Author: admin

ಬೆಂಗಳೂರು: ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಶಾಸಕರು ಬರೋದಾದರೆ ಅವರನ್ನು ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಬಿಜೆಪಿ ಶಾಸಕರಿಗೆ ಆಹ್ವಾನ ನೀಡಿದ್ದಾರೆ. ಲೋಕಸಭೆ ಚುನಾವಣೆ ವೇಳೆಗೆ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರು ಕಾಂಗ್ರೆಸ್‌ ಗೆ ಬರಬಹುದು. ಬಿಜೆಪಿಯಲ್ಲಿ ಬೇಸರ ಆಗಿ, ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಹೇಳಿ ಶಾಸಕರು ಬರಬಹುದು. ಬಿಜೆಪಿಯಿಂದ ಬರೋ ಶಾಸಕರನ್ನು ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು. ಈಗಾಗಲೇ ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಹೇಳಿದ್ದಾರೆ. ಪರಿಶೀಲನೆ ಮಾಡಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಐಡಿಯಾಲಜಿ ನಂಬಿ, ಕಾಂಗ್ರೆಸ್ ಲೀಡರ್‌ ಶಿಪ್ ಮೇಲೆ ನಂಬಿಕೆ ಇಟ್ಟು ಪಕ್ಷಕ್ಕೆ ಬಂದರೆ ಬರಬಹುದು. ಹಿಂದೆ ಪಕ್ಷ ಬಿಟ್ಟು ಹೋದವರು ಕೂಡಾ ಬರಬಹುದು ಎಂದು ಸ್ಪಷ್ಟಪಡಿಸಿದರು. ಪಕ್ಷ ಬಿಟ್ಟು ಹೋಗೋರು ವಾಪಸ್ ಬಂದಿರೋ ಉದಾಹರಣೆ ಇದೆ. ಆದರೆ ಅವರಿಗೆ ಫಸ್ಟ್ ಬೆಂಚ್ ಸಿಗಲ್ಲ. ತಪ್ಪು ಮಾಡಿದ್ದನ್ನು ಸರಿ…

Read More

ಹರಿಯಾಣದ ನುಹ್ ಮತ್ತು ಗುರುಗ್ರಾಮ್‌ ನಲ್ಲಿ ನಡೆದ ಕೋಮು ಗಲಭೆಗೆ ಸಂಬಂಧಿಸಿದಂತೆ ಬಜರಂಗದಳ ಸದಸ್ಯ ಮತ್ತು ಗೋರಕ್ಷಕ ಬಿಟ್ಟು ಬಜರಂಗಿಯನ್ನು ಬಂಧಿಸಲಾಗಿದೆ. ಬಿಟ್ಟು ಮತ್ತು ಅವರ ಬಜರಂಗದಳದ ಕಾರ್ಯಕರ್ತ ಮೋನು ಮಾನೇಸರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಹಿಂಸಾಚಾರವನ್ನು ಪ್ರಚೋದಿಸಲಾಗಿದೆ ಎಂಬ ಆರೋಪದ ನಡುವೆ ಬಂಧಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಿಟ್ಟು ಬಜರಂಗಿಯನ್ನು ಹಿಂಸಾಚಾರ ನಡೆದ 20 ದಿನಗಳ ನಂತರ ಫರಿದಾಬಾದ್‌ ನ ಆತನ ಮನೆಯ ಬಳಿ ಬಂಧಿಸಲಾಗಿದ್ದು, ಕೇಸರಿ ಬಟ್ಟೆಯಲ್ಲಿ ನಡೆದುಕೊಂಡು ಆಯುಧಗಳನ್ನು ಪ್ರದರ್ಶಿಸಿ ಪ್ರಚೋದನಕಾರಿ ಹಾಡುಗಳನ್ನು ಹಾಡುತ್ತಿರುವ ವಿಡಿಯೋದಲ್ಲಿ ಬಿಟ್ಟು ಬಜರಂಗಿ ಬಿಡುಗಡೆ ಮಾಡಿದ್ದಾರೆ. ಮಫ್ತಿಗೆ ಬಂದ ಪೊಲೀಸ್ ತಂಡ ಬಿಟ್ಟು ಬೆನ್ನತ್ತಿ ಹಿಡಿದು ಬಂಧಿಸಿರುವ ಸಿಸಿಟಿವಿ ದೃಶ್ಯಾವಳಿ ಬಿಡುಗಡೆಯಾಗಿದೆ. ಬಿಟ್ಟು ಅವರ ವಿರುದ್ಧ ಗಲಭೆ, ಹಿಂಸಾಚಾರ, ಬೆದರಿಕೆ, ಕೆಲಸಕ್ಕೆ ಅಡ್ಡಿಪಡಿಸುವುದು, ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಮತ್ತು ಮಾರಕ ಆಯುಧದಿಂದ ಹಲ್ಲೆ ಮಾಡಿದ ಆರೋಪಗಳನ್ನು ಹೊರಿಸಲಾಗಿದೆ. ಮಾರ್ಕೆಟ್ ನಲ್ಲಿ ಹಣ್ಣು ತರಕಾರಿ ವ್ಯಾಪಾರಿಯಾಗಿರುವ ರಾಜ್‌ ಕುಮಾರ್‌ ಅಲಿಯಾಸ್‌ ಬಿಟ್ಟು ಬಜರಂಗಿ…

Read More

ಕಾಂಗ್ರೆಸ್‌ನವರು ಸಮಾನತೆ ತರುತ್ತೇವೆ ಎಂದು ಹೇಳ್ತಾರೆ. ಇವರು ಯಾವುದರಲ್ಲಿ ಸಮಾನತೆ ತರುತ್ತಾರೆ. ಪುಕ್ಕಟೆ ಕೊಡುವ ಮೂಲಕ ಎಲ್ಲರೂ ಕೈ ಒಡ್ಡುವಂತೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ದುಡಿಯುವ ಕೈಗಳಿಗೆ ಶಕ್ತಿ ತುಂಬುವ ಬದಲು, ಈ ರೀತಿ ಮಾಡುತ್ತಿದ್ದಾರೆ. ದೇಶದ ಆರ್ಥಿಕ ಸಂಪತ್ತು ವೃದ್ಧಿ ಆಗುತ್ತಿದೆ. ಆದರೆ, ಆ ಸಂಪತ್ತು ಎಲ್ಲರಿಗೂ ತಲುಪುವ ಕೆಲಸವಾಗುತ್ತಿಲ್ಲ. ಕೇವಲ ಕೆಲವು ಜನರಿಗೆ ತಲುಪುತ್ತಿದೆ. ನಮ್ಮ ದೇಶದಲ್ಲಿ ನೂರಾರು ಈಸ್ಟ್ ಇಂಡಿಯಾ ಕಂಪನಿಗಳು ಹುಟ್ಟಿಕೊಂಡಿವೆ. ಸ್ವಾತಂತ್ರ್ಯ ಬಂದ ನಂತರವೂ ಈಸ್ಟ್ ಇಂಡಿಯಾ ಕಂಪನಿಯ ಪಳಿಯುಳಿಕೆಗ ಳಾಗಿ ಎರಡು ಪಕ್ಷಗಳು ನಮ್ಮಲ್ಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಶೀಲ ಶಂಕಿಸಿ ಪತಿ ತನ್ನ ಪತ್ನಿಯನ್ನೇ ಕೊಂದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯಲ್ಲಿ ನಡೆದಿದೆ. ಮಧುಶ್ರಿ (25) ಕೊಲೆಯಾದ ಮಹಿಳೆ. ಕರಡಹಳ್ಳಿ ಗ್ರಾಮದ ಮಂಜುನಾಥ್ ಜೊತೆ ಕಳೆದ ನಾಲ್ಕೈದು ವರ್ಷಗಳ ಹಿಂದೆ ಮಧುಶ್ರೀ ಮದುವೆಯಾಗಿತ್ತು. 4 ವರ್ಷದ ಗಂಡು ಮಗುವಿನ ಜೊತೆ ವಾಸವಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ನಿನ್ನೆ ಮಧ್ಯಾಹ್ನ ಬೆಂಗಳೂರಿನಿಂದ ಊರಿಗೆ ಬಂದಿದ್ದ. ಈ ವೇಳೆ ದಂಪತಿ ನಡುವೆ ಜಗಳವಾಗಿದ್ದು ಕೊಲೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮಳೆಯ ಕೊರತೆಯಿಂದ ಇಳುವರಿ ಕುಂಠಿತವಾಗಿರುವ ಪರಿಣಾಮ ಒಂದು ಕೆ. ಜಿ. ಏಲಕ್ಕಿ ಬಾಳೆ ಹಣ್ಣು ಕ 100 ರಂತೆ ಮಾರಾಟವಾಗುತ್ತಿದೆ. ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆ ಹೆಚ್ಚಳವಾಗಿದೆ. ಬೆಂಗಳೂರು ನಗರಕ್ಕೆ ಹೆಚ್ಚಾಗಿ ತಮಿಳುನಾಡಿನಿಂದ ಬಾಳೆ ಹಣ್ಣು ಪೂರೈಕೆಯಾಗುತ್ತದೆ. ಜತೆಗೆ ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶದಿಂದ ಬಾಳೆ ಹಣ್ಣು ಪೂರೈಕೆಯಾಗುತ್ತದೆ. ಮಾರುಕಟ್ಟೆ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ದರ ಹೆಚ್ಚಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಕಾಂಗ್ರೆಸ್‌ ನ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿಯವರೆಗೆ 1 ಕೋಟಿಗೂ ಅಧಿಕ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಇದುವರೆಗೂ ಸುಮಾರು 1.08 ಕೋಟಿ ಅರ್ಜಿ ಸಲ್ಲಿಕೆಯಾಗಿದೆ. ಚುನಾವಣೆ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿತ್ತು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 3 ತಿಂಗಳಾಗಿದ್ದರೂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಇನ್ನೂ ದಿನ ಹುಡುಕುತ್ತಿದೆ. ಆಗಸ್ಟ್  15ಕ್ಕೆ ಫಲಾನುಭವಿಗಳಿಗೆ  ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ ಎನ್ನಲಾಗಿತ್ತು. ಆದರೆ ಬಳಿಕ ಈ ತಿಂಗಳ ಕೊನೆಯಲ್ಲಿ ಯೋಜನೆ ಜಾರಿಗೆ ಸರ್ಕಾರ ಪ್ಲ್ಯಾನ್ ಮಾಡಿದೆ. ಕಾಂಗ್ರೆಸ್‌ ನ ಅತ್ಯಂತ ನಿರೀಕ್ಷಿತ ಯೋಜನೆಗೆ ಇದುವರೆಗೂ 1,08,47,486 ಅರ್ಜಿ ಸಲ್ಲಿಕೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಇಂದು ಬೆಳಗ್ಗೆ 8.30ಕ್ಕೆ ಚಂದ್ರಯಾನ 3 ಅಂತಿಮ ಕಕ್ಷೆಯ ಅವರೋಹಣ. ಚಂದ್ರನಿಂದ 100 ಕಿ.ಮೀ ದೂರದಲ್ಲಿರುವ ಕಕ್ಷೆಗೆ ಶೋಧಕವನ್ನು ಹಾಕುವುದು ಗುರಿಯಾಗಿದೆ. ಇದೇ ತಿಂಗಳ 23ರಂದು ಚಂದ್ರನ ಮೇಲ್ಮೈಯಲ್ಲಿ ಶೋಧಕವು ಮೃದುವಾಗಿ ಇಳಿಯಲಿದೆ. ಇದು ಬಾಹ್ಯಾಕಾಶ ನೌಕೆಯನ್ನು ವೃತ್ತಾಕಾರದ ಕಕ್ಷೆಗೆ ಸೇರಿಸುತ್ತದೆ. ಚಂದ್ರಯಾನ-3 ಪ್ರಸ್ತುತ ಚಂದ್ರನಿಂದ 177 ಕಿ.ಮೀ ದೂರದಲ್ಲಿ ಪರಿಭ್ರಮಿಸುತ್ತಿದೆ. ಹೆಚ್ಚು ನಿರ್ಣಾಯಕ ಲ್ಯಾಂಡರ್ ಮಾಡ್ಯೂಲ್ ಬೇರ್ಪಡಿಕೆ ಪ್ರಕ್ರಿಯೆಯು ಇನ್ನೊಂದು ದಿನವಾಗಿದೆ. ಜುಲೈ 14 ರಂದು ಶ್ರೀಹರಿ ಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ ಉಡಾವಣೆಯಾಯಿತು. ಚಂದ್ರಯಾನ 2 ಮಿಷನ್ 2019 ರಲ್ಲಿ ಸಾಫ್ಟ್ ಲ್ಯಾಂಡಿಂಗ್ ಸಮಯದಲ್ಲಿ ಸವಾಲುಗಳನ್ನು ಎದುರಿಸಿದ ನಂತರ ಇದು ಇಸ್ರೋದ ಎರಡನೇ ಪ್ರಯತ್ನವಾಗಿದೆ. ಯೋಜನೆಯ ಎಲ್ಲಾ ಹಂತಗಳನ್ನು ಒಮ್ಮೆ ಪರಿಶೀಲಿಸಿದ ನಂತರ ಕ್ಷಣಗಣನೆ ಪ್ರಾರಂಭವಾಯಿತು. 2019 ರಲ್ಲಿ ಉಡಾವಣೆಯಾದ ಚಂದ್ರಯಾನ 2 ಯಶಸ್ವಿಯಾಗಿ ಚಂದ್ರನ ಕಕ್ಷೆಯನ್ನು ತಲುಪಿತು, ಆದರೆ ರೋವರ್ ಅನ್ನು ಬಿಡುವಾಗ ಲ್ಯಾಂಡರ್ ಸ್ಫೋಟಗೊಂಡಿತು. ಇದು ಚಂದ್ರನ ರಹಸ್ಯಗಳ ಹುಡುಕಾಟದಲ್ಲಿ ಭಾರತದ ಮೂರನೇ…

Read More

ವಯೋವೃದ್ಧರನ್ನು ಗುರಿಯಾಗಿಸಿ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಹಣ ಸುಲಿಗೆ ಮಾಡುತ್ತಿದ್ದ ದಂಪತಿ ಸೇರಿ ಮೂವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ನಿವೃತ್ತ ಸರ್ಕಾರಿ ನೌಕರನಾಗಿರುವ ಸುಧೀಂದ್ರ ಎಂಬುವರು ನೀಡಿದ ದೂರಿನ ಮೇರೆಗೆ ಅಣ್ಣಮ್ಮ, ಲೋಕೇಶ್ ಹಾಗೂ ಸ್ನೇಹ ಎಂಬುವರನ್ನ ಬಂಧಿಸಲಾಗಿದೆ. ಬಂಧಿತರೆಲ್ಲರೂ ಮೂಲತಃ ಕೊಡಗಿನವರಾಗಿದ್ದು, ಬೊಮ್ಮನಹಳ್ಳಿಯಲ್ಲಿ ಒಂದೇ ಮನೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ನನ್ನ ಕಂಡರೆ ಭಯನಾ, ನನಗೆ ಅವರ ಕಂಡರೆ ಭಯನಾ ಎಂಬುದು ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗುತ್ತೆ ಎಂದು ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದರು. ಕೆಪಿಸಿಸಿ ಕಚೇರಿ ಬಳಿ ಮಾತನಾಡಿದ ಅವರು, ಚಲುವರಾಯಸ್ವಾಮಿಗೆ ನನ್ನ ಕಂಡರೆ ಭಯ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸುತ್ತ, ನಾನು ನಕಲಿ ಪತ್ರದ ಬಗ್ಗೆ ಕುಮಾರಸ್ವಾಮಿ ಹೆಸರನ್ನು ಚರ್ಚೆನೇ ಮಾಡಿಲ್ಲ. ನಾನು ಅವರ ಹೆಸರನ್ನೂ ಹೇಳಿಲ್ಲ, ನನಗೇನು ಭಯ ಇಲ್ಲ. ಎಂದು ವಾಗ್ದಾಳಿ ನಡೆಸಿದರು.ಅದು ನಕಲಿ ಪತ್ರ ಎಂದು ಹೇಳಿದ್ದೇನೆ. ಅದಕ್ಕಾಗಿ ತನಿಖೆ ಮಾಡಲು ಹೇಳಿರುವೆ. ನಾನು ಕುಮಾರಸ್ವಾಮಿಯವರು ನಕಲಿ ಪತ್ರ ಕೊಟ್ಟಿದ್ದಾರೆ ಅಂದಿಲ್ಲ. ನಾನು ಅವರ ಹೆಸರು ಹೇಳೇ ಇಲ್ಲ. ಅವರು ಯಾರು ಹೆಸರು ಹೇಳುತ್ತಾರೆ ಎಂಬುದು ಗೊತ್ತಿಲ್ಲ. ನನಗೆ ಬೇಜಾರು ಕೂಡ ಇಲ್ಲ. ನಮಗೆ ಮಾಡಬೇಕಾದ ಕೆಲಸ ಹೆಚ್ಚಿದೆ ಎಂದು ಟಾಂಗ್ ನೀಡಿದರು. ನನ್ನ ಬಗ್ಗೆ ಭಯನಾ ಅಂತಾ ಹೇಳಿದ್ದಾರೆ. ಯಾರು ಗವರ್ನರ್ ಗೆ ಫೇಕ್ ಲೆಟರ್ ಕೊಟ್ಟಿದ್ದಾರೆ…

Read More

ಏಳು ವರ್ಷ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ನಿವೃತ್ತ ಪಿಎಸ್ಐ ಅಬ್ದುಲ್ ಹಫೀಜ್‌ ನನ್ನು (74) ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಠಾಣೆ ವ್ಯಾಪ್ತಿಯ ನಿವಾಸಿ ಅಬ್ದುಲ್ ಹಫೀಜ್ ವಿರುದ್ಧ ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೋ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ  ಎಂದು ಪೊಲೀಸರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More