Subscribe to Updates
Get the latest creative news from FooBar about art, design and business.
- ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ
- ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ
- ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ
- ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
- ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
- ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
- ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
- ತುಮಕೂರು: ಆನ್ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
Author: admin
ಬೆಂಗಳೂರು: ಸರ್ಕಾರ ಅನುದಾನ ತಡೆಹಿಡಿದಿರುವುದನ್ನು ಖಂಡಿಸುತ್ತೇನೆ. ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ಬಿಡುಗಡೆ ಮಾಡಿದ್ದೆವು. ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಎರಡನೇ ಕಂತು ಬಿಡುಗಡೆ ಆಗಿರಲಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ರಾಜ್ಯದ ದೇವಾಲಯಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ. ಗ್ಯಾರಂಟಿ ಯೋಜನೆ ಜಾರಿ ಮಾಡಿದರೂ ಅನುದಾನ ನಿಲ್ಲಿಸಬೇಡಿ ಎಂದು ಅವರು ಆಗ್ರಹಿಸಿದ್ದಾರೆ.
ತುಮಕೂರು ನಗರದಲ್ಲಿರುವ ಸರಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ 77ನೇ ಸ್ವಾತಂತ್ರೋತ್ಸವವನ್ನು ಚಿತ್ರಕಲಾ ಪ್ರದರ್ಶನ ಏರ್ಪಡಿಸುವ ಮೂಲಕ ಆಚರಿಸಲಾಯಿತು. ಇದೇ ವೇಳೆ ಕಾಲೇಜಿನಲ್ಲಿ ಕಲಿಯುತ್ತಿರುವ ಬಿ.ವಿ.ಎ ಪದವಿ ವಿದ್ಯಾರ್ಥಿಗಳು ತಾವೇ ರಚಿಸಿದ ವಿವಿಧ ವರ್ಣ ಚಿತ್ರಗಳನ್ನು ಕಾಲೇಜಿನಲ್ಲಿ ಪ್ರದರ್ಶಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಸಿ.ಸಿ.ಬಾರಕೇರರವರು, ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯ ನಮ್ಮ ಹಕ್ಕು ಹಾಗಂತ ಸ್ವೇಚ್ಛೆಯಿಂದ ಬಾಳದೆ ಪರಧರ್ಮ- ಸಹಿಷ್ಣುತೆ, ವಿವಿಧ ಭಾಷೆ, ಸಂಸ್ಕೃತಿ, ಧಾರ್ಮಿಕ ಆಚರಣೆಗಳನ್ನು ಹಾಗೂ ದೇಶದ ಕಲಾ ಪರಂಪರೆಗಳನ್ನು ಉಳಿಸಿ ಬೆಳೆಸಲು ಎಲ್ಲರೂ ಸಹಕರಿಸಬೇಕು ಎಂದರು. ಚಿತ್ರಕಲಾ ಪ್ರದರ್ಶನದ ಉದ್ಘಾಟಕರಾಗಿ ಆಗಮಿಸಿದ ತುಮಕೂರಿನ ಹಿರಿಯ ಚಿತ್ರಕಲಾವಿದರು ಹಾಗೂ ನಿವೃತ್ತ ಶಿಕ್ಷಕರಾದ ಎಂ.ಎನ್. ಸುಬ್ರಹ್ಮಣ್ಯ ಮಾತನಾಡಿ, ಕಲಾ ವಿದ್ಯಾರ್ಥಿಗಳು ಸಾಹಿತ್ಯಾಭ್ಯಾಸವನ್ನು ರೂಢಿಸಿಕೊಂಡು ಅರ್ಥಪೂರ್ಣ ಕಲಾಕೃತಿಗಳನ್ನು ರಚಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು. ಸಮಾರಂಭದ ಮುಖ್ಯ ಅತಿಥಿಗಳಾಗಿ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಹಾಗೂ ನಮ್ಮತುಮಕೂರು ವಾಹಿನಿಯ ಸಂಸ್ಥಾಪಕರಾದ ನಟರಾಜು ಜಿ.ಎಲ್. ಮಾತನಾಡಿ, ನಾನು ಸಹ ಇದೇ ಕಾಲೇಜಿನಲ್ಲಿ…
ಸಾಧ್ಯವಿಲ್ಲದ ಭಯಾನಕ ಘಟನೆಯೊಂದು ನಡೆದಿದೆ. ಇನ್ನೂ ಮಕ್ಕಳು ಎಂದು ನಾವೆಲ್ಲ ಪರಿಗಣಿಸುವ 9 ಮತ್ತು 10ನೇ ಕ್ಲಾಸಿನ ವಿದ್ಯಾರ್ಥಿಗಳು ತಮ್ಮದೇ ಗೆಳೆಯನೊಬ್ಬನನ್ನು ಸಲಿಂಗ ಕಾಮಕ್ಕೆ ಒತ್ತಾಯಿಸಿ ಚಿತ್ರಹಿಂಸೆ ನೀಡಿದ ಕ್ರೌರ್ಯವಿದು. ಇದು ನಡೆದಿರುವುದು ಎಲ್ಲೋ ದೂರದಲ್ಲಿ ಅಲ್ಲ. ನಮ್ಮದೇ ರಾಜ್ಯದ ತುಮಕೂರಿನ ಕೆಂಪೇಗೌಡ ವಸತಿ ಶಾಲೆಯಲ್ಲಿ. ಇಲ್ಲಿ ಲ್ಯಾಗಿಂಗ್ ಅಥವಾ ಸೆಕ್ಸ್ ಬಯಕೆಯ ಕ್ರೌರ್ಯ ಯಾವ ಮಟ್ಟಕ್ಕೆ ತಲುಪಿದೆ ಎಂದರೆ ಕೆಲವು ವಿದ್ಯಾರ್ಥಿಗಳು ಅತ್ಯಂತ ಅಸಹ್ಯ ರೀತಿಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಒಬ್ಬ ವಿದ್ಯಾರ್ಥಿಯ ಬಾಯಿಗೆ ಇತರ ಕೆಲವು ವಿದ್ಯಾರ್ಥಿಗಳು ತಮ್ಮ ಗುಪ್ತಾಂಗವನ್ನು ಇಟ್ಟು ಅಸಹ್ಯ ಪ್ರದರ್ಶನ ಮಾಡಿದ್ದಾರೆ. ಆತ ಅದಕ್ಕೆ ಒಪ್ಪದೆ ಇದ್ದದ್ದಕ್ಕೆ ಸಲಿಂಗ ಕಾಮಕ್ಕೆ ಸಹಕರಿಸದೆ ಇದ್ದದ್ದಕ್ಕೆ ಅವನಿಗೆ ಬ್ಲೇಡ್ ನಿಂದ ಕೊಯ್ದು, ಕೌರ್ಯ ನಡೆಸಿದ್ದಾರೆ. ತುಮಕೂರಿನ ಕೆಂಪೇಗೌಡ ವಸತಿ ಶಾಲೆಯಲ್ಲಿ ಈ ಭಯಾನಕ ಘಟನೆ ನಡೆದಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಇಲ್ಲಿನ ಒಂಬತ್ತನೇ ತರಗತಿ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳು ನಿತ್ಯ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎನ್ನಲಾಗಿದೆ. ಆತ ಹೋಮೋಸೆಕ್ಸ್ಗೆ ವಿರೋಧಿಸಿದ್ದಕ್ಕೆ ಸಿಗರೇಟ್…
“ಸಿಎಸ್ಆರ್ ಹಣದ ಮೂಲಕ ನೂತನ ಶಾಲೆಗಳನ್ನು ನಿರ್ಮಾಣ ಮಾಡಬೇಕು ಹಾಗೂ ಸದ್ಬಳಕೆ ಹೇಗೆ ಮಾಡಬೇಕು ಎಂಬುದಾಗಿ ಸರ್ಕಾರ ಯೋಜನೆ ರೂಪಿಸುತ್ತಿದೆ. ನನ್ನದೂ 3 ಶಿಕ್ಷಣ ಸಂಸ್ಥೆಗಳಿದ್ದು ಪಂಚಾಯಿತಿ ಮಟ್ಟದಲ್ಲಿ 3 ಶಾಲೆಗಳನ್ನು ದತ್ತು ತೆಗೆದುಕೊಳ್ಳುತ್ತೇನೆ” ಎಂದು ಡಿ.ಕೆ.