Subscribe to Updates
Get the latest creative news from FooBar about art, design and business.
- ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ
- ತುಮಕೂರು ಜಿಲ್ಲೆಯಲ್ಲಿ 19.39 ಲಕ್ಷ ಮತದಾರರಿಗೆ ಎಸ್ ಐಆರ್ ಅರ್ಜಿ ವಿತರಣೆ ಪ್ರಕ್ರಿಯೆ
- ‘ಮತ್ಸ್ಯವಾಹಿನಿ’ ಇ–ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ
- ಮಧ್ಯಾಹ್ನದ ಊಟದ ರುಚಿ ಹೆಚ್ಚಿಸಲು ಇಲ್ಲಿವೆ 6 ಸುಲಭ ಚಟ್ನಿ ರೆಸಿಪಿಗಳು!
- ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.
- ಎಸ್ ಐಆರ್ ಪ್ರಕ್ರಿಯೆ ನಿರ್ಲಕ್ಷಿಸದೇ ಗಂಭೀರವಾಗಿ ಪರಿಗಣಿಸಿ: ಬಿಜೆಪಿ ಮುಖಂಡ ಸ್ಫೂರ್ತಿ ಚಿದಾನಂದ್ ಮನವಿ
- ತುಮಕೂರು: ಜುಲೈ 10 ರಿಂದ 3 ದಿನಗಳ ಕಾಲ ‘ಬಿಲ್ಡ್ ಟೆಕ್-2026’ ಬೃಹತ್ ವಸ್ತು ಪ್ರದರ್ಶನ
- ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಬಳಿ ಪ್ರತಿಭಟನೆ: ಕಲಾಪದಿಂದ ಹೊರಗುಳಿದ ವಕೀಲರು
Author: admin
ಚೀನಾ: ಜಲಾಂತರ್ಗಾಮಿ ನೌಕೆಯ ಆಮ್ಲಜನಕ ವ್ಯವಸ್ಥೆಯಲ್ಲಿನ ಅಸಮರ್ಪಕ ಕಾರ್ಯದಿಂದಾಗಿ ಜಲಾಂತರ್ಗಾಮಿಗಳು ಸಾವನ್ನಪ್ಪಿದ್ದಾರೆ. ಹಳದಿ ಸಮುದ್ರ ( Yellow Sea) ದಲ್ಲಿ ಕನಿಷ್ಠ 55 ಚೀನೀ ನಾವಿಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಪರಮಾಣು ಜಲಾಂತರ್ಗಾಮಿ ನೌಕೆಯನ್ನು ಹಳದಿ ಸಮುದ್ರದಲ್ಲಿ ಬ್ರಿಟಿಷ್ ಮತ್ತು ಅಮೇರಿಕನ್ ಹಡಗುಗಳನ್ನು ಹಿಡಿಯುವ ಉದ್ದೇಶದಿಂದ ನಿರ್ಮಿಸಲಾಗಿತ್ತು. ಹಳದಿ ಸಮುದ್ರದಲ್ಲಿ ವಿದೇಶಿ ಹಡಗುಗಳಿಗಾಗಿ ತಯಾರಿಸಿದ ಬಲೆಯಲ್ಲಿ ಚೀನಾದ ಪರಮಾಣು ಜಲಾಂತರ್ಗಾಮಿ ಸಿಕ್ಕಿಬಿದ್ದಿದೆ. ಆದರೆ, ಈ ಘಟನೆಯನ್ನು ಒಪ್ಪಿಕೊಳ್ಳಲು ಚೀನಾ ಅಧಿಕೃತವಾಗಿ ನಿರಾಕರಿಸಿದೆ. ಅಲ್ಲದೆ, ಜಲಾಂತರ್ಗಾಮಿ ನೌಕೆಗೆ ಯಾವುದೇ ಅಂತಾರಾಷ್ಟ್ರೀಯ ನೆರವು ಪಡೆಯಲು ಚೀನಾ ನಿರಾಕರಿಸಿದೆ. ಆ. 21 ರಂದು ಹಳದಿ ಸಮುದ್ರದಲ್ಲಿ ಸಂಭವಿಸಿದ ಅಪಘಾತ ಜಲಾಂತರ್ಗಾಮಿ ನೌಕೆಯ ಆಮ್ಲಜನಕ ವ್ಯವಸ್ಥೆಯ ಅಸಮರ್ಪಕ ಕಾರ್ಯದಿಂದಾಗಿ ನಾವಿಕರು ಸಾವನ್ನಪ್ಪಿದ್ದಾರೆ ಎಂದು ಯುಕೆ ಗೌಪ್ಯ ವರದಿ ತಿಳಿಸಿದೆ. ‘ಆಗಸ್ಟ್ 21 ರಂದು ಹಳದಿ ಸಮುದ್ರದಲ್ಲಿ ಮಿಷನ್ ನಡೆಸುತ್ತಿರುವಾಗ ಜಲಾಂತರ್ಗಾಮಿ ಅಪಘಾತಕ್ಕೀಡಾಗಿದೆ ಎಂದು ಗುಪ್ತಚರ ವರದಿಗಳು ತಿಳಿಸಿವೆ. ಘಟನೆಯು ಬೆಳಗ್ಗೆ 8:12 ಕ್ಕೆ ಸಂಭವಿಸಿದೆ. ಅಪಘಾತದಲ್ಲಿ 55 ನಾವಿಕರು…
ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ. ದೆಹಲಿ-ಎನ್ ಸಿಆರ್, ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನ ಪ್ರಬಲ ಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂಬುದು ಪ್ರಾಥಮಿಕ ತೀರ್ಮಾನ. ಭೂಕಂಪನದ ಕೇಂದ್ರಬಿಂದು ನೇಪಾಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ ಭೂಕಂಪದ ಅನುಭವ ಎರಡು ಬಾರಿ ಸಂಭವಿಸಿದೆ. ಮಧ್ಯಾಹ್ನ 2.25ಕ್ಕೆ ಮೊದಲ ಆಘಾತ ಸಂಭವಿಸಿದೆ. ಇದರ ಪ್ರಮಾಣ 4.46 ಆಗಿತ್ತು. ಅರ್ಧ ಗಂಟೆ ನಂತರ ಮಧ್ಯಾಹ್ನ 2.51ಕ್ಕೆ ಮತ್ತೆ ಕಂಪಿಸಿದ ಅನುಭವವಾಯಿತು. ಭೂಕಂಪದ ತೀವ್ರತೆ 6.2 ಆಗಿತ್ತು. ಭಯಭೀತರಾದ ಜನರು ಕಚೇರಿ, ಮನೆಗಳಿಂದ ಹೊರಗೆ ಓಡಿ ಬಂದರು. ಉತ್ತರಾಖಂಡ ಮತ್ತು ಯುಪಿ ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ.
ಕಾಂಪೌಂಡ್ ಆರ್ಚರಿ ಮಿಶ್ರ ತಂಡ ಸ್ಪರ್ಧೆಯಲ್ಲಿ ಭಾರತದ ಜ್ಯೋತಿ ಸುರೇಖಾ ವೆನ್ನಮ್ ಮತ್ತು ಪ್ರವೀಣ್ ಓಜಾಸ್ ಡಿಯೋಟಾಲೆ ಚಿನ್ನ ಗೆದ್ದರು. ಪ್ರವೀಣ್ ಡಿಯೋಟಾಲೆ 9 ಅಂಕ ಗಳಿಸಿದರೆ, ಜಿಟೋಹಿ ವೆನಮ್ಮಮ್ ಮೂರನೇ ನಿಮಿಷದಲ್ಲಿ 119-119 ಅಂಕಗಳಿಂದ ದಕ್ಷಿಣ ಕೊರಿಯಾದ ಚಾವೊನ್ ಸೋ ಮತ್ತು ಜೇಹೂನ್ ಜೂ ವಿರುದ್ಧ ಜಯ ಸಾಧಿಸಿದರು. ಭಾರತ 80-79 ಅಂಕಗಳಿಂದ ಕೊರಿಯಾ ವಿರುದ್ಧ ಜಯ ಸಾಧಿಸಿ ಚಿನ್ನದ ಪದಕವನ್ನು ಏಷ್ಯನ್ ಗೇಮ್ಸ್ ಬಿಲ್ಲುಗಾರಿಕೆಯಲ್ಲಿ ಗಳಿಸಿದರು.
ಸಿಕ್ಕಿಂನಲ್ಲಿ ದಿಢೀರ್ ಪ್ರವಾಹ. ಲೋನಕ್ ಸರೋವರ ಪ್ರದೇಶದಲ್ಲಿ ಮೇಘ ಸ್ಫೋಟದಿಂದಾಗಿ ತೀಸ್ತಾ ನದಿಯಲ್ಲಿ ಪ್ರವಾಹ ಉಂಟಾಗಿದೆ. ಸುಮಾರು 23 ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಲಚನ್ ಕಣಿವೆ ಜಲಾವೃತವಾಯಿತು. ಕಣಿವೆಯಲ್ಲಿನ ಸೇನಾ ಶಿಬಿರಗಳು ಪ್ರವಾಹಕ್ಕೆ ತುತ್ತಾಗಿವೆ. ಈ ಪ್ರದೇಶದಲ್ಲಿ ಯೋಧರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ತೀಸ್ತಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸಿಂಘಟಮ್ ಕಾಲುಸಂಕ ನದಿಯು ತನ್ನ ದಡದಲ್ಲಿ ಉಕ್ಕಿ ಹರಿದ ನಂತರ ಕುಸಿದಿದೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ನದಿಯ ಕೆಳಗಿನ ಜಲಾನಯನ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಿದೆ. ಸಿಕ್ಕಿಂ ಸರ್ಕಾರವು ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ ಮತ್ತು ತೀಸ್ತಾ ನದಿಯ ದಡದಲ್ಲಿ ವಾಸಿಸುವ ಜನರಿಗೆ ಪ್ರದೇಶದಿಂದ ದೂರವಿರಲು ಹೇಳಿದೆ.
ಬೆಂಗಳೂರು: ವಿಜಯನಗರ ಬಿಟಿಎಂ, ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ. ಐಟಿ ಅಧಿಕಾರಿಗಳ 15 ಕ್ಕು ಹೆಚ್ಚು ತಂಡಗಳಿಂದ ದಾಳಿ ನಡೆಸಿದ್ದು, ಚೆನ್ನೈ, ದೆಹಲಿಯಿಂದ ರಾತ್ರೋರಾತ್ರಿ ಬೆಂಗಳೂರಿಗೆ ಬಂದು ಐಟಿ ಅಧಿಕಾರಿಗಳು ದಾಳಿ ನಡೆಸಿದೆ. ತೆರಿಗೆ ವಂಚನೆ ಮಾಡಿರೋ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ ಮನೆ ಮೇಲೆ ದಾಳಿ ನಡೆಸಿರುವ ಬಗ್ಗೆ ಮಾಹಿತಿ ಇದ್ದು, ಸದ್ಯ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಕರ್ನಾಟಕ ತಾಲಿಬಾನ್ ಆಗುವುದು ಖಚಿತ-ನಿಶ್ಚಿತ ಎಂದು ಬಿಜೆಪಿ ಹೇಳಿದೆ. ವೋಟಿಗಾಗಿ ಏನನ್ನು ಬೇಕಾದರೂ ಮಾಡಲು ಹೇಸದ ಕಾಂಗ್ರೆಸ್, ರಾಜ್ಯದಲ್ಲಿನ ಹಿಂದೂಗಳನ್ನು ಒಕ್ಕಲೆಬ್ಬಿಸುವುದಕ್ಕೂ ಹಿಂದುಮುಂದು ನೋಡುವುದಿಲ್ಲ. ಕರ್ನಾಟಕದ ಹಿಂದೂಗಳು ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಕರ್ನಾಟಕ ತಾಲಿಬಾನ್ ಆಗುವುದು ಖಚಿತ-ನಿಶ್ಚಿತ ಎಂದು ಬಿಜೆಪಿ ಟ್ವಿಟ್ ಮಾಡಿದೆ.
