Subscribe to Updates
Get the latest creative news from FooBar about art, design and business.
- ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
- ನವೆಂಬರ್ 23ರಂದು ನರರೋಗ ತಪಾಸಣಾ ಶಿಬಿರ: ಇಲ್ಲಿದೆ ವಿವರ
- ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!
- ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
- ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ
- ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
- ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
- ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ, ಕಲಾತಂಡಗಳ ಮೆರುಗು
Author: admin
ಹಾವೇರಿ: ಎಕ್ಸಿಟ್ ಪೊಲ್ 100% ಕರೆಕ್ಟ್ ಆಗಿರುವುದಿಲ್ಲ. ರಿಯಲ್ ಫಲಿತಾಶ ಬರುವಾಗ ಪ್ಲಸ್ ಮೈನಸ್ ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾಂವಿ ಪಟ್ಟಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಎಕ್ಸಿಟ್ ಪೊಲ್ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಬಿಜೆಪಿ ಬಹುಮತ ಸಿಗುತ್ತದೆ. ಹಾಗಾಗಿ ಯಾವುದೇ ರೆಸಾರ್ಟ್ ರಾಜಕೀಯ ಮಾಡುವ ಪ್ರಶ್ನೆ ಇಲ್ಲ. ಮೇ 13 ರ ಫಲಿತಾಂಶ ಬರುವ ತನಕ ಕಾದು ನೋಡಿ. ನಾವೇ ಕಿಂಗ್ ಆಗುತ್ತೇವೆ. ಜೆಡಿಎಸ್ ಕಿಂಗ್ ಮೇಕರ್ ಆಗುವುದಿಲ್ಲ. ಬಿಜೆಪಿಗೆ ಸಂಪುರ್ಣ ಬಹುಮತ ಸಿಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಶಿಗ್ಗಾಂವಿ ಕ್ಷೇತ್ರದ ಕಾರ್ಯಕರ್ತರಿಗೆ ಸಿಎಂ ಬೊಮ್ಮಾಯಿ ಧನ್ಯವಾದ ತಿಳಿಸಿದರು. ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೆ ಬಾರಿ ಆಯ್ಕೆ ಮಾಡಲು ಶ್ರಮಿಸಿದವರಿಗೆ ಧನ್ಯವಾದ ತಿಳಿಸಿದರು. ಬಳಿಕ ಕಾರ್ಯಕರ್ತರ ಜೊತೆ ಫೋಟೋ ತೆಗಿಸಿಕೊಂಡು ಸಂತಸದಿಂದ ಕೈ ಕುಲುಕಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಚುನಾವಣೆ ಮುಗಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸಿಂಗಾಪುರ್ ಗೆ ತೆರಳಿದ್ದಾರೆ. ಮಧ್ಯರಾತ್ರಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಸಿಂಗಾಪುರ್ ನತ್ತ ಪ್ರಯಾಣ ಬೆಳೆಸಿದ್ದಾರೆ. ಕಳೆದ ಆರು ತಿಂಗಳಿನಿಂದ ಸತತ ಪ್ರಚಾರ, ಪ್ರವಾಸದಿಂದ ಸುಸ್ತಾಗಿದ್ದ ಹೆಚ್ಡಿಕೆ ಎರಡು ದಿನಗಳ ಕಾಲ ವಿಶ್ರಾಂತಿಗಾಗಿ ಸಿಂಗಾಪುರ್ ಪ್ರಯಾಣ ಬೆಳೆಸಿದ್ದಾರೆ. ಒಟ್ಟಿನಲ್ಲಿ ಸಮೀಕ್ಷೆ ಗಳ ಬಗ್ಗೆ ತಲೆ ಕೆಡಿಸಿಕೊಳ್ಳದ ಹೆಚ್ಡಿಕೆ ಫಲಿತಾಂಶದ ದಿನ ವಾಪಸ್ಸಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದಿ ಕೇರಳ ಸ್ಟೋರಿ ತಂಡದ ಸಿಬ್ಬಂದಿ ಲಕ್ನೋದಲ್ಲಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದರು. ನಟಿ ಅದಾ ಶರ್ಮಾ, ನಿರ್ದೇಶಕ ಸುದೀಪ್ತೋ ಸೇನ್ ಮತ್ತು ನಿರ್ಮಾಪಕ ವಿಪುಲ್ ಅಮೃತಲಾಲ್ ಶಾ ಕೂಡ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಲು ಬಂದಿದ್ದರು. ಮೇ 12 ರಂದು ಲೋಕಭವನದಲ್ಲಿ ವಿಶೇಷ ಪ್ರದರ್ಶನದಲ್ಲಿ ಯೋಗಿ ಆದಿತ್ಯನಾಥ್ ಚಿತ್ರವನ್ನು ವೀಕ್ಷಿಸಲಿದ್ದಾರೆ ಎಂದು ವರದಿಯಾಗಿದೆ. ಅಂದು ಚಿತ್ರ ವೀಕ್ಷಿಸಲು ಎಲ್ಲ ಸಚಿವರೂ ಯೋಗಿ ಜತೆಗಿರುವ ಸೂಚನೆಗಳಿವೆ. ಉತ್ತರ ಪ್ರದೇಶ ಸರ್ಕಾರ ಮತ್ತು ಯೋಗಿ ಜಿ ಈ ಕ್ರಮವನ್ನು ತೆಗೆದುಕೊಂಡರು ಮತ್ತು ನಮ್ಮ ನೈತಿಕತೆಯನ್ನು ಬಹಳಷ್ಟು ಹೆಚ್ಚಿಸಿದರು. ಮುಖ್ಯಮಂತ್ರಿಗಳಿಗೆ ನಾವು ತುಂಬಾ ಕೃತಜ್ಞರಾಗಿರುತ್ತೇವೆ ಎಂದು ವಿಪುಲ್ ಶಾ ಹೇಳಿದರು. ಕಳೆದ ದಿನ ರಾಜ್ಯದಲ್ಲಿ ಸಿನಿಮಾಗೆ ತೆರಿಗೆ ವಿನಾಯತಿ ಘೋಷಣೆಯಾಗಿದೆ. ಚಿತ್ರದ ವಿರುದ್ಧ ಹೆಚ್ಚುತ್ತಿರುವ ಆಕ್ಷೇಪಗಳ ಕುರಿತು ಯೋಗಿ ಅವರೊಂದಿಗೆ ಚಿತ್ರತಂಡ ಚರ್ಚೆ ನಡೆಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಂಗಳವಾರ ಮಧ್ಯರಾತ್ರಿ 12.30ಕ್ಕೆ ಕರೆ ಮಾಡಿ ತಮಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎನ್ನುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಆರೋಪಕ್ಕೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತೀವ್ರ ಸಿಡಿಮಿಡಿ ಗೊಂಡಿದ್ದಾರೆ. ಬುಧವಾರ ಸಂಜೆ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳ ಜೊತೆ ಮಾತನಾಡಿದ ಅವರು ರಮೇಶ ಜಾರಕಿಹೊಳಿ ಅವರ ಗೋಕಾಕ ಕ್ಷೇತ್ರ ಸೇರಿದಂತೆ ಅವರ ಉಸ್ತುವಾರಿಯ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಸೋಲುತ್ತದೆ ಎನ್ನುವುದು ಗೊತ್ತಾಗಿ ಅವರು ಹತಾಶರಾಗಿದ್ದಾರೆ, ಅವರಿಗೆ ಹುಚ್ಚು ಹಿಡಿದಿದೆ ಎಂದು ಕಿಡಿಕಾರಿದರು. ರಮೇಶ ಜಾರಕಿಹೊಳಿ ಉದ್ದಟತನದ ಮಾತುಗಳನ್ನಾಡಿದ್ದಾರೆ. ಅವರಿಗೆ ತಲೆ ಕೆಟ್ಟಿದೆ. ಅಥಣಿ, ಬೆಳಗಾವಿ ಗ್ರಾಮೀಣ, ಕಾಗವಾಡ ಮತ್ತು ಗೋಕಾಕದಲ್ಲಿ ಬಿಜೆಪಿ ಸೋಲುತ್ತದೆ ಎಂದು ಹತಾಶರಾಗಿದ್ದಾರೆ ಎಂದರು. ರಾತ್ರಿ 12.30ಕ್ಕೆ ಫೋನ್ ಮಾಡಿ ಬ್ಲ್ಯಾಕ್ ಮಾಡಿದ್ದಾರೆ ಎಂದು ಡಿ.ಕೆ.ಶಿವಕುಮಾರ ಅವರ ಮೇಲೆ ಆರೋಪ ಮಾಡಿದ್ದಾರೆ. ಮಾನ ಮರ್ಯಾದೆ ಇದ್ದರೆ ಆರೋಪಕ್ಕೆ ಪೂರಕವಾಗಿ ಅವರು ಫೋನ್ ಕರೆಯ ಸ್ಕ್ರೀನ್ ಶಾಟ್, ಕಾಲ್ ರೆಕಾರ್ಡ್ ರಿಲೀಸ್ ಮಾಡಲಿ.…
ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ ಅವರು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಹೊಗಳಿದ್ದಾರೆ. ಮಮತಾ ಭಾರತದ ಪ್ರಧಾನಿಯಾಗಬೇಕಿತ್ತು. ಅಧಿಕಾರದಲ್ಲಿರುವವರಿಂದ ಬೆದರಲಾಗದ ಮಮತಾ ಮುಖ್ಯಮಂತ್ರಿಯಾಗಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ದೇಶದ ಪ್ರಧಾನಿಯಾಗಬೇಕು. ಇತರ ನಾಯಕರು ಇಂದು ಕೇಂದ್ರೀಯ ಸಂಸ್ಥೆಗಳಿಗೆ ಹೆದರಿ ಸರ್ಕಾರವನ್ನು ಹೆಚ್ಚು ಟೀಕಿಸುವುದಿಲ್ಲ. ಅವರಿಗೆ ಇಡಿ ಮತ್ತು ಸಿಬಿಐ ಭಯವಿದೆ. ಇದು ದೇಶದ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಆದರೆ ಮಮತಾ ಬ್ಯಾನರ್ಜಿ ಧೈರ್ಯಶಾಲಿ. ಅವರು ಎಡಪಕ್ಷಗಳ ವಿರುದ್ಧ ಹೇಗೆ ನಿಲುವು ತಳೆದರು ಎಂಬುದನ್ನು ಕಲಿಯೋಣ. ಇಂದಿನ ಪರಿಸ್ಥಿತಿಯಲ್ಲಿ ಯಾರಿಗೂ ಹೆದರದ ಏಕೈಕ ನಾಯಕಿ ಮಮತಾ ಬ್ಯಾನರ್ಜಿ ಎಂದು ಹೇಳಿದರು. ಯಾರಿಗೂ ಹೆದರದ, ಆಡಳಿತ ಪಕ್ಷದ ಮಿತ್ರರಲ್ಲದ ಉತ್ತಮ ಪ್ರತಿಪಕ್ಷ ದೇಶಕ್ಕೆ ಬೇಕು. ದೇಶಕ್ಕೆ ಬಲಿಷ್ಠ ಪ್ರತಿಪಕ್ಷದ ಅಗತ್ಯವಿದೆ, ಅದನ್ನು ಆಡಳಿತ ಪಕ್ಷದ ಜನರು ಬ್ಲ್ಯಾಕ್ ಮೇಲ್ ಮಾಡಲು ಸಾಧ್ಯವಿಲ್ಲ ಎಂದು ಸ್ವಾಮಿ ಹೇಳಿದರು.…
ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಸಂಚು ರೂಪಿಸಿದ್ದ ಐವರನ್ನು ಬಂಧಿಸಲಾಗಿದೆ. ಸದ್ಯ ಬಾಂಬ್ ಎಸೆದ ವ್ಯಕ್ತಿ ಸೇರಿದಂತೆ 5 ಮಂದಿಯನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ ಅಮೃತಸರದಲ್ಲಿ ಸ್ಫೋಟ ಸಂಭವಿಸಿದೆ. ವಿವಿಧ ರೀತಿಯ ಪಟಾಕಿಗಳಲ್ಲಿ ಬಳಸುವ ಪೊಟಾಶಿಯಂ ಕ್ಲೋರೇಟ್ ಬಳಸಿ ಸ್ಫೋಟ ನಡೆಸಲಾಗಿದೆ ಎಂಬುದು ಪ್ರಾಥಮಿಕ ಮಾಹಿತಿ. ಮೊನ್ನೆ ಮೇ 6 ಮತ್ತು 8ರಂದು ಗೋಲ್ಡನ್ ಟೆಂಪಲ್ ಬಳಿ ಸ್ಫೋಟ ಸಂಭವಿಸಿತ್ತು. ಮಧ್ಯರಾತ್ರಿ 12.