Author: admin

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು 5 ಗ್ಯಾರಂಟಿಗಳ ಹೆಸರಿನಲ್ಲಿ 75 ಸಾವಿರ ಕೋಟಿಯನ್ನು ಜನರಿಂದ ಸುಲಿಗೆ ಮಾಡುತ್ತಿದೆ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, 50 ಸಾವಿರ ಕೋಟಿ ಖರ್ಚು ಮಾಡುವುದಾಗಿ ಅವರೇ ಹೇಳಿದ್ದಾರೆ. ಈಗಾಗಲೇ ಜುಲೈ ಮುಗಿದಿದೆ. 50 ಸಾವಿರ ಕೋಟಿ ಕೊಡಲು ಹೋಗಿ ಜನರಿಗೆ 75 ಸಾವಿರ ಕೋಟಿ ಟೋಪಿ ಹಾಕುವ ಕೆಲಸವನ್ನು ಮಾಡುತ್ತಿದೆ. ಇದು ಖಂಡನೀಯ. ಇಂಥ ಮೋಸದಾಟ ಒಪ್ಪಲಸಾಧ್ಯ ಎಂದು ತಿಳಿಸಿದರು. ನಿನ್ನೆ ಸಮಾಜ ಕಲ್ಯಾಣ ಇಲಾಖೆಯ ವಿಶೇóಷ ಅನುದಾನ ಸಂಬಂಧಿತ ಸಭೆ ಮಾಡಿ, ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ.ಯ 11 ಸಾವಿರ ಕೋಟಿ ರೂಪಾಯಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲು ಒಪ್ಪಿಗೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲೇ ಈ ಸಭೆ ಮಾಡಿದ್ದಾರೆ. ಸಂವಿಧಾನದ ಆಶಯ ಏನು? ಈ ದೇಶದಲ್ಲಿರುವ ದೀನದಲಿತರು, ಬಡವರು, ಶಿಕ್ಷಣ ವಂಚಿತರು, ಉದ್ಯೋಗದಲ್ಲಿ ಅವಕಾಶ…

Read More

ಕೋಲ್ಕತ್ತಾ: ಸಾರಾಯಿ ಕುಡಿದು 5 ರೂಪಾಯಿ ಕಡಿಮೆ ಹಣ ನೀಡಿದ್ದಕ್ಕೆ ಮದ್ಯದಂಗಡಿಯವರು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿ ಹತ್ಯೆ ಮಾಡಿದ ಘಟನೆ ಕೋಲ್ಕತ್ತಾ ಗರಿಯಾಹಟ ರಸ್ತೆಯಲ್ಲಿರುವ ಮಧ್ಯದಂಗಡಿಯಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಆಧಾರದಲ್ಲಿ ಪೊಲೀಸರು ಮಧ್ಯದಂಗಡಿಯ ಮಾಲಿಕ ಮತ್ತು ಆತನ ಬಳಿ ಕೆಲಸ ಮಾಡುವ ಮೂವರು ಕೆಲಸಗಾರರನ್ನು ಬಂಧಿಸಿದ್ದಾರೆ. ಸುಶಾಂತ ಮಂಡಲ ಮೃತ ಯುವಕನಾಗಿದ್ದು, ಘಟನೆಯ ಬಳಿಕ ಮೃತನ ಸಂಬಂಧಿಕರು ಹಾಗೂ ಸ್ಥಳೀಯರು ಮದ್ಯದಂಗಡಿಯನ್ನು ಧ್ವಂಸಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರವೀಂದ್ರ ಸರೊವರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಂಗಡಿ ಮಾಲೀಕ ದೇಬೋ ಜ್ಯೋತಿ ಸಹಾ ಸಹಿತ ಅಮಿತ ಕಾರ, ಪ್ರಭಾತ ದತ್ತ ಮತ್ತು ಪ್ರಸೇನಜಿತ ವೈದ್ಯ ಹಾಗೂ ಕೆಲಸಗಾರರನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ, ಹೊಟೆಲ್ ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, ಬಜೆಟ್ ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ, ಮೋಟರ್ ವೆಹಿಕಲ್ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುನಿಯಾ ದುಬಾರಿಯಾಗಿದ್ದು ಜನತೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ರಾಜ್ಯದ ಅಭಿವೃದ್ಧಿಯ ಕತೆ ಅಯೋಮಯವಾಗಲಿದೆ.…

Read More

ಸಿನಿಮೀಯ ಶೈಲಿಯಲ್ಲಿ ಪಿಡಬ್ಲ್ಯೂಡಿ ನಿವೃತ್ತ ನೌಕರರೊಬ್ಬರ ಮನೆಯಿಂದ ದರೋಡೆಕೋರರು ಸುಮಾರು 36 ಲಕ್ಷ ರೂಪಾಯಿ ದರೋಡೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ನವಿ ಮುಂಬೈನಲ್ಲಿರುವ ಕಾಂತಿಲಾಲ್‌ ಯಾದವ್‌ ಎಂಬ ನಿವೃತ್ತ ಅಧಿಕಾರಿ ಮನೆಗೆ ಜುಲೈ 21ರಂದು ಎಸಿಬಿ ಅಧಿಕಾರಿಗಳ ಸೋಗಿನಲ್ಲಿ ಆರು ಜನ ನುಗ್ಗಿದ್ದಾರೆ. ನಾವು ಭ್ರಷ್ಟಾಚಾರ ನಿಗ್ರಹ ದಳದವರು ಎಂದು ಮನೆಯವರನ್ನು ಹೆದರಿಸಿದ್ದಾರೆ. ಬಳಿಕ ಮನೆಯಲ್ಲಿದ್ದ ನಗದು, ಚಿನ್ನಾಭರಣ ಸೇರಿ ಹಲವು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಿದ್ದಾರೆ. ಕಾಂತಿಲಾಲ್‌ ಯಾದವ್‌ ಹಾಗೂ ಅವರ ಪತ್ನಿಯ ಮೊಬೈಲ್‌ ಗಳನ್ನು ಪಡೆದು, ಅವುಗಳನ್ನು ಸ್ವಿಚ್‌ ಆಫ್‌ ಮಾಡಿದ್ದಾರೆ. ಅವರಿಂದಲೇ ಕಬೋರ್ಡ್‌ ಕೀಗಳನ್ನು ಪಡೆದು, ಎಲ್ಲ ಹಣ, ಚಿನ್ನಾಭರಣ ದೋಚಿದ್ದಾರೆ. ಕಾಂತಿಲಾಲ್‌ ಯಾದವ್‌ ಅವರ ಮೂರು ಬೆಡ್ ರೂಮ್ ಗಳುಳ್ಳ ಫ್ಲ್ಯಾಟ್ ನಲ್ಲಿ 25.25 ಲಕ್ಷ ರೂ. ನಗದು, 3.8 ಲಕ್ಷ ರೂ. ಮೌಲ್ಯದ ಚಿನ್ನದ ಸರ, 4.20 ಲಕ್ಷ ರೂ. ಮೌಲ್ಯದ ಬ್ರೇಸ್ ಲೆಟ್‌, 40 ಸಾವಿರ ರೂ. ಮೌಲ್ಯದ ವಜ್ರ…

Read More

ಲಕ್ನೋ: ಅಭಿವೃದ್ಧಿಯ ಹಾದಿಯಲ್ಲಿ ಯಾರೇ, ಯಾವುದೇ ರೀತಿಯ ಅಡ್ಡಿ ಉಂಟುಮಾಡಿದರೂ ಅವರ ವಿರುದ್ಧ ತಕ್ಷಣವೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಸಿದ್ದಾರೆ. ಎಎನ್ ಐ ಸುದ್ದಿಸಂಸ್ಥೆಗೆ ನೀಡಿದ ಪಾಡ್ ಕಾಸ್ಟ್ ಸಂದರ್ಶನದಲ್ಲಿ ರಾಜ್ಯದಲ್ಲಿನ ಕ್ರಿಮಿನಲ್ ಗಳು ಮತ್ತು ಮಾಫಿಯಾ ವಿರುದ್ಧ ತಮ್ಮ ಸರ್ಕಾರದ ಬುಲ್ಡೋಜರ್ ಕ್ರಮವನ್ನು ಸಮರ್ಥಿಸಿಕೊಂಡಿರುವ ಅವರು, ರಾಜ್ಯದ ಅಭಿವೃದ್ಧಿಗೆ ಬುಲ್ಡೋಜರ್ ಮತ್ತು ಆಧುನಿಕ ಯಂತ್ರಗಳು ಅಗತ್ಯವಾಗಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಉತ್ತರ ಪ್ರದೇಶದಂತಹ ಬೃಹತ್ ರಾಜ್ಯವು ತ್ವರಿತವಾಗಿ ಅಭಿವೃದ್ಧಿಯಾಗಬೇಕು ಎಂದರೆ, ಈ ಕಾಲಘಟ್ಟದಲ್ಲಿ ನಮಗೆ ಸಲಿಕೆ ಮತ್ತು ಗುದ್ದಲಿಗಳು ಬೇಕಿವೆಯೇ? ಈ ಮುಂಚೆ ಯಾವುದೇ ಕಾಮಗಾರಿಗೆ ಅನುಮೋದನೆ ದೊರೆತರೂ ಮಾಫಿಯಾ ಬಂದು ಅಕ್ರಮ ಆಸ್ತಿಯನ್ನು ಕಬಳಿಸುತ್ತಿತ್ತು. ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳಲು ಹಿಂದಿನ ಸರ್ಕಾರಕ್ಕೆ ಧೈರ್ಯವೇ ಇರಲಿಲ್ಲ ಎಂದು ಯೋಗಿ ಸಮರ್ಥಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಪಾನಮತ್ತ ಮಹಿಳೆ ಕಾರು ಚಲಾಯಿಸಿದ ಪರಿಣಾಮ 8 ವಾಹನಗಳು ಜಖಂಗೊಂಡ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಅಪಘಾತ ಘಟನೆ ನಡೆದಾಗ ಆಕೆಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಕುರಿತು ತ್ರಿ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಿಶಾಖದ ವಿಐಪಿ ರಸ್ತೆಯಲ್ಲಿರುವ ಸೋಮಾ ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿ ಮಹಿಳೆಯೊಬ್ಬರು ಇತರ ಕೆಲವು ಯುವಕರೊಂದಿಗೆ ಮದ್ಯ ಸೇವಿಸಿ, ಅಲ್ಲಿನ ಪಾರ್ಕಿಂಗ್ ಸ್ಥಳದಿಂದ ವಿಐಸಿ ರಸ್ತೆ ಮೂಲಕ ಸಿರಿಪುರಂ ಮಾರ್ಗವಾಗಿ ಕಾರಿನಲ್ಲಿ ವೇಗವಾಗಿ ಸಾಗಿದರು. ಈ ಸಂದರ್ಭದಲ್ಲಿ ಕಾರು ನಿಯಂತ್ರಣ ತಪ್ಪಿ ಫುಟ್ ಪಾತ್ ಮೇಲೆ ಹರಿದಿದೆ. ಇದರಿಂದ ಪಾರ್ಕಿಂಗ್ ಸ್ಥಳದಲ್ಲಿ ನಿಂತಿದ್ದ ಎಂಟು ವಾಹನಗಳಿಗೆ ಕಾರು ಡಿಕ್ಕಿ ಹೊಡೆದು ಆ ವಾಹನಗಳು ಜಖಂಗೊಂಡಿವೆ. ಕಾರನ್ನು ಓಡಿಸಿದವರು ಯಾರು? ಆ ಸಮಯದಲ್ಲಿ ಕಾರಿನಲ್ಲಿ ಎಷ್ಟು ಮಂದಿ ಇದ್ದರು? ಅವರು ಎಲ್ಲಿಂದ ಬಂದವರು? ಕಾರಿನಲ್ಲಿ ಯಾರಿದ್ದಾರೆ? ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಮಧುಗಿರಿ: ಪಟ್ಟಣದಲ್ಲಿರುವ ಶಕ್ತಿದೇವತೆ ಕಾಳಿಕಾ ಕಮಠೇಶ್ವರ ಸ್ವಾಮಿಗೆ ಹುಣ್ಣಿಮೆಯ ಬೆಳದಿಂಗಳ ಪೂಜಾ ಕಾರ್ಯ ಸುಸಂಪನ್ನವಾಗಿ ನಡೆಯಿತು. ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ.ಆರ್. ಲಕ್ಷ್ಮೀಕಾಂತಾಚಾರ್ ರವರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಬ್ರಾಹ್ಮೀ ಮುಹೂರ್ತದಲ್ಲಿ ವಿಶೇಷ ಅಭಿಷೇಕ, ಅಲಂಕಾರ ಹಾಗೂ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಪ್ರತಿ ಹುಣ್ಣಿಮೆಯಂತೆ ಈ ಬಾರಿ ಇಬ್ಬರು ಸಾಧಕರಾದ, ಹೊಸಕೆರೆ ಪ್ರೌಢಶಾಲೆಯ ಮಲ್ಲಿಕಾರ್ಜುನ, ಮತ್ತು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನಿರ್ದೇಶಕರು ಹಾಗೂ ನಿವೃತ್ತ ಶಿಕ್ಷಕ,ತಬಲಾ ಕಲಾವಿದ ಓಂ, ರಾಮಕೃಷ್ಣ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪುರಸಭಾ ಸದಸ್ಯರಾದ ಮಂಜುನಾಥ್ ಆಚಾರ್ ಹಾಗೂ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ತಾ ಅಧ್ಯಕ್ಷ ಎಂ.ಆರ್.ಲಕ್ಷ್ಮೀಕಾಂತಾಚಾರ್ ಮೊದಲಾದವರು ಸಾಧಕರಿಗೆ ಸನ್ಮಾನಿಸಿದರು. ಚಂದನ್ ಶರ್ಮ, ದೊಡ್ಡೇರಿ ಸುರೇಶಾಚಾರ್, ಶ್ರೀಧರಾಚಾರ್,ಶಶಾಂಕ್,ವೇಣು ಮತ್ತು ತಂಡದವರು ಪೌರೋಹಿತ್ಯ ನಿವ೯ಹಣೆ ಮಾಡಿದರು. ಸವ೯ಮಂಗಳ ನಾಗಲಿಂಗಾಚಾರ್, ಸವ೯ಮಂಗಳ ಲಕ್ಷ್ಮೀ ಕಾಂತಾಚಾರ್ ಕುಟುಂಬದವರು ಸೇವಾಥ೯ ಭಕ್ತಿ ಸಮರ್ಪಿಸಿದರು. ಸಕಲ ಜೀವರಾಶಿಗೂ ಸನ್ಮಂಗಳವಾಗಲೆಂದು ಕಾಳಿಮಾತೆಯ ಅಡಿದಾವರೆಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ…

Read More

2019 ರಿಂದ 2021 ರ ನಡುವಿನ ಮೂರು ವರ್ಷದ ಅವಧಿಯಲ್ಲಿ ರಾಜ್ಯದ 40 ಸಾವಿರ ಮಂದಿ ಸ್ತ್ರೀಯರು ಕಾಣೆಯಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. 2019 ರಲ್ಲಿ 18 ವರ್ಷದ ಕೆಳಗಿನವರು 703, 18 ವರ್ಷದ ಮೇಲಿನವರು 12247, 2020 ರಲ್ಲಿ 18 ವರ್ಷದ ಕೆಳಗಿನವರು 834, 18 ವರ್ಷದ ಮೇಲಿನವರು 11950 ಹಾಗೂ 2021 ರಲ್ಲಿ 18 ವರ್ಷದ ಕೆಳಗಿನವರು 1237, 18 ವರ್ಷದ ಮೇಲಿನವರು 12964 ಮಂದಿ ಸ್ತ್ರೀಯರು ಮಿಸ್ಸಿಂಗ್ ಎಂಬ ಮಾಹಿತಿ ಸಿಕ್ಕಿದೆ. ಇನ್ನು ಈ ಮಾಹಿತಿಯನ್ನು ಸಂಸತ್ತಿಗೆ ಕೇಂದ್ರ ಸರ್ಕಾರ ವರದಿಯ ಮೂಲಕ ರವಾನೆ ಮಾಡಿದ್ದು, ಬಾಲಕಿಯರಿಗಿಂತ ವಯಸ್ಕರೇ ಅಧಿಕ ಪ್ರಮಾಣದಲ್ಲಿ ನಾಪತ್ತೆಯಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಎಸ್‌ ಸಿ ಎಸ್‌ ಪಿ, ಟಿಎಸ್ಸಿಪಿ ಅನುದಾನ ಖರ್ಚು ಮಾಡದಿದ್ದರೆ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಯ್ದೆ ಹೇಳುತ್ತದೆ. ಕಾಯ್ದೆ ಗಂಭೀರವಾಗಿದೆ. ಅದರಂತೆ ಯಾರು ನಿರ್ಲಕ್ಷ್ಯ ಮಾಡುತ್ತಾರೆ, ಅವರ ವಿರುದ್ಧ ಕಾಯ್ದೆಯನ್ವಯ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಹಲವಾರು ವಿಷಯಗಳನ್ನು ಚರ್ಚಿಸಿದ ವೇಳೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳ ಅನುದಾನ ನೇರವಾಗಿ ಈ ಸಮುದಾಯಗಳಿಗೇ ತಲುಪಬೇಕು ಎಂಬ ಉದ್ದೇಶದಿಂದ ಕಾಯ್ದೆ ರೂಪಿಸಲಾಗಿದೆ. ಆದ್ದರಿಂದ ಈ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಸಭೆಯಲ್ಲಿ ರಾಜ್ಯ ಅಭಿವೃದ್ಧಿ ಪರಿಷತ್ತಿನ ಉಪಾಧ್ಯಕ್ಷ ಹಾಗೂ ಸಮಾಜ ಕಲ್ಯಾಣ ಸಚಿವ ಡಾ. ಹೆಚ್. ಸಿ. ಮಹದೇವಪ್ಪ, ಸಚಿವರಾದ ನಾಗೇಂದ್ರ, ಹೆಚ್. ಕೆ. ಪಾಟೀಲ್, ಪ್ರಿಯಾಂಕ್ ಖರ್ಗೆ, ಎಂ. ಸಿ. ಸುಧಾಕರ್, ರಾಜ್ಯ ಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ, ಶಾಸಕರಾದ…

