Author: admin

ಸೌಂದರ್ಯವನ್ನು ಹೆಚ್ಚಿಸುವಲ್ಲಿ ತಲೆಕೂದಲು ಪ್ರಮುಖ ಪಾತ್ರವಹಿಸುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿ ಮತ್ತು ತಪ್ಪು ಅಭ್ಯಾಸಗಳಿಂದಾಗಿ ಅನೇಕರು ಕೂದಲಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅದರಲ್ಲಿಯೂ ಮುಖ್ಯವಾಗಿ ರಾತ್ರಿ ಹೊತ್ತು ಸ್ನಾನ ಮಾಡಿ, ಕೂದಲನ್ನು ಒಣಗಿಸದೇ ಹಾಗೆಯೇ ಒದ್ದೆ ಕೂದಲಿನಲ್ಲಿ ಮಲಗುವುದು ಕೂದಲಿನ ಆರೋಗ್ಯಕ್ಕೆ ಮಾರಕ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಎದುರಾಗುವ ಸಮಸ್ಯೆಗಳೇನು? 1. ಕೂದಲು ತುಂಡಾಗುವಿಕೆ: ಒದ್ದೆಯಾದ ಕೂದಲು ಒಣ ಕೂದಲಿಗಿಂತ ಹೆಚ್ಚು ದುರ್ಬಲವಾಗಿರುತ್ತದೆ. ಒದ್ದೆ ಕೂದಲಿನೊಂದಿಗೆ ಮಲಗಿದಾಗ, ರಾತ್ರಿಯಿಡೀ ಹೊರಳಾಡುವ ವೇಳೆ ಉಂಟಾಗುವ ಘರ್ಷಣೆಯಿಂದ ಕೂದಲು ಸುಲಭವಾಗಿ ಒಡೆಯುತ್ತದೆ. 2. ಕೂದಲ ತುದಿ ಸೀಳುವುದು (Split Ends): ಕೂದಲು ಒದ್ದೆಯಾಗಿದ್ದಾಗ ಹೆಚ್ಚು ಎಲಾಸ್ಟಿಕ್ ಗುಣ ಹೊಂದಿರುತ್ತದೆ. ಈ ವೇಳೆ ಅದು ಎಳೆದಂತಾಗಿ ಹೊರಪದರ ಹಾನಿಗೊಳಗಾಗುತ್ತದೆ, ಇದರಿಂದ ಕೂದಲಿನ ತುದಿ ಸೀಳಲು ಆರಂಭವಾಗುತ್ತದೆ. 3. ಸೋಂಕು ಮತ್ತು ತಲೆಹೊಟ್ಟು: ತೇವಾಂಶವಿರುವ ನೆತ್ತಿ ಮತ್ತು ದಿಂಬು ಬ್ಯಾಕ್ಟೀರಿಯಾ ಹಾಗೂ ಶಿಲೀಂಧ್ರಗಳ (Fungus) ಬೆಳವಣಿಗೆಗೆ ಹೇಳಿ ಮಾಡಿಸಿದ ಜಾಗ. ಇದು ತಲೆಹೊಟ್ಟು ಮತ್ತು…

Read More

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ರಸ್ತೆಯ ಚಿನ್ನೇಪಲ್ಲಿ ಕ್ರಾಸ್ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವವಿವಾಹಿತೆಯೊಬ್ಬರು ಮೃತಪಟ್ಟಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಬಾಗೇಪಲ್ಲಿ ತಾಲೂಕಿನ ಚೆಂಚುರಾಯನಪಲ್ಲಿ ಗ್ರಾಮದ ವರ್ಷಿಣಿ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಅವರ ಪತಿ ಸುರೇಂದ್ರ ಅವರನ್ನು ತಕ್ಷಣವೇ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೇವಲ ಮೂರು ತಿಂಗಳ ಹಿಂದೆಯಷ್ಟೇ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಘಟನೆಯ ವಿವರ: ದಂಪತಿಗಳು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ, ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ವರ್ಷಿಣಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸುರೇಂದ್ರ ಅವರು ಪ್ರಾಣಾಪಾಯದಿಂದ ಪಾರಾಗಿದ್ದರೂ, ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಬಾಗೇಪಲ್ಲಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸಂಭ್ರಮದಿಂದ ಇರಬೇಕಿದ್ದ ಕುಟುಂಬದಲ್ಲಿ ನವವಿವಾಹಿತೆಯ…

Read More

ಮಂಡ್ಯ: ವೀರಶೈವ ಲಿಂಗಾಯತ ಸಮಾಜವನ್ನು ರಾಜಕೀಯವಾಗಿ ಒಡೆಯುವ ಷಡ್ಯಂತ್ರಗಳು ನಡೆಯುತ್ತಿವೆ, ಆದರೆ ಯಾವುದೇ ಶಕ್ತಿಯಿಂದ ಈ ಸಮುದಾಯವನ್ನು ವಿಭಜಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಪಾದಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಆಯೋಜಿಸಲಾಗಿದ್ದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವದ ಐದನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಧಿಕಾರಕ್ಕಾಗಿ ‘ಕುರ್ಚಿ ಕಾಳಗ’ ನಡೆಯುತ್ತಿರುವ ಈ ಸಮಯದಲ್ಲಿ, ಧಾರ್ಮಿಕ ಕಾರ್ಯಕ್ರಮಕ್ಕೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು. ಸುತ್ತೂರು ಮಠದ ಪರಂಪರೆಯನ್ನು ಸ್ಮರಿಸಿದ ವಿಜಯೇಂದ್ರ, ಮಠವು ಅನ್ನ ಮತ್ತು ಅಕ್ಷರ ದಾಸೋಹದ ಮೂಲಕ ನೊಂದವರ ಬಾಳಿಗೆ ಬೆಳಕಾಗಿದೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಎಲ್ಲ ಮಠಗಳಿಗೆ ಅನುದಾನ ನೀಡಿ, ಬಸವಣ್ಣನವರ ‘ಅನುಭವ ಮಂಟಪ’ ನಿರ್ಮಾಣಕ್ಕೆ ಒತ್ತು ನೀಡಿದ್ದರು. ವೀರಶೈವ ಲಿಂಗಾಯತ ಸಮಾಜವು ಒಳಪಂಗಡಗಳನ್ನು ಮರೆತು ಒಂದಾಗಬೇಕು ಮತ್ತು ರಾಜ್ಯದ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸಬೇಕು ಎಂದು ಅವರು ಕರೆ…

Read More

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ಸುದ್ದಿ ನೀಡಿದ್ದಾರೆ. ಮುಂದಿನ ವಾರ ಅಂದರೆ ಸೋಮವಾರದಿಂದ ಶನಿವಾರದೊಳಗೆ ಯೋಜನೆಯ 24ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಹಣಕಾಸು ಇಲಾಖೆಯು ಈಗಾಗಲೇ ಹಣ ಬಿಡುಗಡೆಗೆ ಅನುಮೋದನೆ ನೀಡಿದೆ. ಇತ್ತೀಚಿನ ಅಧಿವೇಶನದಲ್ಲಿ ಯೋಜನೆಯ ವಿಳಂಬದ ಬಗ್ಗೆ ಚರ್ಚೆಗಳು ನಡೆದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ. ತಾಂತ್ರಿಕ ಕಾರಣಗಳಿಂದಾಗಿ ಅಥವಾ ದಾಖಲೆಗಳ ಕೊರತೆಯಿಂದ ಹಣ ಬಾರದೆ ಆತಂಕಗೊಂಡಿದ್ದ ಮಹಿಳೆಯರಿಗೆ ಈ ಸುದ್ದಿ ನೆಮ್ಮದಿ ತಂದಿದೆ. ಇದೇ ವೇಳೆ ಮೃತಪಟ್ಟವರ ಖಾತೆಗಳಿಗೆ ಹಣ ಜಮೆಯಾಗುತ್ತಿರುವ ಬಗ್ಗೆಯೂ ಸಚಿವರು ಪ್ರತಿಕ್ರಿಯಿಸಿದರು. ಮೃತಪಟ್ಟವರ ಖಾತೆಗಳಿಗೆ ಹಣ ಹೋಗುವುದನ್ನು ತಡೆಯಲು ಹೊಸ ಸಾಫ್ಟ್‌ವೇರ್ ಅಳವಡಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮರಣ ಪ್ರಮಾಣಪತ್ರಗಳ ಪರಿಶೀಲನೆ ನಡೆಸಲಾಗುತ್ತಿದೆ. ಒಂದು ವೇಳೆ ತಪ್ಪಾಗಿ ಹಣ ಸಂದಾಯವಾಗಿದ್ದರೆ, ಅದನ್ನು ವಾಪಸ್…

Read More

ಕೊರಟಗೆರೆ : ಪಟ್ಟಣದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಅದ್ದೂರಿ ಹಾಗೂ ವೈಭವೋಪೇತ ಶ್ರೀನಿವಾಸ ಕಲ್ಯಾಣೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಇದರಿಂದ ಕೊರಟಗೆರೆ ಧಾರ್ಮಿಕ–ಸಾಂಸ್ಕೃತಿಕ ಚಟುವಟಿಕೆಗಳ ನೂತನ ಅಧ್ಯಾಯಕ್ಕೆ ಸಾಕ್ಷಿಯಾಗಲಿದೆ ಎಂದು ಕನ್ನಿಕಾ ವಿದ್ಯಾಪೀಠ ಶಾಲೆಯ ಅಧ್ಯಕ್ಷ ಎಂ.ಜಿ. ಸುಧೀರ್ ಹೇಳಿದರು. ಪಟ್ಟಣದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕನ್ನಿಕಾ ವಿದ್ಯಾಪೀಠ ಶಾಲೆಯ ಆಡಳಿತ ಮಂಡಳಿಯ ಸಹಯೋಗದೊಂದಿಗೆ ಹಾಗೂ ಬೆಂಗಳೂರು ಶ್ರೀವಾರಿ ಫೌಂಡೇಶನ್‌ ನ ಆಶ್ರಯದಲ್ಲಿ, ಫೌಂಡೇಶನ್ ಅಧ್ಯಕ್ಷ ಎಸ್. ವೆಂಕಟೇಶಮೂರ್ತಿ ಅವರ ಸಾರಥ್ಯದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ತಿರುಪತಿಯಿಂದ ಆಗಮಿಸುವ ವಿಶೇಷ ಆಗಮಿಕ ವೃಂದದ ನೇತೃತ್ವದಲ್ಲಿ ಧಾರ್ಮಿಕ ವಿಧಿ–ವಿಧಾನಗಳೊಂದಿಗೆ ಕಲ್ಯಾಣೋತ್ಸವವನ್ನು ವೈಭವದಿಂದ ನೆರವೇರಿಸಲಾಗುವುದು ಎಂದರು. ಡಿ.25ರ ಗುರುವಾರ ಸಂಜೆ 4 ಗಂಟೆಗೆ ಪಟ್ಟಣದ ಎಂಜಿ ಪ್ಯಾಲೇಸ್‌ ನಲ್ಲಿ ಕಲ್ಯಾಣೋತ್ಸವ ನಡೆಯಲಿದ್ದು, ಶ್ರೀ ವೆಂಕಟೇಶ್ವರ ದೇವರಿಗೆ ಶ್ರೀದೇವಿ ಮತ್ತು ಭೂದೇವಿ ಸಮೇತ ಮಂಗಳಕರವಾಗಿ ಕಲ್ಯಾಣೋತ್ಸವ ನೆರವೇರಿಸಲಾಗುತ್ತದೆ. ರಾತ್ರಿ 9 ಗಂಟೆಯವರೆಗೆ…

Read More

ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯಿತಿಯಿಂದ ಮೇಲನಹಳ್ಳಿ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳೀಯ ಗ್ರಾಮಸ್ಥರು ಶನಿವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳ ಪರಿಶೀಲನೆಗಾಗಿ ಆಗಮಿಸಿದ್ದ ತಹಶೀಲ್ದಾರ್ ಎಂ. ಮಮತಾ ಅವರನ್ನು ತಡೆದ ಗ್ರಾಮಸ್ಥರು, ಯಾವುದೇ ಕಾರಣಕ್ಕೂ ಇಲ್ಲಿ ಘಟಕ ಸ್ಥಾಪನೆಗೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದರು. ಗ್ರಾಮಸ್ಥರ ಪ್ರಕಾರ, ಉದ್ದೇಶಿತ ಘಟಕವು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿದ್ದು, ಇದರಿಂದ ಜನ-ಜಾನುವಾರುಗಳಿಗೆ ಹಾಗೂ ವನ್ಯಜೀವಿಗಳಿಗೆ ತೊಂದರೆಯಾಗಲಿದೆ. ಈ ಪ್ರದೇಶದಲ್ಲಿ ಪುರಾತನ ಕಣಿವೆ ಭೂತನ ದೇಗುಲ ಹಾಗೂ ಕಲ್ಯಾಣಿಯಿದ್ದು, ಮಳೆಗಾಲದಲ್ಲಿ ತ್ಯಾಜ್ಯದ ಕಲುಷಿತ ನೀರು ಕಲ್ಯಾಣಿ ಸೇರುವುದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ಬರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಅಲ್ಲದೆ, ಪಟ್ಟಣದಿಂದ 25 ಕಿ.ಮೀ ದೂರದಲ್ಲಿ ಘಟಕ ಸ್ಥಾಪಿಸುವುದು ಸಾಗಾಣಿಕೆ ವೆಚ್ಚದ ದೃಷ್ಟಿಯಿಂದಲೂ ಸಮಂಜಸವಲ್ಲ ಎಂದು ವಾದಿಸಿದರು. ನೂರಾರು ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಒಕ್ಕೊರಲಿನಿಂದ ಪ್ರತಿಭಟಿಸಿದ ಹಿನ್ನೆಲೆಯಲ್ಲಿ, ತಹಶೀಲ್ದಾರ್ ಗ್ರಾಮಸ್ಥರ ಮನವೊಲಿಸಿ ಅಂತಿಮವಾಗಿ ಸ್ಥಳ ಪರಿಶೀಲನೆ ನಡೆಸಿದರು. ಕಂದಾಯ ಹಾಗೂ ಪಟ್ಟಣ…

Read More

ಬೆಂಗಳೂರು: ಕರ್ನಾಟಕ ಒಲಂಪಿಕ್ ಸಂಸ್ಥೆ (KOA) ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ‘ಕರ್ನಾಟಕ ಒಲಂಪಿಕ್ 2025’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಕ್ರೀಡಾ ಸಾಧಕರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ನೀಡುತ್ತಿರುವ ಅಭೂತಪೂರ್ವ ಬೆಂಬಲದ ಕುರಿತು ಮಾಹಿತಿ ಹಂಚಿಕೊಂಡರು. ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ., ಬೆಳ್ಳಿ ಪದಕಕ್ಕೆ 4 ಕೋಟಿ ರೂ. ಹಾಗೂ ಕಂಚಿನ ಪದಕಕ್ಕೆ 3 ಕೋಟಿ ರೂ. ನಗದು ಬಹುಮಾನವನ್ನು ಸರ್ಕಾರ ಘೋಷಿಸಿದೆ. ಕ್ರೀಡಾಪಟುಗಳ ಭವಿಷ್ಯದ ದೃಷ್ಟಿಯಿಂದ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ಶೇ. 3ರಷ್ಟು ಹಾಗೂ ಇತರ ಇಲಾಖೆಗಳಲ್ಲಿ ಶೇ. 2ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇದರ ನೇಮಕಾತಿಗೆ ಸಂಬಂಧಿಸಿದ ಸರ್ಕಾರಿ ಆದೇಶವು ಜನವರಿಯಲ್ಲಿ ಹೊರಬೀಳಲಿದೆ ಎಂದು ತಿಳಿಸಿದರು. 1958ರಲ್ಲಿ ಸ್ಥಾಪನೆಯಾದ ಕರ್ನಾಟಕ ಒಲಂಪಿಕ್ ಸಂಸ್ಥೆಯು ಎಂ.ಎಲ್.ಸಿ ಗೋವಿಂದರಾಜ್ ಅವರ ಅಧ್ಯಕ್ಷತೆಯಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ.…

Read More

ಪಾವಗಡ: ದೇಶಾದ್ಯಂತ ಭಾನುವಾರದಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಐದು ವರ್ಷದೊಳಗಿನ ಸುಮಾರು 17,000 ಸಾವಿರ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ ಎಂಬ ಮಾಹಿತಿ ತಾಲ್ಲೂಕು ವೈದ್ಯಾಧಿಕಾರಿ ಕಛೇರಿಯಿಂದ ತಿಳಿದು ಬಂದಿದೆ. ಭಾರತವು ಈಗಾಗಲೇ ಪೋಲಿಯೋ ಮುಕ್ತ ದೇಶವಾಗಿದ್ದರೂ, ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳಲ್ಲಿ ಪೋಲಿಯೋ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಅಭಿಯಾನವನ್ನು ಮುಂದುವರೆಸಲಾಗುತ್ತಿದೆ. ಬೂತ್ ಮತ್ತು ಮನೆ ಭೇಟಿ: ಡಿಸೆಂಬರ್ 21ರಂದು 174 ಲಸಿಕಾ ಕೇಂದ್ರಗಳಲ್ಲಿ (ಬೂತ್‌ ಗಳಲ್ಲಿ) ಹನಿ ಹಾಕಲಾಗಿದೆ. ನಂತರದ 2–3 ದಿನಗಳ ಕಾಲ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಬಿಟ್ಟುಹೋದ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. 360 ಜನ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ, 17,286 ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ಗುರಿಯಿದೆ, ಆರೋಗ್ಯ ಇಲಾಖೆ ಬಳಿ 19,000 ಮಕ್ಕಳಿಗೆ ಆಗುವಷ್ಟು ಲಸಿಕೆ ಲಭ್ಯವಿದೆ. ವರದಿ: ನಂದೀಶ್ ನಾಯ್ಕ , ಪಾವಗಡ ನಮ್ಮತುಮಕೂರಿನ ಕ್ಷಣ…

Read More

ಬೀದರ್: ಜಿಲ್ಲೆಯ ಔರಾದ್ (ಬಿ) ತಾಲೂಕಿನ ಸಂತಪುರ ಗ್ರಾಮದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಡಾ. ಫೈಸಲ್ ಉಜೈರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಿಸ್ಟರ್ ಸಂಗೀತಾ, ಆಶಾ ಕಾರ್ಯಕರ್ತೆ ಶ್ರೀದೇವಿ, ಸಾಮಾಜಿಕ ಕಾರ್ಯಕರ್ತ ತುಕಾರಾಮ ಹಸನ್ಮುಖಿ, ಪೊಲೀಸ್ ಸಿಬ್ಬಂದಿಗಳಾದ ಪ್ರಕಾಶ್ ಹಾಗೂ ಅಶ್ವಿನಿ, ಮದುಕರ ಸೇರಿದಂತೆ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು. ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಕರೆ ನೀಡಲಾಯಿತು. ವರದಿ: ಅರವಿಂದ ಮಲ್ಲೀಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ನವದೆಹಲಿ: ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI), ಈ ವರದಿಗಳು ಸಂಪೂರ್ಣವಾಗಿ ‘ಅವೈಜ್ಞಾನಿಕ ಮತ್ತು ಆಧಾರರಹಿತ’ ಎಂದು ಹೇಳಿದೆ. ಇತ್ತೀಚೆಗೆ ‘ಎಗ್ಗೋಜ್ ನ್ಯೂಟ್ರಿಷನ್’ ಕಂಪನಿಯ ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿವೆ ಎಂಬ ಸುದ್ದಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಾಧಿಕಾರವು, ದೇಶದಲ್ಲಿ ಲಭ್ಯವಿರುವ ಮೊಟ್ಟೆಗಳು ಸೇವನೆಗೆ ಸುರಕ್ಷಿತವಾಗಿವೆ ಎಂದು ತಿಳಿಸಿದೆ. ಆಹಾರ ಸುರಕ್ಷತಾ ನಿಯಮ 2011ರ ಅಡಿಯಲ್ಲಿ ಕೋಳಿ ಮತ್ತು ಮೊಟ್ಟೆಗಳ ಉತ್ಪಾದನೆಯಲ್ಲಿ ಕ್ಯಾನ್ಸರ್ ಕಾರಕ ಎನ್ನಲಾದ ‘ನೈಟ್ರೋಫ್ಯೂರಾನ್’ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಒಂದೆರಡು ಅಪೂರ್ಣ ಸಂಶೋಧನೆಗಳನ್ನು ಇಟ್ಟುಕೊಂಡು ಮೊಟ್ಟೆ ಅಸುರಕ್ಷಿತ ಎಂದು ನಿರ್ಧರಿಸುವುದು ಸರಿಯಲ್ಲ. ಮೊಟ್ಟೆಯು ಪೌಷ್ಟಿಕಾಂಶಯುತ ಮತ್ತು ಸಮತೋಲಿತ ಆಹಾರದ ಭಾಗವಾಗಿದೆ. ಹೀಗಾಗಿ ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳನ್ನು ನಂಬಬಾರದು ಮತ್ತು ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು ಎಂದು ಎಫ್‌ಎಸ್‌ಎಸ್‌ಎಐ…

Read More