Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಅರೇಮಲ್ಲೇನಹಳ್ಳಿಯಲ್ಲಿ ಜಾನುವಾರುಗಳನ್ನು ಕರೆತರಲು ಹೋದ ಮಹಿಳೆಯೊಬ್ಬರು ಚಿರತೆ ದಾಳಿಗೆ ಬಲಿಯಾಗಿರುವುದು ಇಡೀ ತಾಲ್ಲೂಕಿನಲ್ಲಿ ಸಂಚಲನ ಮೂಡಿಸಿದೆ. ಈ ಭಾಗದಲ್ಲಿ ಚಿರತೆ ದಾಳಿಯಿಂದ ಸಂಭವಿಸಿದ ಮೊದಲ ಸಾವು ಇದಾಗಿದ್ದು, ಗ್ರಾಮಸ್ಥರು ತೋಟಗಳಿಗೆ ತೆರಳಲು ಮತ್ತು ಮನೆಯಿಂದ ಹೊರಬರಲು ಭಯಪಡುವಂತಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮತ್ತು ಶಾಸಕ ಎಂ.ಟಿ. ಕೃಷ್ಣಪ್ಪ ಅವರು ಮೃತ ಮಹಿಳೆಯ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಸರ್ಕಾರದಿಂದ ₹5 ಲಕ್ಷ ಪರಿಹಾರದ ಚೆಕ್ ವಿತರಿಸಿದ ಅವರು, ಬಾಕಿ ₹15 ಲಕ್ಷವನ್ನು ಶೀಘ್ರವಾಗಿ ನೀಡುವುದಾಗಿ ಭರವಸೆ ನೀಡಿದರು. ಅಲ್ಲದೆ, ಮೃತ ಮಹಿಳೆಯ ಮಗನ ಶಿಕ್ಷಣಕ್ಕೆ ಮಾಸಿಕ ₹4,000 ಧನಸಹಾಯ ಮತ್ತು ಮಗಳಿಗೆ ಕಂಪ್ಯೂಟರ್ ಆಪರೇಟರ್ ಕೆಲಸ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಅರಣ್ಯ ಇಲಾಖೆಯು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಮಂಗಳವಾರ ಸಂಜೆ ಮೂರು ವರ್ಷದ ಗಂಡು ಚಿರತೆಯನ್ನು ಬೋನಿನಲ್ಲಿ ಸೆರೆಹಿಡಿಯಲಾಗಿದೆ. ಆದರೂ, ಇನ್ನೂ ಒಂದು ಹೆಣ್ಣು ಚಿರತೆ ಮತ್ತು ಎರಡು ಮರಿಗಳು ಆಸುಪಾಸಿನಲ್ಲಿ ಇರುವ…
ಶಿರಾ: ತಾಲ್ಲೂಕಿನ ಶಿರಾ–ಅಮರಾಪುರ ರಸ್ತೆಯಲ್ಲಿ ಮಂಗಳವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ. ಘಟನೆಯ ವಿವರ: ಶಿರಾ ತಾಲ್ಲೂಕಿನ ಮುದ್ದರಂಗನಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಕಾರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣವಾಗಿ ಭಸ್ಮವಾಗಿದೆ. ಕಾರಿನಲ್ಲಿದ್ದ ಚಾಲಕ ಹೊರಬರಲಾಗದೆ ಬೆಂಕಿಯ ನಡುವೆಯೇ ಸಿಲುಕಿ ಮೃತಪಟ್ಟಿದ್ದಾರೆ. ಮೃತರ ಗುರುತು ಈವರೆಗೆ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ಹೊತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತರ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ತುಮಕೂರು: ರಾಜ್ಯ ಯುವ ಬರಹಗಾರರ ಒಕ್ಕೂಟ ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ತುಮಕೂರು ಇವರ ಸಹಯೋಗದಲ್ಲಿ ಡಿ.25 ರಂದು ಬೆಳಗ್ಗೆ 10:30ಕ್ಕೆ ಕನ್ನಡ ಭವನದಲ್ಲಿ ಕುದ್ಮಲ್ ರಂಗರಾವ್ ರಾಜ್ಯ ಪ್ರಶಸ್ತಿ ಪ್ರದಾನ ಹಾಗೂ ಕವಿಗೋಷ್ಠಿಯನ್ನು ಏರ್ಪಡಿಸಲಾಗಿದೆ. ಉದ್ಘಾಟನೆಯನ್ನು ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ನೆರವೇರಿಸುವರು. ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷರಾದ ಕೆ.ಎಸ್.ಸಿದ್ದಲಿಂಗಪ್ಪ ವಹಿಸುವರು. ಹೂವಳ್ಳಿ ನಾಗರಾಜ್ ಪ್ರಾಸ್ತಾವಿಕ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಡಾ.ಲಕ್ಷ್ಮಣದಾಸ್, ಡಾ.ಎಸ್.ನಾಗಣ್ಣ, ಉಮೇಶ್ ಚಂದ್ರ ಎನ್. ಆರ್. ಆಗಮಿಸುವರು. ಪ್ರೊ.ಕೊಟ್ರೇಶ್ ಎಂ., ಸೂರ್ಯನಾರಾಯಣ, ಡಾ.ಕೆ.ಕಂಟಲಗೆರೆ ಸಣ್ಣ ಹೊನ್ನಯ್ಯ ಪ್ರಶಸ್ತಿ ಪ್ರದಾನ ಮಾಡುವರು. ಡಾ.ಹೆಚ್.ನಟರಾಜು, ನಾಹಿದಾ ಜಮ್ ಜಮ್ ಅವರು ಕರುನಾಡ ಯುವರತ್ನ ರಾಜ್ಯ ಪುರಸ್ಕಾರ ನೀಡುವರು. ವಿಶೇಷ ಅಭಿನಂದಿತರಾಗಿ ತುಂಬಾಡಿ ರಾಮಯ್ಯ, ಜಗದೀಶ್ ಕೆ.ಜಿ., ಆರ್.ಲೋಕೇಶ್ ಭಾಗವಹಿಸುವರು. ಕುದ್ಮಲ್ ರಂಗರಾವ್ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎನ್.ಎನ್.ಪ್ರಸಾದ್, ಶಿವಕುಮಾರ್, ವಿಶ್ವಾಸ್ ಟಿ.ಎನ್. ಡಾ.ರವಿಕುಮಾರ್ ನೀಹ, ಡಾ.ಲೋಕೇಶ್, ಪ್ರೊ.ಶೇಖರ್ ಬಿ., ಗಂಗರಾಜು, ನರಸಿಂಹಮೂರ್ತಿ ಕೆ.ಸಿ., ವಿನಯ್ ಟಿ.ಡಿ. ಡಾ.ಪಕಿರೇಶ್, ರಂಗಜನಾ ನಾಯಕ್, ಪ್ರೊ.ಶಶಿಕುಮಾರ್ ಎಸ್.…
ಬೆಂಗಳೂರು: ಪ್ರತಿಷ್ಠಿತ 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು (BIFFes) ಇದೇ ಜನವರಿ 29ರಿಂದ ಫೆಬ್ರವರಿ 6, 2026ರ ವರೆಗೆ ನಡೆಯಲಿದ್ದು, ಖ್ಯಾತ ನಟ ಪ್ರಕಾಶ್ ರಾಜ್ ಅವರನ್ನು ಚಿತ್ರೋತ್ಸವದ ರಾಯಭಾರಿಯನ್ನಾಗಿ ನೇಮಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಂಗಳವಾರ ನಡೆದ ಚಿತ್ರೋತ್ಸವದ ಪೂರ್ವಭಾವಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚಿತ್ರೋತ್ಸವವು ‘ಮಹಿಳಾ ಸಬಲೀಕರಣ’ ಎಂಬ ವಿಷಯದಲ್ಲಿ (Theme) ನಡೆಯಲಿದೆ ಎಂದು ತಿಳಿಸಿದರು. ಮುಖ್ಯ ಅಂಶಗಳು: ಉದ್ಘಾಟನೆ: ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ವರ್ಣರಂಜಿತವಾಗಿ ಚಾಲನೆ ದೊರೆಯಲಿದೆ. ಪ್ರದರ್ಶನ ಸ್ಥಳಗಳು: ರಾಜಾಜಿನಗರದ ಲುಲು ಮಾಲ್ನ ಸಿನಿಪೊಲಿಸ್ನ 11 ಸ್ಕ್ರೀನ್ಗಳು ಸೇರಿದಂತೆ ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ ಹಾಗೂ ಬನಶಂಕರಿಯ ಸುಚಿತ್ರ ಫಿಲಂ ಸೊಸೈಟಿಯಲ್ಲಿ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ. ಚಿತ್ರಗಳ ಸಂಖ್ಯೆ: 60ಕ್ಕೂ ಹೆಚ್ಚು ದೇಶಗಳ 200ಕ್ಕೂ ಅಧಿಕ ಸಿನಿಮಾಗಳು ಮತ್ತು 400ಕ್ಕೂ ಹೆಚ್ಚು ಪ್ರದರ್ಶನಗಳು ಇರಲಿವೆ. ಕಾನ್ಸ್, ಬರ್ಲಿನ್ ಹಾಗೂ ಆಸ್ಕರ್ಗೆ ಆಯ್ಕೆಯಾದ ಚಿತ್ರಗಳು ಇಲ್ಲಿ ವೀಕ್ಷಣೆಗೆ…
ಬೆಂಗಳೂರು: ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ ಪೂರ್ಣ ಸಹಮತವಿದೆ. ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದರು. ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಿದ್ದೇವೆ ಎಂದು ತಿಳಿಸಿದರು. ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವೇ ಇಲ್ಲ ಎಂದರು. ಕೆ.ಎನ್.ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ಎಸ್.ಎಂ.ಕೃಷ್ಣನವರ ಸರ್ಕಾರ. ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆದರ ಪ್ರಶ್ನೆಯೇ…
ಹಾವೇರಿ: ಜಿಲ್ಲೆಯ ನಾಗೇಂದ್ರಮಟ್ಟಿ ಬಡಾವಣೆಯಲ್ಲಿ ಕಳ್ಳರು ಸರಣಿ ಕಳ್ಳತನ ಮಾಡುವ ಮೂಲಕ ಜನರಲ್ಲಿ ಭೀತಿ ಹುಟ್ಟಿಸಿದ್ದಾರೆ. ಒಂದೇ ರಾತ್ರಿ ಸುಮಾರು 7ಕ್ಕೂ ಅಧಿಕ ಮನೆಗಳ ಬೀಗ ಮುರಿದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ್ದಾರೆ. ಘಟನೆಯ ವಿವರ: ನಾಗೇಂದ್ರಮಟ್ಟಿಯಲ್ಲಿ ಬೀಗ ಹಾಕಿದ್ದ ಮನೆಗಳನ್ನೇ ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗಿದೆ. ಮನೆ ಮಾಲೀಕರು ಊರಿಗೆ ಹೋದ ಸಮಯವನ್ನೇ ಕಾದು ಕುಳಿತಿದ್ದ ಖದೀಮರು, ಕಿಟಕಿ ಹಾಗೂ ಬಾಗಿಲುಗಳ ಬೀಗ ಮುರಿದು ಒಳನುಗ್ಗಿದ್ದಾರೆ. ಮನೆಯಲ್ಲಿದ್ದ ಕಪಾಟುಗಳನ್ನು ಜಾಲಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳು ಮತ್ತು ನಗದನ್ನು ದೋಚಿದ್ದಾರೆ. ಕಳ್ಳರ ವಿಚಿತ್ರ ವರ್ತನೆ: ಕಳ್ಳತನ ಮಾಡಲು ಬಂದ ಖದೀಮರು ಮನೆಯಲ್ಲಿದ್ದ ವಸ್ತುಗಳನ್ನು ದೋಚಿದ್ದಲ್ಲದೆ, ನಿರಾಳವಾಗಿ ಅಡುಗೆ ಮನೆಗೆ ನುಗ್ಗಿ ಚಹಾ ಮಾಡಿಕೊಂಡು ಕುಡಿದಿದ್ದಾರೆ! ಚಳಿಯ ವಾತಾವರಣವಿದ್ದ ಕಾರಣ, ಕಳ್ಳತನದ ನಡುವೆಯೇ ಚಹಾ ಸೇವಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಕಳ್ಳರ ಈ ಧೈರ್ಯ ಮತ್ತು ವಿಚಿತ್ರ ವರ್ತನೆ ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಸರಣಿ ಕಳ್ಳತನದಿಂದ ಕಂಗಾಲಾಗಿರುವ ನಾಗೇಂದ್ರಮಟ್ಟಿ ನಿವಾಸಿಗಳು ಪೊಲೀಸರ…
ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಕಾಮರಾಜು ಪಶ್ಚಿಮ ವಲಯ ರೈಲ್ವೆ ಅಂದ್ರೆ ಇದು ಹುಬ್ಬಳ್ಳಿ ವಲಯ ಅದಕ್ಕೆ ಸಂಬಂಧ ಪಟ್ಟಂತ ಜಿಲ್ಲೆಗಳ ಒಂದು ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ, ಅವರಿಗೆ ಶುಭಾಶಯಗಳು ಎಂದು ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಜೆಡಿಎಸ್ ಪಕ್ಷದ ಅಧ್ಯಕ್ಷರಾದ ಕಾಮರಾಜ್ ನಿರ್ದೇಶಕನಾಗಿ ಆಯ್ಕೆ ಮಾಡಿದ ನಮ್ಮ ತುಮಕೂರು ಸಂಸದ ಕೇಂದ್ರ ಸಚಿವರು ವಿ. ಸೋಮಣ್ಣ ನವರಿಗೆ ಧನ್ಯವಾದಗಳು ಎಂದ ತಿಳಿಸಿದರು. ನಮ್ಮ ಕೇಂದ್ರ ಸಚಿವರು ತುಮಕೂರಿನ ಲೋಕಸಭಾ ಸದಸ್ಯರು ಕೇಂದ್ರ ಜನಶಕ್ತಿ ಮತ್ತು ರೈಲ್ವೆ ಸಚಿವರಾಗಿರತಕ್ಕಂತಹ ವಿ.ಸೋಮಣ್ಣನವರು ನಮ್ಮ ಪಕ್ಷದ ಜೆಡಿಎಸ್ ಪಕ್ಷದ ಅಧ್ಯಕ್ಷರಾಗಿರ್ತಕ್ಕಂತ ಕಾಮರಾಜುರವರಿಗೆ ಆಯ್ಕೆ ಮಾಡಿರುವುದು ಬಹಳ ಸಂತೋಷದ ವಿಷಯ. ಈ ಒಂದು ಹುದ್ದೆಗೆ ಕಾಮರಾಜ್ ನೇಮಕ ಆಗಿರುವುದು ನಿಜವಾಗ್ಲೂ ಕೂಡ ಎಲ್ಲರಿಗೂ ಕೂಡ ಸಂತೋಷವನ್ನು ಮಾಡಿದೆ ಎಂದರು. ಜನಗಳ ಸೇವೆ ಮಾಡ್ಲಿಕ್ಕೆ…
ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಂತೋಷ್ ಅವರ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ತಮಟೆ ಬಡಿಯುತ್ತಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಪಂಚಾಯಿತಿ ಆವರಣದಲ್ಲಿ ಧರಣಿ ಕುಳಿತರು. ಪ್ರತಿಭಟನೆಗೆ ಮುಖ್ಯ ಕಾರಣಗಳು: ಆರ್.ಟಿ.ಐ ಅರ್ಜಿಗಳಿಗೆ ಮಾಹಿತಿ ನೀಡದಿರುವುದು, ಐಮಾಸ್ ದಂಧೆ ಹಾಗೂ ಹಣ ದುರ್ಬಳಕೆಯ ಆರೋಪಗಳು ಕೇಳಿಬಂದಿವೆ. ವಾರ್ಡ್ ಸಭೆಗಳನ್ನು ನಡೆಸದಿರುವುದು, ‘ಇ-ಸ್ವತ್ತು’ ಮಾಡಿಕೊಡಲು ರೂ. 10 ರಿಂದ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಮತ್ತು ವಾಣಿಜ್ಯ ಮಳಿಗೆಗಳಿಂದ ಅತಿಯಾದ ಸುಂಕ ವಸೂಲಿ ಮಾಡುತ್ತಿರುವುದಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ದಲಿತರ ಬೀದಿಗಳನ್ನು ಸ್ವಚ್ಛಗೊಳಿಸದೆಯೇ ಹಣ ಬಿಡುಗಡೆ ಮಾಡಲಾಗಿದೆ ಮತ್ತು ಸಾರ್ವಜನಿಕರೊಂದಿಗೆ ಅಧಿಕಾರಿಗಳು ದುರ್ವರ್ತನೆ ತೋರುತ್ತಿದ್ದಾರೆ ಎಂದು ದೂರಿದರು. ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಸಿಇಓ ಬರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಮುಖಂಡರು ಪಟ್ಟು ಹಿಡಿದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ತುರುವೇಕೆರೆ: ತಾಲೂಕಿನ ಹರೆಮಲ್ಲೇನೆಹಳ್ಳಿ ಗ್ರಾಮದ ಸುಜಾತ ಎಂಬ 40 ವರ್ಷದ ಮಹಿಳೆ ಜಾನುವಾರು ಮೇಯಿಸಲು ಹೋದಾಗ ಭಾನುವಾರ ಸಂಜೆ 4:30 ರಿಂದ 5:30ರ ಸಮಯದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ ಮಾಡಿ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ವಿಷಯ ತಿಳಿದ ತಹಶೀಲ್ದಾರ್ ಅಹಮದ್ ಸಿಬ್ಬಂದಿಗಳೊಂದಿಗೆ ತೆರಳಿ ಸ್ಥಳದಲ್ಲೇ ರಾತ್ರಿ 12 ಗಂಟೆಯವರೆಗೆ ಮೊಕ್ಕಂ ಹೂಡಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಇನ್ನು ಸೋಮವಾರ ಬೆಳಿಗ್ಗೆ ಚಿರತೆ ದಾಳಿಯಿಂದಾಗಿ ಸುಜಾತ ಎಂಬ 40 ವರ್ಷದ ಮಹಿಳೆ ಸಾವನ್ನಪ್ಪಿರುವ ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದಾರೆ. ಚಿರತೆ ದಾಳಿಯಿಂದ ಸಾವಿಗೀಡಾದ ಮಹಿಳೆಯನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು, ಜಿಲ್ಲಾಧಿಕಾರಿ ಹಾಗೂ ತಾಲ್ಲೂಕು ಶಾಸಕರಾದ ಎಂ.ಟಿ.ಕೃಷ್ಣಪ್ಪ ಅವರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದು, ಸ್ಥಳದಲ್ಲಿ ಜಿಲ್ಲಾಧಿಕಾರಿ ಅರಣ್ಯ ಅಧಿಕಾರಿಗಳಿಗೆ ಚಿರತೆ ಹಿಡಿಯಲು ಖಡಕ್ ಸೂಚನೆ ನೀಡಿದ್ದಾರೆ. ಚಿರತೆ ದಾಳಿಯಿಂದ ಸಾವಿಗೀಡಾದ ಮಹಿಳೆಯ ಕುಟುಂಬಕ್ಕೆ ಭದ್ರಾ ಫೌಂಡೇಶನ್ ವತಿಯಿಂದ 20…
ತಿಪಟೂರು: ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಡಿಸೆಂಬರ್ 24ರಂದು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ಕೆರೆಗೋಡಿ–ರಂಗಾಪುರದ ಶ್ರೀ ಗುರುಪರದೇಶಿಕೇಂದ್ರ ವಿದ್ಯಾಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ‘ಸಾಂಸ್ಕೃತಿಕ ವೈಭವ’ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಕಲಾಕೃತಿ ಸಂಸ್ಥೆಯ ಅಧ್ಯಕ್ಷ ಡಾ. ಶ್ರೀಧರ್, ರಂಗಾಪುರ ಮಠದ ಶ್ರೀಗಳ ಮಾರ್ಗದರ್ಶನದಲ್ಲಿ ಈ ಬೃಹತ್ ಸಾಂಸ್ಕೃತಿಕ ಹಬ್ಬ ನಡೆಯಲಿದೆ ಎಂದರು. ಕಾರ್ಯಕ್ರಮದಲ್ಲಿ ಶಾಸ್ತ್ರೀಯ ನೃತ್ಯ, ಯಕ್ಷಗಾನ, ದಾಂಡಿಯಾ, ಮಣಿಪುರಿ ನೃತ್ಯ ಹಾಗೂ ಡೊಳ್ಳು ಕುಣಿತ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಕಲಾಪ್ರಕಾರಗಳ ಪ್ರದರ್ಶನವಿರಲಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶಾವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಮಾಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಕಲಾಕೃತಿ ಕಾರ್ಯದರ್ಶಿ ಜ್ಯೋತಿ ಗಣೇಶ್, ತಿಪಟೂರು ಕೃಷ್ಣ, ವೊಡಾಫೋನ್ ಚಂದ್ರು ಹಾಗೂ ತೋಂಟಿ ಉಪಸ್ಥಿತರಿದ್ದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC