Subscribe to Updates
Get the latest creative news from FooBar about art, design and business.
- ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
- ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
- ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
- ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.
- ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ
- ಮನೆಗೆ ಬಿದ್ದ ಬೆಂಕಿ: 3 ಲಕ್ಷ ರೂ. ಹಣ ಸಹಿತ ಚಿನ್ನಾಭರಣ ಹಲವು ವಸ್ತುಗಳು ಸುಟ್ಟುಕರಕಲು
- ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ
- ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
Author: admin
ಸಮುದಾಯ ವಿವಾಹ ಸಮಾರಂಭದಲ್ಲಿ ಅಧಿಕಾರಿಗಳು ಗರ್ಭನಿರೋಧಕ ಮಾತ್ರೆಗಳು ಮತ್ತು ಕಾಂಡೋಮ್ ಪ್ಯಾಕೆಟ್ಗಳನ್ನು ವಿತರಿಸಿದರು. ಮದುಮಗಳಿಗೆ ನೀಡಿದ ಮೇಕಪ್ ಬಾಕ್ಸ್ ನಲ್ಲಿ ಗರ್ಭನಿರೋಧಕ ಮಾತ್ರೆಗಳ ಜತೆಗೆ ಕಾಂಡೋಮ್ ಪ್ಯಾಕೆಟ್ ಗಳು ಪತ್ತೆಯಾಗಿವೆ. ಮಧ್ಯಪ್ರದೇಶದ ಜಬುವಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇದೇ ವೇಳೆ ಶಿವರಾಜ್ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ಟೀಕೆ ಮಾಡಿತ್ತು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ‘ಮುಖ್ಯ ಮಂತ್ರಿ ಕನ್ಯಾ ವಿವಾಹ / ನಿಕಾಹ್’ ಯೋಜನೆಯಡಿಯಲ್ಲಿ ಸಮುದಾಯ ವಿವಾಹವನ್ನು ಆಯೋಜಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ 296 ಜೋಡಿಗಳಿಗೆ ಮದುವೆ ಮಾಡುವ ಗುರಿ ಹೊಂದಲಾಗಿತ್ತು. ಸಮಾರಂಭವು ಜಬುವಾ ಜಿಲ್ಲೆಯಲ್ಲಿ ನಡೆಯಿತು. ಯೋಜನೆಯ ಭಾಗವಾಗಿ ದಂಪತಿಗಳಿಗೆ ನೀಡಲಾದ ಮೇಕಪ್ ಬಾಕ್ಸ್ಗಳಲ್ಲಿ ಕಾಂಡೋಮ್ಗಳು ಮತ್ತು ಮಾತ್ರೆಗಳು ಪತ್ತೆಯಾಗಿವೆ. ಕಾಂಡೋಮ್ ಪ್ಯಾಕೆಟ್ಗಳ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಘಟನೆ ವಿವಾದಾತ್ಮಕವಾಗಿದೆ. ಇದರೊಂದಿಗೆ ಅಧಿಕಾರಿಗಳು ಸಮಜಾಯಿಷಿ ನೀಡಲು ಮುಂದಾದರು. ಕಾಂಡೋಮ್ ಮತ್ತು ಮಾತ್ರೆಗಳ ವಿತರಣೆಯ ಜವಾಬ್ದಾರಿ ಅವರಲ್ಲ ಮತ್ತು ಕುಟುಂಬ ಯೋಜನೆ ಜಾಗೃತಿ ಕಾರ್ಯಕ್ರಮದ…
ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ ರಾಹುಲ್ ಗಾಂಧಿ. ಮೋದಿ ಅವರು ವಿಜ್ಞಾನಿಗಳಿಗೆ ಸಲಹೆ ನೀಡುತ್ತಾರೆ ಅವರು ದೇವರಿಗಿಂತ ಹೆಚ್ಚು ಜ್ಞಾನವುಳ್ಳವರಂತೆ ನಟಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಮೆರಿಕದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸುವಾಗ ಟೀಕೆ. ಎಲ್ಲವನ್ನೂ ತಿಳಿದವರಂತೆ ನಟಿಸುತ್ತಿದ್ದಾರೆ. ದೇವರಿಗೆ ಕಲಿಸುವರು. ವಿಜ್ಞಾನಿಗಳು ಮತ್ತು ಸೈನಿಕರಿಗೆ ಸಲಹೆ ನೀಡಿ. ಬಿಜೆಪಿಗೆ ಪ್ರಶ್ನೆಯೇ ಇಲ್ಲ. ಉತ್ತರ ಮಾತ್ರ ಇದೆ ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದರು. ಭಾರತ್ ಜೋಡೋ ಯಾತ್ರೆ ಉತ್ತಮ ಅನುಭವವಾಗಿತ್ತು. ಭಾರತ ಯಾವುದೇ ವಿಚಾರವನ್ನು ತಿರಸ್ಕರಿಸಿಲ್ಲ. ಅನಿವಾಸಿ ಭಾರತೀಯರು ಭಾರತದ ರಾಯಭಾರಿಗಳು. ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಕಾಂಗ್ರೆಸ್ ಪ್ರಯತ್ನಿಸಿತು. ಆದರೆ ಕೆಲವು ಮಿತ್ರಪಕ್ಷಗಳು ವಿರೋಧ ವ್ಯಕ್ತಪಡಿಸಿದವು. ಭಾರತದ ಜನರು ದ್ವೇಷವನ್ನು ನಂಬುವುದಿಲ್ಲ. ಒಬ್ಬರನ್ನೊಬ್ಬರು ಕೊಲ್ಲುವುದಿಲ್ಲ. ಇದರ ಹಿಂದೆ ಒಂದು ಸಣ್ಣ ವಿಭಾಗವಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಸೂದೆಯನ್ನು ಅಂಗೀಕರಿಸುತ್ತದೆ. ಭಾರತವು ಸಂವಿಧಾನದಲ್ಲಿ ರಾಜ್ಯಗಳ ಒಕ್ಕೂಟವಾಗಿದೆ. ಪ್ರತಿ ರಾಜ್ಯದ ಸಂಸ್ಕೃತಿ, ಭಾಷೆ ಮತ್ತು ಇತಿಹಾಸವನ್ನು ಸಂರಕ್ಷಿಸಬೇಕು ಎಂದು ಅವರು ಹೇಳಿದರು.…
ದೆಹಲಿಯಲ್ಲಿ ಹದಿನಾರರ ಹರೆಯದ ಬಾಲಕಿಯನ್ನು ಬರ್ಬರವಾಗಿ ಕೊಂದ ಆರೋಪಿ ಸಾಹಿಲ್ಗೆ ಮರಣದಂಡನೆ ವಿಧಿಸಬೇಕೆಂದು ಹತ್ಯೆಯಾದ ಸಾಕ್ಷಿಯ ಪೋಷಕರು ಬಯಸಿದ್ದಾರೆ. ಸಾಹಿಲ್ ನನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಕರಣದ ತನಿಖೆ ಆರಂಭಿಕ ಹಂತದಲ್ಲಿದ್ದು, ಇನ್ನೂ ಹೆಚ್ಚಿನ ಸಾಕ್ಷ್ಯಾಧಾರಗಳು ಸಿಗಬೇಕಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಹತ್ಯೆಯಾದ ಸಾಕ್ಷಿಯ ಕುಟುಂಬಕ್ಕೆ ದೆಹಲಿ ಸರ್ಕಾರ 10 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದೆ. ದೆಹಲಿಯ ರೋಹಿಣಿಯಲ್ಲಿ 16 ವರ್ಷದ ಬಾಲಕಿಯ ಬರ್ಬರ ಹತ್ಯೆಗೆ ಬಳಸಿದ ಆಯುಧವನ್ನು ವಶಪಡಿಸಿಕೊಳ್ಳುವಂತೆ ದೆಹಲಿ ಪೊಲೀಸರು ಒತ್ತಾಯಿಸಿದರು ಮತ್ತು ಸ್ಪಷ್ಟೀಕರಣಕ್ಕಾಗಿ ಆರೋಪಿ ಸಾಹಿಲ್ನನ್ನು ಕಸ್ಟಡಿಗೆ ಪಡೆಯಬೇಕು. ನಂತರ ರೋಹಿಣಿ ನ್ಯಾಯಾಲಯವು ಸಾಹಿಲ್ನನ್ನು ಎರಡು ದಿನಗಳ ಕಸ್ಟಡಿಗೆ ಒಪ್ಪಿಸಿತು. ಆರೋಪಿಯನ್ನು ಆರು ತಿಂಗಳೊಳಗೆ ಗಲ್ಲಿಗೇರಿಸಬೇಕು ಎಂದು ಸಾಕ್ಷಿಯ ಪೋಷಕರು ಆಗ್ರಹಿಸಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಕಾನೂನು ಹೋರಾಟಕ್ಕೆ ಎಲ್ಲ ಬೆಂಬಲ ಘೋಷಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.…
ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಪುನರಾರಂಭವಾಗಿವೆ 2 ತಿಂಗಳು ಬೇಸಿಗೆ ರಜೆ ಬಳಿಕ 2023-24 ರ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದೆ. ಮೇ 29ರಂದೇ ಶಾಲೆಗಳಲ್ಲಿ ಚಟುವಟಿಕೆ ಶುರುವಾಗಿದ್ದು, ಮೇ 31 ರಿಂದ ಅಧಿಕೃತವಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಓಪನ್ ಆಗಿವೆ. ಮಕ್ಕಳ ಸ್ವಾಗತಕ್ಕಾಗಿ ಶಿಕ್ಷಕರು ಮತ್ತು ಸಿಬ್ಬಂದಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜಾಗಿದ್ದಾರೆ. ಅದಕ್ಕಾಗಿ ಶಿಕ್ಷಣ ಇಲಾಖೆ ಕೂಡ ಕೆಲ ಸೂಚನೆಗಳನ್ನ ನೀಡಿತ್ತು. ಇಲಾಖೆ ಸೂಚನೆಯಂತೆ ಶಾಲಾ ಪ್ರಾರಂಭಕ್ಕೆ ಎಲ್ಲ ಶಾಲೆಗಳಲ್ಲೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎರಡು ದಿನಗಳ ಕಾಲ ಶಾಲೆಯ ಪ್ರತಿಯೊಂದು ಕೊಠಡಿ, ಶೌಚಾಲಯ, ಆವರಣ ಸೇರಿದಂತೆ ಶಾಲೆ ಸುತ್ತಮುತ್ತ ಎಲ್ಲವನ್ನೂ ಸ್ವಚ್ಛಗೊಳಿಸಲಾಗಿದೆ. ಎರಡು ತಿಂಗಳ ಬೇಸಿಗೆ ರಜೆ ಬಳಿಕ ಮರಳಿ ಶಾಲೆಗೆ ಬರುತ್ತಿರುವ ಮಕ್ಕಳನ್ನು ಸ್ವಾಗತಿಸಲು ಶಾಲೆಯನ್ನು ಸಿಂಗರಿಸಲಾಗಿದೆ. ಮಕ್ಕಳು ಖುಷಿ ಖುಸಿಯಾಗಿ ಪುಸ್ತಕ ಜೋಡಿಸ್ಕೊಂಡು, ಬ್ಯಾಗ್ ಹಾಕೊಂಡು, ತಲೆ ಬಾಚ್ಕೊಂಡು, ಯೂನಿಫಾರ್ಮ್ ಹಾಕ್ಕೊಂಡು ರೆಡಿಯಾಗಿ ಶಾಲೆಗಳನ್ನು ಹೆಜ್ಜೆ ಇಡಲಿದ್ದಾರೆ. ಮಕ್ಕಳ ಸ್ವಾಗತಕ್ಕೆ ಟೀಚರ್ಸ್ ರೆಡಿ…
ಬೆಳಗಾವಿ: ಹಲಗಾ ಗ್ರಾಮದ ಬಾಲ ಆಚಾರ್ಯ ಶ್ರೀ 108 ಸಿದ್ದಸೇನಾ ಮುನಿ ಮಹಾರಾಜರನ್ನು ಮಂಗಳವಾರ ಭೇಟಿ ಮಾಡಿದ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅವರ ಆಶೀರ್ವಾದ ಪಡೆದುಕೊಂಡರು. ಆರು ತಿಂಗಳ ಹಿಂದೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸಿದ್ದಸೇನಾ ಮುನಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಮಹಾರಾಜರು ಆಶೀರ್ವದಿಸಿ, ನೀವು ಈ ಕ್ಷೇತ್ರದ ಮೂಲಕ ಭರ್ಜರಿ ಗೆಲುವನ್ನು ಸಾಧಿಸಿ, ರಾಜ್ಯ ಸರ್ಕಾರದ ಸಂಪುಟದಲ್ಲಿ ಸಚಿವೆಯಾಗಿ ಹೊರಹೊಮ್ಮುತ್ತಿರಿ ಎಂದು ಆಶೀರ್ವಾದ ಮಾಡಿದ್ದರು ಎಂದು ನೆನಪಿಸಿಕೊಂಡ ಲಕ್ಷ್ಮೀ ಹೆಬ್ಬಾಳಕರ್, ಮಹಾರಾಜರ ಆಶೀರ್ವಾದದಿಂದ ಸಚಿವೆಯಾಗಿ ರಾಜ್ಯದ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ ಎಂದರು. ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕರ್ನಾಟಕದ ವಿವಿಧೆಡೆ ಲೋಕಾಯುಕ್ತ ದಾಳಿ. ಬೆಂಗಳೂರು, ತುಮಕೂರು, ಹಾವೇರಿ ಮತ್ತಿತರ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳಲ್ಲಿ ತಪಾಸಣೆ ನಡೆಸಲಾಯಿತು. ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಸಂಪತ್ತು ಗಳಿಸಿದ್ದಾರೆ ಎಂಬ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಲೋಕಾಯುಕ್ತರು ಅಧಿಕಾರಿಗಳ ಆದಾಯ ಮೂಲ, ಆಸ್ತಿ ದಾಖಲೆ ಹಾಗೂ ಬ್ಯಾಂಕ್ ವಿವರಗಳನ್ನು ಪರಿಶೀಲಿಸುತ್ತಾರೆ. ಬೆಂಗಳೂರಿನ ಎರಡು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಬಸವೇಶ್ವರನಗರದಲ್ಲಿರುವ ಬೆಸ್ಕಾಂ ತಾಂತ್ರಿಕ ನಿರ್ದೇಶಕ ರಮೇಶ್ ಅವರ ಮನೆ ಹಾಗೂ ವಿಜಯನಗರ ಮಾರುತಿ ಮಂದಿರ ಬಳಿ ಇರುವ ಕೈಗಾರಿಕೆ ಮತ್ತು ಬಾಯ್ಲರ್ ಉಪನಿರ್ದೇಶಕ ಟಿ.ವಿ.ನಾರಾಯಣಪ್ಪ ಅವರ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ತುಮಕೂರು ಜಿಲ್ಲೆಯ ಆರ್.ಟಿ.ನಗರದಲ್ಲಿರುವ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಅವರ ಮನೆ ಮೇಲೆ ಲೋಕಾಯುಕ್ತ ಡಿಎಸ್ಪಿಗಳಾದ ಮಂಜುನಾಥ್ ಮತ್ತು ಹರೀಶ್ ನೇತೃತ್ವದಲ್ಲಿ ದಾಳಿ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಅಮೆರಿಕದ ರಾಜಧಾನಿ ವಾಷಿಂಗ್ಟನ್ ನಲ್ಲಿ ಒಂದು ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ದತ್ತು ತಾಯಿ ಕಾರಿನಲ್ಲಿ ಬಿಟ್ಟು ಹೋಗಿದ್ದ ಮಗು ಬಿಸಿಲಿನ ತಾಪಕ್ಕೆ ಬಲಿಯಾಗಿದೆ. ಮಗು ಒಂಬತ್ತು ಗಂಟೆಗೂ ಹೆಚ್ಚು ಕಾಲ ಕಾರಿನಲ್ಲೇ ಇತ್ತು. ಮಗು ಕಾರಿನಲ್ಲಿದೆ ಎಂಬುದನ್ನು ಮರೆತಿದ್ದೇನೆ ಎಂದು ಸಾಕು ತಾಯಿ ಹೇಳಿಕೊಂಡಿದ್ದಾರೆ. ಬುಧವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ವಾಷಿಂಗ್ಟನ್ ನ ಗುಡ್ ಸಮರಿಟನ್ ಆಸ್ಪತ್ರೆಗೆ ಕೆಲಸಕ್ಕೆ ಬಂದಾಗ ಸಾಕು ತಾಯಿ ಮಗುವನ್ನು ಕಾರಿನಲ್ಲಿ ಬಿಟ್ಟು ಹೋಗಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ಪಾಳಿ ಮುಗಿಸಿ ಹಿಂತಿರುಗುವಷ್ಟರಲ್ಲಿ ಮಗು ಮೃತಪಟ್ಟಿತ್ತು. ಕಾರಿನಲ್ಲಿ ಮಗು ಇರೋದು ಮರೆತು ಹೋಗಿತ್ತು ಎಂದು ಸಾಕು ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಸಿಎನ್ಎನ್ ವರದಿ ಮಾಡಿದ್ದು, ತೀವ್ರ ಶಾಖದಿಂದಾಗಿ ಮಗು ಸಾವನ್ನಪ್ಪಿದೆ. ಟಕೋಮಾದ ಆಗ್ನೇಯದಲ್ಲಿರುವ ಪುಯಲ್ಲಪ್ ನಲ್ಲಿ ತಾಪಮಾನವು 70 ರಿಂದ 75 ಡಿಗ್ರಿಗಳ ನಡುವೆ ಇತ್ತು, ಆದರೆ ಹುಡುಗ ಪತ್ತೆಯಾದಾಗ ಕಾರಿನ ಒಳಗಿನ ತಾಪಮಾನ 110 ಡಿಗ್ರಿ ಎಂದು ವರದಿ ಹೇಳಿದೆ. ಸಾಕು…
