Author: admin

ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಕೊಳ್ಳುರ ಗ್ರಾಮದ ಸೆಂಟ್ ಪಾಲ್ ಮೆಥೋಡಿಸ್ಟ್ ಚರ್ಚ್‌ನಲ್ಲಿ ಇಂದು ಕ್ರಿಸ್ಮಸ್ ಹಬ್ಬವನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಲೋಕದ ರಕ್ಷಕ ಯೇಸುಕ್ರಿಸ್ತನ ಜನ್ಮದಿನದ ನೆನಪಿಗಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ವಿಶೇಷ ಪ್ರಾರ್ಥನೆ ಮತ್ತು ಸಂದೇಶ: ಹಬ್ಬದ ಪ್ರಯುಕ್ತ ಚರ್ಚ್‌ನಲ್ಲಿ ಯೇಸುಕ್ರಿಸ್ತನ ಜನ್ಮ ವೃತ್ತಾಂತವನ್ನು ಸ್ಮರಿಸುತ್ತಾ ಕೇಕ್ ಕತ್ತರಿಸುವ ಮೂಲಕ ಸಂಭ್ರಮ ಹಂಚಿಕೊಳ್ಳಲಾಯಿತು. ನಂತರ ವಿಶೇಷ ಆರಾಧನೆ ಮತ್ತು ಪ್ರಾರ್ಥನೆಗಳನ್ನು ಸಲ್ಲಿಸಲಾಯಿತು. ಚರ್ಚ್‌ನ ಪಾಸ್ಟರ್ ಸಂಪತ್ತ ಕುಮಾರ ಅವರು ಭಕ್ತರಿಗೆ ಕ್ರಿಸ್ಮಸ್ ಸಂದೇಶ ನೀಡಿ, ಯೇಸುವಿನ ಬೋಧನೆಗಳಾದ ಪ್ರೀತಿ ಮತ್ತು ಕ್ಷಮೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ ನೀಡಿದರು. ಶಾಂತಿ ಮತ್ತು ಸೌಹಾರ್ದತೆಯ ಸಂಕೇತ: ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖಂಡ ಸುಧಾಕರ ಕೊಳ್ಳುರ ಅವರು, “ಕ್ರಿಸ್ಮಸ್ ಹಬ್ಬವು ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ; ಇದು ಶಾಂತಿ, ಪ್ರೀತಿ, ಸೌಹಾರ್ದತೆ ಮತ್ತು ಕರುಣೆಯ ಮಹಾನ್ ಸಂಕೇತವಾಗಿದೆ. ಮನುಕುಲದ ಕಲ್ಯಾಣಕ್ಕಾಗಿ ಯೇಸು ತೋರಿದ ಹಾದಿಯಲ್ಲಿ ನಾವೆಲ್ಲರೂ…

Read More

ತುಮಕೂರು:  ತುಮಕೂರಿನ ಎಸ್‌.ಎಸ್.ಪುರಂನಲ್ಲಿರುವ ಗ್ರ್ಯಾಂಡ್ ಪಾರ್ಟಿ ಹಾಲ್ ನಲ್ಲಿ ಡ್ರೀಮ್ ಡೀಲ್ ಗ್ರೂಪ್ ವತಿಯಿಂದ ಆಯೋಜಿಸಲಾಗಿದ್ದ ಡ್ರೀಮ್ ಡೀಲ್ ಲಕ್ಕಿ ಡ್ರಾ ಕಾರ್ಯಕ್ರಮ ಗುರುವಾರ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಭರ್ಜರಿ ರೀತಿಯಲ್ಲಿ ನಡೆಯಿತು. ಡಿಸೆಂಬರ್ ತಿಂಗಳ ಕನಸಿನ ಮೆಗಾ ಹಬ್ಬದ ಅಂಗವಾಗಿ ಆಯೋಜಿಸಿದ್ದ ಈ ಲಕ್ಕಿ ಡ್ರಾ ಕಾರ್ಯಕ್ರಮದಲ್ಲಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಐಫೋನ್ 16 ಪ್ಲಸ್, ಬಂಗಾರದ ಉಂಗುರಗಳು ಹಾಗೂ ಅಚ್ಚರಿಯ ಉಡುಗೊರೆಗಳು ವಿಜೇತರಿಗೆ ವಿತರಿಸಲಾಯಿತು. ಈ ಲಕ್ಕಿ ಡ್ರಾದಲ್ಲಿ  ಐಫೋನ್ 16 ಪ್ಲಸ್– 3 ಜನರಿಗೆ, ಬಂಗಾರದ ಉಂಗುರಗಳು– 25 ಜನರಿಗೆ, ಅಚ್ಚರಿಯ ಉಡುಗೊರೆಗಳು –ಮತ್ತೊಂದು 25 ಜನರಿಗೆ ವಿತರಿಸಲಾಯಿತು. ಒಟ್ಟು 53 ಜನ ಭಾಗ್ಯಶಾಲಿ ವಿಜೇತರಿಗೆ ಲಕ್ಕಿ ಡ್ರಾ ಮೂಲಕ ಬಹುಮಾನ ಲಭಿಸಿತು. ವಿಜೇತರನ್ನು ಸ್ಥಳದಲ್ಲಿಯೇ ಘೋಷಿಸಿ ಬಹುಮಾನ ವಿತರಣೆ ಮಾಡಲಾಗಿದ್ದು, ಸ್ಥಳದಲ್ಲಿರದ ಕೆಲ ವಿಜೇತರಿಗೆ ಫೋನ್ ಮೂಲಕ ಸಂಪರ್ಕಿಸಿ ಅಚ್ಚರಿ ಮೂಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಮ್ಮ…

Read More

ಬೆಂಗಳೂರು/ಟಿ. ದಾಸರಹಳ್ಳಿ:  ಕಾನೂನು ಜಾಗೃತಿ, ಸಮಾಜ ಸೇವೆ, ಉದ್ಯೋಗ ಸೃಷ್ಟಿ, ಶಿಕ್ಷಣ ಹೋರಾಟ ಹಾಗೂ ಜನಪರ ಪತ್ರಿಕೋದ್ಯಮದ ಕ್ಷೇತ್ರಗಳಲ್ಲಿ ನಿರಂತರ ಮತ್ತು ನಿಸ್ವಾರ್ಥ ಸೇವೆ ಸಲ್ಲಿಸಿದ ವಕೀಲರು, ಸಮಾಜ ಸೇವಕರು ಮತ್ತು ಮಾಧ್ಯಮ ಪ್ರತಿನಿಧಿಗಳನ್ನು ಗೌರವಿಸುವ ಉದ್ದೇಶದಿಂದ VPK ಲಾ ಎನ್‌ ಜಿಒ ಗ್ರೂಪ್ಸ್ ಇಂಡಿಯಾ ವತಿಯಿಂದ ಸಮಾಜ ಸೇವಾ ರತ್ನ ಹಾಗೂ ಸೂಪರ್ ಲಾಯರ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಟಿ. ದಾಸರಹಳ್ಳಿಯಲ್ಲಿರುವ ಸಂಸ್ಥೆಯ ಕಚೇರಿ ಆವರಣದಲ್ಲಿ ಭವ್ಯವಾಗಿ ಆಯೋಜಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿವೃತ್ತ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವೆಂಕಟೇಶ್ ವರ್ಸೆ, ಕಾನೂನು ವೃತ್ತಿಯು ಕೇವಲ ವೃತ್ತಿಯಾಗದೆ, ಸಮಾಜದ ಮೇಲಿನ ಮಹತ್ತರ ಜವಾಬ್ದಾರಿಯನ್ನು ಹೊತ್ತಿರಬೇಕು ಎಂದು ಅಭಿಪ್ರಾಯಪಟ್ಟರು. ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ನೆಲಮಟ್ಟಕ್ಕೆ ತಲುಪಿಸುವಲ್ಲಿ ವಕೀಲರು ಹಾಗೂ ಸಮಾಜ ಸೇವಕರ ಪಾತ್ರ ಅತ್ಯಂತ ಮಹತ್ವದ್ದೆಂದು ಅವರು ತಿಳಿಸಿದರು. ತುಮಕೂರು ವಿಶ್ವವಿದ್ಯಾಲಯದ ಮಾಜಿ ಮೌಲ್ಯಮಾಪನ ಕುಲಸಚಿವರೂ ಹಾಗೂ ಕಾನೂನು ಪ್ರಾಧ್ಯಾಪಕರಾದ ಪ್ರೊ. ಡಾ.ಸತೀಶ್ ಗೌಡ ಮಾತನಾಡಿ,…

