Author: admin

ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಸಜೀವ ದಹನವಾಗಿರುವ ಆಘಾತಕಾರಿ ಘಟನೆ ನಡೆದಿದೆ. ಅಮರನಾಥ್ (15) ಟ್ಯೂಷನ್ ಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕನನ್ನು ಗುಂಟೂರಿನ ಸರ್ಕಾರಿ ಜನರಲ್ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲಾಗಲಿಲ್ಲ. ಚೆರುಕುಪಲ್ಲಿ ಮಂಡಲದ ರಾಜವೋಲು ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಅಮರನಾಥ್ ಸೈಕಲ್ ನಲ್ಲಿ ಟ್ಯೂಷನ್ ಗೆ ತೆರಳುತ್ತಿದ್ದಾಗ ಕೆಲ ಯುವಕರು ಬಾಲಕನನ್ನುತಡೆದಿದ್ದಾರೆ.ನಂತರ ಬಾಲಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.ಬಾಲಕನ ಕಿರುಚಾಟ ಕೇಳಿ ಸ್ಥಳೀಯರು ಅಮರನಾಥ ಆಸ್ಪತ್ರೆಗೆ ಧಾವಿಸಿದರೂ ಆತನ ಪ್ರಾಣ ಉಳಿಸಲಾಗಲಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ರಾಷ್ಟ್ರೀಯ, ಸಂಸ್ಕೃತಿ ವಿಚಾರ ಎಲ್ಲಿ ತೆಗೆಯಬೇಕೋ ಅಲ್ಲಿ ತೆಗೆದಿದ್ದಾರೆ. ಅವರು ಗೆದಿರುವುದು ಮುಸ್ಲಿಂ ಮತಗಳಿಂದಲೇ ಗೆದಿದ್ದಾರೆ ಭಾವಿಸಿದಂತಿದೆ ಎಂದು ಸಿಎಂ ಸಿದ್ಧರಾಮಯ್ಯ ವಿರುದ್ಧ ಮಾಜಿ ಶಿಕ್ಷಣ ಸಚಿವ ಬಿಸಿ ನಾಗೇಶ್ ವಾಗ್ದಾಳಿ ಮಾಡಿದ್ದಾರೆ. ಸಾವರ್ಕರ್, ಹೆಡ್ಗೆವಾರ್ ಹಾಗೂ ಸೂಲಿಬೆಲೆ ಪಠ್ಯ ಕೈ ಬಿಟ್ಟ ವಿಚಾರವಾಗಿ ಮಾತನಾಡಿದ ಅವರು, ರೈತರು, ಮಕ್ಕಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಯೋಚನೆಯೇ ಇಲ್ಲ. ಸಿದ್ದರಾಮಯ್ಯಗೆ ಕಾಣುತ್ತಿರುವುದು