Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ಔರಾದ್: ಜಿಲ್ಲೆಯ ಔರಾದ್ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇದೇ ಡಿಸೆಂಬರ್ 30ರಂದು ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಸಂತಪುರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ.ರತಿಕಾಂತ್ ಸ್ವಾಮಿ ಅವರು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “ರಕ್ತದಾನವು ಜೀವದಾನಕ್ಕೆ ಸಮಾನ. ತಾಲೂಕಿನ ಸಾರ್ವಜನಿಕರು ಹಾಗೂ ವಿಶೇಷವಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರಕ್ಕೆ ಆಗಮಿಸಿ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು” ಎಂದು ಕರೆ ನೀಡಿದ್ದಾರೆ. ರಕ್ತದಾನ ಮಾಡಲು ಆಸಕ್ತಿ ಇರುವವರು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಡಾ. ಸಿದ್ಧಾರಡ್ಡಿ ಅವರ ದೂರವಾಣಿ ಸಂಖ್ಯೆ: 9663859062ಕ್ಕೆ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಈ ಸದವಕಾಶವನ್ನು ಬಳಸಿಕೊಂಡು ರಕ್ತದ ಅವಶ್ಯಕತೆ ಇರುವವರಿಗೆ ನೆರವಾಗಬೇಕೆಂದು ಆರೋಗ್ಯ ಕೇಂದ್ರದ ಪ್ರಕಟಣೆ ತಿಳಿಸಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಕೊರಟಗೆರೆ : ಕೊರಟಗೆರೆ ತಾಲ್ಲೂಕಿನ ಜನರೊಂದಿಗೆ ನನ್ನ 30 ವರ್ಷದ ಅವಿನಾಭಾವ ಸಂಬಂಧವಿದ್ದು, ನನ್ನ ಹುಟ್ಟು ಹಬ್ಬವನ್ನು ನನ್ನ ಅಭಿಮಾನಿಗಳು ಸಾರ್ವಜನಿಕ ಸೇವೆಯನ್ನಾಗಿ ಆಚರಿಸುತ್ತಿದ್ದಾರೆ ಎಂದು ಮಾಜಿ ಜಿಲ್ಲಾಪಂಚಾಯತ್ ಸದಸ್ಯರಾದ ಪಿ.ಎನ್. ಕೃಷ್ಣಮೂರ್ತಿ ತಿಳಿಸಿದರು. ಅವರು ಕೊರಟಗೆರೆ ಪ್ರವಾಸಿ ಮಂದಿರದಲ್ಲಿ ಅಭಿಮಾನಿಗಳು ಏರ್ಪಡಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ನಾನು ಸುಮಾರು 30 ವರ್ಷಗಳಿಂದ ಕೊರಟಗೆರೆ ತಾಲ್ಲೂಕಿನಲ್ಲಿ ಸಾರ್ವಜನಿಕ ಸೇವಾ ಬದುಕಿನಲ್ಲಿ ಇದ್ದೇನೆ, ಡಿಸೆಂಬರ್ 27 ಶನಿವಾರದಂದು ನನ್ನ ಅಭಿಮಾನಿಗಳು ಹಿತೈಷಿಗಳು ನನ್ನ 59 ವರ್ಷದ ಹುಟ್ಟು ಹಬ್ಬವನ್ನು ಸಾರ್ವಜನಿಕ ಸೇವಾ ಕಾರ್ಯಕ್ರಮವನ್ನಾಗಿ ಅಚರಿಸುತ್ತಿದ್ದು, ಬೆಳಿಗ್ಗೆ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಬ್ರೆಡ್ ಹಾಗೂ ಬೆಚ್ಚನೆಯ ಹೊದಿಕೆಗಳನ್ನು ವಿತರಿಸಲಾಗುವುದು ಹಾಗೂ ಮದ್ಯಾಹ್ನ 1 ಗಂಟೆಗೆ ಕೊರಟಗೆರೆ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರಿಗೆ ಬೆಚ್ಚನೆ ಉಡುಪುಗಳನ್ನು ನೀಡಲಾಗುವುದು. ನಂತರ ತುಮಕೂರು ನಗರದ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದು ಅಲ್ಲಿಯೂ ಆಚರಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಮಾಜಿ ಪ.ಪಂ ಸದಸ್ಯ ಅಶ್ವಥನಾರಾಯಣರಾಜು, ಮುಖಂಡರುಗಳಾದ ವಿಜಯ್ಕುಮಾರ್, ರಮೇಶ್,…
ಕೊರಟಗೆರೆ : ಗೃಹ ಸಚಿವ ಹಾಗೂ ತುಮಕೂರು ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ ರವರು ಇಂದು ಕೊರಟಗೆರೆ ತಾಲ್ಲೂಕಿನಲ್ಲಿ 4 ಕಡೆ ಹಾಲು ಶೇಖರಣಾ ಘಟಕಗಳನ್ನು ಉದ್ಘಾಟಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಕೊಡ್ಲಹಳ್ಳಿ ಅಶ್ವಥನಾರಾಯಣ್, ಅರಕೆರೆ ಶಂಕರ್ ತಿಳಿಸಿದ್ದಾರೆ. ಅವರು ಪತ್ರಿಕಾ ಹೇಳಿಕೆ ನೀಡಿ ಗೃಹ ಸಚಿವಾರದ ಡಾ.ಜಿ. ಪರಮೇಶ್ವರರವರು ಇಂದು ವಿವಿಧ ಭಾಗಗಳಲ್ಲಿ ಮಧ್ಯಾಹ್ನ 12 ಗಂಟೆಯಿಂದ ಚನ್ನರಾಯನದುರ್ಗ ಹೋಬಳಿಯ ಅಗ್ರಹಾರ, ಕೊಳಾಲ ಹೋಬಳಿಯ ಬೈರಗೊಂಡ್ಲು, ಪುಟ್ಟಸಂದ್ರ ಗ್ರಾಮಗಳಲ್ಲಿ ಹಾಲಿ ಶೇಖರಣಾ ಘಟಕಗಳನ್ನು ಉದ್ಘಾಟಿಸಲಿದ್ದಾರೆ. ಕಸಬಾ ಹೋಬಳಿಯ ತೀತಾ ಗ್ರಾಮದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ, ನಂತರ ಹೊಳವನಹಳ್ಳಿ ಹೋಬಳಿಯ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆಯುವ ಯೇಸು ಕ್ರಿಸ್ತ ಜಯಂತೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೊರಟಗೆರೆ : ಉತ್ತಮ ಮತ್ತು ದಕ್ಷ ಆಡಳಿತದಿಂದ ತಾಲ್ಲೂಕು ಸರ್ವತೋಮುಖ ಪ್ರಗತಿ ಸಾಧ್ಯ ಎಂದು ತಹಶೀಲ್ದಾರ್ ಮಂಜುನಾಥ್ ಅಭಿಪ್ರಾಯಪಟ್ಟರು. ಕೇಂದ್ರ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಗ್ರಾಮೀಣ ಮಾಹಿತಿ ತಂತ್ರಜ್ಞಾನ ಕೇಂದ್ರ ಗರುಗದೊಡ್ಡಿ ಸಂಯುಕ್ತಾಶ್ರಯದಲ್ಲಿ ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ಉತ್ತಮ ಆಡಳಿತ ವಾರ’ ತಾಲ್ಲೂಕು ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಆಡಳಿತ ನೀಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ಧ್ಯೇಯವಾಗಿದೆ ಎಂದರು. ಉತ್ತಮ ಆಡಳಿತದಿಂದ ಸಮಾಜದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಸಾಮಾಜಿಕ ಹಕ್ಕುಗಳೆಂದರೆ ಕೇವಲ ವಸತಿ, ಆಹಾರ ಮತ್ತು ಶಿಕ್ಷಣ ನೀಡುವುದಷ್ಟೇ ಅಲ್ಲ, ವೈಯಕ್ತಿಕ ಭದ್ರತೆ ನೀಡಿ, ಹಕ್ಕುಗಳನ್ನು ರಕ್ಷಿಸುವ ಉದ್ದೇಶ ಹೊಂದಿದೆ. ತಳಮಟ್ಟದಿಂದ ಆಡಳಿತವನ್ನು ಬಲಪಡಿಸುವ ಮತ್ತು ಸಾಮಾನ್ಯ ಜನರಿಗೆ ಸರ್ಕಾರಿ ಸೇವೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ‘ಸುಶಾಸನ ಸಪ್ತಾಹ ಅಭಿಯಾನ’ದ ಮುಖ್ಯ ಗುರಿಯಾಗಿದೆ ಎಂದು ಹೇಳಿದರು. ಪೌತಿ ಖಾತೆ ಮಾಡುವಲ್ಲಿ ಕೊರಟಗೆರೆ ತಾಲ್ಲೂಕು ರಾಜ್ಯದಲ್ಲಿಯೇ ೬ನೇ ಸ್ಥಾನದಲ್ಲಿದೆ. ಕಂದಾಯ ಇಲಾಖೆಯ…
ಪಾವಗಡ : ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು ಹಾಗೂ ಪಂಚನೌಕರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೆ.ಉತ್ತಮ್ ಅವರ ಆಡಳಿತ ಶೈಲಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಶಾಸಕರಿಗೆ ಲಿಖಿತ ಅಹವಾಲು ಸಲ್ಲಿಸಿದ್ದಾರೆ. ಇ.ಒ ಅವರಿಂದ ನಿರಂತರ ಮಾನಸಿಕ ಒತ್ತಡ, ಅವಮಾನಕಾರಿ ಭಾಷೆ, ಬೆದರಿಕೆ ಹಾಗೂ ಅಧಿಕಾರ ದುರುಪಯೋಗ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಪಂಚಾಯಿತಿ ಆಡಳಿತ ವ್ಯವಸ್ಥೆಯೊಳಗಿನ ಗಂಭೀರ ಅಂತರಂಗ ಸಂಘರ್ಷ ಬಹಿರಂಗವಾಗಿದೆ. ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಇ.ಒ ಅವರು ಅಧಿಕಾರಿಗಳನ್ನು ಏಕವಚನದಲ್ಲಿ ನಿಂದಿಸುವುದು, ಸಭೆಗಳಲ್ಲಿ ಅವಾಚ್ಯ ಪದ ಬಳಸಿ ಕುಗ್ಗಿಸುವುದು ಹಾಗೂ ಬೆದರಿಕೆಯ ಭಾಷೆಯಲ್ಲಿ ಮಾತನಾಡುವುದು ರೂಢಿಯಾಗಿದೆ ಎಂದು ಪಿಡಿಒ ಮತ್ತು ಸಿಬ್ಬಂದಿ, ನೌಕರರ ಒಕ್ಕೂಟ ಆರೋಪಿಸಿದ್ದಾರೆ. ಇಒ ಉತ್ತಮ್ ಅವರು ಬುದ್ದಿವಂತರೇ ಸರಿ ಯಾಕಿಷ್ಟು ಅಹಂ ಅಂತ ಮಾತನಾಡ್ತಿದ್ದಾರೆ. ಇನ್ನು ಮಹಿಳಾ ಸಿಬ್ಬಂದಿ ಹಾಗೂ ಹಿರಿಯ…
ಕೊರಟಗೆರೆ : ದೇವರ ದರ್ಶನ ಎಂದರೆ ಕಾಲುನಡಿಗೆಯಲ್ಲೇ ಆಗಬೇಕು ಎಂಬ ದೃಢ ನಂಬಿಕೆ, ಶ್ರಮ—ಭಕ್ತಿ–ಸಂಕಲ್ಪದೊಂದಿಗೆ ರಾಮನಗರ ಜಿಲ್ಲೆಯ ಮಾಗಡಿಯಿಂದ ಮಂತ್ರಾಲಯದವರೆಗೆ ಕಾಲುನಡಿಗೆಯಲ್ಲಿ ಸಾಗುತ್ತಿರುವ ಶ್ರೀ ಗುರುರಾಜ ಪಾದಯಾತ್ರೆ ಸೇವಾ ಸಮಿತಿಯ ಯಾತ್ರೆ ಇಡೀ ರಾಜ್ಯದ ಗಮನ ಸೆಳೆದಿದೆ. ಲೋಕ ಕಲ್ಯಾಣಾರ್ಥವಾಗಿ ಕಳೆದ 14 ವರ್ಷಗಳಿಂದ ನಿರಂತರವಾಗಿ ಪಾದಯಾತ್ರೆಗಳನ್ನು ಆಯೋಜಿಸುತ್ತಿರುವ ಈ ಸಮಿತಿ ಭಕ್ತರ ಮೆಚ್ಚುಗೆಗೆ ಪಾತ್ರವಾಗಿದೆ. ಆರ್ಥಿಕ ಸ್ಥಿತಿ, ಆರೋಗ್ಯ ಸಮಸ್ಯೆ, ಊಟ–ವಾಸ್ತವ್ಯದ ಚಿಂತೆಗಳ ಕಾರಣದಿಂದ ಯಾತ್ರೆ ಕೈಗೊಳ್ಳಲಾಗದವರನ್ನೂ ಒಳಗೊಂಡು, ಪೂರ್ವನಿಯೋಜಿತ ಚಲಿಸುವ ನಕ್ಷೆ, ತಂಗುವ ಸ್ಥಳಗಳ ವ್ಯವಸ್ಥೆಯೊಂದಿಗೆ ಪಾದಯಾತ್ರೆಯನ್ನು ಯಶಸ್ವಿಯಾಗಿ ಸಂಘಟಿಸುವುದು ಈ ಸಮಿತಿಯ ವಿಶೇಷತೆ. ಹಿರಿಯ ಮುತ್ಸದ್ದಿ ಸದಾಶಿವ ಶೆಟ್ಟರ್ ಅವರ ಮಾರ್ಗದರ್ಶನದಲ್ಲಿ, ಸಮಿತಿಯ ಗೌರವಾಧ್ಯಕ್ಷ ಸೀಬಣ್ಣಾಚಾರ್, ಅಧ್ಯಕ್ಷ ಗುರುಸಿದ್ದಪ್ಪ ನೇತೃತ್ವದಲ್ಲಿ ಈಗಾಗಲೇ ಕಾಶಿ, ತಿರುಪತಿ, ಧರ್ಮಸ್ಥಳ, ಮಲೆ ಮಹದೇಶ್ವರ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಿಗೆ ಕಾಲುನಡಿಗೆಯಲ್ಲಿ ಪಾದಯಾತ್ರೆ ಪೂರ್ಣಗೊಳಿಸಲಾಗಿದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಯಾತ್ರೆಗಳನ್ನು ಕೈಗೊಳ್ಳುವ ಉದ್ದೇಶವನ್ನು ಸಮಿತಿ ಹೊಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ಕೊರಟಗೆರೆ : ಮಕ್ಕಳಿಗಾಗಿ ಪೋಷಕರು ಹಣ ಸಂಪಾದಿಸುವುದಕ್ಕಿಂತ, ಸರಿಯಾದ ಸಮಯದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥ ಸ್ವಾಮೀಜಿ ಕರೆ ನೀಡಿದರು. ಪಟ್ಟಣದ ಹೊರ ವಲಯದಲ್ಲಿರುವ ಜೆ.ಕೆ. ಮೆಮೋರಿಯಲ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಮಕ್ಕಳನ್ನು ಧರ್ಮ ಮತ್ತು ಸಂಸ್ಕಾರದ ಹಾದಿಯಲ್ಲಿ ನಡೆಸುವ ಜವಾಬ್ದಾರಿ ಪೋಷಕರು ಮತ್ತು ಶಾಲೆಗಳ ಮೇಲಿದೆ, ಆಟ-– ಪಾಠಗಳಿಂದ ವಂಚಿತ ಮಕ್ಕಳ ಜೀವನ ಶೂನ್ಯವಾಗುತ್ತದೆ. ಇಂದಿನ ಮಕ್ಕಳು ಅತ್ಯಂತ ಬುದ್ಧಿವಂತರು, ಅವರನ್ನು ಕೇವಲ ಸ್ಪರ್ಧಾತ್ಮಕ ಜಗತ್ತಿಗೆ ತಯಾರಿಸುವುದಷ್ಟೇ ಅಲ್ಲ, ಸಂಸ್ಕಾರಯುತ ಶಿಕ್ಷಣ ನೀಡುವುದು ಕೂಡ ಅತ್ಯಾವಶ್ಯಕ ಎಂದು ಸಲಹೆಯಿತ್ತರು. ಕ್ಷೇತ್ರ ಶಿಕ್ಷಣಾಧಿಕಾರಿ ಫೈರೋಜ್ ಬೇಗಂ ಮಾತನಾಡಿ, ಪ್ರಪಂಚದ ಅತ್ಯುತ್ತಮ ಗ್ರಂಥವೆಂದರೆ ಭಗವದ್ಗೀತೆ ಇದು ಮಕ್ಕಳಿಗೆ ಜೀವನದ ಅನುಭವಬೋಧನೆ ನೀಡುತ್ತದೆ, ಮಕ್ಕಳಲ್ಲಿ ಉತ್ತಮ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕು, ಆರೋಗ್ಯವಂತ ಮಗುವಿನಿಂದ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ, ಆದ್ದರಿಂದ ಪೋಷಕರು ಮಕ್ಕಳ…
ತಿಪಟೂರು: ತಾಲ್ಲೂಕಿನ ಕಂಚಿಗಾರನಹಳ್ಳಿ ಗ್ರಾಮದ ನಿವಾಸಿ, ಮೂಳೆಯ ಕ್ಯಾನ್ಸರ್ ನಿಂದ ಬಳಲುತ್ತಿರುವ ಲತಾ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆರ್ಥಿಕ ಸಹಾಯ ಹಸ್ತಚಾಚಲಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಲತಾ ಅವರ ಚಿಕಿತ್ಸೆಗಾಗಿ 25 ಸಾವಿರ ರೂಪಾಯಿ ಸಹಾಯಧನವನ್ನು ಮಂಜೂರು ಮಾಡಿದ್ದು, ಈ ಮೊತ್ತದ ಡಿಡಿಯನ್ನು (DD) ಯೋಜನಾಧಿಕಾರಿ ಉದಯ್ ಕೆ. ಅವರು ಸಂತ್ರಸ್ತೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯೋಜನಾಧಿಕಾರಿ ಉದಯ್ ಕೆ., “ಆರೋಗ್ಯವು ಭಾಗ್ಯದಂತಿದ್ದು, ಭಗವಂತನು ಲತಾ ಅವರಿಗೆ ಶೀಘ್ರವಾಗಿ ಪೂರ್ಣ ಆರೋಗ್ಯವನ್ನು ಕರುಣಿಸಲಿ” ಎಂದು ಹಾರೈಸಿದರು. ಕಷ್ಟದ ಸಮಯದಲ್ಲಿ ಬಡ ಕುಟುಂಬಗಳಿಗೆ ಆಸರೆಯಾಗುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಹುಚ್ಚಯ್ಯ, ಚಿಕ್ಕಣ್ಣ, ಲೋಕೇಶ್, ವಲಯ ಮೇಲ್ವಿಚಾರಕಿ ರಮ್ಯಾ, ಜ್ಞಾನವಿಕಾಸ ಸಮನ್ವಯಾಧಿಕಾರಿ ಪದ್ಮಾವತಿ, ಸೇವಾಪ್ರತಿನಿಧಿ ಮಂಜುಳಾ ಹಾಗೂ ಧರ್ಮಸ್ಥಳ ಸಂಘದ ಪಾಲುದಾರ ಬಂಧುಗಳು ಉಪಸ್ಥಿತರಿದ್ದು, ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ…
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ತುಂಬು ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿ ತಹಶೀಲ್ದಾರ್ ಮುಖೇನಾ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಹುಬ್ಬಳ್ಳಿ ತಾಲೂಕಿನ ವೀರಾಪುರ ಗ್ರಾಮದ ಯುವತಿ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ತಂದೆಯೇ ಮಗಳು 7 ತಿಂಗಳು ತುಂಬು ಗರ್ಭಿಣಿ ಎನ್ನುವುದನ್ನು ನೋಡದೆ ಭೀಕರವಾಗಿ ಕೊಲೆ ಮಾಡಿರುವುದನ್ನು ದಲಿತ ಪರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಭೀಕರವಾಗಿ ಹತ್ಯೆ ಮಾಡಿದ ತಂದೆಗೆ ವಿಶೇಷ ಕಾನೂನು ರಚನೆ ಮಾಡಿ ಗಲ್ಲು ಶಿಕ್ಷೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಮಾದಿಗ ಸಮುದಾಯದ ಯುವಕ ಅಂತರ್ಜಾತಿ ವಿವಾಹವಾಗಿ ಒಂದೂವರೆ ವರ್ಷ ಕಳೆದಿದೆ. ಮಗಳು 7 ತಿಂಗಳ ತುಂಬು ಗರ್ಭಿಣಿ ಎನ್ನುವುದನ್ನು ನೋಡದೆ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ವಿಕೃತವಾಗಿ ಕೊಲೆ ಮಾಡಿದ ಪಾಪಿ ತಂದೆಗೆ ಸರ್ಕಾರ ವಿಶೇಷ ಕಾನೂನು ರಚಿಸಿ ಗಲ್ಲು ಶಿಕ್ಷೆಗೆ ಗುರಿ ಪಡಿಸುವಂತೆ ಸರ್ಕಾರಕ್ಕೆ ಒತ್ತಾಯ…
ಔರಾದ: ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಸಾಧಿಸುವ ಮತ್ತು ಪೊಲೀಸ್ ಇಲಾಖೆ ಹಾಗೂ ಜನರ ನಡುವಿನ ಬಾಂಧವ್ಯವನ್ನು ಬಲಪಡಿಸುವ ಉದ್ದೇಶದಿಂದ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಬುಧವಾರ ಸಂಜೆ “ಮನೆ ಮನೆಗೆ ಪೊಲೀಸ್” ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಂತಪುರ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಡಿ ಪೊಲೀಸ್ ಅಧಿಕಾರಿಗಳು ಗ್ರಾಮದ ಪ್ರತಿ ಮನೆಗೆ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿದರು. ಇದೇ ವೇಳೆ ವಿವಿಧ ಕಾನೂನು ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಇಲಾಖೆ ನೀಡುವ ಆದ್ಯತೆಯ ಬಗ್ಗೆ ತಿಳಿಸಿದರು. ಹೆಚ್ಚುತ್ತಿರುವ ಆನ್ಲೈನ್ ವಂಚನೆಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಯಿತು. ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಂತೆ ಜಾಗೃತಿ ಮೂಡಿಸಲಾಯಿತು. ರಸ್ತೆ ಸುರಕ್ಷತೆಗಾಗಿ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಲಾಯಿತು. ಸಂತಪುರ ಪೊಲೀಸ್ ಠಾಣೆಯ ಪಿ.ಎಸ್.ಐ ದಿನೇಶ್ ಅವರು ಮಾತನಾಡಿ, “ಪೊಲೀಸ್ ಮತ್ತು…