Subscribe to Updates
Get the latest creative news from FooBar about art, design and business.
- ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
- ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
- ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
- ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
- ಮಧುಗಿರಿ: ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
- ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
Author: admin
ಬೆಂಗಳೂರು : ಜಿಎಸ್ಟಿ ನಕಲಿ ರಸೀದಿ ಬಳಸಿ ಸರ್ಕಾರಕ್ಕೆ ತೆರಿಗೆ ವಂಚನೆ ಮಾಡುತ್ತಿದ್ದ ಜಾಲವನ್ನು ವಾಣಿಜ್ಯ ತೆರಿಗೆ ಇಲಾಖೆಯ ಬೆಂಗಳೂರು ದಕ್ಷಿಣ ವಲಯದ ಅಧಿಕಾರಿಗಳು ಪತ್ತೆ ಹಚ್ಚಿ, ಇಬ್ಬರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಚ್. ಎಂ. ಗುರುಪ್ರಸಾದ್ ಹಾಗೂ ಮಂಜುನಾಥಯ್ಯ ಬಂಧಿತ ಆರೋಪಿಗಳು. ವಂಚಕರು ತಮ್ಮ ಕುಟುಂಬದ ಸದಸ್ಯರು, ಸ್ನೇಹಿತರ ಹೆಸರಿನಲ್ಲಿ 30 ಕ್ಕೂ ಹೆಚ್ಚು ನಕಲಿ ಕಂಪನಿಗಳನ್ನು ತೆರೆದು 7 525 ಕೋಟಿ ವಹಿವಾಟು ನಡೆಸಿದ್ದಾರೆ. ಸರ್ಕಾರಕ್ಕೆ * 90 ಕೋಟಿ ತೆರಿಗೆ ನಷ್ಟ ಮಾಡಿದ್ದಾರೆ.
ಜೆಡಿಎಸ್ ಶಾಸಕರಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ. ಜೆಡಿಎಸ್ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಮನೆಗಳನ್ನು ಶಿಫ್ಟ್ ಮಾಡಿದ್ದು ಕಾಂಗ್ರೆಸ್ ಕ್ಷೇತ್ರದ ಶಾಸಕರಿಗೆ ಮನೆ ಮಂಜೂರು ಮಾಡಿದೆ. ತುರುವೇಕೆರೆಗೆ ಮಂಜೂರು ಆಗಿದ್ದ 3,375 ಮನೆಗಳನ್ನು ಕುಣಿಗಲ್ಗೆ ಶಿಫ್ಟ್ ಮಾಡಿದೆ. ಈ ಹಿನ್ನೆಲೆ ವಸತಿ ಇಲಾಖೆ ಸಚಿವ ಜಮೀರ್ ವಿರುದ್ಧ ಶಾಸಕ ಎಂ.ಟಿ.ಕೃಷ್ಣಪ್ಪ ಆಕ್ರೋಶ ಹೊರ ಹಾಕಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಹುಣಸನಹಳ್ಳಿ ಬಳಿ ನಡೆದಿದೆ. ಮೃತವ್ಯಕ್ತಿಯನ್ನುಮುನಿರಾಜು(56) ಎಂದು ಗುರುತಿಸಲಾಗಿದೆ.ಮೃತ ಮುನಿರಾಜು ಕಳೆದ ಹಲವು ದಿನಗಳಿಂದ ಕಿಡ್ನಿ ವೈಪಲ್ಯವಾಗಿ ಡಯಾಲಸಿಸ್ ನಲ್ಲಿದ್ದರು. ಇತ್ತೀಚೆಗೆ ಅನಾರೋಗ್ಯ ತೀವ್ರವಾಗಿದ್ದು ಮನನೊಂದು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲಿಗೆ ಸಿಲುಕಿದ ಪರಿಣಾಮ ದೇಹ ಎರಡು ತುಂಟಾಗಿದೆ. ಬಂಗಾರಪೇಟೆ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬಿಬಿಎಂಪಿ ವ್ಯಾಪ್ತಿಗೆ ಬರುವ ಉಲ್ಲಾಳು ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತಿರುವ ಹಿನ್ನೆಲೆಯಲ್ಲಿ ಕೆರೆಯನ್ನು ಸ್ವಚ್ಛಗೊಳಿಸಲು ಜೈವಿಕ ರಾಸಾಯನಿಕ ಹಾಕುವ ಕಾರ್ಯ ಆರಂಭಗೊಂಡಿದೆ. ಉದ್ಯಾನದ ಮಣ್ಣು, ಸೂಕ್ಷ್ಮ ಜೀವಾಣುಗಳು, ಕಾಕಂಬಿ, ಭತ್ತದ ತೌಡು ಮಿಶ್ರಣ ಮಾಡಿದ ಬೊಕಾಶಿ ಬಾಲ್ ಹಾಕಿ ಸ್ವಚ್ಛಗೊಳಿಸುವ ಪ್ರಕ್ರಿಯೆ ಕೂಡ ನಡೆಯುತ್ತಿದೆ ಎಂದು ಕೆರೆಗಳ ವಿಭಾಗದ ಮುಖ್ಯ ಎಂಜಿನಿಯರ್ ವಿಜಯಕುಮಾರ್ ಹರಿದಾಸ್ ತಿಳಿಸಿದ್ದಾರೆ. ಕೆರೆಯಲ್ಲಿ ನೀರು ಕಡಿಮೆಯಾಗಿ, ಇರುವ ನೀರು ಕಲುಷಿತಗೊಂಡು ಮೀನುಗಳು ಸತ್ತಿದ್ದವು. ಒಂದು ವಾರದಿಂದ ಮೀನು ಸಾಯುತ್ತಿದ್ದರೂ ಯಾರೂ ಭೇಟಿ ನೀಡಿ ಪರಿಶೀಲಿಸುವ, ಸತ್ತ ಮೀನು ತೆರವುಗೊಳಿಸುವ ಕಾರ್ಯ ಮಾಡಿರಲಿಲ್ಲ. ಇದರಿಂದ ದುರ್ವಾಸನೆ ಉಂಟಾಗಿತ್ತು. ಸತ್ತ ಮೀನುಗಳನ್ನು ಜೆಸಿಬಿ ಬಳಸಿ ತೆರವುಗೊಳಿಸಲಾಯಿತು. ಕೆರೆಯ ಮಣ್ಣನ್ನು ಪರೀಕ್ಷೆಗೆ ಒಯ್ಯಲಾಯಿತು. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ನವೀನ್, ಎಇಇ ಮಹೇಶ್, ಜಲಮಂಡಳಿ ಎಇಇ ಸೈಯದ್ ಇದ್ದರು.
