Subscribe to Updates
Get the latest creative news from FooBar about art, design and business.
- ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ
- ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ
- ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ
- ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
- ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
- ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
- ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
- ತುಮಕೂರು: ಆನ್ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
Author: admin
ಪಿಡಿಒ ವರ್ಗಾವಣೆ ಸಂಬಂಧ ಹೆಚ್.ಡಿ.ರೇವಣ್ಣ ಬಳಿ ಯಾವ ಪೆನ್ ಡ್ರೈವ್ ಇದೆಯೋ ಅದನ್ನು ಕೊಡಲಿ” ಎಂದು ಸಚಿವ ಪ್ರಿಯಾಂಕ ಖರ್ಗೆ ಸವಾಲು ಹಾಕಿದ್ದಾರೆ. ವಿಕಾಸಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಸಚಿವರೇ ಡೀಲ್ ಮಾಡ್ತಿದ್ದಾರೆ ಎಂಬ ಆರೋಪದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ”ರೇವಣ್ಣ ಬಹಳ ಹುಷಾರು ಅನ್ನೊಂಡಿದ್ದೆ. ಹೌದು, ನೇರವಾಗಿ ಪಿಡಿಒ ವರ್ಗಾವಣೆ ಸರ್ಕಾರದ ಮಟ್ಟದಲ್ಲಿ ಆಗುತ್ತದೆ. ಪಿಡಿಒಗಳು ಈಗ ಸ್ಟೇಟ್ ಕೇಡರ್ನಲ್ಲಿ ಬರುತ್ತಾರೆ. ಮೊದಲು ಸಿಇಒ ಹಾಗೂ ಕಮಿಷನರ್ ಹಂತದಲ್ಲಿ ಪಿಡಿಒ ಆಗುತ್ತಿತ್ತು. ಈ ಕುರಿತು ಡೀಲ್ ಏನಾದ್ರೂ ನಡೆದಿದ್ದರೆ, ದಾಖಲೆ ಇದ್ದರೆ ಕೊಡಿ” ಎಂದರು. ವರ್ಗಾವಣೆ ಮಾಡಬೇಕು, ಕಾನೂನು ಪ್ರಕಾರವೇ ಅದು ಆಗುತ್ತೆ. ಪಿಡಿಒ ಅಸೋಸಿಯೇಷನ್ ಅವರನ್ನು ಕರೆದು ಕೇಳಲಿ. ರೇವಣ್ಣ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡ್ತಾರೆ. ಪ್ರಸ್ತುತ ಜೆಡಿಎಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಹೀಗಾಗಿ ಹೀಗೆಲ್ಲ ಮಾತನಾಡುತ್ತಾರೆ’ ಎಂದು ತಿರುಗೇಟು ನೀಡಿದರು. ಶಾಸಕರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ”ಈ ಹಿಂದೆ, ಎರಡು ಬಾರಿ ಶಾಸಕಾಂಗ ಸಭೆ ಮುಂದೂಡಿದ್ದರು. ಬಿ.…
ವಿವಾಹ ವಿಚ್ಛೇದನ ಸೇರಿದಂತೆ ವೈವಾಹಿಕ ಪ್ರಕರಣಗಳ ವಿಲೇವಾರಿಗೆ ವಿಳಂಬವಾಗದಂತೆ ಗರಿಷ್ಠ ಒಂದು ವರ್ಷದ ಮಿತಿಯಲ್ಲಿ ಇತ್ಯರ್ಥ ಪಡಿಸಲು ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ತನ್ನ ವಿವಾಹ ವಿಚ್ಚೇದನ ಅರ್ಜಿಯನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಎನ್ ರಾಜೀವ್ ಎಂಬುವರು ಸಲ್ಲಿಸಿದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ. ಮನುಷ್ಯ ಜೀವನದ ಅಲ್ಪಾವಧಿ ಗಮನದಲ್ಲಿಟ್ಟುಕೊಂಡು ವೈವಾಹಿಕ ಪ್ರಕರಣಗಳ ವಿಲೇವಾರಿಯನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕಿದೆ. ಈ ರೀತಿ ಕೌಟುಂಬಿಕ ಪ್ರಕರಣಗಳು ವಿಲೇವಾರಿಯಲ್ಲಿ ವಿಳಂಬವಾದಲ್ಲಿ ಎರಡೂ ಕುಟುಂಬಗಳ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಪೀಠ ತಿಳಿಸಿದೆ. ಲೈಫ್ ಈಸ್ ಟೂ ಶಾರ್ಟ್ ಟು ಬಿ ಲಿಟ್ಸ್ (ಬದುಕು ತೀರಾ ಚಿಕ್ಕದು) ಎಂಬ ಆಂಗ್ಲ ಇತಿಹಾಸಕಾರರೊಬ್ಬರ ಹೇಳಿಕೆಯನ್ನು ಆದೇಶದಲ್ಲಿ ಉಲ್ಲೇಖಿಸಿರುವ ನ್ಯಾಯಮೂರ್ತಿಗಳು, ಮದುವೆಯ ವಿಸರ್ಜನೆ ಅಥವಾ ಅನೂರ್ಜಿತತೆ ಬಯಸುವ ವೈವಾಹಿಕ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಗರಿಷ್ಠ ಒಂದು ವರ್ಷದ ಮಿತಿಯೊಳಗೆ…
ಬೀದರ್: ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ಯುವಕನ ಮೃತದೇಹ 3 ದಿನಗಳಾದರೂ ಇನ್ನೂ ಪತ್ತೆಯಾಗದ ಕಾರಣ ಬೀದರ್ ಪೊಲೀಸರು ಡ್ರೋನ್ ಮೊರೆ ಹೋಗಿದ್ದಾರೆ. 3 ದಿನಗಳ ಹಿಂದೆ ಧಾರಾಕಾರ ಮಳೆಯಿಂದ ತುಂಬಿ ಹರಿಯುತ್ತಿದ್ದ ಸೇತುವೆ ದಾಟುವಾಗ 25 ವರ್ಷದ ಮಲ್ಲಪ್ಪ ಶರಣಪ್ಪ ಕರೆನವರ್ ನೀರಿನಲ್ಲಿ ಕೊಚ್ಚಿ ಹೋಗಿದ್ದ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಧನ್ನೂರಾ ಗ್ರಾಮದಲ್ಲಿ ಘಟನೆ ವರದಿಯಾಗಿದೆ. ಇದೀಗ ಎಸ್ ಪಿ ಚೆನ್ನಬಸವಣ್ಣ ಲಂಗೋಟಿ ಸೂಚನೆಯಂತೆ ಯುವಕನ ಮೃತದೇಹವನ್ನು ಪತ್ತೆ ಮಾಡಲು ಡ್ರೋನ್ ಕ್ಯಾಮೆರಾ ಬಳಕೆ ಮಾಡಲಾಗುತ್ತಿದೆ. ಡ್ರೋನ್ ಕ್ಯಾಮೆರಾ ಬಳಸಿ ಹಳ್ಳದಲ್ಲಿ ಕೊಚ್ಚಿ ಹೋದ ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಸಚಿವರ ವಿರುದ್ಧ ಕಾಂಗ್ರೆಸ್ ನ ಹಿರಿಯ ಶಾಸಕರ ಅಸಮಾಧಾನ ವಿಚಾರವಾಗಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರು ಪತ್ರ ಬರೆದಿರುವುದು ಸುಳ್ಳು ಎಂದಿದ್ದಾರೆ 2 ಬಾರಿ CLP ಮುಂದೂಡಿಕೆ ಆಗಿತ್ತು, ಹಾಗಾಗಿ CLP ಸಭೆ ಕರೆದಿದ್ದಾರೆ. ಇದನ್ನೇ ಬಿಜೆಪಿ ನಾಯಕರು ಫೋಟೋಶಾಪ್ ಮಾಡಿ ಹಾಕಿದ್ದಾರೆ. ಆ ಬಗ್ಗೆ ಕ್ರಿಮಿನಲ್ ಕೇಸ್ ಹಾಕಿ ತನಿಖೆಗೆ ಕೊಡಲಾಗಿದೆ ಎಂದು ಅವರು ತಿಳಿಸಿದರು. ಓರ್ವ ಶಾಸಕರು ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಅನ್ನೋದು ತಪ್ಪಾ? ಎಂದು ಪ್ರಶ್ನಿಸಿದರು. ಅಲ್ಲದೆ, ಕಳೆದ ಸರ್ಕಾರದಲ್ಲಿ ಅನುಮತಿ ಇಲ್ಲದೆ ಅನುದಾನ ಮಂಜೂರು ಆಗಿದೆ. ಈಗಾಗಲೇ ಗ್ಯಾರಂಟಿ ಯೋಜನೆ ಜಾರಿಮಾಡಲಾಗಿದೆ. ಕಾಮಗಾರಿಗೆ ಈ ವರ್ಷ ತೊಂದರೆ ಆಗಲಿದೆ ಅಂತಾ ಸಿಎಂ ಹೇಳಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಡಾ.ವಡ್ಡಗೆರೆ ನಾಗರಾಜಯ್ಯ ಕಾಡುಗೊಲ್ಲ ಸಮುದಾಯದ ಪುರಾತನ ಪದ್ದತಿಯ ಪ್ರಕಾರ ಊರಾಚೆ ಪ್ರತ್ಯೇಕವಾದ ತಾತ್ಕಾಲಿಕ ಗುಡಿಸಲಿನಲ್ಲಿ ಬಾಣಂತಿಯೊಬ್ಬಳು ತನ್ನ ನವಜಾತ ಶಿಶುವಿನೊಂದಿಗೆ ವಾಸವಿದ್ದಾಗ ಮಳೆಗೆ ಸಿಕ್ಕಿ ನವಜಾತ ಶಿಶು ಸತ್ತುಹೋಗಿರುವ ಸುದ್ದಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ತುಮಕೂರು ಜಿಲ್ಲೆಯ ಬೆಳ್ಳಾವಿ ಹೋಬಳಿಯ ಮಲ್ಲೇನಹಳ್ಳಿ ಗ್ರಾಮದ ಕಾಡುಗೊಲ್ಲರ ಹಟ್ಟಿಯಲ್ಲಿ ಸಂಭವಿಸಿರುವ ಈ ಘಟನೆ ಕರ್ನಾಟಕ ಮತ್ತು ಕರ್ನಾಟಕದ ಆಚೆಗೂ ನೆಲೆಸಿರುವ ಎಲ್ಲಾ ಕಾಡುಗೊಲ್ಲ ಸಮುದಾಯದ ಜನರ ಸಾಮಾಜಿಕ ವಾಸ್ತವತೆಗೆ ಕನ್ನಡಿ ಹಿಡಿಯುತ್ತದೆ. ಕರ್ನಾಟಕದ ರಾಜಧಾನಿಯಾಗಿರುವ ಬೆಂಗಳೂರು ಮೆಟ್ರೋಪಾಲಿಟನ್ ಮಹಾನಗರದ ನಾಗದೇವನಹಳ್ಳಿಯ ಕಾಡುಗೊಲ್ಲರು ಈಗಲೂ ತಮ್ಮ ಹೆಣ್ಣುಮಕ್ಕಳು ಮುಟ್ಟಾದಾಗ ಮತ್ತು ಹೆರಿಗೆಯ ಸಮಯದಲ್ಲಿ ಮೂರು ತಿಂಗಳು ಮನೆಯಾಚೆ ಪ್ರತ್ಯೇಕವಾದ ಗುಡಿಸಲು ಅಥವಾ ಕುಟೀರಗಳಲ್ಲಿರಿಸುವ ಪದ್ದತಿಯನ್ನು ಅನುಸರಿಸುತ್ತಿದ್ದಾರೆ. ಕರ್ನಾಟಕದ ಅನೇಕ ಕಡೆಗಳಲ್ಲಿ ಕಾಡುಗೊಲ್ಲ ಸಮುದಾಯದ ಬಹುತೇಕ ಜನ ಇಂದಿಗೂ ಕಳ್ಳೆಬೇಲಿಯೊಳಗಿನ ಹಟ್ಡಿಗಳಲ್ಲಿ ಹುಲ್ಲುಗುಡಿಸಲಿನ ಗುಡಿಗಳಲ್ಲಿ ತಮ್ಮದೇ ಸಾಂಸ್ಕೃತಿಕ ನಾಯಕರನ್ನು ದೇವರುಗಳೆಂದು ಆರಾಧಿಸುತ್ತಾ ಹುಲ್ಲುಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ. ಹೆಣ್ಣುಮಕ್ಕಳನ್ನು ಮುಟ್ಟುಚೆಟ್ಟು, ಬಾಣಂತಿ ಸಮಯಗಳಲ್ಲಿ ಮಡಿಮೈಲಿಗೆ ಸೂತಕವೆಂದು ಮನೆಯಾಚೆ ಪ್ರತ್ಯೇಕವಾಗಿ ಗುಡಿಸಲುಗಳಲ್ಲಿರಿಸುವ ಮೂಢ…
ತುಮಕೂರು: ಸಂಪನ್ಮೂಲ ಕೊರತೆಯಿಂದ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಹಿನ್ನಡೆಯಾಗಿತ್ತು ಹೀಗಾಗಿ ಮುಂದಿನ ದಿನಗಳಲ್ಲಿ ತಾಲೂಕು ಹಾಗೂ ಹೋಬಳಿ ಮಟ್ಟಕ್ಕೆ ತೆರಳಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಾಗುವುದು ಇದಕ್ಕಾಗಿ ಸರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಎಂಟು ವರ್ಷಗಳ ಅಧಿಕಾರ ನಡೆಸಿರುವ ಮಾದರಿಯ ಆಡಳಿತ ಕುರಿತು ರಾಜ್ಯದಲ್ಲಿ ಜನಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು. ದೆಹಲಿ ಸರ್ಕಾರದಲ್ಲಿ ಕೇಜ್ರಿವಾಲ್ ಅವರ ಯೋಜನೆಗಳನ್ನು ಕದ್ದು ರಾಜ್ಯದಲ್ಲಿ ಕಾಂಗ್ರೆಸ್ ಅನುಷ್ಠಾನಗೊಳಿಸಿರುವಂತಹ, ರಾಜ್ಯದಲ್ಲಿ ಭ್ರಷ್ಟಾಚಾರ ಹಾಗೂ ಅನುಷ್ಠಾನಕ್ಕೆ ಸುಳ್ಳು ಹೇಳಿರುವಂತಹುದು ಸ್ಪಷ್ಟವಾಗಿದೆ ಎಂದು ತಿಳಿಸಿದರು. ಈ ಹಿಂದಿನ ಸರ್ಕಾರದಲ್ಲಿ 40 ಪರ್ಸೆಂಟ್ ಸರ್ಕಾರ ಎಂದು ದೂರಿದ ಕಾಂಗ್ರೆಸ್ಸಿಗರು ಇದೀಗ ಯಾವುದೇ ಬಿಲ್ ಗಳು ಇಲ್ಲದೆ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಪರೀತ ಸಾಲ ಮಾಡಿದೆ ಈ ಮೂಲಕ ಜನರ ಮೇಲೆ ಇದರ ಹೊರೆಯನ್ನು…
ನಮ್ಮತುಮಕೂರು ವರದಿ: ಹೆರಿಗೆ ನಂತರ ಬಾಣಂತಿ ಜೊತೆಗೆ ಬೆಳ್ಳಾವಿ ಹೋಬಳಿ ಮಲ್ಲೇನಹಳ್ಳಿ ಊರಾಚೆ ಜಮೀನಿನ ಗುಡಿಸಲಿನಲ್ಲಿ ಇಡಲಾಗಿದ್ದ ನವಜಾತ ಶಿಶು ಅನಾರೋಗ್ಯದಿಂದ ಸಾವನ್ನಪ್ಪಿದ ಹಿನ್ನಲೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ.ನೂರುನ್ನೀಸ ಇಂದು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿ ಗ್ರಾಮಸ್ಥರು ಹಾಗೂ ಸ್ಥಳೀಯ ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮೃತ ಮಗುವಿನ ಪೋಷಕರ ಆಹವಾಲು ಸ್ವೀಕರಿಸಿದ ನ್ಯಾಯಾಧೀಶರು, ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕಿ, ಮಗು ಮೃತಪಟ್ಟ ನಂತರವೂ ಮೂರು ದಿನಗಳಿಂದ ಸುರಿಯುತ್ತಿರುವ ಜಡಿ ಮಳೆಯನ್ನು ಲೆಕ್ಕಿಸದೆ ತಾಯಿಯನ್ನು ಹಟ್ಟಿಯ ಒಳಗಡೆ ವಾಸ ಮಾಡಲು ಬೀಡದೆ ಊರಾಚೆಯ ಗುಡಿಸಿಲಿನಲ್ಲಿಯೇ ಒಂಟಿಯಾಗಿ ಇರಿಸಲಾಗಿರುವ ಮಾಹಿತಿ ಪಡೆದ ಅವರು, ಗ್ರಾಮಸ್ಥರಿಗೆ ಕಾನೂನುಗಳ ತಿಳುವಳಿಕೆ ನೀಡಿ, ಗುಡಿಸಲನ್ನು ಕೆಡವಿಸಿ, ಬಾಣಂತಿಗೆ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಕೊಡಿಸಿದ ನ್ಯಾಯಾಧೀಶರು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದರು. ಆರೋಗ್ಯದ ಹೆಚ್ಚಿನ ನಿಗಾ ಅವಶ್ಯಕತೆ ಇರುವ ಬಾಣಂತಿ ಮತ್ತು ಮಗುವನ್ನು ಊರಾಚೆಯ ಗುಡಿಸಲಿನಲ್ಲಿಯೇ…
ಬೆಂಗಳೂರು: ರೈತರಿಗೆ ಬೀಜ, ರಸಗೊಬ್ಬರ, ಕೀಟನಾಶಕ, ಮಣ್ಣು ಪರೀಕ್ಷೆ ಈ ರೀತಿ ಹಲವಾರು ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ದೇಶದಾದ್ಯಂತ ಸುಮಾರು ಒಂದು ಲಕ್ಷ ಇಪ್ಪತೈದು ಸಾವಿರ (1.25) ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮ ಸ್ವಾಗತಾರ್ಹ ಮತ್ತು ಅವರಿಗೆ ರಾಜ್ಯದ ರೈತರ ಪರವಾಗಿ ಧನ್ಯವಾದಗಳು ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ರಾಷ್ಟ್ರಕ್ಕೆ ಸಮರ್ಪಿಸುವ ಮೂಲಕ ಎಲ್ಲ ಕೇಂದ್ರಗಳಲ್ಲಿ ರೈತರಿಗೆ ಈ ರೀತಿ ಒಂದೇ ಸೂರಿನಡಿ ಹಲವಾರು ಸೇವೆಗಳ ಸೌಲಭ್ಯ ದೊರೆಯಲಿದೆ. ಈ ಸಮೃದ್ದಿ ಕೇಂದ್ರಗಳನ್ನು ದೇಶದ ಕೃಷಿ ವಿಜ್ಞಾನ ಕೇಂದ್ರಗಳು ಮತ್ತು ಕೃಷಿ ವಿಶ್ವವಿದ್ಯಾಲಯದೊಂದಿಗೆ ನೇರವಾಗಿ ಸಂಪರ್ಕ ಹೊಂದುವ ವ್ಯವಸ್ಥೆಯನ್ನು ಮಾಡಲಾಗಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ರೈತರು ಸ್ಪರ್ಧೆ ಮಾಡುವ ದೃಷ್ಟಿಯಿಂದ ಅವರಿಗೆ ಬೇಕಾದ ಅಗತ್ಯ ತಾಂತ್ರಿಕ ಸಲಹೆಗಳು, ಉಳಿದ ಎಲ್ಲ ಸೌಲಭ್ಯಗಳನ್ನು ಈ…
ತುಮಕೂರು: ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ನಡೆದಿದೆ ಎನ್ನಲಾದ ಶೌಚಗೃಹದಲ್ಲಿ ವೀಡಿಯೋ ಮಾಡಿರೋ ಕುರಿತ ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ತುಮಕೂರು ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ಬಿಜೆಪಿ ಮುಖಂಡರು ಗೃಹ ಸಚಿವರು ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸುತ್ತಿದೆ. ಹೀಗಾಗಿ ಇದರಲ್ಲಿ ಆರೋಪಿಗಳನ್ನು ರಕ್ಷಿಸುವ ಹುನ್ನಾರ ಅಡಗಿದೆ ಎಂದು ಆರೋಪಿಸಿದರು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಕಾವೇರಿ ಕೊಳ್ಳದ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆ ಆರ್ ಎಸ್ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದೆ. ಇನ್ನು ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆಯಾದ ಪರಿಣಾಮ ಜಲಾಶಯದಲ್ಲಿ ನೀರಿನ ಮಟ್ಟ 108. 18 ಅಡಿಗಳಿದೆ ಏರಿಕೆಯಾಗಿದೆ. ಇತ್ತ ಜಲಾಶಯದ ಸಂಪೂರ್ಣ ಚಿತ್ರಣ ನೋಡುವುದಾದ್ರೆ, ಗರಿಷ್ಠ ಮಟ್ಟ – 124.80 ಅಡಿಗಳು. ಇಂದಿನ ಮಟ್ಟ – 108. 18. ಗರಿಷ್ಠ ಸಾಂದ್ರತೆ – 49.452 ಟಿಎಂಸಿ. ಇಂದಿನ ಸಾಂದ್ರತೆ – 29.931 ಟಿಎಂಸಿ. ಒಳ ಹರಿವು – 40, 341 ಕ್ಯೂಸೆಕ್, ಹೊರ ಹರಿವು – 4, 106 ಕ್ಯೂಸೆಕ್ ಎಂದು ಮಾಹಿತಿ ಬಿಡುಗಡೆಯಾಗಿದೆ. ಇನ್ನು ಇದೇ ಪ್ರಮಾಣದಲ್ಲಿ ನೀರು ಜಲಾಶಯಕ್ಕೆ ಬಂದರೆ, ಮುಂದಿನ 15 ದಿನಗಳಲ್ಲಿ ಜಲಾಶಯ ಭರ್ತಿಯಾಗಲಿದೆ. ಇದರ ಜೊತೆಗೆ ಬೆಂಗಳೂರಿನ ಜನತೆಗೆ ಕುಡಿಯುವ ನೀರಿನ ಅಭಾವವು ದೂರಾಗಲಿದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…