Subscribe to Updates
Get the latest creative news from FooBar about art, design and business.
- ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
- ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ: ನಗನಗದು ದೋಚಿ ಪರಾರಿ
- ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
- ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
- ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
- ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
- ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
- ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Author: admin
ಬೆಂಗಳೂರು: ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬಿಜೆಪಿ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕವೂ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ವಿತರಿಸಿ ಮಾತನಾಡಿದರು. ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು. ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್…
ಮಣಿಪುರ ಸಂಘರ್ಷದಲ್ಲಿ ಕೇಂದ್ರ ಸರ್ಕಾರ ಒತ್ತಡದಲ್ಲಿದೆ. ವಿರೋಧ ಪಕ್ಷಗಳ ಹೊರತಾಗಿ, ಆರ್ಎಸ್ಎಸ್ ಸೇರ್ಪಡೆಯೊಂದಿಗೆ, ಸರ್ಕಾರವು ಹೆಚ್ಚು ತುರ್ತಾಗಿ ಮಧ್ಯಪ್ರವೇಶಿಸಲು ಒತ್ತಾಯಿಸಲಾಗುತ್ತದೆ. ಮಣಿಪುರ ವಿಷಯದ ಬಗ್ಗೆ ಪ್ರಧಾನಿ ಮೌನ ವಹಿಸಿದ್ದರೆ, ಆರೆಸ್ಸೆಸ್ ಈ ವಿಷಯದ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಲು ಮುಂದಾಯಿತು. ಗಲಭೆ ನಿಯಂತ್ರಿಸಲು ರಾಜ್ಯ ಸರ್ಕಾರ ಮತ್ತು ಕೇಂದ್ರ ಸಂಸ್ಥೆಗಳು ತಕ್ಷಣ ಮಧ್ಯ ಪ್ರವೇಶಿಸಬೇಕು ಎಂದು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಆಗ್ರಹಿಸಿದ್ದಾರೆ. ಆರ್ಎಸ್ಎಸ್ ಗಲಭೆ ಸಂತ್ರಸ್ತರೊಂದಿಗಿದೆ ಮತ್ತು ಸಂಘರ್ಷದ ದೀರ್ಘಾವಧಿಯಿಂದ ವಿಚಲಿತವಾಗಿದೆ ಎಂದು ಹೇಳಿದರು. ಇದೇ ವೇಳೆ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಮಿಜೋರಾಂ ಮುಖ್ಯಮಂತ್ರಿ ಸೋರಮ್ತಂಗ ಅವರ ಸಹಾಯವನ್ನು ಕೋರಿದರು. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಯಾವುದೇ ಸಂಘರ್ಷದ ವರದಿಯಾಗಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾತ್ರಿ ಸುರಿದ ಮಳೆಗೆ ಚೆನ್ನೈ ನಗರ ಜಲಾವೃತಗೊಂಡಿದೆ. ಹಳೆ ಮಹಾಬಲಿಪುರಂ ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಆರ್ ಕೆ ರಸ್ತೆಯಲ್ಲಿ ಮರವೊಂದು ರಸ್ತೆಗೆ ಬಿದ್ದಿದೆ. ನಗರದ ಕೆಲವೆಡೆ ಮಳೆ ಮುಂದುವರಿದಿದೆ. ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ ಮತ್ತು ತಿರುವಳ್ಳೂರು ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಾಣಿಪೇಟ್ ಮತ್ತು ವೆಲ್ಲೂರು ಜಿಲ್ಲೆಗಳಲ್ಲೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ದುಬೈ-ಚೆನ್ನೈ ವಿಮಾನ ಬೆಂಗಳೂರಿಗೆ ಮಾರ್ಗ ಬದಲಿಸಿದೆ. ಚೆನ್ನೈ ವಿಮಾನ ನಿಲ್ದಾಣದಿಂದ ವಿಮಾನಗಳು ವಿಳಂಬವಾಗಿವೆ. ಹತ್ತು ವಿಮಾನಗಳನ್ನು ಬೆಂಗಳೂರಿಗೆ ತಿರುಗಿಸಲಾಗಿದೆ. ಚೆನ್ನೈನಿಂದ ಹೊರಡುವ ಒಂಬತ್ತು ವಿಮಾನಗಳು 3 ರಿಂದ 6 ಗಂಟೆಗಳ ಕಾಲ ವಿಳಂಬವಾಗಲಿದೆ ಎಂದು ವರದಿಯಾಗಿದೆ. ಜೂನ್ 21ರವರೆಗೆ ಚೆನ್ನೈನ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಣ ಕೊಬ್ಬರಿ ತಿಂದರೆ ಅನೇಕ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ ಎನ್ನುತ್ತಾರೆ ವೈದ್ಯಕೀಯ ತಜ್ಞರು, ಒಣ ತೆಂಗಿನ ಕಾಯಿಯನ್ನು ನಿತ್ಯವೂ ಸೇವಿಸುವುದು ಹೃದಯ ಮತ್ತು ಮೆದುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಕ್ಯಾಲ್ಸಿಯಂ, ಮೆಗ್ನಿಸಿಯಮ್, ಕಬ್ಬಿಣ ಮತ್ತು ವಿಟಮಿನ್-ಬಿ ಸಮೃದ್ಧವಾಗಿದೆ. ಅಲ್ಲದೆ, ಫೈಬರ್ ಕೂಡ ಇದೆ. ಇದು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ರಕ್ತಹೀನತೆಯನ್ನು ಕಡಿಮೆ ಮಾಡುತ್ತದೆ ಮತ್ತು ಹಿಮೋಗ್ಲೋಬಿನ್ ಅನ್ನು ಹೆಚ್ಚಿಸುತ್ತದೆ. ಕೊಬ್ಬರಿ ಎಣ್ಣೆ ಸಾಮಾನ್ಯ ತಾಪಮಾನದಲ್ಲಿ ಗಟ್ಟಿಯಾಗುತ್ತದೆ ಎಂಬ ಒಂದೇ ಕಾರಣಕ್ಕೆ ಇದು ಅನಾರೋಗ್ಯಕರ ಟ್ರಾನ್ಸ್ ಫ್ಯಾಟ್ ಹೊಂದಿದೆ, ಇದನ್ನು ಸೇವಿಸಬಾರದು ಎಂದು ಹಿಂದಿನ ದಿನಗಳಲ್ಲಿ ಹಬ್ಬಿದ್ದ ವದಂತಿಯನ್ನು ಈಗ ವೈಜ್ಞಾನಿಕ ಮಾಹಿತಿಗಳು ಅಲ್ಲಗಳೆದಿವೆ. ಒಂದು ವೇಳೆ ಹೀಗಾಗಿದ್ದಿದ್ದರೆ ದಿನದ ಮೂರೂ ಹೊತ್ತು ತೆಂಗಿನ ತುರಿಯಿಂದಲೇ ತಯಾರಿಸಿದ ಆಹಾರವನ್ನು ಸೇವಿಸುವ ನಮ್ಮ ಕರಾವಳಿಯ ಅಷ್ಟೂ ಜನರಿಗೆ ಭಯಂಕರ ಹೃದ್ರೋಗವಿರಬೇಕಿತ್ತು. ಇವರೆಲ್ಲಾ ಆರೋಗ್ಯವಾಗಿಯೇ ಇದ್ದಾರೆ ಎಂದರೆ ಮಸಲತ್ತು ಬೇರೇನೋ ಇರಬೇಕು ಎಂಬುದು ಸ್ಪಷ್ಟವಾಗುತ್ತದೆ.…
ತುಮಕೂರು: ಅನ್ನಭಾಗ್ಯ ಯೋಜನೆಗೆ ಅಕ್ಕಿ ವಿತರಿಸದ ಕೇಂದ್ರ ಸರ್ಕಾರದ ವಿರುದ್ಧ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ನೇತೃತ್ವದಲ್ಲಿ ನಗರದ ಬಿಜಿಎಸ್ (ಟೌನ್ಹಾಲ್) ವೃತ್ತದಲ್ಲಿ ಸಮಾವೇಶಗೊಂಡ ಕಾಂಗ್ರೆಸ್ ಮುಖಂಡರು ಚೀಲಗಳಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಇಟ್ಟು, ಭತ್ತ, ರಾಗಿ, ಜೋಳ ರಾಶಿಗಳನ್ನು ಹಾಕಿ ಪೂಜೆ ಸಲ್ಲಿಸಿ ಭಾರತೀಯ ಆಹಾರ ಪ್ರಾಧಿಕಾರಕ್ಕೆ ಕಳುಹಿಸುವ ವಿನೂತನ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ, ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ಆಹಾರ ಪ್ರಾಧಿಕಾರವು ಅಕ್ಕಿ ಖರೀದಿಗೆ ಅವಕಾಶ ನಿರಾಕರಿಸಿರುವುದು ಖಂಡನೀಯ, ಬಿಜೆಪಿ ದ್ವೇಷ ರಾಜಕಾರಣ ಸಾಧಿಸುತ್ತಾ, ಬಡವರ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಜುಲೈ ತಿಂಗಳಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ತೀರ್ಮಾನಿಸಿದ್ದು, ಪಾರದರ್ಶಕ ವ್ಯವಸ್ಥೆಯಲ್ಲಿ ಖರೀದಿಗೆ ಸರ್ಕಾರವು ಎಫ್ಸಿಐಯನ್ನು ಕೇಳಲಾಗಿತ್ತು. ಕೇಂದ್ರದ ಬಳಿ ೭ ಲಕ್ಷ,…
ಕೊಲೆ ಆರೋಪಿಯನ್ನು ಐವರು ಸೇರಿ ಕಡಿದು ಕೊಂದಿರುವ ಘಟನೆ ತಮಿಳುನಾಡಿನ ಕಾರೈಕುಡಿ ಜಿಲ್ಲೆಯಲ್ಲಿ ನಡೆದಿದೆ. ವಿನಿತ್ (29) ಕೊಲೆಯಾದ ವಿದ್ವತ್. ಜನನಿಬಿಡ ರಸ್ತೆಯೊಂದರಲ್ಲಿ ಅರಿವಝಕನ್ನನ್ನು ಹಿಂಬಾಲಿಸಿ ಕೊಂದರು. ಘಟನೆಯ ಸಿಸಿಟಿವಿ ದೃಶ್ಯಾವಳಿ ಬಿಡುಗಡೆಯಾಗಿದೆ. ಕೊಲೆಯಾದ ಅರಿವಳಗನ್ ಮಧುರೈ ಮೂಲದವನು. ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಪೊಲೀಸ್ ಠಾಣೆಯಲ್ಲಿ ಸಹಿ ಹಾಕಲು ಬಂದಿದ್ದ. ಜನನಿಬಿಡ ರಸ್ತೆಯಲ್ಲಿ ಹೋಗುತ್ತಿದ್ದಾಗ ಕಾರಿನಲ್ಲಿದ್ದ ಐವರು ಆತನನ್ನು ಹಿಂಬಾಲಿಸಲು ಆರಂಭಿಸಿದರು. ಗುಂಪಿನಿಂದ ಹೆದರಿದ ಅರಿವಜಕ ಓಡತೊಡಗಿದ. ಅಷ್ಟರಲ್ಲಿ ಸಮತೋಲನ ತಪ್ಪಿ ನೆಲಕ್ಕೆ ಬಿದ್ದರು. ಜನರು ನೋಡುತ್ತಿದ್ದಂತೆ, ಐದು ಜನರ ತಂಡವು ಅರಿವಳಗನ್ ಮೇಲೆ ದಾಳಿ ಮಾಡಲು ಪ್ರಾರಂಭಿಸಿತು. ದೊಣ್ಣೆಯಿಂದ ಕ್ರೂರವಾಗಿ ಹೊಡೆದು ಕತ್ತಿಯಿಂದ ಕೊಯ್ದಿದ್ದಾರೆ. ಇದೇ ವೇಳೆ ತಡೆಯಲು ಮುಂದಾದ ವ್ಯಕ್ತಿಗೂ ಥಳಿಸಿದ್ದಾರೆ. ರಸ್ತೆಬದಿಯಲ್ಲಿ ಬಿದ್ದಿದ್ದ ಅರಿವಜಕನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಆತನ ಸ್ನೇಹಿತರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ದಾಳಿಕೋರರಿಗಾಗಿ ಶೋಧ ಆರಂಭಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ಮೂರು ದಿನಗಳಲ್ಲಿ 54 ಜನರು ಉಷ್ಣ ಸಂಬಂಧಿ ಕಾಯಿಲೆಗಳಿಂದ ಸಾವನ್ನಪ್ಪಿದ್ದಾರೆ. 44 ಡಿಗ್ರಿಗಿಂತ ಹೆಚ್ಚು ಬಿಸಿಯಾಗಿರುವ ಪಾಟ್ನಾದಲ್ಲಿ ಕನಿಷ್ಠ 44 ಜನರು ಸಾವನ್ನಪ್ಪಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ ಮಳೆ ತೀವ್ರಗೊಂಡಿದೆ. ಅಸ್ಸಾಂನಲ್ಲಿ ಪ್ರವಾಹ ಉಂಟಾಗಿದೆ. ಅಸ್ಸಾಂನ 10 ಜಿಲ್ಲೆಗಳಲ್ಲಿ 37,000ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಭೂಕುಸಿತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಸಿಕ್ಕಿಂ ಮತ್ತು ಮೇಘಾಲಯದಲ್ಲಿ ಪ್ರವಾಹ ಉಂಟಾಗಿದೆ. ಮೇಘಾಲಯದ 146 ಗ್ರಾಮಗಳಿಗೆ ಪ್ರವಾಹ ಉಂಟಾಗಿದೆ. ನದಿಗಳು ತುಂಬಿ ಹರಿಯುತ್ತಿವೆ. ಬ್ರಹ್ಮಪುತ್ರದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಮೇಘಾಲಯದಲ್ಲಿ ಸಿಲುಕಿದ್ದ 2100 ಪ್ರವಾಸಿಗರನ್ನು ರಕ್ಷಿಸಲಾಗಿದೆ. ರಾಜಸ್ಥಾನದಲ್ಲಿ ಭಾರೀ ಮಳೆ ಅಬ್ಬರ ಮುಂದುವರಿದಿದೆ. ಪಾಲಿ, ಸಿರೋಹಿ ಮತ್ತು ಜೋಧ್ಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ನಿನ್ನೆಯಿಂದ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ರಾಜಸ್ಥಾನದ ಜೋಧಪುರದಲ್ಲಿ ಭಾರೀ ಮಳೆಯಿಂದಾಗಿ ವಿವಿಧ ಕಾಲೋನಿಗಳು ಜಲಾವೃತಗೊಂಡಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಶಿವಮೊಗ್ಗದ ವಿಜಯನಗರದಲ್ಲಿ ಮಹಿಳೆಯೊಬ್ಬರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ. ಕಮಲಮ್ಮ (57) ಕೊಲೆಯಾದ ಮಹಿಳೆ, ಜೂನ್ 17 ರಂದು ರಾತ್ರಿ ಈ ಘಟನೆ ನಡೆದಿದೆ. ಇಂಜಿನಿಯರ್ ಆಗಿರುವ ಕಮಲಮ್ಮ ಅವರ ಪತಿ ಮಲ್ಲಿಕಾರ್ಜುನ ಕೆಲಸದ ನಿಮಿತ್ತ ಗೋವಾಕ್ಕೆ ತೆರಳಿದ್ದರು. ರಾತ್ರಿ ಹೊತ್ತು ಕಮಲಮ್ಮ ಒಬ್ಬರೇ ಇದ್ದ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಬಾಯಿಗೆ ಬಟ್ಟೆ ತುರುಕಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಮನೆಯಲ್ಲಿದ್ದ ಕೆಲ ವಸ್ತುಗಳನ್ನು ದೋಚಿದ್ದಾರೆ. ಈ ಕುರಿತು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶನಿವಾರ ಸಂಜೆ ವೇಳೆಗೆ ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ವಿಚಾರ ತಿಳಿದು ತುಂಗಾ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು. ದಾವಣಗೆರೆಯಿಂದ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು, ಶಿವಮೊಗ್ಗದ ಶ್ವಾನ ದಳ ಸ್ಥಳಕ್ಕೆ ಭೇಟಿ ನೀಡಿದೆ. ಕೊಲೆಗೆ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಡವರಿಗೆ ವಿತರಿಸಲು ಅಗತ್ಯವಾಗಿರುವ ಅಕ್ಕಿಯನ್ನು ನಾವು ಕೇಂದ್ರ ಸರಕಾರದಿಂದ ಖರೀದಿಸಲು ಕೇಳಿದ್ದೇವೆ ವಿನಹಃ ಪುಕ್ಕಟೆಯಾಗಿಯೇನೂ ಕೇಳಿರಲಿಲ್ಲ. ಆದರೆ ಅವರು ಇದರಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಈ ಮೂಲಕ ಬಿಜೆಪಿ ತನ್ನ ಬಡಜನ ವಿರೋಧಿ ಧೋರಣೆಯನ್ನು ಪ್ರದರ್ಶಿಸುತ್ತಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ಭಾನುವಾರ ಇಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅನ್ನಭಾಗ್ಯ ಯೋಜನೆಯ ಅಗತ್ಯದ ಬಗ್ಗೆ ನಾವು ಈಗಾಗಲೇ ಕೇಂದ್ರ ಸರಕಾರಕ್ಕೆ ಸಾಕಷ್ಟು ಹೇಳಿದ್ದೇವೆ. ಇನ್ನು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ದನಿ ಎತ್ತಬೇಕು. ದೇವರು ಇನ್ನಾದರೂ ಅವರಿಗೆ ಸದ್ಭುದ್ಧಿಯನ್ನು ಕೊಡಲಿ ಅಷ್ಟೆ, ” ಎಂದರು. ಕಾಂಗ್ರೆಸ್ ಸರಕಾರವು ಚುನಾವಣೆಯ ಹೊತ್ತಿನಲ್ಲೇ ಅನ್ನಭಾಗ್ಯ ಸೇರಿದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಈಗ ಇವುಗಳನ್ನು ಒಂದೊಂದಾಗಿ ಜಾರಿಗೆ ತರಲಾಗುತ್ತಿದೆ. ಬಡವರ ಹಸಿವನ್ನು ನೀಗಿಸುವಂತಹ ಅನ್ನಭಾಗ್ಯ ಯೋಜನೆಗೆ ಮೊದಲು ಅಕ್ಕಿ ಕೊಡುವುದಾಗಿ ಹೇಳಿದ ಕೇಂದ್ರದ ಬಿಜೆಪಿ ಸರಕಾರವು ಈಗ ಅದರಿಂದ ಹಿಂದೆ…
ಇಂದಿನಿಂದ ನೇಪಾಳದ ರಾಜಧಾನಿ ಕಠಂಡುವಿನಲ್ಲಿ ಎಲ್ಲಾ ಹಿಂದಿ ಸಿನಿಮಾಗಳ ಪ್ರದರ್ಶನ ನಿಷೇಧಿಸಲಾಗಿದೆ. ಈ ಕುರಿತು ನಗರದ ಉನ್ನತ ಅಧಿಕಾರಿಯೊಬ್ಬರು ಭಾನುವಾರ ಮಾಹಿತಿ ನೀಡಿದ್ದಾರೆ. ಪ್ರಭಾಸ್ ನಟನೆಯ ‘ಅಧಿಪುರುಷ್’ ಸಿನಿಮಾದಲ್ಲಿ ಸೀತಾ ಮಾತೆಯ ಕುರಿತು ಆಕ್ಷೇಪಾರ್ಹ ಪದ ಬಳಕೆ ಆರೋಪ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ‘ಆಧಿಪುರುಷ’ ಸಿನಿಮಾದಲ್ಲಿರುವ ಸೀತಾ ಮಾತೆಯ ಕುರಿತ ಡೈಲಾಗ್ ಗೆ ಕತ್ತರಿ ಹಾಕದೆ ಯಾವುದೇ ಹಿಂದಿ ಸಿನಿಮಾಗಳ ಪ್ರದರ್ಶನ ಸಾಧ್ಯವಿಲ್ಲ. ಸಿನಿಮಾಗಳು ಪ್ರದರ್ಶನವಾದರೆ ಭಾರೀ ಸಮಸ್ಯೆ ಉಂಟಾಗಬಹುದು ಎಂದು ಕಠಂಡು ಮೇಯರ್ ಬಾಲೇಂದ್ರ ಷಾ ಹೇಳಿದ್ದಾರೆ. ಭಾರತೀಯ ಚಲನಚಿತ್ರಗಳ ಪ್ರದರ್ಶನವನ್ನು ನಿಷೇಧಿಸಿ ಕಂಡು ಮೇಯರ್ ಬಲೇನ್ ಶಾ ಅವರ ಸೆಕ್ರೆಟರಿಯೇಟ್ ಆದೇಶ ಹೊರಡಿಸಿದೆ. ‘ಆದಿಪುರುಷ್’ ಚಿತ್ರದಲ್ಲಿ ಜಾನಕಿ(ಸೀತೆ)ಯನ್ನು “ಭಾರತದ ಮಗಳು” ಎಂದು ಕರೆಯುವ ಸಂಭಾಷಣೆಯ ಬಗ್ಗೆ ವಿವಾದ ಭುಗಿಲೆದ್ದ ನಂತರ ಈ ಆದೇಶ ಹೊರಡಿಸಲಾಗಿದೆ. ‘ಆದಿಪುರುಷ್’ ಚಿತ್ರದಿಂದ “ಆಕ್ಷೇಪಾರ್ಹ ಭಾಗಗಳನ್ನು ತೆಗೆದುಹಾಕಿದರೆ ಚಿತ್ರ ಪ್ರದರ್ಶನದ ಮೇಲಿನ ನಿಷೇಧವನ್ನು ತೆಗೆದುಹಾಕಲಾಗುವುದು ಎಂದು ಬಾಲೆನ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…