ಶಿವಕುಮಾರ್ ಘೋಷಿಸಿದರು. “ಸಿಎಸ್ಆರ್ ಹಣವು ಕೇವಲ ನಗರೀಕರಣಕ್ಕೆ ಮಾತ್ರ ಬಳಕೆಯಾಗುತ್ತಿದೆ, ಇದನ್ನು ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಬಳಕೆ ಮಾಡಬೇಕು ಎಂಬುದು ನಮ್ಮ ಆಶಯ, ಪ್ರತಿ ಪಂಚಾಯಿತಿಯಲ್ಲಿ 3 ಶಾಲೆಗಳನ್ನು ಹೊಸದಾಗಿ ನಿರ್ಮಾಣ ಮಾಡಬೇಕು ಎಂಬುದು ನಮ್ಮ ಕನಸಾಗಿದೆ ಅದಕ್ಕೆ ಹಣದ ಸದ್ಬಳಕೆ ಕುರಿತು ಸಭೆ ನಡೆಸಲಾಯಿತು” ಎಂದು ಮಾಹಿತಿ ನೀಡಿದರು. ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅವರ ಶಾಲೆಯ ಅಧ್ಯಾಪಕರನ್ನೇ ಗ್ರಾಮೀಣ ಭಾಗದ ಶಾಲೆಗಳಿಗೆ ಕಳುಹಿಸಿ ಪಾಠ ಮಾಡಬೇಕು. ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನಮ್ಮ ಕರ್ನಾಟಕದ ಪ್ರತಿ ಗ್ರಾಮೀಣ ಮಕ್ಕಳಿಗೂ ದೊರೆಯಬೇಕು. ಎಂಬುದು ನಮ್ಮ ಸರ್ಕಾರದ ಮಹತ್ವದ ಯೋಚನೆ ಮತ್ತು ಯೋಜನೆ” ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಹರಿಯಾಣದ ಮಾಜಿ ಕ್ರೀಡಾ ಸಚಿವರ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ ಮಹಿಳಾ ಕೋಚ್ ಅಮಾನತು. ಹರಿಯಾಣ ಕ್ರೀಡಾ ಇಲಾಖೆ ನಿರ್ದೇಶಕ ಯಶೇಂದ್ರ ಸಿಂಗ್ ಅಮಾನತು ಆದೇಶ ಹೊರಡಿಸಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಕಾರಣವನ್ನು ಆದೇಶದಲ್ಲಿ ನಮೂದಿಸಿಲ್ಲ. ದೂರನ್ನು ಹಿಂಪಡೆಯುವಂತೆ ಒತ್ತಡ ಹೇರಲಾಗಿದೆ ಎಂದು ಮಹಿಳಾ ಕೋಚ್ ಆರೋಪಿಸಿದ್ದಾರೆ. 2022ರಲ್ಲಿ ಮಹಿಳೆ ಸಚಿವರ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದರು. ತನ್ನ ಅಮಾನತು ಪ್ರಕರಣವನ್ನು ಇತ್ಯರ್ಥಪಡಿಸುವ ಪ್ರಯತ್ನಗಳಿಗೆ ಮಣಿಯುವಲ್ಲಿ ವಿಫಲವಾಗಿದೆ ಎಂದು ಮಹಿಳೆ ಹೇಳಿದ್ದಾರೆ. ಅದೇ ಸಮಯದಲ್ಲಿ, ಹರಿಯಾಣ ನಾಗರಿಕ ಸೇವಾ ನಿಯಮಗಳ ಪ್ರಕಾರ ಮಹಿಳೆ ಭತ್ಯೆಗಳಿಗೆ ಅರ್ಹಳು ಎಂದು ಆದೇಶವು ಹೇಳುತ್ತದೆ. 2022ರ ಡಿಸೆಂಬರ್ ನಲ್ಲಿ ಮಹಿಳೆಯ ದೂರಿನ ಮೇರೆಗೆ ಪೊಲೀಸರು ಸಂದೀಪ್ ಸಿಂಗ್ನನ್ನು ಬಂಧಿಸಿದ್ದರು. ಬಳಿಕ ಅವರನ್ನು ಕ್ರೀಡಾ ಸಚಿವ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಪ್ರಸ್ತುತ ಅವರು ಪ್ರಿಂಟಿಂಗ್ ಮತ್ತು ಸ್ಟೇಷನರಿ ವಿಭಾಗದ ಉಸ್ತುವಾರಿಯನ್ನು ಹೊಂದಿದ್ದಾರೆ. ಇದೇ ವೇಳೆ ಸಂದೀಪ್ ಸಿಂಗ್ ತಮ್ಮ ವಿರುದ್ಧದ ದೂರು ಸುಳ್ಳು…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಮೇಲೆ ಮೂರು ವರ್ಷಕ್ಕಿಂತ ಹೆಚ್ಚು ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 83 ಕಂಪ್ಯೂಟರ್ ಆಪರೇಟರ್ ಗಳನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಪಾಲಿಕೆ ಮುಖ್ಯ ಆಯುಕ್ತರ ಸೂಚನೆಯ ಮೇರೆಗೆ ಜಿಎ ಡಿಜಿಟಲ್ ವೆಬ್ ವರ್ಲ್ಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಸೂಚಿಸಿದ್ದರು. ಅದರಂತೆ ಕಂಪ್ಯೂಟರ್ ಆಪರೇಟರ್ ಗಳನ್ನು ಆಂತರಿಕವಾಗಿ ಪುನರ್ ನಿಯೋಜಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬಹುಮತದ ಸರಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿಗಳು; ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಪಡಿಸಿದ್ದಾರೆ. ಕಾವೇರಿ ವಿಷಯದಲ್ಲಿ ಕಾಂಗ್ರೆಸ್ಸಿನದು ಸದಾ ಎರಡು ನಾಲಿಗೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕಾವೇರಿ ಪಾಲಿಗೆ ಕಾಂಗ್ರೆಸ್ ನಯವಂಚನೆ, ನಂಬಿಕೆ ದ್ರೋಹದ ಪ್ರತೀಕ ಎಂದರು. ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ. ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೆಚ್. ಡಿ.ಕೆ ಎಂದಿದ್ದಾರೆ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಸಂಕಷ್ಟ ಸೂತ್ರದ ಪಾಲನೆಗೆ ಒತ್ತಡ ಹೇರಬೇಕು ಹಾಗೂ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ…
ದೆಹಲಿಯಲ್ಲಿ ಏಳು ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಘೋಷಿಸಿದ ನಂತರ ಆಮ್ ಆದ್ಮಿ ಪಕ್ಷವು ಭಾರತದಲ್ಲಿ ವಿರೋಧ ಪಕ್ಷದ ಮೈತ್ರಿಯ ಬಗ್ಗೆ ತನ್ನ ನಿಲುವನ್ನು ಬಿಗಿಗೊಳಿಸಿದೆ. ದೆಹಲಿ ಲೋಕಸಭಾ ಸ್ಥಾನಗಳ ಬಗ್ಗೆ ಕಾಂಗ್ರೆಸ್ ನೀತಿಯನ್ನು ಸ್ಪಷ್ಟಪಡಿಸದೆ ಒಕ್ಕೂಟದ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಎಎಪಿ ಅಭಿಪ್ರಾಯಪಟ್ಟಿದೆ. ದೆಹಲಿಯ ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಕಾಂಗ್ರೆಸ್ ನಾಯಕಿ ಅಲ್ಕಾ ಲಾಂಬಾ ಹೇಳಿಕೆ ನೀಡಿದ್ದಾರೆ. ಎಎಪಿ ಅನುಸರಿಸಿತು. ಚುನಾವಣೆಗೂ ಮುನ್ನ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ನಿನ್ನೆ ಪಕ್ಷದ ವರಿಷ್ಠರ ಜೊತೆ ಸಭೆ ನಡೆಸಿದ್ದರು. ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ದೀಪಕ್ ಬಬಾರಿಯಾ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ನಂತರ ಅಲ್ಕಾ ಲಾಂಬಾ ಪ್ರತಿಕ್ರಿಯಿಸಿ, ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ ನಡೆಸುವಂತೆ ತಿಳಿಸಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಏಳು ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ ನಿರ್ಧರಿಸಿದೆ. ಒಂದು ವೇಳೆ ತಮ್ಮೊಂದಿಗೆ ಮೈತ್ರಿ ಮಾಡಿಕೊಳ್ಳದಿರಲು ಕಾಂಗ್ರೆಸ್ ಈಗಾಗಲೇ ನಿರ್ಧರಿಸಿದ್ದರೆ…
