Subscribe to Updates
Get the latest creative news from FooBar about art, design and business.
- ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ
- ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ
- ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ
- ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
- ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
- ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
- ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
- ತುಮಕೂರು: ಆನ್ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
Author: admin
ಬಿಬಿಎಂಪಿಯ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣ ಸಂಬಂಧ ಇಬ್ಬರು ಸಿಬ್ಬಂದಿಯನ್ನು ಹಲಸೂರು ಗೇಟ್ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದವರನ್ನ ಖುದ್ದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಬಿಬಿಎಂಪಿ ಅಧಿಕಾರಿಗಳು ತಡರಾತ್ರಿ ದೂರು ನೀಡಿದ್ದರು. ಅದರ ಅನ್ವಯ ನಿರ್ಲಕ್ಷ್ಯತನ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ. ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಬಿಟುಮಿನ್ ಏಕಾಗ್ರತೆ ಹಾಗೂ ಶಕ್ತಿಯ ಮಟ್ಟವನ್ನ ಪರೀಕ್ಷಿಸುವಾಗ ಬೆಂಜಿನ್ ಬಳಕೆ ಮಾಡುತ್ತಾರೆ. ಆ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡು ಅವಘಡಕ್ಕೆ ಕಾರಣವಾಗಿರಬಹುದು ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ತಂಡ ಸಹ ಪರಿಶೀಲನೆ ನಡೆಸಿದೆ. ವರದಿ ಬಂದ ನಂತರ ನಿಖರವಾದ ಕಾರಣ ತಿಳಿದು ಬರಲಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಹೆಸರಿನಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿಸಿದ್ದ ಮೂವರು ಆರೋಪಿಗಳನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವೆಂಕಟೇಶ್, ಧರಣೇಶ್ ಹಾಗೂ ಸಿದ್ದಾರ್ಥ್ ಎಂದು ಗುರುತಿಸಲಾಗಿದೆ. ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿಸಿ, ಅದರ ಮೂಲಕ ಕಾಂಗ್ರೆಸ್ ಪಕ್ಷ ಹಾಗೂ ಪಕ್ಷದ ನಾಯಕರಿಗೆ ಅಗೌರವ ತರುವಂತಹ ಹೇಳಿಕೆಗಳನ್ನು ಪ್ರಕಟಿಸಲಾಗುತ್ತಿದೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯ ಶತಭಾಷ್ ಶಿವಣ್ಣ ಕಳೆದ ಫೆಬ್ರವರಿಯಲ್ಲಿ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಅಂದಿನ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯವರಿಗೂ ದೂರು ಸಲ್ಲಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದರು. ದೂರಿನನ್ವಯ ಐಟಿ ಆ್ಯಕ್ಟ್ ಹಾಗೂ ಐಪಿಸಿ ಸೆಕ್ಷನ್ನಡಿ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರ್ ಕೈಂ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಅವರಲ್ಲಿ ಮೂವರ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದ್ದು, ಠಾಣಾ ಜಾಮೀನಿನ ಆಧಾರದಲ್ಲಿ ನೋಟಿಸ್ ನೀಡಿ…
ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಹಣ ವಸೂಲಿ ಮಾಡಿದ ಆರೋಪದಡಿ ಕೊಡಿಗೆಹಳ್ಳಿ ಠಾಣೆ ಪೊಲೀಸರು ಕನ್ನಡ ಚಿತ್ರರಂಗದಲ್ಲಿ ‘ಸ್ವಯಂಕೃಷಿ’ ಎಂಬ ಚಿತ್ರ ನಿರ್ಮಾಣ ಮಾಡಿ, ನಟಿಸಿದ್ದ ವೀರೇಂದ್ರ ಬಾಬು ಎಂಬುವರನ್ನು ಬಂಧಿಸಿದ್ದಾರೆ. ನಿರ್ಮಾಪಕ ತನ್ನ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಸೆರೆ ಹಿಡಿದುಕೊಂಡು ಬೆದರಿಕೆ ಹಾಕಿದ್ದಾರೆ ಹಾಗೂ 15 ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ 36 ವರ್ಷದ ಮಹಿಳೆಯೊಬ್ಬರು ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ದೂರು ದಾಖಲಿಸಿದ್ದರು. ದೂರುದಾರ ಮಹಿಳೆಯು 2021ರ ನವೆಂಬರ್ನಲ್ಲಿ ಕೆಲಸವೊಂದರ ನಿಮಿತ್ತ ವೀರೇಂದ್ರ ಬಾಬುನನ್ನು ಭೇಟಿಯಾಗಿದ್ದರು. ಆ ಸಂದರ್ಭದಲ್ಲಿ ಕಾಫಿಯಲ್ಲಿ ಮತ್ತೇರಿಸುವ ಔಷಧ ಸೇರಿಸಿ ಕುಡಿಸಿ ಅತ್ಯಾಚಾರ ಎಸಗಿದ್ದು, ವೀರೇಂದ್ರ ಬಾಬು ಕೃತ್ಯವನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದ. ಬಳಿಕ ಆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ 15 ಲಕ್ಷ ರೂ. ಹಣ ಪೀಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ಒಡವೆ ಮಾರಾಟ ಮಾಡಿ ಹಣ ನೀಡಿದ್ದ ದೂರುದಾರ ಮಹಿಳೆ ತನ್ನ ಘನತೆಗೆ…
