Author: admin

ಬೆಂಗಳೂರು/ಬೆಳಗಾವಿ: ಕರ್ನಾಟಕ ರಾಜ್ಯಾದ್ಯಂತ ಡಿಸೆಂಬರ್ 21ರ ಭಾನುವಾರದಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಐದು ವರ್ಷದೊಳಗಿನ ಸುಮಾರು 62.40 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನ್ ಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಭಾರತವು ಈಗಾಗಲೇ ಪೋಲಿಯೋ ಮುಕ್ತ ದೇಶವಾಗಿದ್ದರೂ, ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳಲ್ಲಿ ಪೋಲಿಯೋ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ಹೇಳಿದರು. ಬೂತ್ ಮತ್ತು ಮನೆ ಭೇಟಿ: ಡಿಸೆಂಬರ್ 21ರಂದು ರಾಜ್ಯದ ಲಸಿಕಾ ಕೇಂದ್ರಗಳಲ್ಲಿ (ಬೂತ್‌ಗಳಲ್ಲಿ) ಹನಿ ಹಾಕಲಾಗುವುದು. ನಂತರದ 2-3 ದಿನಗಳ ಕಾಲ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಬಿಟ್ಟುಹೋದ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ವ್ಯಾಪಕ ಸಿದ್ಧತೆ: ಈ ಕಾರ್ಯಕ್ರಮಕ್ಕಾಗಿ ರಾಜ್ಯಾದ್ಯಂತ 33,258 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 1.13 ಲಕ್ಷಕ್ಕೂ ಹೆಚ್ಚು ಲಸಿಕೆ ಹಾಕುವ ಸಿಬ್ಬಂದಿ…

Read More

ಪಾವಗಡ: ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ಪಾವಗಡ, ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು ಇವರ ಒಂದು ಸಂಯುಕ್ತ ಆಶ್ರಯದಲ್ಲಿ ಇಂದು ತಿರುಮಣಿಯ ಶ್ರೀ ಆಂಜನೇಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರವನ್ನು ಶುಕ್ರವಾರ ಆಯೋಜಿಸಲಾಗಿತ್ತು. ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ತಿರುಮಣಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿಜಯ್  ಕುಮಾರ್, ಗಡಿನಾಡಿನ ಜನತೆಗೆ ಉತ್ತಮ ಚಿಕಿತ್ಸೆ ನೀಡುವ ಸಲುವಾಗಿ ಯಾವುದೇ ಫಲಾಪೇಕ್ಷೆ ಇಲ್ಲದೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಇಂತಹ ಉತ್ತಮ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದರು. ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಮಾತನಾಡಿ,  ನಮ್ಮ ಸಂಸ್ಥೆ ಆರೋಗ್ಯ ಸೇವಾ ಜೊತೆಯಲ್ಲಿ ಶೈಕ್ಷಣಿಕ, ಸಾಮಾಜಿಕ ಸೇವೆಯಲ್ಲಿ ನಿರತವಾಗಿದ್ದು ಸದಾ ಜನಸೇವೆಯೇ ನನ್ನ ಏಕೈಕ ಗುರಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಿರುಮಣಿಯ ರಾಜಕೀಯ ಮುಖಂಡರಾದ ಅರುಣಪ್ಪ, ವೆಂಕಟರಮಪ್ಪ, ಶಂಕರ ಆಸ್ಪತ್ರೆಯ ವೈದ್ಯರಾದ ಮನ್ವಿತ್, ಶ್ರುತಿ ಹಾಗೂ ಸಂಯೋಜಕರಾದ ಹರೀಶ್, ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ್…

Read More

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಪೊಲೀಸ್ ಠಾಣೆಗೆ ನೂತನವಾಗಿ ಬಂದಿರುವ ಪಿಎಸ್ ಐ ಅವರಿಗೆ ದಲಿತ ಸಂಘರ್ಷ ಸಮಿತಿ (ದಸಂಸ) ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸತೀಶ್‌ ವೆಗ್ಗೆ ತಾಲೂಕು ಅಧ್ಯಕ್ಷ ತುಕಾರಾಮ ಹಸನ್ಮುಖಿ, ಮುಖಂಡರಾದ ಗಣಪತಿ, ವಾಸುದೇವ್, ಕಾಶಿನಾಥ್  ಗಾಯಕ್ವಾಡ್, ಬಸವರಾಜ್‌ ಲಾಧ ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಶಿರಾ: ನಗರದ ಆಸ್ತಿ ಮಾಲೀಕರಿಗೆ ಇ-ಖಾತೆ ಪಡೆಯುವುದನ್ನು ಸರ್ಕಾರವು ಅತ್ಯಂತ ಸರಳೀಕರಿಸಿದ್ದು, ಇನ್ನು ಮುಂದೆ ಸಾರ್ವಜನಿಕರು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲದೆ ಮನೆಯಲ್ಲೇ ಕುಳಿತು ಆನ್‌ ಲೈನ್ ಮೂಲಕ ಇ–ಖಾತೆ ಪಡೆಯಬಹುದು ಎಂದು ನಗರಸಭೆ ಪೌರಾಯುಕ್ತ ಕೆ.ರುದ್ರೇಶ್ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಜಿಟಲೀಕರಣದ ಭಾಗವಾಗಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈಗಾಗಲೇ ನಗರಸಭೆಯಿಂದ ಸುಮಾರು 10,198 ಇ–ಖಾತೆಗಳನ್ನು ವಿತರಿಸಲಾಗಿದ್ದು, ಆನ್‌ ಲೈನ್ ಅರ್ಜಿ ಸಲ್ಲಿಕೆಯಿಂದ ಪ್ರಕ್ರಿಯೆ ಮತ್ತಷ್ಟು ತ್ವರಿತಗೊಳ್ಳಲಿದೆ ಎಂದು ಆಶಯ ವ್ಯಕ್ತಪಡಿಸಿದರು. ಅಗತ್ಯವಿರುವ ದಾಖಲೆಗಳು: ಇ-ಖಾತೆಗೆ ಅರ್ಜಿ ಸಲ್ಲಿಸಲು ಮಾಲೀಕರ ಭಾವಚಿತ್ರ, ಸ್ವಚ್ಛಗೊಳಿಸಿದ ಕಟ್ಟಡ ಅಥವಾ ನಿವೇಶನದ ಜಿಪಿಎಸ್ ಭಾವಚಿತ್ರ, ಗುರುತಿನ ಚೀಟಿ, ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಚಲನ್, ನೀರು ಮತ್ತು ಒಳಚರಂಡಿ ಶುಲ್ಕದ ಪಾವತಿ ರಶೀದಿ, ಕ್ರಯಪತ್ರ, ಇ.ಸಿ (EC), ವಿದ್ಯುತ್ ಆರ್‌ ಆರ್ ಸಂಖ್ಯೆ ಮತ್ತು ಕಟ್ಟಡ ಪರವಾನಗಿ ಪತ್ರಗಳನ್ನು ಆನ್‌ ಲೈನ್‌ ನಲ್ಲಿ ಅಪ್‌ಲೋಡ್ ಮಾಡಬೇಕಾಗುತ್ತದೆ. ದಾಖಲೆಗಳು ಸರಿಯಾಗಿದ್ದರೆ ಪರಿಶೀಲನೆಯ ನಂತರ…

Read More

ಕೇಂದ್ರ ಲೋಕಸೇವಾ ಆಯೋಗವು (UPSC) 2026ರ ಸಾಲಿನ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಮತ್ತು ನೌಕಾ ಅಕಾಡೆಮಿ (NA-I) ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಭಾರತೀಯ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಅಧಿಕಾರಿಯಾಗಬಯಸುವ ಯುವಕ-ಯುವತಿಯರಿಗೆ ಇದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯ ಮೂಲಕ ಒಟ್ಟು 394 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಭೂಸೇನೆಯ 208, ನೌಕಾಪಡೆಯ 42, ವಾಯುಪಡೆಯ 120 ಮತ್ತು ನೌಕಾ ಅಕಾಡೆಮಿಯ 24 ಹುದ್ದೆಗಳು ಸೇರಿವೆ. ಈ ಬಾರಿ ಪುರುಷರ ಜೊತೆಗೆ ಮಹಿಳಾ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹತೆಗಳು: ಭೂಸೇನೆಗೆ ಅರ್ಜಿ ಸಲ್ಲಿಸುವವರು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿ (ಪಿಯುಸಿ) ಉತ್ತೀರ್ಣರಾಗಿರಬೇಕು. ನೌಕಾಪಡೆ ಮತ್ತು ವಾಯುಪಡೆಗೆ ವಿಜ್ಞಾನ ವಿಭಾಗದಲ್ಲಿ (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ) 12ನೇ ತರಗತಿ ಪೂರೈಸಿರುವುದು ಕಡ್ಡಾಯ. ಪ್ರಸ್ತುತ ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು. ಶುಲ್ಕ ಮತ್ತು ವೇತನ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100 ರೂ.…

Read More

ಗದಗ: ಕರ್ನಾಟಕದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಸಾಮಾಜಿಕ ಜಾಲತಾಣ ಫೇಸ್‌ ಬುಕ್ ಮೂಲಕ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಗದಗದ ಬೆಟಗೇರಿ ಪೊಲೀಸರು ಬಂಧಿಸಿದ್ದಾರೆ. ರೋಣ ತಾಲೂಕಿನ ಸೂಡಿ ಗ್ರಾಮದ ನಿವಾಸಿ ವೀರಣ್ಣ ಬೀಳಗಿ ಬಂಧಿತ ವ್ಯಕ್ತಿ. ಈತ ಸಚಿವರ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಹಾಕಿದ್ದು, “ಸಚಿವರನ್ನು ನಿಲ್ಲಿಸಿ AK-47 ನಿಂದ ಗುಂಡಿನ ಮಳೆಗರೆಯಬೇಕು” ಎಂದು ಬರೆದುಕೊಂಡಿದ್ದ ಎನ್ನಲಾಗಿದೆ. ಸಚಿವರ ವಿರುದ್ಧ ಅವಹೇಳನಕಾರಿ ಪದ ಬಳಸಿ ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಬಿ.ಬಿ. ಅಸೂಟಿ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಡಿಸೆಂಬರ್ 14ರಂದು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಕಲಬುರಗಿ: ಜಿಲ್ಲೆಯ ನಂದಿಕೂರ್ ಗ್ರಾಮದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಕಲಬುರಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿಯಾದ ಜ್ಯೋತಿ, ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ ಎಂಬುವವರ ಮನೆಯ ಮುಂದೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದ ಆತಂಕಗೊಂಡ ಮಲ್ಲಿನಾಥ್ ಕುಟುಂಬಸ್ಥರು ಸದ್ಯ ಮನೆಗೆ ಬೀಗ ಹಾಕಿ ಸ್ಥಳಾಂತರಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಫರಹತಾಬಾದ್ ಪೊಲೀಸರು ಮಲ್ಲಿನಾಥ್ ಬಿರಾದಾರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಮೃತಳ ಪತಿ ಚಿದಾನಂದ ಅವರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ಸಾವಿನ ಹಿಂದಿನ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಘಟನೆಯು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಬೆಳಗಾವಿ:  ರಾಜ್ಯದ ಪ್ರಿಂಟ್ ಮೀಡಿಯಾ ಹಾಗೂ ಸೋಷಿಯಲ್ ಮೀಡಿಯಾ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ‘ಪ್ರಿಂಟ್ ಮೀಡಿಯಾ ಮತ್ತು ಸೋಷಿಯಲ್ ಮೀಡಿಯಾ ಪತ್ರಕರ್ತರ ಸಂಘ’ದ ವತಿಯಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯದ ಪ್ರಿಂಟ್ ಮೀಡಿಯಾ ಹಾಗೂ ಸೋಷಿಯಲ್ ಮೀಡಿಯಾ ಪತ್ರಕರ್ತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಪ್ರಿಂಟ್ ಮೀಡಿಯಾ ಮತ್ತು ಸೋಷಿಯಲ್ ಮೀಡಿಯಾ ಪತ್ರಕರ್ತರ ಸಂಘದ ವತಿಯಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು. ಸಂಘದ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಸಿ.ಡಿ. ಹಾಗೂ ರಾಜ್ಯ ಉಪಾಧ್ಯಕ್ಷ ನಟರಾಜು ಜಿ.ಎಲ್. ಅವರು ಕಾರ್ಮಿಕ ಇಲಾಖೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ, ಐಟಿ–ಬಿಟಿ ಇಲಾಖೆ ಸಂಬಂಧಿಸಿದಂತೆ ಐಟಿ–ಬಿಟಿ ಸಚಿವ ಪ್ರಿಯಾಂಕಾ ಖರ್ಗೆ ಅವರಿಗೆ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪರವಾಗಿ ಆಪ್ತ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು. ಮನವಿ ಪತ್ರದಲ್ಲಿ ರಾಜ್ಯದ ಪತ್ರಕರ್ತರಿಗೆ ಉಚಿತ ಬಸ್…

Read More

ಪಾವಗಡ: ತಾಲೂಕಿನ ಕಡಮಲಕುಂಟೆ ಕೈಗಾರಿಕಾ ಪ್ರದೇಶದ ಪೆನುಕೊಂಡ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ. ಪಾವಗಡದಿಂದ ಪೆನುಕೊಂಡದ ಕಡೆಗೆ ಸಾಗುತ್ತಿದ್ದ ಇನೋವಾ ಕಾರು ಹಾಗೂ ಪೆನುಕೊಂಡದಿಂದ ಪಾವಗಡದ ಕಡೆ ಬರುತ್ತಿದ್ದ ಎಪಿಎಸ್‌ ಆರ್‌ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ್ದು ಕಾರು ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಇನೋವಾ ಕಾರಿನ ಚಾಲಕ, ಐವಾರ್ಲಹಳ್ಳಿ ಗ್ರಾಮದ ನಿವಾಸಿ ರಾಜಶೇಖರ್ ರೆಡ್ಡಿ (40) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಸ್‌ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 25 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಮಾಹಿತಿ ತಿಳಿದ ಕೂಡಲೇ ಪಾವಗಡ ಪೊಲೀಸ್ ಠಾಣೆಯ ಸಿಐ ಸುರೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಕೊರಟಗೆರೆ : ಶಾಲೆಗಳಲ್ಲಿ ಮಕ್ಕಳಿಗೆ ಕೇವಲ ಪಠ್ಯಾಧಾರಿತ ಶಿಕ್ಷಣವಷ್ಟೇ ಸಾಕಾಗುವುದಿಲ್ಲ; ಅದರ ಜೊತೆಗೆ ನೈತಿಕತೆ, ಮೌಲ್ಯಧಾರಿತ ಬದುಕು ಮತ್ತು ಮಾನವೀಯ ಗುಣಗಳನ್ನು ರೂಪಿಸುವ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹಾಗೂ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ ಅವರು ಅಭಿಪ್ರಾಯಪಟ್ಟರು. ತಾಲೂಕಿನ ಎಲೆರಾಂಪುರ ಗ್ರಾಮದಲ್ಲಿರುವ ಕುಂಚಿಟಿಗ ಮಹಾ ಸಂಸ್ಥಾನ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ಅವರು, ಮಠದ ಪೀಠಾಧ್ಯಕ್ಷ ಡಾ. ಹನುಮಂತನಾಥ ಶ್ರೀಗಳ ಆಶೀರ್ವಾದ ಪಡೆದು, ನಂತರ ಮಠದ ಸದ್ವಿದ್ಯಾ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರಿಗೆ ಬಾಲ್ಯದಲ್ಲೇ ಸತ್ಯನಿಷ್ಠೆ, ಶಿಸ್ತು, ಸಮಾಜಪರ ಜವಾಬ್ದಾರಿ ಹಾಗೂ ಮೌಲ್ಯಾಧಾರಿತ ಚಿಂತನೆಗಳನ್ನು ಬೆಳೆಸಬೇಕಿದೆ ಎಂದು ಹೇಳಿದರು. ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಮೂಲ ಅಸ್ತ್ರವಾಗಿದ್ದು, ಯುವಜನತೆ, ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕವಾದ ವಾತಾವರಣವನ್ನು…

Read More