Subscribe to Updates
Get the latest creative news from FooBar about art, design and business.
- ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ
- ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ
- ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ
- ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
- ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
- ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
- ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
- ತುಮಕೂರು: ಆನ್ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
Author: admin
2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಹೆಚ್ಚು ಸ್ಥಾನ ಗೆಲ್ಲಲು ವೇದಿಕೆ ಸಿದ್ಧವಾಗುತ್ತಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಇದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಜಂಟಿ ಅಧಿವೇಶನ ನಡೆಯುತ್ತಿದ್ದು, ರಾಜ್ಯದ ಎಲ್ಲಾ ಸಂಸದರುಗಳು ಆಲ್ಲಿಯೇ ಇರುವ ಕಾರಣ, ಬಿ ಎಲ್. ಸಂತೋಷ್ ಎಲ್ಲಾ ಸಂಸದರ ಬಳಿ ಇನ್ ಟು ಒನ್ ಸಭೆ ನಡೆಸುತ್ತಿದ್ದಾರೆ. ಇತ್ತ ಸಂಸದರುಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಇಟ್ಟುಕೊಂಡಿರುವ ವರ್ಚಸ್ಸು, ಕಳೆದ ನಾಲ್ಕುವರೆ ವರ್ಷಗಳಲ್ಲಿ ಮಾಡಿರುವ ಕೆಲಸ ಕಾರ್ಯಗಳು, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾಡಿರುವ ಸಾಧನೆ. ಹೀಗೆ ಸಾಲು ಸಾಲು ಅಂಶಗಳನ್ನು ಮುಂದಿಟ್ಟುಕೊಂಡು, ಮುಂದಿನ ಲೋಕಸಭಾ ಚುನಾವಣೆಗೆ ಅವರಿಗೆ ಟಿಕೆಟ್ ನೀಡಬಹುದೇ? ಬೇಡವೇ? ಎಂದು ಅಳೆದುತೂಗಿ ಮೌಲ್ಯಮಾಪನ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ವೈಷಮ್ಯ ಬೆಳೆದು ತಲ್ವಾರ್ನಿಂದ ಸ್ನೇಹಿತ ಹಾಗೂ ಆತನ ಸಹೋದರನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ನಡೆದಿದೆ. ಗುರುವಾರ ರಾತ್ರಿ ಶರಣಪ್ಪ ಹಾಗೂ ವಿಜಯ್ ವಿದ್ಯಾಗಿರಿಯ ಎಂಬಿಎ ಕಾಲೇಜ್ ಬಳಿ ನಿಂತಿದ್ದಾಗ ಬೈಕ್ ಮೇಲೆ ಬಂದ ಕೆಲವು ದುಷ್ಕರ್ಮಿಗಳು ಸಹೋದರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಇಬ್ಬರ ತಲೆ ಹಾಗೂ ಕೈಗಳಿಗೆ ತಲ್ವಾರ್ನಿಂದ ಹಲ್ಲೆ ಮಾಡಲಾಗಿತ್ತು. ಸ್ಥಳಿಯರು ಇವರಿಬ್ಬರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದರು. ವಿಜಯ್ ಎರಡೂ ಕೈಗಳಿಂದ ತೀವ್ರ ರಕ್ತಸ್ರಾವ ಆಗಿದ್ದರಿಂದ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ನವನಗರ ಪೊಲೀಸರು ತನಿಖೆ ಆರಂಭಿಸಿದಾಗ ಸ್ನೇಹಿತರಿಂದಲೇ ಈ ಹಲ್ಲೆ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ. ವಿಜಯ್ ಬೇವೂರ್ ಸ್ನೇಹಿತರಾದ ವಿಠ್ಠಲ ಬಂಟನೂರು, ವಿಲಾಸ ಜಾಧವ್, ಬಳಿಗೇರ ಹಾಗೂ ಸಮೀರ್ ಮುಲ್ಲಾ ಎಂಬುವರು ಕ್ರಿಕೆಟ್ ವಿಚಾರಕ್ಕೆ ನಡೆದ ಜಗಳಕ್ಕೆ ಸಿಟ್ಟಾಗಿ ಹಲ್ಲೆ ನಡೆಸಿರುವ ವಿಚಾರ ಗೊತ್ತಾಗಿದೆ. ಶರಣಪ್ಪ…
ಮೈಸೂರು: ಸೈಕಲ್ನಲ್ಲಿ ವೇಗವಾಗಿ ಹೋಗುತ್ತಿದ್ದ ಬಾಲಕ ಸೈಕಲ್ ನಿಯಂತ್ರಣವನ್ನು ಕಳೆದುಕೊಂಡು ಟೆಂಪೋ ಚಕ್ರದಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೈಸೂರಿನ ಅಭಿಷೇಕ್ ವೃತ್ತದಲ್ಲಿ ನಡೆದಿದೆ. ಬಾಲಾಜಿ (10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಾಜಿ ಮೂಲತಃ ಯಳಂದೂರಿನವನಾಗಿದ್ದು, ರಾಮಣ್ಣ ಎಂಬವರ ಪುತ್ರ. ಬಾಲಾಜಿ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಸೈಕಲ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ವೇಗವಾದ ಸೈಕಲ್ ಚಾಲನೆಯಿಂದ ಮಕ್ಕಳು (Children) ಸೈಕಲ್ ನಿಯಂತ್ರಣವನ್ನು ಕಳೆದುಕೊಂಡಿದ್ದು, ಟೆಂಪೋ ಚಕ್ರದಡಿಗೆ ಸಿಲುಕಿ ಬಾಲಾಜಿ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ಬಾಲಕ ಸಣ್ಣಪುಟ್ಟ ಗಾಯಗಳಿಂದ ಬಚಾವ್ ಆಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ವಿವಿ ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ: ಹಳೇ ದ್ವೇಷದ ಹಿನ್ನೆಲೆ ಯುವಕನ ಮರ್ಮಾಂಗಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದ ಪಾಲಿಬೆಟ್ಟ ರಸ್ತೆಯಲ್ಲಿ ನಡೆದಿದೆ. ಕ್ರಿಸ್ಟಲ್ (28) ಹತ್ಯೆಯಾದ ದುರ್ದೈವಿ. ಗುರುವಾರ ರಾತ್ರಿ ಸಿದ್ದಾಪುರ ಗ್ರಾಮದ ಪಾಲಿಬೆಟ್ಟ ರಸ್ತೆಯಲ್ಲಿರುವ ಬಾರ್ವೊಂದರಲ್ಲಿ ಕ್ರಿಸ್ಟಲ್ ಸ್ನೇಹಿತರು ಹಾಗೂ ರಂಜಿತ್ ಸ್ನೇಹಿತರು ಇಬ್ಬರು ಒಂದೇ ಬಾರಿನಲ್ಲಿ ಮದ್ಯಪಾನ ಮಾಡುತ್ತಿದ್ದ ಸಂದರ್ಭ ರಂಜಿತ್ ಹಾಗೂ ಕ್ರಿಸ್ಟಲ್ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಗಲಾಟೆಯನ್ನು ಗಮನಿಸಿದ ಬಾರ್ ಮ್ಯಾನೇಜರ್ ಸಿದ್ದಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಸ್ಥಳಕ್ಕೆ ಆಗಮಿಸುವ ವೇಳೆ ಕ್ರಿಸ್ಟಲ್ ತಂಡ ಹಾಗೂ ರಂಜಿತ್ ತಂಡದ ಯುವಕರು ಬಾರ್ ಒಳಗೆ ನುಗ್ಗಿ ಇನ್ನಷ್ಟು ಗಲಾಟೆ ಮಾಡಿಕೊಂಡು ಬಾರ್ನ ಶೌಚಾಲಯದ ಬಾಗಿಲು ಮುರಿದಿದ್ದಾರೆ. ಬಳಿಕ ಪೊಲೀಸರು ಕ್ರಿಸ್ಟಲ್ ನ ಜೊತೆ ಇದ್ದ ಮೈಕೆಲ್ ಹಾಗೂ ಮತ್ತೊಬ್ಬರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಕೂರಿಸಿದ್ದಾರೆ. ಆದರೆ ಗಲಾಟೆ ಮಾಡಿದ ರಂಜಿತ್ ಹಾಗೂ ಕ್ರಿಸ್ಟಲ್ ಇಬ್ಬರಿಗೂ…
ಗೋಕಾಕ: ಗೋಕಾಕ ಪಾಲ್ಸ್ ಗೆ ಇಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವಾಗಿ ಗುರುತಿಸಿಕೊಂಡಿರುವ ಗೋಕಾಕ ಪಾಲ್ಸ್ಗೆ ವರ್ಷಕ್ಕೆ 3ರಿಂದ 4 ಲಕ್ಷ ಜನ ಭೇಟಿ ನೀಡುತ್ತಾರೆ. ಪ್ರವಾಸಿಗರ ಸುರಕ್ಷೆತೆಗಾಗಿ ಹಲವು ಕ್ರಮ ಕೈಗೊಳ್ಳುವುದಕ್ಕಾಗಿಯೇ ಸಚಿವ ಸತೀಶ್ ಜಾರಕಿಹೊಳಿ ಅವರು ಗೋಕಾಕ ಪಾಲ್ಸ್ ಗೆ ಭೇಟಿ ನೀಡಿದ್ದಾಗಿ ತಿಳಿಸಿದ್ದಾರೆ. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಪ್ರಸಿದ್ದ ಗೋಕಾಕ ಜಲಪಾತಕ್ಕೆ ಅಪಾರ ಸಂಖ್ಯೆಯ ಪ್ರಯಾಣಿಕರು ಭೇಟಿ ನೀಡುತ್ತಾರೆ. ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಲಪಾತದ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ಮಾಹಿತಿ ಪಡೆದಿದ್ದು, ಶೀಘ್ರವೇ ಗೋಕಾಕ ಪಾಲ್ಸ್ ನ್ನು ಅಭಿವೃದ್ಧಿ ಪಡಿಸುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಯುವ ನಾಯಕಿ ಪ್ರಿಯಾಂಕಾ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಸೇರಿದಂತೆ ಸ್ಥಳೀಯ ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮೈಸೂರು ಮೃಗಾಲಯದ ವಾರದ ರಜೆ ರದ್ದು ಮಾಡಲಾಗಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಕಾರಣ ಮಂಗಳವಾರದ ವಾರದ ರಜೆ ರದ್ದು ಮಾಡಲಾಗಿದೆ. ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ಮೈಸೂರು ಮೃಗಾಲಯ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 81233 82149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿಗಳ ಮೇಲೆ ನಿಯಂತ್ರಣ ಹೊಂದುವ ಸಂಬಂಧ ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ದೆಹಲಿ ಸೇವಾ ಮಸೂದೆಗೆ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ ಮಸೂದೆ 2023ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ, ಈ ಮಸೂದೆಯು ಕಾನೂನಾಗುತ್ತದೆ ಮತ್ತು ಕೇಂದ್ರ ಸರ್ಕಾರ ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ಸಂಬಂಧ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಬದಲಾಯಿಸುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿ ಸೇವಾ ಮಸೂದೆಯನ್ನು ಆಗಸ್ಟ್ 3 ರಂದು ಲೋಕಸಭೆಯಲ್ಲಿ ಮತ್ತು ಆಗಸ್ಟ್ 7 ರಂದು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿತ್ತು. ಈ ಕಾಯಿದೆಯು ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೆ ದೆಹಲಿ ಸರ್ಕಾರದ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನೀಡುತ್ತದೆ ಮತ್ತು ರಾಷ್ಟ್ರ ರಾಜಧಾನಿಯ ಮೇಲೆ ಕೇಂದ್ರ…
ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೇರಿದಂತೆ ನಾನಾ ವೃತ್ತಿಪರ ಕೋರ್ಸುಗಳಿಗೆ ಅನ್ವಯವಾಗುವಂತೆ ಅರ್ಹ ನೀಟ್ ಮತ್ತು ಸಿಇಟಿ ಅಭ್ಯರ್ಥಿಗಳು ನಮೂದಿಸಿರುವ ಆಪ್ಷನ್ಸ್ ಗಳನ್ನು ದಾಖಲಿಸಿ ಮೆರಿಟ್ ಮತ್ತು ರೋಸ್ಟ ಆಧಾರದ ಮೇಲೆ ಗುರುವಾರ (ಆ. 10) ಅಣಕು ಸೀಟು ಹಂಚಿಕೆ ಮಾಡಿ, ಫಲಿತಾಂಶ ಪ್ರಕಟಿಸಿದೆ. ಅಭ್ಯರ್ಥಿಗಳು ತಾವು ಬಯಸಿದಲ್ಲಿ ತಮ್ಮ ಆಪ್ಷನ್ಸ್ ಪರಿಷ್ಕರಿಸಲು ಅಥವಾ ಬದಲಿಸಲು ಈಗ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ, “ಮೊದಲನೇ ಸುತ್ತಿನಲ್ಲಿ ಆಪ್ಷನ್ಸ್ ನಮೂದಿಸದೆ ಇದ್ದಂತಹ ಅಭ್ಯರ್ಥಿಗಳು ಕೂಡ ಈ ಅವಕಾಶ ಬಳಸಿಕೊಳ್ಳಬುದು. ಅಂತಿಮ ದಾಖಲಾತಿಯನ್ನು ಆಧರಿಸಿ ಪ್ರಾಧಿಕಾರವು ಆ. 16ರಂದು ಮೊದಲನೇ ಸುತ್ತಿನ ನೈಜ ಸೀಟು ಹಂಚಿಕೆಯನ್ನು ಪ್ರಕಟಿಸಲಿದೆ’ ಎಂದಿದ್ದಾರೆ. ಅಲ್ಲದೆ, ಇದಾದ ನಂತರ ಅಭ್ಯರ್ಥಿಗಳಿಗೆ ಸೀಟುಗಳ ಬಗ್ಗೆ ನಿರ್ಧರಿಸಲು ನಾಲ್ಕು ಆಯ್ಕೆಗಳನ್ನು ಕೊಡಲಾಗುವುದು. ಅಭ್ಯರ್ಥಿಗಳು ಪೋಷಕರೊಡನೆ ಚರ್ಚಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಇದರಿಂದ ಕಾಲಾವಕಾಶ ಸಿಗಲಿದೆ. ವಿವರಗಳಿಗಾಗಿ ಪ್ರಾಧಿಕಾರದ ವೆಬ್ಸೈಟ್ http://kea.…
ಬೆಂಗಳೂರು: ಪೈಂಟಿಂಗ್ ಕೆಲಸಕ್ಕೆಂದು ಹೋಗಿ ಮನೆಯಿಂದ ಚಿನ್ನಾಭರಣ ಕದ್ದೊಯ್ದಿದ್ದ ಆರೋಪಿ ಉಮೇಶ್ ಪ್ರಸಾದ್ ಜಾಧವ (32) ಅವರನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಆರೋಪಿ ಕೆಲಸ ಹುಡುಕಿಕೊಂಡು ಬಂದಿದ್ದ. ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳವು ಮಾಡಿ ಊರಿಗೆ ಪರಾರಿಯಾಗಿದ್ದ. ‘ಇತ್ತೀಚೆಗೆ ಪುನಃ ಬೆಂಗಳೂರಿಗೆ ಬಂದಿದ್ದಾಗ ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಬಳ ಕಡಿಮೆ ಎಂದು ಕೆಲಸ ಬಿಟ್ಟಿದ್ದು, ಪೈಂಟಿಂಗ್ ಕೆಲಸ ಮಾಡುತ್ತಿದ್ದ. ಪೈಂಟಿಂಗ್ ವೇಳೆ ಮನೆಯಲ್ಲಿ ಆಭರಣವಿಟ್ಟಿರುವ ಜಾಗ ತಿಳಿದುಕೊಳ್ಳುತ್ತಿದ್ದ. ಪೈಂಟಿಂಗ್ ಕೆಲಸ ಅಂತಿಮ ಹಂತದಲ್ಲಿರುವಾಗ, ಚಿನ್ನಾಭರಣ ಕದ್ದುಕೊಂಡು ಪರಾರಿಯಾಗುತ್ತಿದ್ದ. ಸದ್ಯ ಈತನಿಂದ 100 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಂಗಳವಾರ ಸ್ವಾತಂತ್ರೋತ್ಸವ ಪ್ರಯುಕ್ತ ರಜೆ ಇರುವುದರಿಂದ ಸೋಮವಾರವನ್ನು ಅದಕ್ಕೆ ಜೋಡಿಸಿಕೊಂಡು ಸಾಲು ರಜೆ ಹಾಕಿ ಪ್ರವಾಸ, ಊರಿಗೆ ಹೋಗುವವರಿಗೆ ಖಾಸಗಿ ಬಸ್ ಗಳ ದರ ದುಬಾರಿ ಆಗಿದೆ. ಶನಿವಾರ, ಭಾನುವಾರ ವಾರದ ರಜೆಗಳಾದರೆ ಮಂಗಳವಾರ ಸ್ವಾತಂತ್ರೋತ್ಸವದ ರಜೆ ಸೋಮವಾರ ಒಂದು ರಜೆ ಹಾಕಿದರೆ ನಾಲ್ಕು ರಜೆಗಳನ್ನು ಒಮ್ಮೆಲೆ ಪಡೆಯಬಹುದು ಎಂದು ಅನೇಕರು ರಜೆ ಹಾಕಿದ್ದಾರೆ. ಆದರೆ, ಶುಕ್ರವಾರವೇ ಬಸ್ ಗಳ ದರ ಎರಡರಿಂದ ಮೂರು ಪಟ್ಟು ಹೆಚ್ಚಾಗಿದೆ. ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗುವವರಿಗೆ ಖಾಸಗಿ ಬಸ್ ಗಳಲ್ಲಿ 7 700ರಿಂದ 2 1,000ವರೆಗೆ ಇದ್ದ ದರ ಈಗ 1850ರಿಂದ 73, 500ರವರೆಗೆ ಏರಿಕೆಯಾಗಿದೆ. ಮಂಗಳೂರಿಗೆ ತೆ 700ರಿಂದ 1950ರವರೆಗೆ ಇದ್ದಿದ್ದು? 1400-72000ಕ್ಕೇರಿದೆ. ಶಿರಸಿಗೆ 7 700-7900 ಇದ್ದಿದ್ದು 1850-12,150ರವರೆಗೆ ಹೆಚ್ಚಳವಾಗಿದೆ. ಇದೇ ರೀತಿ ರಾಜ್ಯದ ವಿವಿಧ ನಗರಗಳಿಗೆ ತೆರಳುವವರಿಗೆ ಬಸ್ ದರ ಹೊಳೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.…