Subscribe to Updates
Get the latest creative news from FooBar about art, design and business.
- ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
- ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
- ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
- ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್
- ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
- ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
- ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
- ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
Author: admin
ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ರವರು ಭಾನುವಾರ ತುಮಕೂರು ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಧ್ಯಾಹ್ನ ಉಪಹಾರ ಯೋಜನೆ ಪ್ರಧಾನ ಮಂತ್ರಿ ಪೋಷಣ್ ಅಭಿಯಾನ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ಹಾಗೂ ಚಿಕ್ಕಿ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮೊಟ್ಟೆ, ಬಾಳೆ ಹಣ್ಣು ಹಾಗೂ ಚಿಕ್ಕಿ ವಿತರಣೆ ಮಾಡುವ ಮೂಲಕ ಅಭಿಯಾಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಜ್ಯೋತಿ ಗಣೇಶ್, ಹೆಚ್.ವಿ.ವೆಂಕಟೇಶ್ ಮತ್ತು ಸುರೇಶ್ ಗೌಡ , ಮಹಾಪೌರರಾದ ಪ್ರಭಾವತಿ, ಜಿಲ್ಲಾಧಿಕಾರಿಗಳಾದ ಶ್ರೀನಿವಾಸ್, ಜಿ.ಪಂ.ಕಾರ್ಯನಿರ್ವಹಕಾಧಿಕಾರಿಗಳಾದ ಪ್ರಭು ಸೇರಿದಂತೆ ಹಲವು ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ತುಮಕೂರು: 15 ವರ್ಷ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಾಲಕಿ ಮಗುವಿಗೆ ಜನ್ಮ ನೀಡಲು ಕಾರಣನಾದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ(FTSC) ಪೋಕ್ಸೋ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ಹಾಗೂ 1.50 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ನಾಗೇಶ್ ಎಂಬ ಅಪರಾಧಿಯು ಪುರ ತಾಂಡ್ಯ ಹಾಗಲವಾಡಿ ಹೋಬಳಿಯ ಅಪ್ಪಣ್ಣನಹಳ್ಳಿಯವನಾಗಿದ್ದಾನೆ. ಈತ ನೊಂದ ಬಾಲಕಿಯ ಮನೆಗೆ ಕೆಲಸಕ್ಕಾಗಿ ಆಗಾಗ ಹೋಗಿ ಬರುತ್ತಿದ್ದನು. ಈ ವೇಳೆ ಬಾಲಕಿಗೆ ಪ್ರೀತಿ ಪ್ರೇಮ ಎಂಬ ನೆಪದಲ್ಲಿ ಪುಸಲಾಯಿಸಿ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ 7—8 ಬಾರಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ನೀಡಿದ್ದನು. ಇದರಿಂದಾಗಿ ಬಾಲಕಿಯು ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು ಎಂದು ಈ ಪ್ರಕರಣದ ತನಿಖಾಧಿಕಾರಿ ಚೇಳೂರು ಪೊಲೀಸ್ ಠಾಣೆಯ ಎಫ್.ಕೆ. ನಡಾಪ್ ಅವರು ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ನಾಗೇಶನ ಮೇಲಿರುವ ಆರೋಪ ಸಾಬೀತಾಗಿದ್ದು, ಗೌರವಾನ್ವಿತ ನ್ಯಾಯಾಲಯದ ನ್ಯಾಯಾಧೀಶರು…
ಅಸ್ಸಾಂ: ಭಾರತದ ಅತ್ಯಂತ ಹಿರಿಯ ಸಾಕಾನೆ 89 ವರ್ಷದ ‘ಬಿಜುಲಿ ಪ್ರಸಾದ್’ ಇಂದು ಅಸ್ಸಾಂನ ಸೋನಿತ್ಪುರ ಜಿಲ್ಲೆಯ ಬೆಹಾಲಿ ಟೀ ಎಸ್ಟೇಟ್ನಲ್ಲಿ ಸಾವನ್ನಪ್ಪಿದೆ. ವಯೋಸಹಜ ಸಮಸ್ಯೆಗಳಿಂದ ಬಳಲುತಿದ್ದ ಆನೆ ಇಂದು ಮುಂಜಾನೆ 3.30ರ ಹೊತ್ತಿಗೆ ‘ದಿ ವಿಲಿಯಮ್ಸನ್ ಮಾಗೊರ್ ಗ್ರೂಪ್’ ಕಂಪನಿಗೆ ಸೇರಿದ ಬೆಹಾಲಿ ಟೀ ಎಸ್ಟೇಟ್ನಲ್ಲಿ ಕೊನೆಯುಸಿರೆಳೆದಿದೆ ಎಂದು ಎಸ್ಟೇಟ್ನ ಅಧಿಕಾರಿಗಳು ತಿಳಿಸಿದ್ದಾರೆ. ಸಣ್ಣ ಮರಿಯಿದ್ದಾಗ ಬಿಜುಲಿ ಪ್ರಸಾದ್ನನ್ನು ಬಾರ್ಗಾಂಗ್ ಟೀ ಎಸ್ಟೇಟ್ಗೆ ಕರೆತರಲಾಗಿತ್ತು. ಬಾರ್ಗಾಂಗ್ ಟೀ ಎಸ್ಟೇಟ್ ಮಾರಾಟಮಾಡಿದ ನಂತರ ಆನೆಯನ್ನು ಬೆಹಾಲಿ ಟೀ ಎಸ್ಟೇಟ್ಗೆ ತರಲಾಯಿತು. ಆನೆಯು ಇಡೀ ಎಸ್ಟೇಟ್ನ ಹೆಮ್ಮೆಯ ಸಂಕೇತದಂತಿತ್ತು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊರಟಗೆರೆ ಪಟ್ಟಣದ ಕುಡಿಯುವ ನೀರಿನ ಜಂಪೇನಹಳ್ಳಿ ಕೆರೆಗೆ ಕಲುಷಿತ ನೀರು ಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮತುಮಕೂರು ವಾಹಿನಿ ವರದಿ ಮಾಡಿತ್ತು, ಈ ವರದಿಯ ಬೆನ್ನಲ್ಲೇ ಇದೀಗ ಕೊರಟಗೆರೆ ಗಂಧರ್ವ ಡಾಬ ಮಾಲೀಕರಿಗೆ ಪಟ್ಟಣ ಪಂಚಾಯಿತಿ ಹಾಗೂ ತಾಲೂಕು ಆಡಳಿತ ನೋಟಿಸ್ ಜಾರಿ ಮಾಡಿದೆ. ಕೊರಟಗೆರೆ ಪಟ್ಟಣಕ್ಕೆ ಸರಬರಾಜು ಆಗುವ ಕುಡಿಯುವ ನೀರಿನ ಜಂಪೇನಹಳ್ಳಿ ಕೆರೆಗೆ ಡಾಬಗಳ ತ್ಯಾಜ್ಯ, ಕಲುಶಿತ ನೀರು ಬಿಡುವುದನ್ನು ತಡೆಗಟ್ಟಲು ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಭಾಗ್ಯಮ್ಮ ಅವರಿಗೆ ಡಾಬಾ ಮಾಲೀಕ ಅಡ್ಡಿಪಡಿಸಿದ ಘಟನೆ ನಡೆದಿತ್ತು. ಈ ಬಗ್ಗೆ ನಮ್ಮತುಮಕೂರು ವಾಹಿನಿ ಸವಿವರವಾದ ವರದಿ ಪ್ರಕಟಿಸಿತ್ತು. ಈ ವರದಿ ಪ್ರಕಟವಾದ ಬೆನ್ನಲ್ಲೇ ಇಂದು ಜಂಪೇನಹಳ್ಳಿ ಕೆರೆಯ ಸ್ಥಳಕ್ಕೆ ತಾಲ್ಲೂಕು ಆಡಳಿತ ಭೇಟಿ ನೀಡಿದ್ದು, ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಭಾಗ್ಯಮ್ಮ ಭೇಟಿ ನೀಡಿದ್ದಾರೆ. ಕೆರೆಯ ವಿಸ್ತೀರ್ಣ ಹಾಗೂ ಡಾಬಕ್ಕೆ ಸಂಬಂಧಿಸಿದ ಜಾಗದ ಕುರಿತು ಅಧಿಕಾರಿಗಳು ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಹೆಚ್ಚಿನ ಮಾಹಿತಿ…
ಬೆಂಗಳೂರು: ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲಿ, ನಾವು ಅವರಿಗೆ ಸಹಕಾರ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ ಹೊಸ ಪೀಠ ರಚನೆ ಮಾಡಿದೆ. ರಾಜ್ಯ ಸರಕಾರ ಇದನ್ನು ಗಂಭಿರವಾಗಿ ಪರಿಗಣಿಸಬೇಕು. ಈಗಾಗಲೇ ಟ್ರಿಬ್ಯುನಲ್ ಆದೇಶ ಬಂದು ಒಂದು ವ್ಯವಸ್ಥೆ ಇರುವ ಸಂದರ್ಭದಲ್ಲಿ ಈಗಿರುವ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಒಂದೆಡೆ ನೀರು ಬಿಡುತ್ತದೆ ಮತ್ತೊಂದೆಡೆ ವಾದ ಮಾಡುತ್ತಾರೆ. ಸುಪ್ರೀಂ ಕೋರ್ಟ್ ನಲ್ಲಿ ಕಾನೂನಾತ್ಮಕವಾಗಿ ಹೋರಾಟ ಮಾಡಲು ಪ್ರಯತ್ನ ಮಾಡಬೇಕು. ನಾವು ವಿರೋಧ ಪಕ್ಷವಾಗಿ ಎಲ್ಲ ರೀತಿಯ ಸಹಕಾರ ನೀಡಲು ಸಿದ್ದರಿದ್ದೇವೆ ಎಂದು ಹೇಳಿದರು. ಮಂಡ್ಯ ಮೈಸೂರು ಭಾಗದ ರೈತರು ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ಇಡೀ ವರ್ಷ ನೀರಿನ ಕೊರತೆ ನಿರ್ವಹಣೆ ಮಾಡಬೇಕಿದೆ. ರಾಜ್ಯದ ರೈತರ ಕೂಗಿಗೆ ಸ್ಪಂದಿಸುವ ಕೆಲಸ…
ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿಯನ್ನು ಸೂರತ್ ಸೆಷನ್ಸ್ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ನಿಂದ ಪ್ರಕರಣದಲ್ಲಿ ರಾಹುಲ್ ಗಾಂಧಿಯವರ ಪರವಾಗಿ ಅನುಕೂಲಕರವಾದ ಕ್ರಮವಿತ್ತು. ಇದರ ಬೆನ್ನಲ್ಲೇ ರಾಹುಲ್ ಅವರ ಅನರ್ಹತೆಯನ್ನು ತೆಗೆದುಹಾಕಲಾಯಿತು ಮತ್ತು ಅವರ ಸಂಸತ್ತಿನ ಸದಸ್ಯತ್ವವನ್ನು ಪುನಃಸ್ಥಾಪಿಸಲಾಯಿತು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಸೂರತ್ ಸೆಷನ್ಸ್ ಕೋರ್ಟ್ ಮೊದಲ ಬಾರಿಗೆ ಮೇಲ್ಮನವಿಯ ವಿಚಾರಣೆ ನಡೆಸುತ್ತಿದೆ. ಸೂರತ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ.
ಸಾಕು ನಾಯಿಯೊಂದರ ವಿವಾದ ಒಂದೇ ಕುಟುಂಬದ ನಾಲ್ವರನ್ನು ಬಲಿ ತೆಗೆದುಕೊಂಡಿದೆ. ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸಾಕಿದ ನಾಯಿಗೆ ಹೊಡೆದಿದ್ದಕ್ಕೆ ಕೌಟುಂಬಿಕ ಕಲಹದ ವೇಳೆ ಮನೆಯ ಯಜಮಾನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಜ್ಜಯಿನಿಯ ಬದ್ ನಗರದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ. 45 ವರ್ಷದ ದಿಲೀಪ್ ಪವಾರ್, ಅವರ ಪತ್ನಿ ಮತ್ತು ಮಕ್ಕಳು ಸಾವನ್ನಪ್ಪಿದ್ದಾರೆ. ಮುಂಜಾನೆಯ ಹೊತ್ತಿಗೆ, ದಿಲೀಪ್ ಪವಾರ್ ವಿನಾಕಾರಣ ತನ್ನ ಸಾಕುನಾಯಿಗಳನ್ನು ಹೊಡೆಯಲು ಪ್ರಾರಂಭಿಸಿದನು. ನಾಯಿಗಳಿಗೆ ತೊಂದರೆ ಕೊಡಬೇಡಿ, ಸುಮ್ಮನೆ ಬಿಡುವಂತೆ ಹೆಂಡತಿ ಮಕ್ಕಳು ಬೇಡಿಕೊಂಡರೂ ಕೇಳಲಿಲ್ಲ. ಪವಾರ್ ಅವರ ಪತ್ನಿ ಗಂಗಾ (40), ಪುತ್ರ ಯೋಗೇಂದ್ರ (14) ಹಾಗೂ ಪುತ್ರಿ ನೇಹಾ (17) ಅವರನ್ನು ಕತ್ತಿಯಿಂದ ಕಡಿದು ಹತ್ಯೆ ಮಾಡಿದ್ದಾರೆ. ಆರೋಪಿಗಳ ಇನ್ನಿಬ್ಬರು ಮಕ್ಕಳು ಮನೆಯಿಂದ ಓಡಿ ಹೋಗಿದ್ದರಿಂದ ಪರಾರಿಯಾಗಿದ್ದಾರೆ. ಪತ್ನಿ ಮತ್ತು ಮಕ್ಕಳನ್ನು ಕೊಂದ ಬಳಿಕ ದಿಲೀಪ್ ಪವಾರ್ ಕತ್ತಿಯಿಂದ ಇರಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.…
ಉತ್ತರ ಪ್ರದೇಶದಲ್ಲಿ ವಿಷಪೂರಿತ ಸಿಹಿ ತಿಂದು ಸಾವನ್ನಪ್ಪಿದ ಮಕ್ಕಳ ಸಂಖ್ಯೆ ಮೂರಕ್ಕೇರಿದೆ. ಮೂರನೇ ಮಗು ಏಳು ವರ್ಷದ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಭಾನುವಾರ ಮೃತಪಟ್ಟಿದೆ. ಸಹೋದರಿಯರಾದ ಸಾಧನಾ (7) ಮತ್ತು ಶಾಲಿನಿ (4) ಸಿಹಿ ತಿಂದು ಗುರುವಾರ ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳಾದ ವರ್ಷ (7) ಮತ್ತು ಅರುಷಿ (4) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರುಷಿ ಸ್ಥಿತಿ ಚಿಂತಾಜನಕವಾಗಿದೆ. ನೆರೆಮನೆಯವರು ಶಿವಶಂಕರ್ ಎಂಬುವರು ಮಕ್ಕಳಿಗೆ ವಿಷಪೂರಿತ ಸಿಹಿತಿಂಡಿಗಳನ್ನು ನೀಡಿದರು. ಮೃತ ಮಕ್ಕಳ ತಂದೆಯೊಂದಿಗೆ ಆತನಿಗೆ ದ್ವೇಷವಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸೇಡು ತೀರಿಸಿಕೊಳ್ಳಲು ಕ್ಯಾಂಡಿಗೆ ವಿಷ ಹಾಕಿದನು. ಘಟನೆಯಲ್ಲಿ ಈತ ಬಂಧನದಲ್ಲಿದ್ದಾನೆ.
ಇಂದು ಸುಪ್ರೀಂ ಕೋರ್ಟ್ ಮಣಿಪುರ ಸಮಸ್ಯೆ ಪ್ರಕರಣಗಳ ವಿಚಾರಣೆ ನಡೆಸಲಿದೆ. ಮಣಿಪುರದ ಪರಿಸ್ಥಿತಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ಆಗಸ್ಟ್ 7ರಂದು ಎರಡು ಸಮಿತಿಗಳನ್ನು ನೇಮಿಸಿತ್ತು. ಅದರ ನಂತರದ ಪರಿಸ್ಥಿತಿಗಳನ್ನು ಇಂದು ಸುಪ್ರೀಂ ಕೋರ್ಟ್ ಮೌಲ್ಯಮಾಪನ ಮಾಡುತ್ತದೆ. ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ದಾತಾರಾ ಪಡಸಾಲ್ಗಿಕರ್ ನೇತೃತ್ವದ ತ್ರಿಸದಸ್ಯ ಸಮಿತಿ. ಐಪಿಎಸ್ ನೇತೃತ್ವದ ತನಿಖಾ ಉಸ್ತುವಾರಿ ಸಮಿತಿ ಈಗಾಗಲೇ ತನ್ನ ಚಟುವಟಿಕೆಗಳನ್ನು ಆರಂಭಿಸಿದೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯರ ವಿವಸ್ತ್ರಗೊಳಿಸಿದ ಅರ್ಜಿಯನ್ನೂ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಎಲ್ಲಾ ದೂರುಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ರಾಜ್ಯ ಸರ್ಕಾರ ಇಂದು ಸುಪ್ರೀಂ ಕೋರ್ಟ್ಗೆ ತಿಳಿಸಲಿದೆ. 54 ಸದಸ್ಯರ ಸಿಬಿಐ ತನಿಖಾ ತಂಡ ಅಭಿವೃದ್ಧಿಪಡಿಸಿರುವ ಮಾಹಿತಿಯ ಬಗ್ಗೆಯೂ ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋರ್ಟ್ನಲ್ಲಿ ಸ್ಪಷ್ಟನೆ ನೀಡಲಿದೆ. ಇದೇ ವೇಳೆ ನ್ಯಾಯದಾನ ವಿಳಂಬವಾಗುತ್ತಿದೆ ಎಂದು ದೂರು ಇಲಾಖೆಯೂ ನ್ಯಾಯಾಲಯಕ್ಕೆ ತಿಳಿಸಲಿದೆ. ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠವು…
ಬೆಂಗಳೂರು: ಮನೆಯ ಸ್ನಾನದ ಕೋಣೆಯಲ್ಲಿ ಪತಿಯನ್ನು ಕೂಡಿಹಾಕಿ ಪತ್ನಿ ಪರಾರಿಯಾಗಿದ್ದು, ಈ ಸಂಬಂಧ ರಾಜರಾಜೇಶ್ವರಿನಗರ ಠಾಣೆಗೆ ದೂರು ಸಲ್ಲಿಕೆಯಾಗಿದೆ. ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು, ಪತ್ನಿಯನ್ನು ಹುಡುಕಿ ಕೊಡುವಂತೆ ದೂರು ನೀಡಿದ್ದಾರೆ. ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಆಗಸ್ಟ್ 12ರಂದು ಪತಿಯನ್ನು ಸ್ನಾನ ಮಾಡಲು ಕಳುಹಿಸಿದ್ದ ಪತ್ನಿ, ಹೊರಗಿನಿಂದ ಬಾಗಿಲು ಹಾಕಿಕೊಂಡು ಮನೆಯಿಂದ ಪರಾರಿಯಾಗಿದ್ದಾರೆ’ ಎಂದು ತಿಳಿಸಿವೆ.