ಟಿಪ್ಪು ಸುಲ್ತಾನ್ ಅಷ್ಟೇ. ಸಿದ್ದರಾಮಯ್ಯ ಹಿಂದೂ ವಿರೋಧಿ, ಇದರಲ್ಲಿ ಅನುಮಾನವೇ ಇಲ್ಲ. ರಾಜ್ಯ ಸರ್ಕಾರ ಮಕ್ಕಳಿಗೆ ಸುಳ್ಳು ಇತಿಹಾಸ ಹೇಳಲು ಹೊರಟಿದೆ ಎಂದು ವಾಗ್ದಾಳಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮಹಾರಾಷ್ಟ್ರದ 16 ವರ್ಷದ ಬಾಲಕಿ ಸತತ ಐದು ದಿನಗಳ ಕಾಲ ನೃತ್ಯ ಮಾಡಿ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಪ್ರಕಾರ, “ಶ್ರುತಿ ಸುಧೀರ್ ಜಗತಾಪ್ ಒಬ್ಬ ವ್ಯಕ್ತಿಯಿಂದ 127 ಗಂಟೆಗಳಲ್ಲಿ ಸುದೀರ್ಘವಾದ ಡ್ಯಾನ್ಸ್ ಮ್ಯಾರಥಾನ್‌ನ ದಾಖಲೆಯನ್ನು ಹೊಂದಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ನೇಪಾಳಿ ನೃತ್ಯಗಾರ್ತಿ ಬಂದಾನ ಅವರ ಹೆಸರಿನಲ್ಲಿತ್ತು. ನೃತ್ಯದ ಅವಧಿ 126 ಗಂಟೆಗಳು. ಇದನ್ನು 2018 ರಲ್ಲಿ ಸ್ವಾಧೀನಪಡಿಸಿಕೊಳ್ಳಲಾಯಿತು. ಪ್ರದರ್ಶನವನ್ನು ವಿವರಿಸುತ್ತಾ, ಡ್ಯಾಂಗ್ರಿಕರ್ GWR ಅಧಿಕೃತ ಕನಸಿನಲ್ಲಿ ಹೇಳಿದರು: “ಶ್ರುತಿ ಅವರ ಡ್ಯಾನ್ಸ್ ಮ್ಯಾರಥಾನ್ ಅವರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಅವಳು ತುಂಬಾ ದಣಿದ ಕ್ಷಣಗಳು ಇದ್ದವು. ಆದರೆ ಪೋಷಕರು ಯಾವಾಗಲೂ ಇದ್ದರು. ಅವಳನ್ನು ತಾಜಾವಾಗಿಡಲು ಅವಳ ಮುಖದ ಮೇಲೆ ನೀರು ಚಿಮುಕಿಸಲಾಯಿತು,” ಎಂದು ಸ್ವಪ್ನಿಲ್ ಹೇಳಿದರು. “ಒಟ್ಟಾರೆಯಾಗಿ ಶ್ರುತಿ ತುಂಬಾ ಪ್ರಭಾವಶಾಲಿ ಅಭಿನಯ ನೀಡಿದ್ದಾರೆ. ಮೇ 29ರ ಬೆಳಗ್ಗೆ ಆರಂಭವಾದ ನೃತ್ಯ ಜೂನ್ 3ರ ಮಧ್ಯಾಹ್ನದವರೆಗೆ ನಡೆಯಿತು. ಆ ನಂತರ ಶ್ರುತಿ ಇಡೀ ದಿನ…

Read More

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ಎಲ್ಲ ಸಚಿವರನ್ನು ದೆಹಲಿಗೆ ಕರೆಸಿದರು. ಇದೇ 21ರಂದು ಸಭೆ ನಡೆಯಲಿದೆ. ಪಕ್ಷದ ನಾಯಕತ್ವದೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಸಚಿವರನ್ನು ದೆಹಲಿಗೆ ಕರೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಮತ್ತು ಕೇಂದ್ರ ಸಚಿವರನ್ನು ಭೇಟಿ ಮಾಡಲು ಸಾಧ್ಯವಿದೆ. ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿಯನ್ನು ಭೇಟಿ ಮಾಡಬಹುದು ಎಂದೂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಬಗ್ಗೆಯೂ ನಾಯಕತ್ವದೊಂದಿಗಿನ ಸಭೆಯಲ್ಲಿ ಚರ್ಚಿಸಲಾಗುವುದು. ರಾಜ್ಯದಲ್ಲಿ ಜಾರಿಗೆ ತರಬೇಕಾದ ವಿವಿಧ ಯೋಜನೆಗಳ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗುವುದು. ರಾಜಕೀಯ ಭಿನ್ನಾಭಿಪ್ರಾಯಗಳಿಲ್ಲದೆ ಕರ್ನಾಟಕದ ಹಿತದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಈಗಾಗಲೇ ಹಲವರು ಭರವಸೆ ನೀಡಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ತುಮಕೂರು: ಚರಂಡಿ‌ ನೀರು ಹರಿದುಹೋಗುವ ವಿಚಾರದಲ್ಲಿ ಎರಡು ಕುಟುಂಬದ ಹೊಡೆದಾಟ ನಡೆದಿದ್ದು, ಈ ಗಲಾಟೆಯಲ್ಲಿ ಗಾಯಗೊಂಡ ಯುವಕ ಸಾವನ್ನಪ್ಪಿದ ಘಟನೆ  ತಿಪಟೂರು ತಾಲೂಕಿನ ಕನ್ನುಘಟ್ಟ ಗ್ರಾಮದಲ್ಲಿ ನಡೆದಿದೆ. ವಸಂತ ಕುಮಾರ್‌(24) ಮೃತ ಯುವಕನಾಗಿದ್ದಾನೆ. ಶಿವಬಸವಯ್ಯ ಮತ್ತು ಬಸವಲಿಂಗಯ್ಯರ ಕುಟುಂಬದ ನಡುವೆ ಗಲಾಟೆ ನಡೆದಿತ್ತು. ಗಲಾಟೆ ವೇಳೆ ಶಿವಬಸವಯ್ಯರ ಕುಟುಂಬದ ಮೇಲೆ ಬಸವಲಿಂಗಯ್ಯ ಕುಟುಂಬ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಪರಿಣಾಮವಾಗಿ ಶಿವಬಸವಯ್ಯರ ಪುತ್ರ ವಸಂತ ಕುಮಾರ್ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಬಸವಲಿಂಗಯ್ಯ, ಕುಮಾರ್, ವಿಜಯ್‌ ಸೇರಿದಂತೆ ಒಟ್ಟು 8 ಜನರ ವಿರುದ್ದ ದೂರು  ದಾಖಲಾಗಿದ್ದು, ನೊಣವಿನಕೆರೆ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಉಚಿತ ಪ್ರಯಾಣ ಮಾಡುತ್ತಿರುವ ಮಹಿಳಾ ಪ್ರಯಾಣಿಕರು ಯೋಜನೆಯ ಬಗ್ಗೆ ಕೊಂಡಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ  ಹೇಳಿದರು. ಯೋಜನೆಯ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮಹಿಳೆಯರಿಗೆ ಅನುಕೂಲ ಆಗಲಿ ಅಂತ ಈ ಯೋಜನೆ ಜಾರಿಗೆ ತಂದೆವು. ಅನುಕೂಲ ಆಗ್ತಿದೆ. ಧಾರ್ಮಿಕ ಕ್ಷೇತ್ರಗಳಿಗೆ ಒಟ್ಟಿಗೆ ಹೋಗ್ತಿದ್ದಾರೆ. ಅದಕ್ಕೆ ಕೆಲ ಬಸ್‍ಗಳು ರಶ್ ಆಗ್ತಿವೆ. 15 ದಿನದೊಳಗೆ ಒಂದು ಹಂತಕ್ಕೆ ಬರುತ್ತೆ ಎಂದ್ರು. ಶಾಲಾ ವಿದ್ಯಾರ್ಥಿಗಳಿಗೆ, ಕೆಲಸಕ್ಕೆ ಹೋಗುವವರಿಗೆ ಈ ಯೋಜನೆ ನೆರವಾಗಿವೆ. ಶಕ್ತಿ ಯೋಜನೆಯಿಂದ ನಮ್ಮ ಸಂಸ್ಥೆಗಳಿಗೆ ಯಾವುದೇ ಆರ್ಥಿಕ ಹೊರೆಯಾಗಲ್ಲ.  ಕೆಲವು ಬಸ್ ಗಳಲ್ಲಿ ನಕಲಿ ಆಧಾರ್ (Adhar Card) ತೋರಿಸಿ ಪ್ರಯಾಣ ಮಾಡ್ತಿರೋ ಬಗ್ಗೆಯೂ ಮಾತನಾಡಿದ ಸಚಿವರು, ನಮ್ಮ ಅಧಿಕಾರಿಗಳು ಅಲರ್ಟ್ ಆಗಿರಬೇಕು. ಅಕ್ರಮವಾಗಿ ನಕಲಿ ಮಾಡಿದ್ರ ಮೇಲೆ ದೂರು ನೀಡಿ, ಅವ್ರ ಮೇಲೆ ಕ್ರಮ ಆಗಬೇಕು ಅಂತ ನಮ್ಮ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.…

