Author: admin

ಟೆಲಿಗ್ರಾಂ ಮೂಲಕ ಯುವಕರನ್ನ ಪರಿಚಯಿಸಿಕೊಂಡು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದ ಪುಟ್ಟೇನಹಳ್ಳಿ ಪೊಲೀಸರು, ಯುವತಿ ಯೊಬ್ಬಳನ್ನೂ ಬಂಧಿಸಿದ್ದಾರೆ. ಯುವಕನನ್ನ ಜೆ. ಪಿ. ನಗರದ ವಿನಾಯಕ್ ನಗರಕ್ಕೆ ಕರೆಯಿಸಿಕೊಂಡು ಬೆದರಿಸಿ 50 ಸಾವಿರ ರೂ. ಸುಲಿಗೆ ಮಾಡಿರುವುದಾಗಿ ದೂರು ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದ ಶರಣಪ್ರಕಾಶ್ ಬಳಿಗೇರ, ಅಬ್ದುಲ್ ಖಾದರ್, ಯಾಸಿನ್ ಎಂಬುವರನ್ನು ಬಂಧಿಸಿ, ಬಾಂಬೆ ಮೂಲದ ನೇಹಾಳನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮಣಿಪುರದಲ್ಲಿ ಶಸ್ತ್ರಾಸ್ತ್ರ ಬೇಟೆ ಮತ್ತು ಮಾದಕ ದ್ರವ್ಯ ಬೇಟೆ. ದಾಳಿಯಲ್ಲಿ ಬಂದೂಕುಗಳು, ಮದ್ದು ಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂಫಾಲ್ ಪಶ್ಚಿಮ, ಬಿಷ್ಣುಪುರ್, ಚುರಾಚಂದ್‌ ಪುರ, ತೆಂಗ್‌ ನೌಪಾಲ್ ಮತ್ತು ಕಾಂಗ್‌ ಪೋಕ್ಪಿ ಜಿಲ್ಲೆಗಳಲ್ಲಿ ದಾಳಿಗಳು ನಡೆದಿವೆ. ಪೊಲೀಸರು ಇಲ್ಲಿ ತಪಾಸಣೆಯನ್ನು ಬಿಗಿಗೊಳಿಸಿದ್ದಾರೆ. ಇಂಫಾಲ್ ಪೂರ್ವ, ಮಣಿಪುರ ಗಡಿಯಿಂದ ಮಾದಕ ದ್ರವ್ಯ ಮತ್ತು ಗಡಿಯ ವ್ಯವಹಾರಗಳನ್ನು ವಶಪಡಿಸಿಕೊಂಡಿದ್ದಾರೆ. 4 ಜನರನ್ನು ಬಂಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನದಂದು ದೇಶವನ್ನುದ್ದೇಶಿಸಿ ಮಾತನಾಡುವಾಗ ಮಣಿಪುರದ ವಿಷಯವನ್ನು ಪ್ರಸ್ತಾಪಿಸಿದ್ದರು. ಮಣಿಪುರದ ಗಲಭೆಗಳನ್ನು ಅಂತ್ಯಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಯತ್ನಿಸುತ್ತಿವೆ ಎಂದು ಪ್ರಧಾನಿ ಹೇಳಿದರು. ಮಣಿಪುರ ಗೊಂದಲದಲ್ಲಿದೆ. ಅನೇಕ ಜನರು ಪ್ರಾಣ ಕಳೆದುಕೊಂಡರು. ಮಣಿಪುರದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ. ಮಣಿಪುರದಲ್ಲಿ ಶೀಘ್ರದಲ್ಲೇ ಶಾಂತಿ ನೆಲೆಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಣಿಪುರದಲ್ಲಿರುವ ನಮ್ಮ ಸಹೋದರಿಯರ ಹೆಮ್ಮೆಗೆ ಧಕ್ಕೆಯಾಗಿದೆ. ಮಣಿಪುರದಲ್ಲಿ ಈಗ ಶಾಂತಿ ಮರಳುತ್ತಿದೆ. ಮಣಿಪುರದಲ್ಲಿ ಪ್ರಸ್ತುತ ಯಾವುದೇ ಹಿಂಸಾಚಾರದ ಘಟನೆಗಳಿಲ್ಲ ಎಂದು…

Read More

ಹಿಮಾಚಲ ಪ್ರದೇಶದಲ್ಲಿ ಪ್ರವಾಹಕ್ಕೆ ಮೂರು ದಿನಗಳಲ್ಲಿ ಸತ್ತವರ ಸಂಖ್ಯೆ 71 ಕ್ಕೆ ಏರಿದೆ. ಸುಮಾರು 20 ಮಂದಿ ನಾಪತ್ತೆಯಾಗಿದ್ದಾರೆ. ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ, ಸ್ಥಳೀಯ ನಿವಾಸಿಗಳನ್ನು ಹೆಲಿಕಾಪ್ಟರ್ ಮೂಲಕ ಕೆಳಗಿರುವ ಪ್ರದೇಶದಿಂದ ಸ್ಥಳಾಂತರಿಸಲಾಯಿತು. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖ್ ಅವರು ರಾಜ್ಯಕ್ಕೆ ಹತ್ತು ಸಾವಿರ ಕೋಟಿ ರೂಪಾಯಿಗಳಷ್ಟು ಹಾನಿಯಾಗಿದೆ ಎಂದು ಘೋಷಿಸಿದರು. ರಾಜ್ಯದಲ್ಲಿ ರಾಷ್ಟ್ರೀಯ ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ಸೇನೆ ಮತ್ತು ವಾಯುಪಡೆಗಳ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಮಧ್ಯೆ ಉತ್ತರಾಖಂಡದಲ್ಲಿ ಬಂಡ್ರಿನಾಥ್ ಕೇದಾರನಾಥ ರಸ್ತೆಯನ್ನು ಪುನಶ್ಚೇತನಗೊಳಿಸುವ ಕೆಲಸ ಆರಂಭವಾಗಿದೆ. ಭಾಕ್ರಾ ಮತ್ತು ಪಾಂಗ್ ಅಣೆಕಟ್ಟುಗಳಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಿದ ನಂತರ ಪಂಜಾಬ್‌ನ ಹೋಶಿಯಾರ್‌ ಪುರ, ಗುರುದಾಸ್‌ ಪುರ ಮತ್ತು ರೂಪನಗರ ಜಿಲ್ಲೆಗಳು ಜಲಾವೃತವಾಗಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್…

Read More

ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್ 15 ರ ರಾತ್ರಿ, ಮಾರುತಿ ನಗರದ ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವೀಗೀಡಾಗಿದ್ದಾರೆ. ನರಸಪ್ಪ (51) ಹಾಗೂ ರಕ್ಷಾ ಮೃತರು. ರಕ್ಷಾ ಹಾಗೂ ಕಾಲೇಜು ವಿದ್ಯಾರ್ಥಿ ಚಂದನ್ ಮಾರುತಿ ನಗರದಿಂದ ಕೆಎಲ್‌ಇ ಕಾಲೇಜಿನೆಡೆಗೆ ವೇಗವಾಗಿ ಹೋಗುತ್ತಿದ್ದಾಗ ನರಸಪ್ಪ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನರಸಪ್ಪ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಾಯಗೊಂಡಿದ್ದ ರಕ್ಷಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮೋದಿ ಹೇಳಿಕೆಯಿಂದ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಿಲೀಫ್. ರಾಹುಲ್ ಗಾಂಧಿ ಖುದ್ದು ಜಾರ್ಖಂಡ್ ನ್ಯಾಯಾಲಯಕ್ಕೆ ಹಾಜರಾಗುವ ಅಗತ್ಯವಿಲ್ಲ. ಇದಕ್ಕೂ ಮುನ್ನ ರಾಂಚಿಯ ಜನಪ್ರತಿನಿಧಿಗಳ ನ್ಯಾಯಾಲಯ ರಾಹುಲ್ ಗಾಂಧಿಗೆ ಹಾಜರಾಗುವಂತೆ ಸೂಚಿಸಿತ್ತು. ಪ್ರದೀಪ್ ಮೋದಿ ಪ್ರಕರಣದ ಅರ್ಜಿದಾರರಾಗಿದ್ದಾರೆ. ಖುದ್ದು ಹಾಜರಾಗುವಂತೆ ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಕೆ.ದ್ವಿವೇದಿ, ಕೆಲವು ಷರತ್ತುಗಳೊಂದಿಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗದೇ ವಿನಾಯಿತಿ ನೀಡಿದರು. ಜಾರ್ಖಂಡ್‌ ನ ರಾಂಚಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ‘ಮೋದಿ ಹೆಸರಿಟ್ಟವರೆಲ್ಲ ಕಳ್ಳರು’ ಎಂಬ ಹೇಳಿಕೆಗಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ರಾಹುಲ್ ತಪ್ಪಿತಸ್ಥ ಎಂದು ಸೂರತ್ ಕೋರ್ಟ್ ನೀಡಿದ ತೀರ್ಪಿನಿಂದ ಸಂಸದರ ಸಂಸತ್ ಸದಸ್ಯತ್ವ ರದ್ದಾಗಿದೆ. ನಂತರ ಸುಪ್ರೀಂ ಕೋರ್ಟ್ ಈ ತೀರ್ಪಿಗೆ ತಡೆ ನೀಡಿ ಮಧ್ಯಂತರ ಆದೇಶ ನೀಡಿದ್ದು, ಸಂಸದ ಸ್ಥಾನದಿಂದ ಅನರ್ಹತೆಯನ್ನು ಹಿಂತೆಗೆದುಕೊಳ್ಳಲಾಗಿದೆ. ರಾಹುಲ್ ಗಾಂಧಿ ಅವರು ಜಾರ್ಖಂಡ್ ಒಂದರಲ್ಲೇ ಮೂರು ಮಾನನಷ್ಟ ಪ್ರಕರಣಗಳನ್ನು…

Read More

ಕಾಲೇಜಿನ ಯುವಕ ಯುವತಿಯರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸುವಲ್ಲಿ ಸೂರ್ಯ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ಬಂದಿತ ಆರೋಪಿಗಳು ಆನೇಕಲ್ ಹುಸ್ಕೂರು ಸಮೀಪದ ಚನ್ನಕೇಶವ ನಗರದ ಅಭಿ(19) ತರಣ್(20), ಸೂರ್ಯ(21), ಹರ್ಷ (21)ಬಂಧಿತ ಆರೋಪಿಗಳು. ಇನ್ನು ಬಂಧಿತ ಆರೋಪಿಗಳಿಂದ ಮಾಲ್ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ತುಮಕೂರಿನಲ್ಲಿ ಬೆಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಸರ್ಕಾರಿ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ದಾಖಲೆ ಪತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ತುಮಕೂರು ನಗರ ಅಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ನಾಗರಾಜ ಮನೆ ಮೇಲೆ ದಾಳಿ ಸುಮಾರು 10ಕ್ಕೂ ಹೆಚ್ಚು ಮಂದಿಗೆ ಲೋಕಾಯುಕ್ತ ಪೊಲೀಸರು ದಿಡೀರ್ ದಾಳಿ ನಡೆಸಿದ್ದಾರೆ. ತುಮಕೂರು ನಗರದ ಸಪ್ತಗಿರಿ ಬಡಾವಣೆಯಲ್ಲಿರುವ ನಾಗರಾಜ್ ಅವರಿಗೆ ಸೇರಿದ ಮನೆ ಮೇಲೆ ಬೆಳಗ್ಗೆ ಸುಮಾರು ಐದು ಗಂಟೆ ಸಂದರ್ಭದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಕಾಗದಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇದೆ ಸಂದರ್ಭದಲ್ಲಿ ಅವರನ್ನು ವಿಚಾರಣೆಗೂ ಕೂಡ ಒಳಪಡಿಸಿದ್ದಾರೆ. ಹಲವು ದಿನಗಳಿಂದ ಇವರ ಮೇಲೆ ಸಾಕಷ್ಟು ದೂರುಗಳು ಲೋಕಾಯುಕ್ತ ಪೊಲೀಸರಿಗೆ ಬಂದಿದ್ದವು. ಇದರ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಇಂದು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ತುಮಕೂರು ಸಪ್ತಗಿರಿ ಬಡಾವಣೆಯಲ್ಲಿರುವ ನಿವಾಸ ಹಾಗೂ ಪಾವಗಡ ತಾಲೂಕು ಅರಸೀಕೆರೆಯ ನಿವಾಸ ಹಾಗೂ ಟೂಡಾ ಕಚೇರಿಯಲ್ಲಿ ಮೂರು ಪ್ರತ್ಯೇಕ ತಂಡಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು ಮಹತ್ವದ…

Read More

ಬೆಂಗಳೂರಿನಲ್ಲಿ 18 ಶ್ವಾನಗಳಿಗೆ ವಿಷ ಉಣಿಸಿ ಹತ್ಯೆ ಮಾಡಿರುವ ಘಟನೆ ಆರ್‌ಆರ್ ನಗರದ ಹೊಸಕೆರೆಹಳ್ಳಿ ವಾರ್ಡ್ ಬೌಂಡ್ರಿಯಲ್ಲಿ ನಡೆದಿದೆ. ನಗರದಲ್ಲಿ ಅನಿಮಲ್ ಆಕ್ಟಿವಿಸ್ಟ್ ತಂಡ ಮೃತ ಶ್ವಾನಗಳ ದೇಹ ಪತ್ತೆಗೆ ಶೋಧ ಆರಂಭಿಸಿದೆ. ಇದುವರೆಗೆ 7 ಶ್ವಾನಗಳ ಕಳೇಬರ ಪತ್ತೆಯಾಗಿದ್ದು, ಅದರಲ್ಲಿ 5 ಕಳೇಬರ ಸಂಪೂರ್ಣ ಕೊಳೆತು ಹೋಗಿದೆ. ನಾಯಿಗಳ ದೇಹವನ್ನ ಹಗ್ಗ ಮತ್ತು ಚೀಲದಲ್ಲಿ ಹಾಕಿ ತುಂಬಲಾಗಿದೆ. ಈ ಬಗ್ಗೆ ಆರ್‌ಆರ್ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ನಿವಾಸಿ ಶಶಿಧರ್ ಮೃತ ಯುವಕ. ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಮದುವೆಯಾಗಿದ್ದನು. ಶಶಿಧರ್ ಮೇಲೆ ಬಾಲಕಿಯ ಪೋಷಕರು ಬಸವನ ಬಾಗೇವಾಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ವಿಷಯ ತಿಳಿದ ಶಶಿಧರ್ ಇನ್‌ ಸ್ಟಾಗ್ರಾಂನಲ್ಲಿ ನನ್ನ ಸಾವಿಗೆ ಬಾಲಕಿ ಅಪ್ಪ, ಅಮ್ಮ ಮತ್ತೆ ಅವರ ಚಿಕ್ಕಪ್ಪ, ಅವರಜ್ಜಿ ಕಾರಣ ಅಂತ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಭ್ರಷ್ಟಾಚಾರದಲ್ಲಿ ಸಚಿವ ಚಲುವರಾಯಸ್ವಾಮಿಗೆ ಮೊದಲ ಸ್ಥಾನ. ಚಲುವರಾಯಸ್ವಾಮಿ 300ರಿಂದ 400 ಕೋಟಿ ಹಣ ಲೂಟಿ ಹೊಡೆದಿದ್ದಾನೆ ಎಂದು ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಮಾಜಿ ಶಾಸಕ ಸುರೇಶ್ ಗೌಡ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮಾಡಿ ಹಣವನ್ನು ಏರ್‌ ಲಿಫ್ಟ್ ಮಾಡ್ತಿದೆ. ಹಿಂದಿನ ಸರ್ಕಾರದಲ್ಲಿ ಜೆಸಿಬಿಯಲ್ಲಿ ಹಣ ತುಂಬುತ್ತಾರೆ ಅಂತಿದ್ರು. ಆದರೆ ಈ ಸರ್ಕಾರ ಭ್ರಷ್ಟ ಹಣವನ್ನು ಏರ್‌ ಲಿಫ್ಟ್ ಮಾಡ್ತಿದೆ. ಈ ಸರ್ಕಾರದವರು ರಾಜ್ಯವನ್ನೇ ಲೂಟಿ ಹೊಡೆಯುತ್ತಿದ್ದಾರೆ ಎಂದು ನಾಗಮಂಗಲದಲ್ಲಿ ಮಾಜಿ ಶಾಸಕ ಸುರೇಶ್ ಗೌಡ ಆರೋಪ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More