ನ್ಯಾಯಾಲಯದ ಭಾಷೆಯಲ್ಲಿ ಯಾವುದೇ ಲೈಂಗಿಕ ಉಲ್ಲೇಖಗಳಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವೇಶ್ಯೆ, ಅಸಭ್ಯ ಮತ್ತು ಪ್ರಚೋದನಕಾರಿ ಉಡುಗೆಗಳ ಅಭಿವ್ಯಕ್ತಿಗಳನ್ನು ತಪ್ಪಿಸುವ ಮೂಲಕ ಕೈಪಿಡಿಯನ್ನು ತೆಗೆದುಹಾಕಲಾಗಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ವಿಶೇಷ ಆಸಕ್ತಿಯಂತೆ ಲಿಂಗ ಸ್ಟೀರಿಯೊಟೈಪ್ ಗಳನ್ನು ತಪ್ಪಿಸಲು ‘ಲಿಂಗ ಸ್ಟೀರಿಯೊಟೈಪ್ ಗಳನ್ನು ಎದುರಿಸುವ ಕೈಪಿಡಿ’ ಎಂಬ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ. ಸುಪ್ರೀಂ ಕೋರ್ಟ್ನ ಲಿಂಗ ಸಂವೇದನೆ ಮತ್ತು ಆಂತರಿಕ ದೂರುಗಳ ಸಮಿತಿಯು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ಯೋಜನೆಯನ್ನು ಘೋಷಿಸಿದರು. ನ್ಯಾಯಾಲಯದ ಆದೇಶಗಳಲ್ಲಿ ತಪ್ಪಿಸಬೇಕಾದ ಮಹಿಳೆಯರ ಬಗ್ಗೆ ಸೂಕ್ತವಲ್ಲದ ಲಿಂಗ ಪದನಾಮಗಳು ಮತ್ತು ಸ್ಟೀರಿಯೊಟೈಪ್ ಗಳನ್ನು ಗುರುತಿಸಲು ಮತ್ತು ಅರ್ಥಮಾಡಿಕೊಳ್ಳಲು ನ್ಯಾಯಾಧೀಶರು ಮತ್ತು ಕಾನೂನು ಸಮುದಾಯಕ್ಕೆ ಶಿಕ್ಷಣ ನೀಡಲು ಕೈಪಿಡಿಯನ್ನು ಬಳಸಲಾಗುತ್ತದೆ. ಕೈಪಿಡಿಯು ಲಿಂಗ ಸರಿಯಾಗಿಲ್ಲದ ಪದಗಳ ಅರ್ಥಗಳನ್ನು ಒಳಗೊಂಡಿರಬಹುದು. ಅಂತಹ ಪದಗಳ ಬದಲಿಗೆ ಬಳಸಬಹುದಾದ ಪರ್ಯಾಯ ಪದಗಳನ್ನು ಸಹ ಸೇರಿಸಲಾಗಿದೆ. ವೇಶ್ಯೆ, ಬಲವಂತದ ಅತ್ಯಾಚಾರ, ಮಕ್ಕಳ ವೇಶ್ಯಾವಾಟಿಕೆ, ಅಶ್ಲೀಲತೆ, ಪ್ರಚೋದನಕಾರಿ ಡ್ರೆಸ್ಸಿಂಗ್, ಗೃಹಿಣಿ, ವೃತ್ತಿ…
ಪರಿಷತ್ ಸ್ಥಾನದ ನಾಮನಿರ್ದೇಶನಕ್ಕೆ ಎಂ. ಆರ್. ಸೀತಾರಾಮ್, ಸುಧಾಂ ದಾಸ್ ಹಾಗೂ ಉಮಾಶ್ರೀ ಹೆಸರನ್ನು ಶಿಫಾರಸು ಮಾಡಲು ಸರ್ಕಾರ ನಿರ್ಧರಿಸಿದೆ. ರಾಜ್ಯ ಸರ್ಕಾರ ನಾಳೆ ರಾಜ್ಯಪಾಲರಿಗೆ ಈ ಮೂವರ ಹೆಸರನ್ನು ನಾಮನಿರ್ದೇಶನಕ್ಕಾಗಿ ಶಿಫಾರಸು ಮಾಡುವ ಸಾಧ್ಯತೆ ಇದೆ. ಎಐಸಿಸಿಯಿಂದ ಮೂವರ ಹೆಸರನ್ನು ಅಂತಿಮಗೊಳಿಸಿದೆ. ಈ ಮುಂಚೆ ಕೇಳಲ್ಪಟ್ಟಿದ್ದ ಮನ್ಸೂರ್ ಖಾನ್ ಹೆಸರು ಕೈ ಬಿಡಲಾಗಿದೆ. ಇದೀಗ ಮೂವರ ಹೆಸರನ್ನು ಶಿಫಾರಸು ಮಾಡಲು ನಿರ್ಧರಿಸಿರುವುದು ಅಸಮಾಧಾನಕ್ಕೆ ಕಾರಣವಾಗುವ ಸಾಧ್ಯತೆ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA