Subscribe to Updates
Get the latest creative news from FooBar about art, design and business.
- ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ
- ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ
- ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ
- ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
- ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
- ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
- ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
- ತುಮಕೂರು: ಆನ್ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
Author: admin
ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ NEP ಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣ ರದ್ದುಗೊಳಿಸಲಾಗುವುದು ಎಂದರು. ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು NEP ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹಾಗೆಯೇ ಮುಂದುವರೆದಿದೆ. NEP ಗೆ ಏಕ ಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವಿರೋಧವಿದೆ. ಬಿಜೆಪಿ ದೇಶದಲ್ಲಿ ಎಲ್ಲಾ NEP ಜಾರಿಗೊಳಿಸದೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿ ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿ ಕೊಟ್ಟಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149…
ಬಾಗಲಕೋಟೆ: ಭಾರತವು ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಬಲಿಷ್ಠವಾಗಿದ್ದು ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದ ಸಾಧನೆಯಿಂದ ವಿಶ್ವಕ್ಕೆ ಮಾದರಿಯಾಗಿದೆ. ಭ್ರಷ್ಟಾಚಾರ, ಭಯೋತ್ಪಾದನಾ, ಕೋಮುವಾದ, ಜಾತ್ಯತೀತ ರಾಷ್ಟ್ರಕ್ಕಾಗಿ ಯುವಶಕ್ತಿಯು ಈ ದಿನ ಸಂಕಲ್ಪ ತೊಡಬೇಕಾಗಿದೆ ಎಂದು ಪ್ರಾಚಾರ್ಯರಾದ ಎಸ್. ಆರ್ ಮುಗನೂರಮಠ ಹೇಳಿದರು. ಬಿವಿವಿ ಸಂಘದ ಬಸವೇಶ್ವರ ಕಲಾ ಮಾಹಾವಿದ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಮಾಡಿ ಮಾತನಾಡಿದರು. ಸ್ವಾತಂತ್ರ್ಯ ಸ್ಥಾಪನೆಗಾಗಿ ರಕ್ತ ತರ್ಪಣಗೈದ ವೀರಯೋಧರಿಗೆ ಗೌರವ ಸಲ್ಲಿಸುತ್ತ ಇಂದು ಕ್ವಿಟ್ ಇಂಡಿಯಾದ 79ನೇ ವರ್ಷಾಚರಣೆಯ ಸಂದರ್ಭದಲ್ಲಿದ್ದೆವೆ. ಭಾರತ ಸರ್ವತಂತ್ರ ಸ್ವತಂತ್ರ ರಾಷ್ಟ್ರವಾಗುವುದಲ್ಲದೆ, ಸ್ವಯಂಪೂರ್ಣ ಸ್ವಾವಲಂಭಿಯಾಗಿ ಆತ್ಮಗೌರವದಿಂದ ಪ್ರತಿಯೊಬ್ಬ ಪ್ರಜೆಯೂ ಬದುಕು ಕಟ್ಟಿಕೊಳ್ಳುವ ಸುಭದ್ರ ದೇಶವಾಗಿ ನಿರ್ಮಾಣವಾಗಿದೆ. ರಾಷ್ಟ್ರಾಭಿವೃದ್ಧಿಗೆ ಪೂರಕವಾದ ಅನೇಕ ಯೋಜನೆಗಳು, ಕ್ರಾಂತಿಗಳು ಪ್ರಗತಿಯ ಮೈಲುಗಲ್ಲುಗಳಾಗಿದ್ದು ನ್ಯೂಕ್ಲಿಯರ ಟೆಕ್ನಾಲಾಜಿ, ಸ್ಪೇಸ್ ಟೆಕ್ನಾಲಾಜಿಯಂತಹ ಅನೇಕ ಕ್ಷೇತ್ರಗಳಲ್ಲಿ ಭಾರತವು ತನ್ನ ಭೀಮ ಹೆಜ್ಜೆಗಳನ್ನಿರಿಸಿದೆ ಎಂದರು. ಡಿಜಿಟಲ್ ಇಂಡಿಯಾ, ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ‘ಮನದ ಮಾತು’ ಕಾರ್ಯಕ್ರಮ ಹಾಗೂ ಸ್ವಚ್ಛಭಾರತ ಅಭಿಯಾನ, ಸುವರ್ಣ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ತುಮಕೂರು ಮತ್ತು ಮುಂಜಾನೆ ಬಳಗದ ಸದಸ್ಯರುಗಳು, ಸಿದ್ದರಾಮೇಶ್ವರ ಬಡಾವಣೆ, ತುಮಕೂರು ಇವರುಗಳ ಸಹಯೋಗದೊಂದಿಗೆ 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿತ್ತು. ಸಿದ್ದಗಂಗಾ ವಿದ್ಯಾಸಂಸ್ಥೆಯ ನಿವೃತ್ತ ಮುಖ್ಯೋಪಾಧ್ಯಾಯ ಶಿವರುದ್ರಪ್ಪ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ನಂತರ ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯಕ್ಕೆ 1947ರವರೆಗೆ ಹಲವು ದಶಕಗಳ ಕಾಲ ನಮ್ಮ ಪೂರ್ವಜರು ಹೋರಾಡಿರುವುದನ್ನು ಈ ಸಂದರ್ಭದಲ್ಲಿ ನಾವು ನೆನಪಿಸಿಕೊಳ್ಳಬೇಕು. ಅಂದು ದೇಶದ ಸ್ವಾತಂತ್ರ್ಯಕ್ಕಾಗಿ ಒಂದಾದ ನಾಯಕರಂತೆ ಇಂದು ನಾವು ನಮ್ಮೆಲ್ಲರ ನಡುವೆ ಇರುವ ಕೋಮುವಾದ, ಭ್ರಷ್ಟಾಚಾರ, ನಮ್ಮ ದೇಶದ ಶಾಂತಿಗೆ ಧಕ್ಕೆ ತರುವ ಯಾವುದೇ ಶಕ್ತಿಗಳ ವಿರುದ್ಧ ಹೋರಾಡಲು ನಾವು ಒಂದಾಗಬೇಕಿದೆ. ಅದಕ್ಕೆ ವಿದ್ಯಾರ್ಥಿಗಳು,ಜನಸಾಮಾನ್ಯರು ಪ್ರಪಂಚದ ಜ್ಞಾನ ಬೆಳೆಸಿಕೊಂಡು, ನಾಯಕತ್ವದ ಗುಣಗಳನ್ನು ರೂಡಿಸಿಕೊಳ್ಳಬೇಕು. ಎಲ್ಲದಕ್ಕಿಂತ ಮುಖ್ಯವಾಗಿ ನಾವುಗಳು ಮೊದಲು ದೇಶ ಪ್ರೇಮವನ್ನು ಹೊಂದಬೇಕು ಎಂದು ತಿಳಿಸಿದರು.…
ಹಿಮಾಚಲ ಪ್ರದೇಶದಲ್ಲಿ ಮಳೆಗೆ 50 ಮಂದಿ ಬಲಿ. ಸಿಲುಕಿರುವ ಸುಮಾರು 20 ಮಂದಿಯನ್ನು ರಕ್ಷಿಸುವ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಶಿಮ್ಲಾ ಮತ್ತು ಮಂಡಿಯಲ್ಲಿ ಭಾರೀ ಮಳೆಯಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸರ್ಕಾರ ರದ್ದುಗೊಳಿಸಿದೆ. ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಾರ್ ಧಾಮ್ ಯಾತ್ರೆಯನ್ನು ಎರಡು ದಿನಗಳ ಕಾಲ ಮುಂದೂಡಲಾಗಿದೆ. ಭಾರೀ ಮಳೆಯಿಂದಾಗಿ ಋಷಿಕೇಶದಲ್ಲಿ ಗಂಗಾನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆಯಿಂದಾಗಿ ಭಾರೀ ಹಾನಿಯಾಗಿದೆ. ಹಿಮಾಚಲದಲ್ಲಿ ಕಲ್ಕಾ ಶಿಮ್ಲಾ ರೈಲ್ವೇ ಹಳಿ ಕೊಚ್ಚಿ ಹೋಗಿದೆ. ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶವೊಂದರಲ್ಲೇ ಕಳೆದ 24 ಗಂಟೆಗಳಲ್ಲಿ 50 ಸಾವುಗಳು ವರದಿಯಾಗಿವೆ. ವಿವಿಧೆಡೆ ಸಿಲುಕಿರುವ ಸುಮಾರು 20 ಮಂದಿಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಶಿಮ್ಲಾ ಮತ್ತು ಮಂಡಿಯಲ್ಲಿ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖ್ ಮಾತನಾಡಿ, ಸರ್ಕಾರವು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ ಮತ್ತು ಜನರು…
ಭಾನುವಾರ ರಾತ್ರಿ ನಗರದ ಲಲಿತಮಹಲ್ ಹೋಟೆಲ್ ಸಮೀಪದ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಇಬ್ಬರು ಪೇದೆಗಳು ಸಾವಿಗೀಡಾಗಿದ ಘಟನೆ ನಡೆದಿದೆ. ರಾಜ್ಯ ಮೀಸಲು ಪೊಲೀಸ್ ಪಡೆಗೆ ಸೇರಿದ ಮೈಸೂರಿನ 5ನೇ ಬೆಟಾಲಿಯನ್ ನ ಪೇದೆಗಳಾದ ಮೈಸೂರಿನ ಕುಂಬಾರಕೊಪ್ಪಲು ಬಡಾವಣೆ ನಿವಾಸಿ ಪಿ.ಮಹೇಶ್ (23) ಹಾಗೂ ಬಿಜಾಪುರ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಮರನಾಥ ತಾಳಿಕೋಟೆ (24) ಮೃತಪಟ್ಟವರು. ನಗರದ ಸಿದ್ದಾರ್ಥ ಬಡಾವಣೆ ಸಮೀಪದ ಫುಡ್ ಸ್ಟ್ರೀಟ್ ನಲ್ಲಿ ಊಟ ಸೇವಿಸಿದ ಬಳಿಕ ತಮ್ಮ ಪಲ್ಸರ್ ಬೈಕಿನಲ್ಲಿ ಕೆಎಸ್ ಆರ್ ಪಿ ಬೆಟಾಲಿಯನ್ ಕೇಂದ್ರದತ್ತ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಮಹೀಂದ್ರ ಥಾರ್ ವಾಹನ ಪೇದೆಗಳಿದ್ದ ಬೈಕಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಲ್ಸರ್ ಬೈಕ್ ಸುಮಾರು ಹತ್ತು ಮೀಟರ್ ದೂರ ಹೋಗಿ ಬಿದ್ದಿದ್ದರೆ, ಇಬ್ಬರೂ ಪೇದೆಗಳು ಮೇಲೆಕ್ಕೆ ಎಗರಿ ನೆಲಕ್ಕೆ ಅಪ್ಪಳಿಸಿದ್ದಾರೆ. ಇದರಿಂದಾಗಿ ಇಬ್ಬರ ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿ ರಕ್ತಸ್ರಾವವಾಗಿ ಸ್ಥಳದಲ್ಲೇ…
ಲೋ ಬಿಪಿಯಿಂದ ಹೃದಯಾಘಾತವಾಗಿ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಮಾ(19) ಮೃತ ವಿದ್ಯಾರ್ಥಿನಿ. ಸುಮಾ ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದರು. ಅನಾರೋಗ್ಯ ಹಿನ್ನೆಲೆ ಆಗಸ್ಟ್ 9 ರಂದು ಸುಮಾ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ವಾಪಸ್ ಆಗಿದ್ದರು. ನಂತರ ಮತ್ತೆ ಆಗಸ್ಟ್.11 ರಂದು ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಆಗಸ್ಟ್ 13 ರ ಸಂಜೆ ಸುಮಾ ಮತ್ತೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಸ್ವಾತಂತ್ರ್ಯ ದಿನದ ಸೇನಾ ಪದಕಗಳನ್ನು ಪ್ರಕಟಿಸಲಾಗಿದೆ. ಮೇಜರ್ ವಿಕಾಸ್ ಬಿದಿರು, ಮೇಜರ್ ಮುಸ್ತಫಾ ಬೋಹ್ರಾ, ಹವಾಲ್ದಾರ್ ವಿವೇಕ್ ಸಿಂಗ್ ತೋಮರ್ ಮತ್ತು ರೈಫಲ್ಮ್ಯಾನ್ ಕುಲ್ ಭೂಷಣ್ ಮಂಡಾ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರ ಘೋಷಿಸಿತು. ಸೇನೆಯಿಂದ ಮೇಜರ್ ವಿಜಯ್ ವರ್ಮಾ, ಮೇಜರ್ ಸಚಿನ್ ನೇಗಿ, ಮೇಜರ್ ರಾಜೇಂದ್ರ ಪ್ರಸಾದ್ ಜಟ್ಟ್, ಮೇಜರ್ ರವೀಂದ್ರನ್ ಸಿಂಗ್ ರಾವತ್, ನಾಯಕ್ ಭೀಮ್ ಸಿಂಗ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಕಾನ್ ಸ್ಟೆಬಲ್ ಸಫೀವುಲ್ಲಾ ಖಾದಿರಿ ಮತ್ತು ಸಿಆರ್ಪಿಎಫ್ ಕಾನ್ ಸ್ಟೆಬಲ್ ಗಮಿತ್ ಮುಖೇಶ್ ಕುಮಾರ್ ಅವರಿಗೂ ಶೌರ್ಯ ಚಕ್ರ ನೀಡಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಸ್ತೆ, ಬಂದರು, ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಅಂತರಾಜ್ಯ ರಸ್ತೆಗಳನ್ನು ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಿ, ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ನುಡಿದರು. 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವ ಶುಭಾಶಯಗಳು. ಅನೇಕ ಮಹನೀಯರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ ಎಂದು ತಿಳಿಸಿದರು. ಕೃಷಿ, ತೋಟಗಾರಿಕೆ ಉತ್ತೇಜನಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುವುದು. ಕೌಶಲ್ಯಾಭಿವೃದ್ಧಿ ಯೋಜನೆ ಮೂಲಕ ಯುವಕರಿಗೆ ತರಬೇತಿ ನೀಡಲಾಗುವುದು. ಕೈಗಾರಿಕೆ ಕ್ಷೇತ್ರದಲ್ಲಿ ಮತ್ತಷ್ಟು ಉತ್ತೇಜನ ನೀಡಲಾಗುತ್ತೆ. ಮೈಸೂರು, ಮಂಗಳೂರು, ಧಾರವಾಡ-ಹುಬ್ಬಳ್ಳಿ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಕೈಗಾರಿಗಳ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಕೈಗಾರಿಕಾ ವಲಯಗಳ ನಡುವೆ ಸಂಪರ್ಕಿಸಲು ರಸ್ತೆ ನಿರ್ಮಾಣ ಮಾಡಲಾಗುವುದು. ಕೈಗಾರಿಕೆಗಳ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿದ್ಧರಾಮಯ್ಯ ಹೇಳಿದರು. ಭಾರತದ…
77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಸ್ತಾರವಾದ ಆಚರಣೆಗಳೊಂದಿಗೆ ಆಚರಿಸುತ್ತದೆ. ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆರಂಭವಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ ಘಾಟ್ ನಲ್ಲಿ ಪುಷ್ಪಾರ್ಚನೆ ಮಾಡಿದರು. ಕೆಂಪು ಕೋಟೆಗೆ ಆಗಮಿಸಿದ ಪ್ರಧಾನಿ ಗೌರವ ವಂದನೆ ಸ್ವೀಕರಿಸಿದರು. ಪ್ರಧಾನಿ ಧ್ವಜಾರೋಹಣ ನೆರವೇರಿಸಿದ ಬಳಿಕ ಉತ್ಸವಕ್ಕೆ ಚಾಲನೆ ದೊರೆಯಿತು. ಸುಮಾರು 1800 ಆಹ್ವಾನಿತ ಅತಿಥಿಗಳು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸುತ್ತಾರೆ. ಸುಮಾರು 50 ದಾದಿಯರು ಮತ್ತು ಅವರ ಕುಟುಂಬ ಸದಸ್ಯರನ್ನು ಅತಿಥಿಗಳಾಗಿ ಆಹ್ವಾನಿಸಲಾಗಿದೆ ಎಂಬುದು ಗಮನಾರ್ಹ. ಕೆಂಪುಕೋಟೆ ತಲುಪಿದ ಪ್ರಧಾನಿಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬರ ಮಾಡಿಕೊಂಡರು. ಪ್ರಧಾನಿಯವರನ್ನು ಸ್ವಾಗತಿಸಲು ಸೇನಾ ಮುಖ್ಯಸ್ಥರು ಕೂಡ ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ತ್ರಿವರ್ಣ ಪೇಟ ಧರಿಸಿ ಕೆಂಪು ಕೋಟೆಗೆ ಆಗಮಿಸಿದರು. ಪ್ರಧಾನಿಯವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ವಾಯುಪಡೆಯ ಹೆಲಿಕಾಪ್ಟರ್ ಕೆಂಪು ಕೋಟೆಯ ಮೇಲೆ ಪುಷ್ಪವೃಷ್ಟಿ ಮಾಡಿತು. ಕೆಂಪುಕೋಟೆಯಲ್ಲಿ ಲೋಪದೋಷದ ವ್ಯವಸ್ಥೆ ಮಾಡಲಾಗಿದೆ. ಕೆಂಪು ಕೋಟೆಯು…
ಮಳೆ ಕಡಿಮೆಯಾದ ಹಿನ್ನೆಲೆ ಟೊಮೆಟೊ ಬೆಲೆ ಇಳಿಕೆಯಾಗಿದೆ. ಬೆಲೆ ಇಳಿಕೆಯಾಗುತ್ತಿದ್ದಂತೆ ಗ್ರಾಹಕರು ಫುಲ್ ಖುಷ್ ಆಗಿದ್ದಾರೆ. ಆದ್ರೆ ಮತ್ತೊಂದು ಕಡೆ ಸದ್ದಿಲ್ಲದೆ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಕಳೆದ ಒಂದು ವಾರದಿಂದ ಈರುಳ್ಳಿ ಬೆಲೆಯಲ್ಲಿ ಕೆಜಿಗೆ ಸುಮಾರು 12-15 ರೂ ರಷ್ಟು ಏರಿಕೆ ಕಂಡು ಬಂದಿದೆ. ಮುಂಗಾರು ಮಳೆ ಕೈಕೊಟ್ಟು ಚಿತ್ರದುರ್ಗ, ದಾವಣಗೆರೆ ಹಾಗೂ ಕರ್ನಾಟಕದ ಇತರೆಡೆಯಿಂದ ಈರುಳ್ಳಿ ಲಭ್ಯವಾಗುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಸುಮಾರು 4,000 ಹೆಕ್ಟೇರ್ ನಲ್ಲಿ ಬೆಳೆ ಕೊರತೆ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA