Subscribe to Updates
Get the latest creative news from FooBar about art, design and business.
- ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
- ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
- ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
- ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.
- ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ
- ಮನೆಗೆ ಬಿದ್ದ ಬೆಂಕಿ: 3 ಲಕ್ಷ ರೂ. ಹಣ ಸಹಿತ ಚಿನ್ನಾಭರಣ ಹಲವು ವಸ್ತುಗಳು ಸುಟ್ಟುಕರಕಲು
- ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ
- ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
Author: admin
ವೈ.ಎನ್.ಹೊಸಕೋಟೆ: ಗ್ರಾಮದ ಆರ್.ವಿ.ಪಿ ಪ್ರೌಢಶಾಲಾ ಆವರಣದಲ್ಲಿ ಪೋಲಿಸ್ ಇಲಾಖೆ ವತಿಯಿಂದ ಜನ ಸಂಪರ್ಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಾತನಾಡಿದ ಸಿಪಿಐ ಕಾಂತರೆಡ್ಡಿಯವರು ಈ ಸಭೆಯನ್ನು ಆಯೋಜಿಸುವ ಉದ್ದೇಶ ಜನರು ಪೋಲಿಸರು ಹಾಗೂ ಪೋಲಿಸ್ ಸ್ಟೆಷನ್ ಗಳನ್ನು ನೋಡಿ ಭಯಪಡುವ ಅಗತ್ಯ ಇಲ್ಲ ಯಾವುದೆ ದಲ್ಲಾಳಿಗಳು ಇಲ್ಲದೆ ಜನರು ನಮ್ಮ ಬಳಿ ಬಂದು ನಿಮ್ಮ ಸಮಸ್ಯೆಗಳನ್ನು ಹೇಳಬಹುದು ಎಂದು ತಿಳಿಸಿದರು. ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ ರವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬಿಟ್ ವ್ಯವಸ್ಥೆ ಇಲ್ಲವಾಗಿದೆ ಎಂದು ಆರೋಪಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಿಪಿಐರವರು ಈಗ ಪ್ರತಿ ಐದು ಹಳ್ಳಿಗೆ ಇಬ್ಬರು ಪೋಲಿಸರನ್ನು ಬಿಟ್ ವ್ಯವಸ್ಥೆಗೆ ಆಯೋಜಿಸಲಾಗಿದೆ ಯಾರು ಸಹ ಸುಳ್ಳು ಹೇಳುವುದಕ್ಕೆ ಆಗುವುದಿಲ್ಲ ಎಲ್ಲವು ಸಹ ಕಂಪ್ಯೂಟರ್ ನಲ್ಲಿ ದಾಖಲಾಗುತ್ತದೆ ನಾನು ಸಹ ಪ್ರತಿ ಹದಿನೈದು ದಿನಕ್ಕೊಮ್ಮೆ ಪರಿಶೀಲನೆ ಮಾಡುತ್ತೆನೆ ಎಂದು ಹೇಳಿದರು ಈ ವೇಳೆ ನೆರೆದಿದ್ದ ಯುವಕರು ಹಾಗು ಗ್ರಾಮಸ್ಥರು ನಮ್ಮ ಗ್ರಾಮದಲ್ಲಿ ದಿನೆ ದಿನೆ ಟ್ರಾಫಿಕ್ ಸಮಸ್ಯೆ…
