Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ಪಾವಗಡ: ಪಾವಗಡ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 51 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆ ನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ತಮ ಅರ್ಜಿಯನ್ನು 2026ರ ಜನವರಿ 9ರೊಳಗಾಗಿ https://karnemaka-one.kar.nic.in/abcd/ ವಿಳಾಸದ ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 08136–245733ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಕೃಷಿ ಇಲಾಖೆಯು ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ–2025ರ ಪ್ರಯುಕ್ತ ಡಿಸೆಂಬರ್ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಏರ್ಪಡಿಸಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವವರಿಂದ ಅರ್ಜಿ ಆಹ್ವಾನಿಸಿದೆ. ಈ ಸ್ಪರ್ಧೆಯಲ್ಲಿ ಕೃಷಿ ಇಲಾಖೆ ಅಧಿಕಾರಿ/ಸಿಬ್ಬಂದಿ, ವಿದ್ಯಾರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಭಾಗವಹಿಸಬಹುದಾಗಿದ್ದು, ಭಾಗವಹಿಸುವವರು ತಮ್ಮ ಅರ್ಜಿಯಲ್ಲಿ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯದ ಬಗ್ಗೆ ಮಾಹಿತಿ ನೀಡಬೇಕು. ಅರ್ಜಿ ನಮೂದಿಸಿದ ತಿನಿಸನ್ನು ಮನೆಯಲ್ಲಿಯೇ ತಯಾರಿಸಿ ಡಿಸೆಂಬರ್ 31ರಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರದರ್ಶಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ಸ್ಪರ್ಧಿಗೆ ಒಂದೇ ಸಸ್ಯಹಾರಿ ತಿನಿಸು (ಸಿಹಿ ಅಥವಾ ಖಾರ ಅಥವಾ ಮರೆತು ಹೋದ ಖಾದ್ಯ) ಪ್ರದರ್ಶಿಸಲು ಅವಕಾಶವಿರುತ್ತದೆ. ಸ್ಪರ್ಧೆಯಲ್ಲಿ ಆಯ್ಕೆಯಾದವರಿಗೆ ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಮತ್ತು ಮರೆತು ಹೋದ ಖಾದ್ಯಗಳ ತಿನಿಸಿಗೆ ಜಿಲ್ಲಾ ಮಟ್ಟದಲ್ಲಿ ಕ್ರಮವಾಗಿ…
ಚಾಮರಾಜನಗರ: ಜಿಲ್ಲೆಯ ನಂಜೇದೇವನಪುರ ಗ್ರಾಮದ ಬಳಿ ಏಕಕಾಲಕ್ಕೆ ಐದು ಹುಲಿಗಳು ಕಾಣಿಸಿಕೊಂಡಿದ್ದು, ಸ್ಥಳೀಯ ಜನರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ನಂಜೇದೇವನಪುರ, ವೀರನಪುರ ಹಾಗೂ ಉಡಿಗಾಲ ಗ್ರಾಮಗಳ ಜಮೀನುಗಳಲ್ಲಿ ಹುಲಿಗಳ ಓಡಾಟ ಪತ್ತೆಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಚಾಮರಾಜನಗರ ತಹಶೀಲ್ದಾರ್ ಗಿರಿಜಾ ಅವರು ಈ ಭಾಗದಲ್ಲಿ ಸೆಕ್ಷನ್ 144 ರಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಬಳಕೆಯಾಗದ ಕಲ್ಲು ಕ್ವಾರಿಗಳನ್ನು ಹುಲಿಗಳು ತಮ್ಮ ಆವಾಸಸ್ಥಾನವನ್ನಾಗಿ ಮಾಡಿಕೊಂಡಿರುವುದು ಡ್ರೋನ್ ಕ್ಯಾಮೆರಾ ಕಾರ್ಯಾಚರಣೆಯಲ್ಲಿ ದೃಢಪಟ್ಟಿದೆ. ತಾಯಿ ಹುಲಿ ಮತ್ತು ಮರಿಗಳಿರುವ ಸಾಧ್ಯತೆಯಿದ್ದು, ಅರಣ್ಯ ಇಲಾಖೆಯು ಸಾಕಾನೆಗಳ ಸಹಾಯದಿಂದ ಕೂಂಬಿಂಗ್ ನಡೆಸಲು ಸಿದ್ಧತೆ ನಡೆಸಿದೆ. ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುಲಿಗಳನ್ನು ತಕ್ಷಣ ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ನಾಳೆ ಸಂಜೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ತಾಲೂಕಿನ ತಹಶೀಲ್ದಾರ್ ಕಚೇರಿಗೆ ಸೋಮವಾರ ಬೆಳಿಗ್ಗೆ ಬಂದಂತಹ 2 ಆರ್ ಡಿ ಎಕ್ಸ್ ಹುಸಿ ಬಾಂಬ್ ಸ್ಫೋಟದ ಬೆದರಿಕೆ ಮೇಲ್ ಸಂದೇಶ ಕೆಲಕಾಲ ಆತಂಕಕ್ಕೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಲ್ಲಿ ಕಾರಣವಾಗಿತ್ತು. ತಹಶೀಲ್ದಾರ್ ಕಚೇರಿಯಲ್ಲಿ ಶೀಘ್ರದಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಲಿದೆ. ಎಲ್ಲರನ್ನೂ ತಕ್ಷಣ ತೆರವುಗೊಳಿಸಿ’ ಎಂಬ ಶೀರ್ಷಿಕೆಯನ್ನು ಕನ್ನಡದಲ್ಲಿ ಉಲ್ಲೇಖಿಸಿ, ಗೈನಾ ರಮೇಶ್@ಔಟ್ಲುಕ್ ಡಾಟ್ ಕಾಂ ಎಂಬ ಈ-–ಮೇಲ್ ಐಡಿಯಿಂದ ಬೆಳಿಗ್ಗಿನ ಜಾವ 5 ರ ಸುಮಾರಿಗೆ ದುಷ್ಕರ್ಮಿಯೊಬ್ಬರು ಸಂದೇಶ ರವಾನಿಸಲಾಗಿತ್ತು. ಮೇಲ್ ನೋಡಿದ ಸಮಯದಲ್ಲಿ ತಾಲೂಕು ಕಚೇರಿಯಲ್ಲಿ ಇದ್ದ ಸಿಬ್ಬಂದಿಗಳು ಭಯಭೀತರಾಗಿ ತಹಶೀಲ್ದಾರ್ ಮೋಹನಕುಮಾರಿ ಗಮನಕ್ಕೆ ತಂದ ಕೂಡಲೇ ಪೋಲಿಸ್ ಠಾಣೆಗೆ ಮಾಹಿತಿ ನೀಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕಚೇರಿಯಲ್ಲಿ ಇದ್ದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರನ್ನು ಕಚೇರಿಯಿಂದ ಹೊರ ಕೇಳಿದ್ದಾರೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ತಹಶೀಲ್ದಾರ್ ಕಚೇರಿಗೆ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ಮೈಸೂರುದಿಂದ ಆಗಮಿಸಿದ ಬಾಂಬ್ ನಿಷ್ಕ್ರೀಯ ಹಾಗೂ ಶ್ವಾನ ದಳದಿಂದ ಕಚೇರಿ ಮತ್ತು ಸುತ್ತಮುತ್ತಲಿನ…
ತುಮಕೂರು : ಸಮಾಜದ ಕಟ್ಟಕಡೆಯ ವ್ಯಕ್ತಿಯ ಬಾಳಲ್ಲೂ ಶಿಕ್ಷಣದ ಬೆಳಕು ಮೂಡಬೇಕೆಂದು ತಮ್ಮ 111 ವರ್ಷಗಳ ಸುದೀರ್ಘ ಆಯಸ್ಸನ್ನು ಮುಡುಪಾಗಿಟ್ಟ ನಾಡಿನ ಮಹಾಬೆಳಕು ಸಿದ್ದಗಂಗಾ ಶ್ರೀಗಳು ಎಂದು ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಎಂ.ಶಿವಕುಮಾರ್ ಹೇಳಿದರು. ಸಿದ್ಧಗಂಗಾಮಠದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ ಕೊಡಮಾಡುವ “ಸಿದ್ಧಗಂಗಾಶ್ರೀ’ ‘ಸಂಘ ಸಿರಿ’ ಪ್ರಶಸ್ತಿ ಸಮಾರಂಭದಲ್ಲಿ ಸಂಘದ ಪರವಾಗಿ ಅನಿಸಿಕೆ ಕುರಿತು ಅವರು ಮಾತನಾಡಿದರು. ನಮ್ಮ ರಾಜ್ಯದ ಹಿರಿಯ ಸಂಘಟನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಳೆಯ ವಿದ್ಯಾರ್ಥಿಗಳು ಮತ್ತು ಹಿತೈಷಿಗಳ ಸಂಘಕ್ಕೆ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಮಹಾಸ್ವಾಮೀಜಿಯವರ ಮಿಂಚಿನ ಸಂಚಾರ ಎಲ್ಲರಿಗೂ ಚೈತನ್ಯದಾಯಕವಾಗಿದೆ ಎಂದರು. ಮಂಡ್ಯದಲ್ಲಿ ಪೂಜ್ಯರ ಉದ್ಯಾನವನ ನಿರ್ಮಾಣಗೊಳಿಸಲು ಸಂಪೂರ್ಣವಾಗಿ ಆಶೀರ್ವದಿಸಿ ಪೂಜ್ಯರ ಪುತ್ಥಳಿಯನ್ನು ದಯಪಾಲಿಸಿದ ಮಹಾ ಕರುಣಾಮಯಿ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರ ಕಾಯಕ ನಿಷ್ಠೆ ಸಮಾಜಕ್ಕೆ ಸ್ಪೂರ್ತಿದಾಯಕ ಎಂದು ಬಣ್ಷಿಸಿದರು. ಸಸ್ಯಾಂದೋಲನ : ರೈತರು ಹಾಗೂ ಪರಿಸರ ಸಂರಕ್ಷಣೆಯ ಬಗ್ಗೆ ಅಪಾರ…
ತುಮಕೂರು : ಶ್ರೀಮಠದ ಬೆಳವಣಿಗೆಯ ಪ್ರತಿ ಹಂತದಲ್ಲು ಶ್ರೀಗಳ ಶ್ರಮ ಇದೆ. ಮಠದ ಮಕ್ಕಳ ಶ್ರೇಯೋಭಿವೃದ್ಧಿ ಗಾಗಿ ಅವರ ಜೀವನವನ್ನೇ ಸಮರ್ಪಿಸಿಕೊಂಡಿದ್ದರು. ಶಿವಕುಮಾರ ಶ್ರೀಗಳ ಮೇಲಿನ ಭಕ್ತಿ, ಶ್ರದ್ಧೆ, ಅಭಿಮಾನ, ಪ್ರೀತಿಯಿಂದ ಹಳೆಯ ವಿದ್ಯಾರ್ಥಿಗಳು ಈ ಸಮಾವೇಶಕ್ಕೆ ನಾಡಿನೆಲ್ಲಡೆಯಿಂದ ಆಗಮಿಸಿದ್ದಾರೆ. ಇದೊಂದು ಕೃತಜ್ಞತಾ ಸಭೆ ಅಂದರೆ ತಪ್ಪಾಗಲಾರದು. ಶ್ರೀಮಠವು ಎಂದೂ ಏನನ್ನೂ ಬೇಡುವುದಿಲ್ಲ. ಸಂಘಕ್ಕೆ ಯಾವ ನಿಧಿಯು ಬೇಡ. ಹಳೆಯ ವಿದ್ಯಾರ್ಥಿಗಳೇ ನಮ್ಮ ಪಾಲಿನ ನಿಧಿ ಎಂದು ಸಿದ್ದಗಂಗಾ ಮಠಾಧ್ಯಕ್ಷ ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಹೇಳಿದರು. ಸಿದ್ಧಗಂಗಾಮಠದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ ಕೊಡಮಾಡುವ “ಸಿದ್ಧಗಂಗಾಶ್ರೀ’ ‘ಸಂಘ ಸಿರಿ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿದ ಅವರು, ಪರಮಪೂಜ್ಯರಿಗೆ ಹಳೆಯ ವಿದ್ಯಾರ್ಥಿಗಳ ಕಂಡರೆ ಅಭಿಮಾನ, ಪ್ರೀತಿ ಇತ್ತು. ನಿಮ್ಮಲ್ಲಿ ಪೂಜ್ಯರನ್ನು ಕಂಡಷ್ಟು ಖುಷಿ ಯಾಗುತ್ತಿದೆ ಎಂದರು. ಶ್ರೀಮಠದ ಬೆಳವಣಿಗೆಯ ಪ್ರತಿ ಹಂತದಲ್ಲು ಶ್ರೀಗಳ ಶ್ರಮ ಇದೆ. ಮಠದ…
ದಾವಣಗೆರೆ: ನಟ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಭರ್ಜರಿ ಯಶಸ್ಸು ಕಾಣುತ್ತಿರುವ ಹಿನ್ನೆಲೆಯಲ್ಲಿ, ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ದಾವಣಗೆರೆಯ ಗೀತಾಂಜಲಿ ಚಿತ್ರಮಂದಿರಕ್ಕೆ ಭೇಟಿ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ದರ್ಶನ್ ಅವರ ಅನುಪಸ್ಥಿತಿಯಲ್ಲಿ ಕೆಲವರು ಅವರ ವಿರುದ್ಧ ಮತ್ತು ಅಭಿಮಾನಿಗಳ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. “ದರ್ಶನ್ ಅವರು ಬೆಂಗಳೂರಿನಲ್ಲಿದ್ದಾಗ ಮಾತನಾಡದವರು, ಈಗ ಅವರು ಇಲ್ಲದ ಸಮಯದಲ್ಲಿ ವೇದಿಕೆಗಳ ಮೇಲೆ ಮತ್ತು ಸುದ್ದಿ ವಾಹಿನಿಗಳಲ್ಲಿ ಕುಳಿತು ಮಾತನಾಡುತ್ತಿದ್ದಾರೆ. ಆದರೆ ಅಭಿಮಾನಿಗಳು ಇಂತಹ ಟೀಕೆಗಳಿಗೆ ತಲೆಕೆಡಿಸಿಕೊಳ್ಳಬಾರದು. ಯಾವುದೇ ಕಾರಣಕ್ಕೂ ಉದ್ವೇಗಕ್ಕೆ ಒಳಗಾಗದೆ ಶಾಂತಿಯುತವಾಗಿ ಇರಬೇಕು” ಎಂದು ಅವರು ಅಭಿಮಾನಿಗಳಿಗೆ ಕರೆ ನೀಡಿದರು. ಇದೇ ಸಂದರ್ಭದಲ್ಲಿ ‘ಡೆವಿಲ್’ ಚಿತ್ರಕ್ಕೆ ಸಿಗುತ್ತಿರುವ ಅಭೂತಪೂರ್ವ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದ ಅವರು, ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ ಮತ್ತು ಪೈರಸಿಯನ್ನು ಪ್ರೋತ್ಸಾಹಿಸಬೇಡಿ ಎಂದು ಮನವಿ ಮಾಡಿದರು. ಈ ಕಾರ್ಯಕ್ರಮದಲ್ಲಿ ಚಿತ್ರದ ನಟಿ ರಚನಾ ರೈ ಮತ್ತು ಹಾಸ್ಯ ನಟ ಹುಲಿ ಕಾರ್ತಿಕ್ ಕೂಡ…
ಹುಬ್ಬಳ್ಳಿ: ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಭೀಕರ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಸಮುದಾಯದ ಯುವಕ ವಿವೇಕಾನಂದ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದ 19 ವರ್ಷದ ಮಾನ್ಯ ಪಾಟೀಲ ಎಂಬಾಕೆಯನ್ನು ಆಕೆಯ ತಂದೆ ವೀರನಗೌಡ ಪಾಟೀಲ ಮತ್ತು ಸಂಬಂಧಿಕರು ಸೇರಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಕೊಲೆಯಾದ ಮಾನ್ಯ ಏಳು ತಿಂಗಳ ಗರ್ಭಿಣಿಯಾಗಿದ್ದು, ಇತ್ತೀಚೆಗಷ್ಟೇ ಗ್ರಾಮಕ್ಕೆ ಮರಳಿದ್ದರು. ಮಗಳ ಅಂತರ್ಜಾತಿ ವಿವಾಹದಿಂದ ಆಕ್ರೋಶಗೊಂಡಿದ್ದ ತಂದೆ ಮತ್ತು ಸಂಬಂಧಿಕರು ಭಾನುವಾರ ಸಂಜೆ ದಂಪತಿಯ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಈ ವೇಳೆ ಪತ್ನಿಯ ರಕ್ಷಣೆಗೆ ಬಂದ ಪತಿ ವಿವೇಕಾನಂದ ಹಾಗೂ ಆತನ ಪೋಷಕರ ಮೇಲೂ ಹಲ್ಲೆ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಮಾನ್ಯ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ವೀರನಗೌಡ ಸೇರಿದಂತೆ ಮೂವರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು : ಜಿಲ್ಲೆಯ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಜಿಲ್ಲಾ ಬಂಜಾರ ಭವನ ಉದ್ಘಾಟನೆಯ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಬಂಜಾರ ಸಮುದಾಯದ ಕಾರ್ಯಕ್ರಮಗಳ ಕುರಿತು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷರಾದ ನಾರಾಯಣ ನಾಯ್ಕ ಡಿ., ಬರುವ ಏಪ್ರಿಲ್ ತಿಂಗಳಲ್ಲಿ ಬಂಜಾರ ಜನಾಂಗದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. ಇದರಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗುವ ಜೊತೆಗೆ ಸಮುದಾಯದ ಒಗ್ಗಟ್ಟಿಗೂ ಬಲ ಸಿಗಲಿದೆ ಎಂದರು. ಇದೇ ವೇಳೆ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಬಂಜಾರ ಸಮುದಾಯದ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡುವ ಯೋಜನೆಯನ್ನೂ ರೂಪಿಸಲಾಗುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗಗಳಿಗೆ ಸಿದ್ಧರಾಗಲು ಮಾರ್ಗದರ್ಶನ, ತರಬೇತಿ ಶಿಬಿರಗಳು ಹಾಗೂ ಅಧ್ಯಯನ ಸಹಾಯವನ್ನು ಒದಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಭೆಯಲ್ಲಿ ಬಂಜಾರ ಭವನದ ನಿರ್ವಹಣೆ, ಉದ್ಘಾಟನೆಗೆ ಸಂಗ್ರಹವಾದ ಹಣಕಾಸಿನ ಜಮಾ–ಖರ್ಚಿನ ವಿವರಗಳ ಮಂಡನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು. ಸಮುದಾಯದ ಹಿರಿಯರು, ಮುಖಂಡರು ಹಾಗೂ ಸದಸ್ಯರು ತಮ್ಮ…
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಈ ವಾರ ನಡೆದ ಬೆಳವಣಿಗೆಗಳು ಪ್ರೇಕ್ಷಕರಿಗೆ ಭಾರಿ ಅಚ್ಚರಿ ಮೂಡಿಸಿವೆ. ವೋಟಿಂಗ್ ಇಲ್ಲದಿದ್ದರೂ ವೈಲ್ಡ್ ಕಾರ್ಡ್ ಸ್ಪರ್ಧಿಗಳಾದ ರಜತ್ ಮತ್ತು ಚೈತ್ರಾ ಕುಂದಾಪುರ ಅವರು ಮನೆಯಿಂದ ಅನಿರೀಕ್ಷಿತವಾಗಿ ಹೊರಬಂದಿದ್ದಾರೆ. ಈ ಅನಿರೀಕ್ಷಿತ ಎಲಿಮಿನೇಷನ್ಗೆ ಕಿಚ್ಚ ಸುದೀಪ್ ಅವರು ‘ವಾರದ ಕಥೆ ಕಿಚ್ಚನ ಜೊತೆ’ ಕಾರ್ಯಕ್ರಮದಲ್ಲಿ ಸ್ಪಷ್ಟನೆ ನೀಡಿದ್ದಾರೆ. ರಜತ್ ಮತ್ತು ಚೈತ್ರಾ ಅವರು ಕೇವಲ ಅತಿಥಿಗಳಾಗಿ ಮನೆಗೆ ಪ್ರವೇಶಿಸಿದ್ದರು ಎಂದು ಸುದೀಪ್ ತಿಳಿಸಿದ್ದಾರೆ. ಮನೆಯಲ್ಲಿರುವ ಇತರ ಸ್ಪರ್ಧಿಗಳಿಗೆ ಸ್ಫೂರ್ತಿ ನೀಡಲು ಮತ್ತು ಆಟದ ವೇಗವನ್ನು ಹೆಚ್ಚಿಸಲು ಇವರಿಬ್ಬರನ್ನು ಕರೆತರಲಾಗಿತ್ತು. ಇವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಂತೆ ಕಂಡರೂ, ಮೂಲತಃ ಇವರು ಕಾರ್ಯಕ್ರಮದ ಸ್ಪರ್ಧಿಗಳಾಗಿರಲಿಲ್ಲ, ಬದಲಾಗಿ ಅತಿಥಿಗಳಾಗಿದ್ದರು. ಅವರ ಉದ್ದೇಶ ಮತ್ತು ಕೆಲಸ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಮನೆಯಿಂದ ಹೊರಗೆ ಕರೆಸಿಕೊಳ್ಳಲಾಗಿದೆ. ಮನೆಯಲ್ಲಿದ್ದ ಅಲ್ಪಾವಧಿಯಲ್ಲೇ ಇಬ್ಬರೂ ಅದ್ಭುತವಾಗಿ ಆಡಿದ್ದಾರೆ ಎಂದು ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಜತ್ ತಮ್ಮ ಆಕ್ರಮಣಕಾರಿ ಆಟದಿಂದ ಗಮನ ಸೆಳೆದರೆ, ಚೈತ್ರಾ ಅವರು…