Read More

ಮಾಹೆಯಲ್ಲಿ ದಿನಾಂಕ 28/06/2023ರಿಂದ 30/06/2023ರವರೆಗೆ NICರವರು ಸರ್ವರ್ ಕಾರ್ಯನಿರ್ವಹಣೆ ಕಾರ್ಯವನ್ನು ಕೈಗೊಳ್ಳಲಿದ್ದಾರೆ. ಹಾಗಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಗೆ ದಿನಾಂಕ 27/06/2023ರಂದು ಕೊನೆಯ ದಿನಾಂಕವಾಗಿರುತ್ತದೆ ಎಂದು ಬೆಂಗಳೂರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಆದ್ದರಿಂದ ಪಡಿತರ ಚೀಟಿದಾರರು ದಿನಾಂಕ 27/06/2023ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆದುಕೊಳ್ಳುವಂತೆ ಪಡಿತರ ಚೀಟಿದಾರರಿಗೆ ಪ್ರಕಟಣೆ ಮೂಲಕ ಮಧುಗಿರಿ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುರುವೇಕೆರೆ: ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕೆಲವು ಬೆಳವಣಿಗೆಗಳಿಂದ ಸಾರ್ವಜನಿಕರಿಗೆ ಹಾಗೂ ರೋಗಿಗಳಿಗೆ ತುಂಬಾ ತೊಂದರೆ ಆಗುತ್ತಿದ್ದು , ಇದಕ್ಕೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಉತ್ತರಿಸಬೇಕಾಗಿದೆ ಎಂದು ತಾಲ್ಲೂಕು ಛಲವಾದಿ ಮಹಾಸಭಾ ಮುಖಂಡ ಕುಣಿಕೇನಹಳ್ಳಿ ಜಗದೀಶ್ ಆಗ್ರಹಿಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,   ಸರ್ಕಾರಿ  ಸಾರ್ವಜನಿಕ  ಆಸ್ಪತ್ರೆಯಲ್ಲಿನ  ಅವ್ಯವಸ್ಥೆ ಮತ್ತು ನಿರ್ಲಕ್ಷ  ಹಾಗೂ ಅವ್ಯವಹಾರಗಳ ಬಗ್ಗೆ   ಬೆಳಕು ಚಲ್ಲುವ ಪ್ರಕರಣಗಳು ನಡೆಯುತ್ತಿದ್ದು, ಸರ್ಕಾರಿ ಆಸ್ಪತ್ರೆ ಇರುವುದು ಬಡವರಿಗೆ ಅನುಕೂಲವಾಗಲೆಂದು, ಆದರೆ ಇಲ್ಲಿ ನಿರ್ಲಕ್ಷ್ಯ ಮತ್ತು ಅವ್ಯವಹಾರ ಬಗ್ಗೆ  ದಲಿತರು ದ್ವನಿ ಎತ್ತಲೇ ಬೇಕಾಗಿದೆ ಎಂದು ಕರೆ ನೀಡಿದರು. ಕಾರಣ ಆಸ್ಪತ್ರೆಯಲ್ಲಿ ವೈದ್ಯರಾಗಿರುವ  ಡಾ.ಮುರುಳಿಯವರ ಮೇಲಿನ ಆರೋಪದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೇಲಿನದು ಆರೋಪವಾ ಅಥವಾ ಷಡ್ಯಂತ್ರವ ಎನ್ನುವ ಬಗ್ಗೆ ನಾವು ವಿಚಾರ ಮಾಡಬೇಕಾಗಿದೆ. ಕೇವಲ ಇವರನ್ನು ಈ ವಿಚಾರದಲ್ಲಿ ಸಿಕ್ಕಿಸಿ ಅವರನ್ನು ತೇಜೋವಧೆ ಮಾಡಬೇಕೆನ್ನುವುದು, ಷಡ್ಯಂತ್ರ ಎನ್ನುವುದು ನಮಗೆ ಅರ್ಥವಾಗುತ್ತಿಲ್ಲ , ಇಲ್ಲಿ ಧ್ವನಿ ಎತ್ತುತ್ತಿರುವುದು ಕೇವಲ ಛಲವಾದಿ…

Read More

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಟ್ವಿಟರ್‌ ನಲ್ಲಿ 25 ಮಿಲಿಯನ್ ಹಿಂಬಾಲಕರನ್ನು ಹೊಂದಿರುವ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ಹಿಂಬಾಲಕರ ಸಂಖ್ಯೆ ಎಷ್ಟು ಎಂಬ ಮಾಹಿತಿಯನ್ನು ಸ್ವತಃ ಮುಖ್ಯಮಂತ್ರಿ ಕಚೇರಿಯೇ ಟ್ವಿಟರ್ ಮೂಲಕ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಯ ಜನಪ್ರಿಯತೆ ಮಿತಿ ಮೀರಿದ್ದು, ಇವತ್ತಿನವರೆಗೂ ದೇಶದ ಯಾವುದೇ ಪ್ರಮುಖ ನಾಯಕರಿಗೆ ಇಷ್ಟೊಂದು ಫಾಲೋವರ್ಸ್ ಇಲ್ಲ ಎಂದು ಟ್ವೀಟ್ ನಲ್ಲಿ ಹೇಳಲಾಗಿದೆ. ಇದರೊಂದಿಗೆ ಯೋಗಿ ಆದಿತ್ಯನಾಥ್ ಟ್ವಿಟರ್ ನಲ್ಲಿ 25 ಮಿಲಿಯನ್ ಸಾಧನೆ ಮಾಡುವ ಮೂಲಕ ಈ ದಾಖಲೆ ಸೃಷ್ಟಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಎಂಟು ವರ್ಷಗಳ ಹಿಂದೆ ಸೆಪ್ಟೆಂಬರ್ 2015 ರಲ್ಲಿ, ಮುಖ್ಯಮಂತ್ರಿ ಯೋಗಿ ಟ್ವಿಟರ್‌ನಲ್ಲಿ ತಮ್ಮ ಅಧಿಕೃತ ಹ್ಯಾಂಡಲ್ ಅನ್ನು ಪ್ರಾರಂಭಿಸಿದರು. 2017 ರಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್‌ನಲ್ಲಿ 89 ಮಿಲಿಯನ್ ಹಿಂಬಾಲಕರನ್ನು ಹೊಂದಿದ್ದಾರೆ. ಗೃಹ ಸಚಿವ ಅಮಿತ್ ಶಾ ಟ್ವಿಟರ್‌ನಲ್ಲಿ 33 ಮಿಲಿಯನ್…

Read More

ಮಣಿಪುರದಲ್ಲಿ ಮತ್ತೆ ಸಂಘರ್ಷ. ಘರ್ಷಣೆ ವೇಳೆ ಉಗ್ರರು ಕೇಂದ್ರ ಸಚಿವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಕೇಂದ್ರ ಸಚಿವ ರಾಜ್ ಕುಮಾರ್ ರಂಜನ್ ಸಿಂಗ್ ಮನೆಗೆ ಬೆಂಕಿ ಹಚ್ಚಲಾಗಿದೆ. ನಿನ್ನೆ ರಾತ್ರಿ ಇಂಫಾಲದಲ್ಲಿ ಮನೆಗೆ ಬೆಂಕಿ ಹಚ್ಚಲಾಗಿದೆ. ಘಟನೆಯ ವೇಳೆ ಕೇಂದ್ರ ಸಚಿವರು ಮನೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಂಸಾಚಾರ ಉಲ್ಬಣಗೊಂಡ ನಂತರ ಇಂಫಾಲ್‌ನಲ್ಲಿ ಕರ್ಫ್ಯೂ ಇದ್ದರೂ, ದಾಳಿಕೋರರು ನಗರದಾದ್ಯಂತ ತಿರುಗಾಡುತ್ತಿದ್ದರು. ಉಳಿದಂತೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಳೆದ ದಿನ ಮಣಿಪುರದಲ್ಲಿ ಕೈಗಾರಿಕಾ ಸಚಿವರ ಮನೆಗೆ ಬೆಂಕಿ ಹಚ್ಚಲಾಗಿತ್ತು. ಕೈಗಾರಿಕಾ ಸಚಿವ ನೆಮ್ಚಾ ಕಿಪ್ಜೆನ್ ಅವರ ಅಧಿಕೃತ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ. ದಾಳಿಕೋರರಿಗಾಗಿ ಭದ್ರತಾ ಪಡೆ ಹುಡುಕಾಟ ಆರಂಭಿಸಿದೆ. ಮಣಿಪುರದಲ್ಲಿ ಶಾಂತಿ ಕದನಕ್ಕೆ ಹಿನ್ನಡೆಯಾಗಿ ಮತ್ತೊಂದು ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಶಾಂತಿ ಪ್ರಕ್ರಿಯೆಗೆ ಧಕ್ಕೆ ತರುವ ಎಲ್ಲಾ ನಡೆಗಳನ್ನು ಬಲವಾಗಿ ವಿರೋಧಿಸಲಾಗುವುದು ಎಂದು ರಾಜಭವನ ಸ್ಪಷ್ಟಪಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More