Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡುವ ಜತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಸಮಾಜಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು 3 ಗಂಟೆಗಳ ಕಾಲ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಬಳಿಕ ಅಧಿಕಾರಿ ವರ್ಗಕ್ಕೆ ಈ ಸೂಚನೆ ನೀಡಿದರು. ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಜಾತಿ ದೌರ್ಜನ್ಯ ಪ್ರಕರಣಗಳಿಗೆ ಸೂಕ್ತ ನ್ಯಾಯ ಒದಗಿಸಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣದಿಂದ ಎಸ್.ಸಿ/ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ, ನಾಗರಿಕ ಹಕ್ಕು ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಸರ್ಕಾರ ಈ ಕಾಯ್ದೆಗೆ ಹೆಚ್ಚಿನ ಮಹತ್ವ ನೀಡಿ ಗಂಭೀರವಾಗಿ ಪರಿಗಣಿಸುತ್ತದೆ. ಸಂತ್ರಸ್ತರಿಗೆ ರಕ್ಷಣೆ ಸಿಗಬೇಕು. ಈ ಉದ್ದೇಶ ಸಫಲವಾಗಲು ಸಮಾಜ ಕಲ್ಯಾಣ ಇಲಾಖೆ,…
ಬೆಂಗಳೂರು: ರಾಜ್ಯದಲ್ಲಿ ಆತಂಕ ಸೃಷ್ಟಿಮಾಡಿರುವ ಡೆಂಗ್ಯೂ ಕಳೆದ 2022ರ ಇಡೀ ವರ್ಷಪೂರ್ತಿ ಕರ್ನಾಟಕ ರಾಜ್ಯದಲ್ಲಿ ಒಟ್ಟಾರೆ 5,522 ಪ್ರಕರಣಗಳು ವರದಿಯಾಗಿತ್ತು. ಅದರಲ್ಲಿ ಬಿಬಿಎಂಪಿಯೊಂದರಲ್ಲೇ 1,058 ಪ್ರಕರಣಗಳು ಹಾಗೂ 4464 ಡೆಂಗ್ಯೂ ಪಾಸಿಟಿವ್ ಪ್ರಕರಣ ರಾಜ್ಯದಲ್ಲಿ ಕಂಡು ಬಂದಿತ್ತು. ಆದರೆ ಈ ಬಾರಿ ಕೇವಲ 8 ತಿಂಗಳು ಮೂರು ದಿನದಲ್ಲಿ 6,706 ಡೆಂಗ್ಯೂ ಪಾಸಿಟಿವ್ ಪ್ರಕರಣ ಕಂಡು ಬಂದಿದ್ದು, 2022ರ ಇಡೀ ವರ್ಷಕ್ಕಿಂತ ಈ ಬಾರಿ, 8 ತಿಂಗಳಲ್ಲಿ ಡೆಂಗ್ಯೂ ಪಾಸಿಟಿವ್ ಬಿಬಿಎಂಪಿಯಲ್ಲಿ ಹೆಚ್ಚಳವಾಗಿರುವುದು ತಿಳಿದು ಬಂದಿದೆ. 2023ರ ಜನವರಿಯಿಂದ ಸೆಪ್ಟೆಂಬರ್ 2ನೇ ತಾರೀಖಿನ ವರೆಗೆ ರಾಜ್ಯದಲ್ಲಿ ಒಟ್ಟಾರೆ 6,706 ಡೆಂಗ್ಯೂ ಜ್ವರ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ 3,454 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಪಾಲಿಕೆ ಹೊರತುಪಡಿಸಿ ರಾಜ್ಯದಲ್ಲಿ 3,252 ಪ್ರಕರಣಗಳು ಕಂಡು ಬಂದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ಜುಲೈ ತಿಂಗಳಿಗೆ ಹೋಲಿಸಿದರೆ ಆಗಸ್ಟ್ ಮತ್ತು ಸೆಪ್ಟೆಂಬರ್ ಆರಂಭದಿಂದ ಹೆಚ್ಚಾಗಿರುವುದು ಕಂಡು ಬಂದಿದೆ. ಜೂನ್…
ಬೆಂಗಳೂರು: ಧರ್ಮಕ್ಕೋಸ್ಕರ ಮನುಷ್ಯ ಅಲ್ಲ. ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೆ ದೈವತ್ವಕ್ಕೆ ಏರಿದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ದ್ವೇಷಿಸುವುದು ಅಧರ್ಮ. ಮನುಷ್ಯ ದ್ವೇಷದ ಅಧರ್ಮದ ವಿರುದ್ಧವೇ ಕೃಷ್ಣ ಕೈಯಲ್ಲಿ ಶಸ್ತ್ರ ಹಿಡಿಯದೆ ಹೋರಾಡಿ ಧರ್ಮ ಸ್ಥಾಪನೆ ಮಾಡಿದ ಎಂದರು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸು ಕೂಡ ಮನುಷ್ಯ ಪ್ರೀತಿಯ ಸಮಾನತೆಯ ಸಮಾಜ ಸೃಷ್ಟಿ ಆಗಬೇಕು ಎನ್ನುವುದಾಗಿತ್ತು. ಸ್ವತಂತ್ರ ಭಾರತಕ್ಕೆ ಸಂವಿಧಾನ ಕೊಟ್ಟ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯವೂ ಇದೇ ಆಗಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದ ಧರ್ಮವನ್ಮು ಒಪ್ಪಿಕೊಳ್ಳುವ, ಆಚರಿಸುವ ಸ್ವಾತಂತ್ರ್ಯವನ್ನು ನೀಡಿತು. ಜಾತಿ, ಧರ್ಮ ಆಧಾರಿತ ತಾರತಮ್ಯ ಮತ್ತು ಅಸಮಾನತೆಯನ್ನು ಸಂವಿಧಾನಬಾಹಿರ ಎಂದು ಅಂಬೇಡ್ಕರ್ ಘೋಷಿಸಿದರು. ಹೀಗಾಗಿ ಸಂವಿಧಾನವನ್ನು ರಕ್ಷಿಸುವವರ ಕೈಯಲ್ಲಿ…
ಕೊರಟಗೆರೆ: ಕಾಂಗ್ರೆಸ್ ಪಕ್ಷದ ರಾಷ್ಟೀಯ ಮಹಿಳಾ ಸಮಾವೇಶಕ್ಕೆ ತುಮಕೂರು ಜಿಲ್ಲೆಯಿಂದ ಮಹಿಳಾ ಪದಾಧಿಕಾರಿಗಳ ದೆಹಲಿ ಪ್ರಯಾಣಕ್ಕೆ ಎಲ್ಲಾ ರೀತಿ ಅನುಕೂಲ ಮಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ರವರಿಗೆ ಕೊರಟಗೆರೆ ಬ್ಲಾಕ್ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಜಯಮ್ಮ ಧನ್ಯವಾದ ತಿಳಿಸಿದರು. ಇತ್ತೀಚೆಗೆ ದೆಹಲಿಯ ನೆಹರು ಭವನದಲ್ಲಿ ಐದು ದಿನಗಳ ಕಾಲ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅದ್ಯಕ್ಷರುಗಳ ಪದಾಧಿಕಾರಿಗಳ ತರಬೇತಿ ಮತ್ತು ಸಂಮೇಳನ ನಡೆದ್ದಿತ್ತು, ಈ ಬೃಹತ್ ಸಮಾರಂಭಕ್ಕೆ ವಿವಿಧ ರಾಜ್ಯಗಳ ಪಕ್ಷ ಮಹಿಳೆಯರು ಭಾಗವಹಿಸಿದ್ದರು, ಕರ್ನಾಟಕದ ರಾಜ್ಯದ ಸುಮಾರು ೬೦೦ ಮಹಿಳಾ ಪದಾಧಿಕಾರಿಗಳು ಅದರಲ್ಲಿ ತುಮಕೂರು ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರದಿಂದ ೧೯ ಮಹಿಳಾ ಘಟಕದ ಮುಂಚಿಣಿ ಘಟಕದವರು ದೆಹಲಿಗೆ ತೆರಳಿ ಸಂಮ್ಮೇಳನದಲ್ಲಿ ಭಾಗವಹಿಸಿ ಬಂದ್ದಿದ್ದರು, ಈ ಪ್ರಯಾಣಕ್ಕೆ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ರವರು ಎಲ್ಲಾ ತರಹದ ಅನುಕೂಲ ಮಾಡಿ ಕಳುಹಿಸಿದ ಹಿನ್ನೆಲೆಯಲ್ಲಿ ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷೆ ಜಯಮ್ಮ ಸಚಿವರಿಗೆ ದೆಹಲಿಯಿಂದ ಪೆನ್ನ್ನು ಕೊಡುಗೆಯಾಗಿ ನೀಡಿ…
ತುಮಕೂರು: ಯುಜಿಸಿ ಆದೇಶದ ಮೇರೆಗೆ ಕರಾಮುವಿಯು 2023-24ನೇ ಜುಲೈ ಆವೃತ್ತಿ ಪ್ರವೇಶಾತಿ ಅಂತಿಮ ದಿನಾಂಕವನ್ನು 2023ರ ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗುವ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ, 2023ರ ಸೆಪ್ಟೆಂಬರ್ 30ರ ವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು ಕಛೇರಿಯನ್ನು ತೆರೆಯುವ ಮೂಲಕ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುವುದು. ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ (General,, IT)., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., {ಎಂ.ಬಿ.ಎ., ಎಂ.ಸಿ.ಎ(AICTE Approved)}., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ…
ಶ್ರಾವಣ ಮಾಸದ ಅಂಗವಾಗಿ ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಶ್ರೀ ರುದ್ರಾಕ್ಷಿ ಮಠ ನಾಗನೂರು ಬೆಳಗಾವಿ ಇವರ ಆಶ್ರಯದಲ್ಲಿ, ಬೆಳಗಾವಿ ಮಹಾನಗರ ಹಾಗೂ ಸುತ್ತು ಮುತ್ತಲಿನ ಗ್ರಾಮಗಳಲ್ಲಿ, ಜನಜಾಗೃತಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ದಿ.06.09.2023 ರಂದು ಸದಾಶಿವನಗರದಲ್ಲಿ ಪರಮಪೂಜ್ಯ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಜನಜಾಗೃತಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಸದಾಶಿವ್ ನಗರದ ಭಕ್ತರು ಎಲ್ಲ ಮಾರ್ಗಗಳನ್ನು ರಂಗೋಲಿ ಹಾಗೂ ತಳಿರು ತೋರಣಗಳಿಂದ ಅಲಂಕಾರ ಮಾಡಿ ಶ್ರೀಗಳಿಗೆ ಭವ್ಯ ಸ್ವಾಗತವನ್ನು ನೀಡಿದರು.. ಪಾದಯಾತ್ರೆಯು ಸದಾಶಿವನಗರದ ವಿವಿಧ ಮಾರ್ಗಗಳಲ್ಲಿ ಸಾವಿರಾರು ಭಕ್ತರೊಂದಿಗೆ ಸಂಚರಿಸಿ, ಸದಾಶಿವನಗರದ ಶಿವಾಲಯದಲ್ಲಿ ಸಮಾರೋಪ ಸಮಾರಂಭದೊಂದಿಗೆ ಮುಕ್ತಾಯಗೊಂಡಿತು. ಸಮಾರೋಪ ಸಮಾರಂಭದಲ್ಲಿ ಪೂಜ್ಯ ಡಾ. ಅಲ್ಲಮಪ್ರಭು ಮಹಾಸ್ವಾಮೀಜಿ ಅವರು ಆಶೀರ್ವಚನವನ್ನು ನೀಡಿ, ಭಕ್ತರು ತಮ್ಮ ಮಕ್ಕಳಿಗೆ ಧಾರ್ಮಿಕ ಸಂಸ್ಕಾರಗಳನ್ನು, ಆಚರಣೆಗಳನ್ನು ಕಲಿಸಿಕೊಡಬೇಕು. ಆ ನಿಟ್ಟಿನಲ್ಲಿ ಸಮಾಜದ ಎಲ್ಲ ಬಾಂಧವರನ್ನು, ಎಲ್ಲಾ ಮಕ್ಕಳನ್ನು ಸಂಸ್ಕಾರವಂತರಾಗಿ ಮಾಡಲು ಶ್ರೀಮಠದಿಂದ ರಜಾ ದಿನಗಳಲ್ಲಿ ಸಂಸ್ಕಾರ ಶಿಬಿರಗಳನ್ನು ಏರ್ಪಡಿಸಲಾಗುತ್ತದೆ. ಆ ಶಿಬಿರದ ಲಾಭವನ್ನು ಭಕ್ತಾದಿಗಳು ಪಡೆದುಕೊಳ್ಳಬೇಕು. ಸಮಾಜದ ಎಲ್ಲ…
ಕ್ರೆಡಿಟ್ ಕಾರ್ಡ್ ಸಂಪೂರ್ಣ ಮೊತ್ತವನ್ನು ಪಾವತಿಸಿದ ಬಳಿಕವೂ 6 ಸಾವಿರ ರೂ. ಪಾವತಿ ಮಾಡುವಂತೆ ಗ್ರಾಹಕರೊಬ್ಬರಿಗೆ ಸೂಚನೆ ನೀಡಿದ್ದ ಖಾಸಗಿ ಬ್ಯಾಂಕ್ ಗೆ ಗ್ರಾಹಕರ ನ್ಯಾಯಾಲಯವು 5 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಅಲ್ಲದೇ, ನೋ ಡ್ಯೂ ಸರ್ಟಿಫಿಕೇಟ್ ನೀಡುವಂತೆ ಸೂಚನೆ ನೀಡಿದ್ದಲ್ಲದೇ, ದಂಡದ ಮೊತ್ತವನ್ನು ಆದೇಶ ಪ್ರತಿ ಲಭ್ಯವಾದ 45 ದಿನಗಳಲ್ಲಿ ಪಾವತಿಸಬೇಕು. ಇಲ್ಲವಾದಲ್ಲಿ ಮಾಸಿಕ ಶೇಕಡಾ 9ರಷ್ಟು ಬಡ್ಡಿಯೊಂದಿಗೆ ಪಾವತಿ ಮಾಡಬೇಕು ಎಂದು ನಿರ್ದೇಶನ ನೀಡಿದೆ.
ಇಂದು ಮಲಯಾಳಂನ ಶ್ರೇಷ್ಠ ನಟ ಮಮ್ಮುಟ್ಟಿ ಅವರ ಹುಟ್ಟುಹಬ್ಬ. 72ರ ಹರೆಯದಲ್ಲೂ ಅವರ ಅಭಿಮಾನಿಗಳು ಅವರನ್ನು ಮಲಯಾಳಂ ಚಿತ್ರರಂಗದ ಚಿರ ಯುವಕ ಎಂದೇ ಬಣ್ಣಿಸುತ್ತಾರೆ. ತಾರಾರಾಜ ಅವರ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ. ರಾತ್ರಿ 12 ಗಂಟೆಗೆ ಅಭಿಮಾನಿಗಳು ಮಮ್ಮುಟ್ಟಿ ಮನೆ ಮುಂದೆ ಸಂಭ್ರಮಾಚರಣೆಯೊಂದಿಗೆ ಆಗಮಿಸಿದರು. ಮಳೆಯಲ್ಲೂ ಮನೆ ಮೆಟ್ಟಿಲುಗಳ ಮೇಲೆ ಕಾದು ಕುಳಿತು ಮಮ್ಮುಕ್ಕನನ್ನು ಹರಸಿದರು. ಮಮ್ಮುಟ್ಟಿ ಫ್ಯಾನ್ಸ್ ಅಂಡ್ ವೆಲ್ಫೇರ್ ಅಸೋಸಿಯೇಷನ್ ಕೂಡ ರಕ್ತದಾನ ಶಿಬಿರವನ್ನು ಆಯೋಜಿಸಿದೆ.ಅಭಿಮಾನಿಗಳು ಮತ್ತು ಸ್ನೇಹಿತರು ಮಮ್ಮುಕ್ಕವನ್ನು ಅದ್ಭುತ ವಿದ್ಯಮಾನವೆಂದು ಬಣ್ಣಿಸುತ್ತಾರೆ, ಅವರ ಗ್ಲಾಮರ್ ವಯಸ್ಸಿಗೆ ಹೆಚ್ಚಾಗುತ್ತದೆ. ಮಲಯಾಳಂ ಚಿತ್ರರಂಗದ ಶ್ರೇಷ್ಠ ನಟ ಸೆಪ್ಟೆಂಬರ್ 7, 1951 ರಂದು ಅಲಪ್ಪುಳ ಜಿಲ್ಲೆಯ ಚಂತಿರೂರ್ನಲ್ಲಿ ಜನಿಸಿದರು. ಅವರು ಕೊಟ್ಟಾಯಂ ಜಿಲ್ಲೆಯ ವೈಕಾಟ್ ಬಳಿಯ ಚೆಂಬ್ ನಲ್ಲಿ ಹುಟ್ಟಿ ಬೆಳೆದರು. ಇಸ್ಮಾಯಿಲ್-ಫಾತಿಮಾ ದಂಪತಿಯ ಹಿರಿಯ ಮಗ ಮಮ್ಮುಟ್ಟಿ. ಅವರು ಜೂನಿಯರ್ ಆರ್ಟಿಸ್ಟ್ ಆಗಿ ಆಗಸ್ಟ್ 6, 1971 ರಂದು ಅನುಭವಂ ಪಂಚಕಲ್ ಚಿತ್ರದ ಮೂಲಕ ಪ್ರಾರಂಭಿಸಿದರು.…
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ ಚಂದ್ರಕುಮಾರ್ ಬೋಸ್ ಬಿಜೆಪಿ ತೊರೆದರು. ನೇತಾಜಿಯವರ ಆಲೋಚನೆಗಳಿಗೆ ಬಿಜೆಪಿಯ ಕೇಂದ್ರ ನಾಯಕತ್ವ ಅಥವಾ ಬಂಗಾಳದ ನಾಯಕತ್ವದಿಂದ ಬೆಂಬಲ ಸಿಕ್ಕಿಲ್ಲ ಎಂದು ಆರೋಪಿಸಿ ರಾಜಿನಾಮೆ ನೀಡಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಪ್ರತಿಪಾದಿಸಿದ ಎಲ್ಲರನ್ನೂ ಒಳಗೊಳ್ಳುವ ರಾಜಕೀಯವನ್ನು ಮುಂದುವರಿಸುವುದಾಗಿ ನಾನು ಬಿಜೆಪಿಗೆ ಸೇರಿದಾಗ ನಾಯಕತ್ವ ನನಗೆ ಭರವಸೆ ನೀಡಿತ್ತು. ಆದರೆ ಅಂಥದ್ದೇನೂ ನಡೆಯುತ್ತಿಲ್ಲ. ಬಿಜೆಪಿಯ ಬದಲು ದೇಶಾದ್ಯಂತ ಪಸರಿಸುವುದು ನೇತಾಜಿಯವರ ಚಿಂತನೆ ಎಂದರು. ಎಲ್ಲಾ ಸಮುದಾಯಗಳನ್ನು ಭಾರತೀಯರಾಗಿ ಒಗ್ಗೂಡಿಸುವ ನೇತಾಜಿ ಅವರ ಕಲ್ಪನೆಯನ್ನು ಪ್ರಚಾರ ಮಾಡಲು ಆಜಾದ್ ಹಿಂದ್ ಮೋರ್ಚಾ ಎಂಬ ಸಂಘಟನೆಯನ್ನು ರಚಿಸಲು ನಿರ್ಧರಿಸಲಾಯಿತು. ಇದು ಧರ್ಮ ಮತ್ತು ಜಾತಿಯನ್ನು ಲೆಕ್ಕಿಸದೆ ಜನರನ್ನು ಒಳಗೊಂಡಿತ್ತು. ಆದರೆ ನನ್ನ ಪ್ರಯತ್ನಕ್ಕೆ ಕೇಂದ್ರ ಅಥವಾ ರಾಜ್ಯ ಬಿಜೆಪಿಯಿಂದ ಯಾವುದೇ ಬೆಂಬಲ ಸಿಕ್ಕಿಲ್ಲ. ಬಂಗಾಳದ ಜನರನ್ನು ತಲುಪುವ ಯೋಜನೆಯನ್ನೂ ಪ್ರಸ್ತಾಪಿಸಿದ್ದೆ. ಇದನ್ನೂ ಕಡೆಗಣಿಸಲಾಗಿತ್ತು. ಈ ಪರಿಸ್ಥಿತಿಯಲ್ಲಿ ಬಿಜೆಪಿಯಲ್ಲಿ ಮುಂದುವರಿಯುವುದು ಅಸಾಧ್ಯವಾಗಿದೆ. -ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ…
ಸಂಸತ್ತಿನ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ಸ್ಪಷ್ಟಪಡಿಸುವಂತೆ ಫ್ರಂಟ್ ಆಫ್ ಇಂಡಿಯಾದ ಮನವಿಗೆ ಕೇಂದ್ರ ಸರ್ಕಾರವು ಪ್ರತಿಕ್ರಿಯಿಸಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಕಾನೂನು ಮತ್ತು ನಿಯಮಾವಳಿ ಪ್ರಕಾರ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿದ ನಂತರ ಸಭೆ ಕರೆಯಲಾಗಿದೆ ಎಂದು ಉತ್ತರಿಸಿದರು. ಜನರನ್ನು ದಾರಿತಪ್ಪಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿರುವುದು ದುರದೃಷ್ಟಕರ ಎಂದು ಆರೋಪಿಸಿದರು. ಸಂಸತ್ತಿನ ವಿಶೇಷ ಅಧಿವೇಶನ ಕರೆಯುವ ಮುನ್ನ ಸಲಹಾ ಸಮಿತಿಯ ಕರೆ ಸೇರಿದಂತೆ ಕಾರ್ಯವಿಧಾನಗಳನ್ನು ಅನುಸರಿಸಿಲ್ಲ ಎಂದು ಸೋನಿಯಾ ಗಾಂಧಿ ತಮ್ಮ ಪತ್ರದಲ್ಲಿ ಗಮನಸೆಳೆದಿದ್ದಾರೆ. ಪ್ರತಿಪಕ್ಷಗಳ ಪತ್ರವು ಸಂಸತ್ತಿನ ಕಲಾಪಕ್ಕೆ ಅಡ್ಡಿಯಾಗಿದೆ ಮತ್ತು ತಪ್ಪು ತಿಳುವಳಿಕೆಯನ್ನು ಹರಡುತ್ತಿದೆ ಎಂದು ಕೇಂದ್ರ ಸರ್ಕಾರ ಆರೋಪಿಸಿದೆ. ಟೀಕೆಗಳು ಅತ್ಯಂತ ದುರದೃಷ್ಟಕರ ಎಂದು ಉಲ್ಲೇಖಿಸಲಾಗಿದೆ. ಕೇಂದ್ರವು ಮುಚ್ಚಿಡಲು ಏನೂ ಇಲ್ಲ ಮತ್ತು ಯಾವುದೇ ಅಸ್ಪಷ್ಟತೆ ಅಸ್ತಿತ್ವದಲ್ಲಿಲ್ಲ ಎಂದು ಕೇಂದ್ರ ಸರ್ಕಾರ ಉತ್ತರಿಸಿದೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ದೇಶದ ಹೆಸರನ್ನು ಭಾರತ್ ಎಂದು ಬದಲಾಯಿಸಲು ನಡೆಯುತ್ತಿರುವ ಪ್ರಚಾರಗಳು ಸುಳ್ಳು ಎಂದು ಕೇಂದ್ರ ಸರ್ಕಾರ ಈ…