ಅತ್ಯುತ್ತಮ ತನಿಖೆಗಾಗಿ ನೀಡಲಾಗುವ 2023ರ ಸಾಲಿನ ಗೃಹಮಂತ್ರಿಗಳ ಪದಕವನ್ನು ಕೇಂದ್ರ ಗೃಹ ಸಚಿವಾಲಯ ಶನಿವಾರ ಪ್ರಕಟಿಸಿದ್ದು, ರಾಜ್ಯದ ಐವರು ಪೊಲೀಸ್ ಅಧಿಕಾರಿಗಳು ಈ ಪಟ್ಟಿಯಲ್ಲಿದ್ದಾರೆ. ಒಟ್ಟಾರೆ ದೇಶದ ಪೊಲೀಸ್, ಸಿಬಿಐ ಮತ್ತು ಎನ್ಐಎಯಿಂದ 140 ಅಧಿಕಾರಿಗಳು ಈ ಪ್ರಶಸ್ತಿಗೆ ಭಾಜನರಾಗಲಿದದ್ದಾರೆ. ಕೇಂದ್ರೀಯ ತನಿಖಾ ದಳದ (ಸಿಬಿಐ) 15 ಸಿಬ್ಬಂದಿ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) 12 ಅಧಿಕಾರಿಗಳಿಗೆ ದೊರೆಯಲಿದೆ. 140 ಅಧಿಕಾರಿಗಳಲ್ಲಿ 22 ಮಹಿಳಾ ಅಧಿಕಾರಿಗಳಿದ್ದಾರೆ. ಡಿವೈಎಸ್ಪಿ ಶಂಕರ್ ಎಂ ರಾಗಿ, ಇನ್ಸ್ಪೆಕ್ಟರ್ ಗಳಾದ ರಾಮಪ್ಪ ಬಿ ಗುತ್ತೇರ್, ಸಿ ಬಿ ಶಿವಸ್ವಾಮಿ, ರುದ್ರೇಗೌಡ ಆರ್ ಪಾಟೀಲ್ ಹಾಗೂ ಪಿ ಸುರೇಶ್ 2023ನೇ ಸಾಲಿನ ಕೇಂದ್ರ ಗೃಹ ಸಚಿವರ ಪದಕ ಗೌರವಕ್ಕೆ ಪಾತ್ರರಾದ ಕರ್ನಾಟಕದ ಐದು ಜನ ಅಧಿಕಾರಿಗಳಾಗಿದ್ದಾರೆ. ಉತ್ತರ ಪ್ರದೇಶದ 10, ಕೇರಳ ಮತ್ತು ರಾಜಸ್ಥಾನದಿಂದ ತಲಾ ಒಂಬತ್ತು, ತಮಿಳುನಾಡಿನ ಎಂಟು, ಮಧ್ಯಪ್ರದೇಶದ ಏಳು ಮತ್ತು ಗುಜರಾತ್ನ ಆರು ಮಂದಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಉಳಿದ ಅಧಿಕಾರಿಗಳು ಇತರ…
ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಹೇಶ್ವರಿನಗರದಲ್ಲಿ ಶುಕ್ರವಾರ ಮುಂಜಾನೆ ಬೆಳಕಿಗೆ ಬಂದ ಕೊಲೆ ಪ್ರಕರಣವನ್ನು ಕೆಲ ಗಂಟೆಗಳಲ್ಲೇ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 21 ವರ್ಷದ ಯುವತಿಯ ಕತ್ತು ಹಿಸುಕಿ ಹತ್ಯೆ ಮಾಡಿದ ಆರೋಪದ ಮೇಲೆ ಆಕೆಯ ಪಕ್ಕದ ಮನೆಯಲ್ಲೇ ವಾಸವಿದ್ದ ಕೃಷ್ಣ ಚಂದ್ ಸೇಟಿ ಎಂಬಾತನನ್ನು ಬಂಧಿಸಲಾಗಿದೆ. ಗುರುವಾರ ರಾತ್ರಿ ಯುವತಿ ಕಾಣೆಯಾಗಿದ್ದಾಳೆ ಎಂದು ಆಕೆಯ ಅಕ್ಕ ಮಹದೇವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ಶುಕ್ರವಾರ ಬೆಳಗಿನಜಾವ ಐದು ಗಂಟೆ ಸುಮಾರಿಗೆ ಆಕೆ ವಾಸವಿದ್ದ ಮನೆ ಮುಂದೆಯೇ ಯುವತಿಯ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೃತದೇಹದ ಪಾದದಲ್ಲಿ ಧೂಳು ಇಲ್ಲದಿರುವುದನ್ನನ್ನು ಕಂಡು ಅನುಮಾನಗೊಂಡಿದ್ದರು. ರಾತ್ರಿ ನಾಪತ್ತೆ ಎನ್ನಲಾದ ಯುವತಿಯ ಪಾದಗಳನ್ನು ನೋಡಿದಾಗ ಆಕೆ ಎಲ್ಲಿಯೂ ಹೊರಗಡೆ ಹೋಗಿಲ್ಲ ಎನ್ನುವುದು ಖಚಿತವಾಗಿತ್ತು. ಆದ್ದರಿಂದ ಆಕೆಯ ಮನೆಯ ಅಕ್ಕಪಕ್ಕದಲ್ಲಿಯೇ ಹಂತಕ ಇರಬಹುದು ಎಂಬ ಶಂಕೆ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಅಕ್ಕಪಕ್ಕದ ಮನೆಯವರಿಂದಲೂ ಮಾಹಿತಿ ಕಲೆ ಹಾಕಿದಾಗ, ಯುವತಿಯು…
ಇಡ್ಲಿ ತಯಾರಿಕೆಗೆ ಬಳಸುವ ಬಿಸಿ ನೀರಿನ ಬಾಯ್ಲರ್ ಸ್ಫೋಟಗೊಂಡು ಮೂವರು ಗಾಯಗೊಂಡಿರುವ ಘಟನೆ ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲಿನಲ್ಲಿ ನಡೆದಿದೆ. ಕಿಚನ್ ನಲ್ಲಿ ಕೆಲಸ ಮಾಡುವ ಐಶ್ವರ್ಯ (19) ಬಸಿಕುಮಾರ್ (20) ಕ್ಯಾಶಿಯರ್ ಸಹೋದರ ಕಾರ್ತಿಕ್ (18) ಎಂಬುವರು ಗಾಯಗೊಂಡಿದ್ದಾರೆ. ಏಕಾಏಕಿ ಬಾಯ್ಸರ್ ಸ್ಪೋಟಗೊಂಡ ಪರಿಣಾಮ ಮೂವರೂ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಗೆ ಅಡುಗೆ ಮನೆಯಲ್ಲಿನ ಸಾಮಗ್ರಿಗಳು ಸಂಪೂರ್ಣ ಜಖಂ ಆಗಿವೆ. ಸ್ಥಳಕ್ಕೆ ಜ್ಞಾನಭಾರತಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಆಟೋ ಚಾಲಕನೋರ್ವ ಆಟೋ ರಿಕ್ಷಾದ ಹಿಂಬದಿ ಮಾರಕಾಸ್ತ್ರವನ್ನು ಅಳವಡಿಸಿ ಪುಂಡಾಟ ಮೆರೆದ ಘಟನೆ ನಡೆದಿದ್ದು, ಇದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಚಾಲಕನ ವಿರುದ್ಧ ಕ್ರಮಕ್ಕೆ ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ. ಆಟೋರಿಕ್ಷಾವೊಂದರ ಹಿಂಬದಿಯಲ್ಲಿ ಮಾರಕಾಸ್ತ್ರ ನೋಡಿ ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ. ಇದರ ಫೋಟೋವನ್ನು ಥರ್ಡ್ ಐ ಎಂಬ ಟ್ವಿಟರ್ ಖಾತೆಯಲ್ಲಿ ಶುಕ್ರವಾರ ಹಂಚಿಕೊಳ್ಳಲಾಗಿದೆ. ಫೋಟೋದೊಂದಿಗೆ ಇದು ನಕಲಿಯೇ ಅಥವಾ ಅಸಲಿಯೇ ಎಂದು ಬರೆಯಲಾಗಿದೆ. ಸದ್ಯ ಈ ಫೋಟೋ ಸಾವಿರಾರು ಮಂದಿ ನೆಟ್ಟಿಗರ ಕಣ್ಣಿಗೆ ಬಿದ್ದಿದೆ. ಹೊಸಬಸವನಪುರದ ಭಟ್ಟರಹಳ್ಳಿಯಲ್ಲಿ ಈ ಫೋಟೋವನ್ನು ಸೆರೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ. ಈ ಫೋಟೋ ನೋಡಿದ ನೆಟಿಜನ್ ಗರು ಚಾಲಕನ ಉದ್ದೇಶವಾದರೂ ಏನು ಎಂಬುದನ್ನು ಪ್ರಶ್ನಿಸಿದ್ದಾರೆ. ಇಂತಹ ವಸ್ತುಗಳನ್ನು ಹಾಕುವುದರ ಅರ್ಥವೇನು? ಎಂದು ಟಾರ್ಕ್ ನೈಟ್ ಖಾತೆದಾರ ಪ್ರಶ್ನಿಸಿದ್ದಾನೆ.
ರಾಜ್ಯ ಬಿಜೆಪಿಯಲ್ಲಿ ಸದ್ಯ ಸಂಘಟನಾತ್ಮಕವಾಗಿ ಕೆಲ ಹುದ್ದೆಗಳು ಭರ್ತಿಯಾಗಬೇಕಿದೆ. ಅತ್ತ ಕಾಂಗ್ರೆಸ್ನಲ್ಲಿ ಒಬ್ಬ ರಾಜ್ಯಾಧ್ಯಕ್ಷ, ಅವರ ಕೈ ಕೆಳಗೆ 5 ಕಾರ್ಯಾಧ್ಯಕ್ಷ ಹುದ್ದೆಯನ್ನು ನೇಮಕ ಮಾಡಲಾಗಿದೆ. ಆ ಮೂಲಕ ಹತ್ತಾರು ಮಂದಿಗೆ ಹುದ್ದೆ ಸೃಷ್ಟಿಸಿ ಅವಕಾಶ ನೀಡುತ್ತಾ, ಅವರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ನಮ್ಮಲ್ಲೂ ಕೂಡ ಅದೇ ರೀತಿ ಕಾರ್ಯಾಧ್ಯಕ್ಷ ಸ್ಥಾನ ನೇಮಕವಾಗಲಿ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಇಂದು ಮಾಧ್ಯಮಗಳ ಮುಂದೆ ವಿ. ಸೋಮಣ್ಣ, ರಾಜ್ಯ ಬಿಜೆಪಿ ಘಟಕದಲ್ಲಿ ಸಂಘಟನಾತ್ಮಕವಾಗಿ ಎರಡು ಕಾರ್ಯಾಧ್ಯಕ್ಷ ಸ್ಥಾನ ರಚನೆಯಾದ್ರೆ, ಒಳ್ಳೆಯದು ಎಂದು ಹೇಳುವ ಮೂಲಕ ಸಂಘಟನೆಗೆ ಬಲ ತುಂಬುವ ಮಾತುಗಳನ್ನು ಆಡಿದ್ದಾರೆ. 2024 ರ ಲೋಕಸಭಾ ಚುನಾವಣೆಗೆ ನನ್ನನ್ನು ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿ ಎಂದರೆ ಅದನ್ನು ಮುಂದಕ್ಕೆ ನೋಡೋಣ. ಇನ್ನು ಸಾಕಷ್ಟು ಸಮಯವಿದೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ವಿ. ಸೋಮಣ್ಣ, ಲೋಕಸಭಾ ಚುನಾವಣೆಗೆ ಇನ್ನು ಸಾಕಷ್ಟು ಸಮಯವಿದೆ. ಈಗಲೇ…
ಕೇಂದ್ರ ಸರ್ಕಾರವು ಸರ್ವಾಧಿಕಾರ ನಡೆಸುತ್ತಿದೆ. ಸ್ವಾಯತ್ತ ಸಂಸ್ಥೆಗಳನ್ನು ಹಿಡಿತಕ್ಕೆ ತೆಗೆದುಕೊಂಡು ತನ್ನ ವಿರೋಧಿ ಪಕ್ಷದ ಸರ್ಕಾರಗಳನ್ನು ಕಟ್ಟಿಹಾಕುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿ ದೆಹಲಿ ಸುಗ್ರಿವಾಜ್ಞೆಯನ್ನು ತಂದಿದೆ. ದೆಹಲಿಯನ್ನು ಸಂಪೂರ್ಣವಾಗಿ ಗವರ್ನರ್ ಕೈಗಿಡುವ ಮೂಲಕ ರಾಜ್ಯ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸುತ್ತಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. ತಮಿಳುನಾಡಿನಲ್ಲಿ ಮಂತ್ರಿಗಳನ್ನೇ ರಾಜ್ಯಪಾಲರು ವಜಾ ಮಾಡಿದ್ದಾರೆ. ರಾಜ್ಯಪಾಲರಿಗೆ ಮಂತ್ರಿಗಳನ್ನು ವಜಾಗೊಳಿಸುವ ಹಕ್ಕು ಇಲ್ಲ. ರಾಜಕೀಯ ಇತಿಹಾಸದಲ್ಲೇ ಇಂತಹ ಘಟನೆ ನಡೆದಿರಲಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. 2024ರ ಲೋಕಸಭೆ ಚುನಾವಣೆಗೂ ಮುನ್ನ ಹಾಲಿ ಮುಖ್ಯ ಚುನಾವಣಾ ಆಯುಕ್ತರು ನಿವೃತ್ತರಾಗುತ್ತಿದ್ದಾರೆ. ಅದಕ್ಕೂ ಮೊದಲೇ ತನಗೆ ಬೇಕಾದ ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವಂತಹ ಸಂದರ್ಭವನ್ನು ಸೃಷ್ಟಿ ಮಾಡಿಕೊಳ್ಳುವ ಹುನ್ನಾರವನ್ನು ಕೇಂದ್ರ ಸರ್ಕಾರ ನಡೆಸಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಗಂಭೀರ ಆರೋಪ ಮಾಡಿದ್ದಾರೆ. ಮೊದಲು ಆಯ್ಕೆ ಸಮಿತಿಯಲ್ಲಿ ಮುಖ್ಯ ನ್ಯಾಯಮೂರ್ತಿ, ಪ್ರಧಾನಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರು…
ತಮಿಳುನಾಡಿನ ಶಿಕ್ಷಣ ಸಚಿವ ಅನ್ಸಿಲ್ ಮಹೇಶ್ ಪೊಯ್ಯಮೊಳಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕರ್ನಾಟಕದ ಗಡಿ ಜಿಲ್ಲೆ ಕೃಷ್ಣಗಿರಿಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವೊಂದಕ್ಕೆ ಅವರು ಸೇಲಂನಿಂದ ತೆರಳುತ್ತಿದ್ದಾಗ ಸಚಿವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಬೆಂಗಳೂರಿನ ಬೊಮ್ಮಸಂದ್ರದ ಬಳಿ ಇರುವ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸಂಚಾರ ದಟ್ಟಣೆ ಸಮಸ್ಯೆಯೂ ಎದುರಾಗಿತ್ತು. ಕೊನೆಗೂ ಅವರನ್ನು ಆಸ್ಪತ್ರೆಗೆ ದಾಖಲಿಸಲಾ ಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅನ್ಸಿಲ್ ಮಹೇಶ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ.