Author: admin

ಕೊರಟಗೆರೆ : ಭಾರತ ದೇಶವನ್ನು ಅನೇಕ ರಾಜ ಮನೆತನಗಳು ಆಳ್ವಿಕೆ ಮಾಡಿದ ಇತಿಹಾಸವಿದೆ ಶೋಷಿತ ಸಮುದಾಯದ ಮಹಾರಾಜನೊಬ್ಬ ಮೇಲ್ಜಾತಿಗಳ ನಾಯಕತ್ವವಹಿಸಿ  ದಕ್ಷಿಣ ಭಾಗದ ಸಂಜೀವಿನಿ ಕ್ಷೇತ್ರ ಸಿದ್ದರತಪೋ ವನ ಎಂದೇ ಪ್ರಖ್ಯಾತಿ ಹೊಂದಿರುವ ಸಿದ್ದರಬೆಟ್ಟ (ಬೂದಗವಿ) ಸಂಸ್ಥಾನದ ಮಹಾರಾಜರಾಗಿ ಆಳ್ವಿಕೆ ಮಾಡಿರುವ ಮಾದಿಗ ಸಮುದಾಯದ ಮೊದಲ ರಾಜ ಅರಸು ಕುರಂಗರಾಜನ 278ನೇ  ಪಟ್ಟಾಭಿಷೇಕ ಮಹೋತ್ಸವವನ್ನು ದಲಿತ ಮುಖಂಡರು ಹಾಗೂ ಚಿಂತಕರು ಅದ್ದೂರಿಯಾಗಿ ಆಚರಣೆ ಮಾಡಿದರು. ಪಟ್ಟಣದ ಎಸ್‌ ಎಸ್‌ ಆರ್ ಸರ್ಕಲ್‌ ನಲ್ಲಿ ದಲಿತ ಚಕ್ರವರ್ತಿ ಕುರಂಗರಾಜನ ಪ್ರತಿಮೆಗೆ ಮಾದಿಗ ಸಮುದಾಯದ ಮುಖಂಡರುಗಳ ನೇತೃತ್ವದಲ್ಲಿ ಮಹಾರಾಜನಿಗೆ ಪುಷ್ಪಾರ್ಚನೆಯನ್ನು ಮಾಡಿ 278ನೇ ಪಟ್ಟಾಭಿಷೇಕವನ್ನು ನೆನಪಿಸಿ ಗೌರವವನ್ನು ಸಲ್ಲಿಸಿದರು. ಖ್ಯಾತ ಪ್ರಾಧ್ಯಾಪಕರು ಹಾಗೂ ಸಾಹಿತಿಗಳಾದ ಡಾ.ಓ.ನಾಗರಾಜ್ ಮಾತನಾಡಿ, ಕುರಂಗರಾಜ ತಳ ಸಮುದಾಯದ ಅಸ್ಮಿತೆಯಾಗಿದ್ದು ಇವರ ಈ ಪಟ್ಟಾಭಿಷೇಕದ ಮಹೋತ್ಸವ ಇತಿಹಾಸದಲ್ಲಿ ದಾಖಲಿಸಲಿದ್ದು, ಕೊರಟಗೆರೆ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾನು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾಗ ಸಿದ್ದರಬೆಟ್ಟಕ್ಕೆ ಚಾರಣ ಕೈಗೊಂಡ ಸಂದರ್ಭದಲ್ಲಿ ಕುರಂಗರಾಜನ ಬಗ್ಗೆ ಕೆಲವು…

Read More

ತುರುವೇಕೆರೆ: ತಾಲೂಕಿನ ಕಣಕೂರಿನಲ್ಲಿ ಫೆ.6ರಂದು ನಡೆಯಲಿರುವ ಟಿ.ಟಿ.ಡಿ. ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಕಲ್ಯಾಣೋತ್ಸವದ ರೂಪರೇಷೆ ಕುರಿತು ತಾಲೂಕು ದಂಡಾಧಿಕಾರಿ ಕುಂಞಿ ಅಹಮದ್ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಕಾರ್ಯಕ್ರಮ ಸುಗಮವಾಗಿ ನಡೆಯಲು ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಆಯಾ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಶ್ರೀ ಬಾಲಾಜಿ ಸೇವಾ ಟ್ರಸ್ಟ್ (ರಿ) ಸಂಸ್ಥಾಪಕ ಅಧ್ಯಕ್ಷ ಬಾಲಾಜಿ ಕೆ. ಕುಮಾರ್, ತಾಲೂಕು ಪಂಚಾಯಿತಿ ಇ.ಓ. ಅನಂತರಾಜು, ಸರ್ಕಲ್ ಇನ್ಸ್‌ಪೆಕ್ಟರ್ ಲೋಹಿತ್, ಡಿ.ಹೆಚ್.ಓ ಡಾ. ರಂಗನಾಥ್, ಅಗ್ನಿಶಾಮಕ ಅಧಿಕಾರಿ ಶ್ರೀನಿವಾಸ್, ಬೆಸ್ಕಾಂ ಎ.ಇ.ಇ ರಾಜಶೇಖರ್, ಪಿಡಬ್ಲ್ಯೂಡಿ ಅಧಿಕಾರಿ ನೂರೂಲ್ಲ, ಕುಡಿಯುವ ನೀರು ಸರಬರಾಜು ಇಲಾಖೆ ಅಬ್ದುಲ್ ಅಶಾಮ್, ರೈತ ಸಂಘದ ಅಧ್ಯಕ್ಷ ಕಣಕೂರು ಚಂದ್ರಶೇಖರ್, ಸಚಿನ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆಬ್ರವರಿ 1, 2026) ದಾಖಲೆಯ ಸತತ 9ನೇ ಬಾರಿಗೆ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. ಸುಮಾರು 1 ಗಂಟೆ 25 ನಿಮಿಷಗಳ ಕಾಲ ನಡೆದ ಭಾಷಣದಲ್ಲಿ ಆರ್ಥಿಕ ಬೆಳವಣಿಗೆ, ಮೂಲಸೌಕರ್ಯ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ತೆರಿಗೆದಾರರಿಗೆ ಸಿಹಿ–ಕಹಿ: ಹೊಸ ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಮಹತ್ವದ ಬದಲಾವಣೆ ಮಾಡಿಲ್ಲ. ತೆರಿಗೆ ಪಾವತಿ ವಿಳಂಬಕ್ಕೆ ಶೇ 10ರಷ್ಟು ದಂಡ ವಿಧಿಸಲು ನಿರ್ಧರಿಸಲಾಗಿದೆ. ಐಟಿ ರಿಟರ್ನ್ಸ್ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 31ರಿಂದ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಸಿಗರೇಟು ಮತ್ತು ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸಲಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ: ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ 17 ಪ್ರಮುಖ ಔಷಧಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗಿದೆ. 7 ಅಪರೂಪದ ಕಾಯಿಲೆಗಳ ಔಷಧಗಳ ಬೆಲೆ ಇಳಿಕೆಯಾಗಲಿದೆ. ಉತ್ತರ ಭಾರತದಲ್ಲಿಯೂ ಬೆಂಗಳೂರಿನ ಮಾದರಿಯ ‘ನಿಮ್ಹಾನ್ಸ್’ (NIMHANS) ಸ್ಥಾಪನೆಗೆ ಘೋಷಣೆ ಮಾಡಲಾಗಿದೆ. ರೈಲ್ವೆ ಮತ್ತು ಮೂಲಸೌಕರ್ಯ:…