ಮಹಾರಾಷ್ಟ್ರದ ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಹಾಗೂ ಸಿಬ್ಬಂದಿ ಕೊರತೆಯಿಂದ ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಮುಂದುವರೆಯುತ್ತಲೇ ಇದೆ. ಮೃತಪಟ್ಟ ನವಜಾತ ಶಿಶುಗಳ ಸಂಖ್ಯೆ 31 ಕ್ಕೇರಿದೆ. ನಿನ್ನೆ ಒಂದೇ ದಿನ 12 ನವಜಾತ ಶಿಶುಗಳು ಸೇರಿದಂತೆ 24 ಮಂದಿ ಸಾವನ್ನಪ್ಪಿದ್ದರು. ಇದೀಗ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಇದು ಇನ್ನಷ್ಟು ಹೆಚ್ಚಾಗಬಹುದು ಎಂದು ತಿಳಿದುಬಂದಿದೆ. ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅಶೋಕ್ ಚೌವ್ಹಾಣ್, ನಾಂದೇಡ್ ಆಸ್ಪತ್ರೆಯಲ್ಲಿ ರೋಗಿಗಳ ಸ್ಥಿತಿ ನರಕಸದೃಶವಾಗಿದೆ. ಕಡೆ ಪಕ್ಷ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಘಟನೆಯ ಬಗ್ಗೆ ಮಾಹಿತಿಯನ್ನೂ ಪಡೆದುಕೊಂಡಿಲ್ಲ.ಆಸ್ಪತ್ರೆಯ ಡೀನ್ ಡಾ.ವಾಕೋಡೆ ಅವರು ರೋಗಿಗಳನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇರುವ ಸಿಬ್ಬಂದಿಗಳು ಹಾಗೂ ರೋಗಿಗಳ ಸಂಖ್ಯೆಗೆ ಸಾಕಷ್ಟು ವ್ಯತ್ಯಾಸವಿದೆ. ಸರ್ಕಾರ ಕೂಡಲೇ ಈ ಬಗ್ಗೆ ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ. ಕಳೆದ ರಾತ್ರಿಯಿಂದ ಈವರೆಗೂ 4 ನವಜಾತ ಶಿಶು ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ದುರದೃಷ್ಟವೆಂದರೆ ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾತಾ ಅಮೃತಾನಂದಮಯಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿ, ಅಮ್ಮ ಪ್ರೀತಿ, ಸಹಾನುಭೂತಿ, ಸೇವೆ ಮತ್ತು ತ್ಯಾಗದ ಮೂರ್ತರೂಪ ಎಂದು ಹೇಳಿದರು. ವೀಡಿಯೊ ಸಂದೇಶದ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಮಾತಾ ಅಮೃತಾನಂದಮಯಿ ಜೀ ಅವರ 70 ನೇ ಜನ್ಮದಿನದಂದು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಹಾರೈಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಹಾಗೂ ಅವರು ಸೇವೆ ಮತ್ತು ಆಧ್ಯಾತ್ಮಿಕತೆಯ ಸಂಕೇತವಾಗಿದೆ ಎಂದು ಹೇಳಿದರು. 30 ವರ್ಷಗಳಿಗೂ ಹೆಚ್ಚು ಕಾಲ ಅಮ್ಮಾ ಅವರೊಂದಿಗಿನ ಒಡನಾಟದ ಮೇಲೆ ಬೆಳಕು ಚೆಲ್ಲುವ ಪ್ರಧಾನಿ, ಕಛ್ ನಲ್ಲಿ ಭೂಕಂಪದ ನಂತರ ಅವರ ಜೊತೆ ದೀರ್ಘಕಾಲ ಕೆಲಸ ಮಾಡಿದ್ದನ್ನು ನೆನಪಿಸಿಕೊಂಡರು. ಅಮ್ಮನ 60ನೇ ಹುಟ್ಟುಹಬ್ಬವನ್ನು ಅಮೃತಪುರಿಯಲ್ಲಿ ಆಚರಿಸಿದ್ದನ್ನು ನೆನಪಿಸಿಕೊಂಡರು. ಇಂದಿಗೂ, ಅಮ್ಮನ ನಗುತ್ತಿರುವ ಮುಖದ ಪ್ರೀತಿಯ ಸ್ವಭಾವವು ಮೊದಲಿನಂತೆಯೇ ಇದೆ ಎಂದು ಪ್ರಧಾನಿ ಮೋದಿ ಹೇಳಿದರು. ಪ್ರಧಾನಿ ಮೋದಿ ಅವರು ಅಮ್ಮನ ಅನುಯಾಯಿಗಳು ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳಿಂದ ಒಟ್ಟುಗೂಡಿದ ಪ್ರತಿಯೊಬ್ಬರನ್ನು ಅಭಿನಂದಿಸಿದರು…
