Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ಗುಬ್ಬಿ: ಕಡಬ ಗ್ರಾಮ ಪಂಚಾಯಿತಿ ಕಚೇರಿ ಪಕ್ಕದ ಎಸ್ ಬಿಐ ಬ್ಯಾಂಕ್ ನ ಎಟಿಎಂನಲ್ಲಿ ಮಂಗಳವಾರ ತಡರಾತ್ರಿ ಖದೀಮರು ಗ್ಯಾಸ್ ಕಟರ್ ಬಳಸಿ ಲಕ್ಷಾಂತರ ರೂ. ಗಳನ್ನು ದೋಚಿದ ಘಟನೆ ನಡೆದಿದೆ. ಗುಬ್ಬಿ ತಾಲೂಕಿನ ಮೈಸೂರು ಸಂಪರ್ಕದ ಮಾರ್ಗ ಮಧ್ಯೆಯ ಕಡಬ ಗ್ರಾಮ ಪ್ರಮುಖ ಹೋಬಳಿ ಕೇಂದ್ರವಾಗಿದ್ದು, ವ್ಯಾಪಾರ ಕೇಂದ್ರ ಎನಿಸಿದೆ. ಬಸ್ ನಿಲ್ದಾಣ ಸಮೀಪ ಪೊಲೀಸ್ ಉಪ ಠಾಣೆಗೆ ಕೂಗಳತೆಯ ಎಸ್ಬಿಐ ಎಟಿಎಂ ಗೆ ಕಟರ್ ಮೂಲಕ ಕನ್ನ ಹಾಕಿರುವ ಕಳ್ಳರು ಸುಮಾರು 13 ರಿಂದ 14 ಲಕ್ಷ ರೂಪಾಯಿ ಹಣ ದೋಚಿದ್ದಾರೆ ಎನ್ನಲಾಗಿದೆ. ವಿಚಾರ ತಿಳಿದ ಕೂಡಲೇ ಗುಬ್ಬಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಇನ್ನಿತರ ಸಾಕ್ಷ್ಯಾಧಾರಕ್ಕೆ ಮುಂದಾಗಿದ್ದು, ತುಮಕೂರು ಎಎಸ್ಪಿ ಪುರುಷೋತ್ತಮ್ ಸೇರಿದಂತೆ ತಿಪಟೂರು ಡಿವೈಎಸ್ಪಿ ಹಾಗೂ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಕಳ್ಳರ ಜಾಡು ಹಿಡಿಯಲು ವಿಶೇಷ ತಂಡ ರಚಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಗುಬ್ಬಿ ತಾಲೂಕಿನಾದ್ಯಂತ ಕಳ್ಳತನ ಪ್ರಕರಣಗಳು…
ಚಿತ್ರದುರ್ಗ:ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದಾಗಿ ಬಸ್ ಬೆಂಕಿಗಾಹುತಿಯಾಗಿದ್ದು, 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ಸಿಗೆ, ಹಿರಿಯೂರಿನಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಲಾರಿಯೊಂದು ಡಿವೈಡರ್ ಹಾರಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಬಸ್ ಬೆಂಕಿಯ ಕೆನ್ನಾಲಗೆಗೆ ಸಿಲುಕಿದೆ. ಬಸ್ನಲ್ಲಿ ಒಟ್ಟು 29 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ದುರಂತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಕುಲದೀಪ್ ಕೂಡ ಮೃತಪಟ್ಟಿದ್ದಾನೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಎಸ್ಪಿ ರಂಜಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಂತೋಷ್, ಮತ್ತು ಕಂಪ್ಯೂಟರ್ ಆಪರೇಟರ್ ಸುಬ್ರಹ್ಮಣ್ಯರವರ ಹಗರಣ ವಿರುದ್ದ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಾರ್ವಜನಿಕರು ನಡೆಸುತ್ತಿದ್ದ ಪ್ರತಿಭಟನೆಯ ಎರಡು ದಿನಗಳ ನಂತರ ಕೈಬಿಡಲಾಗಿದೆ. ಡಿ.23ರಂದು ಗ್ರಾಮದ ಪ್ರಮುಖ ಬೀದಿಗಳಲ್ಲಿ ತಮಟೆ ಬಾರಿಸುವ ಮೂಲಕ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಲಾಗಿತ್ತು. ಡಿ.24ರಂದು ಕೂಡ ಪ್ರತಿಭಟನೆ ಮುಂದುವರಿದಿತ್ತು. ಸಿಇಒ ಪ್ರತಿಭಟನಾ ಸ್ಥಳಕ್ಕೆ ಬರಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ಆದರೆ ಕಾರಣಾಂತರಗಳಿಂದ ಸಿಇಒ ಪ್ರತಿಭಟನಾ ಸ್ಥಳಕ್ಕೆ ಆಗಮಿಸಲಿಲ್ಲ, ತಾಲೂಕು ದಂಡಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಪ್ರತಿಭಟನಾಕಾರರು ಅಹವಾಲು ಸ್ವೀಕರಿಸಿದರು. ನಂತರ ಹಗರಣಗಳ ಬಗ್ಗೆ ಮಾಹಿತಿ ಪಡೆದು, ತನಿಖಾಧಿಕಾರಿಗಳನ್ನು ನೇಮಕ ಮಾಡಿ ಕ್ರಮಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ಪ್ರತಿಭಟನೆ ಕೈಬಿಟ್ಟರು. ಎಚ್ಚರಿಕೆ: ಸಮಸ್ಯೆಗಳ ಪರಿಹಾರದ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಟ್ಟಿದ್ದು, ಒಂದು ವೇಳೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಇದ್ದರೆ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು…
ಸರಗೂರು: ವಿಕಲಚೇತನರ ಹಿತರಕ್ಷಣೆಗಾಗಿ ಇರುವ ಕಾನೂನಿನ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ’ ಎಂದು ಪ್ಯಾನೆಲ್ ವಕೀಲ ಹಾಗೂ ವಕೀಲರ ಸಂಘದ ಸಹ ಕಾರ್ಯದರ್ಶಿ ಮಣಿರಾಜು ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಪಟ್ಟಣ ಪಂಚಾಯಿತಿ, ತಾಲ್ಲೂಕು ಕಾನೂನು ಸೇವಾ ಸಮಿತಿ ತಾಲ್ಲೂಕು ವಕೀಲರ ಸಂಘ ಹಾಗೂ ಸರ್ಕಾರಿ ಅಭಿಯೋಜನಾ ಇಲಾಖೆ.ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ದಂದು ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ವಿಶೇಷ ವಿಕಲಚೇತನರ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಕಲಚೇತನರು ಸರ್ಕಾರದ ಉದ್ಯೋಗ ಹಾಗೂ ವಿವಿಧ ಸೌಲಭ್ಯಗಳು, ಸ್ಥಳೀಯ ನ್ಯಾಯಾಲಯದ ಉಚಿತ ಕಾನೂನು ನೆರವು ಪಡೆದುಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದರು. ವಿಕಲಚೇತನರಿಗೆ ಸರಕಾರದಿಂದ ಸಿಗುವ ಅನುದಾನ ಗಳನ್ನು ಸಮರ್ಪಕವಾಗಿ ತಲುಪಿಸಲು ಎಲ್ಲರೂ ಶ್ರಮಿಸಬೇಕು ಎಂದರು. ಇಓ ಪ್ರೇಮ್ ಕುಮಾರ್ ಮಾತನಾಡಿ, ವಿಕಲಚೇತನರಿಗೆ ನಾಲ್ಕು ರೀತಿಯ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕಾಗಿದೆ. ಮುಖ್ಯವಾಗಿ 0–6 ವರ್ಷದ ಮಕ್ಕಳಿಗೆ ಶೀಘ್ರ ಪತ್ತೆ…
ಸರಗೂರು: ತಾಲೂಕಿನ ಹೆಗ್ಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಲಾಪುರ ಗ್ರಾಮಕ್ಕೆ ಸೇರಿದ ಸರ್ವೆ ನಂಬರ್ 14ರಲ್ಲಿ ಸರ್ಕಾರಿ ಕೆರೆಗೆ ನಕಾಶೆಯಲ್ಲಿರುವ ರಸ್ತೆ ಬಿಡಿಸುವ ವಿಚಾರವಾಗಿ ದೇವಲಾಪುರ ಗ್ರಾಮಸ್ಥರು ಮತ್ತು ದಲಿತ ಸಂಘರ್ಷ ಸಮಿತಿ ಸಂಯೋಜಕ ಸಮಿತಿ (ವಿ ನಾಗರಾಜು ಬಣ) ಹಾಗೂ ತಾಲೂಕು ಕಂದಾಯ ಇಲಾಖೆ ಹಾಗೂ (ಅಂಬೇಡ್ಕರ್ ವಾದ ) ಸಂಘಟನೆಯವರು ಮಂಗಳವಾರದಂದು ಕೆರೆಗೆ ಹೋಗುವ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ತಹಶೀಲ್ದಾರ್ ಮೋಹನಕುಮಾರಿ ನೇತೃತ್ವದಲ್ಲಿ ಸರ್ವೆ ಮಾಡಿಸಿ ತೆರವುಗೊಳಿಸಿ ಕೊಟ್ಟರು. ನಂತರ ಮಾತನಾಡಿದ ಅವರು, ರೈತರಿಗೆ ಅನ್ಯಾಯ ಮಾಡಬೇಕೆಂಬ ಉದ್ದೇಶ ನಮಗಿಲ್ಲ ಮತ್ತು ಸರಕಾರದ ಆದೇಶದಂತೆ ಸರ್ವೇ ಕಾರ್ಯ ಕೈಗೆತ್ತಿಕೊಂಡಿದ್ದು, ಕೆರೆಗೆ ಹೋಗುವ ದಾರಿಯನ್ನು ಒತ್ತುವರಿ ತೆರವು ಮಾಡಲಾಗುತ್ತಿದೆ ಎಂದು ತಿಳಿಸಿದರು. ದಡದಹಳ್ಳಿ ಗ್ರಾಮದ ಪ್ರಭುಸ್ವಾಮಿ ಎಂಬುವರ ಜಮೀನಿನ ಪಕ್ಕದಲ್ಲೇ ಕೆರೆಗೆ ಹೋಗುವ ರಸ್ತೆ ಇದ್ದಾಗಿದ್ದು, ಜಮೀನು ಮಾಲೀಕ 11 ಗುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡದರಿಂದ ದಲಿತ ಸಂಘಟನೆಗಳು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮೂರು ನಾಲ್ಕು ಬಾರಿ ಸರ್ವೆ…
ತುಮಕೂರು: ಜಿಲ್ಲೆಯಲ್ಲಿ ಜನವರಿ 16 ರಿಂದ 22ರವರೆಗೆ ನಡೆಯಲಿರುವ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟದ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಭೇಟಿ ನೀಡಿ, ಅಲ್ಲಿನ ನವೀಕರಣ ಕಾರ್ಯಗಳನ್ನು ಖುದ್ದಾಗಿ ಪರಿಶೀಲನೆ ನಡೆಸಿದರು. ಈ ವೇಳೆ ಕ್ರೀಡಾಕೂಟಕ್ಕೆ ಆಗಮಿಸುವ ಕ್ರೀಡಾಪಟುಗಳು ಹಾಗೂ ಪ್ರೇಕ್ಷಕರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ಮೂಲಸೌಕರ್ಯಗಳನ್ನು ಸಮಯಮಿತಿಯಲ್ಲಿ ಪೂರ್ಣಗೊಳಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್.ಟಿ.ಆರ್, ಅವರಿಗೆ ಸೂಚನೆ ನೀಡಿದರು. ಕ್ರೀಡಾಂಗಣದ ಶೌಚಾಲಯಗಳನ್ನು ಸದಾ ಸ್ವಚ್ಛವಾಗಿಡಬೇಕು, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿರಬೇಕು ಎಂದು ಹೇಳಿದರು. ಜೊತೆಗೆ ಕ್ರೀಡಾಂಗಣದಲ್ಲಿ ಉತ್ತಮ ಗುಣಮಟ್ಟದ ಬೆಳಕಿನ ವ್ಯವಸ್ಥೆ ಕಲ್ಪಿಸುವುದರೊಂದಿಗೆ, ಕಟ್ಟಡಕ್ಕೆ ಬಣ್ಣ ಬಳಿಸಿ ಕ್ರೀಡಾಂಗಣವನ್ನು ಆಕರ್ಷಕವಾಗಿ ರೂಪಿಸಬೇಕು ಎಂದು ತಿಳಿಸಿದರು. ಭದ್ರತೆ, ಸ್ವಚ್ಛತೆ ಹಾಗೂ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚನೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಗುಬ್ಬಿ: ಮಹಾತ್ಮ ಗಾಂಧೀಜಿಯವರ ಹೆಸರಿನಲ್ಲಿರುವ ‘ನರೇಗಾ’ (MGNREGA) ಯೋಜನೆಯ ಹೆಸರನ್ನು ಬದಲಾಯಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರ ಅತ್ಯಂತ ಖಂಡನೀಯ ಎಂದು ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಎಸ್.ಆರ್. ಶ್ರೀನಿವಾಸ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಶಾಸಕರ ಕಚೇರಿಯಲ್ಲಿ ಗುಬ್ಬಿ ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮೃತ ಸದಸ್ಯರ ಕುಟುಂಬದವರಿಗೆ ವಿಮೆ ಹಣ ಹಾಗೂ ರಬ್ಬರ್ ಮ್ಯಾಟ್ ವಿತರಿಸಿ ಅವರು ಮಾತನಾಡಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಜಾರಿಗೆ ಬಂದ ಈ ಯೋಜನೆಯು ಗ್ರಾಮೀಣ ಭಾಗದ ಲಕ್ಷಾಂತರ ಜನರಿಗೆ ಆಸರೆಯಾಗಿದೆ. ಅಂತಹ ಮಹಾನ್ ವ್ಯಕ್ತಿಯ ಹೆಸರನ್ನು ತೆಗೆದುಹಾಕುವುದು ಅವರಿಗೆ ಮಾಡುವ ಅಪಮಾನವಾಗಿದೆ. ಕೇಂದ್ರ ಸರ್ಕಾರ ಯೋಜನೆಯ ಹೆಸರನ್ನು ಬದಲಿಸುವ ಬದಲು, ಕೂಲಿ ದಿನಗಳನ್ನು ಹೆಚ್ಚಿಸುವ ಮೂಲಕ ಬಡವರಿಗೆ ನೆರವಾಗಬೇಕಿತ್ತು ಎಂದು ಅವರು ಕಿವಿಮಾತು ಹೇಳಿದರು. ಇದೇ ಸಂದರ್ಭದಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಪಕ್ಷದ…
ತಿಪಟೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಉಸ್ತುವಾರಿಯ ತುಮಕೂರಿನ ತಿಪಟೂರು ನಗರದ 31ನೇ ವಾರ್ಡ್ನ ಗೋರಗೊಂಡನಹಳ್ಳಿಯ ಎ.ಕೆ. ಕಾಲೋನಿಯಲ್ಲಿ ದಲಿತ ಕುಟುಂಬಗಳು ದೌರ್ಜನ್ಯಕ್ಕೊಳಗಾಗಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸರ್ವೆ ನಂಬರ್ 93/4ಬಿ2 ರಲ್ಲಿನ ದಲಿತರಿಗೆ ಸೇರಿದ ಜಮೀನು ಹಾಗೂ ಸರ್ಕಾರಿ ರಸ್ತೆಯನ್ನು ಅದೇ ಗ್ರಾಮದ ಪ್ರಭಾವಿ ವ್ಯಕ್ತಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ನಿವಾಸಿಗಳು ದೂರಿದ್ದಾರೆ. ಗ್ರಾಮದ ಚೇರ್ಮನ್ ಶಿವನಂಜಪ್ಪ ಅವರ ಕುಟುಂಬಸ್ಥರು ದಲಿತರು ಓಡಾಡುವ ರಸ್ತೆಗೆ ಅಡ್ಡಲಾಗಿ ಶೆಡ್ ಹಾಗೂ ಬೇಲಿ ನಿರ್ಮಿಸಿ ದೌರ್ಜನ್ಯ ಎಸಗುತ್ತಿದ್ದಾರೆ. ಇದರಿಂದಾಗಿ ಕಾಲೋನಿಯ ನಿವಾಸಿಗಳು ಮತ್ತು ಶಾಲಾ ಮಕ್ಕಳು ದೈನಂದಿನ ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೇವಲ ಸಂಚಾರವಷ್ಟೇ ಅಲ್ಲದೆ, ಜಮೀನಿನ ಪಕ್ಕದಲ್ಲೇ ತಿಪ್ಪೆಗುಂಡಿ ನಿರ್ಮಿಸಿ ಗಲೀಜು ನೀರನ್ನು ಹರಿಸಲಾಗುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದ್ದು, ವಯೋವೃದ್ಧರು ಹಾಗೂ ಮಕ್ಕಳು ಅನಾರೋಗ್ಯಕ್ಕೀಡಾಗುತ್ತಿದ್ದಾರೆ ಎಂದು ದೂರಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಒತ್ತುವರಿ ನಡೆದಿರುವುದು ಸಾಬೀತಾಗಿದೆ. ಆದರೂ…
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ತನ್ನ ಅತ್ಯಂತ ಶಕ್ತಿಶಾಲಿ ಹಾಗೂ ಭಾರವಾದ ‘ಎಲ್ವಿಎಂ3-ಎಂ6’ (LVM3–M6) ರಾಕೆಟ್ ಮೂಲಕ ಅಮೆರಿಕದ ‘ಬ್ಲೂಬರ್ಡ್ ಬ್ಲಾಕ್–2’ ಸಂವಹನ ಉಪಗ್ರಹವನ್ನು ಯಶಸ್ವಿಯಾಗಿ ನಭಕ್ಕೆ ಹಾರಿಸಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಬುಧವಾರ ಬೆಳಿಗ್ಗೆ ಈ ಉಡಾವಣೆ ನಡೆಯಿತು. ಸುಮಾರು 6,100 ಕೆ.ಜಿ ತೂಕದ ಈ ಉಪಗ್ರಹವು ಇಸ್ರೊ ಇದುವರೆಗೆ ಹೊತ್ತೊಯ್ದ ಅತ್ಯಂತ ಭಾರದ ಪೇಲೋಡ್ ಆಗಿದೆ. ಸ್ಮಾರ್ಟ್ಫೋನ್ ಗಳಿಗೆ ನೇರವಾಗಿ ಹೈ–ಸ್ಪೀಡ್ 5ಜಿ ಸೆಲ್ಯುಲಾರ್ ಬ್ರಾಡ್ ಬ್ಯಾಂಡ್ ಒದಗಿಸುವುದು ಈ ಉಪಗ್ರಹದ ಮುಖ್ಯ ಉದ್ದೇಶವಾಗಿದೆ. ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (NSIL) ಮತ್ತು ಅಮೆರಿಕದ ಎಎಸ್ಟಿ ಸ್ಪೇಸ್ಮೊಬೈಲ್ ನಡುವಿನ ವಾಣಿಜ್ಯ ಒಪ್ಪಂದದ ಭಾಗವಾಗಿ ಈ ಯೋಜನೆ ಕೈಗೊಳ್ಳಲಾಗಿದೆ. ಈ ಯಶಸ್ಸಿನೊಂದಿಗೆ ಇಸ್ರೊ ಜಾಗತಿಕ ವಾಣಿಜ್ಯ ಬಾಹ್ಯಾಕಾಶ ಮಾರುಕಟ್ಟೆಯಲ್ಲಿ ತನ್ನ ಪ್ರಾಬಲ್ಯವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಂತೋಷ್ ಅವರ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಾರ್ವಜನಿಕರು ಹಮ್ಮಿಕೊಂಡಿರುವ ಪ್ರತಿಭಟನೆ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ (ಡಿ.23) ಗ್ರಾಮದ ಪ್ರಮುಖ ಬೀದಿಗಳಲ್ಲಿ ತಮಟೆ ಬಾರಿಸುವ ಮೂಲಕ ಮೆರವಣಿಗೆ ನಡೆಸಿದ್ದ ಪ್ರತಿಭಟನಾಕಾರರು, ಇಂದು ಕೂಡ ಪಂಚಾಯಿತಿ ಕಚೇರಿ ಮುಂದೆ ಧರಣಿ ಮುಂದುವರಿಸಿದ್ದಾರೆ. ಪಿಡಿಒ ವಿರುದ್ಧ ಗಂಭೀರ ಆರೋಪಗಳನ್ನು ಮಾಡಲಾಗಿದ್ದು, ಮುಖ್ಯವಾಗಿ ಆರ್.ಟಿ.ಐ ಅರ್ಜಿಗಳಿಗೆ ಮಾಹಿತಿ ನೀಡದಿರುವುದು, ಐಮಾಸ್ (i-MAAS) ದಂಧೆ, ಪಂಚಾಯಿತಿ ಹಣ ದುರ್ಬಳಕೆ ಹಾಗೂ ಇ-ಸ್ವತ್ತು ಮಾಡಿಕೊಡಲು ರೂ. 10 ರಿಂದ 20 ಸಾವಿರ ಲಂಚಕ್ಕೆ ಬೇಡಿಕೆಯಿಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಲ್ಲದೆ, ವಾರ್ಡ್ ಸಭೆಗಳನ್ನು ನಡೆಸದಿರುವುದು, ದಲಿತರ ಬೀದಿಗಳ ಸ್ವಚ್ಛತೆ ಮಾಡದೆ ಬಿಲ್ ಪಾವತಿಸಿಕೊಳ್ಳುವುದು ಹಾಗೂ ಸಾರ್ವಜನಿಕರೊಂದಿಗೆ ದುರ್ವರ್ತನೆ ತೋರುತ್ತಿರುವ ಬಗ್ಗೆಯೂ ದೂರು ಕೇಳಿಬಂದಿದೆ. ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಇಒ (EO) ಆಗಮಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರೂ, ಪ್ರತಿಭಟನಾಕಾರರು ಸಮಾಧಾನಗೊಂಡಿಲ್ಲ. ಜಿಲ್ಲಾ ಪಂಚಾಯಿತಿ…