Author: admin

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ತಕ್ಕ ಉತ್ತರ ನೀಡಿದ್ದಾರೆ. ಸನಾತನ ಧರ್ಮದ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ವಾಸ್ತವ ಸಂಗತಿಗಳನ್ನು ತಿಳಿಸುವ ಮೂಲಕ ಪ್ರತಿವಾದ ಮಾಡುವಂತೆ ಪ್ರಧಾನಿ ಸೂಚಿಸಿದ್ದಾರೆ. ಇತಿಹಾಸಕ್ಕೆ ಹೋಗುವ ಅಗತ್ಯವಿಲ್ಲ. ಸಂವಿಧಾನದ ಸತ್ಯಗಳಿಗೆ ಅಂಟಿಕೊಳ್ಳಿ. ಸಮಸ್ಯೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆಯೂ ಮಾತನಾಡಬೇಕು’ – ಪ್ರಧಾನಿ ಹೇಳಿದರು. ಭಾರತದ ಹೆಸರನ್ನು ಭಾರತ್ ಎಂದು ಬದಲಾಯಿಸುವ ಅಭಿಯಾನಕ್ಕೆ ಸಂಬಂಧಿಸಿದ ವಿವಾದಗಳಿಗೆ ಪ್ರತಿಕ್ರಿಯಿಸದಂತೆ ಪ್ರಧಾನಿ ಮಂತ್ರಿಗಳಿಗೆ ಸೂಚಿಸಿದರು. ಈ ನಿಟ್ಟಿನಲ್ಲಿ ಜವಾಬ್ದಾರಿಯುತ ವ್ಯಕ್ತಿಗಳು ಮಾತ್ರ ಪ್ರತಿಕ್ರಿಯಿಸಬೇಕು ಎಂದು ಪ್ರಧಾನಿ ಸ್ಪಷ್ಟಪಡಿಸಿದರು. ತಮಿಳುನಾಡು ಮುಖ್ಯಮಂತ್ರಿಯೂ ಆಗಿರುವ ಎಂ.ಕೆ.ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಚೆನ್ನೈನಲ್ಲಿ ನಡೆದ ರೈಟರ್ಸ್ ಫೋರಂ ಕಾರ್ಯಕ್ರಮದಲ್ಲಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉದಯನಿಧಿ ಮಾತನಾಡಿ, ಸನಾತನ ಧರ್ಮ ಮಲೇರಿಯಾ, ಡೆಂಗೆ ಇದ್ದಂತೆ ಅದನ್ನು ಸಮಾಜದಿಂದ ತೊಲಗಿಸಬೇಕು. ಇದನ್ನು ವಿರೋಧಿಸಲು…

Read More

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆರೆಗಳು ಹಾಗೂ ರಾಜಕಾಲುವೆ ಒತ್ತುವರಿ ತೆರವಿನ ಜವಾಬ್ದಾರಿಯನ್ನು ತಹಶೀಲ್ದಾರ್ ಹಾಗೂ ವಲಯ ಕಾರ್ಯಪಾಲಕ ಎಂಜಿನಿಯರ್‌ ಗಳಿಗೆ ವಹಿಸಲಾಗಿದೆ. ಅವರು ವಿಫಲರಾದರೆ ಶಿಸ್ತುಕ್ರಮ ಜರುಗಿಸಲು ಸರ್ಕಾರ ಸೂಚಿಸಿದೆ. ಹೈಕೋರ್ಟ್‌ನಿಂದ ಸಾಕಷ್ಟು ಬಾರಿ ಆಕ್ಷೇಪಕ್ಕೆ ಒಳಗಾಗಿರುವ ರಾಜ್ಯ ಸರ್ಕಾರ ಇದೀಗ ಕೆರೆಗಳು ಹಾಗೂ ರಾಜಕಾಲುವೆ ಒತ್ತುವರಿ ತೆರವು ಹಾಗೂ ರಕ್ಷಣೆ ಜವಾಬ್ದಾರಿಯನ್ನು ಅಧಿಕಾರಿಗಳಿಗೆ ವಹಿಸಿದೆ.

