Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಹೋಬಳಿಯ ತಿಮ್ಮಮ್ಮನಹಳ್ಳಿಯಲ್ಲಿ ರೈತರು ತಮ್ಮ ಜಮೀನುಗಳಿಗೆ ಹೋಗಲು ರಸ್ತೆಯ ಸಮಸ್ಯೆಯಿದ್ದು ಅಧಿಕಾರಿಗಳು ಶೀಘ್ರವೇ ಬಗೆಹರಿಸಬೇಕೆಂದು ಒತ್ತಾಯಿಸಿದರು. ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪೂಜಾರಪ್ಪ ಮಾತನಾಡಿ, ತಿಮ್ಮಮ್ಮನಹಳ್ಳಿಯಲ್ಲಿ ರೈತನೊಬ್ಬ ತನ್ನ ಜಮೀನಿನ ಮೂಲಕ ಹೋಗಲು ಇತರೇ ರೈತರಿಗೆ ರಸ್ತೆ ಬಿಡದೆ ತೊಂದರೆ ನೀಡುತ್ತಿದ್ದು, ರೈತರ ಜಮೀನಿಗೆ ಹೋಗಲು ನಕಾಶೆ ರಸ್ತೆಯನ್ನು ಗುರುತಿಸಿ ರಸ್ತೆಯ ಸಮಸ್ಯೆಯನ್ನು ಅಧಿಕಾರಿಗಳು ಶೀಘ್ರ ಬಗೆಹರಿಸಬೇಕೆಂದು ಒತ್ತಾಯ ಮಾಡಿದರು. ಈ ಕೂಡಲೇ ಸರ್ವೇ ಅಧಿಕಾರಿಗಳು, ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ, ರೈತರ ರಸ್ತೆ ಸಮಸ್ಯೆ ಯನ್ನು ಬಗೆ ಹರಿಸಿ ಕೊಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಗೋಪಾಲಪ್ಪ, ಗುಡಿಪಲ್ಲಪ್ಪ, ನಾಗರಾಜು, ರಾಮಣ್ಣ, ಲಕ್ಷ್ಮೀದೇವಿ, ಹನುಮಂತರಾಯ, ನಾಗಪ್ಪ ಮುಂತಾದವರು ಹಾಜರಿದ್ದರು. ವರದಿ : ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ತಾಲೂಕಿನಾದ್ಯಂತ ಡಿ. 21ರಿಂದ 24 ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು. ನಮ್ಮ ತಾಲ್ಲೂಕಿನಲ್ಲಿ ಪಟ್ಟಣದ ಒಟ್ಟು ಜಸಂಖ್ಯೆ: 8,313 ಗ್ರಾಮೀಣ ಒಟ್ಟು ಜನ ಸಂಖ್ಯೆ: 81,820 ಒಟ್ಟು ಜನಸಂಖ್ಯೆ: 90,133 0-5 ವರ್ಷದೊಳಗಿನ ಒಟ್ಟು ಮಕ್ಕಳ ಸಂಖ್ಯೆ: 5,804 ಒಟ್ಟು ಪಲ್ಸ್ ಪೋಲಿಯೋ ಬೂತ್ ಗಳ ಸಂಖ್ಯೆ– 66 ಟ್ರಾನ್ಸ್ಲೇಷನ್ ಬೂತ್ ಗಳ ಸಂಖ್ಯೆ- -01 ಮೊಬೈಲ್ ಟೀಮ್–01 ನಿಯೋಜನೆ ಮಾಡುವ ಒಟ್ಟು ಸಿಬ್ಬಂದಿಗಳ ಸಂಖ್ಯೆ 272 ಮೇಲ್ವಿಚಾರಕರು 14 ಈ ಕಾರ್ಯಕ್ರಮವು ನಾಲ್ಕು ದಿನ ನಡೆಯುತ್ತದೆ ಆದುದರಿಂದ ಇತರೆ ಇಲಾಖೆ ಅಧಿಕಾರಿಗಳು, ಎಲ್ಲ ಸಂಘ-ಸಂಸ್ಥೆಯವರು, ಎನ್ ಜಿ ಓ ಸಂಸ್ಥೆ ರವರು ಸಹಕಾರ ನೀಡಬೇಕು ಎಂದು ತಿಳಿಸಿದರು. ಮತ್ತು ಸಾರ್ವಜನಿಕರು ದಿನಾಂಕ: 21–12–2025 ರಂದು ನಿಮ್ಮ 0–5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಈ ಹಿಂದೆ ಎಷ್ಟು ಬಾರಿ ಪೋಲಿಯೋ ಹಾಕಿಸಿದರೂ ಸಹ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ ಎಂದು…
ಸರಗೂರು: ಸಂಗೀತ, ಕಲೆ, ನೃತ್ಯ ಸೇರಿದಂತೆ ನಾನಾ ಪ್ರಕಾರಗಳನ್ನು ಒಳಗೊಂಡಿರುವ ನಾಟಕ, ಬದುಕನ್ನು ಕಟ್ಟಿಕೊಡುವ ಜತೆಗೆ ಸಾಮರಸ್ಯ ಬೆಳೆಸುತ್ತದೆ ಎಂದು ರಂಗಭೂಮಿ ಕಲಾವಿದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೈ.ಎಂ.ಪುಟ್ಟಣ್ಣಯ್ಯ ಅಭಿಪ್ರಾಯಪಟ್ಟರು. ಪಟ್ಟಣದ ಜೆಎಸ್ ಎಸ್ ಶಿವರಾತ್ರಿ ಶಿವಾನುಭವ ಮಂಗಳ ಮಂಟಪದಲ್ಲಿ ಜೆಎಸ್ ಎಸ್ ಕಲಾಮಂಟಪದಿಂದ ಶುಕ್ರವಾರದಂದು ನಡೆದ ಜೆಎಸ್ ಎಸ್ ರಂಗೋತ್ಸವ ಸಮಾರೋಪ ಸಮಾರಂಭದಲ್ಲಿ ಶ್ರೀ ಗಳ ಪೋಟೋ ಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ನಾಟಕ ಒಂದು ಸಂಕೀರ್ಣ ಕಲೆಯಾಗಿದ್ದು, ಅದಕ್ಕೆ ಜಾತಿಭೇದದ ಅಡ್ಡಗೋಡೆಗಳಿಲ್ಲ. ಅದು ನಮ್ಮ ಬದುಕನ್ನು ಕಟ್ಟಿಕೊಡುವುದರ ಜತೆಗೆ ದೂರವಾಗಿರುವ ಮನಸ್ಸುಗಳನ್ನು ಒಂದು ಗೂಡಿಸಲಿದೆ. ನಾವು ಹೇಗೆ ಮಾತನಾಡಬೇಕು ಎಂಬ ಭಾಷೆ ಕಲಿಸಿಕೊಡುತ್ತದೆ. ನೀವು ಪ್ರಸ್ತುತ ಗಳಿಸುತ್ತಿರುವ ಶಿಕ್ಷ ಣ ಅಂಕಗಳಿಕೆಗೆ ಮಾತ್ರ ಸೀಮಿತವಾಗಿದ್ದು, ಅದು ಪೂರ್ಣ ಸಾಧನೆಯಲ್ಲ. ನಾಟಕ, ನೃತ್ಯ ಸೇರಿದಂತೆ ಸುಮಾರು 64 ಕಲೆಗಳಲ್ಲಿ ಯಾವುದಾದರೂ ಒಂದು ಅಥವಾ ಎರಡರಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಾಧನೆ ಮಾಡಬೇಕು. ಹಾಗಾದಾಗ ಜೀವನದಲ್ಲಿ ಪರಿಪೂರ್ಣತೆ ದೊರೆಯುತ್ತದೆ ಎಂದರು. ನಾಟಕಾಭಿನಯ…
ತುಮಕೂರು: ಕರ್ನಾಟಕ ಲೇಖಕಿಯರ ಸಂಘ ಜಿಲ್ಲಾ ಶಾಖೆ ತುಮಕೂರು, ಶ್ರೀಮತಿ ನಾಗರತ್ನಮ್ಮ ಅ.ನಾ.ಶೆಟ್ಟಿ ದತ್ತಿ ಕಥಾ ಸ್ಪರ್ಧೆ, ಲಕ್ಷ್ಮಿದೇವಮ್ಮ ಗೋವಿಂದಯ್ಯ ದತ್ತಿ ಕವನ ಸ್ಪರ್ಧೆ ಏರ್ಪಡಿಸಿದ್ದು, ಕಥೆ, ಕವನಗಳನ್ನು ಆಹ್ವಾನಿಸಿರುತ್ತದೆ. ಸ್ಪರ್ಧೆಯಲ್ಲಿ ಆಯ್ಕೆಯಾದ ಕಥೆ ಕವನಗಳಿಗೆ ಮೊದಲ ಬಹುಮಾನ ರೂ. 2,000, ಎರಡನೇ ಬಹುಮಾನ ರೂ. 1,500, ಮೂರನೇ ಬಹುಮಾನ ರೂ. 1000 ನಗದು ಬಹುಮಾನ ಇರುತ್ತದೆ. ಕಥೆ ಆರು ಪುಟ, ಕವನ ಎರಡು ಪುಟ ಮೀರದಂತಿರಲಿ. ಹಾಳೆಯ ಒಂದೇ ಮಗ್ಗುಲಲ್ಲಿ ಬರೆದಿರಬೇಕು/ ಟೈಪ್ ಮಾಡಿರಬೇಕು. ಹೆಸರು, ವಿಳಾಸ, ಫೋನ್ ನಂಬರ್ ಪ್ರತ್ಯೇಕ ಪುಟದಲ್ಲಿ ಬರೆದು ಲಗತ್ತಿಸಿರಬೇಕು. ಸ್ಪರ್ಧೆಯು ತುಮಕೂರು ಜಿಲ್ಲೆಗೆ ಮಾತ್ರ ಸೀಮಿತವಾಗಿರುತ್ತದೆ. ಸ್ಪರ್ಧೆಗೆ ಕಳಿಸುವ ಕಥೆ, ಕವನಗಳು ಈ ಮೊದಲು, ಸಾಮಾಜಿಕ ಜಾಲತಾಣ, ಪತ್ರಿಕೆಗಳನ್ನೂ ಸೇರಿದಂತೆ ಎಲ್ಲಿಯೂ ಪ್ರಕಟವಾಗಿರಬಾರದು. ತೀರ್ಪು ಗಾರರ ತೀರ್ಪು ಅಂತಿಮ. ಬಹುಮಾನಿತ ಕಥೆ ಕವನಗಳನ್ನು ಯಾವಾಗ ಬೇಕಾದರೂ, ಸ್ವರೂಪದಲ್ಲಾದರೂ ಪ್ರಕಟಿಸುವ ಹಕ್ಕು ಲೇಖಕಿಯರ ಸಂಘಕ್ಕೆ ಇರುತ್ತದೆ. ಕವನಗಳ ಕಳಿಸಲು ಕೊನೆಯ ದಿನಾಂಕ 12–01–2026 ಆಗಿರುತ್ತದೆ.…
ಮಧುಗಿರಿ: ಮಧುಗಿರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇದೇ ಡಿಸೆಂಬರ್ 24ರಂದು ಕನ್ನಡ ಭವನದಲ್ಲಿ ಆಯೋಜಿಸಲಾಗಿರುವ 7ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಖ್ಯಾತ ಕವಿ ಹಾಗೂ ವಿಮರ್ಶಕ ಕೆ.ಪಿ. ನಟರಾಜು ಅವರು ಆಯ್ಕೆಯಾಗಿದ್ದಾರೆ. ಕೆ.ಪಿ. ನಟರಾಜು ಅವರ ಪರಿಚಯ: ಶಿಕ್ಷಣ: ತಾಂತ್ರಿಕ ಶಿಕ್ಷಣದ ಹಿನ್ನೆಲೆ ಹೊಂದಿದ್ದರೂ, ಕನ್ನಡ ಸಾಹಿತ್ಯದ ಮೇಲಿನ ಆಸಕ್ತಿಯಿಂದ ಕನ್ನಡದಲ್ಲಿ ಎಂ.ಎ.ಪದವಿ ಪಡೆದಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ರಾಷ್ಟ್ರಕವಿ ಕುವೆಂಪು ಅವರ ಚಿಂತನೆಗಳ ಕುರಿತು ಪ್ರೌಢ ಪ್ರಬಂಧ ಮಂಡಿಸಿ ಡಿ.ಲಿಟ್ ಪದವಿ ಪಡೆದಿದ್ದಾರೆ. ಸಾಹಿತ್ಯ ಕೃಷಿ: ಇವರು ಸಾಹಿತ್ಯ ಕ್ಷೇತ್ರದಲ್ಲಿ ದಶಕಗಳಿಂದ ಸಕ್ರಿಯರಾಗಿದ್ದು, ಅನೇಕ ಕವನ ಸಂಕಲನ ಹಾಗೂ ವಿಮರ್ಶಾ ಕೃತಿಗಳನ್ನು ರಚಿಸಿದ್ದಾರೆ. ಪ್ರಶಸ್ತಿ–ಗೌರವಗಳು: ಇವರ ‘ನಿತ್ಯವೂ ನಿನ್ನೊಡನೆ’ ಕವನ ಸಂಕಲನಕ್ಕೆ 2018ರ ಸಾಲಿನ ಪ್ರತಿಷ್ಠಿತ ‘ಕಡೆಂಗೋಡ್ಲು ಶಂಕರಭಟ್ ಕಾವ್ಯ ಪ್ರಶಸ್ತಿ’ ಲಭಿಸಿದೆ. ಅಲ್ಲದೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಇವರು ಭಾಜನರಾಗಿದ್ದಾರೆ. ಡಿಸೆಂಬರ್ 24ರಂದು ನಡೆಯಲಿರುವ ಈ ಸಾಹಿತ್ಯ ಹಬ್ಬಕ್ಕೆ…
ಶಿರಾ: ತಾಲ್ಲೂಕಿನ ಕಳ್ಳಂಬೆಳ್ಳ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗುರುವಾರ ನಡೆದಿದೆ. ಕಳ್ಳಂಬೆಳ್ಳ ಗ್ರಾಮದ ನಿವಾಸಿ ಮಧುವನ್ (36) ಕೊಲೆಯಾದ ದುರ್ದೈವಿ. ತುಮಕೂರು ಸಂತೇಪೇಟೆಯ ನಿವಾಸಿಗಳಾದ ಮಹೇಶ್ ಮತ್ತು ಸಮೀರ್ ಎಂಬುವವರೊಂದಿಗೆ ಜಮೀನಿನ ವಿಚಾರವಾಗಿ ಮಧುವನ್ ಗೆ ವಿವಾದವಿತ್ತು ಎನ್ನಲಾಗಿದೆ. ಗುರುವಾರ ಈ ಮೂವರ ನಡುವೆ ಮಾತಿನ ಚಕಮುಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ಆರೋಪಿ ಮಹೇಶ್ ಎಂಬಾತ ಮಧುವನ್ ಮೇಲೆ ಮಚ್ಚಿನಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ದಾಳಿಯ ತೀವ್ರತೆಗೆ ಮಧುವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಕಳ್ಳಂಬೆಳ್ಳ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಳಗಾವಿ: ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬರೋಬ್ಬರಿ 3,450 ಕೋಟಿ ರೂಪಾಯಿಗಳ ವಿವಿಧ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಭಾಗದ ಬಹುಕಾಲದ ಬೇಡಿಕೆಯಾದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಮುಖ ನೀರಾವರಿ ಯೋಜನೆಗಳು: ಬಾಗಲಕೋಟೆ: ಬಾದಾಮಿ ಮತ್ತು ಬೀಳಗಿ ಭಾಗದ ಕೆರೂರು ಏತ ನೀರಾವರಿ ಯೋಜನೆಗೆ 1,503 ಕೋಟಿ ರೂ.ಗಳ ಪರಿಷ್ಕೃತ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ. ರಾಯಚೂರು: ಮಸ್ಕಿ ತಾಲೂಕಿನ ಪಾಮನಕಲ್ಲೂರು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ 990 ಕೋಟಿ ರೂ.ಗಳ ಯೋಜನೆಗೆ ಚಾಲನೆ ದೊರೆತಿದೆ. ಬೆಳಗಾವಿ: ರಾಯಬಾಗ ಮತ್ತು ಚಿಕ್ಕೋಡಿ ಭಾಗದ ಏತ ನೀರಾವರಿ ಯೋಜನೆಗಳಿಗೆ ಸುಮಾರು 400 ಕೋಟಿ ರೂ. ಮೀಸಲಿಡಲಾಗಿದೆ. ಕೊಪ್ಪಳ: ಯಲಬುರ್ಗಾ ಮತ್ತು ಕುಕನೂರು ತಾಲೂಕಿನ 19 ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ತುಂಬಿಸುವ 272 ಕೋಟಿ ರೂ.ಗಳ ಯೋಜನೆಗೆ ಒಪ್ಪಿಗೆ ಸಿಕ್ಕಿದೆ. ನ್ಯಾಯಾಂಗ ಸುಧಾರಣೆ ಮತ್ತು AI ಬಳಕೆ:…
ಸರಗೂರು: ಮುಳ್ಳೂರು ಆಸ್ಪತ್ರೆಗೆ ಎರಡು ಬಾರಿ ಉತ್ತಮ ಆಸ್ಪತ್ರೆ ಪ್ರಶಸ್ತಿ ಬಂದಿದೆ. ಈ ವೈದ್ಯರು ಹಾಗೂ ಸಿಬ್ಬಂದಿಗಳು ಹೆಚ್ಚಿನ ರೀತಿಯಲ್ಲಿ ಬರುವ ರೋಗಿಗಳಿಗೆ ಚಿಕಿತ್ಸೆ ಕೊಡಿಸಲು ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು. ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾರ್ಟ್ ಸಂಸ್ಥೆ ಮೈಸೂರು, ರೋಟರಿ ಕ್ಲಬ್ ಆಪ್ ಮೈಸೂರು ವೆಸ್ಟ್ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್. ಡಿ.ಕೋಟೆ , ಪ್ರಾಥಮಿಕ ಆರೋಗ್ಯ ಕೇಂದ್ರ ಮುಳ್ಳೂರು ಗ್ರಾಮ ಪಂಚಾಯಿತಿ ಮುಳ್ಳೂರು, ಮುಳ್ಳೂರು ಗುರುಪ್ರಸಾದ್ ಜಿ.ಪಿ. ಗ್ರೂಪ್ಸ್ ಬಿಲ್ಡರ್ ಅಂಡ್ ಡೆವಲಪರ್ಸ್ ಮೈಸೂರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು ಇವರ ಸಹಯೋಗದೊಂದಿಗೆ ಮುಳ್ಳೂರು ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಳ್ಳೂರು ಆಸ್ಪತ್ರೆ ಕೋಟೆ ಮತ್ತು ನಂಜನಗೂಡು ತಾಲೂಕಿನ ಮಧ್ಯದಲ್ಲಿದ್ದರು ತಾಲೂಕು ಆಸ್ಪತ್ರೆಗಳಿಗೆ ಸಂಪರ್ಕ ಇಲ್ಲಗೆ ತುರ್ತು ಸೇವೆಗೆ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗುವುದು,.ಸಿಬ್ಬಂದಿಯ ಕೊರತೆ ಇದ್ದು ಮುಂದಿನ ದಿನಗಳಲ್ಲಿ ಎಲ್ಲವು…
ಬ್ಯಾಲ್ಯ: ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದು ಅಪರಾಧ. ರಸ್ತೆ ಸುರಕ್ಷತೆ ಮತ್ತು ಸುರಕ್ಷತಾ ನಿಯಮಗಳನ್ನು ಪಾಲಿಸ ಬೇಕಾದ್ದು ನಿಮ್ಮ ಕರ್ತವ್ಯ ಎಂದು ಕೊಡಿಗೇನಹಳ್ಳಿ ಪೊಲೀಸ್ ರಾಣಾಧಿಕಾರಿ ಎಸ್.ಜಿ. ಶ್ರೀನಿವಾಸ ಪ್ರಸಾದ್ ವಿದ್ಯಾರ್ಥಿಗಳಿಗೆ ತಿಳಿಸಿದರು. ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಹಾಗೂ ನಶ ಮುಕ್ತ ತುಮಕೂರು ಅಭಿಯಾನದ ಪ್ರಯುಕ್ತ ಪುರವರ ಪ್ರೌಢಶಾಲೆ, ಕಾಲೇಜು ಮತ್ತು ಕೋಡ್ಲಾಪುರ ಪ್ರೌಢಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಕಳ್ಳತನಗಳು ಹೆಚ್ಚು. ಚಳಿಗಾಲದಲ್ಲಿ ಜನತೆಗೆ ಉತ್ತಮ ನಿದ್ದೆ ಬರುತ್ತದೆ. ಹೀಗಾಗಿ ಈ ಸಂದರ್ಭಗಳಲ್ಲಿ ಹೆಚ್ಚು ಕಳ್ಳತನಗಳು ನಡೆಯುತ್ತವೆ. ಆದ್ದರಿಂದ ಪೊಲೀಸ್ ಇಲಾಖೆ ಸೂಚಿಸಿರುವ ನಿಯಮಗಳನ್ನು ಪಾಲಿಸುವುದರ ಜೊತೆಗೆ ಅಪರಾಧ ತಡೆಗಟ್ಟಲು ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು. ಇತ್ತೀಚಿಗೆ ಹೆಚ್ಚಾಗುತ್ತಿರುವ ನಶ ಸಾಮಗ್ರಿಗಳ ಬಳಕೆ, ಅದರಿಂದಾಗುವ ದುಷ್ಪರಿಣಾಮಗಳು, ಸಿಗುವ ಶಿಕ್ಷೆ ಮತ್ತು ಪೋಕ್ಸೋ ಕಾಯಿದೆ, ಹೆಣ್ಣು ಮಕ್ಕಳ ಸುರಕ್ಷತೆ, ಬಾಲ್ಯ ವಿವಾಹ ಕುರಿತು ಇರುವ ಕಾಯ್ದೆಗಳು…
ಗುಬ್ಬಿ: ತಾಲ್ಲೂಕಿನ ಎಂ.ಎಚ್. ಪಟ್ಟಣ ಗೇಟ್ ಬಳಿ ಇರುವ ಹೋಟೆಲ್ ವೊಂದರಲ್ಲಿ ಪರಿಶಿಷ್ಟ ಜಾತಿಯ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಪಟ್ಟಣದ ಯಶವಂತ (25) ಎಂಬ ಯುವಕ ಜಿಎನ್ ಬಿ ಸ್ಪಿರಿಟ್ ಆ್ಯಂಡ್ ಸ್ಟೇ ಹೋಟೆಲ್ ಗೆ ಊಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಹೋಟೆಲ್ ಮಾಲೀಕ ಮತ್ತು ಆತನ ಸಹಚರರು ಸೇರಿ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಯ ತೀವ್ರತೆಯಿಂದಾಗಿ ಯಶವಂತ ಅವರ ಕೈಮೂಳೆಗೆ ಗಂಭೀರ ಪೆಟ್ಟು ಬಿದ್ದಿದೆ. ಪ್ರಸ್ತುತ ಅವರು ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಕುರಿತು ಮಾಹಿತಿ ಪಡೆದ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ಯುವಕನಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕ ಮತ್ತು ಸಹಚರರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆ (Atrocity Act) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕಿ ವೀಣಾ…