Subscribe to Updates
Get the latest creative news from FooBar about art, design and business.
- ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
- ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
- ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
- ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ
- ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ
- ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
- ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
- ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
Author: admin
ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕಿಯನ್ನ ಅಪಹರಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ರಾಮನಗರದ ಜ್ಯೂನಿಯರ್ ಕಾಲೇಜು ಬಳಿ ಸಂಜನಾ ಎಂಬ ಅಪ್ರಾಪ್ತ ಬಾಲಕಿಗೆ ಚಾಕುವಿನಿಂದ ಇರಿದು ಅಪಹರಿಸಿದ್ದರು. ಈ ವೇಳೆ ಸ್ಥಳೀಯರು ಕಲ್ಲಿನಿಂದ ಹೊಡೆದರೂ ಕಲ್ಲೇಟಿಗೂ ಬಗ್ಗೆದೇ ಅಪ್ರಾಪ್ತೆಯನ್ನ ಅಪಹರಿಸಿದ್ದರು. ಈ ನಡುವೆ ಪೊಲೀಸರು ಇನ್ನೋವಾ ಕಾರನ್ನ ಚೇಸ್ ಮಾಡಿ ಯುವಕನನ್ನು ಬಂಧಿಸಲಾಗಿದೆ. ಸಂಜನಾಳನ್ನು ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಡುಗೆ ಅನಿಲ ಸಿಲಿಂಡರ್ ಬೆಲೆ ಇಂದಿನಿಂದ ಇಳಿಕೆ. ನಿನ್ನೆ ಕೇಂದ್ರ ಸರ್ಕಾರವು ರೂ. ಇದರೊಂದಿಗೆ 1110 ರೂ.ಗಳ ಸಿಲಿಂಡರ್ 910 ರೂ. ಉಜ್ವಲ ಯೋಜನೆಯ ಗ್ರಾಹಕರಿಗೆ 400 ರೂ. ಕಡಿತಗೊಳಿಸಲಾಗುವುದು. ಎಲ್ ಪಿಜಿಗೆ ಕೇಂದ್ರ ಸರ್ಕಾರ ಘೋಷಿಸಿರುವ ಸಬ್ಸಿಡಿ ತೀವ್ರ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ದೇಶದ ಜನತೆಗೆ ನಿರಾಳವಾಗಿದೆ. 200 ಸಹಾಯಧನ ಘೋಷಿಸಲಾಗಿದೆ. ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬಳಕೆದಾರರಿಗೆ ರೂ.200 ಕಡಿತ. ಕೇರಳದಲ್ಲಿ ಪ್ರಸ್ತುತ 1110 ಇರುವ ಸಿಲಿಂಡರ್ ಬೆಲೆ 910 ರೂ.ಗೆ ಇಳಿಕೆಯಾಗಲಿದೆ.ಉಜ್ವಲ ಯೋಜನೆಯಡಿಯಲ್ಲಿ ಬರುವವರಿಗೆ 200 ರೂ.