Read More

ಯುವತಿಯೊಬ್ಬಳು ತನ್ನ ಲಿವ್ ಇನ್ ಸಂಗಾತಿಯನ್ನು ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ಹತ್ಯೆ ಮಾಡಿದ ಮಹಿಳೆಯನ್ನು ಬೆಳಗಾವಿ ಮೂಲದ 24 ವರ್ಷದ ರೇಣುಕಾ ಎಂದು ಗುರುತಿಸಲಾಗಿದೆ. ಮೃತನನ್ನು ಕೇರಳ ಮೂಲದ 29 ವರ್ಷದ ಜಾವೇದ್ ಎಂದು ಗುರುತಿಸಲಾಗಿದೆ. ಹೆಚ್ಚಿನ ತನಿಖೆಗೆ ಹುಳಿಮಾವು ಪೊಲೀಸರು ಅಪರಾಧಿಯನ್ನು ವಿಚಾರಣೆ ಮಾಡುತ್ತಿದ್ದಾರೆ.

Read More

ಗಂಡನೇ ತನ್ನ ಹೆಂಡತಿ ಹಾಗೂ ಮಗನನ್ನು ಹತ್ಯೆ ಮಾಡಿ ಪರಾರಿಯಾಗಿರುವುದಾಗಿ ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಬಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೆ ಸದ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ರವೀಂದ್ರನಾಥ ಗುಡ್ಡೆಯಲ್ಲಿ ಈ ಜೋಡಿ ಹತ್ಯೆ ನಡೆದಿದೆ. ನವನೀತಾ (35) ಹಾಗೂ ಪುತ್ರ ಸಾಯಿ ಸೃಜನ್ (8) ಕೊಲೆಯಾದವರು. ಚಂದ್ರು (38) ಪತ್ನಿಗೆ ಚಾಕುವಿನಲ್ಲಿ ಇರಿದು, ಹತ್ಯೆ ಮಾಡಿರುವ ಆರೋಪಿ.

Read More

ಬೆಂಗಳೂರು: ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನ ಡಿಕ್ಕಿಯಿಂದ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಪುರುಷನ ಗುರುತು ಪತ್ತೆಯಾಗಿಲ್ಲ. 35ರಿಂದ 40 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ತುಮಕೂರು ರಸ್ತೆಯಿಂದ ಹೊಸೂರು ರಸ್ತೆ ಕಡೆಗೆ ನಡೆದು ತೆರಳುತ್ತಿರುವಾಗ ವೇಗವಾಗಿ ಬಂದ ವಾಹನ ಡಿಕ್ಕಿಯಾಗಿದೆ. ವಾಹನ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದ್ದು, ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ವಾಮಾಚಾರ ನಡೆಸಿ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಪತ್ನಿ ವಿರುದ್ಧ ಉದ್ಯಮಿಯೊಬ್ಬರು ಕಬ್ಬನ್‌ ಪಾರ್ಕ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಉದ್ಯಮಿ ದೇವ್ ಕುಮಾರ್(39) ಅವರು ನೀಡಿದ ದೂರಿನ ಮೇರೆಗೆ ಪತ್ನಿ ಎಂ. ಪಿ. ಐಶ್ವರ್ಯ, ಅತ್ತೆ ಮಹಾಲಕ್ಷ್ಮೀ ಮತ್ತು ಮಾವ ಮಂಜುನಾಥ್ ವಿರುದ್ಧ ಎಫ್ ‌ಐಆರ್ ದಾಖಲಾಗಿದೆ. ಐಶ್ವರ್ಯ ಅವರು ವೈದ್ಯೆಯಾಗಿ ಕೆಲಸ ಮಾಡುತ್ತಿದ್ದಾರೆ. ‘ಪತ್ನಿ ಹಾಗೂ ಅವರ ಕುಟುಂಬದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ಉದ್ಯಮಿ ಮನವಿ ಮಾಡಿದ್ದಾರೆ.