ಅಮೃತಸರ: ಪಂಜಾಬ್ ನ ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್ ಗೆ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ, ದೇವರ ದರ್ಶನ ಪಡೆದ ಬಳಿಕ ರಾಹುಲ್ ಗಾಂಧಿಯವರು ಕರಸೇವೆಯಲ್ಲಿ ತೊಡಗಿಕೊಂಡರು. ಬಳಿಕ ಕಾಂಗ್ರೆಸ್ ಸದಸ್ಯರು ಹಾಗೂ ಗುರುದ್ವಾರದ ಸ್ವಯಂಸೇವಕರ ಜೊತೆ ತಾವೂ ಪಾತ್ರೆ ತೊಳೆದರು. ಈ ವೇಳೆ ರಾಹುಲ್ ಗಾಂಧಿ ಅವರು ತಲೆಗೆ ನೀಲಿ ಬಣ್ಣದ ಕರವಸ್ತ್ರ ಸುತ್ತಿದ್ದಾರೆ. ರಾಹುಲ್ ಗಾಂಧಿಯವರು ಇಂದು ರಾತ್ರಿ ನಗರದಲ್ಲಿಯೇ ಉಳಿದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ. ಇದು ಅವರ ಖಾಸಗಿ ಭೇಟಿಯಾಗಿದೆ. ಹೀಗಾಗಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಭೇಟಿಗೆ ಅವಕಾಶ ನೀಡಿರಲಿಲ್ಲ. ಕಾಂಗ್ರೆಸ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷ ನಡುವಿನ ಉದ್ವಿಗ್ನತೆಯ ನಡುವೆ ರಾಹುಲ್ ಗಾಂಧಿ ಅವರ ಅಮೃತಸರ ಭೇಟಿ ಕುತೂಹಲ ಹುಟ್ಟು ಮಾಡಿದೆ.
ಶಿವಮೊಗ್ಗ: ಸೆಪ್ಟೆಂಬರ್ 30ರಂದು ನಡೆದ ಈದ್ ಮೆರವಣಿಗೆ ವೇಳೆ ಸಂಭವಿಸಿದ ಘರ್ಷಣೆಗೆ ಸಂಬಂಧಿಸಿದಂತೆ ತಲವಾರು ಝಳಪಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಮಧು ಬಂಗಾರಪ್ಪ ನೀಡಿರುವ ಹೇಳಿಕೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಗಾಯಾಳುಗಳ ಭೇಟಿ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಿವಮೊಗ್ಗದಲ್ಲಿ ದೊಡ್ಡ ಮಟ್ಟದಲ್ಲಿ ಗಲಭೆ ಏನು ನಡೆದಿಲ್ಲ. ಸಾರ್ಜನಿಕರು ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ. ಶಿವಮೊಗ್ಗದಲ್ಲಿ ಈ ಘಟನೆ ಆಗಬಾರದಿತ್ತು. ಗಾಯಾಳುಗಳಿಗೆ ಪರಿಹಾರ ನೀಡುವ ಬಗ್ಗೆ ಚರ್ಚೆ ಮಾಡುತ್ತೇನೆ. ಕೊಡುವುದಾದರೆ ಸರ್ಕಾರದಿಂದ ಕೊಡಿಸುತ್ತೇನೆ. ಪೊಲೀಸರು ಪರಿಸ್ಥಿತಿಯನ್ನು ಚೆನ್ನಾಗಿ ನಿಭಾಯಿಸಿದ್ದಾರೆ. ಶಿವಮೊಗ್ಗ ಶಾಂತಿಯಿಂದ ಇದೆ, ಜನ ಸಹಕರಿಸುತ್ತಿದ್ದಾರೆ. ಕಾನೂನು ಹದ್ದುಬಸ್ತು ಮಾಡಬೇಕು. ಅಧಿಕಾರಿಗಳು ಆ ಕೆಲಸ ಮಾಡುತ್ತಿದ್ದಾರೆ. ಗಣಪತಿ ಹಬ್ಬ ಚೆನ್ನಾಗಿ, ಅದ್ಧೂರಿಯಾಗಿ ಆಯ್ತು. ಈದ್ ಮಿಲಾದ್ ಮೆರವಣಿಗೆ ಕೂಡ ಚೆನ್ನಾಗಿ ಆಯ್ತು. ಆದರೆ, ಕೊನೆಯಲ್ಲಿ ಕೆಲವರಿಂದ ಅಶಾಂತಿ ಉಂಟಾಗಿದೆ. ಗಲಭೆ ಹಿನ್ನೆಲೆಯಲ್ಲಿ 24 ಎಫ್ ಐಆರ್ ಆಗಿದೆ, 60 ಮಂದಿಯನ್ನು ಬಂಧಿಸಲಾಗಿದೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ನಾನು…