Read More

ತುಮಕೂರು ಬೆಸ್ಕಾಂ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಡಿಸೆಂಬರ್ 27 ಮತ್ತು 28ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಡಿಸೆಂಬರ್ 27ರಂದು: ಬಿದರೆ, ದೊಡ್ಡಗುಣಿ, ಕಡಬ, ಕಲ್ಲೂರು, ಕೆ.ಜೆ.ಟೆಂಪಲ್, ಉಂಗ್ರಾ, ಸೋಮಲಾಪುರ, ಹೊನ್ನುಡಿಕೆ, ಹಿರೇಹಳ್ಳಿ ಮತ್ತು ನೈರುತ್ಯ ರೈಲ್ವೆ ಉಪಸ್ಥಾವರ, ನಿಟ್ಟೂರು ಸ್ವೀಕರಣಾ ಕೇಂದ್ರದ ವ್ಯಾಪ್ತಿಯ ಎಲ್ಲ ಗ್ರಾಮಗಳು ಮತ್ತು ಕೈಗಾರಿಕಾ ಪ್ರದೇಶಗಳು. ಡಿಸೆಂಬರ್ 28ರಂದು: ಅಂತರಸನಹಳ್ಳಿ ಸ್ವೀಕರಣಾ ಕೇಂದ್ರದ ವ್ಯಾಪ್ತಿ: ಬೆಳ್ಳಾವಿ, ಹೆಗ್ಗೆರೆ, ಮಲ್ಲಸಂದ್ರ, ದೊಡ್ಡ ಸಾರಂಗಿ, ಕೋರ, ಬೆಳಧರ, ಊರ್ಡಿಗೆರೆ, ಸಿ.ಟಿ.ಕೆರೆ, ಟಿಎಂಟಿಪಿ ಹಾಗೂ ವಿಪ್ರೊ ಮಾರ್ಗ. ವಸಂತನರಸಾಪುರ ಸ್ವೀಕರಣಾ ಕೇಂದ್ರದ ವ್ಯಾಪ್ತಿ: ತೋವಿನಕೆರೆ, ಚೇಳೂರು, ಹೊಸಕೆರೆ, ಹಾಗಲವಾಡಿ, ಮೆಳೆಕೋಟೆ, ನಂದಿಹಳ್ಳಿ, ಹೆಬ್ಬೂರು, ತಿಮ್ಮಸಂದ್ರ, ಹೊನ್ನೇನಹಳ್ಳಿ, ಬಡ್ಡಿಹಳ್ಳಿ ಉಪಸ್ಥಾವರಗಳಿಗೆ ಒಳಪಡುವ ಗ್ರಾಮಗಳು ಮತ್ತು ಕೈಗಾರಿಕಾ ಪ್ರದೇಶಗಳು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ಬೆಂಗಳೂರು/ಜೈಪುರ: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ವೇಗಿ ಯಶ್ ದಯಾಳ್ ಅವರಿಗೆ ಸಂಕಷ್ಟ ಎದುರಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದಾಖಲಾಗಿರುವ ಪೋಕ್ಸೋ (POCSO) ಪ್ರಕರಣದಲ್ಲಿ ಜೈಪುರದ ವಿಶೇಷ ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದಾಗಿ ಕ್ರಿಕೆಟಿಗನಿಗೆ ಈಗ ಬಂಧನದ ಭೀತಿ ಎದುರಾಗಿದೆ. ಘಾಜಿಯಾಬಾದ್ ಮೂಲದ ಸಂತ್ರಸ್ತೆ, ಯಶ್ ದಯಾಳ್ ಮದುವೆಯಾಗುವುದಾಗಿ ನಂಬಿಸಿ ತನಗೆ ವಂಚಿಸಿದ್ದಾರೆ ಮತ್ತು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಯಶ್ ತನ್ನನ್ನು ಊಟಿಗೆ ಕರೆದೊಯ್ದಿದ್ದರು ಮತ್ತು ಸುಮಾರು 15 ದಿನಗಳ ಕಾಲ ಅವರ ಮನೆಯಲ್ಲೇ ಉಳಿದುಕೊಂಡಿದ್ದೆ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಯಶ್ ಇತರ ಹಲವು ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಅವರು ದೂರಿದ್ದಾರೆ. ಪ್ರಕರಣದ ಗಂಭೀರತೆ ಮತ್ತು ಲಭ್ಯವಿರುವ ಸಾಕ್ಷ್ಯಗಳನ್ನು ಗಮನಿಸಿದ ನ್ಯಾಯಾಧೀಶರಾದ ಅಲ್ಕಾ ಬನ್ಸಾಲ್, ತನಿಖೆಯ ಈ ಹಂತದಲ್ಲಿ ಆರೋಪಿಗೆ ಬಂಧನದಿಂದ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿ…

Read More

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ರ ಮನೆಯಲ್ಲಿ ದಿನಕ್ಕೊಂದು ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ರಕ್ಷಿತಾ ಮತ್ತು ಗಿಲ್ಲಿ ನಟ ಅವರ ಸ್ನೇಹ ಹಾಗೂ ಕೆಮಿಸ್ಟ್ರಿ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ರಕ್ಷಿತಾ ನೀಡಿರುವ ಒಂದು ಹೇಳಿಕೆ ಈಗ ವೀಕ್ಷಕರಲ್ಲಿ ಹೊಸ ಅನುಮಾನ ಹುಟ್ಟುಹಾಕಿದೆ. ಏನಿದು ರಕ್ಷಿತಾ ಹೇಳಿಕೆ? ಇತ್ತೀಚೆಗೆ ಸೂರಜ್ ಅವರ ಸಹೋದರಿ ಬಿಗ್ ಬಾಸ್ ಮನೆಗೆ ಭೇಟಿ ನೀಡಿದ್ದಾಗ, “ಬಿಗ್ ಬಾಸ್ ಮನೆಯಲ್ಲಿರುವವರೆಲ್ಲರೂ ನಿನಗೆ ಅಣ್ಣಂದಿರಲ್ಲವೇ?” ಎಂದು ರಕ್ಷಿತಾ ಅವರನ್ನು ಕೇಳಿದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ರಕ್ಷಿತಾ, “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯಲ್ಲಿರುವ ಮಿಕ್ಕವರೆಲ್ಲರೂ ನನಗೆ ಅಣ್ಣಂದಿರು” ಎಂದು ಉತ್ತರಿಸಿದ್ದಾರೆ. ಈ ಮಾತು ಕೇಳಿದ ಮನೆಯ ಸದಸ್ಯರು ಹಾಗೂ ವೀಕ್ಷಕರು ಶಾಕ್ ಆಗಿದ್ದಾರೆ. ಗಿಲ್ಲಿ ಮೇಲೆ ಪ್ರೀತಿ ಇದೆಯೇ? ರಕ್ಷಿತಾ ಅವರ ಈ ನೇರ ಹೇಳಿಕೆಯಿಂದಾಗಿ, ಗಿಲ್ಲಿ ಮೇಲೆ ಅವರಿಗೆ ಕೇವಲ ಸ್ನೇಹ ಮಾತ್ರವಲ್ಲದೆ ವಿಶೇಷವಾದ ಪ್ರೀತಿ ಇದೆಯೇ…

Read More

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸುವುದನ್ನು ತಡೆಯಲು ಅರಣ್ಯ ಇಲಾಖೆಯು ಕೃತಕ ಬುದ್ಧಿಮತ್ತೆ (AI) ಆಧಾರಿತ ‘ಫಾರ್ಮ್ ಗಾರ್ಡ್’ (ತೋಟದ ಕಾವಲುಗಾರ) ಎಂಬ ಅತ್ಯಾಧುನಿಕ ಕ್ಯಾಮರಾಗಳನ್ನು ಅಳವಡಿಸಿದೆ. ನಾಗರಹೊಳೆಯ ವೀರನಹೊಸಳ್ಳಿ ವಲಯದ ಬೊಮ್ಮಲಾಪುರ ಹಾಡಿಯ ಗಡಿಯಲ್ಲಿ ಈ ಪ್ರಾಯೋಗಿಕ ಯೋಜನೆಯನ್ನು ಜಾರಿಗೆ ತರಲಾಗಿದೆ. ಕಾರ್ಯನಿರ್ವಹಣೆ ಹೇಗೆ? ಈ ಎಐ ಆಧಾರಿತ ಕ್ಯಾಮರಾವು ಆನೆಗಳನ್ನು ಸುಮಾರು 150 ಮೀಟರ್ ದೂರದಲ್ಲೇ ಪತ್ತೆಹಚ್ಚುವ ಸಾಮರ್ಥ್ಯ ಹೊಂದಿದೆ. ಆನೆಯು ಅರಣ್ಯದ ಗಡಿ ದಾಟಿ ಬರುತ್ತಿರುವುದು ಕಂಡುಬಂದ ತಕ್ಷಣ, ಈ ಸಾಧನವು ಧ್ವನಿವರ್ಧಕಗಳ ಮೂಲಕ ವಿವಿಧ ರೀತಿಯ ಭಯಾನಕ ಶಬ್ದಗಳನ್ನು ಹೊರಹಾಕುತ್ತದೆ. ಜೇನುನೋಣಗಳ ಝೇಂಕಾರ, ಪಟಾಕಿ ಸಿಡಿಯುವ ಸದ್ದು, ಸಿಡಿಲು-ಗುಡುಗಿನ ಧ್ವನಿ ಹಾಗೂ ಮನುಷ್ಯರು ಕಿರುಚುವ ಸದ್ದು ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಬಗೆಯ ಶಬ್ದಗಳನ್ನು ಇದು ಮೊಳಗಿಸುತ್ತದೆ. ಈ ಶಬ್ದಗಳಿಂದ ಆನೆಗಳು ವಿಚಲಿತಗೊಂಡು ಭಯದಿಂದ ವಾಪಸ್ ಕಾಡಿನತ್ತ ತೆರಳುತ್ತವೆ. ಯೋಜನೆಯ ಪ್ರಾಮುಖ್ಯತೆ: ಬೊಮ್ಮಲಾಪುರ ಹಾಡಿಯ ಭೂಪ್ರದೇಶವು ಆನೆ…

Read More

ಬೆಂಗಳೂರು: ರಾಜ್ಯದ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ತೊಡಗಿರುವ ಸಿಬ್ಬಂದಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಅರಣ್ಯ ಇಲಾಖೆಯ ಖಾಯಂ ಅಧಿಕಾರಿಗಳು ಮತ್ತು ಸಿಬ್ಬಂದಿಗೆ 1 ಕೋಟಿ ರೂಪಾಯಿಗಳ ಅಪಘಾತ ವಿಮೆ ಸೌಲಭ್ಯವನ್ನು ಅವರು ಘೋಷಿಸಿದ್ದಾರೆ. ಈ ಮಹತ್ವದ ಯೋಜನೆಗಾಗಿ ಇಲಾಖೆಯು ‘ಬ್ಯಾಂಕ್ ಆಫ್ ಬರೋಡಾ’ ಜೊತೆಗೆ ತಿಳಿವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಿದೆ. ಈ ಯೋಜನೆಯ ಪ್ರಮುಖಾಂಶಗಳು ಈ ಕೆಳಗಿನಂತಿವೆ: ಖಾಯಂ ಸಿಬ್ಬಂದಿ: ಎಲ್ಲಾ ಖಾಯಂ ಉದ್ಯೋಗಿಗಳಿಗೆ ಅವರ ಶ್ರೇಣಿಯ ಹಂಗಿಲ್ಲದೆ 1 ಕೋಟಿ ರೂ. ವೈಯಕ್ತಿಕ ಅಪಘಾತ ವಿಮೆ ದೊರೆಯಲಿದೆ. ಕರ್ತವ್ಯದ ಅವಧಿಯಲ್ಲಿ ಮೃತಪಟ್ಟರೆ ಬ್ಯಾಂಕ್‌ನಿಂದ ಹೆಚ್ಚುವರಿಯಾಗಿ 25 ಲಕ್ಷ ರೂ. ಪಾವತಿಸಲಾಗುತ್ತದೆ. ಅಲ್ಲದೆ 10 ಲಕ್ಷ ರೂ. ಜೀವ ವಿಮಾ ರಕ್ಷಣೆಯೂ ಇರಲಿದೆ. ಹೊರಗುತ್ತಿಗೆ ಸಿಬ್ಬಂದಿ: ಅರಣ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಹೊರಗುತ್ತಿಗೆ ನೌಕರರಿಗೂ 20 ಲಕ್ಷ ರೂಪಾಯಿಗಳ ವಿಮಾ ಸೌಲಭ್ಯ ಕಲ್ಪಿಸಲಾಗಿದೆ. “ನಮ್ಮ ಹಸಿರು ಯೋಧರು ಜೀವದ ಹಂಗು…

Read More

ಸರಗೂರು:  ಭಾರತದ ಚರಿತ್ರೆಯಲ್ಲಿ ಡಿಸೆಂಬರ್ 25 ಬಹು ಮುಖ್ಯವಾದ ದಿನ. ಅಸ್ಪೃಶ್ಯತೆ, ಶ್ರೇಣೀಕೃತ ಜಾತಿ ಪದ್ಧತಿ, ತಾರತಮ್ಯಗಳ ಅಪಮೌಲ್ಯಗಳನ್ನೇ ಮೌಲ್ಯಗಳನ್ನಾಗಿಸಿ ಭಾರತೀಯ ಸುಪ್ತ ಮನಸ್ಸನ್ನು ಆಳುತ್ತಿರುವ ‘ಮನುಸ್ಮೃತಿ’ ಎಂಬ ‘ಭೂತಕಾಲದ ಸಂವಿಧಾನ’ವನ್ನು ಡಾ‌.ಬಿ.ಆರ್. ಅಂಬೇಡ್ಕರ್ ಸಾರ್ವಜನಿಕವಾಗಿ ಸುಟ್ಟು ಪ್ರತಿಭಟಿಸಿದ ದಿನ ಎಂದು ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಇಟ್ನ ರಾಜಣ್ಣ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರದಂದು ಸಾಂಕೇತಿಕವಾಗಿ ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸರಗೂರಿನ ಪ್ರವಾಸ ಮಂದಿರದಲ್ಲಿ ಹಮ್ಮಿಕೊಂಡಿದ್ದ ಮನುಸ್ಮೃತಿ ಪ್ರತಿಕೃತಿ ದಹನ ಸುಟ್ಟು ಹಾಕಿ ಮಾತನಾಡಿದರು. ಭಾರತದ ಹಿಂದೂ ಮನಸ್ಸು ಬದಲಾಗಬಹುದು, ಹಿಂದೂ ಧರ್ಮವನ್ನು ಒಳಗಿದ್ದುಕೊಂಡೇ ಸುಧಾರಿಸಬಹುದೇನೋ ಎನ್ನುವ ನಂಬಿಕೆಯಲ್ಲಿ ಮಹಾಡ್, ಚೌಡಾರ್ ಸತ್ಯಾಗ್ರಹಗಳನ್ನು ನಡೆಸಿದರು . ಈ  ಮೂಲಕ ಸಾರ್ವಜನಿಕ ಹಣದಲ್ಲಿ ನಿರ್ಮಾಣವಾಗಿರುವ ಕೆರೆಗೆಳು, ಬಾವಿಗಳು, ಧರ್ಮಶಾಲೆಗಳು ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳು ಎಲ್ಲರಿಗೂ ಮುಕ್ತವಾಗಿರಬೇಕು ಅನ್ನುವ ಕಾಯ್ದೆ ತಂದಿದ್ದರೂ ಅಸ್ಪೃಶ್ಯರಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಮನುಸ್ಮೃತಿ ಅಳಿಸಲಿ ಸಂವಿಧಾನ ಉಳಿಯಲಿ ಎಂಬ ಚೌಕಟ್ಟಿನಲ್ಲಿ ಬಾಬಾ…

Read More

ತಿಪಟೂರು: ನಗರದ ಕೋಡಿ ಸರ್ಕಲ್ ನ ಬಳಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಸಬಾ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಬೆಂಗಳೂರು ಪ್ರಾದೇಶಿಕ ನಿರ್ದೇಶಕರಾದ ಎಂ.ಶೀನಪ್ಪರವರ ಸಮ್ಮುಖದಲ್ಲಿ ನಡೆಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಎಂ.ಶೀನಪ್ಪ,  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರರಿಗೆ ಬ್ಯಾಂಕಿನ ಮೂಲಕ ನಡೆಯುವ ವ್ಯವಹಾರದ ಪಾರದರ್ಶಕತೆ ಹಾಗೂ ಯೋಜನೆಯ ಯಶಸ್ವಿ ಕಾರ್ಯಕ್ರಮಗಳಾದ ಕೃಷಿ, ಜ್ಞಾನವಿಕಾಸ, CSC, ಶುದ್ಧಗಂಗಾ ಹಾಗೂ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿ ರಾಜ್ಯದ ಬಡಜನತೆಯ ಅಭ್ಯುದಯಕ್ಕೆ ಸರಕಾರಗಳೊಟ್ಟಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅವಿರತ ಶ್ರಮಿಸುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು. ತುಮಕೂರು–1 ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ಮಾತನಾಡಿ, ಧರ್ಮಸ್ಥಳ ಸಂಘಗಳ ಗುಣಮಟ್ಟವನ್ನು ಕಾಯ್ದುಕೊಳ್ಳಲು ಒಕ್ಕೂಟಪದಾಧಿಕಾರಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಬಗ್ಗೆ ಎಳೆಎಳೆಯಾಗಿ ತಿಳಿಸಿ ಸಂಘದ ಪಾಲುದಾರಬಂದುಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಉದಯ್ ಕೆ., ವಲಯ ಮೇಲ್ವಿಚಾರಕ ಜಯಪ್ರಸಾದ್, ಕಸಬಾ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಹಾಗೂ ಒಕ್ಕೂಟ ಪದಾಧಿಕಾರಿಗಳು ಉಪಸ್ಥಿತರಿದ್ದರು.…

Read More