Subscribe to Updates
Get the latest creative news from FooBar about art, design and business.
- ನವೆಂಬರ್ 23ರಂದು ನರರೋಗ ತಪಾಸಣಾ ಶಿಬಿರ: ಇಲ್ಲಿದೆ ವಿವರ
- ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!
- ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
- ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ
- ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
- ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
- ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ, ಕಲಾತಂಡಗಳ ಮೆರುಗು
- ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ
Author: admin
ತುಮಕೂರು ಜಿಲ್ಲೆಯ 11 ಕ್ಷೇತ್ರಗಳ ಪೈಕಿ 11 ಕ್ಷೇತ್ರದಲ್ಲೂ ಜೆಡಿಎಸ್ ಗೆಲ್ಲುತ್ತೆ ಎಂಬ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೌರಿಶಂಕರ್ ಪರವಾಗಿ ಮತ ಪ್ರಚಾರ ನಡೆಸಿದ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದಿಂದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಹಾಗೂ ನಾಯಕರ ದಂಡು ಕರ್ನಾಟಕದಲ್ಲಿ ಬಿಡುಬಿಟ್ಟಿದ್ದಾರೆ. ಆದರೆ ಜೆಡಿಎಸ್ ಪಕ್ಷ ನಿಮ್ಮಿಂದ ಕಟ್ಟಿರೋದು. ರೈತರ,ಬಡವರ ಪರವಾಗಿ ನಿಂತಿರೋದು. ನಿಮ್ಮಗಳ ಶ್ರಮ, ಅಶಿರ್ವಾದಗಳಿಂದ ಪಂಚರತ್ನ ಯೋಜನೆ ಮೂಲಕ ರಾಜ್ಯದ ಜನರಿಗೆ ನೆಮ್ಮದಿ ಬದುಕು ಕಟ್ಟಿಕೊಡಲು. ನಮ್ಮ ಪಕ್ಷ ಮುಂದಾಗಿದೆ ಎಂದರು. ಇದನ್ನ ಈಗಾಗಲೇ ಜನತೆ ಮುಂದೆ ಮಂಡನೆ ಮಾಡಿದ್ದೇನೆ. ಎರಡು ರಾಷ್ಟ್ರೀಯ ಪಕ್ಷಗಳು ನಮ್ಮ ಜೆಡಿಎಸ್ ಬಗ್ಗೆ ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ. ಈ ಎರಡು ರಾಷ್ಟ್ರೀಯ ಪಕ್ಷಗಳು ಭ್ರಷ್ಟಾಚಾರದ ಪಕ್ಷಗಳು, ಪ್ರಧಾನ ಮಂತ್ರಿಗಳು ಹೇಳ್ತಾರೆ…
ತುಮಕೂರು: ಏರ್ ಟ್ರಾಫಿಕ್ ಕಂಟ್ರೋಲ್ ನಿಂದ ಸಿಗ್ನಲ್ ನೀಡದ ಹಿನ್ನೆಲೆ, ಹೆಲಿಪ್ಯಾಡ್ ನಲ್ಲಿ ಅರ್ಧ ಗಂಟೆ ಕಾಲ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಾದು ಕುಳಿತ ಘಟನೆ ತುಮಕೂರು ವಿ.ವಿ. ಹೆಲಿಪ್ಯಾಡ್ ನಲ್ಲಿ ನಡೆಯಿತು. ಪ್ರಧಾನಿ ಮೋದಿ ಹೆಲಿಕಾಪ್ಟರ್ ಮೂವ್ ಮೆಂಟ್ ಹಿನ್ನೆಲೆ ಈ ನಿರ್ಧಾರ ಮಾಡಲಾಯಿತು. ಏರ್ ಟ್ರಾಫಿಕ್ ಕಂಟ್ರೋಲ್ ರೂಂ ನಿಂಡ ಸಿಗ್ನಲ್ ನೀಡಲಿಲ್ಲ. ಹೀಗಾಗಿ ಹೆಲಿಕಾಪ್ಟರ್ ಟೇಕ್ ಆಫ್ ಆಗದೆ ಮಾಜಿ ಪ್ರಧಾನಿ ಕಾದು ಕುಳಿತುಕೊಳ್ಳುವಂತಾಯಿತು. ಕಾರಿನಲ್ಲೆ ದೇವೇಗೌಡರು ವಿಶ್ರಾಂತಿ ಮೋರೆ ಹೋಗುವಂತಾಗಿತ್ತು. ಮಳವಳ್ಳಿಯಲ್ಲಿ ನಡೆಯಲಿದ್ದ ಜೆಡಿಎಸ್ ಸಮಾವೇಶಕ್ಕೆ ತೆರಳಲು ದೇವೆಗೌಡ್ರರು ಕಾದಿದ್ದರು. ಹೆಚ್.ಡಿಡಿ ಜೊತೆ ಕಾರ್ಯಕರ್ತರು ಜೊತೆಯಲ್ಲೇ ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕುಸ್ತಿಪಟುಗಳ ಧರಣಿಯನ್ನು ಬೆಂಬಲಿಸಿ ಜಂತರ್ ಮಂತರ್ ಗೆ ಬಂದ ರೈತರನ್ನು ಪೊಲೀಸರು ತಡೆದರು. ಇದನ್ನು ಟಿಕ್ರಿ ಗಡಿಯಲ್ಲಿ ನಿಲ್ಲಿಸಲಾಯಿತು. ವಾಹನ ತಪಾಸಣೆ ನಡೆಸಿಯೇ ತೆರಳಲು ಅವಕಾಶ ನೀಡಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದರು. ಜಂತರ್ ಮಂದಾರಿಯಲ್ಲಿ ರೈತರು ಆಗಮಿಸುತ್ತಿದ್ದಂತೆ ಹೆಚ್ಚಿನ ಪಡೆಗಳನ್ನು ನಿಯೋಜಿಸಲಾಗಿತ್ತು. ಜಂತರ್ ಮಂತರ್ ನಲ್ಲಿ ಬ್ಯಾರಿಕೇಡ್ ಗಳನ್ನು ಹಾಕಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ತಪಾಸಣೆ ಮತ್ತು ಗಸ್ತು ಹೆಚ್ಚಿಸಲು ಪೊಲೀಸರು ನಿರ್ಧರಿಸಿದ್ದಾರೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಕುಸ್ತಿಪಟುಗಳಿಗೆ ಬೆಂಬಲವಾಗಿ ಇಂದು ಸಾವಿರಾರು ರೈತರು ಧರಣಿಗೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದ ಜಿಲ್ಲೆಗಳಿಂದ ಸಂಯುಕ್ತ ಕಿಸಾನ್ ಮೋರ್ಚಾದ ಹಿರಿಯ ನಾಯಕರು ಪ್ರತಿಭಟನೆಗೆ ಬೆಂಬಲ ನೀಡಲಿದ್ದಾರೆ. ಜಂಟಿ ಕಿಸಾನ್ ಮೋರ್ಚಾ ಬ್ರಿಜ್ಭೂಷಣ್ ಸಿಂಗ್ ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿತು. ದೂರಿನಲ್ಲಿ ದೆಹಲಿ ಪೊಲೀಸರು ಕುಸ್ತಿಪಟುಗಳ ಹೇಳಿಕೆಯನ್ನು ತೆಗೆದುಕೊಂಡಿದ್ದರು. ನಟರು ತಮ್ಮ ಹೇಳಿಕೆಗಳಲ್ಲಿ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಗಂಭೀರ ಆರೋಪ…
ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷ ಬ್ರಿಜ್ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆಗೆ ರೈತರು ಬೆಂಬಲ ನೀಡುತ್ತಿದ್ದಾರೆ. ಇದರಿಂದಾಗಿ ಜಂತರ್ ಮಂತರ್ ನಲ್ಲಿ ಹೆಚ್ಚಿನ ಪಡೆಗಳನ್ನು ನಿಯೋಜಿಸಲಾಗಿತ್ತು. ಕುಸ್ತಿಪಟುಗಳಿಗೆ ಬೆಂಬಲವಾಗಿ ರೈತರು ಇಂದು ಧರಣಿಗೆ ಬರಲಿದ್ದಾರೆ ಎಂದು ವರದಿಯಾಗಿದೆ. ಜಂತರ್ ಮಂತರ್ ನಲ್ಲಿ ಬ್ಯಾರಿಕೇಡ್ ಗಳನ್ನು ಹಾಕಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ತಪಾಸಣೆ ಮತ್ತು ಗಸ್ತು ಹೆಚ್ಚಿಸಲು ಪೊಲೀಸರು ನಿರ್ಧರಿಸಿದ್ದಾರೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದ ಜಿಲ್ಲೆಗಳಿಂದ ಸಂಯುಕ್ತ ಕಿಸಾನ್ ಮೋರ್ಚಾದ ಹಿರಿಯ ನಾಯಕರು ಪ್ರತಿಭಟನೆಗೆ ಬೆಂಬಲ ನೀಡಲಿದ್ದಾರೆ. ಜಂಟಿ ಕಿಸಾನ್ ಮೋರ್ಚಾ ಬ್ರಿಜ್ಭೂಷಣ್ ಸಿಂಗ್ ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿತು. ದೂರಿನಲ್ಲಿ ದೆಹಲಿ ಪೊಲೀಸರು ಕುಸ್ತಿಪಟುಗಳ ಹೇಳಿಕೆಯನ್ನು ತೆಗೆದುಕೊಂಡಿದ್ದರು. ನಟರು ತಮ್ಮ ಹೇಳಿಕೆಗಳಲ್ಲಿ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕುಸ್ತಿಪಟುಗಳು ದೆಹಲಿ ಪೊಲೀಸರಿಗೆ ನೀಡಿದ ಹೇಳಿಕೆಯ ಪ್ರಕಾರ, ಅವರು ತಮ್ಮ ಉಸಿರಾಟವನ್ನು ಪರೀಕ್ಷಿಸುವ ನೆಪದಲ್ಲಿ ತಮ್ಮ ಖಾಸಗಿ…
ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಗೆ ಕಿರುಕುಳ ನೀಡಿದ ಯುವಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ರಾಣಾ ಪತ್ನಿ ಸಚಿ ಮಾರ್ವಾ ಅವರನ್ನು ಇಬ್ಬರು ಯುವಕರು ಬೆನ್ನಟ್ಟಿ ಕಿರುಕುಳ ನೀಡಿದ್ದಾರೆ. ಅವರಲ್ಲಿ ಒಬ್ಬನನ್ನು ಬಂಧಿಸಲಾಯಿತು. ದೆಹಲಿಯ ಕೀರ್ತಿ ನಗರದಿಂದ ಮನೆಗೆ ತೆರಳುತ್ತಿದ್ದ ಸಚಿಯನ್ನು ಇಬ್ಬರು ಯುವಕರು ಹಿಂಬಾಲಿಸಿದ್ದಾರೆ. ಬೈಕ್ ನಲ್ಲಿ ಸಚಿ ಪ್ರಯಾಣಿಸುತ್ತಿದ್ದ ಕಾರನ್ನು ಹಿಂಬಾಲಿಸಿ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಈ ಘಟನೆಯನ್ನು ಸಚಿ ತನ್ನ ಮೊಬೈಲ್ನಲ್ಲಿ ಸೆರೆಹಿಡಿದು ಇಬ್ಬರು ಯುವಕರ ಚಿತ್ರಗಳ ಜೊತೆಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾಳೆ. ಏತನ್ಮಧ್ಯೆ, ಅವರು ಪೊಲೀಸರಿಗೆ ಮಾಹಿತಿ ನೀಡಿದರು ಆದರೆ ಪೊಲೀಸರು ದೂರನ್ನು ಸ್ವೀಕರಿಸಲು ನಿರಾಕರಿಸಿದರು ಎಂದು ಸಾಕ್ಷಿ ಆರೋಪಿಸಿದ್ದಾರೆ. ಆದರೆ ಸಾಕ್ಷಿಯ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮ ಕೈಗೆತ್ತಿಕೊಂಡಾಗ, ಪೊಲೀಸರ ವಿರುದ್ಧ ಭಾರೀ ಪ್ರತಿಭಟನೆಗಳು ನಡೆದವು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಖಲಿಸ್ತಾನ್ ಕಮಾಂಡೋ ಫೋರ್ಸ್ ಮುಖ್ಯಸ್ಥ ಪರಮ್ಜಿತ್ ಸಿಂಗ್ ಪಂಜ್ವಾರ್ ಕೊಲ್ಲಲ್ಪಟ್ಟರು. ಲಾಹೋರ್ ನಲ್ಲಿ ಬೈಕ್ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಪಂಜ್ವಾರ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಶನಿವಾರ ಬೆಳಗ್ಗೆ ಜೋಹರ್ ಟೌನ್ನ ಸೂರ್ಯಕಾಂತಿ ಸಿಟಿ ಬಳಿಯ ತನ್ನ ಮನೆಗೆ ತನ್ನ ಅಂಗರಕ್ಷಕರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. 59 ವರ್ಷದ ಪರಮ್ಜಿತ್ ಸಿಂಗ್ ಪಂಜ್ವಾರ್ ಸಿಖ್ ಗಲಭೆ, ಕೊಲೆ, ಮಾದಕ ದ್ರವ್ಯ ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆಯಂತಹ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ.ಪಂಜ್ವಾರ್ ಪಂಜಾಬ್ನಲ್ಲಿ ಡ್ರೋನ್ ಬಳಸಿ ಡ್ರಗ್ಸ್ ಕಳ್ಳಸಾಗಣೆಯಲ್ಲಿ ಕುಖ್ಯಾತರಾಗಿದ್ದರು. ಡ್ರಗ್ಸ್ ಮಾಫಿಯಾಗಳ ನಡುವಿನ ವೈಷಮ್ಯವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿದ್ದ ಅವರು 1986ರಲ್ಲಿ ಖಲಿಸ್ತಾನ್ ಕಮಾಂಡೋ ಫೋರ್ಸ್ಗೆ ಸೇರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮುಸ್ಲಿಂ ವಿದ್ಯಾರ್ಥಿಯ ಮೇಲೆ ನೈತಿಕ ದಾಳಿ ನಡೆಸಿದ ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದ್ದಾರೆ. ಕರ್ನಾಟಕದ ದಕ್ಷಿಣ ಕನ್ನಡದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ದಾಳಿಯಲ್ಲಿ 18 ವರ್ಷದ ಮುಹಮ್ಮದ್ ಫರೀಶ್ ಎಂಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸಹಪಾಠಿ ಹಿಂದೂ ಹುಡುಗಿಯೊಂದಿಗೆ ಜ್ಯೂಸ್ ಕುಡಿಯುತ್ತಿದ್ದಾಗ ವಿದ್ಯಾರ್ಥಿ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಪ್ರಕರಣದಲ್ಲಿ ಒಳಮೊಗ್ರು ಮೂಲದ ಎಸ್ ಪ್ರದೀಪ್ (19), ಕೆದಂಬಾಡಿಯ ದಿನೇಶ್ ಗೌಡ (25), ಗುಟುಮನೆ ನಿವಾಸಿ ನಿಶಾಂತ್ ಕುಮಾರ್ (19), ಆರ್ಯಪ್ ನಿವಾಸಿ ಪ್ರಜ್ವಲ್ (23) ಬಂಧಿತರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅಮೆರಿಕದ ಟೆಕ್ಸಾಸ್ನ ಮಾಲ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಲ್ಲಾಸ್ನ ಉತ್ತರದಲ್ಲಿರುವ ಅಲೆನ್ನಲ್ಲಿರುವ ಬ್ಯುಸಿ ಮಾಲ್ನಲ್ಲಿ ನಿನ್ನೆ ರಾತ್ರಿ ಈ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ ಯಾರೂ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿಲ್ಲ. ದಾಳಿಯ ಹಿಂದಿನ ಪ್ರಚೋದನೆಯು ಸ್ಪಷ್ಟವಾಗಿಲ್ಲ. ದಾಳಿಕೋರನನ್ನು ಪೊಲೀಸ್ ಅಧಿಕಾರಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಇನ್ನಷ್ಟು ಉಗ್ರರು ಇದ್ದಾರೆಯೇ ಎಂದು ಪತ್ತೆ ಹಚ್ಚಲು ಶೋಧ ನಡೆಸಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗುಬ್ಬಿ: ನಾವೆಲ್ಲರೂ ಒಗ್ಗಟ್ಟಿನಿಂದ ಇದ್ದು ಈ ಬಾರಿ ಚುನಾವಣೆಯನ್ನು ಬಲಿಷ್ಟವಾಗಿ ಮಾಡಿ ಮತ್ತೊಮ್ಮೆ ಜೆಡಿಎಸ್ ಪಕ್ಷವನ್ನು ತಾಲೂಕಿನಲ್ಲಿ ಅಧಿಕಾರಕ್ಕೆ ತರುತ್ತೇವೆ ಎಂದು ಜೆಡಿಎಸ್ ಅಭ್ಯರ್ಥಿ ಬಿ ಎಸ್ ನಾಗರಾಜು ತಿಳಿಸಿದರು. ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸೋಲಿನ ಭಯ ಹತ್ತಿರುವ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದವರು ಅಪಪ್ರಚಾರಕ್ಕೆ ಮುಂದಾಗಿದ್ದಾರೆ ಯಾವುದೇ ರೀತಿಯ ಅಪಪ್ರಚಾರ ಮಾಡಿದರು ಸಹ ನಮ್ಮ ಸಂಘಟನೆ ನಮ್ಮ ಕಾರ್ಯಕರ್ತರು ಒಗ್ಗಟ್ಟಿನಿಂದ ಇದ್ದು ಈ ಬಾರಿ ಚುನಾವಣೆಯನ್ನು ಎದುರಿಸಿ ರೈತರ ಪಕ್ಷವಾದ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂದು ತಿಳಿಸಿದರು. ಜೆಡಿಎಸ್ ಮುಖಂಡ ಜಿ.ಎನ್ ಬೆಟ್ಟಸ್ವಾಮಿ ಮಾತನಾಡಿ ಚುನಾವಣೆಯ ಕೊನೆಯ ದಿನಗಳಲ್ಲಿ ಮಾಜಿ ಶಾಸಕರು ಇಲ್ಲಸಲ್ಲದ ಆರೋಪಗಳು, ಸುಳ್ಳು ಸುದ್ದಿಗಳು ಅಬ್ಬಿಸುತ್ತಾರೆ ಇದು ಪ್ರತಿ ಚುನಾವಣೆಯಲ್ಲೂ ಸರ್ವೇಸಾಮಾನ್ಯ ಆದರೆ ಈ ಬಾರಿ ಅಂತಹ ಯಾವುದೇ ಮಾತುಗಳಿಗೂ ಮತದಾರರು ಕಿವಿ ಕೊಡುವುದಿಲ್ಲ ಮತ್ತು ಕೇಳುವುದು ಇಲ್ಲ ಜೆಡಿಎಸ್ ಪಕ್ಷ ಈ ಬಾರಿ …
ಕೊರಟಗೆರೆ : ನಮ್ಮ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಅವರ ಮೇಲೆ ಮಾಡಿರುವ 1300 ಕೋಟಿ ಹಗರಣದ ಆರೋಪ ಸತ್ಯಕ್ಕೆ ದೂರವಾಗಿದ್ದು ಎಂದು ದಲಿತ ಮುಖಂಡ ದಾಡಿ ವೆಂಕಟೇಶ್ ತಿಳಿಸಿದರು. ಪಟ್ಟಣದ ಪಾಂಚಜನ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷದ ದಲಿತ ಮುಖಂಡರು ಏರ್ಪಡಿಸಲಾಗಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಆಭ್ಯರ್ಥಿ ಡಾ,ಜಿ,ಪರಮೇಶ್ವರ್ ಅವರ ಆಡಳಿತ ವಿರೋಧ ಇರುವುದರಿಂದ ಕಾಂಗ್ರೆಸ್ ಪಕ್ಷದ ಮುಖಂಡರು ಈ ಭಾರಿ ಚುನಾವಣೆಯಲ್ಲಿ ಸೋಲುವ ಭಯದಿಂದ ನಮ್ಮ ಬಿಜೆಪಿ ಪಕ್ಷದ ಆಭ್ಯರ್ಥಿಯಾದ ಅನಿಲ್ಕುಮಾರ್ ಅವರು ಬೆಂಗಳೂರಿನ ಬಿಬಿಎಂಪಿಯಲ್ಲಿ ಕರ್ತವ್ಯ ನಿರ್ವಹಿಸುದ್ದ ಸಂದರ್ಭದಲ್ಲಿ 1300 ಕೋಟಿ ಹಗರಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದವರು ಮಾಡಿರುವ ಆರೋಪ ಸುಳ್ಳಾಗಿದ್ದು, ಅವರು 35 ವರ್ಷದ ಸೇವಾಧಿಯಲ್ಲಿ ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು. ಅನಿಲ್ಕುಮಾರ್ ಅವರ ಮೇಲೆ ಮಾಡಿರುವ ಆರೋಪ ಸಾಭೀತು ಆಗಿಲ್ಲ. ಇದರ ಜೊತೆಗೆ ಅವರ ಮೇಲೆ ಯಾವುದೇ ಮಾನನಷ್ಟ ವರದಿಯನ್ನ ಮಾಡದಂತೆ ಈಗಾಗಲೇ ಕೋಟ್ನಿಂದ…