Author: admin

ಗುಬ್ಬಿ: ತಾಲ್ಲೂಕಿನಲ್ಲಿ ಅರ್ಹವಿರುವ ಎಲ್ಲ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸುವ ಕೆಲಸ ಹೆಚ್ಚಿನ ವೇಗದಲ್ಲಿ ಸಾಗುತ್ತಿದೆ. ಈ ನಿರ್ಣಯದಿಂದ ಗ್ರಾಮಗಳಿಗೆ ಸರ್ಕಾರಿ ಸೌಲಭ್ಯ ಸರಿಯಾಗಿ ತಲುಪಲು ಸಾಧ್ಯವಾಗಲಿದೆ. ಸರ್ವೆ ನಂಬರ್ ಪ್ರದೇಶಗಳಲ್ಲಿ ಅನೇಕ ವರ್ಷಗಳಿಂದ ಮನೆ ಕಟ್ಟಿಕೊಂಡಿದ್ದರೂ, ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದ ನಿವಾಸಿಗಳ ಸಮಸ್ಯೆ ಗಮನಿಸಿದ ಸರ್ಕಾರ, ಎಲ್ಲ ಅರ್ಹ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಸೂಚನೆ ನೀಡಿತ್ತು. ಅದರಂತೆ ತಾಲ್ಲೂಕು ಆಡಳಿತ ಕಾರ್ಯನಿರ್ವಹಿಸುತ್ತಿದೆ. ತಾಲ್ಲೂಕಿನಲ್ಲಿ ಈಗಾಗಲೇ ಸುಮಾರು 2 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗಿದೆ. ಈ ಕ್ರಮದೊಂದಿಗೆ ಗುಬ್ಬಿ ತಾಲ್ಲೂಕು ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕಂದಾಯ ಗ್ರಾಮಗಳನ್ನು ರಚಿಸಿದ ತಾಲ್ಲೂಕಾಗಿದೆ. ತಾಲ್ಲೂಕಿನ ಎಲ್ಲ ಕಂದಾಯ ವೃತ್ತಗಳಲ್ಲಿ ಅರ್ಹರಾದ ಫಲಾನುಭವಿಗಳನ್ನು ಗುರುತಿಸಿ, ದಾಖಲೆಗಳನ್ನು ಸಂಗ್ರಹಿಸಿ ಸಲ್ಲಿಸುವಂತೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚನೆ ನೀಡಿದ್ದಾರೆ. ತುಮಕೂರು ಉಪವಿಭಾಗೀಯ ಅಧಿಕಾರಿ ನೇತೃತ್ವದಲ್ಲಿ ವಿಚಾರಣೆ ನಡೆಸಿ, ಅರ್ಹ ಫಲಾನುಭವಿಗಳು ವಾಸಿಸುತ್ತಿರುವ ಜಾಗಗಳನ್ನು ನೋಂದಣಿ ಮಾಡಿ ಅವರಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ. ತಾಲ್ಲೂಕಿನ ಯಾವುದೇ ಗ್ರಾಮದ…

Read More

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ಸುಳ್ಳು ಸುದ್ದಿ (Fake News), ದ್ವೇಷ ಭಾಷಣ (Hate Speech) ಮತ್ತು ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಕರ್ನಾಟಕ ಸರ್ಕಾರವು ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (AI) ಚಾಲಿತ ‘ಸೋಷಿಯಲ್ ಮೀಡಿಯಾ ಅನಾಲಿಟಿಕ್ಸ್ ಸಲ್ಯೂಷನ್’ ತಂತ್ರಾಂಶವನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಇದಕ್ಕೆ ಸುಮಾರು 67.26 ಕೋಟಿ ರೂ. ವೆಚ್ಚದ ತಾತ್ವಿಕ ಅನುಮೋದನೆ ನೀಡಲಾಗಿದೆ. ಯೋಜನೆಯ ಉದ್ದೇಶ: ಸಾಂಪ್ರದಾಯಿಕ ವಿಧಾನಗಳಿಂದ ಸುಳ್ಳು ಸುದ್ದಿಗಳನ್ನು ಪತ್ತೆಹಚ್ಚುವುದು ಕಷ್ಟಕರವಾಗುತ್ತಿರುವ ಹಿನ್ನೆಲೆಯಲ್ಲಿ, ಡಿಜಿಟಲ್ ಬೆದರಿಕೆಗಳನ್ನು ಕ್ಷಿಪ್ರವಾಗಿ ಗುರುತಿಸಲು ಎಐ ತಂತ್ರಜ್ಞಾನ ಬಳಸಲಾಗುತ್ತಿದೆ. ಮಕ್ಕಳ ಕಳ್ಳಸಾಗಣೆ, ಆನ್–ಲೈನ್ ನಿಂದನೆ ಮತ್ತು ಉಗ್ರಗಾಮಿ ಚಟುವಟಿಕೆಗಳ ನಿರೂಪಣೆಗಳನ್ನು ಇದು ಪತ್ತೆಹಚ್ಚಲಿದೆ. ವ್ಯಾಪ್ತಿ: ಈ ತಂತ್ರಾಂಶವು ಸಾಮಾಜಿಕ ಜಾಲತಾಣಗಳು ಮತ್ತು ಮೆಸೇಜಿಂಗ್ ಪ್ಲಾಟ್‌ ಫಾರ್ಮ್‌ಗಳ ಮೇಲೆ ನಿಗಾ ಇಡಲಿದೆ. ಆದರೆ, ಮುಖ್ಯವಾಹಿನಿಯ ಮಾಧ್ಯಮಗಳ ಡಿಜಿಟಲ್ ವೇದಿಕೆಗಳು ಇದರ ವ್ಯಾಪ್ತಿಗೆ ಬರುವುದಿಲ್ಲ ಎಂದು ಸಚಿವ…

Read More

ನೆಲಮಂಗಲ: ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದು ಭೀಕರ ಅಪಘಾತಕ್ಕೀಡಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ಇಂದು (ಶುಕ್ರವಾರ) ಮುಂಜಾನೆ ಸಂಭವಿಸಿದೆ. ಘಟನೆಯ ವಿವರ: ಬೆಂಗಳೂರಿನಿಂದ ಕಲಬುರಗಿ ಕಡೆಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ‘ಸಂಜನಾ ಟ್ರಾವೆಲ್ಸ್’ಗೆ ಸೇರಿದ ಬಸ್, ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಮೊದಲು ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದಿದೆ. ನಂತರ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಸಮಯಪ್ರಜ್ಞೆ ಮೆರೆದ ಚಾಲಕ: ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಚಾಲಕ, ತಕ್ಷಣವೇ ಎಲ್ಲ ಪ್ರಯಾಣಿಕರನ್ನು ಕೆಳಗೆ ಇಳಿಯುವಂತೆ ಸೂಚಿಸಿದ್ದಾನೆ. ಬಸ್‌ನಲ್ಲಿದ್ದ ಸುಮಾರು 40 ಪ್ರಯಾಣಿಕರು ಕೂಡಲೇ ಕೆಳಗಿಳಿದಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದಂತಾಗಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಬಸ್ ಅನ್ನು ಆವರಿಸಿದ್ದು, ವಾಹನ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬೆಂಕಿ ತೀವ್ರವಾಗಿದ್ದರಿಂದ ಪ್ರಯಾಣಿಕರಿಗೆ ಪ್ರಾಣಾಪಾಯವಾಗದಿದ್ದರೂ, ಬಸ್‌ನ…

Read More

ಬೆಂಗಳೂರು: ಬಹುನಿರೀಕ್ಷಿತ ಬೆಂಗಳೂರು ಬಿಸಿನೆಸ್ ಕಾರಿಡಾರ್ (BBC) ಯೋಜನೆಯ ಮೊದಲ ಹಂತವನ್ನು ಮುಂದಿನ 18 ತಿಂಗಳಲ್ಲಿ (ಒಂದೂವರೆ ವರ್ಷ) ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು, ಈ ಯೋಜನೆಯ ಕುರಿತು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡರು. ಪರಿಹಾರ ವಿತರಣೆ: ಯೋಜನೆಗಾಗಿ ಭೂಮಿ ನೀಡಿದ ಉತ್ತರ ಮತ್ತು ದಕ್ಷಿಣ ಕಾರಿಡಾರ್‌ನ ಭೂಮಾಲೀಕರಿಗೆ ಪರಿಹಾರದ ಚೆಕ್‌ಗಳು, ಪ್ರಮಾಣಪತ್ರಗಳು ಹಾಗೂ ಟಿಡಿಎಸ್ (TDS) ದಾಖಲೆಗಳನ್ನು ವಿತರಿಸಲಾಗಿದೆ. ಪರಿಹಾರದ ಆಯ್ಕೆಗಳು: ಭೂಮಾಲೀಕರಿಗೆ ಸರ್ಕಾರ ವಿವಿಧ ರೀತಿಯ ಪರಿಹಾರಗಳನ್ನು ನೀಡಿದೆ. ಕೆಲವು ಮಾಲೀಕರು ಶೇ. 35ರಷ್ಟು ವಾಣಿಜ್ಯ ಬಳಕೆಯ ಭೂಮಿಯನ್ನು ಪಡೆಯಲು ಒಲವು ತೋರಿದ್ದರೆ, ಮತ್ತೆ ಕೆಲವು ಮಾಲೀಕರು ನಗದು ಪರಿಹಾರವನ್ನು ಪಡೆದಿದ್ದಾರೆ. ಪರಿಹಾರದ ಮೊತ್ತ: ಭೂಮಾಲೀಕರಿಗೆ ಮಾರುಕಟ್ಟೆ ಮೌಲ್ಯದ ಮೂರು ಪಟ್ಟು ಹೆಚ್ಚಿನ ದರದಲ್ಲಿ ಪರಿಹಾರ ನೀಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)…

Read More

ನವದೆಹಲಿ: ಕೇಂದ್ರ ಬಜೆಟ್‌ ನಲ್ಲಿ ರೈಲ್ವೆ ವಲಯಕ್ಕೆ ನೀಡಲಾದ ಆದ್ಯತೆ ಮತ್ತು ಹೊಸ ಯೋಜನೆಗಳ ಘೋಷಣೆಯನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಶ್ಲಾಘಿಸಿದ್ದಾರೆ. ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿರುವ ಅವರು, ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಬೀದರ್ ವರೆಗೆ ವಿಸ್ತರಿಸುವಂತೆ ವಿಶೇಷ ಮನವಿ ಮಾಡಿದ್ದಾರೆ. ಬಜೆಟ್ ಶ್ಲಾಘನೆ: 2026ರ ಕೇಂದ್ರ ಬಜೆಟ್‌ ನಲ್ಲಿ ಸುಮಾರು 4,000 ಕಿ.ಮೀ. ವ್ಯಾಪ್ತಿಯ ಏಳು ಹೊಸ ಹೈಸ್ಪೀಡ್ ರೈಲು ಕಾರಿಡಾರ್‌ ಗಳನ್ನು ಘೋಷಿಸಿರುವುದನ್ನು ದೇವೇಗೌಡರು ಸ್ವಾಗತಿಸಿದ್ದಾರೆ. ಈ ಯೋಜನೆಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬೀದರ್ ವರೆಗೆ ವಿಸ್ತರಣೆ: ಬೆಂಗಳೂರು ಮತ್ತು ಹೈದರಾಬಾದ್ ನಡುವಿನ ಹೈಸ್ಪೀಡ್ ರೈಲು ಮಾರ್ಗವನ್ನು ಬೀದರ್ ವರೆಗೆ ವಿಸ್ತರಿಸುವುದರಿಂದ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಪತ್ರದಲ್ಲಿ ಒತ್ತಿ ಹೇಳಿದ್ದಾರೆ. ದಕ್ಷಿಣ ಭಾರತದ ತ್ರಿಕೋನ ಸಂಪರ್ಕ: ಚೆನ್ನೈ—ಬೆಂಗಳೂರು–ಹೈದರಾಬಾದ್ ಕಾರಿಡಾರ್ ದಕ್ಷಿಣ ಭಾರತದಲ್ಲಿ ಒಂದು ‘ಅತಿ ವೇಗದ…

Read More

ಕೊರಟಗೆರೆ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಕಾರ್ಯವನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪೂರ್ಣಗೊಳಿಸಿದೆ. ಹೊಸ ಪಟ್ಟಿಯನ್ನು ಗೆಜೆಟ್‌ ನಲ್ಲಿ ಪ್ರಕಟಿಸಿದೆ. ತಾಲ್ಲೂಕಿನಲ್ಲಿ ಜಿಲ್ಲಾ ಪಂಚಾಯಿತಿಯ ಒಟ್ಟು ಕ್ಷೇತ್ರಗಳ ಸಂಖ್ಯೆಯನ್ನು 4ಕ್ಕೆ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಒಟ್ಟು ಸಂಖ್ಯೆಯನ್ನು 15ಕ್ಕೆ ನಿಗದಿಪಡಿಸಲಾಗಿದೆ. ಕೊರಟಗೆರೆ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮಾಡಲಾಗಿದೆ. ಪಟ್ಟಣದ ಸುತ್ತಮುತ್ತಲಿನ ಕೆಲವು ಪ್ರದೇಶಗಳನ್ನು ಪುರಸಭೆ ವ್ಯಾಪ್ತಿಗೆ ಸೇರಿಸಲಾಗಿದೆ. ಆ ಪ್ರದೇಶಗಳನ್ನು ಕೈಬಿಟ್ಟು ಗಡಿ ಗುರುತಿಸಲಾಗಿದೆ. ಹಾಗಾಗಿ ಈ ಹಿಂದೆ ತಾಲ್ಲೂಕು ಪಂಚಾಯಿತಿಗೆ ಗುರುತಿಸಿದ್ದ 16 ಕ್ಷೇತ್ರಗಳನ್ನು ಈಗ 15ಕ್ಕೆ ಇಳಿಕೆ ಮಾಡಲಾಗಿದೆ. ತಾ.ಪಂ ಕ್ಷೇತ್ರ ಹಾಗೂ ಕ್ಷೇತ್ರದ ವ್ಯಾಪ್ತಿಗೆ ಸೇರಿದ ಗ್ರಾಮಗಳು: ತೋವಿನಕೆರೆ: ತೋವಿನಕೆರೆ, ಮುದಿಗೌಡನಹಳ್ಳಿ, ಬಡಮುದ್ರನಪಾಳ್ಯ, ಬೋರಯ್ಯನಹಟ್ಟಿ, ದೊಡ್ಡ ಸಂಜೀವೆಗೌಡನಪಾಳ್ಯ, ಚಿಕ್ಕಸಂಜೀವೆಗೌಡನಪಾಳ್ಯ, ಬಿಸಾಡಿಹಳ್ಳಿ, ಕಣಿವೆ ಹೊಸಹಳ್ಳಿ, ದೊಡ್ಡಗೌಡನ ಪಾಳ್ಯ, ಅಷ್ಟೇನಹಳ್ಳಿ, ಕುರಿಹಳ್ಳಿ, ಬೋರಪ್ಪನಹಟ್ಟಿ, ಸೂರೇನಹಳ್ಳಿ, ಚಿಕ್ಕವೆಂಕಟದಾಸೇಗೌಡನ ಪಾಳ್ಯ, ಕಲ್ಲುವೀರನಹಟ್ಟಿ, ಚಿಕ್ಕಣ್ಣನಹಳ್ಳಿ, ಮರಾಠಿಗರಪಾಳ್ಯ, ಚಿಕ್ಕರಸನಹಳ್ಳಿ, ದೇವರಹಳ್ಳಿ, ಕಬ್ಬಿಗೆರೆ,…

Read More

ಕೊರಟಗೆರೆ : ನಮ್ಮ ದೇಶದ ಗ್ರಾಮೀಣ ಸಂಸ್ಕೃತಿಯ ಜೀವಾಳವೇ ನಾಗರಕಟ್ಟೆ. ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆಯನ್ನು ನಮ್ಮ ಪೂರ್ವಿಕರು ವಿಶಿಷ್ಟವಾದ ಧಾರ್ಮಿಕ–ಸಾಂಸ್ಕೃತಿಕ ಅರ್ಥಪೂರ್ಣತೆಯೊಂದಿಗೆ ಇದರ ಹಿಂದೆ ವೈಜ್ಞಾನಿಕ ದೃಷ್ಟಿಕೋನವೂ ಅಡಗಿದೆ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ಹೇಳಿದರು. ಪಟ್ಟಣದ ಬಸ್‌ ಸ್ಟ್ಯಾಂಡ್‌ ನಲ್ಲಿರುವ ನಾಗರಕಟ್ಟೆ ಸೇವಾ ಸಮಿತಿಯ ವತಿಯಿಂದ ಆಯೋಜಿಸಿದ್ದ 8 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ನಮ್ಮ ಪ್ರತಿಯೊಂದು ಧಾರ್ಮಿಕ ಆಚರಣೆಯೂ ಕೇವಲ ನಂಬಿಕೆಗೆ ಸೀಮಿತವಲ್ಲ; ಅದರಲ್ಲಿ ವೈಜ್ಞಾನಿಕ ತತ್ತ್ವಗಳು ಅಡಗಿವೆ. ಅರಳಿ ಮರದಿಂದ ಹೆಚ್ಚು ಆಮ್ಲಜನಕ ಉತ್ಪತ್ತಿಯಾಗುವುದರಿಂದ ಪ್ರತಿ ಗ್ರಾಮದಲ್ಲಿಯೂ ಅರಳಿ ಕಟ್ಟೆಯನ್ನು ನಿರ್ಮಿಸಿ, ಅದರ ಕೆಳಗೆ ನಾಗದೇವರನ್ನು ಪ್ರತಿಷ್ಠಾಪಿಸುವ ಪರಂಪರೆಯನ್ನು ನಮ್ಮ ಪೂರ್ವಿಕರು ರೂಪಿಸಿದ್ದರು. ಇದು ಪರಿಸರ ಸಂರಕ್ಷಣೆಗೂ ಮಾನಸಿಕ ಶಾಂತಿಗೂ ಸಹಕಾರಿ ಎಂದರು. ಕಾರ್ಯಕ್ರಮದಲ್ಲಿ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ನಮ್ಮ ಆಚರಣೆಗಳನ್ನು ಕೇವಲ ವಿಧಿವಿಧಾನಗಳಾಗಿ…

Read More

ಮಧುಗಿರಿ: ಅಧಿಕಾರಿಗಳ ಭ್ರಷ್ಟಾಚಾರ ಮತ್ತು ವಿಳಂಬ ಧೋರಣೆಗೆ ಬೇಸತ್ತ ರೈತರೊಬ್ಬರು ತಾಲ್ಲೂಕು ಕಚೇರಿ ಮುಂದೆ ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು ಮುಂದಾದ ವಿಚಿತ್ರ ಹಾಗೂ ಆಕ್ರೋಶದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ. ಘಟನೆಯ ವಿವರ: ತಾಲ್ಲೂಕಿನ ದೊಡ್ಡರಿ ಹೋಬಳಿಯ ಜಕ್ಕೇನಹಳ್ಳಿ ಗ್ರಾಮದ ರೈತ ಪ್ರಸನ್ನಕುಮಾರ್ ಎಂಬವರು ಈ ವಿನೂತನ ಪ್ರತಿಭಟನೆ ನಡೆಸಿದವರು. ಕಳೆದ ಎರಡು ವರ್ಷಗಳಿಂದ ತಮ್ಮ ಜಮೀನಿಗೆ ದಾರಿ ಮಾಡಿಕೊಡುವಂತೆ ಅವರು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಅಲೆದಾಡುತ್ತಿದ್ದರು. ಲೋಕಾಯುಕ್ತ ನ್ಯಾಯಾಲಯವು ಒಂದು ತಿಂಗಳೊಳಗೆ ರಸ್ತೆ ನಿರ್ಮಿಸಿಕೊಡುವಂತೆ ಆದೇಶ ನೀಡಿದ್ದರೂ, ಸ್ಥಳೀಯ ಅಧಿಕಾರಿಗಳು ಮಾತ್ರ ಕಾರ್ಯಪ್ರವೃತ್ತರಾಗಿರಲಿಲ್ಲ. ಮೂಲಂಗಿ ಹಿಡಿದು ಆಕ್ರೋಶ: ಜಮೀನಿನ ದಾರಿ ಒತ್ತುವರಿ ತೆರವುಗೊಳಿಸಲು ಅಥವಾ ಸ್ಥಳ ಪರಿಶೀಲನೆ ನಡೆಸಲು ಅಧಿಕಾರಿಗಳು ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿರುವ ಪ್ರಸನ್ನಕುಮಾರ್, ಮಂಗಳವಾರ ತಾಲ್ಲೂಕು ಕಚೇರಿ ಮುಂದೆ ಮೈಕ್ ಹಿಡಿದು ಘೋಷಣೆ ಕೂಗಿದರು. “ನನ್ನ ಬಳಿ ಲಂಚ ನೀಡಲು ಹಣವಿಲ್ಲ, ಹಾಗಾಗಿ ನಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ಕೊಡುತ್ತೇನೆ…

Read More

ತುಮಕೂರು : ಸರ್ಕಾರದ ಸುತ್ತೋಲೆಯನ್ನು ಉಲ್ಲಂಘಿಸಿ ಕೆ.ಎಸ್.ಆರ್.ಟಿ.ಸಿ./ಬಿ ಎಂ ಟಿ ಸಿ, ಬಿ.ಟಿ.ಎಸ್. ಬಸ್ಸುಗಳ ಮೇಲೆ ಇಂಗ್ಲಿಷ್ ಪೋಸ್ಟರ್‌ ಗಳು, ಸ್ಟೀಕರ್‌ ಗಳು ಹಾಗೂ ಅನಧಿಕೃತ ಸ್ಪೀಕರ್‌ ಗಳು ಇನ್ನೂ ಅಳವಡಿಸಿಕೊಂಡಿರುವುದು ಅತ್ಯಂತ ಖಂಡನೀಯ ಎಂದು ಅಂಬೇಡ್ಕರ್ ಸಮಿತಿ ಸಮಾಜ ಸೇವಾ ಸಮಿತಿ, ತುಮಕೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕರ್ನಾಟಕ ರಾಜ್ಯ ಸರ್ಕಾರವು ಈಗಾಗಲೇ ಹೊರಡಿಸಿರುವ ಸುತ್ತೋಲೆ/ಆದೇಶದಂತೆ ಸರ್ಕಾರಿ ಸಾರಿಗೆ ಬಸ್ಸುಗಳ ಮೇಲೆ ಇಂಗ್ಲಿಷ್ ಪೋಸ್ಟರ್‌ ಗಳು, ಸ್ಟೀಕರ್‌ ಗಳು ಹಾಗೂ ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸುವಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಆದರೂ ತುಮಕೂರು ನಗರದಲ್ಲಿ ಸಂಚರಿಸುತ್ತಿರುವ ಕೆಲವು ಕೆ.ಎಸ್.ಆರ್.ಟಿ.ಸಿ./ಬಿ.ಟಿ.ಎಸ್. ಬಸ್ಸುಗಳಲ್ಲಿ ಇಂದಿಗೂ ಇಂಗ್ಲಿಷ್ ಪೋಸ್ಟರ್‌ ಗಳು ಹಾಗೂ ಸ್ಪೀಕರ್‌ ಗಳು ರಾರಾಜಿಸುತ್ತಿರುವುದು ಸರ್ಕಾರದ ಆದೇಶಗಳಿಗೆ ನೇರ ಸವಾಲು ಹಾಕಿದಂತೆ ಆಗಿದೆ. ಇದು ಕನ್ನಡ ಭಾಷೆ, ಕನ್ನಡಿಗರ ಭಾವನೆಗಳು ಹಾಗೂ ರಾಜ್ಯದ ಗೌರವಕ್ಕೆ ಧಕ್ಕೆ ತರುವ ಕಾರ್ಯವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವನ್ನು ಸ್ಪಷ್ಟವಾಗಿ ತೋರಿಸುತ್ತದೆ. ಈ ಕುರಿತು ಅಂಬೇಡ್ಕರ್ ಸಮಿತಿ ಸಮಾಜ ಸೇವಾ…

Read More

ಸರಗೂರು: ತಾಲೂಕಿನಲ್ಲಿ ಮಾನವ ಮತ್ತು ಕಾಡಾನೆ ನಡುವಣ ಸಂಘರ್ಷ ಮುಂದುವರಿದಿದ್ದು, ಗುರುವಾರ ಬೆಳಗಿನ ಜಾವ ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿರುವ ದಾರುಣ ಘಟನೆ ಬಿ.ಮಟಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಟಿ ಕಾಲೋನಿಯಲ್ಲಿ ನಡೆದಿದೆ. ಘಟನೆಯ ವಿವರ: ಮೃತ ರೈತರನ್ನು ಎಸ್.ಟಿ.ಕಾಲೋನಿ ಗ್ರಾಮದ ನಿವಾಸಿ ಮಾದ (75) ಎಂದು ಗುರುತಿಸಲಾಗಿದೆ. ಗುರುವಾರ ಬೆಳಿಗ್ಗೆ ಮಾದ ಅವರು ಮಲ ವಿಸರ್ಜನೆಗಾಗಿ ಜಮೀನಿನ ಕಡೆಗೆ ತೆರಳಿದ್ದಾಗ, ಮೊಳೆಯೂರು ವಲಯದಿಂದ ಬಂದ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದೆ. ಆನೆಯು ಅವರನ್ನು ತುಳಿದು ಹಾಕಿದ್ದರಿಂದ ಮಾದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಹಳ ಹೊತ್ತಾದರೂ ಮಾದ ಅವರು ಮನೆಗೆ ಮರಳದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಹುಡುಕಿಕೊಂಡು ಹೋದಾಗ, ಬಂಡೀಪುರ ಗ್ಯಾಸ್ ಗೋಡೌನ್ ಪಕ್ಕದ ರಸ್ತೆಯ ಬಳಿ ಶವವು ಅರೆನಗ್ನಾವಸ್ಥೆಯಲ್ಲಿ ಪತ್ತೆಯಾಗಿದೆ. ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ: ಘಟನೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ನೂರಾರು ಗ್ರಾಮಸ್ಥರು ಮತ್ತು ಸಂಬಂಧಿಕರು ಜಮಾಯಿಸಿ ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ರೈಲು ಕಂಬಿಗಳ ಬ್ಯಾರಿಕೇಡ್‌ ಗಳು…

Read More