ಗಳ ಸಬ್ಸಿಡಿ ನೀಡುವುದಾಗಿ ಈ ಹಿಂದೆ ಪ್ರಧಾನಿ ಘೋಷಿಸಿದ್ದರು. ಹೊಸ ಪ್ರಯೋಜನ ಪಡೆಯುವ ಮೂಲಕ ಪ್ರತಿ ಸಿಲಿಂಡರ್ ಗೆ 400 ರೂ. ಇಳಿಕೆಯಾಗಲಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ 75 ಲಕ್ಷ ಹೊಸ ಗ್ಯಾಸ್ ಸಂಪರ್ಕಗಳನ್ನು ಉಚಿತವಾಗಿ ಅಳವಡಿಸಲಾಗುವುದು ಎಂದು ಘೋಷಿಸಲಾಯಿತು. ದೇಶದ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರದ ಘೋಷಣೆಯಾಗಿದೆ. ಇದೇ…
ರಷ್ಯಾದ ವಿರುದ್ಧ ಉಕ್ರೇನ್ ಭಾರೀ ವೈಮಾನಿಕ ದಾಳಿ ನಡೆಸಿತು. ವಾಯುವ್ಯ ನಗರದ ಸ್ಕೋಪ್ಜೆಯ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ. ವಿಮಾನ ನಿಲ್ದಾಣದಲ್ಲಿ ಹಿಂಸಾತ್ಮಕ ಸ್ಫೋಟ ಮತ್ತು ಬೆಂಕಿ ವರದಿಯಾಗಿದೆ. ನಾಲ್ಕು ವಿಮಾನಗಳು ನಾಶವಾದವು. ಈ ಮಧ್ಯೆ, ಡ್ರೋನ್ ದಾಳಿಯನ್ನು ವಿಫಲಗೊಳಿಸಿರುವುದಾಗಿ ರಷ್ಯಾ ಹೇಳಿಕೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಸೇನೆಯು ದಾಳಿಯನ್ನು ಹಿಮ್ಮೆಟ್ಟುತ್ತಿದೆ ಎಂದು ರಷ್ಯಾ ಹೇಳಿಕೊಂಡಿದೆ, ಎಂದು ಸ್ಥಳೀಯ ಗವರ್ನರ್ ಉಲ್ಲೇಖಿಸಿ ಬಿಬಿಸಿ ವರದಿ ಮಾಡಿದೆ. ಸ್ಕೋವ್ ವಿಮಾನ ನಿಲ್ದಾಣವು ಉಕ್ರೇನ್ ನಿಂದ 600 ಕಿಮೀ ದೂರದಲ್ಲಿದೆ. ಮುಂಬರುವ ವಾರಗಳಲ್ಲಿ ರಷ್ಯಾದೊಳಗಿನ ಪ್ರಮುಖ ಕೇಂದ್ರಗಳ ಮೇಲೆ ದಾಳಿ ನಡೆಸಲಾಗುವುದು ಎಂದು ವರದಿಯಾಗಿದೆ. ಆ ಉದ್ದೇಶಕ್ಕಾಗಿ ಸ್ಫೋಟಕಗಳನ್ನು ತುಂಬಿದ ಡ್ರೋನ್ ಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ. ಸ್ಕೋವ್ ವಿಮಾನ ನಿಲ್ದಾಣದ ಮೇಲಿನ ಡ್ರೋನ್ ದಾಳಿಯನ್ನು ರಕ್ಷಣಾ ಸಚಿವಾಲಯ ಸಮರ್ಥಿಸುತ್ತಿದೆ ಎಂದು ಪ್ರಾದೇಶಿಕ ಗವರ್ನರ್ ಮಿಖಾಯಿಲ್ ವೆಡೆರ್ನಿಕೋವ್ ಟೆಲಿಗ್ರಾಮ್ ನಲ್ಲಿ ತಿಳಿಸಿದ್ದಾರೆ. ಅವರು ಸ್ಫೋಟದ ಸದ್ದು ಮತ್ತು ದೊಡ್ಡ ಬೆಂಕಿಯ…
ಮಣಿಪುರದಲ್ಲಿ ಮತ್ತೆ ಘರ್ಷಣೆ, ಗುಂಡಿನ ದಾಳಿಗೆ ಇಬ್ಬರು ಸಾವು, ಏಳು ಮಂದಿ ಗಾಯಗೊಂಡಿದ್ದಾರೆ. ಬಿಷ್ಣುಪುರ್-ಚುರಚಂದಪುರ ಗಡಿಯಲ್ಲಿ ಎರಡು ಸ್ಥಳಗಳಲ್ಲಿ ಘರ್ಷಣೆ ನಡೆದಿದೆ. ಗದ್ದೆಯಲ್ಲಿ ಕೆಲಸ ಮಾಡಲು ಬಂದವರ ಮೇಲೆ ದೌರ್ಜನ್ಯ ನಡೆದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಶಾಂತಿ ನೆಲೆಸಿದೆ ಎಂಬ ಹೇಳಿಕೆಯ ಮೇರೆಗೆ ರೈತರು ವಿವಿಧೆಡೆ ಕೆಲಸ ಆರಂಭಿಸಿದರು. ಆದರೆ ದಾಳಿಕೋರರ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳೆದ ದಿನ ಬಿಷ್ಣುಪುರ ಜಿಲ್ಲೆಯಲ್ಲಿ ಸಂಘರ್ಷ ನಡೆದಿತ್ತು. ಶಂಕಿತ ಕುಕಿ ದಂಗೆಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಇಬ್ಬರು ಮೈಥೇಯ್ ರೈತರು ಸೇರಿದಂತೆ ಏಳು ಜನರು ಗಾಯಗೊಂಡಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ದಿಕ್ಕುತಪ್ಪಿದ ಸರ್ಕಾರವಾಗಿದೆ. ಬಹುಮತದ ಸರ್ಕಾರ 5 ವರ್ಷದ ಆಡಳಿತದ ದಿಕ್ಸೂಚಿ ಹೇಳಬೇಕಿತ್ತು. ಆದ್ರೆ, ಸರ್ಕಾರದ ಹಲವಾರು ವಿಚಾರಗಳಲ್ಲಿ ವೈಫಲ್ಯ ಮತ್ತು ಗೊಂದಲ ಇದೆ. ನಾಡಿನ ಜನರಿಗೆ ಕೊಟ್ಟ ಮಾತು ತಪ್ಪಿದೆ. ಹಣಕಾಸಿನ ವಿಚಾರದಲ್ಲಿ ರಾಜ್ಯ ಸರ್ಕಾರ ಹಳಿ ತಪ್ಪಿದೆ ಎಂದು ಬಸವರಾಜ ಬೊಮ್ಮಾಯಿ ಗುಡುಗಿದ್ದಾರೆ. 8 ಸಾವಿರ ಕೋಟಿ ರೂ. ಸಾಲ ಮಾಡಿದ್ದಾರೆ, ಎಲ್ಲಾ ತೆರಿಗೆ ಹೆಚ್ಚಿಸಿದ್ದಾರೆ. ಸಾಲ ಮತ್ತು ತೆರಿಗೆ ಮೂಲಕ 45 ಸಾವಿರ ಕೋಟಿ ಆದಾಯ ಇದ್ದರೂ 12 ಸಾವಿರ ಕೋಟಿ ರೂ. ಖೋತಾ ಬಜೆಟ್ ಮಂಡಿಸಿದ್ದಾರೆ. ಹಲವಾರು ಸಂಘ ಮತ್ತು ಸಂಸ್ಥೆಗಳ ಸಂಬಳ ಸರಿಯಾಗಿ ಆಗುತ್ತಿಲ್ಲ. ರಾಜ್ಯದಲ್ಲಿ 1 ಕಿ.ಮೀ. ರಸ್ತೆ ಕೂಡ ಕಾಂಗ್ರೆಸ್ ನಿರ್ಮಾಣ ಮಾಡಿಲ್ಲ. ಕೃಷಿ ಸೇರಿ ಹಲವು ಇಲಾಖೆಯಲ್ಲಿ ವರ್ಗಾವಣೆಯ ಸುಗ್ಗಿ ನಡೆದಿದೆ ಎಂದು ವಾಗ್ದಾಳಿ ನಡೆಸಿದರು. ಶಿಕ್ಷಣ, ಆರೋಗ್ಯ, ಕೃಷಿಗೆ ಪ್ರೋತ್ಸಾಹ ಇಲ್ಲ. ರಾಜ್ಯದ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಓಪನ್ ಆಗಿ ಭ್ರಷ್ಟಾಚಾರ ನಡೆಯುತ್ತಿದೆ. ಮಂತ್ರಿಗಳು, ಸಿಎಂ…
ಬಂಧಿಖಾನೆಯಲ್ಲಿರುವ ಆರೋಪಿಗಳನ್ನು ಭೇಟಿಯಾಗಲು ಬರುವ ಸಂಬಂಧಿಕರಿಂದ ಲಂಚ ಪಡೆಯುತ್ತಿದ್ದ ಬಂಧಿಖಾನೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಧುಗಿರಿಯಲ್ಲಿ ನಡೆದಿದೆ. ಬಂಧಿಖಾನೆಯಲ್ಲಿರುವ ಆರೋಪಿಗಳನ್ನು ಭೇಟಿಯಾಗಲು ಬಂದ ಸಂಬಂಧಿಕರಿಂದ ಲಂಚ ಪಡೆಯುತ್ತಿದ್ದ ಮಧುಗಿರಿ ಉಪ ಬಂಧಿಖಾನೆ ಅಧೀಕ್ಷಕ ಆರ್. ದೇವೇಂದ್ರ ಕೋಣಿ ಲೋಕಾಯುಕ್ತಾ ಬಲೆಗೆ ಬಿದ್ದಿರುವ ಅಧಿಕಾರಿಯಾಗಿದ್ದಾರೆ. ತಂದೆಯನ್ನು ನೋಡಲು ಬಂಧಿಖಾನೆಗೆ ಬರುತ್ತಿದ್ದ ಮಗನಿಂದ ಪ್ರತಿಬಾರಿಯೂ ಲಂಚಕ್ಕಾಗಿ ಬೇಡಿಕೆ ಇರಿಸುತ್ತಿದ್ದನು. ಜೊತೆಗೆ ಹಣ ನೀಡದಿದ್ದರೆ ದೂರದ ಬಂಧಿಖಾನೆಗೆ ಕಳಿಸುವುದಾಗಿ ಹೆದರಿಸಲಾಗುತ್ತಿತ್ತು, ಇದರಿಂದ ಬೇಸತ್ತ ಮಗ ಲೋಕಾಯುಕ್ತರಿಗೆ ದೂರು ನೀಡಿದ್ದರು. ಕಳೆದ ಐದು ದಿನಗಳ ಹಿಂದೆ ಶಿರಾ ಪೊಲೀಸ್ ಠಾಣೆ ಯಿಂದ 307 ಕೇಸ್ ಅಡಿ ಆರೋಪಿಯಾಗಿ ಇಂತಿಯಾಜ್ ಎಂಬುವರು ಜೈಲಿಗೆ ಬಂದಿದ್ದರು. ಇಂತಿಯಾಜ್ ನೋಡಲು ಬರುತ್ತಿದ್ದ ಮಗ ಅರ್ಬಾಜ್ ಎಂಬುವರಿಂದ ಜೈಲ್ ಅಧೀಕ್ಷಕ, ಪ್ರತಿ ಬಾರಿ ಜೈಲಿಗೆ ಬರುವಾಗ ಹಣ ಪಡೆಯುತ್ತಿದ್ದನು. ಇದುವರೆಗೂ 40,000 ಸಾವಿರದವರೆಗೂ ಹಣ ಪಡೆದಿದ್ದ ದೇವೇಂದ್ರ, ಇಂದು ಐದು ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ತುಮಕೂರು…
ಬೆಂಗಳೂರು: ರಾಜ್ಯ ಸರ್ಕಾರದಿಂದ ನೂತನವಾಗಿ ನಿರ್ಮಿಸಲಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ ಆಗಸ್ಟ್ 31ರಿಂದ ಆರಂಭವಾಗಲಿದೆ. ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ ಎತ್ತರಕ್ಕೇರಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಮಂಗಳವಾರ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಇಂಡಿಗೋ ಸಂಸ್ಥೆಯ ವಿಮಾನವು ಗುರುವಾರ ಬೆಳಿಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.05ಕ್ಕೆ ಶಿವಮೊಗ್ಗ ತಲುಪಲಿದೆ. ಆರಂಭವಾಗಲಿರುವ ಮೊದಲ ಸೇವೆಯಲ್ಲಿ ತಾವೂ ಪ್ರಯಾಣಿಸಲಿದ್ದು, ಜೊತೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಮಲೆನಾಡು ಭಾಗದ ಜನಪ್ರತಿನಿಧಿಗಳೂ ಇರಲಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿದೊಡನೆಯೇ ವಾಟರ್ ಸೆಲ್ಯೂಟ್ ಮೂಲಕ ಸಂಭ್ರಮಾಚರಿಸಲಾಗುವುದು’ ಎಂದು ತಿಳಿಸಿದ್ದಾರೆ. ಇದು ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ…
ಹಾವೇರಿ: ಪಟಾಕಿ ಅಂಗಡಿಯಲ್ಲಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಪಟಾಕಿ ಸುಟ್ಟು ಕರಕಲಾಗಿರುವ ಘಟನೆ ಹಾವೇರಿಯಲ್ಲಿ ಮಂಗಳವಾರ ನಡೆದಿದೆ. ಹಾವೇರಿಯ ಹೊರವಲಯದ ಸಾತೇನಹಳ್ಳಿ ಬಳಿ ಕುಮಾರ್ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಈ ದುರಂತ ಸಂಭವಿಸಿದ್ದು, ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನು ಮಾಡಲಾಗಿತ್ತು. ಇದೀಗ ಏಕಾಏಕಿ ಅದಕ್ಕೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣ ವಸ್ತುಗಳು ಬೆಂಕಿಗಾಹುತಿಯಾಗಿದೆ. ಮೂಲಗಳ ಪ್ರಕಾರ ಇನ್ನು ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಬರುತ್ತಿದ್ದು, ಈ ಸಂದರ್ಭದಲ್ಲಿ ಪಟಾಕಿ ಮಾರಾಟ ಮಾಡಲು ಪಟಾಕಿಗಳನ್ನು ಶೇಖರಿಸಿಡಲಾಗಿತ್ತು ಎಂದು ತಿಳಿದು ಬಂದಿದೆ.
ಮೈಸೂರು: ಈ ಬಾರಿ ಮೈಸೂರು ದಸರಾವನ್ನು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಈ ಬಾರಿ ಕೂಡ ಮೈಸೂರು ದಸರಾವನ್ನು ಸಾಂಪ್ರದಾಯಿಕಬದ್ಧವಾಗಿ ಆಚರಿಸಲಾಗುವುದು ಎಂದು ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿಯೇ ಇಂದು ಘೋಷಿಸಿದರು. ಅಕ್ಟೋಬರ್ 15ಕ್ಕೆ ದಸರಾ ಉದ್ಘಾಟನೆ: ದಸರಾ ಅಕ್ಟೋಬರ್ 15 ರ ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅಲ್ಲದೇ ಈ ಬಾರಿ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ ಎಂದು ಹೇಳಿದರು.
ಹೆಚ್ಚಿನವರು ಉನ್ನತ ವ್ಯಾಸಂಗಕ್ಕಾಗಿ ವಿದೇಶಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಅವರಲ್ಲಿ ಹೆಚ್ಚಿನವರು ಭಾರತದಿಂದ ಬಂದವರು. 2023 ರಲ್ಲಿ ಮಾತ್ರ, ಯುಕೆ ಭಾರತೀಯರಿಗೆ ಮಾತ್ರ 1,42,848 ವಿದ್ಯಾರ್ಥಿ ವೀಸಾಗಳನ್ನು ನೀಡಿದೆ. ಯುಕೆಯಲ್ಲಿರುವ ವಿದೇಶಿ ವಿದ್ಯಾರ್ಥಿಗಳಲ್ಲಿ ಮೂರನೇ ಒಂದು ಭಾಗದಷ್ಟು ಭಾರತೀಯ ವಿದ್ಯಾರ್ಥಿಗಳು ಎಂದು ವರದಿಗಳು ಸೂಚಿಸುತ್ತವೆ. ಜೂನ್ 2022 ರಲ್ಲಿ, 92,965 ವಿದ್ಯಾರ್ಥಿ ವೀಸಾಗಳನ್ನು ಅನುಮೋದಿಸಲಾಗಿದೆ. ಈ ಬಾರಿ ಮತ್ತೆ ಹೆಚ್ಚಿದೆ. ಒಂದು ವರ್ಷದಲ್ಲಿ 54 ರಷ್ಟು ಹೆಚ್ಚಳವಾಗಿದೆ. ಎರಡನೇ ಸ್ಥಾನದಲ್ಲಿ ಚೀನಾದ ವಿದ್ಯಾರ್ಥಿಗಳು ಇದ್ದಾರೆ. ಒಟ್ಟು ವಿದೇಶಿ ವಿದ್ಯಾರ್ಥಿಗಳ ಪೈಕಿ ಶೇಕಡ 50ರಷ್ಟು ಮಂದಿ ಭಾರತ ಮತ್ತು ಚೀನಾದವರು. ಅವಲಂಬಿತ ವೀಸಾಗಳ ಸಂಖ್ಯೆಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. 43,552 ಜನರು ಅವಲಂಬಿತ ವೀಸಾದಲ್ಲಿದ್ದಾರೆ. ನೈಜೀರಿಯಾ ಮೊದಲ ಸ್ಥಾನದಲ್ಲಿದೆ. 67,516 ಜನರಿದ್ದಾರೆ. ಜೂನ್ 2019 ರಿಂದ ಭಾರತೀಯ ವಿದ್ಯಾರ್ಥಿಗಳಿಗೆ ಅನುದಾನದಲ್ಲಿ ಏಳು ಪಟ್ಟು ಹೆಚ್ಚಳವಾಗಿದೆ. ಇದಾದ ನಂತರವೇ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿತ್ತು. ಈ ವರ್ಷದ ಜೂನ್ವರೆಗೆ ಒಟ್ಟು 4,98,626 ಅಧ್ಯಯನ ವೀಸಾಗಳನ್ನು ನೀಡಲಾಗಿದೆ.…