Author: admin

ತುಮಕೂರು: ಶಾಲಾ ಶಿಕ್ಷಣದಲ್ಲಿ ಭಗವದ್ಗೀತೆ ಬೋಧನೆ ಸೇರಿಸಬೇಕು ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಎಂ) ಖಂಡಿಸಿದೆ. ಸಚಿವರು ರಾಜ್ಯಕ್ಕೆ ಸಿಗಬೇಕಾದ ಸಂಪನ್ಮೂಲ, ಅಭಿವೃದ್ಧಿಯ ಪ್ರಶ್ನೆಗಳತ್ತ ಗಮನ ಹರಿಸಬೇಕು. ಧಾರ್ಮಿಕ ಭಾವನೆಗಳನ್ನು ರಾಜಕೀಯವಾಗಿ ಬಳಸಬಾರದು ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಬಿ.ಉಮೇಶ್, ನಗರ ಕಾರ್ಯದರ್ಶಿ ಎ.ಲೋಕೇಶ್ ತಿಳಿಸಿದ್ದಾರೆ. ಸಚಿವರು ಪ್ರಸ್ತಾಪಿಸಿದಂತೆ ಭಗವದ್ಗೀತೆ ಭಾರತೀಯ ಸಂಸ್ಕೃತಿಯ ಪ್ರತೀಕ, ಕಾಲಾತೀತವಲ್ಲ. ಭಾರತೀಯ ಸಂಸ್ಕೃತಿ ಬಹು ನಂಬಿಕೆ, ಆಚಾರ ವಿಚಾರಗಳ ವೈವಿಧ್ಯತೆ, ಸಮಭಾವದಿಂದ ಕೂಡಿದೆ. ಸೌಹಾರ್ದತೆಯಿಂದ ಬದುಕಿ ಬಾಳುವುದು ನಾಡಿನ ಪರಂಪರೆ. ಒಂದು ವಿಭಾಗದ ಧಾರ್ಮಿಕ ನಂಬಿಕೆಗಳನ್ನು ರಾಷ್ಟ್ರದ ಸಂಸ್ಕೃತಿ ಎಂದು ನಂಬಿಸುವುದು ಅಸಂಬದ್ಧ ಹಾಗೂ ಅವೈಜ್ಞಾನಿಕ. ಇದು ವಿಭಜಕ ಕ್ರಮ ಎಂದು ಟೀಕಿಸಿದ್ದಾರೆ. ಎಲ್ಲ ಜನಾಂಗ, ಧರ್ಮದ ಮಕ್ಕಳು ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಮಕ್ಕಳಲ್ಲಿ ವೈಚಾರಿಕತೆ ದುರ್ಬಲಗೊಳಿಸುವ ಪ್ರಯತ್ನಗಳ ವಿರುದ್ಧ ರಾಜ್ಯದ ಜನತೆ ಜಾಗೃತಿ ವಹಿಸಬೇಕು ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಕೊರಟಗೆರೆ: ತಾಲ್ಲೂಕಿನ ಕುರಂಕೋಟೆ ಗ್ರಾಮದ ಚಿನ್ನೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ದೇವರಾಜು (56) ಎಂಬುವರು ಸೋಮವಾರ ರಾತ್ರಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಲೆ ವಿದ್ಯಾರ್ಥಿನಿ ಜತೆಗೆ ದೇವರಾಜು ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿತ್ತು ಎನ್ನಲಾಗಿದೆ. ಈ ಸಂಬಂಧ ಕೆಲವು ಹಿರಿಯರು ಸೇರಿಕೊಂಡು ವಿದ್ಯಾರ್ಥಿನಿ ಕುಟುಂಬದವರ ಜತೆಗೆ ರಾಜಿ ಸಂಧಾನ ನಡೆಸಿದ್ದರು. ಇದರ ನಡುವೆ ಕೆಲವು ಮಧ್ಯವರ್ತಿಗಳು, ಯೂಟ್ಯೂಬ್ ಪತ್ರಕರ್ತರು ಎಂದು ಹೇಳಿಕೊಂಡವರು ಹಣಕ್ಕಾಗಿ ಪೀಡಿಸಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ತಾಲೂಕಿನ ಗುಲಗಂಜಿ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಎಐಡಿಎಸ್ ಓ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ’ ಎಂದು ಹಳ್ಳಿಯ ಜನರು ಸರ್ಕಾರದ ವಿರುದ್ಧ ಒಕ್ಕೊರಲಿನಿಂದ ಧ್ವನಿಯೆತ್ತಿದರು. ಪ್ರತಿಭಟನೆಯನ್ನ ಉದ್ದೇಶಿಸಿ ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಗುಬ್ಬಿ ವೀರಣ್ಣನವರು ಕಟ್ಟಿಸಿ ಬೆಳೆಸಿರುವ ಗುಲಗಂಜಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಿ ಸಮುದ್ರನಹಳ್ಳಿ ಮ್ಯಾಗ್ನೆಟ್ ಗೆ ವಿಲೀನ ಮಾಡಲು ಮುಂದಾಗಿದೆ ಈ ನಿರ್ಧಾರವು ಅತ್ಯಂತ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಂದುವರೆದು, ನಿನ್ನೆ ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರು, ಸರ್ಕಾರಿ ಶಾಲೆ ಮುಚ್ಚುವುದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ, ಈ ರೀತಿಯ ಅಪಾದನೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿರುವ ಅಸತ್ಯದಿಂದ ಕೂಡಿದ ವಾದ ಎಂದೂ ಸಹ…

