Subscribe to Updates
Get the latest creative news from FooBar about art, design and business.
- ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
- ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
- ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
- ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
- ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
- ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
- ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
Author: admin
ತುಮಕೂರು: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸಂಬಂಧಿಸಿದಂತೆ ಹುಳು ಬಿದ್ದ ಕಳಪೆ ಗುಣಮಟ್ಟದ ಬೇಳೆಯನ್ನು ಪೂರೈಕೆ ಮಾಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿ, ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್ ಗೌಡ ಅವರು ವಿಧಾನಸಭೆಯಲ್ಲಿ ಸರ್ಕಾರದ ಗಮನ ಸೆಳೆದಿದ್ದಾರೆ. ಕಳಪೆ ಗುಣಮಟ್ಟ: ಶಾಲೆಗಳಲ್ಲಿ ಮಕ್ಕಳಿಗೆ ನೀಡುವ ಬಿಸಿಯೂಟಕ್ಕೆ ಅತ್ಯಂತ ಕಳಪೆ ಮತ್ತು ಹುಳು ಹಿಡಿದಿರುವ ತೊಗರಿ ಬೇಳೆಯನ್ನು ಪೂರೈಸಲಾಗುತ್ತಿದೆ. ಈ ಬೇಳೆಯು ಹಸು ಅಥವಾ ಹಂದಿಗಳೂ ತಿನ್ನದಷ್ಟು ಕಳಪೆಯಾಗಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದರ ವ್ಯತ್ಯಾಸದ ಸಂಶಯ: ಪ್ರಸ್ತುತ ಮಾರುಕಟ್ಟೆಯಲ್ಲಿ ತೊಗರಿ ಬೇಳೆ ಕೆ.ಜಿ.ಗೆ 93 ರೂ. ಇದೆ. ಆದರೆ ಸರ್ಕಾರಕ್ಕೆ ಕೇವಲ 63 ರೂ.ಗೆ ಪೂರೈಕೆ ಮಾಡಲಾಗುತ್ತಿದೆ. ಇಷ್ಟು ಕಡಿಮೆ ದರಕ್ಕೆ ಗುಣಮಟ್ಟದ ಬೇಳೆ ನೀಡಲು ಹೇಗೆ ಸಾಧ್ಯ? ಇದು ಭ್ರಷ್ಟಾಚಾರದ ಸಂಕೇತ ಎಂದು ಅವರು ಪ್ರಶ್ನಿಸಿದ್ದಾರೆ. ಅಧಿಕಾರಿಗಳ ಹೊಣೆಗಾರಿಕೆ: ಈ ಹಗರಣದಲ್ಲಿ ಅಕ್ಷರ ದಾಸೋಹ ಸಮಿತಿಯ ಆಯುಕ್ತರು ಮತ್ತು ಪಿ.ಎಂ. ಪೋಷಣ್ ಯೋಜನೆಯ ನಿರ್ದೇಶಕರು ನೇರ ಹೊಣೆಗಾರರು. ಮಾದರಿ ತೋರಿಸುವಾಗ…
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಕಂದೀಕೆರೆ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನದ ಸಮೀಪವಿರುವ ಅಂಗನವಾಡಿಯಲ್ಲಿ ನಾಲ್ಕು ವರ್ಷದ ಬಾಲಕನಿಗೆ ಸಣ್ಣ ವಿಚಾರಕ್ಕಾಗಿ ಸಹಾಯಕಿ ಕೋಲಿನಿಂದ ಬಾಸುಂಡೆ ಬರುವಂತೆ ಹೊಡೆದಿರುವ ಘಟನೆ ಶುಕ್ರವಾರ ನಡೆದಿದೆ. ಘಟನೆಯ ವಿವರ: ಅಂಗನವಾಡಿಗೆ ತೆರಳಿದ್ದ ಮಗುವಿನ ಕೈಮೇಲೆ ಗಂಭೀರವಾದ ಪೆಟ್ಟಿನ ಗುರುತುಗಳನ್ನು ಕಂಡ ಪೋಷಕರು ಮತ್ತು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವಿಗೆ ಕ್ರೂರವಾಗಿ ಶಿಕ್ಷೆ ನೀಡಿರುವ ಸಹಾಯಕಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅಧಿಕಾರಿಗಳ ಪ್ರತಿಕ್ರಿಯೆ: ಈ ಕುರಿತು ಪ್ರತಿಕ್ರಿಯಿಸಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ (CDPO) ಹೊನ್ನಪ್ಪ ಅವರು, “ಅಂಗನವಾಡಿ ಸಹಾಯಕಿಗೆ ಅನಾರೋಗ್ಯವಿದ್ದ ಕಾರಣ ಅವರ ಪರವಾಗಿ ಬೇರೊಬ್ಬರು ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಮೇಲಧಿಕಾರಿಗಳ ಅನುಮತಿ ಇಲ್ಲದೆ ಬೇರೆಯವರನ್ನು ಕೆಲಸಕ್ಕೆ ನೇಮಿಸಿಕೊಂಡಿರುವುದು ನಿಯಮಬಾಹಿರ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ. ಅಲ್ಲದೆ, ಮಗುವಿನ ಚಿಕಿತ್ಸಾ ವೆಚ್ಚವನ್ನು ಸಂಬಂಧಪಟ್ಟ ಅಂಗನವಾಡಿ ಕಾರ್ಯಕರ್ತೆಯೇ ಭರಿಸಬೇಕು ಎಂದು ಅವರು ಸೂಚಿಸಿದ್ದಾರೆ. ಶನಿವಾರ ಕಚೇರಿಯ ಮೇಲ್ವಿಚಾರಕರು…
ಪಾವಗಡ: ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳ ಅವಧಿಯಲ್ಲಿ ಎರಡು ಪ್ರತ್ಯೇಕ ಪೋಕ್ಸೋ (POCSO) ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲ ಪ್ರಕರಣ: 3ನೇ ತರಗತಿ ಬಾಲಕಿಯ ಮೇಲೆ ದೌರ್ಜನ್ಯ ತಾಲ್ಲೂಕಿನ ಗ್ರಾಮವೊಂದರ 3ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮನು (23) ಎಂಬ ಯುವಕನನ್ನು ಅರಸೀಕೆರೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಸಿಹಿ ತಿನಿಸು ಕೊಡುವುದಾಗಿ ನಂಬಿಸಿ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಬಾಲಕಿಯ ಕಿರುಚಾಟ ಕೇಳಿದ ನೆರೆಹೊರೆಯವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡನೇ ಪ್ರಕರಣ: 8ನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ ಮತ್ತೊಂದು ಪ್ರಕರಣದಲ್ಲಿ, 8ನೇ ತರಗತಿಯ ವಿದ್ಯಾರ್ಥಿನಿಗೆ ಮಾನಸಿಕ ಕಿರುಕುಳ ನೀಡಿ ತನ್ನೊಂದಿಗೆ ಮಾತನಾಡುವಂತೆ ಒತ್ತಾಯಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಈ ಹಿಂದೆ ಈ ಯುವಕನಿಗೆ ಪೋಷಕರು ಮತ್ತು ಶಿಕ್ಷಕರು ಎಚ್ಚರಿಕೆ ನೀಡಿದ್ದರೂ…
ತುಮಕೂರು: ಸೈಬರ್ ವಂಚಕರ ಜಾಲಕ್ಕೆ ಬಿದ್ದು ಜಿಲ್ಲೆಯ ನಾಗವಲ್ಲಿಯ ವ್ಯಕ್ತಿಯೊಬ್ಬರು ಬರೋಬ್ಬರಿ 7.85 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಆರ್ಟಿಒ (RTO) ಹೆಸರಿನಲ್ಲಿ ಬಂದ ನಕಲಿ ಎಪಿಕೆ (APK) ಫೈಲ್ ಕ್ಲಿಕ್ ಮಾಡಿದ್ದೇ ಇಷ್ಟೆಲ್ಲಾ ಅವಾಂತರಕ್ಕೆ ಕಾರಣವಾಗಿದೆ. ನಡೆದದ್ದೇನು? ನಾಗವಲ್ಲಿಯ ನಿವಾಸಿ ರಖೀಬ್ ಅಹ್ಮದ್ ಖಾನ್ ಎಂಬುವವರಿಗೆ ಜನವರಿ 23ರಂದು ಅಪರಿಚಿತ ಸಂಖ್ಯೆಯೊಂದರಿಂದ ‘ಆರ್ಟಿಒ ಚಲನ್’ ಹೆಸರಿನ ಲಿಂಕ್ ಇರುವ ಎಪಿಕೆ ಫೈಲ್ ಬಂದಿತ್ತು. ಆರ್ಟಿಒಗೆ ಸಂಬಂಧಿಸಿದ್ದು ಎಂದು ನಂಬಿದ ರಖೀಬ್ ಅದನ್ನು ಕ್ಲಿಕ್ ಮಾಡಿದ್ದಾರೆ. ಅಂದೇ ರಾತ್ರಿ ಅವರ ವಾಟ್ಸಾಪ್ ಅಪ್ಡೇಟ್ ಕೇಳಿದ್ದು, ಒಟಿಪಿ (OTP) ಪಡೆದು ಅಪ್ಡೇಟ್ ಮಾಡಿದ್ದಾರೆ. ಈ ವೇಳೆ 3-4 ಬಾರಿ ಒಟಿಪಿ ಬಂದಿದ್ದರೂ, ಅವರು ಯಾರೊಂದಿಗೂ ಅದನ್ನು ಹಂಚಿಕೊಂಡಿರಲಿಲ್ಲ. ಹಂತ ಹಂತವಾಗಿ ಹಣ ವರ್ಗಾವಣೆ: ಯಾರೊಂದಿಗೂ ಒಟಿಪಿ ಹಂಚಿಕೊಳ್ಳದಿದ್ದರೂ, ಸೈಬರ್ ಖದೀಮರು ರಖೀಬ್ ಅವರ ಮೊಬೈಲ್ ಅನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು. ಜನವರಿ 27ರಂದು ಅವರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು…
ಸಾಮಾನ್ಯವಾಗಿ ನಾವು ಮಾಹಿತಿ (Data) ಸ್ಟೋರೇಜ್ ಮಾಡಲು ಮತ್ತು ಮಾಹಿತಿ ತಿದ್ದುಪಡಿ, ಡಿಲೀಟ್, ವಿವಿಧ ಅಪ್ಲಿಕೇಷನ್ ಬಳಸಿ ವಿವಿಧ ಕಾರ್ಯ ನಿರ್ವಹಿಸಲು ಹಾರ್ಡ್ ಡಿಸ್ಕ್ ಬಳಸುತ್ತೇವೆ ಎಂದು ತಿಳಿದುಕೊಂಡಿದ್ದೇವೆ ಅಷ್ಟೇ ಆದರೆ ಅದು ಹೇಗೆ ನಿರ್ಮಾಣ ಆಗಿರುತ್ತದೆ ಮತ್ತು ಹೇಗೆ ಕೆಲಸ ಮಾಡುತ್ತದೆ ಎಂದು ಬಹುಶಃ (ಸಾಮಾನ್ಯ ಜನ) ಯೋಚಿಸಿರುವುದಿಲ್ಲ, ಹಾಗೆ ಯೋಚಿಸಿದ್ದರೂ ಕೆಲವು ಮಂದಿ ಇರಬಹುದು. ನಾನು ಇಲ್ಲಿ ಅದರ ನಿರ್ಮಾಣ ಮತ್ತು ಕಾರ್ಯನಿರ್ವಹಿಸುವ ವಿಧಾನವನ್ನು ಅತ್ಯಂತ ಸರಳವಾಗಿ ವಿವರಿಸಲು ಪ್ರಯತ್ನಿಸಿದ್ದೇನೆ. ಹಾರ್ಡ್ ಡಿಸ್ಕ್ ಬಹುಶಃ ಇದರ ಬಳಕೆ ಇರದ ಕ್ಷೇತ್ರವೇ ಇಲ್ಲ ಎನ್ನಬಹುದು. ಮನೆಯಲ್ಲಿ ಅಧ್ಯಯನದ ದೃಷ್ಟಿಯಿಂದ ಡೆಸ್ಕ್ ಟಾಪ್ ಅಥವಾ ಲ್ಯಾಪ್ ಟಾಪ್ ನಿಂದ ಹಿಡಿದು, ವಾಣಿಜ್ಯ, ವಿಜ್ಞಾನ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಇದರ ಬಳಕೆ ಇದೆ. ನಾವು ಸಾವಿರಾರು ವರ್ಷಗಳ ಹಿಂದೆ ನಮ್ಮ ಋಷಿ ಮುನಿಗಳು ರಾಮಾಯಣ, ಮಹಾಭಾರತ ಮತ್ತು ವೇದೋಪನಿಷತ್ತುಗಳನ್ನು ದೇವ ಭಾಷೆ ಅಥವಾ ಸಂಸ್ಕೃತ ಭಾಷೆಯ ಸಾವಿರ ಸಾವಿರ ಪುಟಗಳಷ್ಟು ಬರೆದಿಡುವ…
ತುಮಕೂರು: ಜಿಲ್ಲೆಯ ಕೊಡಿಗೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆ: ಜನವರಿ 16, 2026 ರಂದು ನಿಟ್ರಹಳ್ಳಿಯ ನಿವಾಸಿಯಾದ ವಿನಯ್ ಕುಮಾರ್ ಎನ್.ಕೆ. ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು. ಅವರ ಗೋದಾಮಿನಲ್ಲಿದ್ದ 265 ಅಡಿಕೆ ಚೀಲಗಳಲ್ಲಿ ಸುಮಾರು 40 ಚೀಲ (ಅಂದಾಜು 19 ಕ್ವಿಂಟಾಲ್) ಅಡಿಕೆಯನ್ನು ಕಿಡಿಗೇಡಿಗಳು ತಡರಾತ್ರಿ ಕಳ್ಳತನ ಮಾಡಿದ್ದರು. ಈ ಅಡಿಕೆಯ ಮೌಲ್ಯ ಸುಮಾರು 9,50,000 ರೂ. ಎಂದು ಅಂದಾಜಿಸಲಾಗಿತ್ತು. ಈ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾ ತಂಡ ಮತ್ತು ಕಾರ್ಯಾಚರಣೆ: ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. (IPS) ರವರ ಮಾರ್ಗದರ್ಶನದಲ್ಲಿ, ಮಧುಗಿರಿ ಉಪ ವಿಭಾಗದ ಡಿವೈಎಸ್ಪಿ ಮಂಜುನಾಥ್ ಜಿ ಹಾಗೂ ಮಧುಗಿರಿ ವೃತ್ತದ ಸಿಪಿಐ ಹನುಮಂತರಾಯಪ್ಪ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಪಿಎಸ್ಐ ಶ್ರೀನಿವಾಸ ಪ್ರಸಾದ್…
ತುಮಕೂರು: ಲಂಚ ಪಡೆಯುತ್ತಿದ್ದ ವೇಳೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಚೇತನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವರದಿಗಳ ಪ್ರಕಾರ, ಠಾಣೆಯ ವಶದಲ್ಲಿ ಇದ್ದ ವಾಹನ ಒಂದನ್ನು ಬಿಡುಗಡೆಗಾಗಿ ಪೊಲೀಸ್ ಸಬ್ ಇನ್ಸೆಕ್ಟರ್ ಚೇತನ್ ರವರು ಬೆಂಗಳೂರು ಮೂಲದ ವಕೀಲರೊಬ್ಬರಿಗೆ 40,000 ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಾಗಾಗಿ ವಕೀಲರು ಲೋಕಾಯುಕ್ತ ಪೊಲೀಸರ ಮೊರೆ ಹೋದ ಕಾರಣ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರವರು ಲೋಕಾಯುಕ್ತ ಟ್ರ್ಯಾಪ್ ಬಿದ್ದಿದ್ದಾರೆ. ಕಳೆದ ರಾತ್ರಿ 11:30 ಸಂದರ್ಭದಲ್ಲಿ ತುಮಕೂರಿನ ಕ್ಯಾತ್ಸಂದ್ರ ಬಳಿಯ ನಮಸ್ತೆ ತುಮಕೂರು ಹೊಟೇಲ್ ಬಳಿ ರೂ. 40,000 ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಇದೇ ಸಂದರ್ಭದಲ್ಲಿ ಪಿಎಸ್ ಐ ಚೇತನ್ ಹಾಗೂ ಹೋಟೆಲ್ ನ ಸಿಬ್ಬಂದಿ ಒಬ್ಬರು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ತುಮಕೂರು ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಬೆಂಗಳೂರು: ಸ್ಯಾಂಡಲ್ ವುಡ್ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಶೀಘ್ರದಲ್ಲೇ ತಂದೆಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ. ಪತ್ನಿ ಧನ್ಯತಾ ಅವರೊಂದಿಗೆ ಜೀವನದ ಹೊಸ ಹಂತಕ್ಕೆ ಕಾಲಿಡುತ್ತಿರುವ ನಟ, ತಮ್ಮ ಈ ಖುಷಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಧನಂಜಯ್, ತಾನು ತಂದೆಯಾಗುತ್ತಿರುವ ವಿಷಯ ಇನ್ಸ್ಟಾಗ್ರಾಮ್ಗೂ (Instagram) ತಿಳಿದಂತಿದೆ ಎಂದು ತಮಾಷೆಯಾಗಿ ಹೇಳಿದ್ದಾರೆ. “ಈಗ ಇನ್ಸ್ಟಾಗ್ರಾಮ್ ಓಪನ್ ಮಾಡಿದರೆ ಸಾಕು, ಮಗುವಿಗೆ ಸಂಬಂಧಿಸಿದ ರೀಲ್ಸ್ಗಳೇ ಬರುತ್ತವೆ. ನಾನು ತಂದೆಯಾಗುತ್ತಿರುವ ವಿಚಾರ ಆಲ್ಗರಿದಮ್ಗೆ ಕೂಡ ಗೊತ್ತಾಗಿಬಿಟ್ಟಿದೆ” ಎಂದು ನಗುತ್ತಾ ತಿಳಿಸಿದ್ದಾರೆ. ಈ ಹೊಸ ಜವಾಬ್ದಾರಿ ಮತ್ತು ಜೀವನದ ಸುಂದರ ಬದಲಾವಣೆಯನ್ನು ಬಹಳ ಖುಷಿಯಿಂದ ಎಂಜಾಯ್ ಮಾಡುತ್ತಿರುವುದಾಗಿ ಅವರು ಹೇಳಿದ್ದಾರೆ. ಧನಂಜಯ್ ಮತ್ತು ಧನ್ಯತಾ ದಂಪತಿಗಳ ಈ ಸಂತಸದ ಸುದ್ದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಮತ್ತು ಸಿನಿ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಧನಂಜಯ್ ಅವರು ಸದ್ಯಕ್ಕೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ವೈಯಕ್ತಿಕ ಜೀವನದ ಈ ಸುಂದರ ಕ್ಷಣಗಳನ್ನು ಸಂಭ್ರಮಿಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಬೆಂಗಳೂರು: ರಾಜ್ಯದ ರೈತರಿಗೆ ಹಾಗೂ ಭೂ ಮಾಲೀಕರಿಗೆ ಕಂದಾಯ ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಜಮೀನಿನ ಮೂಲ ಮಾಲೀಕರು ಮೃತಪಟ್ಟ ಸಂದರ್ಭದಲ್ಲಿ ಅವರ ವಾರಸುದಾರರ ಹೆಸರಿಗೆ ಖಾತೆ ಬದಲಾವಣೆ ಮಾಡುವ ‘ಪೌತಿ ಖಾತೆ’ ಪ್ರಕ್ರಿಯೆಯನ್ನು ಸರ್ಕಾರ ಈಗ ಅತ್ಯಂತ ಸರಳಗೊಳಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯು ‘ಇ-ಪೌತಿ’ (e-Pouthi) ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಮನೆ ಬಾಗಿಲಿಗೆ ಸೇವೆ: ಇನ್ಮುಂದೆ ಪೌತಿ ಖಾತೆ ಮಾಡಿಸಲು ರೈತರು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ಗ್ರಾಮ ಆಡಳಿತಾಧಿಕಾರಿಗಳೇ (VA) ನೇರವಾಗಿ ರೈತರ ಮನೆಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಸಂಗ್ರಹಿಸಲಿದ್ದಾರೆ. ಆಧಾರ್ ಜೋಡಣೆ ಕಡ್ಡಾಯ: ಪಹಣಿಗಳಿಗೆ (RTC) ಆಧಾರ್ ಸಂಖ್ಯೆಯನ್ನು ಜೋಡಿಸುವ ಮೂಲಕ ಮೃತ ಮಾಲೀಕರ ಜಮೀನನ್ನು ಸುಲಭವಾಗಿ ಗುರುತಿಸಿ, ವಾರಸುದಾರರಿಗೆ ಹಕ್ಕು ವರ್ಗಾವಣೆ ಮಾಡಲಾಗುತ್ತಿದೆ. ದಾಖಲೆಗಳ ಸರಳೀಕರಣ: ಮರಣ ಪ್ರಮಾಣಪತ್ರ ಪಡೆಯಲು ವಿಳಂಬವಾಗುವ ಸಂದರ್ಭದಲ್ಲಿ, ವಾರಸುದಾರರ ಅಫಿಡವಿಟ್ ಮತ್ತು ಗ್ರಾಮ ಆಡಳಿತಾಧಿಕಾರಿಯವರ ‘ಮಹಜರ್’ ವರದಿ ಆಧಾರದ ಮೇಲೆ ಪೌತಿ ಖಾತೆ ನೀಡಲು ಅವಕಾಶ ನೀಡಲಾಗಿದೆ. ಇ-ಪೌತಿ…
ಬೆಂಗಳೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು, ಗುರುವಾರ ಸಂಜೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆ: ಹಣ ಹೂಡಿಕೆ ವಂಚನೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಆರೋಪಿಗಳಿಗೆ ನೆರವು ನೀಡಲು ಮತ್ತು ಅವರನ್ನು ಬಂಧಿಸದಿರಲು ಇನ್ಸ್ಪೆಕ್ಟರ್ ಗೋವಿಂದರಾಜು ಒಟ್ಟು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ ಈಗಾಗಲೇ 1 ಲಕ್ಷ ರೂಪಾಯಿಗಳನ್ನು ಪಡೆದಿದ್ದ ಅವರು, ಬಾಕಿ ಇರುವ 4 ಲಕ್ಷ ರೂಪಾಯಿಗಳನ್ನು ಸ್ವೀಕರಿಸಲು ಮೈಸೂರು ರಸ್ತೆಯ ಸಿಎಆರ್ (CAR) ಮೈದಾನಕ್ಕೆ ಬಂದಿದ್ದರು. ಲೋಕಾಯುಕ್ತ ಟ್ರ್ಯಾಪ್: ದೂರುದಾರರಿಂದ ಹಣ ಪಡೆಯುತ್ತಿದ್ದಂತೆಯೇ ಸಂಚು ರೂಪಿಸಿದ್ದ ಲೋಕಾಯುಕ್ತ ಅಧಿಕಾರಿಗಳು ಗೋವಿಂದರಾಜು ಅವರನ್ನು ಸುತ್ತುವರಿದು ವಶಕ್ಕೆ ಪಡೆದರು. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜು ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಮೈದಾನದಲ್ಲಿ ಹೈಡ್ರಾಮಾ: ಲೋಕಾಯುಕ್ತ ಪೊಲೀಸರು ತನ್ನನ್ನು ಹಿಡಿಯುತ್ತಿದ್ದಂತೆಯೇ ಇನ್ಸ್ಪೆಕ್ಟರ್ ಗೋವಿಂದರಾಜು ಮೈದಾನದಲ್ಲೇ ರಂಪಾಟ…