ಬೆಂಗಳೂರು ಪೊಲೀಸ್ ಇಲಾಖೆಯ ಈಶಾನ್ಯ ವಿಭಾಗದಲ್ಲಿ ‘ಪೊಲೀಸ್ ಮಾರ್ಷಲ್’ಗಳಾಗಿ 700 ಮಂದಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು. ಆರೋಹಣ ಸಂಸ್ಥೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಈಶಾನ್ಯ ವಿಭಾಗ ವ್ಯಾಪ್ತಿಯ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ತರಬೇತಿ ನೀಡಲಾಗಿದೆ. ಪೊಲೀಸ್ ಮಾರ್ಷಲ್’ಗಳಿಗೆ ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಸುಪ್ರೀಂ ಕೋರ್ಟ್ನ ಅಧಿಕೃತ ವೆಬ್ ಸೈಟ್ ಎಂದು ಹೇಳಿಕೊಳ್ಳುವ ನಕಲಿ ವೆಬ್ಸೈಟ್. ನಕಲಿ ವೆಬ್ ಸೈಟ್ ಗಳಿಗೆ ಮರುಳಾಗಬೇಡಿ ಎಂದು, ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಸಾರ್ವಜನಿಕ ಎಚ್ಚರಿಕೆಯನ್ನು ನೀಡಿದೆ. ಜನರ ವೈಯಕ್ತಿಕ ಮಾಹಿತಿಯನ್ನು ಕದಿಯಲು ಸುಪ್ರೀಂ ಕೋರ್ಟ್ನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ನೋಟಿಸ್ ನಲ್ಲಿ ಹೇಳಲಾಗಿದೆ. http://cbins/scigv.com, https://cbins.scigv.com/offence ನಂತಹ ನಕಲಿ ಲಿಂಕ್ ಗಳನ್ನು ಕ್ಲಿಕ್ ಮಾಡಬೇಡಿ ಅಥವಾ ಹಂಚಿಕೊಳ್ಳಬೇಡಿ. ನೀವು ಸ್ವೀಕರಿಸುವ ಲಿಂಕ್ ಗಳ ದೃಢೀಕರಣವನ್ನು ಪರಿಶೀಲಿಸಿ. ವೈಯಕ್ತಿಕ ಮಾಹಿತಿ, ಹಣಕಾಸಿನ ವಿವರಗಳು ಅಥವಾ ಇತರ ಗೌಪ್ಯ ಮಾಹಿತಿಯನ್ನು ಸುಪ್ರೀಂ ಕೋರ್ಟ್ ಎಂದಿಗೂ ಕೇಳುವುದಿಲ್ಲ ಎಂಬುದನ್ನು ಗಮನಿಸಿ. ಮೇಲಿನ URL ಗಳಲ್ಲಿ ಯಾವುದೇ ವೈಯಕ್ತಿಕ ಮತ್ತು ಗೌಪ್ಯ ಮಾಹಿತಿಯನ್ನು ಹಂಚಿಕೊಳ್ಳದಂತೆ ಅಥವಾ ಬಹಿರಂಗಪಡಿಸದಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ನೀವು ಮೇಲೆ ತಿಳಿಸಲಾದ ‘ಫಿಶಿಂಗ್’ ದಾಳಿಯ ಬಲಿಪಶುವಾಗಿದ್ದರೆ, ಎಲ್ಲಾ ಆನ್ ಲೈನ್ ಖಾತೆಯ ಪಾಸ್ ವರ್ಡ್ಗಳನ್ನು ಸಾಧ್ಯವಾದಷ್ಟು ಬೇಗ ಬದಲಾಯಿಸಬೇಕು. ಅನಧಿಕೃತ ಪ್ರವೇಶವನ್ನು ಬ್ಯಾಂಕ್ ಮತ್ತು ಕ್ರೆಡಿಟ್ ಕಾರ್ಡ್ ಕಂಪನಿಗೆ ವರದಿ…
2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಬಿಜೆಪಿ ಸುಳಿವು ನೀಡಿದೆ. ಟರ್ಮಿನೇಟರ್ ಚಿತ್ರದ ಪ್ರಮುಖ ಪಾತ್ರದ ಪೋಸ್ಟರ್ ನಲ್ಲಿ ನರೇಂದ್ರ ಮೋದಿ ಅವರ ಚಿತ್ರವನ್ನು ಎಡಿಟ್ ಮಾಡುವ ಮೂಲಕ ಬಿಜೆಪಿ ಪ್ರಚಾರ ಮಾಡುತ್ತಿದೆ. ಅರ್ನಾಲ್ಡ್ ಶ್ವಾರ್ಜಿನೆಗ್ಗರ್ ಅವರ ಪ್ರಸಿದ್ಧ ಹಾಲಿವುಡ್ ಚಲನಚಿತ್ರ ದಿ ಟರ್ಮಿನೇಟರ್ ನ ಪೋಸ್ಟರ್ ನರೇಂದ್ರ ಮೋದಿ ಅವರು 2024 ರಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇನೆ ಎಂದು ಹೇಳುತ್ತಿದ್ದಾರೆ. ಪ್ರತಿಪಕ್ಷಗಳು ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಲು ಬಯಸಬಹುದು. ಆದರೆ ಅದು ಕೇವಲ ಕನಸು. “ಟರ್ಮಿನೇಟರ್ ಯಾವಾಗಲೂ ಗೆಲ್ಲುವ ಬಗ್ಗೆ,” ಪೋಸ್ಟ್ ಹೇಳುತ್ತದೆ. Ekis ನಲ್ಲಿ ಬಿಜೆಪಿಯ ಅಧಿಕೃತ ಪುಟದಿಂದ ಪೋಸ್ಟರ್ ಪ್ರಚಾರ. ವಿಪಕ್ಷಗಳ ಇಂಡಿಯಾ ಫ್ರಂಟ್ನ ಸಭೆ ನಾಳೆ ನಡೆಯಲಿರುವಂತೆಯೇ ಬಿಜೆಪಿಯ ಟ್ವೀಟ್ ಬಂದಿದೆ. ನಾಳೆ ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಯಲಿರುವ ಸಭೆಯಲ್ಲಿ ಕನಿಷ್ಠ 26 ವಿರೋಧ ಪಕ್ಷಗಳು ಭಾಗವಹಿಸಲಿವೆ. 2024 ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಪ್ರಧಾನಿ ಮೋದಿ…
ಪತ್ನಿಗೆ ಎಕೆ 47 ಬಂದೂಕು ಉಡುಗೊರೆಯಾಗಿ ನೀಡಿದ ವಿವಾದಕ್ಕೆ ಸಿಲುಕಿರುವ ಮಾಜಿ ತೃಣಮೂಲ ಕಾಂಗ್ರೆಸ್ ನಾಯಕ. ಟಿಎಂಸಿ ನಾಯಕ ರೈಸುಲ್ ಹಕ್ ಅವರು ತಮ್ಮ ಪತ್ನಿಗೆ ಮೊದಲ ವಿವಾಹ ವಾರ್ಷಿಕೋತ್ಸವದ ಉಡುಗೊರೆಯಾಗಿ ಬಂದೂಕನ್ನು ನೀಡಿದರು. ಈ ಘಟನೆ ಹೊರಬಿದ್ದು ವಿವಾದವಾದಾಗ, ಉಡುಗೊರೆಯಾಗಿ ನೀಡಿದ್ದು ಎಕೆ 47 ಅಲ್ಲ ಆಟಿಕೆ ಗನ್ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಹಕ್ ಅವರ ಪತ್ನಿ ಸಬೀನಾ ಯಾಸ್ಮಿನ್ ಅವರು ಎಕೆ 47 ಗನ್ ಹೊಂದಿರುವ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ನಂತರ ವಿವಾದ ಭುಗಿಲೆದ್ದಿದೆ. ಸ್ಥಳೀಯ ಬಿಜೆಪಿ ಮತ್ತು ಸಿಪಿಎಂ ಮುಖಂಡರೂ ಈ ವಿಚಾರವನ್ನು ತರಾಟೆಗೆ ತೆಗೆದುಕೊಂಡರು. ತೃಣಮೂಲ ಕಾಂಗ್ರೆಸ್ ತಾಲಿಬಾನ್ ಆಡಳಿತವನ್ನು ಉತ್ತೇಜಿಸುತ್ತಿರುವಂತಹ ಪ್ರತಿಕ್ರಿಯೆಗಳೊಂದಿಗೆ. ಹಕೀಮ್ ಪೋಸ್ಟ್ ಅನ್ನು ಸ್ವತಃ ಅಳಿಸಿದ್ದಾರೆ. ಈ ಆರೋಪ ನಿರಾಧಾರವಾಗಿದ್ದು, ಪತ್ನಿಗೆ ಉಡುಗೊರೆಯಾಗಿ ನೀಡಿದ್ದ ಗನ್ ಒರಿಜಿನಲ್ ಗನ್ ಅಲ್ಲ ಆಟಿಕೆ ಗನ್ ಎಂದು ಹಕೀಮ್ ಪ್ರತಿಕ್ರಿಯಿಸಿದ್ದಾರೆ. ಮಾಜಿ ಟಿಎಂಸಿ ನಾಯಕ ಹಕೀಮ್ ಅವರು ಡೆಪ್ಯೂಟಿ ಸ್ಪೀಕರ್ ಮತ್ತು ಶಾಸಕ…
ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದೆ. ಕಬ್ಬನ್ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿಟಿಒ ವೃತ್ತದ ಸಮೀಪ ಬುಧವಾರ ಮಧ್ಯರಾತ್ರಿ ಕಾರು ಚಲಿಸುತ್ತಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಎಚ್ಚೆತ್ತ ಚಾಲಕ ಕಾರನ್ನು ರಸ್ತೆ ಬದಿಗೆ ನಿಲುಗಡೆ ಮಾಡಿ ಕೆಳಗಿಳಿದರು. ನೋಡುತ್ತಿದ್ದಂತೆಯೇ ಕಾರು ಸುಟ್ಟು ಹೋಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಧುಗಿರಿ: ಪ್ರತಿಫಲಾಕ್ಷೆ ಇಲ್ಲದೆ ಸಮಾಜಕ್ಕೆ ಕೊಡುಗೆ ನೀಡುವ ದಾನಿಗಳು ಸಮಾಜದಲ್ಲಿ ಚಿರಸ್ಥಾಯಿಯಾಗಿ ಉಳಿಯುತ್ತಾರೆ. ಕಾಯ ಅಳಿದರೂ ಕೀರ್ತಿ ಉಳಿದಿದೆ ಎನ್ನುವಂತೆ, ಕೊಟ್ಟ ಕೊಡುಗೆಗಳೆಲ್ಲಾ ಸಾರ್ಥಕತೆ ಕಾಣುತ್ತವೆ’ ಎಂದು ಮಧುಗಿರಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಎನ್. ಹನುಮಂತರಾಯಪ್ಪ ತಿಳಿಸಿದರು. ಪಟ್ಟಣದ ಕರಡಿಪುರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಒಂದನೇ ತರಗತಿಯ ನಲಿ-ಕಲಿ ಮಕ್ಕಳಿಗೆ ಶಾಲೆ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿ, ಸರಕಾರಿ ಶಾಲೆಗಳು ಖಾಸಗಿ ಶಾಲೆಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಪಡಿಸುವುದರ ಜೊತೆಗೆ ಮಕ್ಕಳನ್ನು ಆಕರ್ಷಿಸಲು ಸುಂದರ ವಾತಾವರಣ ಅಗತ್ಯ. ಅದಕ್ಕೆ ಸರಕಾರಿ ಅನುದಾನಕ್ಕೆ ಕಾಯದೆ ದಾನಿಗಳ ಮನವೊಲಿಸಿ ಅಭಿವೃದ್ಧಿಪಡಿಸಲು ಮುಂದಾದ ನಮ್ಮ ಸರಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ ಶಿಕ್ಷಕಿ ಶೋಭಾರವರು ದಾನಿಗಳ ಸಹಾಯದಿಂದ ಕರಡಿಪುರ ಸರಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ನಲಿಕಲಿ ಮಕ್ಕಳು ಹಾಸನದ ಮೇಲೆ ಕೂತು ಬೋಧನೆ ಮಾಡಲು ಹಾಸನದ ವ್ಯವಸ್ಥೆಯನ್ನು ಮಾಡಿದ್ದಾರೆ. ಇವರ ಈ ಕಾರ್ಯ ಮೊದಲನೆಯದಲ್ಲ ಶೋಭಾ ರವರು ಸರಕಾರಿ ಶಾಲೆಗಳ ಕೊರತೆಗಳನ್ನು ನೀಗಿಸುವುದಕ್ಕಾಗಿ…