Read More

ಸರಗೂರು:  ನಾರಾಯಣ ಗುರುಗಳು ಶೋಷಿತರ ವರ್ಗಗಳಿಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿದ್ದಾರೆ, ಅಂತರ ವಿಧಾನಸೌಧ ಮತ್ತು ವಿಕಾಸಸೌಧ ಮುಂಭಾಗದಲ್ಲಿ ಶ್ರೀ ನಾರಾಯಣ ಗುರುಗಳ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಸರ್ಕಾರಕ್ಕೆ ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಒತ್ತಾಯಿಸಿದರು. ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕೆಂದು ಅಂದು ಕನಸು ಕಂಡಿದ್ದರು. ನಾರಾಯಣ ಗುರುಗಳ ಆದರ್ಶ, ವಿಚಾರ ತತ್ವಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಅವರು ಜಗತ್ತು ಕಂಡ ಅಪರೂಪದ ಸಂತರಲ್ಲಿ ಒಬ್ಬರು. ಮೌನ ಕ್ರಾಂತಿಯ ಹರಿಕಾರ ಶ್ರೀ ನಾರಾಯಣ ಗುರುಗಳ ವಿಧಾನಸೌಧ ಮುಂಭಾಗದಲ್ಲಿ ನಿರ್ಮಾಣ ಮಾಡಲು ಚಳಿಗಾಲ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರಿಪ್ರಸಾದ್ ರವರು ಧ್ವನಿ ಎತ್ತಬೇಕು ಎಂದು ಮನವಿ ಮಾಡಿದರು. ‘ಒಂದೇ ಜಾತಿ, ಒಂದೇ ಮತ, ಒಂದೇ ದೇವರು’ ಎಂದು ಇಡೀ ಮನುಕುಲಕ್ಕೇ ಸಾರಿದವರು ಸಂತಶ್ರೇಷ್ಠ ನಾರಾಯಣಗುರುಗಳು. ಇಂದಿನ ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ಜಾತೀಯ ವಿಷ ಭಾವನೆಗಳನ್ನು ಬಿತ್ತಿ, ‘ನಮ್ಮ ಧರ್ಮ’, ‘ನಮ್ಮ ಸಿದ್ಧಾಂತ’ ಎನ್ನುತ್ತಾ ಮತಭ್ರಾಂತಿಯಿಂದ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ. ಇಂಥ ಕಾಲಘಟ್ಟದಲ್ಲಿ, ‘ಅವನವನ ಆತ್ಮಸುಖಕ್ಕಾಗಿ…

Read More

ಕಬಡ್ಡಿ ಭಾರತದ ಮಣ್ಣಿನಿಂದ ಹುಟ್ಟಿದ ಒಂದು ಅತ್ಯಂತ ಜನಪ್ರಿಯ ಮತ್ತು ಪ್ರಾಚೀನ ಆಟ. ಇದು ಕೇವಲ ಒಂದು ಆಟವಲ್ಲ, ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಪ್ರತಿಬಿಂಬವಾಗಿದೆ. ಕಬಡ್ಡಿ ಪದದ ಉಚ್ಚಾರಣೆಯು ಕರಾವಳಿ ಮತ್ತು ದಕ್ಷಿಣ ಭಾರತದ ಪ್ರದೇಶಗಳಲ್ಲಿ ‘ಕೈ ಹಿಡಿ’ ಅಥವಾ ‘ಕಬಾಡು’ ಎಂಬ ಪದದಿಂದ ಬಂದಿರಬಹುದು ಎಂದು ಹೇಳಲಾಗಿದೆ.  ಕಬಡ್ಡಿಯು ಮೊದಲು ದಕ್ಷಿಣ ಭಾರತದ ತಮಿಳುನಾಡಿನಲ್ಲಿ ಹುಟ್ಟಿಕೊಂಡಿತು ಎಂಬ ವ್ಯಾಪಕ ನಂಬಿಕೆಯೂ ಇದೆ. ಆಧುನಿಕ ಕಬಡ್ಡಿ ಆಟಕ್ಕೆ ಒಂದು ನಿರ್ದಿಷ್ಟ ಸ್ವರೂಪ ಸಿಕ್ಕಿದ್ದು 20ನೇ ಶತಮಾನದಲ್ಲಿ. 1930 ರಲ್ಲಿ ಕಬಡ್ಡಿಯ ನಿಯಮಗಳನ್ನು ಮೊದಲ ಬಾರಿಗೆ ರೂಪಿಸಲಾಯಿತು ಮತ್ತು 1950 ರಲ್ಲಿ ಆಲ್ ಇಂಡಿಯಾ ಕಬಡ್ಡಿ ಫೆಡರೇಷನ್ (AIKF) ರಚನೆಯಾಯಿತು. ಏಷ್ಯನ್ ಕ್ರೀಡಾಕೂಟದಲ್ಲಿ ಕಬಡ್ಡಿ 1990 ರಲ್ಲಿ ಸೇರ್ಪಡೆಯಾಯಿತು. 2014 ರಲ್ಲಿ ಪ್ರಾರಂಭವಾದ ಪ್ರೊ ಕಬಡ್ಡಿ ಲೀಗ್ (PKL) ಈ ಆಟದ ಜನಪ್ರಿಯತೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಿತು. ಮುಖ್ಯ ನಿಯಮಗಳು: ಕಬಡ್ಡಿ ಆಟವನ್ನು ಎರಡು ತಂಡಗಳ ನಡುವೆ ಆಡಲಾಗುತ್ತದೆ. ಪ್ರತಿ ತಂಡದಲ್ಲಿ…

Read More

ಬೆಳಗಾವಿ: ಸೆಪ್ಟೆಂಬರ್ 2025ರವರೆಗೆ ರಾಜ್ಯದಲ್ಲಿ ಒಟ್ಟು 195.27 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗಿಂತ 47.46 ಲಕ್ಷ ಬಾಕ್ಸ್ ಕಡಿಮೆಯಾಗಿದ್ದು ಶೇ. 19.55ರಷ್ಟು ಕುಸಿತ ಕಂಡಿದೆ. ಮಳೆ, ಚಳಿಯಿಂದಾಗಿ ರಾಜ್ಯದಲ್ಲಿ ಬಿಯರ್ ಮಾರಾಟ ಗಣನೀಯ ಕುಸಿತ ಕಂಡಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಹೇಳಿದ್ದಾರೆ. ವಿಧಾನ ಪರಿಷತ್ತಿನ ನಿಯಮ 330ರ ಅಡಿಯಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಮತ್ತು ಎಂಎಲ್‌ ಸಿ ಕೆ.ಎಸ್.ನವೀನ್ ಈ ಬಗ್ಗೆ ಪ್ರಶ್ನಿಸಿದ್ದು, ಇದಕ್ಕೆ ಸಚಿವರು ಲಿಖಿತ ಉತ್ತರ ನೀಡಿದರು. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮದ್ಯ ಸೇವಿಸುತ್ತಿರುವವರು ಲಿವರ್ ಸಿರೋಸಿಸ್/ಕಾಮಾಲೆಯಿಂದ ಬಳಲುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಅಬಕಾರಿ ಇಲಾಖೆಯ ಆದಾಯದ ಕನಿಷ್ಠ 20 ಪ್ರತಿಶತವನ್ನು ಅವರ ಉತ್ತಮ ಚಿಕಿತ್ಸೆಗಾಗಿ ಹಂಚಿಕೆ ಮಾಡಬೇಕೆಂದು ಪ್ರಸ್ತಾಪಿಸಿದರು. ಅಬಕಾರಿ ಇಲಾಖೆಯಿಂದ ಬರುವ ಆದಾಯವನ್ನು ರಾಜ್ಯದ ಕ್ರೋಢೀಕೃತ ನಿಧಿಯಲ್ಲಿ ಠೇವಣಿ ಇಡಲಾಗುತ್ತದೆ. ಯಾವುದೇ ಉದ್ದೇಶಕ್ಕಾಗಿ ಹಣವನ್ನು ಮೀಸಲಿಡಲು ಯಾವುದೇ ನಿರ್ದಿಷ್ಟ ವ್ಯವಸ್ಥೆ…

Read More

ತುಮಕೂರು: ಹಿರಿಯ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಹೆಚ್.ಪಟೇಲ್ ಅವರ 25ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಜೆ.ಹೆಚ್.ಪಟೇಲ್ ಪ್ರತಿಷ್ಠಾನದ ವತಿಯಿಂದ ಡಿಸೆಂಬರ್ 12 ರಂದು ಮಧ್ಯಾಹ್ನ 3 ಗಂಟೆಗೆ ಕೋಲಾರದ ಕನ್ನಡ ಭವನ ಸ್ಯಾನಿಟೋರಿಯಂನಲ್ಲಿ ‘ಕುವ್ಯವಸ್ಥೆಯಿಂದ ಸುವ್ಯವಸ್ಥೆಯೆಡೆಗೆ’ ಎಂಬ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ ಎಂದು ಜೆಡಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಆರ್.ರಂಗನಾಥ್ ತಿಳಿಸಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ನಾಗಲಾಪುರ ಮಠದ ಶ್ರೀತೇಜೇಶಲಿಂಗ ಶಿವಾಚಾರ್ಯ ಸ್ವಾಮೀಜಿ ಗಳು ವಹಿಸಲಿದ್ದು, ವಿಧಾನಸಭಾ ಮಾಜಿ ಸ್ಪೀಕರ್ ಕೆ.ಆರ್.ರಮೇಶಕುಮಾರ್ ಕಾರ್ಯಕ್ರಮ ಉದ್ಘಾಟಿಸ ಲಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ನಿಕಟಪೂರ್ವ ನ್ಯಾಯಾಧೀಶರಾದ ವಿ.ಗೋಪಾಲಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಲೋಕಸಭಾ ಸದಸ್ಯ ಎಂ. ಮಲ್ಲೇಶಬಾಬು, ಮಾಜಿ ಸಭಾಪತಿ ಆರ್.ವಿ.ಸುದರ್ಶನ್, ಶಾಸಕರಾದ ಕೊತ್ತೂರು ಜಿ.ಮಂಜುನಾಥ್, ವಕೀಲರಾದ ಸಿ.ಎಸ್.ದ್ವಾರಕನಾಥ್, ಮಾಜಿ ಶಾಸಕರಾದ ಎಂ.ನಾರಾಯಣಸ್ವಾಮಿ, ಜೆ.ಹೆಚ್.ಪಟೇಲ್ ಪ್ರತಿಷ್ಠಾನದ ಅಧ್ಯಕ್ಷರಾದ ತ್ರಿಶೂಲಪಾಣಿ ಜೆ.ಹೆಚ್.ಪಟೇಲ್, ವ್ಯವಸ್ಥಾಪಕ ಧರ್ಮದರ್ಶಿ ಮಾಜಿ ಶಾಸಕರಾದ ಮಹಿಮ ಜೆ.ಪಟೇಲ್, ಧರ್ಮದರ್ಶಿ ಟಿ.ಪ್ರಭಾಕರ್ ಅವರುಗಳು ಭಾಗವಹಿಸಲಿದ್ದು,…

Read More

ಕೊರಟಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತರಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದ ಕೊರಟಗೆರೆ  ತಾಲ್ಲೂಕು ಕುರುಬ ಸಂಘದ ಅಧ್ಯಕ್ಷರಾದ ಮೈಲಾರಪ್ಪನವರ ಅಕಾಲಿಕ ಮರಣದಿಂದ ತೆರವಾದಂತ ಸ್ಥಾನಕ್ಕೆ ಹಾಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಕುರುಡುಗಾನಹಳ್ಳಿ ರಂಗಯ್ಯನವರನ್ನ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಕೊರಟಗೆರೆ ಪಟ್ಟಣದ ಬೈಲಾಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಕನಕ ಭವನದ ಬಳಿ 26 ಜನ ಸದಸ್ಯರು ಸರ್ವಾನುಮತದಿಂದ ಹಾಲಿ ಉಪಾಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯನವರನ್ನ ಆಯ್ಕೆ ಮಾಡಲಾಗಿದೆ. ಕೊರಟಗೆರೆ ತಾಲೂಕು ಕುರುಬ ಸಂಘದ ಅಧ್ಯಕ್ಷರಾಗಿದ್ದ ಮೈಲಾರಪ್ಪನವರ ಅಕಾಲಿಕ ಮರಣದಿಂದ ತೆರವಾಗಿದ್ದ ಸ್ಥಾನಕ್ಕೆ ಭಾನುವಾರ ಆಯ್ಕೆ ಪ್ರಕ್ರಿಯೆ ಜರುಗಿ 39 ಸದಸ್ಯ ಬಲವಿರುವ ತಾಲೂಕು ಕುರುಬ ಸಂಘದಲ್ಲಿ 29 ಜನ ಸದಸ್ಯರು ಒಂದು ಕಡೆ ಸೇರಿ ಸರ್ವಾನುಮತದಿಂದ ಆಯ್ಕೆ ಪ್ರಕ್ರಿಯೆ ನಡೆಸಿದ್ದಾರೆ. ನೂತನ ಅಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯ ಮಾತನಾಡಿ, ತಾಲೂಕು ಕುರುಬ ಸಂಘಕ್ಕೆ ಈ ಹಿಂದಿನ ಅಧ್ಯಕ್ಷರಾದ ಮೈಲಾರಪ್ಪ 2 ಎಕ್ರೆ ಜಮೀನು ತಂದಿದ್ದು, ಮೂರ್ನಾಲ್ಕು ಕೋಟಿ ರೂಪಾಯಿ ಅಂದಾಜು ಮೊತ್ತದಲ್ಲಿ ಬಹು ದೊಡ್ಡ ಮಟ್ಟದ ಭವನ…

Read More

ಸರಗೂರು:  ತಾಲೂಕಿನಲ್ಲೇ ದೊಡ್ಡಗ್ರಾಮವಾದ ಲಂಕೆ ಗ್ರಾಮವನ್ನು ಮಾದರಿ ಗ್ರಾಮ ಮಾಡುವುದಾಗಿ ಶಾಸಕರು, ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ಅನಿಲ್ ಚಿಕ್ಕಮಾದು ತಿಳಿಸಿದರು. ತಾಲೂಕಿನ ಲಂಕೆ ಗ್ರಾಮದಲ್ಲಿ ಶನಿವಾರದಂದು 1 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ದೊಡ್ಡ ಗ್ರಾಮವಾದ ಲಂಕೆಗೆ ನಾನು ಶಾಸಕನಾದ ಮೇಲೆ ಸುಮಾರು 5 ಕೋಟಿ ರೂ.ಗಳಿಗೆ ಹೆಚ್ಚು ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ನೀಡಿ, ಮಾದರಿ ಗ್ರಾಮವನ್ನಾಗಿ ಮಾಡಲಾಗುವುದು. ಇಲ್ಲಿ ಎಲ್ಲ ಸಮುದಾಯದವರು ವಾಸವಾಗಿದ್ದೀರಿ. ಮಾಜಿ ಶಾಸಕರಾದ ತಂದೆ ದಿ.ಚಿಕ್ಕಮಾದು, ಮಾಜಿ ಸಂಸದ ಆರ್.ಧ್ರುವನಾರಾಯಣ ಅವರು ಹೆಚ್ಚಿನ ಶ್ರಮ ವಹಿಸಿ, ಗ್ರಾಮಕ್ಕೆ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಮುಂದಾಗಿದ್ದರು ಎಂದು ಅವರು ಹೇಳಿದರು. “ಗ್ರಾಮದಲ್ಲಿನ ರಸ್ತೆ, ಚರಂಡಿ, ಅಂಬೇಡ್ಕರ್ ಸಮುದಾಯಭವನ, ಆಸ್ಪತ್ರೆ, ಅಂಗನವಾಡಿ ಸೇರಿದಂತೆ ಇನ್ನಿತರ ಕಾಮಗಾರಿಗಳ ಅಭಿವೃದ್ಧಿಗೆ ಅನುದಾನ ನೀಡಿದ್ದೇನೆ. ಮುಂದಿನ ದಿನಗಳಲ್ಲಿಯೂ ಇನ್ನೂ ಹೆಚ್ಚಿನ ಅನುದಾನ…

Read More

ಪ್ರತಿಭಾ ಕಾರಂಜಿ:  ಸಹನಾ ಶಾಲೆ  ರಾಜ್ಯ ಮಟ್ಟಕೆ ಆಯ್ಕೆ ಪಾವಗಡ: ಮಧುಗಿರಿ ಸಿದ್ದಾರ್ಥ ಪ್ರೌಢಶಾಲೆಯಲ್ಲಿ ನಡೆದ  ಜಿಲ್ಲಾ ಮಟ್ಟದ  ಪ್ರತಿಭಾ ಕಾರಂಜಿಯಲ್ಲಿ   ಪಾವಗಡ ತಾಲ್ಲೂಕು ಕೋಟಗುಡ್ಡ  ಸಹನಾ ಶಾಲೆಯ ವಿದ್ಯಾರ್ಥಿಗಳಾದ ದೀಪ್ತಿ ರೆಡ್ಡಿ ಕನ್ನಡ ಭಾಷಣದಲ್ಲಿ ಹಾಗೂ ಚಂದನ ಕುಮಾರಿ ಹಿಂದಿ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಖ್ಯಶಿಕ್ಷರಾದ ಎಸ್. ನರಸಿಂಹಪ್ಪ ಹಾಗೂ ಮಾರ್ಗದರ್ಶಕ ಶಿಕ್ಷಕಿಯರಾದ ಲೀಲಾವತಿ, ಶ್ವೇತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಕ್ವಿಝ್: ಸಹನಾ ಶಾಲೆ ಪ್ರಥಮ ಪಾವಗಡ: ತಾಲ್ಲೂಕು ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ಒಕ್ಕೂಟ ಹಾಗೂ ವಿ.ಎಸ್.ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಹಯೋಗದೊಂದಿಗೆ ನಡೆದ ತಾಲ್ಲೂಕು ಮಟ್ಟದ ಹತ್ತನೇ ತರಗತಿಯ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಕೋಟಗುಡ್ಡ ಸಹನಾ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ. ವಿಜೇತ ವಿದ್ಯಾರ್ಥಿಗಳನ್ನು ಆಡಳಿತಾಧಿಕಾರಿಗಳಾದ ಎನ್. ಶ್ರೀನಿವಾಸ್ ಮುಖ್ಯಶಿಕ್ಷಕರಾದ ಎಸ್. ನರಸಿಂಹಪ್ಪ ಶಿಕ್ಷಕರಾದ ಜೀನಿಷ್, ಜೀಜೊ, ಲೀಲಾವತಿ, ಮಮತ, ಶ್ವೇತಾ, ಮರಿಯಾ, ಅಭಿನಂದಿಸಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More