Subscribe to Updates
Get the latest creative news from FooBar about art, design and business.
- ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!
- ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
- ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ
- ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
- ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
- ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ, ಕಲಾತಂಡಗಳ ಮೆರುಗು
- ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ
- ವಿಕಲಚೇತನ ಸಾಧಕರಿಂದ ಅರ್ಜಿ ಆಹ್ವಾನ
Author: admin
ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಅವರ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ನಂದಿಗ್ರಾಮ ಶಾಸಕರ ವಾಹನವು, ರಸ್ತೆ ಬದಿಯಲ್ಲಿದ್ದ ಶೇಖ್ ಇಸ್ರಾಫಿಲ್ ಅವರಿಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಚಂಡೀಪುರದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಸುದ್ದಿ ಸಂಸ್ಥೆ ಪಿಟಿಐ ವರದಿಯ ಪ್ರಕಾರ, ವಿರೋಧ ಪಕ್ಷದ ನಾಯಕ ಮೊಯಿನಾದಲ್ಲಿ ಪಕ್ಷದ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದರು. ಸ್ಥಳೀಯರು ಮತ್ತು ಪ್ರತ್ಯಕ್ಷದರ್ಶಿಗಳ ಪ್ರಕಾರ, ವಾಹನವು ಚಂಡಿಪುರದ ರಸ್ತೆಯಲ್ಲಿದ್ದ ಶೇಖ್ ಇಸ್ರಫೀಲ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಕಾರು ನಿಲ್ಲಿಸಿರಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಚಾಲಕ ಪಾನಮತ್ತನಾಗಿದ್ದಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತದ ನಂತರ ಸ್ಥಳೀಯರು ಸುವೇಂದು ಅಧಿಕಾರಿಗೆ ಶಿಕ್ಷೆಗೆ ಒತ್ತಾಯಿಸಿ ಒಂದು ಗಂಟೆ ಕಾಲ ರಸ್ತೆ ತಡೆ ನಡೆಸಿದರು. ಘಟನಾ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಪಡೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದೆ. ಮೃತದೇಹವನ್ನು ತಮ್ಲುಕ್ ಆಸ್ಪತ್ರೆಗೆ…
ಬೆಳಗಾವಿ: ವಿರೋಧ ಪಕ್ಷದಲ್ಲಿದ್ದರೂ ಸರ್ಕಾರದಿಂದ ಸಾಕಷ್ಟು ಅನುದಾನವನ್ನು ಮಂಜೂರು ಮಾಡಿಸಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಕಾರ್ಯವೈಖರಿ ಅಭಿನಂದನೀಯವಾಗಿದೆ. ಅವರು ಕ್ಷೇತ್ರದಲ್ಲಿ ಝಾಂಸಿ ರಾಣಿಯಂತೆ ತನ್ನದೇ ಆದ ಸೈನ್ಯವನ್ನು ಕಟ್ಟಿಕೊಂಡಿದ್ದು, ಲಕ್ಷ್ಮೀಯ ಸೈನ್ಯ ಗಮನಿಸಿದರೆ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ ಎನಿಸುತ್ತಿದೆ ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಅಶೋಕ ಚವಾಣ ಅಭಿಪ್ರಾಯ ಪಟ್ಟರು. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೆನಕನಹಳ್ಳಿಯಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ವಿರಾಟ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ಮತದಾರರು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ಆಡಳಿತದಿಂದ ಬೇಸತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಸುಳ್ಳು ಭರವಸೆ ನೀಡುತ್ತಿದೆ. ಪ್ರಧಾನಿ ಮೋದಿ ಹಿಂದಿನ ಚುನಾವಣೆಯಲ್ಲಿ ಬೆಲೆ ಏರಿಕೆಯನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದ್ದರು. ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ ೧೫ ಲಕ್ಷ ಹಾಕುವುದಾಗಿ ಹೇಳಿದ್ದರು. ಪ್ರತಿ ವರ್ಷ ೨ ಕೋಟಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವುದಾಗಿ…
ಮಣಿಪುರ ಸಂಘರ್ಷ ನಿಯಂತ್ರಣದಲ್ಲಿದೆ ಎಂದು ಭಾರತೀಯ ಸೇನೆ ಹೇಳಿದೆ. ಸಂಘರ್ಷ ಪೀಡಿತ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುವುದು ರಾತ್ರಿಯವರೆಗೂ ಮುಂದುವರೆಯಿತು. ಧ್ವಜ ಮೆರವಣಿಗೆ ಮುಂದುವರಿಯಲಿದೆ ಎಂದು ಸೇನೆ ಪ್ರತಿಕ್ರಿಯಿಸಿದೆ. ವಿವಿಧೆಡೆ ಹೆಚ್ಚಿನ ಪಡೆಗಳನ್ನು ನಿಯೋಜಿಸಲಾಗಿದೆ. ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಮಣಿಪುರಕ್ಕೆ ಎಲ್ಲಾ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಘೋಷಿಸಿದೆ. ಗಲಭೆಗಳು ಮುಗಿಯುವವರೆಗೆ ರೈಲುಗಳು ಮಣಿಪುರವನ್ನು ಪ್ರವೇಶಿಸುವುದಿಲ್ಲ. ರಾಜ್ಯ ಸರ್ಕಾರದ ಮನವಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಗಲಭೆ ಪೀಡಿತ ಮಣಿಪುರದಲ್ಲಿ ರಾಜ್ಯಪಾಲರು ಸ್ಥಳದಲ್ಲೇ ಚಿತ್ರೀಕರಣ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಂಘರ್ಷ ಮುಂದುವರಿದಿರುವ ಮಣಿಪುರದಲ್ಲಿ ಸೇನೆ ಧ್ವಜ ಮೆರವಣಿಗೆ ನಡೆಸಿದೆ. ರಾಜ್ಯದಲ್ಲಿ ಇಂಟರ್ನೆಟ್ ನಿಷೇಧವನ್ನೂ ವಿಸ್ತರಿಸಲಾಗಿದೆ. ಘರ್ಷಣೆ ನಿರಂತರವಾಗಿ ಮುಂದುವರಿದಿದ್ದರಿಂದ ರಾಜ್ಯ ಗೃಹ ಇಲಾಖೆ ಗುಂಡಿನ ದಾಳಿಗೆ ಆದೇಶ ಹೊರಡಿಸಿದೆ. ರಾಜ್ಯಪಾಲರಾದ ಅನುಸಿಯಾ ಉಯಿಕೆ ಅವರು ರಾಜ್ಯಪಾಲರಿಗೆ ಕಳುಹಿಸಿದ ಆದೇಶಕ್ಕೆ ಸಹಿ ಹಾಕಿದರು. ಹಿಂಸಾಚಾರವನ್ನು ನಿಯಂತ್ರಿಸಲು ಅಗತ್ಯ ಬಿದ್ದರೆ ಉಗ್ರರನ್ನು ಗುಂಡು ಹಾರಿಸುವಂತೆ ಜಿಲ್ಲಾಧಿಕಾರಿಗಳು ಸೇರಿದಂತೆ…
ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಸಂಖ್ಯೆ ಏರಿದಂತೆ ದೇಶದಲ್ಲಿ ಪೆಟ್ರೋಲ್, ಸಿಲೆಂಡರ್ ಮೊದಲಾದವುಗಳ ಬೆಲೆ ಕೂಡ ಏರುತ್ತಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡ, ಶಾಸಕ ಸತೇಜ್ ಪಾಟೀಲ್ ಉರ್ಫ್ ಬಂಟಿ ಪಾಟೀಲ ವ್ಯಂಗ್ಯವಾಡಿದ್ದಾರೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೆನಕನಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಮೊದಲ ಮನ್ ಕೀ ಬಾತ್ ಸಂದರ್ಭದಲ್ಲಿ ಪೆಟ್ರೋಲ್ ಬೆಲೆ 51 ರೂ. ಇತ್ತು, ನೂರನೇ ಮನ್ ಕೀ ಬತ್ ನಲ್ಲಿ 110 ರೂ. ಆಗಿದೆ. ಸಿಲೆಂಡರ್ ಬೆಲೆ ಮೊದಲ ಮನ್ ಕೀ ಬಾತ್ ನಲ್ಲಿ 400 ರೂ. ಇತ್ತು, 100 ನೇ ಮನ್ ಕೀ ಬಾತ್ ಹೊತ್ತಿಗೆ 1200 ರೂ ಆಗಿದೆ. ಇನ್ನೆೆಷ್ಟು ಮನ್ ಕೀ ಬಾತ್ ಬರುತ್ತದೆಯೋ ಗೊತ್ತಿಲ್ಲ ಎಂದು ಅವರು ಹೇಳಿದರು. ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಹಿಂದಿನ ಚುನಾವಣೆಗೂ ಮುನ್ನ ನಿಮಗೆ ಕೊಟ್ಟಿದ್ದ ವಚನವನ್ನು…
ಲಕ್ನೋ: ಉತ್ತರ ಪ್ರದೇಶದಲ್ಲಿ ಮತ್ತೋರ್ವ ಗ್ಯಾಂಗ್ ಸ್ಟಾರ್ ನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದ್ದು, ಉತ್ತರಪ್ರದೇಶ ಪೊಲೀಸರ ವಿಶೇಷ ತನಿಖಾ ತಂಡದೊಂದಿಗೆ ಮೀರಠ್ ನಲ್ಲಿ ಗುರುವಾರ ಎನ್ ಕೌಂಟರ್ ನಡೆಯಿತು. ಕೊಲೆ, ಸುಲಿಗೆ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಗ್ಯಾಂಗ್ ಸ್ಟರ್ ಅನಿಲ್ ದುಜಾನ ಎನ್ ಕೌಂಟರ್ ನಲ್ಲಿ ಹತ್ಯೆಗೀಡಾದ ಗ್ಯಾಂಗ್ ಸ್ಟಾರ್ ಆಗಿದ್ದಾನೆ. ‘ಅನಿಲ್ ನನ್ನು ಬಂಧಿಸಲು ಮೀರಠ್ ನ ಭೋಲಾ ಜಾಲ್ ಪ್ರದೇಶಕ್ಕೆ ತೆರಳಿದ್ದ ಎಸ್ ಟಿಎಫ್ ತಂಡ ಆತನಿದ್ದ ಸ್ಥಳವನ್ನು ಸುತ್ತುವರಿದು, ಶರಣಾಗುವಂತೆ ಸೂಚಿಸಿದೆ. ಆದರೆ ಆತ ಮತ್ತು ಆತನ ತಂಡದ ಸದಸ್ಯರು ಪೊಲೀಸರತ್ತ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿದಾಳಿ ನಡೆಸಿ ಆತನನ್ನು ಹತ್ಯೆ ಮಾಡಲಾಗಿದೆ’ ಎಂದು ಪೊಲೀಸರು ವಿವರಿಸಿದ್ದಾರೆ. ಜಾಮೀನಿನ ಮೇಲೆ ಹೊರಬಂದಿದ್ದ ಅನಿಲ್, ತನ್ನ ವಿರುದ್ಧದ ಕೊಲೆ ಪ್ರಕರಣವೊಂದರ ಸಾಕ್ಷಿಗಳಿಗೆ ಜೀವ ಬೆದರಿಕೆಯೊಡ್ಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 18 ಕೊಲೆ ಪ್ರಕರಣಗಳು ಸೇರಿದಂತೆ ಅನಿಲ್ ವಿರುದ್ಧ 60 ಪ್ರಕರಣಗಳು ದಾಖಲಾಗಿದ್ದವು.…
ಕರ್ನಾಟಕದಿಂದಲೇ ಬಿಜೆಪಿಯ “ಅಧಃಪತನ” ಪ್ರಾರಂಭವಾದರೆ ನನಗೆ ಸಂತೋಷವಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದು, ಬಿಜೆಪಿಯನ್ನು ಅಧಿಕಾರದಿಂದ ದೂರವಿಟ್ಟರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಬೇಡಿ. ನೀವು ಇಷ್ಟಪಡುವ ಯಾವುದೇ ಪಕ್ಷಕ್ಕೆ ಮತ ನೀಡಿ. ಬಿಜೆಪಿಯ ಅವನತಿ ಕರ್ನಾಟಕದಿಂದ ಪ್ರಾರಂಭವಾದರೆ ನನಗೆ ಸಂತೋಷವಾಗುತ್ತದೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ಪಕ್ಷವು ಹಿಂದೂ ಧರ್ಮದಲ್ಲಿನ ಆಧ್ಯಾತ್ಮಿಕತೆಯನ್ನು ನಾಶಪಡಿಸಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದು, ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಯನ್ನು ಹೊರಗಿಡುವಂತೆ ಕರೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿಶ್ವಬ್ಯಾಂಕ್ ನ ಮುಖ್ಯಸ್ಥರಾಗಿರುವ ಭಾರತೀಯ ಮಾಸ್ಟರ್ಕಾರ್ಡ್ನ ಮಾಜಿ ಸಿಇಒ ಮತ್ತು ಉದ್ಯಮಿ ಅಜಯ್ ಬಂಗಾ ಅವರು ವಿಶ್ವ ಬ್ಯಾಂಕ್ನ ಮುಂದಿನ ಅಧ್ಯಕ್ಷರಾಗಲಿದ್ದಾರೆ. ಬುಧವಾರ ಅಜಯ್ ಬಂಗಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ವಿಶ್ವಬ್ಯಾಂಕ್ ಖಚಿತಪಡಿಸಿದೆ. ಭಾರತೀಯ ಮೂಲದ ವ್ಯಕ್ತಿಯೊಬ್ಬರು ವಿಶ್ವಬ್ಯಾಂಕ್ ಮುಖ್ಯಸ್ಥರಾಗಿರುವುದು ಇದೇ ಮೊದಲು. ಬುಧವಾರ ನಡೆದ 25 ಸದಸ್ಯರ ಕಾರ್ಯಕಾರಿ ಮಂಡಳಿ ಈ ನಿರ್ಧಾರ ಕೈಗೊಂಡಿದೆ. ವಿಶ್ವಬ್ಯಾಂಕ್ ಮಂಡಳಿಯ ಸದಸ್ಯರು ಸೋಮವಾರ ಬಂಗಾ ಅವರೊಂದಿಗೆ ನಾಲ್ಕು ಗಂಟೆಗಳ ಸಂದರ್ಶನ ನಡೆಸಿದ ನಂತರ ಆಯ್ಕೆಯಾಗಿದೆ. ಅವರು ಅವಿರೋಧವಾಗಿ ಆಯ್ಕೆಯಾದರು. ಅವಧಿ ಐದು ವರ್ಷಗಳು. ಜೂನ್ 2 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. 63 ವರ್ಷದ ಬಂಗಾ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ವಿಶ್ವಬ್ಯಾಂಕ್ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಿದ್ದಾರೆ. ಬೆಂಬಲದ ಬಹಿರಂಗ ಪತ್ರದಲ್ಲಿ, 55 ವಕೀಲರು, ಶಿಕ್ಷಣ ತಜ್ಞರು, ಕಾರ್ಯನಿರ್ವಾಹಕರು, ಅನುಭವಿಗಳು ಮತ್ತು ಮಾಜಿ ಸರ್ಕಾರಿ ಅಧಿಕಾರಿಗಳು ವಿಶ್ವ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನವನ್ನು ಅನುಮೋದಿಸಿದ್ದಾರೆ. ಬಿಡೆನ್ ಅವರು ಯುಗದ ಸವಾಲುಗಳನ್ನು ಎದುರಿಸಲು…
ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ಶಾಸಕಿ ಡಾ. ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ರವರು ನೂರಾರು ಕಾರ್ಯಕರ್ತರ ಜೊತೆಗೂಡಿ ರೋಡ್ ಶೋ ಹಾಗೂ ಕಾರ್ನರ್ ಸಭೆ ನಡೆಸಿ ತಮ್ಮ ಸೇವಾವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆ ಮಾಡಿದ್ದೇನೆ. ರೈತರಿಗೆ ಅನುಕೂಲವಾಗಲೆಂದು ನೀರಾವರಿ ಇಲಾಖೆಯಿಂದ ಕೆರೆ ತುಂಬುವ ಯೋಜನೆ ಹಾಗೂ ರಸ್ತೆ ಕಾಮಗಾರಿ, ಕುಡಿಯುವ ನೀರಿನ ವ್ಯವಸ್ಥೆ ಇನ್ನೂ ಹತ್ತು ಹಲವು ಕಾಮಗಾರಿಗಳನ್ನು ಮಾಡಿದ್ದು ನನ್ನ ಅಭಿವೃದ್ಧಿ ಕೆಲಸವನ್ನು ನೋಡಿ ಮತ ನೀಡಿ ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಇಟಗಿ, ಬೇಡರಹಟ್ಟಿ, ಬೋಗುರ್, ಕರವಿನಕೊಪ್ಪ್ ಗ್ರಾಮದ ನೂರಾರು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು,ಬಸವರಾಜ ತುರಮರಿ, ದೇಮಣ್ಣ ಮುತ್ನಾಳ್, ಅಪ್ಪಣ್ಣ ದೊಡಮನಿ, ಬಾಬು ಪಟ್ಟೇದ್, ಗಂಗಪ್ಪ ಬಡಲಿ, ರಮೇಶ ದೇವನವರ್, ಸಂತೋಷ ಗುರನವರ್, ಸುರೇಶ್ ಬಳಗಪ್ಪನವರ್, ರಾಜು ಕುರಬರ, ಬಸವರಾಜ ಅವರಾದಿ, ಮಂಜು ಬಳಗಪ್ಪನವರ್, ಆಕಾಶ ಸತ್ಯಪಗೋಳ, ರಾಜು ಮುದೆಕ್ಕನವರ್, ಗಿರೀಶ್ ಶಿವಪ್ಪನವರ್, ಸಾಗರ್ ಶಿವಪ್ಪನವರ್, ಮಡಿವಲಿ ಬನೋಶಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ…
ಚಿತ್ರದ ಶೂಟಿಂಗ್ ವೇಳೆ ನಟ ಚಿಯಾನ್ ವಿಕ್ರಮ್ ಗಾಯಗೊಂಡಿದ್ದಾರೆ. ಹೊಸ ಚಿತ್ರ ತಂಗಳನ್ಗಾಗಿ ತಾಲೀಮು ನಡೆಸುತ್ತಿದ್ದಾಗ ಅವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಕ್ಕೆಲುಬಿಗೆ ಗಾಯವಾಗಿದೆ. ಅಪಘಾತದಲ್ಲಿ ವಿಕ್ರಮ್ ಅವರ ಪಕ್ಕೆಲುಬುಗಳು ಮುರಿತವಾಗಿವೆ ಎಂದು ವ್ಯವಸ್ಥಾಪಕ ಸೂರ್ಯನಾರಾಯಣನ್ ಟ್ವೀಟ್ ಮಾಡಿದ್ದಾರೆ. ಅಪಘಾತದ ನಂತರ ಚಿತ್ರದ ಚಿತ್ರೀಕರಣವನ್ನು ನಿಲ್ಲಿಸಲಾಗಿತ್ತು. ವಿಕ್ರಮ್ ಕೆಲ ಕಾಲ ಚಿತ್ರೀಕರಣದಿಂದ ದೂರ ಇರಲಿದ್ದಾರೆ ಎಂದು ಅವರ ಮ್ಯಾನೇಜರ್ ಮಾಹಿತಿ ನೀಡಿದ್ದಾರೆ. ವಿಕ್ರಮ್ ಅವರು ಶೀಘ್ರದಲ್ಲೇ ಪೂರ್ಣ ಆರೋಗ್ಯಕ್ಕೆ ಮರಳಲಿದ್ದಾರೆ ಎಂದು ತಿಳಿಸಿದ್ದಾರೆ. ಎಲ್ಲರ ಪ್ರೀತಿಗೆ ವಿಕ್ರಮ್ ಧನ್ಯವಾದ ಹೇಳಿದ್ದು, ಆದಷ್ಟು ಬೇಗ ಹಿಂತಿರುಗುವುದಾಗಿ ಭರವಸೆ ನೀಡಿದ್ದಾರೆ ಎಂದು ಸೂರ್ಯನಾರಾಯಣ್ ಟ್ವೀಟ್ ಮಾಡಿದ್ದಾರೆ. ತಂಗಳನ್ ಪಾ ರಂಜಿತ್ ನಿರ್ದೇಶನದ ಚಿತ್ರ. ಚಿತ್ರಕ್ಕಾಗಿ ನಟ ಭಾರಿ ಮೇಕ್ ಓವರ್ ಮಾಡಿದ್ದಾರೆ. ಸ್ಟುಡಿಯೋ ಗ್ರೀನ್ ಮತ್ತು ನೀಲಂ ಪ್ರೊಡಕ್ಷನ್ಸ್ ನಿರ್ಮಾಣದ ಈ ಚಿತ್ರವನ್ನು ಕೆಇ ಜ್ಞಾನವೇಲ್ ರಾಜ ನಿರ್ಮಿಸಿದ್ದಾರೆ. ಮಲಯಾಳಂನ ಪಾರ್ವತಿ ಮತ್ತು ಮಾಳವಿಕಾ ಮೋಹನನ್ ಚಿತ್ರದಲ್ಲಿ ನಾಯಕಿಯರಾಗಿದ್ದಾರೆ. ‘ತಂಗಳನ್’ ಚಿತ್ರದಲ್ಲಿ ಪಶುಪತಿ, ಹರಿ…
ಆರು ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ ಕಳೆದ 3 ತಿಂಗಳಿಂದ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಕೊರಟಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಹೆಚ್.ಅನಿಲ್ ಕುಮಾರ್ ತಿಳಿಸಿದರು. ಕೊರಟಗೆರೆ ಪಟ್ಟಣದ ಪಾಂಚಜನ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ದೇಶದಲ್ಲಿ ಕಾಂಗ್ರೆಸ್ ಪಕ್ಷವು ಮುಳುಗಿದ ಹಡಗು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರದಲ್ಲಿದೆ. ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆದ್ದರೆ ಅಭಿವೃದ್ಧಿ ತಾನಾಗಿಯೇ ಆಗಲಿದೆ ಎಂದು ತಿಳಿಸಿದರು. ಕೊರಟಗೆರೆ ಮಂಡಲ ಅಧ್ಯಕ್ಷ ಪವನ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಬಹಳ ವರ್ಷದಿಂದ ಕೆಲಸ ಮಾಡಿದವರು ಬಿಜೆಪಿ ಪಕ್ಷದ ಸಿದ್ಧಾಂತವನ್ನು ಒಪ್ಪಿ 200ಕ್ಕೂ ಕಾರ್ಯಕರ್ತರು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಅವರಿಗೆ ಉತ್ತಮ ಸ್ಥಾನಮಾನ ನೀಡುತ್ತೇವೆ ಎಂದು ಭರವಸೆ ನೀಡಿದರು. ಜೆಟ್ಟಿಅಗ್ರಹಾರ ಮಾಜಿ ಗ್ರಾ.ಪಂ. ಅಧ್ಯಕ್ಷ…