Subscribe to Updates
Get the latest creative news from FooBar about art, design and business.
- ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
- ಗುರು ಶಿಷ್ಯರು: ಈ ದಿನದ ಕಥೆ
- ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ
- ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ
- ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ
- ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
- ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
- ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
Author: admin
ತುರುವೇಕೆರೆ : ದೇವರಾಜ್ ಅರಸು ಅವರ ಬಗ್ಗೆ ಮಾತನಾಡಲು ಐದರಿಂದ ಹತ್ತು ನಿಮಿಷ ಸಾಕಾಗುವುದಿಲ್ಲ ವಿಸ್ತೃತವಾಗಿ ವಿಚಾರಗಳನ್ನು ಮಾತನಾಡಬೇಕು ಎಂದು ತಾಲೂಕಿನ ತಹಶೀಲ್ದಾರ್ ರೇಣು ಕುಮಾರ್ ಅಭಿಪ್ರಾಯ ಪಟ್ಟರು . ಅವರು ತಾಲೂಕು ಕಚೇರಿಯ ಆವರಣದಲ್ಲಿ ಏರ್ಪಡಿಸಿದ್ದ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಇವತ್ತಿನ ಪರಿಸ್ಥಿತಿ ಅನುಗುಣವಾಗಿ ರಾಜ್ಯ ಸರ್ಕಾರ ಏನೇನು ಸೂಚನೆ ನೀಡಿದೆ ಅದನ್ನು ಸಾರ್ವಜನಿಕರಿಗೆ ತಲೆಪಿಸುವುದು ನಮ್ಮೆಲ್ಲರ ಜವಾಬ್ದಾರಿ ನಾವೆಲ್ಲ ಬಂದಿರುವುದು ಸಾರ್ವಜನಿಕರ ಸೇವೆ ಮಾಡಲು ಸರ್ಕಾರದ ಯೋಜನೆಗಳನ್ನು ಸರ್ಕಾರದ ಸೇವೆಗಳನ್ನು ಸಾರ್ವಜನಿಕರಿಗೆ ತಲುಪಿಸುವುದೇ ನಮ್ಮ ಆದ್ಯ ಕರ್ತವ್ಯ ಹಾಗೂ ಜನಸೇವೆಯನ್ನು ನಾವು ಮಾಡುತ್ತಿದ್ದೇವೆ ಇದೇ ರೀತಿ ಅರಸು ಅವರ ಹಾದಿಯಲ್ಲಿ ನಡೆಯೋಣ ಆದರ್ಶಗಳನ್ನು ಅಳವಡಿಸಿಕೊಳ್ಳೋಣ ಅವರ ಜಯಂತಿಯನ್ನು ಸರ್ಕಾರ ದಿನವನ್ನಾಗಿ ಮಾಡಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ, ಎಲ್ಲ ವರ್ಗದ ಎಲ್ಲ ಧರ್ಮದ…
ಕೊರಟಗೆರೆ: ಅತೀ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ ವ್ಯಾಪ್ತಿಯ ತಣ್ಣೇನಹಳ್ಳಿ ಸಮೀಪ ನಡೆದಿದೆ. ಕೊರಟಗೆರೆ ಕಡೆಯಿಂದ ಅತೀ ವೇಗವಾಗಿ ಬಂದ ಕಾರು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 11 ಕೆ.ವಿ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ತಣ್ಣೇನಹಳ್ಳಿ ಗ್ರಾಮದ ಸಮೀಪ ಅತೀವೇಗವಾಗಿ ಬಂದ ಕಾರಣ ಹೈ ಪವರ್ ( 11 K.V ) ಲೈನ್ ಹೊಂದಿದ್ದ ಕಂಬ ರಾಜ್ಯ ಹೆದ್ದಾರಿ ಮಧ್ಯಭಾಗಕ್ಕೆ ಉರುಳಿ ಬಿದ್ದಿದೆ. ಘಟನೆ ಬಗ್ಗೆ ತಕ್ಷಣವೇ ಸಾರ್ವಜನಿಕರಿಂದ ಬೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದ್ದು ನಂತರ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದರು. ಅಲ್ಲಿಯವರೆಗೂ ಕೆಲವು ಕಾಲ ರಸ್ತೆ ಸಂಚಾರಕ್ಕೆ ಅಡ್ಡಿಉಂಟಾಗಿತ್ತು. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಇನ್ನೂ ರಸ್ತೆಯಲ್ಲಿ ವಾಹನಗಳು ಅತೀ ವೇಗದಿಂದ ಚಲಿಸುತ್ತಿವೆ, ಇದರಿಂದಾಗಿ ಅಪಾಯ ಸೃಷ್ಟಿಯಾಗುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. ವರದಿ : ಮಂಜುಸ್ವಾಮಿ…
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ. ಕೊರಟಗೆರೆ : ಪಟ್ಟಣದ ಕುಡಿಯುವ ನೀರಿನ ಜಂಪೇನಹಳ್ಳಿ ಕೆರೆಗೆ ಡಾಬಾ ಮತ್ತು ಲಾಡ್ಜ್ ಗಳಿಂದ ಹೊರಬರುವ ಕಲುಷಿತ ನೀರನ್ನು ಪ.ಪಂ ಮುಖ್ಯಾಧಿಕಾರಿ ಭಾಗ್ಯಮ್ಮ ತಡೆಗಟ್ಟಿದ ಘಟನೆ ನಡೆದಿದೆ. ಕೊರಟಗೆರೆ ಪಟ್ಟಣಕ್ಕೆ ಸರಬರಾಜು ಆಗುವ ಕುಡಿಯುವ ನೀರಿನ ಜಂಪೇನಹಳ್ಳಿ ಕೆರೆಗೆ ಡಾಬಗಳ ತ್ಯಾಜ್ಯ, ಕಲುಶಿತ ನೀರು ಬಿಡಲಾಗುತ್ತಿದ್ದು, ಇದನ್ನು ತಡೆಗಟ್ಟುವ ಕಾರ್ಯಾಚರಣೆ ವೇಳೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮತ್ತು ಡಾಬಾ ಮಾಲೀಕರ ನಡುವೆ ಸುರಿವ ಮಳೆಯಲ್ಲೇ ವಾಗ್ವಾದ, ಕಾಮಗಾರಿಗೆ ತಡೆ ನಡೆಸಿದ ಘಟನೆ ನಡೆದಿದೆ. ಜಂಪೇನಹಳ್ಳಿ ಕೆರೆಯ ದಂಡೆಯ ಮೇಲಿರುವ ಕೆಲವು ಡಾಬಾಗಳು ಮತ್ತು ಲಾಡ್ಜ್ ಗಳಿಂದ ಹೊರಬರುವ ಕಲುಶಿತ ನೀರು ಮತ್ತು ಮಲೀನ ತ್ಯಾಜ್ಯ ಬಿಡುವುದನ್ನು ತಡೆಗಟ್ಟಲು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಭಾಗ್ಯಮ್ಮ, ಆರೋಗ್ಯಾಧಿಕಾರಿ ಮಹಮದ್ ಹುಸೇನ್ ಸೇರಿದಂತೆ ಸಿಬ್ಬಂದಿಗಳು ಸಾರ್ವಜನಿಕರ ದೂರಿನ ಮೇಲೆ ಸ್ಥಳಕ್ಕೆ ತೆರಳಿ ಕಾರ್ಯಾಚರಣೆಗೆ ಮುಂದಾದರು, ಆಗ ಡಾಬಾಗಳ ಮಾಲೀಕರು ಈ ಕೆರೆಯ ಜಾಗ ನಮ್ಮದು ಇದಕ್ಕೆ ಸರ್ಕಾರದಿಂದ ಪರಿಹಾರ…
ಚಾಮರಾಜನಗರ: ಎಸ್ ಸಿ, ಎಸ್ ಟಿ ಅನುದಾನ ದುರುಪಯೋಗವಾಗಲು ಬಿಡುವುದಿಲ್ಲ ಎಂದು ಚಾಮರಾಜನಗರದಲ್ಲಿ ಸಮಾಜಕಲ್ಯಾಣ ಸಚಿವ ಮಹದೇವಪ್ಪ ಹೇಳಿದರು. ಸಂವಿಧಾನ ಉಳಿವಿಗಾಗಿ ಭೀಮಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಬೇರೆ ಯೋಜನೆಗಳಿಗೆ ಬಳಸಿಕೊಳ್ಳಲು ನಿಯಮ 7ಡಿ ಅಡಿ ಅವಕಾಶವಿದೆ. ಈ ನಿಯಮವನ್ನು ಬಿಜೆಪಿ ಸರ್ಕಾರ ದುರುಪಯೋಗ ಮಾಡಿಕೊಂಡಿತ್ತು ಎಂದರು.
ಜನಪ್ರಿಯ ಪಾದರಕ್ಷೆ ತಯಾರಕ ಬಾಟಾ ಇಂಡಿಯಾವು ಕ್ರೀಡಾ ಉಡುಪುಗಳ ದೈತ್ಯ ಅಡಿಡಾಸ್ ಜೊತೆ ಪಾಲುದಾರಿಕೆಗೆ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಬಾಟಾ ಇಂಡಿಯಾ ಮತ್ತು ಅಡಿಡಾಸ್ ನಡುವಿನ ಮಾತುಕತೆ ಪ್ರಗತಿಯಲ್ಲಿದೆ ಎಂದು ಮೂಲಗಳು ಸೂಚಿಸಿವೆ. ಭಾರತೀಯ ಮಾರುಕಟ್ಟೆಯಲ್ಲಿ ಸಹಯೋಗವನ್ನು ರೂಪಿಸುವ ಕುರಿತು ಮಾತುಕತೆಗಳು ಕೇಂದ್ರೀಕೃತವಾಗಿವೆ ಎಂದು CNBC-TV18 ವರದಿ ಮಾಡಿದೆ. ಬಾಟಾ ಇಂಡಿಯಾ ದೇಶಾದ್ಯಂತ 2,050 ಮಳಿಗೆಗಳೊಂದಿಗೆ ದೊಡ್ಡ ಚಿಲ್ಲರೆ ಜಾಲವನ್ನು ಹೊಂದಿದೆ. ಗ್ರಾಹಕರ ಆದ್ಯತೆಗಳನ್ನು ಪೂರೈಸಲು ಬಾಟಾ ಇಂಡಿಯಾ ಪಾದರಕ್ಷೆಗಳ ಮಾರುಕಟ್ಟೆಯಲ್ಲಿ ಸಕ್ರಿಯ ಅಸ್ತಿತ್ವವನ್ನು ಹೊಂದಿದೆ. ಕಂಪನಿಯ ಇತ್ತೀಚಿನ ವಾರ್ಷಿಕ ವರದಿಯ ಪ್ರಕಾರ, ಯುವಕರ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಗುರಿಯನ್ನು ಹೊಂದಿರುವ “ಸ್ನೀಕರ್” ಶೂ 500 ಕ್ಕೂ ಹೆಚ್ಚು ಮಳಿಗೆಗಳಿಗೆ ವಿಸ್ತರಿಸಿದೆ. ಅಡೀಡಸ್ ಮತ್ತು ಬಾಟಾ ಇಂಡಿಯಾ ಈ ವಿಷಯದ ಬಗ್ಗೆ ಇನ್ನೂ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿಲ್ಲ.
‘ಜೈಲರ್’ ಚಿತ್ರ ಬಾಕ್ಸ್ ಆಫೀಸ್ ನಲ್ಲಿ 500 ಕೋಟಿ ಕಲೆಕ್ಷನ್ ಮಾಡುತ್ತಿದೆ. ‘ಜೈಲರ್’ ಯಶಸ್ಸಿನ ಸಂಭ್ರಮದಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿರುವಾಗಲೇ ರಜನಿಕಾಂತ್ ಯಾತ್ರೆ ಕೈಗೊಂಡಿದ್ದಾರೆ. ಹಿಮಾಲಯಕ್ಕೆ ಭೇಟಿ ನೀಡಿದ ನಂತರ ನಟ ನಿನ್ನೆ ಉತ್ತರ ಪ್ರದೇಶಕ್ಕೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಎಎನ್ ಐಗೆ ಪ್ರತಿಕ್ರಿಯಿಸಿದ ರಜಿನಿ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡುವುದಾಗಿ ಮತ್ತು ಅವರೊಂದಿಗೆ ಜೈಲರ್ ನೋಡಲು ಭೇಟಿ ಮಾಡುವುದಾಗಿ ಹೇಳಿದರು. ಇದಲ್ಲದೇ ಅವರು ಯುಪಿಯ ಕೆಲವು ಯಾತ್ರಾ ಕೇಂದ್ರಗಳಿಗೂ ಭೇಟಿ ನೀಡಲಿದ್ದಾರೆ. ಜೈಲರ್ ಗೆ ಸಿಗುತ್ತಿರುವ ಸಕಾರಾತ್ಮಕ ಪ್ರತಿಕ್ರಿಯೆಯ ಬಗ್ಗೆ ಕೇಳಿದಾಗ, ಇದು ದೇವರ ಆಶೀರ್ವಾದ ಎಂದು ನಟ ಉತ್ತರಿಸಿದರು. ಕಳೆದ ದಿನ ರಜನಿಕಾಂತ್ ಜಾರ್ಖಂಡ್ ನ ಚಿನ್ನಮಸ್ತ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಇದಾದ ನಂತರ ಯುಪಿಗೆ ಬಂದರು. ಜಾರ್ಖಂಡ್ನಲ್ಲಿರುವ ಚಿನ್ನಮಸ್ತ ಅವರು ಬಹಳ ದಿನಗಳಿಂದ ಭೇಟಿ ನೀಡಲು ಬಯಸಿದ ದೇವಾಲಯವಾಗಿದೆ ಎಂದು ನಟ ಹೇಳಿದರು. ನಟ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು…
ಅತ್ಯಾಚಾರ ಪ್ರಕರಣದ ಆರೋಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಹಿರಿಯ ಅಧಿಕಾರಿಗಳ ಜೊತೆ ಅಶಿಸ್ತಿನಿಂದ ವರ್ತಿಸಿದ್ದ ಆರೋಪದಡಿ ಬಸವೇಶ್ವರನಗರ ಠಾಣೆ ಪಿಎಸ್ ಐ ಸತೀಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಪಿಎಸ್ ಐ ಸತೀಶ್ ವಿರುದ್ಧ ಕೇಳಿಬಂದಿದ್ದ ಆರೋಪದ ಬಗ್ಗೆ ತನಿಖೆ ನಡೆಸಿದ್ದ ಪಶ್ಚಿಮ ವಿಭಾಗದ ಡಿಸಿಪಿಯವರು ವರದಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ್ದ ಕಮಿಷನರ್ ಬಿ. ದಯಾನಂದ್, ಸತೀಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಮಗಳ ಮದುವೆ ವಿಚಾರದಲ್ಲಿ ಮನನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಫೀಜಾ ಸುಲ್ತಾನ್ (42) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಹಫೀಜಾ ಎರಡನೇ ಮಗಳ ಮದುವೆ ಮಾಡುವಂತೆ ಪತಿಗೆ ಒತ್ತಾಯಿಸಿದರು. ಇದೇ ವಿಚಾರವಾಗಿ ಮನಸ್ತಾಪ ಉಂಟಾಗಿತ್ತು. ಇದರಿಂದ ಬೇಸತ್ತ ಹಫೀಜಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿ ಮಹೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ‘ಸಿದ್ದಾಪುರ ಠಾಣೆಯ ರೌಡಿ ಪಟ್ಟಿಯಲ್ಲಿ ಹೆಸರಿದ್ದ ಮಹೇಶ್ ನನ್ನು ಆಗಸ್ಟ್ 4ರಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಮುಖ ಆರೋಪಿಯಾಗಿದ್ದ ರೌಡಿ ವಿಲ್ಸನ್ ಗಾರ್ಡನ್ ನಾಗ್ ಹಾಗೂ ಮೋಹನ್ ಅಲಿಯಾಸ್ ಡಬಲ್ ಮೀಟರ್ ತಲೆಮರೆಸಿಕೊಂಡಿದ್ದರು. ಇದೀಗ ಇಬ್ಬರೂ ನ್ಯಾಯಾಲಯಕ್ಕೆ ಶರಣಾಗಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. 2021ರಲ್ಲಿ ವಿಲ್ಸನ್ ಗಾರ್ಡನ್ ನಾಗನ ಗೆಳೆಯ ಮದನ್ ಬನಶಂಕರಿ ದೇವಾಲಯದ ಬಳಿಯ ರಸ್ತೆಯಲ್ಲಿ ಅಡ್ಡಹಾಕಿ ಮಹೇಶ ಕೊಚ್ಚಿ ಕೊಲೆ ಮಾಡಿದ್ದ. ಇದರ ದ್ವೇಷಕ್ಕೆ ನಾಗ ಕೊಲೆ ಮಾಡಿಸಿದ್ದ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಆರೋಪಿಗಳು ಕೋರ್ಟ್ಗೆ ಹಾಜರಾಗಿದ್ದಾರೆ.
ಬೆಂಗಳೂರು : ಶಾಲೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಟೆಂಪೋ ಚಾಲಕ ಎಚ್.ಕೆ. ಗಣೇಶ್ (23)ಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ನಗರದ 1ನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್ ಟಿಎಸ್ ಸಿ) ಆದೇಶ ಹೊರಡಿಸಿದೆ. ಜ್ಞಾನಭಾರತಿ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರಾದ ರೂಪಾ ಕೆ. ಎನ್. ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ. ಕೃಷ್ಣವೇಣಿ ವಾದಿಸಿದ್ದರು.