Read More

ತಿಪಟೂರು: ನಗರದ ಎಸ್‌ ವಿಪಿ ವಿದ್ಯಾಸಂಸ್ಥೆಯ ಆವರಣದಲ್ಲಿ ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಅವರ ನೇತೃತ್ವದಲ್ಲಿ ಶನಿವಾರ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವು ಯಶಸ್ವಿಯಾಗಿ ಜರುಗಿತು. ಈ ಮೇಳದಲ್ಲಿ ಒಟ್ಟು 396 ಉದ್ಯೋಗಾಕಾಂಕ್ಷಿಗಳು ಸ್ಥಳದಲ್ಲೇ ನೇಮಕಾತಿ ಪತ್ರಗಳನ್ನು ಪಡೆದುಕೊಂಡಿದ್ದಾರೆ. ಭಾಗವಹಿಸಿದ ಕಂಪನಿಗಳು: ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು 74 ಖಾಸಗಿ ಕಂಪನಿಗಳು ಮೇಳದಲ್ಲಿ ಪಾಲ್ಗೊಂಡಿದ್ದವು. ಉದ್ಯೋಗಾವಕಾಶ: ಮೇಳದಲ್ಲಿ ಒಟ್ಟು 9,495ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದ್ದವು. ನೋಂದಣಿ: ಸುಮಾರು 800ಕ್ಕೂ ಹೆಚ್ಚು ನಿರುದ್ಯೋಗಿ ಯುವಕ-ಯುವತಿಯರು ಉದ್ಯೋಗಕ್ಕಾಗಿ ನೋಂದಾಯಿಸಿಕೊಂಡಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, “ಸಮಯ ಮತ್ತು ಸಮುದ್ರದ ಅಲೆಗಳು ಯಾರಿಗೂ ಕಾಯುವುದಿಲ್ಲ. ಯುವಜನರು ನಿರಂತರ ಪ್ರಯತ್ನದ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕು” ಎಂದು ಕಿವಿಮಾತು ಹೇಳಿದರು. ಮೇಳದ ಸಂಘಟಕರಾದ ಕೆ.ಟಿ. ಶಾಂತಕುಮಾರ್ ಮಾತನಾಡಿ, ಇಂದಿನ ತಂತ್ರಜ್ಞಾನ ಮತ್ತು ಎಐ (AI) ಯುಗದಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಿವೆ. ಯುವಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಇದೇ ವೇಳೆ ಅವರು…

Read More

ತುಮಕೂರು: “ಅಹಿಂಸೆ, ಸಮಾನತೆ, ಶಾಂತಿ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾತ್ಮ ಗಾಂಧೀಜಿಯವರ ಹತ್ಯೆಯು ಕೇವಲ ಒಬ್ಬ ವ್ಯಕ್ತಿಯ ಕೊಲೆಯಲ್ಲ, ಅದು ಮೌಲ್ಯಗಳ ವಿರುದ್ಧದ ದ್ವೇಷವಾಗಿದೆ” ಎಂದು ಹೋರಾಟಗಾರ ಕೆ.ದೊರೈರಾಜ್‌ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಶುಕ್ರವಾರ ‘ಸೌಹಾರ್ದ ಕರ್ನಾಟಕ’ ಸಂಘಟನೆಯ ವತಿಯಿಂದ ಆಯೋಜಿಸಲಾಗಿದ್ದ ಹುತಾತ್ಮರ ದಿನಾಚರಣೆ ಮತ್ತು ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಆಧುನಿಕ ಗೋಡ್ಸೆಗಳ ಎಚ್ಚರಿಕೆ: ಪ್ರಸ್ತುತ ಕಾಲಘಟ್ಟದಲ್ಲಿ ‘ಆಧುನಿಕ ಗೋಡ್ಸೆಗಳು’ ಸುಳ್ಳುಗಳನ್ನು ಹರಡುವ ಮೂಲಕ ಗಾಂಧೀಜಿಯವರ ವಿಚಾರಗಳನ್ನು ಮರೆಮಾಚುವ ಕೆಲಸ ಮಾಡುತ್ತಿದ್ದಾರೆ. ಗಾಂಧೀಜಿಯೇ ಸುಳ್ಳು ಎಂಬ ಭಾವನೆಯನ್ನು ಜನರಲ್ಲಿ ಬಿತ್ತಲು ಪ್ರಯತ್ನಿಸುತ್ತಿದ್ದಾರೆ ಎಂದು ದೊರೈರಾಜ್ ಕಿಡಿಕಾರಿದರು. ಸಂವಿಧಾನಕ್ಕೆ ಧಕ್ಕೆ: ಪರಿಸರವಾದಿ ಸಿ.ಯತಿರಾಜು ಮಾತನಾಡಿ, “ಗಾಂಧಿಯನ್ನು ಕೊಂದವರು ಇಂದು ಸಂವಿಧಾನವನ್ನು ಕೊಲ್ಲಲು ಮುಂದಾಗಿದ್ದಾರೆ. ದೇಶವು ವಸಾಹತುಶಾಹಿ ನೀತಿಗಳಿಗೆ ಬಲಿಯಾಗುತ್ತಿದ್ದು, ಸಂವಿಧಾನದ ಆಶಯಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು. ಯುವ ಸಮೂಹಕ್ಕೆ ಕರೆ: ಅಸಹಿಷ್ಣುತೆ ಮತ್ತು ಅಶಾಂತಿ ಹೆಚ್ಚುತ್ತಿರುವ ಈ ಸಮಯದಲ್ಲಿ ಯುವಜನತೆ ಗಾಂಧೀಜಿಯವರ ತತ್ತ್ವಗಳನ್ನು ಹೆಚ್ಚು…

Read More

ತುಮಕೂರು: ನಗರದ ಪ್ರಸಿದ್ಧ ಪ್ರವಾಸಿ ತಾಣವಾದ ಅಮಾನಿಕೆರೆಯಲ್ಲಿರುವ ಗಾಜಿನಮನೆಯ ನವೀಕರಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (ಟೂಡಾ) ಮಹತ್ವದ ನಿರ್ಧಾರ ಕೈಗೊಂಡಿದೆ. ಶನಿವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಟೂಡಾ ಬಜೆಟ್ ಸಭೆಯಲ್ಲಿ ಹಲವು ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಗಾಜಿನಮನೆ ನವೀಕರಣ: ಅಮಾನಿಕೆರೆಯ ಗಾಜಿನಮನೆಯಲ್ಲಿ ಶಬ್ದ ನಿಯಂತ್ರಣ (Acoustics) ವ್ಯವಸ್ಥೆ ಮತ್ತು ಗಾಳಿ–ಮಳೆಯಿಂದ ಹಾನಿಗೊಳಗಾದ ಗಾಜುಗಳ ದುರಸ್ತಿಗಾಗಿ ಮೊದಲು ₹1.50 ಕೋಟಿ ಮೀಸಲಿಡಲಾಗಿತ್ತು. ಆದರೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರ ಸಲಹೆಯಂತೆ ಈ ಅನುದಾನವನ್ನು ₹3 ಕೋಟಿಗೆ ಹೆಚ್ಚಿಸಲಾಗಿದೆ. ಜಲಕ್ರೀಡೆ ಅಕಾಡೆಮಿ: ಸಾಹಸ ಕ್ರೀಡೆಗಳಿಗೆ ಉತ್ತೇಜನ ನೀಡಲು ಅಮಾನಿಕೆರೆಯಲ್ಲಿ ಸುಸಜ್ಜಿತ ‘ಜಲಕ್ರೀಡೆ ಅಕಾಡೆಮಿ’ (Water Sports Academy) ಸ್ಥಾಪಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಇಲ್ಲಿ ಕಯಾಕಿಂಗ್ ಮತ್ತು ಕೆನೋಯಿಂಗ್ ಕ್ರೀಡೆಗಳಿಗೆ ತರಬೇತಿ ನೀಡಲಾಗುವುದು. ಹೊಸ ಬಡಾವಣೆ ನಿರ್ಮಾಣ: ಊರ್ಡಿಗೆರೆ ಹೋಬಳಿಯ ಮಾಚನಹಳ್ಳಿ ಗ್ರಾಮದ ಬಳಿ ಸುಮಾರು 56 ಎಕರೆ ಪ್ರದೇಶದಲ್ಲಿ ಹೊಸದಾಗಿ ಬಡಾವಣೆ ನಿರ್ಮಿಸಲು…

Read More

ತುಮಕೂರು: ನಗರದ ವಿಶ್ವವಿದ್ಯಾಲಯದ ಮೈದಾನದಲ್ಲಿ ಶನಿವಾರದಿಂದ ಆರಂಭವಾದ ರಾಷ್ಟ್ರೀಯ ಹಿರಿಯರ ಕೊಕ್ಕೊ ಚಾಂಪಿಯನ್‌’ಶಿಪ್‌’ನಲ್ಲಿ ಆತಿಥೇಯ ಕರ್ನಾಟಕದ ಪುರುಷರ ತಂಡ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಕೊಕ್ಕೊ ಫೆಡರೇಷನ್ ಆಫ್ ಇಂಡಿಯಾ ಹಾಗೂ ರಾಜ್ಯ ಅಮೆಚೂರ್ ಕೊಕ್ಕೊ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿಸಲಾಗಿರುವ ಈ ಪ್ರತಿಷ್ಠಿತ ಪಂದ್ಯಾವಳಿಯು ಫೆಬ್ರವರಿ 3ರ ವರೆಗೆ ನಡೆಯಲಿದೆ. ಕರ್ನಾಟಕದ ಜಯಭೇರಿ: ಪುರುಷರ ವಿಭಾಗದ ಮೊದಲ ಪಂದ್ಯದಲ್ಲಿ ಕರ್ನಾಟಕ ತಂಡವು ಉತ್ತರಾಖಂಡ ವಿರುದ್ಧ 11–06 ಪಾಯಿಂಟ್ಸ್‌ಗಳ ಅಂತರದಿಂದ ಭರ್ಜರಿ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿತು. ಇತರ ಪಂದ್ಯಗಳ ಫಲಿತಾಂಶ: ಪುರುಷರ ವಿಭಾಗ: ಒಡಿಶಾ ತಂಡವು ಹರಿಯಾಣ ವಿರುದ್ಧ (17–14), ಚಂಡೀಗಢವು ಮಧ್ಯಪ್ರದೇಶದ ವಿರುದ್ಧ (20–12), ಉತ್ತರ ಪ್ರದೇಶವು ಹಿಮಾಚಲ ಪ್ರದೇಶದ ವಿರುದ್ಧ (17–12) ಮತ್ತು ಪಂಜಾಬ್ ತಂಡವು ಛತ್ತೀಸ್‌ಗಡ ವಿರುದ್ಧ (17–15) ಜಯ ದಾಖಲಿಸಿವೆ. ಮಹಿಳೆಯರ ವಿಭಾಗ: ಪಂಜಾಬ್ ತಂಡವು ನವದೆಹಲಿ ವಿರುದ್ಧ (15–02) ಸುಲಭ ಜಯ ದಾಖಲಿಸಿದರೆ, ಮಹಾರಾಷ್ಟ್ರ ತಂಡವು ತೆಲಂಗಾಣ ವಿರುದ್ಧ (11–03) ಜಯಗಳಿಸಿತು. ಹಿಮಾಚಲ…

Read More

ಶಿರಾ: ನೇಪಾಳದ ಕಠ್ಮಂಡುವಿನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್‌ ಶಿಪ್‌ನಲ್ಲಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬಾಲಕಿ ಎಚ್.ಆರ್.ಜಾನವಿ ಚಿನ್ನದ ಪದಕ ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ. ಬಾಲಕಿಯರ 45 ಕೆ.ಜಿ. ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಜಾನವಿ, ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸಾಧನೆಗೈದ ಬಾಲಕಿಯನ್ನು ಅವರ ಹುಟ್ಟೂರಾದ ಹೇರೂರು ಗ್ರಾಮದಲ್ಲಿ ಗ್ರಾಮಸ್ಥರು ಅತ್ಯಂತ ಪ್ರೀತಿಯಿಂದ ಸನ್ಮಾನಿಸಿ ಗೌರವಿಸಿದರು. ಸಾಧಕಿಯ ಹಿನ್ನೆಲೆ: ಜಾನವಿ ಅವರು ಶಿರಾ ತಾಲ್ಲೂಕಿನ ಹೇರೂರು ಗ್ರಾಮದ ರೈತ ಎಚ್.ಟಿ.ರಂಗನಾಥ್ ಮತ್ತು ಲಕ್ಷ್ಮಿ ದಂಪತಿಗಳ ಪುತ್ರಿ. ಪ್ರಸ್ತುತ ಇವರು ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿಯ ಶಾರದಾ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಗ್ರಾಮೀಣ ಭಾಗದ ಪ್ರತಿಭೆಯೊಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚಿರುವುದು ಗ್ರಾಮಸ್ಥರಲ್ಲಿ ಮತ್ತು ಜಿಲ್ಲೆಯಲ್ಲಿ ಹೆಮ್ಮೆಯ ಸಂಭ್ರಮ ಮೂಡಿಸಿದೆ. ಸನ್ಮಾನ ಸಮಾರಂಭ: ಸನ್ಮಾನ ಕಾರ್ಯಕ್ರಮದಲ್ಲಿ ಹುಣಸೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಅಧ್ಯಕ್ಷ ಹೇರೂರು ಲಕ್ಷ್ಮಿರಾಜು, ಮಾಜಿ ಅಧ್ಯಕ್ಷ ಎಚ್.ಪಿ.…

Read More

ಗುಬ್ಬಿ: ಫೆಬ್ರವರಿ ತಿಂಗಳಲ್ಲಿ ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಕೂಡ ಶೀಘ್ರದಲ್ಲೇ ಆಡಳಿತ ಅಧಿಕಾರಿಗಳನ್ನು ನೇಮಿಸಲಾಗುತ್ತದೆ, ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಶಾಸಕ ಶ್ರೀನಿವಾಸ್ ತಿಳಿಸಿದರು. ಗುಬ್ಬಿ ತಾಲೂಕಿನ ಮಂಚಲದೊರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ನೂತನ ಹಾಲಿನ ಡೈರಿ ಕಟ್ಟಡಕ್ಕೆ ಗುದ್ದಲಿಪೂಜೆ ಸಲ್ಲಿಸಿ ಮಾತನಾಡಿದ ಅವರು, ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿದ ಎಸ್.ಆರ್.ಶ್ರೀನಿವಾಸ್, ಸರ್ಕಾರ ಆದೇಶ ಹೊರಡಿಸಿದ ಮೇಲೆ ಯಾವುದೇ ಕಾರಣಕ್ಕೂ ಇರುವ ಆಡಳಿತ ಸಿಬ್ಬಂದಿಗಳನ್ನು ಮುಂದುವರೆಸಲಾಗುವುದಿಲ್ಲ, ಸರ್ಕಾರದ ಆದೇಶ ಮಾಡಿರುವುದರಿಂದ ಬಹುತೇಕ ಮುಂದಿನ ತಿಂಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಆಡಳಿತ ಅಧಿಕಾರಿಗಳ ನೇಮಿಸಲಾಗುತ್ತದೆ ಎಂದು ತಿಳಿಸಿದರು. ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವವರೆಗೂ ಮಾತ್ರ ಆಡಳಿತ ಅಧಿಕಾರಿಗಳು ಇರುತ್ತಾರೆ. ಈಗಾಗಲೇ ಎಲ್ಲಾ ಸ್ಥಳೀಯ ಚುನಾವಣೆಗಳನ್ನ ಮಾಡಬೇಕೆಂದು ಚುನಾವಣಾ ಆಯೋಗ ಕೂಡ ಸರ್ಕಾರ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಾ ಇದೆ, ಇನ್ನು ಮೂರು ನಾಲ್ಕು ತಿಂಗಳ ಒಳಗಾಗಿ ಗ್ರಾಮ ಪಂಚಾಯಿತಿ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಸರ್ಕಾರ …

Read More

ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಸರಣಿ ಕಳ್ಳತನಗಳಿಗೆ ಬ್ರೇಕ್ ಹಾಕಿರುವ ಪೊಲೀಸರು, ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚುತ್ತಿದ್ದ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಜನವರಿ 23, 2026 ರಂದು ತುರುವೇಕೆರೆಯ ನಿವಾಸಿ ಎಮ್.ಟಿ. ರಾಜಣ್ಣ ಎಂಬುವವರ ಮನೆಯ ಬಾಗಿಲು ಮುರಿದಿದ್ದ ಕಳ್ಳರು, ಮನೆಯಲ್ಲಿದ್ದ ಬೆಳ್ಳಿ ಮತ್ತು ಚಿನ್ನಾಭರಣಗಳನ್ನು ದೋಚಿದ್ದರು. ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್ ಕಾಯ್ದೆಯ ಕಲಂ 331(4) ಹಾಗೂ 305 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರ ಮಿಂಚಿನ ಕಾರ್ಯಾಚರಣೆ: ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ಐಪಿಎಸ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಸಿ. ಗೋಪಾಲ್ ಮತ್ತು ಪುರುಷೋತ್ತಮ ಎಂ.ಎಲ್. ಅವರ ನೇತೃತ್ವದಲ್ಲಿ, ತುರುವೇಕೆರೆ ವೃತ್ತ ನಿರೀಕ್ಷಕ (ಸಿಪಿಐ) ಲೋಹಿತ್ ಬಿ.ಎನ್. ಮತ್ತು ಪಿಎಸ್ಐ ಮೂರ್ತಿ ಟಿ. ಅವರನ್ನೊಳಗೊಂಡ ತಂಡವು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದಿದೆ. ಬಂಧಿತ ಆರೋಪಿಗಳ…

Read More