ತುಮಕೂರು: ಶಾರ್ಟ್ ಸರ್ಕ್ಯೂಟ್ ನಿಂದ ಗ್ರಾಮ ಪಂಚಾಯತ್ ನ ಕಚೇರಿ ಹೊತ್ತಿ ಉರಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪೊನ್ನಸಮುದ್ರ ಗ್ರಾಪಂ ಕಚೇರಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಕಂಪ್ಯೂಟರ್ ಸೇರಿದಂತೆ ಹಲವು ವಸ್ತುಗಳು, ದಾಖಲೆಗಳು ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮದ ದಳ ಭೇಟಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು ಜಿಲ್ಲೆಯಲ್ಲಿ ಜಿ.ಪರಮೇಶ್ವರ್ ಮತ್ತು ಕೆ.ಎನ್.ರಾಜಣ್ಣ ಅವರಿಗೆ ಸಚಿವ ಸ್ಥಾನ ದೊರೆಯುತ್ತಿದ್ದಂತೆ ಇನ್ನೊಂದೆಡೆ ಸಚಿವ ಸ್ಥಾನ ದೊರೆಯಲಿದೆ ಎಂಬ ಅಪಾರ ವಿಶ್ವಾಸ ಹೊಂದಿದ್ದ ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ದೊರೆಯದೆ ಇರುವುದು ಪಕ್ಷದಲ್ಲಿ ಕೆಲ ಮುಖಂಡರಲ್ಲಿ ಜಯಚಂದ್ರ ಅವರ ಕುಟುಂಬದಲ್ಲಿ ನಿರಾಸೆ ಮೂಡಿದೆ. ಟಿ.ಬಿ.ಜಯಚಂದ್ರ ಅವರ ಮೊಮ್ಮಗಳು ತನ್ನ ತಾತನಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡ ಮೊಮ್ಮಗಳಾದ ಆರನಾ ಸಂದೀಪ್ ರಿಂದ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾಳೆ. ನನ್ನ ತಾತ ಮಿನಿಸ್ಟರ್ ಆಗದಿದ್ದಕ್ಕೆ ನನಗೆ ಬೇಜಾರಾಗಿದೆ ಅವರು ಹಾರ್ಡ್ ವರ್ಕ್’ರ್ ಅವರಿಗೆ ಸಚಿವ ಸ್ಥಾನ ನೀಡಿ, ಜನರಿಗೆ ತುಂಬಾ ಪ್ರೀತಿ ಕೊಟ್ಟು,ಸಹಾಯ ಮಾಡ್ತಾರೆ ಎಂದಿದ್ದಾಳೆ. ಟಿಬಿ ಜಯಚಂದ್ರ ಮೊಮ್ಮಗಳಾದ ಆರನಾಳಿಂದ ಭಾವನಾತ್ಮಕ ವಿಡಿಯೋ ರವಾನೆ ಮಾಡಿದ್ದಾಳೆ. ರಾಹುಲ್ ಗಾಂಧಿಗೆ ವಿಡಿಯೋ ಹಾಗೂ ಪತ್ರದ ಮುಖೇನ ಭಾವನಾತ್ಮಕ ಮನವಿ ಮಾಡಿದ್ದಾಳೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ತುಮಕೂರು: ನೂತನ ಸಚಿವ ಕೆ.ಎನ್.ರಾಜಣ್ಣ ತುಮಕೂರು ನಗರಕ್ಕೆ ಸಚಿವರಾದ ನಂತರ ಮೊದಲ ಬಾರಿಗೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಅಭಿಮಾನಿ ಹಾಗೂ ನೂರಾರು ಕಾರ್ಯಕರ್ತರಿಂದ ಕ್ಯಾತ್ಸಂದ್ರ ಟೋಲ್ ನಿಂದ ತುಮಕೂರು ನಗರದ ಕಾಂಗ್ರೆಸ್ ಕಚೇರಿವರೆಗೂ ಬೈಕ್ ರ್ಯಾಲಿ ನಡೆಸಿ ಅದ್ದೂರಿಯಾಗಿ ಸ್ವಾಗತಿಸಿದರು. ಜೈಕಾರ ಹಾಕಿ , ಪಟಾಕಿಸಿಡಿಸಿ, ತಮಟೆ ವಾದ್ಯದೊಂದಿಗೆ ತೆರದ ವಾಹನದಲ್ಲಿ ಯಾರ್ಲಿ ಮೂಲಕ ಕೆ.ಎನ್.ರಾಜಣ್ಣಗೆ ಸ್ವಾಗತ ನೀಡಲಾಯಿತು. ಬಳಿಕ ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ ಎನ್ ರಾಜಣ್ಣ, ಪಕ್ಷಾತೀತ ಮತ್ತು ಜಾತ್ಯತೀತವಾಗಿ ಸ್ವಾಗತ ಮಾಡಿದ್ದಾರೆ. ಎಲ್ಲಾರಿಗೂ ವೈಯಕ್ತಿಯವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಜಿಲ್ಲೆಯ ಎಲ್ಲಾ ಸಹಕಾರಿಗಳು, ಧ್ವನಿ ಇಲ್ಲದ ಸಮುದಾಯಗಳ ಪ್ರತಿನಿಧಿಯಾಗಿ ನನ್ನ ಆಯ್ಕೆ ಮಾಡಿದ್ದಾರೆ ಎಂದರು. ತಳ ಸಮುದಾಯದಿಂದ ಬಂದವರು ರಾಜಕೀಯದಲ್ಲಿ ಮೇಲೆ ಬರುವುದು ಕಷ್ಟ. ಜಿಲ್ಲೆಯ ಎಲ್ಲಾ ಸಹಕಾರಿ, ಬಡವರ ಆಶೀರ್ವಾದದಿಂದ ಗೆದ್ದಿದ್ದೇನೆ. ನನ್ನದು ಬಡವರ ಜಾತಿ, ಕಾಂಗ್ರೆಸ್ ಪಕ್ಷವೊಂದೆ ಬಡವರನ್ನು ಚೆನ್ನಾಗಿ ನೋಡಿಕೊಳ್ಳುವುದು ಎಂದು ಹೇಳಿದರು. ಮುಂದಿನ ದಿನದಲ್ಲಿ ಹೆಚ್ಚು ಶಕ್ತಿಯುತವಾಗಿ ಬೆಳೆಸಬೇಕು. ಚುನಾವಣೆಯಲ್ಲಿ…
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರುತ್ತಿದ್ದು, ಕಾರ್ಯಕ್ರಮದಲ್ಲಿ ಸಾಕ್ಷ್ಯಚಿತ್ರದ ಮೂಲಕ ಭಾರತದ ಇತಿಹಾಸವನ್ನು ಪ್ರದರ್ಶನ ಮಾಡಲಾಯಿತು. ಸಾಕ್ಷ್ಯಚಿತ್ರದಲ್ಲಿ ನೂತನ ಸಂಸತ್ ಭವನ ನಿರ್ಮಾಣ, ಸಿಂಗೋಲ್ ನಿರ್ಮಾಣದ ಕುರಿತು ಕಿರುಚಿತ್ರ ಪ್ರದರ್ಶಿಸಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಭವಿಷ್ಯದಲ್ಲಿ ಸಂಸದರ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ. ಆ ವೇಳೆ ಎಲ್ಲರೂ ಕುಳಿತುಕೊಳ್ಳಲು ಸ್ಥಳಾವಕಾಶ ಇಲ್ಲದಿರುವುದರಿಂದ ಹೊಸ ಸಂಸತ್ ಭವನದ ಆವಶ್ಯಕತೆ ಇತ್ತು. ಅದನ್ನು ನಿರ್ಮಾಣ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ. ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ಸುಮಾರು 25 ರಾಜಕೀಯ ಪಕ್ಷಗಳ ಸದಸ್ಯರು ಭಾಗವಹಿಸಿದ್ದಾರೆ. ಮತ್ತೊಂದೆಡೆ, ದೇಶದ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಇತರ 19 ಸಮಾನ ಮನಸ್ಕ ವಿರೋಧ ಪಕ್ಷಗಳು ಕಾರ್ಯಕ್ರಮಕ್ಕೆ ಹಾಜರಾಗಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h…
ಸೆಂಟ್ರಲ್ ರಿಸರ್ವ್ ಟ್ರೈನಿಂಗ್ ಕಾಲೇಜಿನಲ್ಲಿ ಸಿಆರ್ಪಿಎಫ್ ಯೋಧ ಶವವಾಗಿ ಪತ್ತೆಯಾಗಿದ್ದಾನೆ. ಜಗನ್ (32) ಮೃತರು. ಇದು ಸ್ವಯಂ ಪ್ರೇರಿತ ಗುಂಡೇಟಿನಿಂದ ಆದ ಗಾಯ ಎಂದು ಪ್ರಾಥಮಿಕ ಅಂದಾಜಿಸಲಾಗಿದೆ. ತಮಿಳುನಾಡಿನ ತೊಡಿಯಲೂರಿನ ತರಬೇತಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಕಾವಲು ಕಾಯುತ್ತಿದ್ದ ಜಗನ್ ಕುತ್ತಿಗೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತೀರ್ಮಾನಿಸಲಾಗಿದೆ. ಗುಂಡಿನ ಸದ್ದು ಕೇಳಿ ಓಡಿ ಬಂದವರಿಗೆ ಜಗನ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಜಗನ್ ಪಕ್ಕದಲ್ಲಿ ರೈಫಲ್ ಬಿದ್ದಿತ್ತು. ವರದಿಗಳ ಪ್ರಕಾರ ಅವರು ಕೌಟುಂಬಿಕ ಸಮಸ್ಯೆಗಳಿಂದ ಖಿನ್ನತೆಗೆ ಒಳಗಾಗಿದ್ದರು. ತುಟಿಯಲೂರು ಪೊಲೀಸರು ಜಗನ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಜಗನ್ ಸಿಆರ್ಪಿಎಫ್ನ 77ನೇ ಬೆಟಾಲಿಯನ್ನ ಸದಸ್ಯರಾಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ವಿಶ್ವ ಆರೋಗ್ಯ ಸಂಸ್ಥೆ (WHO) ಕೋವಿಡ್ -19 ಜಾಗತಿಕ ತುರ್ತುಸ್ಥಿತಿಯ ಅಂತ್ಯದ ನಂತರ ಮುಂಬರುವ ಸಾಂಕ್ರಾಮಿಕ ರೋಗದ ಬಗ್ಗೆ ಎಚ್ಚರಿಕೆ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಮತ್ತೊಂದು ಸಾಂಕ್ರಾಮಿಕ ರೋಗಕ್ಕೆ ಸಿದ್ಧರಾಗುವಂತೆ ವಿಶ್ವದ ದೇಶಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮನುಕುಲಕ್ಕೆ ತಿಳಿದಿಲ್ಲದ ಸೂಕ್ಷ್ಮಾಣುಜೀವಿಗಳಿಂದ ಉಂಟಾಗುವ ಕಾಯಿಲೆಗೆ ವಿಶ್ವ ಆರೋಗ್ಯ ಸಂಸ್ಥೆ ನೀಡಿದ ಹೆಸರು ಡಿಸೀಸ್ ಎಕ್ಸ್. ಈ ಹೆಸರನ್ನು 2018 ರಲ್ಲಿ ರಚಿಸಲಾಗಿದೆ. ರೋಗ X ಕೋವಿಡ್ಗಿಂತ ಹೆಚ್ಚು ಮಾರಣಾಂತಿಕವಾಗಿದೆ ಎಂದು ಅಂದಾಜಿಸಲಾಗಿದೆ. 2017 ರಲ್ಲಿ, ವಿಶ್ವ ಆರೋಗ್ಯ ಸಂಸ್ಥೆಯು ಜಗತ್ತು ಎದುರಿಸುತ್ತಿರುವ ಸಾಂಕ್ರಾಮಿಕ ರೋಗಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ಇವುಗಳಲ್ಲಿ ಕೋವಿಡ್-19, ಎಬೋಲಾ, ಮಾರ್ಬರ್ಗ್, ಲಸ್ಸಾ ಜ್ವರ, MERS, SARS, Nipah ಮತ್ತು Zika ಸೇರಿವೆ. ರೋಗ X ಎಂಬುದು ಒಳಗೊಂಡಿರುವ ಕೊನೆಯ ಕಾಯಿಲೆಯಾಗಿದೆ.ಈಗಿನ ಅಂದಾಜಿನ ಪ್ರಕಾರ X ರೋಗವು ಪ್ರಾಣಿಗಳಿಂದ ಮನುಷ್ಯರಿಗೆ ಹರಡುತ್ತದೆ. ಮತ್ತು ವೈಜ್ಞಾನಿಕ ಜಗತ್ತು ಜೊಂಬಿ ವೈರಸ್ ಬಗ್ಗೆ ಚಿಂತಿತವಾಗಿದೆ.…
ಮಹಾರಾಷ್ಟ್ರ ಅಸೋಸಿಯೇಷನ್ ಆಫ್ ಟೆಂಪಲ್ಸ್ ಮಹಾರಾಷ್ಟ್ರದ ನಾಗ್ಪುರದ ನಾಲ್ಕು ದೇವಾಲಯಗಳಲ್ಲಿ ‘ವಸ್ತ್ರ ಸಂಹಿತಾ’ ಅಥವಾ ‘ಡ್ರೆಸ್ ಕೋಡ್’ ಅನ್ನು ಪರಿಚಯಿಸಿದೆ. ಮಹಾರಾಷ್ಟ್ರ ಮಂದಿರ ಮಹಾಸಂಘ ಎಂಬ ಸಂಘಟನೆ ರಾಜ್ಯಾದ್ಯಂತ ಇರುವ ದೇವಸ್ಥಾನಗಳಿಗೆ ‘ವಸ್ತ್ರ ಸಂಹಿತೆ’ ಹೊರಡಿಸಿರುವುದಾಗಿ ಪ್ರಕಟಿಸಿದೆ. ಈ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಮಹಾರಾಷ್ಟ್ರ ಮಂದಿರ ಮಹಾ ಸಂಘವು ಶೀಘ್ರದಲ್ಲೇ ರಾಜ್ಯದ ಎಲ್ಲಾ ದೇವಾಲಯಗಳಿಗೆ ವಿಸ್ತರಿಸಲಾಗುವುದು ಎಂದು ಘೋಷಿಸಿದೆ. ರಾಜ್ಯದಲ್ಲಿ ಪೂಜಾ ಸ್ಥಳಗಳಲ್ಲಿ ಉಡುಗೆ ತೊಡುಗೆಗಳ ಬಗ್ಗೆ ಹಲವು ಚರ್ಚೆಗಳು ನಡೆದವು. ಇದರ ಬೆನ್ನಲ್ಲೇ ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿಗೆ ತರಲು ದೇವಸ್ಥಾನದ ಸಂಘಟನೆಗಳು ನಿರ್ಧರಿಸಿವೆ. ಪ್ರಸ್ತುತ, ಗೋಪಾಲಕೃಷ್ಣ ದೇವಾಲಯ, ಪಂಚಮುಖಿ ಹನುಮಾನ್ ದೇವಾಲಯ, ಬೃಹಸ್ಪತಿ ದೇವಾಲಯ ಮತ್ತು ಧಂತೋಲಿಯ ದುರ್ಗಾ ಮಾತಾ ಎಂಬ ನಾಲ್ಕು ದೇವಾಲಯಗಳಲ್ಲಿ ಡ್ರೆಸ್ ಕೋಡ್ ಹೇರಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h…
ನೂತನ ಸಂಸತ್ತಿಗೆ ಮಹಿಳಾ ಕುಸ್ತಿಪಟುಗಳ ಮಹಾ ಪಂಚಾಯ್ತಿ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗಿದೆ. ಎಲ್ಲಾ ಪ್ರಮುಖ ರಸ್ತೆಗಳನ್ನು ಬ್ಯಾರಿಕೇಡ್ಗಳಿಂದ ಮುಚ್ಚಲಾಗಿತ್ತು. ಜಂತರಂಮಂದಿರದಲ್ಲಿ ಮಾಧ್ಯಮದ ಮೇಲೂ ನಿರ್ಬಂಧ ಹೇರಲಾಗಿದೆ. ಪಿಐಬಿ ಕಾರ್ಡ್ ಹೊಂದಿರುವ ಮಾಧ್ಯಮ ವ್ಯಕ್ತಿಗಳಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗಿದೆ. ಬೆಳಗ್ಗೆ 11.30ಕ್ಕೆ ಜಂತರ್ ಮಂದಿರದಿಂದ ಸಂಸತ್ ಭವನದವರೆಗೆ ಕುಸ್ತಿ ಪಟುಗಳು ಮೆರವಣಿಗೆ ನಡೆಸಲಿದ್ದಾರೆ. ಲೈಂಗಿಕ ದೌರ್ಜನ್ಯದ ದೂರಿನಲ್ಲಿ ಬ್ರಿಜ್ ಭೂಷಣ್ ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ತಿಕ್ರು, ಘಾಜಿಪುರ ಮತ್ತು ಸಿಂಘು ಗಡಿಯಿಂದ ದೆಹಲಿಗೆ ಪಥಸಂಚಲನ ನಡೆಸುವುದಾಗಿ ಆಟಗಾರರು ಮಾಹಿತಿ ನೀಡಿದ್ದಾರೆ. ಮಹಿಳಾ ಮಹಾ ಪಂಚಾಯತ್ ಭಾಗವಾಗಿರುವ ಹಲವಾರು ರೈತ ಮುಖಂಡರನ್ನು ಈಗಾಗಲೇ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಬಿಕೆಯು ಹರಿಯಾಣ ಅಧ್ಯಕ್ಷ ಗುರ್ನಾಮ್ ಸಿಂಗ್ ಚತುನಿ ಅವರನ್ನು ಪೊಲೀಸರು ಅವರ ಮನೆಯಲ್ಲಿ ಬಂಧಿಸಿದ್ದಾರೆ. ಅನಿರಾಜ ಸೇರಿದಂತೆ ರಾಷ್ಟ್ರೀಯ ಮಹಿಳಾ ಒಕ್ಕೂಟದ ಸದಸ್ಯರನ್ನು ಬಂಧಿಸಿ ತೆಗೆದುಹಾಕಲಾಯಿತು. ಪ್ರತಿಭಟನಾಕಾರರನ್ನು ಇರಿಸಲು…
ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ಗಾಂಧಿ ಪ್ರತಿಮೆಯ ಮುಂದೆ ಪ್ರಧಾನಿ ಪುಷ್ಪ ನಮನ ಸಲ್ಲಿಸುವುದರೊಂದಿಗೆ ಉದ್ಘಾಟನಾ ಸಮಾರಂಭ ಆರಂಭವಾಯಿತು. ಪೂಜೆಗಳ ನಂತರ ನೂತನ ಕಟ್ಟಡದಲ್ಲಿ ಪ್ರಧಾನಿ ರಾಜದಂಡವನ್ನು ಸ್ಥಾಪಿಸಿದರು. ಇದೀಗ ಉದ್ಘಾಟನಾ ಸಮಾರಂಭದ ಅಂಗವಾಗಿ ಸರ್ವಧರ್ಮ ಪ್ರಾರ್ಥನೆ ದೆಹಲಿಯಲ್ಲಿ ಪ್ರಗತಿಯಲ್ಲಿದೆ. ರಾಜದಂಡವನ್ನು ಸ್ಥಾಪಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನಾ ಫಲಕವನ್ನು ಸಹ ಅನಾವರಣಗೊಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ರಾಜದಂಡ ಅಳವಡಿಸಿದ ನಂತರ ಕಟ್ಟಡ ಕಾರ್ಮಿಕರನ್ನು ಸನ್ಮಾನಿಸಿದರು. ನೂತನ ಸಂಸತ್ತನ್ನು ನಿರ್ಮಿಸಿದ ಕಾರ್ಮಿಕರ ಪ್ರತಿನಿಧಿಗಳಿಗೆ ಪ್ರಧಾನಿ ನಮನ ಸಲ್ಲಿಸಿದರು. ಸಂಸತ್ ಭವನದ ಮುಂಭಾಗದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸಂಸತ್ತಿನ ಒಳಗೆ ಲೋಕಸಭೆ ಸ್ಪೀಕರ್ ಆಸನಕ್ಕೆ ರಾಜದಂಡವನ್ನು ಪ್ರಧಾನಿ ಹಸ್ತಾಂತರಿಸಿದರು. ಜಾತ್ರೆ ಮತ್ತು ಪ್ರಾರ್ಥನೆಗಳ ಪಕ್ಕವಾದ್ಯಕ್ಕೆ ಪ್ರಧಾನಿ ರಾಜದಂಡವನ್ನು ಸ್ಥಾಪಿಸಿದರು. ಬಳಿಕ ಪ್ರಧಾನಿ ಹಾಗೂ ಲೋಕಸಭಾ ಸ್ಪೀಕರ್ ಭದ್ರದೀಪ ಬೆಳಗಿಸಿದರು. ರಾಜದಂಡದ ಮೇಲೆ ಹೂವುಗಳನ್ನು ಅರ್ಪಿಸಿದ ನಂತರ, ಪ್ರಧಾನಿ…