Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ಪೊಲೀಸ್ ಪರೇಡ್ ನಲ್ಲಿ ಅಥವಾ ಗೌರವ ವಂದನೆ ನಡೆಯುವಾಗ ಹಿಂದಿಯಲ್ಲಿ ಕೇಳಿಬರುತ್ತಿದ್ದ ಸಾವಧಾನ್ ವಿಶ್ರಾಮ್ ಎಂಬ ಕಮಾಂಡ್ ಗಳನ್ನು ಇನ್ಮುಂದೆ ಕನ್ನಡದಲ್ಲೇ ನೀಡಲು ನಗರ ಪೊಲೀಸರು ಮುಂದಾಗಿದ್ದಾರೆ. ಹಿಂದಿ ಬದಲಿಗೆ ಕನ್ನಡದಲ್ಲಿ ಕಮಾಂಡ್ ನೀಡುವ ಪದ್ಧತಿಗೆ ನಾಂದಿ ಹಾಡಿದ್ದಾರೆ. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಪೊಲೀಸ್ ಸಿಬ್ಬಂದಿ ಕನ್ನಡದಲ್ಲೇ ಕಮಾಂಡ್ ನೀಡಲಾಗುತ್ತಿದೆ. ಇದಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ಯವಾಗುತ್ತಿದೆ.
ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಆದೇಶಿದೆ. ಅನುಮತಿ ಪಡೆಯದೆ ದುಡ್ಡು ಖರ್ಚು ಮಾಡಿದ್ದಾರೆ. ಸಮರ್ಪಕ ದಾಖಲೆ ನೀಡಿಲ್ಲ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಸಿಂಧೂರಿ ವಿರುದ್ಧ ತನಿಖೆಗೆ ನಿವೃತ್ತ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ, ಬಿಬಿಎಂಪಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಿ ಸರ್ಕಾರ ಆದೀಶಿಸಿದೆ.
ಮನುಷ್ಯರ ಬಗ್ಗೆ ಬೇಧ ಭಾವ ಇರುತ್ತೆ ಅದು ಧರ್ಮ ಅಲ್ಲ ಎಂದು ಕಂದಾಯ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಮ್ ಪುರದಲ್ಲಿ ಎಫ್ ಐಆರ್ ದಾಖಲಾದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಸಂವಿಧಾನ ನನ್ನ ಧರ್ಮ ಅಂದಿದ್ದಕ್ಕೆ ಎಫ್ಐಆರ್ ಆಗಿದೆ. ಸಂವಿಧಾನದಲ್ಲಿ ಸಮಾನತೆ ಇದೆ, ಸಮಾನವಾದ ಅವಕಾಶವಿದೆ. ಸಮಾನವಾದ ಬದಕು ಕೋಡುವ ನಿಯಮ ಇದೆ, ಕಾನೂನು ಇದೆ. ಇದು ನನ್ನ ಧರ್ಮ ಅಂದಿದ್ದಕ್ಕೆ ಕೇಸ್ ಮಾಡಿದ್ರೆ ಮಾಡಿಕೊಳ್ಳಲಿ, ನನಗೇನು ಎಂದು ಹೇಳಿದರು. ಉದಯನಿಧಿ ಸ್ಟಾಲಿನ್ ಹೇಳಿದ್ದು, ನಾನು ಹೇಳಿದ್ದು ಅಜಗಜಾಂತರ ವ್ಯತ್ಯಾಸ ಇದೆ ಎಂದು ಕಂದಾಯ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾವುದಾದರೂ ಒಂದು ಧರ್ಮದ ಬಗ್ಗೆ ಮಾತನಾಡಿದ್ದೀನಾ ಎಂದರು. ಮನುಷ್ಯರ ಬಗ್ಗೆ ಬೇಧ ಭಾವ ಇರುತ್ತೆ ಅದು ಧರ್ಮ ಅಲ್ಲ. ಇದರಲ್ಲಿ ಏನು ತಪ್ಪಿದೆ. ಇದನ್ನು ಮೊದಲು ಅವರು ತಿಳಿದುಕೊಳ್ಳಲಿ. ಬಸವಣ್ಣ, ಅಂಬೇಡ್ಕರ್ ಪ್ರಬುದ್ಧ ಭಾರತ ನಿರ್ಮಾಣ ಮಾಡಲು ಹೇಳಿದ್ದರು. ಪ್ರಬುದ್ಧತೆ ಇವರು…
ಮೈಸೂರು:ನೆರಳು ಬೆಳಕು ಗ್ಯಾಲರಿ, ಕಾಫಿ ಸಿಟಿಯಲ್ಲಿ ಸೆಪ್ಟಂಬರ್ 9 ರಿಂದ ಸೆಪ್ಟಂಬರ್ 17ರವರೆಗೆ “ಕೀಟಗಳ ಪ್ರಣಯ ಪ್ರಪಂಚ’’ -ಮ್ಯಾಕ್ರೋ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ. 09-09-2023ರ ಶನಿವಾರ ಸಂಜೆ 04 ಗಂಟೆಗೆ ವಿಜಯನಗರ 2ನೇ ಹಂತದ ಅಂಬರೀಷ್ ರಸ್ತೆಯಲ್ಲಿರುವ ನೆರಳು ಬೆಳಕು ಗ್ಯಾಲರಿ – ಕಾಫಿ ಸಿಟಿಯಲ್ಲಿ“ಕೀಟಗಳ ಪ್ರಣಯ ಪ್ರಪಂಚ’’ ಛಾಯಾಚಿತ್ರ ಪ್ರದರ್ಶನ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಂಡ್ಯ ನಿವೃತ್ತ ಪ್ರಾಂಶುಪಾಲರು ಹಾಗೂ ಛಾಯಾಗ್ರಾಹಕರಾದ ಲೀಲಾ ಅಪ್ಪಾಜಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮ್ಯಾಕ್ರೋ ಫೋಟೋಗ್ರಾಫರ್ ಗಿರೀಶ್ ಗೌಡ ಆಗಮಿಸಲಿದ್ದಾರೆ ಎಂದು ವಿನೋದ್ ಕುಮಾರ್ ವಿ ಕೆ ತಿಳಿಸಿದ್ದಾರೆ. ಮನುಷ್ಯನು ಚಂದ್ರ ಮತ್ತು ಮಂಗಳಗ್ರಹ ತಲುಪಿದರೂ ಇಲ್ಲಿನ ಕೀಟಲೋಕ ಮಾತ್ರ ಇನ್ನೂ ಪೂರ್ತಿದಕ್ಕಿಲ್ಲ. ಭೂಮಿಯಲ್ಲಿರುವ ಎಲ್ಲ ಕೀಟಗಳ ಪಟ್ಟಿಮಾಡಲು ಸಾದ್ಯವಾಗಿಲ್ಲ. ನಮಗೆ ಗೊತ್ತಿರುವುದು ಕೇವಲ ಶೇಕಡ ಹತ್ತೊ ಇಪ್ಪತ್ತೊ ಅಷ್ಟೆ. ಮನುಷ್ಯನ ಕಡೆಗಣನೆ ಸಹಜವೇ ಆದರೂ ಅಲ್ಲಿನ ಕೌತುಕಗಳು ಬೆರಗು ಮೂಡಿಸುತ್ತವೆ. ಕೀಟಗಳ ಬದುಕಿನ ಹತ್ತಾರು ವಿಷಯಗಳಲ್ಲಿ ಅವುಗಳ ಪ್ರಣಯ ಲೋಕವು…
ಜಾಗತಿಕವಾಗಿ, 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಕ್ಯಾನ್ಸರ್ ಪ್ರಮಾಣವು 80% ರಷ್ಟು ಹೆಚ್ಚಾಗಿದೆ ಎಂದು ಅಧ್ಯಯನ ವರದಿಗಳು ತಿಳಿಸಿವೆ. ಕಳೆದ ಮೂವತ್ತು ವರ್ಷಗಳಲ್ಲಿ ಈ ಭಾರಿ ಹೆಚ್ಚಳವಾಗಿದೆ ಎಂದೂ ಅಧ್ಯಯನ ಹೇಳುತ್ತದೆ. ಸ್ಕಾಟ್ಲೆಂಡ್ನ ಎಡಿನ್ಬರ್ಗ್ ವಿಶ್ವವಿದ್ಯಾಲಯ ಮತ್ತು ಚೀನಾದ ಝೆಜಿಯಾಂಗ್ ಯೂನಿವರ್ಸಿಟಿ ಸ್ಕೂಲ್ ಆಫ್ ಮೆಡಿಸಿನ್ನ ಸಂಶೋಧಕರು ಈ ಅಧ್ಯಯನವನ್ನು ನಡೆಸಿದರು. ಬಿ.ಎಂ.ಜೆ. ಈ ಅಧ್ಯಯನವನ್ನು ಆಂಕೊಲಾಜಿ ಜರ್ನಲ್ನಲ್ಲಿ ಪ್ರಕಟಿಸಲಾಗಿದೆ. 29 ವಿವಿಧ ಕ್ಯಾನ್ಸರ್ಗಳನ್ನು ಆಧರಿಸಿ 204 ದೇಶಗಳಲ್ಲಿ ಈ ಅಧ್ಯಯನವನ್ನು ನಡೆಸಲಾಗಿದೆ. ಸ್ತನ ಕ್ಯಾನ್ಸರ್ ದರಗಳಲ್ಲಿ ಮತ್ತಷ್ಟು ಹೆಚ್ಚಳವನ್ನು ಅಧ್ಯಯನವು ಕಂಡುಹಿಡಿದಿದೆ. ವರದಿಯ ಪ್ರಕಾರ, ಸಾವಿನ ಪ್ರಮಾಣವು ಈ ವರ್ಗದ ಕ್ಯಾನ್ಸರ್ಗಿಂತ ಹೆಚ್ಚಾಗಿದೆ. ಯುವಜನರಲ್ಲಿ ಧ್ವನಿಪೆಟ್ಟಿಗೆಯ ಕ್ಯಾನ್ಸರ್ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಹೆಚ್ಚಾಗುತ್ತಿದೆ ಎಂದು ಅಧ್ಯಯನ ಹೇಳಿದೆ. 1990 ಮತ್ತು 2019 ರ ನಡುವೆ, ಈ ಕ್ಯಾನ್ಸರ್ಗಳ ದರಗಳಲ್ಲಿ ಸ್ಥಿರವಾದ ಹೆಚ್ಚಳ ಕಂಡುಬಂದಿದೆ. ಏತನ್ಮಧ್ಯೆ, ಆರಂಭಿಕ-ಆರಂಭಿಕ ಯಕೃತ್ತಿನ ಕ್ಯಾನ್ಸರ್ ಪ್ರಕರಣಗಳಲ್ಲಿ 2.88 ಪ್ರತಿಶತದಷ್ಟು ವಾರ್ಷಿಕ ಕುಸಿತವನ್ನು ದಾಖಲಿಸಲಾಗಿದೆ. ಕ್ಯಾನ್ಸರ್ ಪ್ರಮಾಣ…
ಫಿನ್ಲ್ಯಾಂಡ್ ವಿಶ್ವದ ಮೊದಲ ಡಿಜಿಟಲ್ ಪಾಸ್ಪೋರ್ಟ್ ಅನ್ನು ಪರೀಕ್ಷಿಸಲು ತಯಾರಿ ನಡೆಸುತ್ತಿದೆ. ಪಾಸ್ಪೋರ್ಟ್ ಸಂಬಂಧಿತ ವಿಷಯಗಳನ್ನು ಸುವ್ಯವಸ್ಥಿತಗೊಳಿಸಲು ಮತ್ತು ನಾಗರಿಕರಿಗೆ ಉತ್ತಮ ಪ್ರಯಾಣದ ಅನುಭವವನ್ನು ಒದಗಿಸಲು ಡಿಜಿಟಲ್ ಪಾಸ್ಪೋರ್ಟ್ ಅನ್ನು ಯುರೋಪಿಯನ್ ಯೂನಿಯನ್ ಪ್ರಾಯೋಗಿಕವಾಗಿ ನಡೆಸುತ್ತಿದೆ. ಇದು ಶೀಘ್ರದಲ್ಲೇ ಯುರೋಪಿನಾದ್ಯಂತ ಜಾರಿಗೆ ತರಲು ಉದ್ದೇಶಿಸಲಾಗಿದೆ. ಡಿಜಿಟಲ್ ಟ್ರಾವೆಲ್ ರುಜುವಾತುಗಳನ್ನು (DTC), ಪಾಸ್ಪೋರ್ಟ್ನ ಡಿಜಿಟಲ್ ರೂಪವನ್ನು ಪ್ರಾಯೋಗಿಕ ಆಧಾರದ ಮೇಲೆ ದೇಶದಲ್ಲಿ ಪರಿಚಯಿಸಲಾಗಿದೆ. ಸ್ಮಾರ್ಟ್ಫೋನ್ನಲ್ಲಿರುವ ಪಾಸ್ಪೋರ್ಟ್ ಅನ್ನು ಡಿಟಿಸಿ ಎಂದು ಕರೆಯಲಾಗುತ್ತದೆ. ಫಿನ್ನೈರ್ ಮತ್ತು ಫಿನ್ನಿಷ್ ಪೋಲೀಸರ ಸಹಕಾರದೊಂದಿಗೆ ಹೆಲ್ಸಿಂಕಿಯಲ್ಲಿ ಇದನ್ನು ಅಳವಡಿಸಲಾಗಿದೆ. 2023ರ ಅಂತ್ಯದ ವೇಳೆಗೆ ಕ್ರೊಯೇಷಿಯಾದಲ್ಲೂ ಡಿಜಿಟಲ್ ಪಾಸ್ಪೋರ್ಟ್ ಜಾರಿಯಾಗಲಿದೆ ಎಂಬ ವರದಿಗಳಿವೆ. 2030 ರ ವೇಳೆಗೆ, ಯುರೋಪಿನ ಜನಸಂಖ್ಯೆಯ 80 ಪ್ರತಿಶತದಷ್ಟು ಜನರು ಡಿಜಿಟಲ್ ಪಾಸ್ಪೋರ್ಟ್ಗಳಿಗೆ ಬದಲಾಗುವ ನಿರೀಕ್ಷೆಯಿದೆ. ಡಿಜಿಟಲ್ ಪಾಸ್ಪೋರ್ಟ್ಗಳು ಭದ್ರತೆಯಲ್ಲಿ ರಾಜಿ ಮಾಡಿಕೊಳ್ಳದೆ ಅಂತಾರಾಷ್ಟ್ರೀಯ ಪ್ರಯಾಣವನ್ನು ಇನ್ನಷ್ಟು ಸುಲಭಗೊಳಿಸುತ್ತವೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸದಸ್ಯರು ವಿಕಲಚೇತನ ವಿದ್ಯಾರ್ಥಿಗೆ ಥಳಿಸಿದ್ದಾರೆ ಎಂಬ ಆರೋಪಿಸಿದ್ದಾರೆ. ಹಾಸ್ಟೆಲ್ ಕೊಠಡಿ ಖಾಲಿ ಮಾಡುವ ವಿಚಾರವಾಗಿ ನಡೆದ ವಿವಾದ ಹಲ್ಲೆಗೆ ಕಾರಣವಾಗಿದೆ. ಪಿಎಚ್ಡಿ ವಿದ್ಯಾರ್ಥಿ ಮತ್ತು ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್ಯುಐ) ಕಾರ್ಯಕರ್ತ ಫಾರೂಕ್ ಆಲಂ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಎನ್ಯು ಕಾವೇರಿ ಹಾಸ್ಟೆಲ್ ನಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಫಾರೂಕ್ ವಿರುದ್ಧದ ಹಳೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಇದನ್ನು ಸೂಚಿಸಿದ ವಿಶ್ವವಿದ್ಯಾಲಯದ ಆಡಳಿತವು ಹಾಸ್ಟೆಲ್ಗೆ ತಲುಪಿ ಕೊಠಡಿಯನ್ನು ಖಾಲಿ ಮಾಡುವಂತೆ ಫಾರೂಕ್ಗೆ ಕೇಳಿದೆ. ಜೆಎನ್ಯು ಅಧಿಕಾರಿಗಳ ಜತೆ ಎಬಿವಿಪಿ ಸದಸ್ಯರೂ ಇದ್ದರು ಎನ್ನಲಾಗಿದೆ. ಪ್ರತಿಭಟನೆ ನಡೆಸಿದ ಫಾರೂಕ್ಗೆ ಕಾರ್ಮಿಕರು ಥಳಿಸಿದ್ದಾರೆ. ದಾಳಿಯ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಫಾರೂಕ್ ಅವರನ್ನು ಏಮ್ಸ್ಗೆ ದಾಖಲಿಸಲಾಗಿದೆ. ಎಬಿವಿಪಿ ಕಾರ್ಯಕರ್ತರು ದೈಹಿಕ ವಿಕಲಚೇತನ ವಿದ್ಯಾರ್ಥಿಯ ಮೇಲೆ ನಡೆಸಿದ ದಾಳಿಯನ್ನು ಎನ್ಎಸ್ಯುಐ ಖಂಡಿಸುತ್ತದೆ. ಸಂಘರ್ಷದಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ಬಗ್ಗೆ ತನಿಖೆಯಾಗಬೇಕು. ಜೆಎನ್ಯು…
ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆ ನಿರ್ಮಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತೀರ್ಮಾನಿಸಲಾಗಿದೆ. ಇನ್ನು ಮುಂದೆ ನಾಡದೇವಿ “ಭುವನೇಶ್ವರಿ’ಗೆ ನಿತ್ಯ ಅರ್ಚನೆ ನೆರವೇರಲಿದೆ. ಪ್ರತಿಮೆ ಸ್ಥಾಪಿಸುವ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಈಗಾಗಲೇ ತಿಂಗಳಲ್ಲಿ ಎರಡು ಬಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪ್ರತಿಮೆ ನಿರ್ಮಾಣ ಸಂಬಂಧ ತುರ್ತು ಕ್ರಮವಹಿಸುವಂತೆ ಸೂಚಿಸಿದ್ದಾರೆ.
ವರದಿ: ಟೈಗರ್’ನಾಗ್ ರಾತ್ರಿವರೆಗೂ ಬಾಗಿಲು ತೆರೆದು ಅಕ್ರಮ ಸಕ್ರಮ ಮಾಡಲು ಗ್ರಾಮ ಪಂಚಾಯತ್ ಮುಂದಾಗಿರುವ ಘಟನೆ ಜಟ್ಟಿ ಅಗ್ರಹಾರ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಪಂಚಾಯಿತಿಯ ಹಳೆಯ ಸಾಮಗ್ರಿಗಳು ಬೆಳಿಗ್ಗೆ ಹರಾಜು ಪ್ರಕ್ರಿಯೆ ಇತ್ತು, ಇದರ ಕಾರಣ ಏನೋ ಗೋಲ್ ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇದಲ್ಲದೆ ಈ ಹಿಂದೆ ಲೋಕಾಯುಕ್ತ ದಾಳಿ ಕೂಡ ನಡೆದಿತ್ತು, ದಾಖಲೆ ನಾಶ ಮಾಡಲು ತೆರೆದಿರಬಹುದಾ ಅಥವಾ ನಕಲಿ ಜಾಬ್ ಕಾರ್ಡ್ ಗೆ ಬಿಲ್ ಮಾಡಲು ಪ್ಲಾನ್ ನಡೆದಿರಬಹುದಾ ಎಂಬ ಇನ್ನೂ ಹಲವು ಅನುಮಾನಗಳಿಗೆ ಕಾರಣವಾಗಿದೆ ಕಂಪ್ಯೂಟರ್ ಆಪರೇಟರ್ ಕಮ್ ಬಿಲ್ ಕಲೆಕ್ಟರ್ ಚಿಕ್ಕರಂಗಯ್ಯ ಒಬ್ಬರೇ ಗುರುವಾರ ರಾತ್ರಿ 8 ಗಂಟೆಯವರೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಧ್ಯಕ್ಷರ ಗಮನಕ್ಕೂ ತರದೆ ಅಕ್ರಮವಾಗಿ ಪಂಚಾಯಿತಿ ತೆರೆದಿರುವುದು ಎಲ್ಲಾ ಅನುಮಾನಗಳಿಗೆ ಕಾರಣವಾಗಿದೆ. ಜಿಲ್ಲಾ ಪಂಚಾಯತ್ ಸಿಇಒ ತನಿಖೆ ನಡೆಸುವಂತೆ ಸಾರ್ವಜನಿಕರ ಆಗ್ರಹವಾಗಿದೆ ನನ್ನ ಗಮನಕ್ಕೆ ಇಲ್ಲ ಎಂದ ಗ್ರಾಪಂ ಪಿಡಿಓ: ರಾತ್ರಿ ಎಂಟು ಗಂಟೆಯವರೆಗೆ…
ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ. ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ದುರ್ಗ ಹೋಬಳಿಯ ತೋವಿನಕೆರೆಯಲ್ಲಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ರವರ ಮಾರ್ಗದರ್ಶನದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಜನಸಂಪರ್ಕ ಸಭೆಯನ್ನು ಸೆಪ್ಟೆಂಬರ್ 15 ರಂದು ಏರ್ಪಡಿಸಲಾಗಿದೆ ಎಂದು ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ತಾಲ್ಲೂಕು ಕಚೇರಿಯಲ್ಲಿ ಗುರುವಾರ ಏರ್ಪಡಿಸಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರವು ಇತ್ತೀಚಿಗೆ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆ, ಗೃಹ ಜ್ಯೋತಿ ಸೇರಿದಂತೆ ಅನೇಕ ಕುಂದು- ಕೊರತೆಗಳನ್ನು ಅರ್ಜಿ ಪಡೆಯುವ ಮುಖಾಂತರ ಸ್ವೀಕರಿಸಿ ಅರ್ಜಿಯ ಸಮಸ್ಯೆಯನ್ನು ಬಗೆ ಹರಿಸುವುದರೊಂದಿಗೆ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 15 ರಂದು ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಮದಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಿದೆ ಎಂದರು. ಈ ಸಭೆಯಲ್ಲಿ ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್, ಜಿಲ್ಲಾಧಿಕಾರಿ ಶ್ರೀನಿವಾಸ್, ಜಿಪಂ ಸಿಇಒ ಪ್ರಭು, ಮಧುಗಿರಿ ಉಪ ವಿಭಾಗಾಧಿಕಾರಿ ರಿಷಿ ಆನಂದ್ ಸೇರಿದಂತೆ…