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ವರದಿಗಳ ಪ್ರಕಾರ, ತನಗೆ ಯಾವುದೇ ಸಂಘಟನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಪ್ರಮುಖ ಆರೋಪಿ ಹೇಳಿಕೆ ನೀಡಿದ್ದಾನೆ. ಕೆಲವು ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತರುವುದು ಉದ್ದೇಶವಾಗಿತ್ತು ಎಂದು ವರದಿಯಲ್ಲಿ ವಿವರಿಸಲಾಗಿದ್ದು, ಆರೋಪಿಗಳು ಹೇಳಿಕೆ ನೀಡಿದ್ದಾರೆ. ಆರೋಪಿಯಿಂದ ಡ್ರಗ್ ಇಂಜೆಕ್ಷನ್ ಕೂಡ ವಶಪಡಿಸಿಕೊಳ್ಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಭೂಮಿ ವಸತಿ ಕೊಡದೇ ನಮ್ಮ ಓಟು ಕೊಡೆವು ಎಂಬ ಘೋಷಣೆಯೊಂದಿಗೆ ಹೋರಾಟ ನಡೆಸುತ್ತಿದ್ದ ಅಲೆಮಾರಿ ಸಮುದಾಯವು ಮತದಾನದ ದಿನವಾದ ಮೇ 10ರಂದು ತಮ್ಮ ಜವಾಬ್ದಾರಿಯನ್ನು ಅರಿತು ಮತಚಲಾಯಿಸಿದ್ದಾರೆ. ಭೂಮಿ ವಸತಿ ಕೊಡದೇ ನಮ್ಮ ಓಟು ಕೊಡೆವು ಎಂಬ ಬ್ಯಾನರ್ ನ್ನು ನಮ್ಮ ಗುಡಿಸಲಿಗೆ ಹಾಕಿಕೊಂಡು, ಮತ ಕೇಳಲು ಬಂದ ಪ್ರತಿಯೊಬ್ಬರ ಜನಪ್ರತಿನಿಧಿಗೂ ನಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದೇವೆ. ಹಣ, ಹೆಂಡ, ಕುಕ್ಕರ್ ಮತ್ತಿತರ ಆಮಿಷಗಳಿಗೆ ಬಲಿಯಾಗದೇ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ್ದೇವೆ ಎಂದು ಇಲ್ಲಿನ ಮುಖಂಡರು ಹೇಳಿದರು. ಪ್ರತಿ ವರ್ಷವೂ ಚುನಾವಣೆ ಬರ್ತಿದೆ ಮತ ಹಾಕಿಸಿಕೊಳ್ಳುತ್ತಲೇ ಇದ್ದಾರೆ. ಆದರೆ ಯಾವುದೇ ಪಕ್ಷದವರು ನಮಗೆ ಯಾವುದೇ ಮೂಲಭೂತ ಸೌಕರ್ಯಗಳನ್ನು ಮಾಡಿಕೊಟ್ಟಿಲ್ಲ. ಈ ಬಾರಿಯೂ ನಾವು ನಮ್ಮ ಜವಾಬ್ದಾರಿಯನ್ನು ಅರಿತು ಮತದಾನ ಮಾಡುತ್ತೇವೆ. ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು ನಮಗೆ ಮನೆ ಹಕ್ಕು ಪತ್ರ ಹಾಗೂ ಮೂಲಭೂತ ಸೌಕರ್ಯ ಒದಗಿಸುವಂತೆ ಗ್ರಾಮದ ಯುವತಿಯೊಬ್ಬರು ಮನವಿ ಮಾಡಿಕೊಂಡರು. ಬದಲಾವಣೆ ಜಗದ ನಿಯಮ ಅದರಂತೆ ತುಮಕೂರು ಜಿಲ್ಲೆ ತುಮಕೂರು ತಾಲೂಕು…
(ಬೆಳಿಗ್ಗೆ 07 :00 ಘಂಟೆಯಿಂದ ಸಂಜೆ 05:00 ರವರೆಗೆ) ಐದನೇ ಸುತ್ತು ಸಂಜೆ 05:00 ಗಂಟೆಯವರೆಗೆ ನಡೆದ ಶೇಕಡಾವಾರು ಮತದಾನ ವಿವರ’:- 128- ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ – ಶೇ. 78.83 129- ತಿಪಟೂರು ವಿಧಾನಸಭಾ ಕ್ಷೇತ್ರ – ಶೇ. 76.68 130 -ತುರುವೇಕೆರೆ ವಿಧಾನಸಭಾ ಕ್ಷೇತ್ರ – ಶೇ. 79.58 131-ಕುಣಿಗಲ್ ವಿಧಾನಸಭಾ ಕ್ಷೇತ್ರ – ಶೇ. 81.12 132-ತುಮಕೂರು ನಗರ ವಿಧಾನಸಭಾ ಕ್ಷೇತ್ರ – ಶೇ61.53 133-ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ -ಶೇ. 76.38 134-ಕೊರಟಗೆರೆ ವಿಧಾನಸಭಾ ಕ್ಷೇತ್ರ – ಶೇ 75.54 135-ಗುಬ್ಬಿ ವಿಧಾನಸಭಾ ಕ್ಷೇತ್ರ – ಶೇ 77.18 136- ಶಿರಾ ವಿಧಾನಸಭಾ ಕ್ಷೇತ್ರ – ಶೇ 72.78 137-ಪಾವಗಡ ವಿಧಾನಸಭಾ ಕ್ಷೇತ್ರ – ಶೇ 77.89 138 – ಮಧುಗಿರಿ ವಿಧಾನಸಭಾ ಕ್ಷೇತ್ರ -ಶೇ 74.87 ಜಿಲ್ಲೆಯಲ್ಲಿ ಸಂಜೆ 05:00 ಗಂಟೆಯವರೆಗೆ ನಡೆದಿರುವ ಐದನೇ ಸುತ್ತಿನ ಸರಾಸರಿ ಮತದಾನ ಒಟ್ಟು ಶೇ. 75.24 ನಮ್ಮತುಮಕೂರು.ಕಾಂನ…
ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರವಾರು ಚುನಾವಣೆ: 2023 ಮತದಾನ ವಿವರ (ಬೆಳಿಗ್ಗೆ 07 :00 ಘಂಟೆಯಿಂದ ಮಧ್ಯಾಹ್ನ 03:00 ರವರಗೆ) ನಾಲ್ಕನೇ ಸುತ್ತು ಮಧ್ಯಾಹ್ನ 03:00 ಗಂಟೆಯವರೆಗೆ ನಡೆದ ಶೇಕಡಾವಾರು ಮತದಾನ ವಿವರ: 128- ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ = ಶೇ. 61.45 129- ತಿಪಟೂರು ವಿಧಾನಸಭಾ ಕ್ಷೇತ್ರ – ಶೇ. 59.44 130 -ತುರುವೇಕೆರೆ ವಿಧಾನಸಭಾ ಕ್ಷೇತ್ರ – ಶೇ. 62.66 131-ಕುಣಿಗಲ್ ವಿಧಾನಸಭಾ ಕ್ಷೇತ್ರ – ಶೇ. 64.64 132-ತುಮಕೂರು ನಗರ ವಿಧಾನಸಭಾ ಕ್ಷೇತ್ರ – ಶೇ49.20 133-ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ -ಶೇ. 59.09 134-ಕೊರಟಗೆರೆ ವಿಧಾನಸಭಾ ಕ್ಷೇತ್ರ – ಶೇ 50.25 135-ಗುಬ್ಬಿ ವಿಧಾನಸಭಾ ಕ್ಷೇತ್ರ – ಶೇ 59.36 136- ಶಿರಾ ವಿಧಾನಸಭಾ ಕ್ಷೇತ್ರ – ಶೇ 54.48 137-ಪಾವಗಡ ವಿಧಾನಸಭಾ ಕ್ಷೇತ್ರ – ಶೇ 60.80 138 – ಮಧುಗಿರಿ ವಿಧಾನಸಭಾ ಕ್ಷೇತ್ರ -ಶೇ 57.58 ಜಿಲ್ಲೆಯಲ್ಲಿ ಮಧ್ಯಾಹ್ನ 03:00…
ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಬೆಳ್ಳಂ ಬೆಳಿಗ್ಗೆ ತಮ್ಮ ಮತ ಚಲಾವಯಿಸುವುದರ ಮೂಲಕ ಎಲ್ಲರಿಗೂ ಖಡ್ಡಾಯ ಮತ ಚಲಾವಣೆ ಮಾಡಲು ಸಂದೇಶ ನೀಡಿದ್ದಾರೆ. ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಅವರು ವಿಶ್ವೇಶ್ವರಯ್ಯ ನಗರದ ಸರಕಾರಿ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಮತವನ್ನು ಚಲಾಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy