಯನ್ನು ಮತ್ತೊಂದು ಕಕ್ಷೆಗೆ ಯಶಸ್ವಿಯಾಗಿ ಏರಿಸಲಾಗಿದೆ. ಕಕ್ಷೆ ಎತ್ತರಿಸುವ 3ನೇ ಪ್ರಕ್ರಿಯೆಯು ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ. ಯಶಸ್ವಿ ಕಾರ್ಯಾಚರಣೆಯ ನಂತರ, ಆದಿತ್ಯ ನೌಕೆಯು ಈಗ 296 ಕಿಮೀ x 71767 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣೆ ನಡೆಸುತ್ತಿದೆ. ಮುಂದಿನ ಕಾರ್ಯಾಚರಣೆಯನ್ನು ಸೆಪ್ಟೆಂಬರ್ 15 ರಂದು ಮುಂಜಾನೆ 2 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.
ಹಿರಿಯ ಪತ್ರಕರ್ತ ಎಂ.ಕೆ. ಹೆಗಡೆ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಶೇಷಾಧಿಕಾರಿ ಮತ್ತು ಮಾಧ್ಯಮ ಸಲಹೆಗಾರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪತ್ರಿಕಾ ರಂಗದಲ್ಲಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಇವರು ನಾಡಿನ ಹೆಸರಾಂತ ಪತ್ರಿಕೆಗಳಾದ ಕನ್ನಡಪ್ರಭ, ವಿಜಯವಾಣಿ , ವಿಜಯ ಕರ್ನಾಟಕ, ಸೇರಿದಂತೆ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯ ರಾಗಿರುವ ಇವರು ಪ್ರಗತಿ ವಾಹಿನಿ ಸುದ್ದಿ ಸಂಸ್ಥೆ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಮೂಲತಃ ಶಿರಸಿ ತಾಲೂಕಿನ ಹೆಗಡೆಕಟ್ ಕಲ್ಮನಿ ಮೂಲದವರಾಗಿದ್ದಾರೆ. ಇವರು ಈಗ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ, ಇವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರ ವಿಶೇಷಾಧಿಕಾರಿ ಮತ್ತು ಮಾಧ್ಯಮ ಸಲಹೆಗಾರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಮಣಿಪುರದಲ್ಲಿ ಶುಕ್ರವಾರ ನಡೆದ ಗುಂಡಿನ ದಾಳಿಗೆ ಕೇಂದ್ರ ಸೇನೆಯೇ ಕಾರಣ ಎಂದು ರಾಜ್ಯ ಸರ್ಕಾರ ಆರೋಪಿಸಿದೆ. ತೆಂಗನೌಪಾಲ್ ಜಿಲ್ಲೆಯ ಪಲ್ಲೆಲ್ ನಲ್ಲಿ ನಡೆದ ಗುಂಡಿನ ದಾಳಿಗೆ ಕೇಂದ್ರ ಪಡೆಗಳ ಪ್ರಚೋದನಕಾರಿ ಕ್ರಮವೇ ಕಾರಣ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸಹ ನಾಗರಿಕರ ವಿರುದ್ಧ ಸೇನೆಯ ಅನಗತ್ಯ ಕ್ರಮಗಳನ್ನು ಖಂಡಿಸಿದರು. ಪಲ್ಲೇಲಿಯಲ್ಲಿ ಸಶಸ್ತ್ರ ದಾಳಿಕೋರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಹೊಸ ದಾಳಿಯ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯದ ಪರಿಸ್ಥಿತಿಯನ್ನು ನಿರ್ಣಯಿಸಲು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯು ಕೇಂದ್ರ ಸೇನೆಯ ವಿರುದ್ಧ ತೀವ್ರ ಟೀಕೆಗೆ ಗುರಿಯಾಗಿದೆ. ಶನಿವಾರ ಸಂಜೆ ರಾಜಧಾನಿ ಇಂಫಾಲದಲ್ಲಿ ಸಭೆ ನಡೆಯಿತು. ನಾಗರಿಕರ ವಿರುದ್ಧ ಕೇಂದ್ರ ಭದ್ರತಾ ಪಡೆಗಳ ಪ್ರಚೋದನಕಾರಿ ಕ್ರಮಗಳನ್ನು ರಾಜ್ಯ ಸರ್ಕಾರ ಖಂಡಿಸಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲು ನಿರ್ಧರಿಸಲಾಗಿದೆ. ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆಯಡಿ ‘ಡಿಸ್ಟರ್ಬ್ಡ್ ಏರಿಯಾ’…
ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಪತ್ನಿ ಅಕ್ಷತಾ ಮೂರ್ತಿ ಅವರು ಭೇಟಿ ನೀಡಿದರು. ಅಕ್ಷರಧಾಮದಲ್ಲಿ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಅತಿಥಿಗಳನ್ನು ಸ್ವಾಗತಿಸಿದರು. ಆತಿಥ್ಯದ ಸಂಕೇತವಾಗಿ ರುದ್ರಾಕ್ಷಿ, ಭಗವದ್ಗೀತೆಯ ಪ್ರತಿ ಮತ್ತು ಹನುಮಾನ್ ಚಾಲೀಸಾ ನೀಡಿ ಗೌರವಿಸಲಾಯಿತು. ರಿಷಿ ಸುನಕ್ ದಂಪತಿ, ದೇವಸ್ಥಾನದಲ್ಲಿ ಆರತಿ ಮಾಡಿದರು. ಅಕ್ಷರಧಾಮದ ಸಂತರನ್ನು ಭೇಟಿ ಮಾಡಿ ಕೆಲ ಹೊತ್ತು ಸಮಾಲೋಚನೆ ನಡೆಸಿದರು.
ವರದಕ್ಷಿಣೆಗಾಗಿ ಗರ್ಭಿಣಿಯನ್ನು ಬಾವಿಗೆ ತಳ್ಳಿದ ಪತಿ. ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವರದಕ್ಷಿಣೆಗಾಗಿ ಯುವಕ ತನ್ನ ಪತ್ನಿಯನ್ನು ಬಾವಿಗೆ ಎಸೆದಿದ್ದಾನೆ. ಘಟನೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿಯನ್ನು ಬಾವಿಗೆ ಎಸೆದ ಬಳಿಕ ವಿಡಿಯೋ ಚಿತ್ರೀಕರಿಸಿ ಪೋಷಕರಿಗೆ ಕಳುಹಿಸಿ ವರದಕ್ಷಿಣೆ ಕೇಳಿದ್ದಾನೆ. ಯುವತಿ ಬಾವಿಯಲ್ಲಿ ಹಗ್ಗದಿಂದ ನೇಣು ಹಾಕಿಕೊಂಡಿರುವುದು ದೃಶ್ಯಾವಳಿಯಲ್ಲಿದೆ. ಎರಡು ಗಂಟೆಗಳ ನಂತರ ಮಹಿಳೆಯನ್ನು ಬಾವಿಯಿಂದ ಹೊರಗೆ ತರಲಾಯಿತು. ಪತಿ ರಾಕೇಶ್ ಅವರೇ ಪತ್ನಿಯನ್ನು ಹಗ್ಗದಿಂದ ಬಾವಿಯಿಂದ ಹೊರತೆಗೆದಿದ್ದಾರೆ. ಘಟನೆಯ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆಯಾದ ವಿಡಿಯೋದಲ್ಲಿ, ಬಾವಿಯೊಳಗೆ ಪತ್ನಿ ಹಗ್ಗದಿಂದ ನೇತಾಡುತ್ತಿರುವುದನ್ನು ಮತ್ತು ರಾಕೇಶ್ ಅವರ ಪಾದಗಳು ಬಾವಿಯ ಮೇಲಿನ ದೃಶ್ಯಗಳನ್ನು ಚಿತ್ರೀಕರಿಸುವುದನ್ನು ನೋಡಬಹುದು. ಮೂರು ವರ್ಷಗಳ ಹಿಂದೆ ಇಬ್ಬರು ಮದುವೆಯಾಗಿದ್ದರು. ವರದಕ್ಷಿಣೆಗಾಗಿ ಪತಿ ಮತ್ತು ಆತನ ಪೋಷಕರು ಯುವತಿಗೆ ನಿರಂತರವಾಗಿ ಹಿಂಸೆ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ದೂರಿನ ಮೇರೆಗೆ ಪೊಲೀಸರು ರಾಕೇಶ್ ವಿರುದ್ಧ ಸೆಕ್ಷನ್ 498-ಎ, 323 ಮತ್ತು 506 ಅಡಿಯಲ್ಲಿ ಪ್ರಕರಣ…
ಚಿತ್ರದುರ್ಗ: ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಐವರು ಮೃತಪಟ್ಟಿದ್ದಾರೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ನಿಧರಾಗಿದ್ದಾರೆ. ಮತ್ತೊಬ್ಬರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವುಗೀಡಾಗಿದ್ದಾರೆ. ಐವರಿಗೆ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರಾಯಚೂರಿನ ಮಾಬಮ್ಮ(35), ಮಸ್ಕಿ ಮೂಲದ ರಮೇಶ್(40), ಬೆಂಗಳೂರು ಮೂಲದ ಪಾರ್ವತಮ್ಮ(45) ಸೇರಿ ಐವರು ನಿಧನರಾಗಿದ್ದಾರೆ. ಇನ್ನು ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬಂಗಾಳಕೊಲ್ಲಿಯಲ್ಲಿ ಭೂಕಂಪ. ಭಾರತೀಯ ಕಾಲಮಾನ ಮಧ್ಯಾಹ್ನ 1:29ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು 4.4 ತೀವ್ರತೆಯನ್ನು ವರದಿ ಮಾಡಿದೆ. ಭೂಕಂಪವು ಭೂಮಿಯ ಮೇಲ್ಮೈಯಿಂದ 70 ಕಿಮೀ ವ್ಯಾಪ್ತಿಯಲ್ಲಿ ಸಂಭವಿಸಿದೆ. ಅಧಿಕೇಂದ್ರವು 9.75 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 84.12 ಡಿಗ್ರಿ ಪೂರ್ವ ರೇಖಾಂಶದಲ್ಲಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ಭಾರತದಲ್ಲಿ ಭೂಕಂಪಗಳನ್ನು ಸೂಚಿಸುವ ಮತ್ತು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. NCS ಅಡಿಯಲ್ಲಿ 155 ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ.
ಕರ್ನಾಟಕದಲ್ಲಿ ಭಾರತ್ ಜೋಡೆಯಾತ್ರೆ, ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಬಲ ಮತ್ತು ಉತ್ಸಾಹವನ್ನು ತುಂಬಿತ್ತು ಅದರ ಫಲ ಸ್ಮೃತಿಯಾಗಿ 2023 ರಲ್ಲಿ ಪ್ರಚಂಡ ಬಹುಮತ ದಿಂದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಭಾರತ್ ಜೋಡು ಯಾತ್ರೆ ವರ್ಷಾಚರಣೆ ಕಾರ್ಯಕ್ರಮದ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ರಲ್ಲಿ ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ. ಯಾಕೆಂದರೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳು ಈಗ ಜನರಿಗೆ ತಲುಪುತ್ತಾ ಇವೆ ಮತ್ತು 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿಗಳನ್ನು ಪೂರೈಸಿರುವ ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ ಎನ್ನುವುದರಲ್ಲಿ ಸಂಶಯವಿಲ್ಲ. ಜನ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಮ್ಮೆ ಕೇಂದ್ರ ಸರ್ಕಾರ ರಚನೆ ಮಾಡುವುದಕ್ಕೆ ಆಶೀರ್ವಾದ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ್ ಕಾಂಗ್ರೆಸ್ ಅಧ್ಯಕ್ಷರಾದ ವಿನಯ್ ನವಲಗಟ್ಟಿ, ಹಾಗೂ ಕಾಂಗ್ರೆಸ ನಾಯಕಿ ಆಯುಷಾ ಸನದಿ ಉಪಸ್ಥಿತರಿದ್ದರು.