Read More

ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಮಣಿಪುರದ 100 ಅಭ್ಯರ್ಥಿಗಳಿಗೆ ಉಚಿತ ತರಬೇತಿ ನೀಡಲು ಬೆಂಗಳೂರಿನ ‘ಇನ್‌ಸೈಟ್ಸ್ ಐಎಎಸ್ ಅಕಾಡೆಮಿ ಮುಂದಾಗಿದೆ. ‘ಸಮುದಾಯ ಕಾರ್ಯಕ್ರಮದ ಅಡಿ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಮಣಿಪುರದ ನಿವಾಸಿಗಳಾಗಿರಬೇಕು. ಆಯ್ಕೆಯಾದವರಿಗೆ ಬೆಂಗಳೂರು, ದೆಹಲಿ, ಲಖನೌ, ಧಾರವಾಡ, ಬೆಳ್ಳೂಡಿ, ಮೈಸೂರು, ಹೈದರಾಬಾದ್‌ ನ ಇನ್‌ಸೈಟ್ಸ್ ಸಂಸ್ಥೆಯ ಕೇಂದ್ರಗಳಲ್ಲಿ ತರಬೇತಿ ನೀಡಲಾಗುವುದು. ಆನ್‌ಲೈನ್ ಅಥವಾ ಆಫ್‌ ಲೈನ್ ಎರಡು ವಿಧಾನಗಳ ಮೂಲಕವೂ ತರಬೇತಿ ಪಡೆದುಕೊಳ್ಳಬಹುದು. ಮಣಿಪುರದ ಅಭ್ಯರ್ಥಿಗಳಿಗೆ ತರಬೇತಿಯು ಸಂಪೂರ್ಣ ಉಚಿತವಾಗಿರಲಿದೆ’ ಎಂದು ಇನ್‌ಸೈಟ್ಸ್ ಐಎಎಸ್ ನಿರ್ದೇಶಕ ಜಿ. ಬಿ. ವಿನಯ್‌ ಕುಮಾರ್ ಮಾಹಿತಿ ನೀಡಿದರು. ‘ಒಂದೇ ದಿನದಲ್ಲಿ 300 ಅರ್ಜಿಗಳು ಬಂದಿವೆ. ಕೆಲವು ಮಾನದಂಡ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಗಸ್ಟ್ ಮೊದಲ ವಾರದಿಂದ ತರಬೇತಿ ಆರಂಭಿಸಲಾಗುವುದು’ ಎಂದು ತಿಳಿಸಿದರು. ‘ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವು ಶೈಕ್ಷಣಿಕ ಕ್ಷೇತ್ರದ ಮೇಲೂ ಪರಿಣಾಮ ಬೀರಿದೆ. ಮಕ್ಕಳ ಶೈಕ್ಷಣಿಕ ಬದುಕಿಗೆ ಹಿಂಸಾಚಾರವು ಹಿನ್ನಡೆ…

Read More