Read More

ಬಾಗಲಗುಂಟೆ ಹಾಗೂ ಸಂಜಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರತ್ಯೇಕ ಕಳ್ಳತನ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆಯ ಶೆಟ್ಟಿಹಳ್ಳಿಯಲ್ಲಿರುವ ಮನೆಯಲ್ಲಿ ಕಳ್ಳತನ ಮಾಡಿದ್ದ ರವಿಕುಮಾರ್, ಇಮ್ರಾನ್ ಹಾಗೂ ಜೈಕುಮಾರ್ ನನ್ನು ಬಂಧಿಸಲಾಗಿದೆ. 7 6.45 ಲಕ್ಷ ಮೌಲ್ಯದ 129 ಗ್ರಾಂ ತೂಕದ ಚಿನ್ನಾಭರಣ, 1.08 ಲಕ್ಷ ನಗದು ಹಾಗೂ 2 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕುಟುಂಬಸ್ಥರೆಲ್ಲರು ಧರ್ಮಸ್ಥಳಕ್ಕೆ ತೆರಳಿದ್ದಾಗ ಮನೆಯಲ್ಲಿ ಕಳ್ಳತನ ಮಾಡಿದ್ದರು.

Read More

ತುರುವೇಕೆರೆ: ಕ್ಷೇತ್ರಕ್ಕೆ ಮಾಜಿ ಶಾಸಕರಾದ  ಜಯರಾಮಣ್ಣ ನವರು ನೀರಿನ ಹೋರಾಟಕ್ಕೆ ಶಾಶ್ವತ ಪರಿಹಾರವನ್ನು ನೀಡಿದ್ದಾರೆ ಹಾಗೂ  ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುವಂತ  ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದಾರೆ ಯೋಗೀಶ್ ರವರೇ ಮೊದಲು ಕೀಳು ಮಟ್ಟದ ರಾಜಕಾರಣ ಬಿಡಿ ನಾಲಿಗೆ ಬಿಗಿ ಹಿಡಿದು ಮಾತನಾಡಿ ಯುವ ಮೋರ್ಚಾದ ಅಧ್ಯಕ್ಷ ಗೌರೀಶ್ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ  ಸುದ್ದಿಘೋಷ್ಠಿಯಲ್ಲಿ  ಮಾತನಾಡಿದ ತಾಲೂಕು ಯುವ ಮೋರ್ಚಾದ ಅಧ್ಯಕ್ಷ ಗೌರೀಶ್ ಅವರು,  ಜೆಡಿಎಸ್ ಪಕ್ಷದ ವಕ್ತಾರಾದ ವೆಂಕಟಪುರ ಯೋಗೇಶ್   ಮಾಜಿ ಶಾಸಕರಾದ ಮಸಾಲೆ ಜಯರಾಮ್ ಅವರು ಕಮಿಷನ್ ದಂಧೆಗಾಗಿ ಕೆಲಸ ಮಾಡಿದ್ದಾರೆ  ಎಂದು ನೀಡಿರುವ ಹೇಳಿಕೆಯನ್ನ ಖಂಡಿಸಿದರು. ಅವರಿಗೂ ಗೊತ್ತಿದೆ ಮತ್ತೆ ಹೇಳುತ್ತಾರೆ ತೂಬುಗಳನ್ನು ಹೊಡೆದು ನೀರು ಬಿಡುತ್ತೇವೆ ಅಷ್ಟು ಪೌರುಷ ನಮಗಿದೆ ಎಂದು ತೂಬನ್ನು ಹೊಡೆದು ಹಾಕಿ ನೀರು ಬಿಡುವ ಅವಶ್ಯಕತೆ ಇಲ್ಲ, ಇವತ್ತು ದಂಡಿನಶಿವರ ಹೋಬಳಿಯ ಕೆರೆಗಳಿಗೆ ನೀರು ಹರಿಸುವ  ಡಿ 10 ತೂಬು ಆಗಿರಬಹುದು ನಮ್ಮ ಮಾಜಿ ಸಣ್ಣ ನೀರಾವರಿಯ…

Read More

ಮಧುಗಿರಿ: ಕೇಂದ್ರವು ಬಡವರ ವಿರೋಧಿ ಮತ್ತು ಬಂಡವಾಳಶಾಹಿಗಳ ಪರವಾಗಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಒಂದೇ ಒಂದು ಮತವೂ ಹೋಗದಂತೆ ನೋಡಿಕೊಳ್ಳಬೇಕು ಎಂದು ಬುಧವಾರ ಜನರಿಗೆ ಕರೆ ನೀಡಿದರು. ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ನೀಡಲು ಕರ್ನಾಟಕಕ್ಕೆ ಅಕ್ಕಿ ನೀಡುವುದನ್ನು ನಿರಾಕರಿಸಿದ ಬಿಜೆಪಿಯನ್ನು ನೀಚ ಎಂದು ಕರೆದ ಅವರು, ಕೇಂದ್ರದ ಆಡಳಿತ ಪಕ್ಷವೂ ಮಾನವ ವಿರೋಧಿಯಾಗಿದೆ ಎಂದು ಹೇಳಿದರು. ಕ್ಷೀರ ಭಾಗ್ಯ ಯೋಜನೆಗೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಹಿಂದಿನ ಅವಧಿಯಲ್ಲಿ ಸಿಎಂ ಆಗಿದ್ದಾಗ ಏಳು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದೆ. ಆದರೆ, ಹಿಂದಿನ ಬಿಜೆಪಿ ಸರ್ಕಾರ ಅದನ್ನು ನಾಲ್ಕು ಕೆ.ಜಿ ಮತ್ತು ಐದು ಕೆ.ಜಿಗೆ ಇಳಿಸಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಐದು ಕೆ.ಜಿ ನೀಡುವುದಾಗಿ ಭರವಸೆ ನೀಡಿದ್ದೆ…

Read More

ಮಧುಗಿರಿ: ಕ್ಷೀರ ಭಾಗ್ಯ ಯೋಜನೆಯು  ಪೌಷ್ಟಿಕಾಂಶಗಳ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವರದಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. 10 ವರ್ಷಗಳ ಹಿಂದೆ  ನಮ್ಮ ಸರ್ಕಾರ ಪ್ರಾರಂಭಿಸಿದ್ದ  ಈ ಯೋಜನೆಯು ನಿರಂತರವಾಗಿ  ನಡೆದುಕೊಂಡು ಬರುತ್ತಿದೆ. ಶೇ.80ರಷ್ಟು ಶಾಲಾ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಪ್ರತಿ ಮಕ್ಕಳಿಗೆ 150 ಮಿಲಿ ಲೀ. ನಷ್ಟು ಹಾಲನ್ನು ವಿತರಿಸಲಾಗುತ್ತಿದೆ ಎಂದ ಅವರು, ನಮ್ಮ ಸರ್ಕಾರವು ನುಡಿದಂತೆ ನಡೆಯುತ್ತಿದ್ದು, ಸಂಕಷ್ಟದಲ್ಲಿದ್ದ ಹೈನುಗಾರಿಕೆಗೆ ಪ್ರೋತ್ಸಾಹ ನೀಡುತ್ತಿದೆ ನಷ್ಟದಲ್ಲಿದ್ದ ಒಕ್ಕೂಟಗಳಿಗೆ ಚೈತನ್ಯ ತುಂಬಿದೆ ಎಂದರು. ಎತ್ತಿನಹೊಳೆ ಯೋಜನೆ ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಪ್ರಾರಂಭಿಸಿದ್ದು, ಶೀಘ್ರದಲ್ಲೇ ಅದನ್ನು ಮುಕ್ತಾಯಗೊಳಿಸಿ ಈ ಭಾಗದ ಕೆರೆಗಳಿಗೆ ನೀರು ಹರಿಸುವುದಾಗಿ ತಿಳಿಸಿದ ಅವರು ಕೂಡ್ಲಿಗಿಯಿಂದ ಪಾವಗಡಕ್ಕೆ ಕುಡಿಯುವ ನೀರು ಒದಗಿಸುವ  2300 ಕೋಟಿ ರೂ. ಗಳ ಬೃಹತ್ ಯೋಜನೆಯನ್ನು ರೂಪಿಸಲಾಗಿದ್ದು, ಶೀಘ್ರದಲ್ಲಿ ಅನುಷ್ಠಾನಗೊಳಿಸುವುದಾಗಿ ತಿಳಿಸಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ…

Read More