Author: admin

‘ಸ್ವಿಗ್ಗಿ’ ಡೆಲಿವರಿ ಬಾಯ್‌ ಗೆ ಚಾಕು ತೋರಿಸಿ ಬೆದರಿಸಿ ಸುಲಿಗೆ ಮಾಡಲಾಗಿದ್ದು, ಸುಲಿಗೆ ಸಂಬಂಧ ಡೆಲಿವರಿ ಬಾಯ್ ದೂರು ನೀಡಿದ್ದಾರೆ. ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪುಲಿಕೇಶಿನಗರ ಠಾಣೆ ಪೊಲೀಸರು ತಿಳಿಸಿದ್ದಾರೆ. ದೂರುದಾರ ಬಳಿಯ 11,000, ಮೊಬೈಲ್ ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಕೃತ್ಯ ಸೆರೆಯಾಗಿದ್ದು, ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ  ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಡ್ರಗ್ಸ್ ಮಾರಾಟದ ವಿರುದ್ಧ ಪ್ರತ್ಯೇಕ ಕಾರ್ಯಾಚರಣೆ ನಡೆಸಿರುವ ವಿ.ವಿ. ಪುರ, ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನೈಜೀರಿಯಾದ ಹಿಜಿಕಿ (35), ರಾಜಸ್ಥಾನದ ಪುಕಾರಾಮ್ ಚೌಧರಿ ಹಾಗೂ ಓಂ ಸಿಂಗ್ ಬಂಧಿತರು. ವಿದ್ಯಾರ್ಥಿ ವೀಸಾದಡಿ ನಗರಕ್ಕೆ ಬಂದಿದ್ದ ಹಿಜಿಕಿ, ಗೋವಾದಿಂದ ಡ್ರಗ್ಸ್  ಖರೀದಿಸಿ ತಂದು ಸಂಗ್ರಹಿಸಿಟ್ಟುಕೊಳ್ಳುತ್ತಿದ್ದ. ನಗರದ ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಕಂಪನಿಗಳ ಉದ್ಯೋಗಿಗಳಿಗೆ ಡ್ರಗ್ಸ್ ಮಾರುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ನನಗೆ ಎಲ್ಲರ ಕಥೆಯೂ ಗೊತ್ತಿದೆ. ಯಾರು, ಯಾವಾಗ, ಯಾರ ಹತ್ತಿರ, ಏನು ಮಾತನ್ನಾಡಿದ್ದಾರೆ? ನಮ್ಮ ಅಶೋಕ್ ಚಕ್ರವರ್ತಿ, ನವರಂಗಿ ನಾರಾಯಣ, ಮಹಾಲಕ್ಷ್ಮಿಲೇಔಟ್ ಎಂಎಲ್, ಕುಮಾರಸ್ವಾಮಿ, ಹೀಗೆ ಎಲ್ಲರೂ ಏನೇನು ಮಾತನ್ನಾಡಿದ್ದಾರೆ? ಎಂಬುದು ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ-ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಬಿಬಿಎಂಪಿ ಗುತ್ತಿಗೆದಾರರ ಅನುದಾನ ತಡೆ ಹಿಡಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಖುದ್ದು ಗುತ್ತಿಗೆದಾರರೇ ಇಂದು ಡಿಕೆಶಿ ಅವರಿಗೂ ಅನುದಾನ ತಡೆಹಿಡಿದಿರುವುದಕ್ಕೂ ಸಂಬಂಧ ಇಲ್ಲ ಎಂದು ಯೂಟರ್ನ್ ಹೊಡೆದಿರುವ ಬೆನ್ನಲ್ಲೇ ಮಾಧ್ಯಮಗಳ ಮುಂದೆ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನವರಂಗಿ ನಾರಾಯಣ, ಅಶೋಕ ಚಕ್ರವರ್ತಿ, ಗೋಪಾಲಯ್ಯ ಎಲ್ಲರ ಕಥೆಯನ್ನು ಹೇಳುತ್ತೇನೆ ಎನ್ನುವ ಮೂಲಕ ಗುತ್ತಿಗೆದಾರರ ವಿಚಾರ ಇನ್ನೊಮ್ಮೆ ಮಾತನ್ನಾಡುತ್ತೇನೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಷ್ಠಾನ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣನವರ 226 ನೇ ಜಯಂತೋತ್ಸವದಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಆಗಸ್ಟ್ 15 ದೇಶದ ಸ್ವಾತಂತ್ರ್ಯ ದಿನ. ಇದೇ ದಿನ ಸಂಗೊಳ್ಳಿರಾಯಣ್ಣ ಅವರ ಜನ್ಮ ದಿನವೂ ಹೌದು. ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಅವರ ಆಶಯವೂ ಇದೇ ಆಗಿತ್ತು. ಆಗಸ್ಟ್ 15 ಕ್ಕೆ ರಾಯಣ್ಣರ ಹುಟ್ಟು ದಿನವಾದರೆ, ಜನವರಿ 26 ಬ್ರಿಟಿಷರು ರಾಯಣ್ಣರನ್ನು ಗಲ್ಲಿಗೇರಿಸಿದ ದಿನ. ಈ ಎರಡೂ ದಿನಗಳೂ ದೇಶದ ಚರಿತ್ರೆಯಲ್ಲಿ ಪ್ರಮುಖವಾದ ದಿನ ಎಂದರು. ಸರ್ವರಿಗೂ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ, ಧಾರ್ಮಿಕ ಸ್ವಾತಂತ್ರ್ಯ ಸಿಕ್ಕರೆ ಮಾತ್ರ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮರ ತ್ಯಾಗಕ್ಕೆ ಬೆಲೆ ಬರುತ್ತದೆ ಎಂದರು.…

Read More

ಬರಿ ಹೊಟ್ಟೆ ಸತ್ಯಾಗ್ರಹ ಪ್ರತಿಭಟನಾ ಸಭೆಯು ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಜರುಗಿತು. ಜನದನಿ ಕಲಾ ತಂಡದಿಂದ ಹೋರಾಟದ ಹಾಡುಗಳನ್ನು ಹಾಡುವುದರ ಮೂಲಕ ಸತ್ಯಾಗ್ರಹಕ್ಕೆ ಚಾಲನೆ ನೀಡಲಾಯಿತು. ಹಿರಿಯ ಪತ್ರಕರ್ತರು, ಹೋರಾಟಗಾರರು ಆದ ಡಾ. ವಿಜಯಮ್ಮ ಅವರು ಎಚ್. ಎಸ್.‌ ದೊರೆಸ್ವಾಮಿ ಅವರ ಫೋಟೋ ಮತ್ತು ಘೋಷಣೆಯನ್ನು ಅನಾವರಣ ಮಾಡಿ ಪ್ರತಿಜ್ಞಾವಿಧಿಯನ್ನು ಓದಿಸುವ ಮೂಲಕ ಉದ್ಘಾಟನೆ ಮಾಡಿದರು. ಭೂಮಿ, ವಸತಿ ಹಕ್ಕು ವಂಚಿತರಿಗೆ ಭೂಮಿ ಮತ್ತು ನಿವೇಶನದ ಹಕ್ಕು ದೊರೆಯುವವರೆಗೂ ಹೋರಾಟ ನಿಲ್ಲುವುದಿಲ್ಲ. ಭೂಮಿ ವಂಚಿತರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಘನತೆಯ ಬದುಕನ್ನ ಕಟ್ಟಿಕೊಡಲು ಹೋರಾಟ ಮಾಡಿಸಿ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿ ಅವರ ಆಶಯಗಳನ್ನು ಈಡೇರಿಸಲು ಎಲ್ಲರೂ ಪ್ರತಿಜ್ಞೆ ಮಾಡಬೇಕು ಎಂದು ಹಿರಿಯ ಸಾಹಿತಿ, ಹೋರಾಟಗಾರ್ತಿ ಡಾ. ವಿಜಯಮ್ಮ ಹೇಳಿದ್ದಾರೆ. “ಸ್ವಾತಂತ್ರ್ಯ ಸೇನಾನಿ, ನಮ್ಮ ಹೋರಾಟದ ಪ್ರೇರಣೆಯೂ ಆದ ಹಿರಿಯ ದೊರೆಸ್ವಾಮಿ ಅವರು ಇಂದು ದೈಹಿಕವಾಗಿ ನಮ್ಮ ಜೊತೆಗಿಲ್ಲ. ಆದರೆ, ಚೈತನ್ಯವಾಗಿ ಈ ಹೋರಾಟದಲ್ಲಿ ನಮ್ಮ ಜೊತೆಯೇ ಇದ್ದಾರೆ. ಅವರು…

Read More

ತುಮಕೂರು: ಅಮಾನಿಕೆರೆ ಬೋಟ್ ರೈಡಿಂಗ್ ವ್ಯವಸ್ಥೆಯನ್ನು ಇಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಜಿ.ಪ್ರಭು, ಶಾಸಕರಾದ ಜಿ.ಬಿ ಜ್ಯೋತಿಗಣೇಶ್ , ಬಿ.ಸುರೇಶಗೌಡ, ಮೇಯರ್ ಪ್ರಭಾವತಿ ಸುರೇಶ್ವರ್, ಸಚಿವರೊಂದಿಗೆ ಬೋಟ್ ರೈಡಿಂಗ್ ಮಾಡಿದರು. ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಸೇರಿದಂತೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಸೇರಿದ ಸಾರ್ವಜನಿಕರು, ಮಕ್ಕಳು, ಅಧಿಕಾರಿಗಳು, ನೌಕರರು ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮುಂದಿನ ವರ್ಷಇದೇ ಸ್ಥಳ, ಇದೇ ಸಮಯ ಕೆಂಪು ಕೋಟೆಯಲ್ಲಿ ಮತ್ತೆ ಧ್ವಜಾರೋಹಣ ಮಾಡುತ್ತೇನೆಂಬ ಪ್ರಧಾನಮಂತ್ರಿ ಮೋದಿ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಕಾಂಗ್ರೆಸ್ ಪಕ್ಷ ಪ್ರಧಾನ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಇಂದು ಧ್ವಜಾರೋಹಣ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು ಮುಂದಿನ ವರ್ಷ ಧ್ವಜಾರೋಹಣ ಮಾಡುತ್ತಾರೆ. ಆದರೆ, ಅದು ಅವರ ಮನೆಯಲ್ಲಿ. ಮುಂದಿನ ವರ್ಷ ಆಗಸ್ಟ್ 15 ರಂದು ಕೆಂಪುಕೋಟೆಯಲ್ಲಿ ದೇಶದ ಸಾಧನೆಯ ಕುರಿತು ನಾನು ಮಾತನಾಡುತ್ತೇನೆಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು. ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಸ್ವಾತಂತ್ರ್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು ಎಂದು ಸ್ವಾತಂತ್ರ್ಯ ಹೋರಾಟಗಾರರು ಭಾವಿಸಿದ್ದರು. ಆದ್ದರಿಂದಲೇ ಎಲ್ಲ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು. ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ. ವಸಾಹತುವಾದ…

Read More

ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ಈ ಸಂಬಂಧ ಸುಪ್ರೀಂಕೋರ್ಟ್​ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದ್ದು, ಕರ್ನಾಟಕ ನೀರು ಬಿಡದ ಕಾರಣ ರಾಜ್ಯದಕಲ್ಲಿ ಬೆಳೆ ಹಾನಿಯಾಗಿದೆ. ತಮಿಳುನಾಡಿನ ಕಾವೇರಿ ನದಿ ಪಾತ್ರದಲ್ಲಿ ಬೆಳೆಗಳು ಒಣಗುತ್ತಿವೆ. ತಮ್ಮ ಪಾಲಿನ ನೀರು ಬಿಡುಗಡೆಗೆ ಸೂಚಿಸುವಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ತಮಿಳುನಾಡು ಸರ್ಕಾರ ಉಲ್ಲೇಖಿಸಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕವು ಕಾವೇರಿ ನೀರು ನಿಯಂತ್ರಣ ಸಮಿತಿಯ ಸೂಚನೆಯನ್ನು ಪಾಲಿಸುತ್ತಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ಕಳೆದ ವಾರ ಆರೋಪಿಸಿದ್ದರು. ಅಲ್ಲದೆ, ಈ ವಿಚಾರವಾಗಿ ಸುಪ್ರೀಂ ಕೋರ್ಟ್​ಗೆ ಮೊರೆಹೋಗುತ್ತೇವೆ ಎಂದೂ ಹೇಳಿದ್ದರು. ಇನ್ನು ಕರ್ನಾಟಕದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿಯೂ ಹೇಳಿಕೊಳ್ಳುವಂಥ ಮಳೆಯಾಗಿಲ್ಲ. ಹೀಗಾಗಿ ತಮಿಳುನಾಡಿಗೆ ಹೆಚ್ಚು ನೀರು ಬಿಡುವುದು ಕಷ್ಟ ಎಂಬುದು ಕರ್ನಾಟಕದ ವಾದವಾಗಿದೆ.…

Read More

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ಪ್ರಿಯಕರನೊಂದಿಗೆ ಸೇರಿ  ಪತ್ನಿ ಪತಿಯನ್ನೇ ಕೊಂದ ಘಟನೆ ನಡೆದಿದೆ. ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಪತಿ ಸಂಜಯ್ ನನ್ನು ಪತ್ನಿ ಪಾವನಾ ಕೊಂದಿದ್ದಾಳೆ. ಆಗಸ್ಟ್ 6ರಂದು ಯಗಟಿ ಕೆರೆ ಬಳಿ ನವೀನ್ ಮೃತದೇಹ ಪತ್ತೆಯಾಗಿತ್ತು. ಸಹಜ ಸಾವಲ್ಲ, ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿ ಯಗಟಿ ಪೊಲೀಸ್ ಠಾಣೆಯಲ್ಲಿ ನವೀನ್ ಪೋಷಕರು ದೂರು ದಾಖಲಿಸಿದ್ದರು. ತನಿಖೆ ವೇಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದಿದ್ದು ಬೆಳಕಿಗೆ ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More