Subscribe to Updates
Get the latest creative news from FooBar about art, design and business.
- ನವೆಂಬರ್ 23ರಂದು ನರರೋಗ ತಪಾಸಣಾ ಶಿಬಿರ: ಇಲ್ಲಿದೆ ವಿವರ
- ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!
- ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
- ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ
- ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
- ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
- ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ, ಕಲಾತಂಡಗಳ ಮೆರುಗು
- ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ
Author: admin
ಮಹೇಂದ್ರ ಸಿಂಗ್ ಧೋನಿ ತಮಿಳುನಾಡಿನ ದತ್ತುಪುತ್ರ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವುದನ್ನು ಮುಂದುವರಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಕ್ರೀಡಾ ಇಲಾಖೆಯ ಅಡಿಯಲ್ಲಿ ಆರಂಭವಾದ ತಮಿಳುನಾಡು ಚಾಂಪಿಯನ್ಶಿಪ್ ಫೌಂಡೇಶನ್ನ ಉದ್ಘಾಟನಾ ಸಮಾರಂಭದಲ್ಲಿ ಧೋನಿ ಸ್ಟಾಲಿನ್ ಅವರ ಪ್ರಾಮಾಣಿಕತೆಗೆ ಸಾಕ್ಷಿಯಾದರು. ಚೆನ್ನೈನ ಲೀಲಾ ಪ್ಯಾಲೇಸ್ನಲ್ಲಿ ನಡೆದ ಸಮಾರಂಭದಲ್ಲಿ ಸ್ಟಾಲಿನ್ ಮತ್ತು ಧೋನಿ ಅವರಲ್ಲದೆ, ಸಚಿವರಾದ ಉದಯನಿಧಿ ಸ್ಟಾಲಿನ್, ತಂಗಮ್ ತೆನ್ನರಾಶ್ ಮತ್ತು ಇತರ ಗಣ್ಯರು ಭಾಗವಹಿಸಿದ್ದರು. ಚಿಕ್ಕ ಕುಟುಂಬದಿಂದ ಕಠಿಣ ಪರಿಶ್ರಮದಿಂದ ಅವರು ರಾಷ್ಟ್ರೀಯ ಐಕಾನ್ ಆದರು. ಕ್ರಿಕೆಟ್ ಮಾತ್ರವಲ್ಲದೆ ಎಲ್ಲಾ ಕ್ರೀಡೆಗಳಲ್ಲಿ ತಮಿಳುನಾಡಿನಿಂದ ಅನೇಕ ಧೋನಿಗಳನ್ನು ನಾವು ಸೃಷ್ಟಿಸಬೇಕು ಎಂದು ಸ್ಟಾಲಿನ್ ಹೇಳಿದ್ದಾರೆ. ಇತ್ತೀಚೆಗೆ ನಾನು ಧೋನಿ ಬ್ಯಾಟಿಂಗ್ ವೀಕ್ಷಿಸಲು ಎರಡು ಬಾರಿ ಚೆಪಾಕ್ ಸ್ಟೇಡಿಯಂಗೆ ಹೋಗಿದ್ದೆ. ತಮಿಳುನಾಡಿನ ಎಲ್ಲರಂತೆ ನಾನು ಧೋನಿಯ ದೊಡ್ಡ ಅಭಿಮಾನಿ. ನಮ್ಮ ತಮಿಳುನಾಡಿನ ದತ್ತುಪುತ್ರ CSK ಗಾಗಿ ಆಟ ಮುಂದುವರಿಯಲಿ ಎಂದು ನಾನು ಭಾವಿಸುತ್ತೇನೆ – ಸ್ಟಾಲಿನ್ ಹೇಳಿದರು.…
ಬೆಳಗಾವಿ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದ ಮತದಾನ ಪ್ರಕ್ರಿಯೆಗೆ ಜನತೆ ಉತ್ತಮವಾಗಿ ಸ್ಪಂದಿಸುತ್ತಿದ್ದು ಇಲ್ಲಿಯವರೆಗೂ ಪ್ರತಿಶತ 9% ರಷ್ಟು ಮತದಾನ ಪ್ರಕ್ರಿಯೆ ಜರುಗಿದೆ. ರಾಜ್ಯದ ಅತಿದೊಡ್ಡ ಜಿಲ್ಲೆಯಾದ ಬೆಳಗಾವಿಯಲ್ಲಿ ಮತದಾನ ಪ್ರಕ್ರಿಯೆ ಜೋರಾಗಿದೆ. ಕೇವಲ ನಗರದಲ್ಲಿ ಮಾತ್ರವಲ್ಲದೆ ಗ್ರಾಮೀಣ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದು ಜಿಲ್ಲೆಯಾದ್ಯಂತ ಶೆ.9% ರಷ್ಟು ಮತದಾನ ಪ್ರಕ್ರಿಯೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್ಖಾನ್ನನ್ನು ಇಸ್ಲಾಮಾಬಾದ್ನಲ್ಲಿ ಬಂಧಿಸಲಾಗಿದೆ, ಇಸ್ಲಾಮಾಬಾದ್ನಲ್ಲಿ ಪಾಕಿಸ್ತಾನ ರೇಂಜರ್ಸ್ ಇಮ್ರಾನ್ ಖಾನ್ರನ್ನು ವಶಕ್ಕೆ ಪಡೆದುಕೊಂಡಿದೆ. ಪಾಕಿಸ್ತಾನದ ಸೇನೆಯನ್ನು ಸಾರ್ವಜನಿಕವಾಗಿ ಟೀಕೆ ಮಾಡಿದ ಕೆಲವೇ ದಿನಗಳಲ್ಲಿ ಇಮ್ರಾನ್ ಖಾನ್ರನ್ನು ಬಂಧಿಸಲಾಗಿದೆ. ಅಲ್ ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಇಮ್ರಾನ್ ನನ್ನು ಬಂಧಿಸಲಾಗಿದೆ, ವಿಶ್ವವಿದ್ಯಾಲಯಕ್ಕೆ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದರು ಎಂದು ಉದ್ಯಮಿ ಮಲ್ಲಿಕ್ ರಿವಾಜ್ ಹೇಳಿದ್ದರು.ಇ ಮ್ರಾನ್ ಮತ್ತು ಅವರ ಪತ್ನಿ ತಮ್ಮ ಹೆಸರಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಪಡೆದಿದ್ದಾರೆ. ನಂತರ ರಿಯಾಜ್ ಮತ್ತು ಅವರ ಮಗಳ ನಡುವಿನ ಸಂಭಾಷಣೆಯ ಆಡಿಯೋ ಸೋರಿಕೆಯಾಗಿದೆ. ಇದರಲ್ಲಿ ಇಮ್ರಾನ್ ಪತ್ನಿ ಬುಶ್ರಾ ಬೀಬಿ ತನಗೆ ಐದು ಕ್ಯಾರೆಟ್ ವಜ್ರದ ಉಂಗುರ ಬೇಕೆಂದು ನಿರಂತರವಾಗಿ ಕೇಳುತ್ತಿದ್ದಳು ಎಂದು ರಿಯಾಜ್ ಪುತ್ರಿ ಹೇಳಿದ್ದಾಳೆ. ರಾಜಧಾನಿಯ ನ್ಯಾಯಾಲಯಕ್ಕೆ ಸೇರಿದ ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಇಸ್ಲಾಮಾಬಾದ್ನ ಸೆಷನ್ಸ್ ನ್ಯಾಯಾಲಯವು ಖಾನ್ಗೆ ಜಾಮೀನು ರಹಿತ ಬಂಧನ ವಾರಂಟ್…
ರೈಲು ಪ್ರಯಾಣದ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಟಿಕೆಟ್ ಪರೀಕ್ಷಕನನ್ನು ಬಂಧಿಸಲಾಗಿದೆ. ಇಂದು ಬೆಳಗ್ಗೆ ನಿಲಂಬೂರ್ ಕೊಚುವೇಲಿ ರಾಜ್ಯ ರಾಣಿ ಎಕ್ಸ್ಪ್ರೆಸ್ನಲ್ಲಿ ಈ ಘಟನೆ ನಡೆದಿದೆ. ತಿರುವನಂತಪುರದ ಟಿಕೆಟ್ ಪರೀಕ್ಷಕ ನಿತೀಶ್ ಅವರನ್ನು ಕೊಟ್ಟಾಯಂ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ತಪಾಸಣೆ ನಡೆಸಿದಾಗ ಆತ ಪಾನಮತ್ತನಾಗಿದ್ದ ಎಂದು ತಿಳಿದುಬಂದಿದೆ. ನಿಲಂಬೂರಿನಿಂದ ಕೊಚುವೇಲಿಗೆ ತೆರಳಲು ಮಹಿಳೆ ರೈಲು ಹತ್ತಿದ್ದಾರೆ. ಯುವತಿ ಒಬ್ಬಳೇ ಇದ್ದುದರಿಂದ ಆಕೆಯನ್ನು ಬಿಡಿಸಲು ಬಂದ ತಂದೆ ಟಿಕೆಟ್ ಪರೀಕ್ಷಕನಿಗೆ ಮಗಳತ್ತ ಗಮನ ಹರಿಸುವಂತೆ ಹೇಳಿದ್ದಾನೆ.ಬಳಿಕ ರಾತ್ರಿ ಒಂದು ಗಂಟೆ ಸುಮಾರಿಗೆ ಟಿಕೆಟ್ ಪರೀಕ್ಷಕ ನಿಧೀಶ್ ಒಂಟಿಯಾಗಿದ್ದ ಮಹಿಳೆಯ ಬಳಿ ಬಂದು ಅವಾಚ್ಯವಾಗಿ ಮಾತನಾಡಲು ಆರಂಭಿಸಿದ್ದಾನೆ. ಇನ್ನೊಂದು ಕಂಪಾರ್ಟ್ಮೆಂಟ್ಗೆ ಹೋಗುವಂತೆಯೂ ಹೇಳಿದರು. ಮಹಿಳೆ ನಿರಾಕರಿಸಿದಾಗ ಆಲುವಾದಲ್ಲಿ ಬಲವಂತವಾಗಿ ಆಕೆಯ ಕೈ ಹಿಡಿದಿದ್ದಾನೆ. ಮತ್ತೆ ಕಿರುಕುಳ ನೀಡಲು ಯತ್ನಿಸಿದಾಗ ಮಹಿಳೆ ತಿರುವನಂತಪುರಂ ರೈಲ್ವೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ದೂರು ನೀಡಿದ್ದಾಳೆ. ಬಂಧನದ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆತ ಕುಡಿದಿರುವುದು ಪತ್ತೆಯಾಗಿದೆ.ರೈಲಿನಲ್ಲಿ…
ತುರುವೇಕೆರೆ: ರಾಯಸಂದ್ರದಿಂದ ಕೆ.ಕೊಪ್ಪ ಗ್ರಾಮದ ಮತಗಟ್ಟೆಗೆ ಸಂಪರ್ಕಿಸುವ 1/2 ಕಿಲೋಮೀಟರ್ ರಸ್ತೆ, ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದ ಕೆಸರುಮಯವಾಗಿದ್ದು, ಇದರಿಂದಾಗಿ ಇಲ್ಲಿನ ಸಾರ್ವಜನಿಕರು ತೀವ್ರವಾಗಿ ಸಮಸ್ಯೆಗೀಡಾಗಿದ್ದು, ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಹೋರಾಟಗಾರ ರಾಯಸಂದ್ರ ಶಶಿಧರ್, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ತುರುವೇಕೆರೆ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 56 ರಲ್ಲಿ ಇಲ್ಲಿನ ನಾಗರಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ವೈಜ್ಞಾನಿಕವಾಗಿ ಮತಗಟ್ಟೆಯನ್ನ ಗುರುತಿಸಿರುವ ಚುನಾವಣಾ ಆಯೋಗ ಮತ್ತು ಚುನಾವಣಾ ಅಧಿಕಾರಿಗಳ ಮೇಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ ಚಲಾವಣೆ ಮಾಡಲು ಸುಮಾರು ಏಳು ಕಿಲೋಮೀಟರ್ ಗಳ ಬದಲಿ ರಸ್ತೆಯಾದ ಶ್ರೀ ರಾಮಪುರ ಮಾರ್ಗವಾಗಿ ಕೊಪ್ಪವನ್ನು ತಲುಪಬೇಕಾಗಿದೆ. ವಯಸ್ಸಾದ ನಾಗರಿಕರಿಗೆ ಮತಗಟ್ಟೆ ತಲುಪಲು ಅರಸಹಾಸ ನಡೆಸಿ ಹೆಸರಿನಲ್ಲೇ ನಡೆದುಹೋಗುವ ಪರಿಸ್ಥಿತಿ ಉಂಟಾಗಿದೆ . ಸ್ಥಳಕ್ಕೆ ಚುನಾವಣಾ ಅಧಿಕಾರಿಗಳು ಬರುವವರೆಗೂ ಯಾವೊಬ್ಬ ಮತದಾರರನ್ನು ಮತ ಚಲಾವಣೆ ಮಾಡಲು ಬಿಡುವುದಿಲ್ಲ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ…
ಬಾಗಲಕೋಟೆ: ಮುಧೋಳ ವಿಧಾನಸಭಾ ಕ್ಷೇತ್ರದ ಚೌಡಾಪುರ ಗ್ರಾಮದ ಮತಗಟ್ಟೆ ಬಳಿ ರಾತ್ರಿ ವಾಮಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ದ ವಾಮಾಚಾರ ಮಾಡಲು ಇಬ್ಬರು ವ್ಯಕ್ತಿಗಳು ಚೀಲದಲ್ಲಿ ವಾಮಾಚಾರದ ವಸ್ತುಗಳನ್ನು ತಂದಿದ್ದರು. ಎನ್ನಲಾಗುತ್ತಿದೆ. ಈ ವೇಳೆ ಗ್ರಾಮದ ಕೆಲವರು ನೋಡಿ, ವಾಮಾಚಾರ ಮಾಡಿಸಲು ಬಂದಿದ್ದವರನ್ನು ತರಾಟೆಗೆ ತೆಗೆದುಕೊಂಡು ಕಳಿಸಿದ್ದಾರೆ. ಗೋವಿಂದ ಕಾರಜೋಳ ಅವರಿಗೆ ಮತಗಳು ಬಾರದಿರಲಿ ಎಂದು ವಾಮಚಾರ ಮಾಡಿಸಲು ಬಂದಿದ್ರು ಎನ್ನುವ ಆರೋಪ ಕೇಳಿಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ 2023 ಕ್ಕೆ ಇಂದು ಮತದಾನ ಆರಂಭಗೊಂಡಿದೆ. ರಾಜ್ಯದ 224 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಒಟ್ಟು 2,615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ರಾಜಕೀಯ ಧುರೀಣರ ಭವಿಷ್ಯ ನಿರ್ಧಾರ ಆಗಲಿದೆ. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಎಲ್ಲರೂ ಮತದಾನ ಮಾಡುವಂತೆ ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಈ ಬಾರಿ ಹೊಸದಾಗಿ 16,04,285 ಮತದಾರರು ಸೇರ್ಪಡೆಯಾಗಿದ್ದಾರೆ. ರಾಜ್ಯದಲ್ಲಿ 18ರಿಂದ 19 ವಯಸ್ಸಿನ 11,71,558 ಯುವ ಮತದಾರರಿದ್ದು, ಯುವಕರು 645140, ಯುವತಿಯರು 526237, ಇತರೆ 181 ಮತದಾರರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ನಮ್ಮ ಪ್ರಣಾಳಿಕೆಯಲ್ಲಿನ ಎಲ್ಲ ಭರವಸೆಗಳನ್ನು ಜಾರಿಗೆ ತರುತ್ತೇವೆ. ರಾಜ್ಯದ ಜನತೆಗೆ ಮನವಿ ಮಾಡಿಕೊಳ್ಳುತ್ತೇನೆ. ಕಾಂಗ್ರೆಸ್ ಮತ ಕೊಡುವಂತೆ ಮನವಿ ಮಾಡಿಕೊಳ್ಳುತ್ತೇನೆ. ಕಾಂಗ್ರೆಸ್ 130 ಸೀಟ್ ಬರುವ ವಿಶ್ವಾಸ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನ ಸಿದ್ದಾರ್ಥ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 133ರ ಬೂತ್ ನಂ 59ರಲ್ಲಿ ಪತ್ನಿ ಕನ್ನಿಕಾ ಪರಮೇಶ್ವರ್ ಸಮೇತ ಬಂದು ಮತ ಚಲಾವಣೆ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊರಟಗೆರೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ. ಉದ್ದೇಶ ಪೂರ್ವಕವಾಗಿ ನಾನು ಓದಿದ ಊರು, ಶಾಲೆಯಲ್ಲೇ ಮತದಾನ ಮಾಡುತ್ತೇನೆ ಎಂದರು. ಇಲ್ಲಿನ ನನಗೆ ಭಾವನಾತ್ಮಕ ಸಂಬಂಧ ಇದೆ. ಹಾಗಾಗಿ ನಾನು ಸ್ಪರ್ಧೆ ಮಾಡುವ ಕೊರಟಗೆರೆ ಕ್ಷೇತ್ರದಲ್ಲಿ ಮತ ವರ್ಗಾವಣೆ ಮಾಡಿಕೊಂಡಿಲ್ಲ ಎಂದರು. ಸಂತೋಷದಿಂದ ಮತಚಲಾವಣೆ ಮಾಡಿದ್ದೇನೆ. ಗ್ರಾಮಾಂತರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಷಣ್ಮುಖಪ್ಪ ಗೆದಿಯ ಬೇಕು ಅಂತ ನಮ್ಮೆಲ್ಲರಿಗೂ ಆಸೆ ಇದೆ. ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಮತ್ತೊಮ್ಮೆ…
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಮತಗಟ್ಟೆ ಸಂಖ್ಯೆ 116ರಲ್ಲಿ ಮತ ಚಲಾಯಿಸಿದರು. ಸಿದ್ದಗಂಗಾ ಮಠದ ಆವರಣದಲ್ಲಿರುವ ಶ್ರೀ ಸಿದ್ದಲಿಂಗೇಶ್ವರ ಸನಿವಾಸ ಹಿರಿಯ ಪ್ರಾಥಮಿಕ ಪಾಠಶಾಲೆಯ ಕೊಠಡಿಯಲ್ಲಿ ಮತಗಟ್ಟೆಯನ್ನು ಸ್ಥಾಪಿಸಲಾಗಿದ್ದು ಮೊದಲ ಮತದಾನ ಮಾಡಿದರು. ಮತ ಚಲಾಯಿಸಲು ಮತಗಟ್ಟೆಗೆ ಬಂದ ಸ್ವಾಮೀಜಿಯವರ ಕಾಲಿಗೆ ಬಿದ್ದು ಮತಗಟ್ಟೆ ಸಿಬ್ಬಂದಿ ಆಶೀರ್ವಾದ ಪಡೆದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ಗೋ ಫಸ್ಟ್ ಗೆ ನೋಟಿಸ್ ನೀಡಿದೆ. ಡಿಜಿಸಿಎ ಸೂಚನೆಯಲ್ಲಿ, ಸೇವೆಗಳ ನಿರಂತರ ಅಮಾನತಿಗೆ ಕಾರಣವನ್ನು ನೀಡಬೇಕು. ಈ ಟಿಪ್ಪಣಿಗೆ 15 ದಿನಗಳೊಳಗೆ ಉತ್ತರಿಸುವಂತೆಯೂ ಸೂಚಿಸಲಾಗಿದೆ. ಡಿಜಿಸಿಎ ಕೂಡ ಗೋ ಫಸ್ಟ್ ಟಿಕೆಟ್ ಮಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸುವುದಾಗಿ ಘೋಷಿಸಿದೆ. ಕಂಪನಿಯು ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ ಎಂಬುದು ಗೋ ಫಸ್ಟ್ ನ ವಿವರಣೆ. ಮೇ 12 ರವರೆಗಿನ ಸೇವೆಗಳನ್ನು ಪ್ರಸ್ತುತ ಸ್ಥಗಿತಗೊಳಿಸಲಾಗಿದೆ. ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಸಂಪೂರ್ಣ ಹಣ ಮರುಪಾವತಿ ಮಾಡಲಾಗುವುದು ಎಂದು ಕಂಪನಿ ತಿಳಿಸಿದೆ. ಅಲ್ಲದೆ, ವಾಡಿಯಾ ಗ್ರೂಪ್ ಒಡೆತನದ ಗೋಫಸ್ಟ್ ಏರ್ಲೈನ್ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್ಸಿಎಲ್ಟಿ) ಮುಂದೆ ಅರ್ಜಿ ಸಲ್ಲಿಸಿದೆ. ಕೋವಿಡ್ ನಿಂದಾಗಿ ಬಿಕ್ಕಟ್ಟಿನಲ್ಲಿರುವ ಏರ್ಲೈನ್ ನ ಸಾಲ ಮತ್ತು ಹೊಣೆಗಾರಿಕೆಗಳನ್ನು ಪುನರ್ರಚಿಸುವುದು ಕಂಪನಿಯ ಮನವಿಯಾಗಿದೆ. ಮೇ 15ರವರೆಗೆ ಗೋ ಫಸ್ಟ್ ಟಿಕೆಟ್ ಬುಕ್ಕಿಂಗ್ ಅನ್ನು ಡಿಜಿಸಿಎ ನಿಲ್ಲಿಸಿದೆ. ಕಡಿಮೆ ದರದಲ್ಲಿ ಕಾರ್ಯಾಚರಿಸುತ್ತಿರುವ ಗೋ ಫಸ್ಟ್ ಅನಿವಾಸಿಗಳು ಸೇರಿದಂತೆ ಪ್ರಯಾಣಿಕರಿಗೆ ಭಾರೀ ಸಮಾಧಾನ…