ತುರುವೇಕೆರೆ: ತಾಲೂಕಿನ ಮಾಯಸಂದ್ರ ಚೆಕ್ ಪೋಸ್ಟ್ ನಿಂದ ಯಡಿಯೂರು ಗಡಿ ಭಾಗದವರೆಗೆ ರಸ್ತೆಯ ನಿರ್ಮಾಣ ಶೀಘ್ರವೇ ನಡೆಸುವಂತೆ ಶಾಸಕ ಎಂ.ಟಿ.ಕೃಷ್ಣಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರು ಗಡಿಯ ಭಾಗದಿಂದ ಮಾಯಸಂದ್ರ ಚೆಕ್ ಪೋಸ್ಟ್ ವರೆಗೆ ರಸ್ತೆ ಗುಂಡಿಗಳ ಮಯವಾಗಿದ್ದು, ಕಾರು ಮತ್ತು ಬಸ್ಸುಗಳ ಪ್ರಯಾಣಿಕರು ಹಾಗೂ ದಾರಿಹೋಕರು ಈ ಭಾಗದ ಶಾಸಕರು ಯಾರು ಎಂದು ಪ್ರಶ್ನೆ ಮಾಡುವ ಹಂತಕ್ಕೆ ತಲುಪಿದೆ . ಆದ್ದರಿಂದ ತುರ್ತಾಗಿ ಹೇಳಿ ಕೂಡಲೇ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚಿಸಿ, ಅದರ ಮೇಲೆ ಒಂದು ಪದರ ಡಾಂಬರು ಹಾಕಿಸಿ ಸದ್ಯಕ್ಕೆ ಸುಸ್ಥಿತಿಯಲ್ಲಿರುವ ಹಾಗೆ ನೋಡಿಕೊಳ್ಳಿ ಎಂದು ಸಂಬಂಧಪಟ್ಟ ಪಿಡಬ್ಲ್ಯೂಡಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಭಾಕರ್ ರವರಿಗೆ , ಹಾಗೂ ಅಧಿಕಾರಿಗಳಿಗೆ ತಾಕೀತು ಮಾಡಿದರು. ತಾಲ್ಲೂಕು ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಾನು ಕಳೆದ ಬಾರಿ ಶಾಸಕನಾಗಿದ್ದಾಗ ಉನ್ನತ ದರ್ಜೆ ಆಸ್ಪತ್ರೆಯನ್ನಾಗಿ ಮಾಡಿಸಿದ್ದೆ.…
ತುಮಕೂರು: ಅಕ್ರಮವಾಗಿ ಜಾನುವಾರು ಸಾಗುಸುತ್ತಿದ್ದ ಸ್ಕಾರ್ಪಿಯೋ ಕಾರು ಅಪಘಾತಕ್ಕೀಡಾದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಮಾಗಡಿಪಾಳ್ಯದ ಬಳಿ ನಡೆದಿದೆ. ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿದೆ. ಅಪಘಾತ ಬಳಿಕ ಕಾರಿನಲ್ಲಿ ಜಾನುವಾರು ಸಾಗಿಸುತ್ತಿದ್ದ ಪ್ರಕರಣ ಬಯಲಾಗಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಘಾತಕ್ಕೀಡಾದ ಕಾರಿನಲ್ಲಿದ್ದ ಕರುಗಳನ್ನು ಪೊಲೀಸರು ಗೋಶಾಲೆಗೆ ಬಿಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
* ಕೆ.ಐ.ಎ.ಡಿ.ಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ದಾಳಿ. * ತುಮಕೂರು ನಗರದ ಆರ್.ಟಿ. ನಗರದಲ್ಲಿ ಇರುವ ಮನೆ ಮೇಲೆ ದಾಳಿ. * ಲೋಕಾಯುಕ್ತ ಡಿಎಸ್ ಪಿ ಗಳಾದ ಮಂಜುನಾಥ್ ಹಾಗೂ ಹರೀಶ್ ತಂಡದಿಂದ ರೇಡ್. * ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA